Author: admin

ರಶ್ಮಿಕಾ ಮಂದಣ್ಣ ಸದ್ಯ ಬಹು ಬೇಡಿಕೆಯ ನಟಿ. ಸ್ಯಾಂಡಲ್‌ ವುಡ್‌ ಗೆ ಕಿರಿಕ್‌ ಪಾರ್ಟಿ ಮೂಲಕ ಪದಾರ್ಪಣೆ ಮಾಡಿದ ಅವರು, ತೆಲುಗು ಸಿನಿಮಾಗಳಲ್ಲಿ ನಟಿಸಿ ಅಲ್ಲಿನ ಸಿನಿ ಪ್ರಿಯರ ಮನಗೆದ್ದರು. ಇದೀಗ ಬಾಲಿವುಡ್‌ಗೂ ಕಾಲಿಟ್ಟಿರುವ ರಶ್ಮಿಕಾ ಬ್ಯೂಟಿಗೆ ಮರುಳಾಗದವರಿಲ್ಲ. ಈ ಎಲ್ಲದರ ಮಧ್ಯೆ ರಶ್ಮಿಕಾಗೆ ಮತ್ತೊಂದು ಗರಿ ಸಿಕ್ಕಿದ್ದು, ಅಭಿಮಾನಿಗಳಿಗೆ ಸಂತಸದ ವಿಚಾರವಾಗಿದೆ. ಕೇವಲ ಒಂದೆರಡು ವರ್ಷಗಳಲ್ಲಿ, ರಶ್ಮಿಕಾ ಮಂದಣ್ಣ ದಕ್ಷಿಣದ ಅತ್ಯಂತ ಫೇಮಸ್‌ ತಾರೆಗಳಲ್ಲಿ ಒಬ್ಬರಾದರು. 2021 ರಲ್ಲಿ ಬಿಡುಗಡೆಯಾದ ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗಿನ ನಟನೆಯಿಂದ ಅವರ ಸ್ಟಾರ್‌ಡಮ್ ಮತ್ತಷ್ಟು ಹೆಚ್ಚಾಯಿತು. ಎಲ್ಲಾ ಭಾಷೆಗಳಲ್ಲಿಯೂ ಬಹುತೇಕ ಸ್ಟಾರ್‌ ನಟರಿಗೆ ನಾಯಕಿಯಾಗಿರುವ ರಶ್ಮಿಕಾ ಸಂಭಾವನೆ ಕೋಟಿಯ ಗಡಿ ದಾಟಿದೆ. ಈ ಹೊತ್ತಿನಲ್ಲಿಅವರು ಫಿಲ್ಮ್‌ಫೇರ್‌ ಮ್ಯಾಗಜೀನ್‌ನ ಮುಖಪುಟಕ್ಕೆ ರೂಪದರ್ಶಿಯಾಗಿದ್ದಾರೆ. ಈ ಮುಖಪುಟ ಈಗ ಸೋಷಿಯಲ್‌ ಮೀಡಿಯಾದಲ್ಲಿಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಸಂತಸ ತಂದಿದೆ. ಸದ್ಯ ತಮಿಳಿನ ದಳಪತಿ ವಿಜಯ್‌ ಜತೆ ರಶ್ಮಿಕಾ ನಟಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿಅಮಿತಾಬ್‌ ಬಚ್ಚನ್‌…

Read More

ಭಾರತದ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಇಂದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಈ ಹಿಂದೆ ಮಿಥಾಲಿ ಭಾರತದ ಪರ ಮೂರು ಮಾದರಿಯ ಕ್ರಿಕೆಟ್ ಗೆ ನಾಯಕಿಯಾಗಿದ್ದರು. ಬುಧವಾರ ಮಧ್ಯಾಹ್ನ ಮಿಥಾಲಿ ರಾಜ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ವಿದಾಯದ ಕುರಿತು ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಮಿಥಾಲಿ ತನ್ನ 23 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಬದುಕಿಗೆ ಗುಡ್ ಬೈ ಹೇಳಿದ್ದಾರೆ. ತನ್ನ ವಯಸ್ಸಿನ 39ನೇ ವರ್ಷದಲ್ಲಿ ಮಿಥಾಲಿ ತನ್ನ ವೃತ್ತಿ ಬದುಕಿಗೆ ವಿಧಾಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಿಥಾಲಿ, ‘ಮೊಟ್ಟ ಮೊದಲ ಬಾರಿಗೆ ನೀಲಿ ಬಣ್ಣದ ಜರ್ಸಿ ತೊಟ್ಟು ನಾನು ನನ್ನ ದೇಶವನ್ನು ಪ್ರತಿನಿಧಿಸಿದ್ದಾಗ ಓರ್ವ ಪುಟ್ಟ ಬಾಲಕಿಯಾಗಿದ್ದೆ. ಅತ್ಯಂತ ದೀರ್ಘ ಕಾಲದ ನನ್ನ ಕ್ರಿಕೆಟ್ ಪಯಣದಲ್ಲಿ ಸಾಕಷ್ಟು ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದೇನೆ. 23 ವರ್ಷಗಳ ನನ್ನ ವೃತ್ತಿ ಜೀವನ, ನನ್ನ ಜೀವನದ ಅತ್ಯುನ್ನದ ಕ್ಷಣಗಳಲ್ಲಿ ಒಂದಾಗಿದೆ. ಪ್ರತಿಯೊಂದು ಪಯಣದಂತೆ…

Read More

ಮಂಡ್ಯ: ಸಕ್ಕರೆನಾಡು‌ ಮಂಡ್ಯ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತದೇಹ ಪತ್ತೆಯಾಗಿದ್ದು, ಜನತೆಯನ್ನು ಬೆಚ್ಚಿ ಬೀಳಿಸಿದೆ. ಜಿಲ್ಲೆಯ ಪಾಂಡವಪುರ ಟೌನ್ ಪೊಲೀಸ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು‌ ಒಂದೇ ದಿನ ಬೇರೆ ಬೇರೆ ಕಡೆ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತ ದೇಹ ಪತ್ತೆಯಾಗಿವೆ. ಪಾಂಡವಪುರ ತಾಲೂಕಿನ ಬೇಬಿ ಕೆರೆಯ ನಾಲೆಯಲ್ಲಿ 30 ರಿಂದ 35 ವರ್ಷ ಪ್ರಾಯದ ಮಹಿಳೆಯ ಅರ್ಧ ಕತ್ತರಿಸಿದ ಶವ ಪತ್ತೆಯಾಗಿದೆ. ಮತ್ತೊಂದು ಮಹಿಳೆಯ ಶವ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆಕೆರೆ ಗ್ರಾಮದ ಬಳಿಯ ಸಿಡಿಎಸ್ ನಾಲೆಯಲ್ಲಿ‌ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿದೆ. ಪತ್ತೆಯಾದ ಎರಡು ಶವಗಳ ಅರ್ಧ ಭಾಗವನ್ನು ಕತ್ತರಿಸಿ ಚೀಲದಲ್ಲಿ ಹಾಕಿ ಎರಡು ಕಾಲುಗಳನ್ನು ಕಟ್ಟಿ ನೀರಿಗೆ ಬಿಸಾಡಿದ್ದಾರೆ. ಇನ್ನು ಎರಡು ಕಡೆ ಪ್ರತ್ಯೇಕವಾಗಿ ದೇಹದ ಅರ್ಧಭಾಗ ಪತ್ತೆಯಾಗಿರುವ ಸುದ್ದಿ ತಿಳಿದು ಪಾಂಡವಪುರ ಹಾಗೂ…

Read More

ಮದುವೆ ಮನೆಯಲ್ಲಿ ಶಾವಿಗೆ ಪಾಯಸ ಊಟ ಮಾಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿಯಲ್ಲಿ ಮದುವೆ ಇತ್ತು. ಮದುವೆಗೆ ಬಂದಿದ್ದ 9 ಮಕ್ಕಳೂ ಸೇರಿದಂತೆ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದಾರೆ. ವಿವಾಹ ಕಾರ್ಯಕ್ರಮದಲ್ಲಿ ಊಟ ಮಾಡಿದ ಬಹುತೇಕರಿಗೆ ವಾಂತಿ, ಬೇದಿ, ತಲೆ ಸುತ್ತು ಬಂದ ಪರಿಣಾಮ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ತೀವ್ರವಾಗಿ ಅಸ್ವಸ್ಥರಾಗಿರುವ 23 ಜನರನ್ನು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಏಳು ಜನರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಅಸ್ವಸ್ಥರಾಗಿದ್ದವರಲ್ಲಿ 9 ಮಕ್ಕಳಿದ್ದು ನಾಲ್ಕು ಗಂಡು ಮತ್ತು ಐವರು ಹೆಣ್ಣಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಹಿಳೆಯರು ಸಹ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮದುವೆಯಲ್ಲಿ ಮಾಡಿಸಿದ್ದ ಶಾವಿಗೆ ಪಾಯಸ ಸೇವಿಸಿದ್ದೇ ಅಸ್ವಸ್ಥರಾಗಲು ಕಾರಣ ಎನ್ನಲಾಗಿದೆ. ಮೊದಲನೇ ಪಂಕ್ತಿಯಲ್ಲಿ…

Read More

ಪ್ರವಾದಿ ಮುಹಮ್ಮದ್ ಪರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಇಡೀ ದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಸೇಡು ತೀರಿಸಿಕೊಳ್ಳಲು ಅಲ್-ಖೈದಾ (AQIS) ದೇಶದ ಹಲವಾರು ನಗರಗಳಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ಮಾಡುವ ಬೆದರಿಕೆ ನೀಡಿದ ನಂತರ ದೇಶದ ಭದ್ರತಾ ಏಜೆನ್ಸಿಗಳು ಅಲರ್ಟ್ ಮೋಡ್‌ನಲ್ಲಿವೆ. ಅಲ್ ಖೈದಾ ಬಗ್ಗೆ ಮಹಾರಾಷ್ಟ್ರ ಹೈ ಅಲರ್ಟ್ ಘೋಷಣೆ ಮಾಡಿದೆ. ಮುಂಬೈನಲ್ಲಿ ಉಗ್ರರ ಸಂಚು ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಹೈ ಅಲರ್ಟ್ ನೀಡಲಾಗಿದೆ. ಕಾನ್ಪುರದ ಮಾದರಿಯಲ್ಲಿ ಕೆಲವು ಸಮಾಜ ವಿರೋಧಿಗಳು ಕಲ್ಲು ತೂರಾಟ ನಡೆಸುವ ಸಂಚು ನಡೆಸಬಹುದು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಕಲ್ಲು, ಬಾಟಲ್ ದಾಳಿಯ ಸಾಧ್ಯತೆಯ ಕುರಿತು ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ ಕ್ಯಾಮೆರಾಗಳ ಮೂಲಕ ನಿಗಾ ಇಡಲು ನಿರ್ಧರಿಸಿದೆ. ಈ ಕುರಿತು ಗೃಹ ಸಚಿವಾಲಯ ಶೀಘ್ರದಲ್ಲೇ ಸಭೆ ನಡೆಸಲಿದ್ದು, ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ಸಚಿವಾಲಯದ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ. ಅಲ್-ಖೈದಾ ಬೆದರಿಕೆಯ ನಂತರ ಸರ್ಕಾರದಿಂದ ಹೈ…

Read More

ಭಾರತದ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಇಂದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಈ ಹಿಂದೆ ಮಿಥಾಲಿ ಭಾರತದ ಪರ ಮೂರು ಮಾದರಿಯ ಕ್ರಿಕೆಟ್ ಗೆ ನಾಯಕಿಯಾಗಿದ್ದರು. ಬುಧವಾರ ಮಧ್ಯಾಹ್ನ ಮಿಥಾಲಿ ರಾಜ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ವಿದಾಯದ ಕುರಿತು ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಮಿಥಾಲಿ ತನ್ನ 23 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಬದುಕಿಗೆ ಗುಡ್ ಬೈ ಹೇಳಿದ್ದಾರೆ. ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ ಮಿಥಾಲಿ ತನ್ನ ವಯಸ್ಸಿನ 39ನೇ ವರ್ಷದಲ್ಲಿ ಮಿಥಾಲಿ ತನ್ನ ವೃತ್ತಿ ಬದುಕಿಗೆ ವಿಧಾಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಿಥಾಲಿ, ‘ಮೊಟ್ಟ ಮೊದಲ ಬಾರಿಗೆ ನೀಲಿ ಬಣ್ಣದ ಜರ್ಸಿ ತೊಟ್ಟು ನಾನು ನನ್ನ ದೇಶವನ್ನು ಪ್ರತಿನಿಧಿಸಿದ್ದಾಗ ಓರ್ವ ಪುಟ್ಟ ಬಾಲಕಿಯಾಗಿದ್ದೆ. ಅತ್ಯಂತ ದೀರ್ಘ ಕಾಲದ ನನ್ನ ಕ್ರಿಕೆಟ್ ಪಯಣದಲ್ಲಿ ಸಾಕಷ್ಟು ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದೇನೆ. 23 ವರ್ಷಗಳ ನನ್ನ ವೃತ್ತಿ ಜೀವನ,…

Read More

ಪಂಜಾಬ್‌ನಲ್ಲಿ ಮದ್ಯದ ಬೆಲೆಗಳು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಮತ್ತು ಹರಿಯಾಣದಲ್ಲಿನ ದರಗಳಿಗೆ ಸಮನಾಗಿ ಕನಿಷ್ಠ ಶೇ. 30 ರಿಂದ ಶೇ.40 ರಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ, ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರದ ರಾಜ್ಯ ಕ್ಯಾಬಿನೆಟ್ ಬುಧವಾರ ತನ್ನ ಮೊದಲ ಅಬಕಾರಿ ನೀತಿಯನ್ನು ಅನುಮೋದಿಸಿರುವ ಈ ಹಿನ್ನಲೆಯಲ್ಲಿ ದರ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರವು ಕಳೆದ ವರ್ಷ ಮದ್ಯದ ವ್ಯವಹಾರದಿಂದ ಕ್ರೋಢೀಕರಿಸಿದ ಆದಾಯದಿಂದ 9,647.85 ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿಯನ್ನು ಹೊಂದಿತ್ತು. ಚಂಡೀಗಢದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2022-23 ನೇ ಸಾಲಿನ ಹೊಸ ಅಬಕಾರಿ ನೀತಿಯನ್ನು ಅನುಮೋದಿಸಲಾಗಿದೆ.ಅಬಕಾರಿ ನೀತಿಯು ಈ ವರ್ಷ ಜುಲೈ 1 ರಿಂದ ಮಾರ್ಚ್ 31, 2023 ರವರೆಗೆ ಒಂಬತ್ತು ತಿಂಗಳ ಅವಧಿಗೆ ಅನ್ವಯಿಸುತ್ತದೆ. ಈಗ ಹೊಸ ತಾಂತ್ರಿಕ ಕ್ರಮಗಳನ್ನು ಅಳವಡಿಸುವ ಮೂಲಕ ನೆರೆಯ ರಾಜ್ಯಗಳಿಂದ ಮದ್ಯದ ಕಳ್ಳಸಾಗಣೆಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲು ನೀತಿಯು ಶ್ರಮಿಸುತ್ತದೆ ಎಂದು ಮುಖ್ಯಮಂತ್ರಿ…

Read More

ತುಮಕೂರು:  ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಕೆಂಚನಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ನಂಜುಂಡಯ್ಯ  5,000 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದು ಜೈಲು ಪಾಲಾಗಿದ್ದಾರೆ. ಕುಂಟಯ್ಯನಪಾಳ್ಯ ಗ್ರಾಮದ ಗಂಗಾಧರ ಅವರ ತಂದೆ ಹೆಸರಿಂದ ಪಾವತಿ ಖಾತೆ ಮಾಡಿಕೊಡಲು 5,000 ಸಾವಿರ ರೂಪಾಯಿ ಲಂಚ ಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ನೇತೃತ್ವದ ಕಾರ್ಯಾಚರಣೆ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆ ವೇಳೆ ಇನ್ಸ್ಪೆಕ್ಟರ್ ವೀರೇಂದ್ರ,  ವಿಜಯಲಕ್ಷ್ಮಿ,  ನರಸಿಂಹರಾಜು,  ಶಿವಣ್ಣ , ಚಂದ್ರಶೇಖರ್,  ರಾಜು,  ಗಿರೀಶ್ ಕುಮಾರ್,  ಯಶೋಧ,  ರಮೇಶ್ ಇನ್ನಿತರರು ಇದ್ದರು ವರದಿ: ಟೈಗರ್ ನಾಗ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಸರಗೂರು: ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರ ಇದ್ದು ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ರಕ್ಷಣಾ ಸೇವಾ ಟ್ರಸ್ಟ್ ಅಧ್ಯಕ್ಷೆ ಚಂದ್ರಿಕಾ ದೊರೆಸ್ವಾಮಿ ತಿಳಿಸಿದರು. ಸರಗೂರು ತಾಲ್ಲೂಕಿನ ಅಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪೆನ್ನು ಪೆನ್ಸಿಲ್ ವಿತರಣೆ ಮಾಡಿ ಮಾತನಾಡಿದ ಅವರು, ನಮ್ಮ ಟ್ರಸ್ಟ್ ವತಿಯಿಂದ ಕೋವಿಡ್ ಸಂದರ್ಭದಲ್ಲಿ ಕಿಟ್ ಗಳನ್ನು ವಿತರಣೆ ಮಾಡಲಾಗಿತ್ತು. ಈಗ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಅನುಕೂಲವಾಗಲು ನೋಟ್ ಗಳನ್ನು ನೀಡುತ್ತಿದ್ದೇವೆ. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೆ.ಮುಂದಿನ ಪೀಳಿಗೆಗೆ ಹಸನಾಗುತ್ತದೆ‌ ಎಂದು ತಿಳಿಸಿದರು. ನಿವೃತ್ತ ಎಎಸ್ ಐ ದೊರೆಸ್ವಾಮಿ ಮಾತನಾಡಿ, ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಸೇವೆ ಮಾಡಲು ನಿವೃತ್ತ ಪಡೆದು ಕೊಂಡಿದ್ದೇನೆ. ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಇದ್ದಾಗ ಸಮಾಜ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ವತಿಯಿಂದ  ಕೊರೊನಾ ವಾರಿಯರ್ಸ್ ಎಂದು ಸನ್ಮಾನಿಸಿದರು. ತಾಲ್ಲೂಕಿನ ಬಿದರಹಳ್ಳಿ, ಅಗತ್ತೂರು ಶಾಲೆಗಳಿಗೆ ನೋಟ್ ಪುಸ್ತಕಗಳನ್ನು ನೀಡಲಾಗುತ್ತದೆ. ಮುಳ್ಳೂರು ಸಾಗರೆ ಸರ್ಕಾರಿ ಶಾಲೆಗಳಿಗೂ ನೊಟ್…

Read More

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಶಿಕ್ಷಣ ಸಚಿವ  ಬಿ.ಸಿ.ನಾಗೇಶ್ ಮನೆ ಮುಂದೆ ಆರೆಸ್ಸೆಸ್ ನ ಚಡ್ಡಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎನ್ ಎಸ್ ಯುಐ ಕಾರ್ಯಕರ್ತರಿಗೆ ಶೀಘ್ರವೇ ಜಾಮೀನು ದೊರೆಯುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು. ತುಮಕೂರು ಜಿಲ್ಲಾ ಕಾರಾಗೃಹ ಕೇಂದ್ರಕ್ಕೆ  ಭೇಟಿ ನೀಡಿ, ಬಂಧಿತ ಎನ್ ಎಸ್ ಯುಐ ಮುಖಂಡ ಕೀರ್ತಿ ಗಣೇಶ್ ಹಾಗೂ  ಸದಸ್ಯರ ಜೊತೆಗೆ ಮಾತನಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ ದಿನವೇ ನಾನು ತುಮಕೂರಿನ ಎಸ್ ಪಿಯವರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿದ್ದೇನೆ. ಕಾನೂನಾತ್ಮಕವಾಗಿ ಏನಿದೆಯೋ ಅದನ್ನು ನೀವು ಮಾಡಿ, ಬೇರೆ ಯಾರೋ ಹೇಳಿದ್ರು, ಒತ್ತಡಕ್ಕೆ ಮಣಿದು ನೀವು ಮಾಡ್ಬಾರ್ದು ಎನ್ನುವಂತಹ ಮಾತುಗಳನ್ನು ನಾನು ಹೇಳಿದ್ದೇನೆ ಎಂದು ಅವರು ಹೇಳಿದರು. ನಾವು ಯಾರು ಕೂಡ ಅವರನ್ನಷ್ಟೇ ಮುಂದೆ ಬಿಟ್ಟು ತಮಾಷೆ ನೋಡುವುದಿಲ್ಲ. ನಮ್ಮ ವಿದ್ಯಾರ್ಥಿಗಳು ನಮ್ಮ ಪಕ್ಷದ ಸಿದ್ದಾಂತಗಳನ್ನು  ನಂಬಿರುವ ವಿದ್ಯಾರ್ಥಿಗಳು ಅವರನ್ನು…

Read More