Author: admin

ಸರ್ಕಾರ ಮತ್ತೆ ಜನರಿಗೆ ಬೆಲೆಯೇರಿಕೆ ಶಾಕ್ ನೀಡಿದೆ. ಪೆಟ್ರೋಲಿಯಂ ಕಂಪನಿಗಳು ಸತತ ಎರಡನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವನ್ನು ಘೋಷಿಸಿವೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಈ ಹೊಸ ದರ ಜಾರಿಯಾಗಲಿದೆ. ಸತತ ಎರಡನೇ ದಿನವೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ (Petrol Diesel Price Hike) ಕಂಡಿದೆ. ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ. ಒಟ್ಟಿನಲ್ಲಿ ಎರಡು ದಿನದಲ್ಲಿ ಪೆಟ್ರೋಲ್ ಬೆಲೆ 1.68, ಡೀಸೆಲ್ ಬೆಲೆ 1.58 ಕ್ಕೆ ಏರಿಕೆಯಾದಂತಾಗಿದೆ. ಬುಧವಾರದಿಂದ ಪೆಟ್ರೋಲ್ ದರ (Petrol Price) 102.26, ಡೀಸೆಲ್ 86.59 ರೂಪಾಯಿ, ಹಾಗೂ ಸ್ಪೀಡ್ ಪೆಟ್ರೋಲ್ ಹೊಸ ದರ 106.67, ಗ್ರೀನ್ ಡೀಸೆಲ್ ದರ 90.08 ರೂ. ಇರಲಿದೆ. ನಿರಂತರವಾಗಿ ಏರಿಕೆಯಾಗ್ತಿರುವ ಇಂಧನ ಬೆಲೆ ಶತಕದ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಅಗತ್ಯವಸ್ತುಗಳ…

Read More

ತುಮಕೂರು: ತೆಂಗಿನ ಕಾಯಿ ಕೀಳಲು ಹೋಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. ತನ್ನ ತೋಟದಲ್ಲಿ ತೆಂಗಿನ ಕಾಯಿ ಕೀಳಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.  ತೋಟದ ಮುಳ್ಳು ತಂತಿಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ವಿಚಾರ ತಿಳಿಯದೇ ವ್ಯಕ್ತಿಯು ತೆಂಗಿನ ಕಾಯಿ ತೆಗೆದುಕೊಳ್ಳಲು ಹೋಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸ್ ಠಾಣೆಯ ಪಿಎಸ್ ಐ ನಟರಾಜು ಮತ್ತು ಸಿಬ್ಬಂದಿ  ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವರದಿ: ಮಂಜುನಾಥ್ ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು ಗ್ರಾಮಾಂತರ : ಅರಣ್ಯ ಇಲಾಖೆ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಕುಂದೂರಿನಲ್ಲಿ  ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿರುವ ಶಾಸಕ ಡಿ.ಸಿ.ಗೌರಿಶಂಕರ್ ಜಂಟಿ ಸರ್ವೇ ಆಗುವವರೆಗೂ ಸ್ಥಳ ಕಾಲಿಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಊರ್ಡಿಗೆರೆ ಹೋಬಳಿಯ ಬೆಳಗುಂಬ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ ವಸತಿ ರಹಿತರು ಗುಡಿಸಲು ಹಾಕಿಕೊಂಡು ವಾಸವಿದ್ದರು. ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ  ಈ ಸ್ಥಳಕ್ಕೆ ಅರಣ್ಯ ಇಲಾಖೆಗೆ ಸೇರಿದ್ದು, ಕೂಡಲೇ ಗುಡಿಸಲನ್ನು ತೆರವುಗೊಳಿಸಬೇಕೆಂದು ತಿಳಿಸಿ ಅವರ ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾಗಿದ್ದರು. ಈ ವಿಚಾರವಾಗಿ ಗುಡಿಸಲು ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಷಯ ವ್ಯಾಪಕವಾಗಿ ಹರಡುತ್ತಿದ್ದಂತೆ ಸುದ್ದಿ ತಿಳಿದು ಖುದ್ದು ಸ್ಥಳಕ್ಕೆ ಬುಧವಾರ ಬೆಳಗಿನ ಜಾವ ಭೇಟಿ ನೀಡಿದ ಶಾಸಕ ಡಿ.ಸಿ.ಗೌರಿಶಂಕರ್ ಅಲ್ಲಿಯ ಸ್ಥಳ ಪರಿಶೀಲನೆ ನಡೆಸಿ,  ಸ್ಥಳದ ದಾಖಲೆ ಪರಿಶೀಲನೆ ಮಾಡಿದರು.…

Read More

ಪಾಟ್ನಾ: ಬಿಹಾರದ ಮುಸ್ಲಿಂ ಕುಟುಂಬವೊಂದು (Muslim Family) ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ವಿಶ್ವದ ಅತಿ ದೊಡ್ಡ ಹಿಂದೂ ಮಂದಿರ ವಿರಾಟ್ ರಾಮಾಯಣ ದೇವಾಲಯಕ್ಕೆ 2.5 ಕೋಟಿ ರೂ. ಮೌಲ್ಯದ ಜಮೀನನ್ನು ದಾನ ಮಾಡಿದೆ (Virat Ramayan Mandir). ದೇವಸ್ಥಾನಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ: ಗುವಾಹಟಿಯಲ್ಲಿ ವಾಸಿಸುತ್ತಿರುವ ಪೂರ್ವ ಚಂಪಾರಣ್‌ನ ಉದ್ಯಮಿ ಇಶ್ತಿಯಾಕ್ ಅಹ್ಮದ್ ಖಾನ್ ಅವರು, ಈ ಭೂಮಿಯನ್ನು ದಾನ ಮಾಡಿದ್ದಾರೆ ಎಂದು ಮಹಾವೀರ ಮಂದಿರ ಟ್ರಸ್ಟ್‌ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ( Kishore Kunal) ತಿಳಿಸಿದ್ದಾರೆ. ದೇವಸ್ಥಾನ ನಿರ್ಮಾಣಕ್ಕಾಗಿ ಭೂಮಿ ದಾನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ವ ಚಂಪಾರಣ್‌ನ ಕೇಸರಿಯಾ ಉಪವಿಭಾಗದ ರಿಜಿಸ್ಟ್ರಾರ್ ಕಚೇರಿಯಲ್ಲಿ ಇತ್ತೀಚೆಗೆ ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ (Virat Ramayan Mandir). ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯದ ಉದಾಹರಣೆ : ಇಶ್ತಿಯಾಕ್ ಅಹ್ಮದ್ ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆಯು…

Read More

ಜೂಜು ಅಡ್ಡೆ (Gambling) ಮೇಲೆ ಚಿಕ್ಕಬಳ್ಳಾಪುರ ಜಿಲ್ಲಾ ಡಿಸಿಬಿ ಪೊಲೀಸರ ದಾಳಿ ನಡೆಸಿದ್ದು, 19 ಜನರನ್ನು ಬಂಧಿಸಲಾಗಿದೆ. ಆಂಧ್ರದ ಖ್ಯಾತ ನಟ ಹಾಗೂ ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ (Nandamuri Balakrishna) ಆಪ್ತ ಸಹಾಯಕ ಎಂದು ಹೇಳಿಕೊಂಡಿರುವ ಬಾಲಾಜಿ ಮತ್ತು ವೈಎಸ್ ಆರ್ ಪಕ್ಷದ ಸಂಚಾಲಕ ಎಂದು ಹೇಳಿಕೊಂಡಿರುವ ಶ್ರೀರಾಮರೆಡ್ಡಿ ಸೇರಿದಂತೆ 19 ಜನರನ್ನು ಅರೆಸ್ಟ್ ಮಾಡಲಾಗಿದೆ.ಆಂಧ್ರದ ಗಡಿ ನಗರಗೆರೆ ಗ್ರಾಮದ ಬಿಎನ್ ಆರ್ ಕಂಫರ್ಟ್ ರೆಸ್ಟೋರೆಂಟ್ ನಲ್ಲಿ ಹೈಟೆಕ್ ಜೂಜು ನಡೆಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಬಂಧಿತರಿಂದ 1,56,750 ರೂಪಾಯಿ ಹಣ, 8 ಕಾರುಗಳು, 3 ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಗುಡಿಬಂಡೆ ನ್ಯಾಯಾಲಯಕ್ಕೆ (Court) ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆಯಿಲ್ಲದೆ ಇರುವುದು ಶೋಚನೀಯವಾಗಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಭದ್ರತೆಯೊಂದಿಗೆ ಸವಲತ್ತು ನೀಡಬೇಕಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ತಿಳಿಸಿದರು. ಕೊರಟಗೆರೆ ಪಟ್ಟಣದ ಬೈಪಾಸ್ ಬೆಂಗಳೂರು- ಕೊರಟಗೆರೆ ರಸ್ತೆಯಲ್ಲಿರುವ ನವೀನ್ ಕಂಫರ್ಟ್ ಕಾಮಧೇನು ವೆಜ್ ಹೋಟೆಲ್ ಸಭಾಂಗಣದಲ್ಲಿ ನವರಸ ನಾಯಕ ಜಗ್ಗೇಶ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ,  ನೂತನವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾರಂಗದಲ್ಲಿ ವೃತ್ತಿ ಧರ್ಮ ಬದ್ದತೆಯನ್ನು ಬಿಟ್ಟು ಕೊಡದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಮರ್ಪಕವಾಗಿ ಕಾರ್ಯನಿರ್ವಸಲು ಸಹಕಾರಿಯಾಗಿದ್ದು, ಮುಂದಿನ…

Read More

ನಿನ್ನೆ ತಾನೆ ಮೊದಲ ಲಿರಿಕಲ್‌ ಸಾಂಗ್‌ ರಿಲೀಸ್‌ (Toofan Lyrical Song) ಮಾಡುವ ಮೂಲಕ ಬಿರುಗಾಳಿ ಎಬ್ಬಿಸಲು ಸಜ್ಜಾಗಿರುವ ಕ್ಲ್ಯೂ ನೀಡಿದೆ ‘ಕೆಜಿಎಫ್ 2’ ಚಿತ್ರತಂಡ. ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಕೆಜಿಎಫ್ 2’ ಎಲ್ಲಿಲ್ಲದ ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಏಪ್ರಿಲ್‌ ನಲ್ಲಿ ‘ಕೆಜಿಎಫ್ 2’ ಬೆಳ್ಳಿತೆರೆಗೆ ಅಪ್ಪಳಿಸಲಿದೆ. ‘ಕೆಜಿಎಫ್ 2’ (KGF2) ಜೊತೆಗೆ ಬಾಕ್ಸಾಫೀಸ್ ಕಾಳಗ ಮಾಡಲು ಯಾವ ಸಿನಿಮಾಗಳು ಸಹ ಧೈರ್ಯ ತೋರುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ತಮಿಳಿನ ಸ್ಟಾರ್ ನಟ ವಿಜಯ್ ಸಿನಿಮಾ ಸಜ್ಜಾಗಿದೆ. ಇಷ್ಟು ದಿನ ಗಾಸಿಪ್ ರೂಪದಲ್ಲಿ ಇದ್ದ ಈ ಸುದ್ದಿ ಈಗ ಅಧಿಕೃತವಾಗಿದೆ. ಹೌದು, ಇತ್ತ ಬಾಕ್ಸಾಫೀಸ್‌ ಕೊಳ್ಳೆ ಹೊಡೆಯಲು ‘ಕೆಜಿಎಫ್ 2’ ಸಕಲ ಸಿದ್ಧತೆ ಮಾಡಿಕೊಂಡಿದ್ದರೆ, ಅತ್ತ ತಮಿಳಿನ ಬಹು ನಿರೀಕ್ಷಿತ ಸಿನಿಮಾ ‘ಬೀಸ್ಟ್’ (Beast) ಕೂಡ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಈ ಎರಡೂ ಚಿತ್ರಗಳು ಪ್ಯಾನ್ ಇಂಡಿಯಾ…

Read More

ನೀರಿನ ರಾಜಕಾರಣ ಮಾಡಿ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಗೆ ಬಿಜೆಪಿ ಟಾಂಗ್ ನೀಡಿದೆ. ಮೇಕೆದಾಟು ಯೋಜನೆ ವಿಚಾರವಾಗಿ ಮಂಗಳವಾರ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ‘ಮೇಕೆದಾಟು ಯೋಜನೆ(Mekedatu Project)ಯನ್ನು ಜಾರಿಗೊಳಿಸಲು ಬಿಡುವುದಿಲ್ಲ‌‌ವೆಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ‌ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು?’ ಅಂತಾ ಪ್ರಶ್ನಿಸಿದೆ. ‘ರಾಹುಲ್ ಗಾಂಧಿ(Rahul Gandhi)ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು. ಡಿಕೆಶಿಯವರೇ, ಇಲ್ಲಿ ಪಾದಯಾತ್ರೆ(Mekedatu Padayatre) ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ?’ ಅಂತಾ ಟೀಕಿಸಿದೆ. ರಾಜಕೀಯ ಲಾಭಕ್ಕಾಗಿ ಡಿಕೆಶಿ(DK Shivakumar)ಯವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ #ಸುಳ್ಳಿನಜಾತ್ರೆ…

Read More

ತಮಿಳುನಾಡು ಮೇಕೆದಾಟು (Mekedatu) ಯೋಜನೆ ವಿಚಾರವಾಗಿ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಇಂದು ಕಾನೂನು ಹಾಗೂ ತಾಂತ್ರಿಕ ಸಲಹೆ ಪಡೆದು ನಾಳೆ ಸದನದಲ್ಲಿ ನಿರ್ಣಯ ತರಲಾಗುವುದು ಎಂದು ತಿಳಿಸಿದರು. ಶೂನ್ಯ ವೇಳೆಯಲ್ಲಿ ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು, ಮೇಕೆದಾಟು ಕುಡಿಯುವ ನೀರು ಹಾಗೂ ವಿದ್ಯುತ್ (Electricity) ಉತ್ಪಾದನೆಗಾಗಿ ಯೋಜನೆ ಆಗಿದ್ದು, ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ‌ ಸಮಸ್ಯೆ ಇಲ್ಲ. ತಮಿಳುನಾಡು ಹೆಚ್ಚುವರಿ ನೀರನ್ನ ಬಳಕೆ ಮಾಡಿ‌ ಯೋಜನೆ ರೂಪಿಸುತ್ತಿದ್ದಾರೆ. ಹೊಗೆನಕಲ್ ಎರಡನೇ‌ ಹಂತವನ್ನು ತೆಗೆದುಕೊಳ್ಳುವ ಮಾತು ನಮ್ಮ ನೀರಿನ‌ ಹಕ್ಕಿನ ಮೇಲೆ ಹೊಡೆತ ಆಗಿದೆ. ಅದಕ್ಕಾಗಿ ವಿರೋಧ ಮಾಡಿದ್ದೇವೆ ಮುಂದೆಯೂ ಮಾಡುತ್ತೇವೆ ಎಂದರು. ನಾವು ಕಾವೇರಿ (Kaveri Water) ನೀರನ್ನು ಬಳಕೆ ಮಾಡುವ ಎಲ್ಲ ಸಂದರ್ಭದಲ್ಲಿ ತಮಿಳುನಾಡಿನಿಂದ ಅಡ್ಡಿಯಾಗುತ್ತಿದೆ. ನಮ್ಮ ನೀರಿನ ಹಕ್ಕು ಪಡೆದುಕೊಳ್ಳಲು ನಾವು ಪರಿತಪಿಸುವುದು ರಾಜ್ಯದ ಹಿತ ದೃಷ್ಟಿಯಿಂದ ಸರಿಯಲ್ಲ. ಇದನ್ನು ಪ್ರಬಲವಾಗಿ ತೆಗೆದುಕೊಂಡು‌ ಹೋಗುತ್ತೇವೆ ಎಂದರು. ಕೇಂದ್ರಕ್ಕೂ ಒತ್ತಾಯ ಮಾಡುತ್ತೇವೆ. ನಮ್ಮ ಡಿಪಿಆರ್…

Read More

ಮೈಸೂರು: ಡಾ. ಪುನೀತ್ ರಾಜ್‍ ಕುಮಾರ್ (Puneeth Rajkumar)..‌. ಈ ಹೆಸರು ಪ್ರತಿಯೊಬ್ಬರ ಉಸಿರು. ‘ಅಪ್ಪು’ ಮಾಡಿದ ಸಾಧನೆಗೆ ಇದೀಗ ಡಾಕ್ಟರೇಟ್‌ ನೀಡಿ ಗೌರವಿಸಲಾಗಿದೆ. ಈ ಮೂಲಕ ‘ಕರುನಾಡ ರತ್ನ’ವನ್ನು ಮತ್ತೊಮ್ಮೆ ನೆನೆಯಲಾಗಿದೆ. ಮೈಸೂರು ವಿವಿ 102ನೇ ಘಟಿಕೋತ್ಸವ(102nd Convocation of University of Mysore)ದಲ್ಲಿ ನಟ ಪುನೀತ್ ರಾಜ್‍ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್(Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್ ಕುಟುಂಬವೇ ಹಾಜರಿತ್ತು. ಈ ವೇಳೆ ಪ್ರತಿಯೊಬ್ಬರೂ ಭಾವುಕರಾಗಿ ಅಗಲಿದ ‘ಕರುನಾಡ ರತ್ನ’ವನ್ನು ನೆನೆದರು. ಗಣ್ಯರ ಸಾಲಿನಲ್ಲಿ ಕುಳಿತುಕೊಂಡಿದ್ದ ಪುನೀತ್ ರಾಜ್‍ ಕುಮಾರ್ ಸಹೋದರಿಯರು, ‘ಅಪ್ಪು’ ಪರವಾಗಿ ಅವರ ಪತ್ನಿ ಅಶ್ವಿನಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವಾಗ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು. ಈ ವಿಶೇಷ ಸಂದರ್ಭದಲ್ಲಿ ವರನಟ ಡಾ.ರಾಜ್…

Read More