Subscribe to Updates
Get the latest creative news from FooBar about art, design and business.
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
- ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
- ರಾಹುಲ್ ಗಾಂಧಿ ಅವರಿಗೆ ಕಾಮನ್ ಸೆನ್ಸ್ ಇಲ್ಲ: ಆರ್.ಅಶೋಕ್ ವಾಗ್ದಾಳಿ
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
Author: admin
ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಸಾಯುವ ಸಮಯದಲ್ಲಿ ವಿಲ್ ಪತ್ರದ ಜೊತೆ ಹಳೆಯ ಪಾದರಕ್ಷೆಗಳನ್ನು ನೀಡಿ ಹೇಳಿದ, “ವಿಲ್ ಪತ್ರದಲ್ಲಿ ನಿನಗೆ ನನ್ನೆಲ್ಲಾ ಆಸ್ತಿಯನ್ನು ಬರೆದಿದ್ದೇನೆ. ನೀನು ಸುಖವಾಗಿ ಬಾಳು ಆದರೆ ನನ್ನ ಕೊನೆಯ ಆಸೆಯೊಂದಿದೆ ಅದನ್ನು ನೆರವೇರಿಸು ಅಷ್ಟು ಸಾಕು. ಅದೇನೆಂದರೆ ನಾನು ಸತ್ತ ಮೇಲೆ ನನ್ನ ಪಾದಕ್ಕೆ ಈ ಹಳೆಯ ಚಪ್ಪಲಿಯನ್ನು ತೊಡಿಸಿ ಅಂತ್ಯ ಕ್ರಿಯೆ ನೆರವೇರಿಸು!” ಎಂದು ಹೇಳುತ್ತಾನೆ. ಮಗ ತನ್ನ ಕೆನ್ನೆಯ ಮೇಲೆ ಜಾರುತ್ತಿದ್ದ ಕಣ್ಣೀರನ್ನು ಒರೆಸಿಕೊಳ್ಳುತ್ತಾ ಈ ಸಣ್ಣ ಆಸೆಯನ್ನು ನಾನು ಖಂಡಿತ ನೆರವೆರಿಸುತ್ತೇನೆ ಎಂದು ಅಪ್ಪನಿಗೆ ಮಾತು ಕೊಡುತ್ತಾನೆ. ತಂದೆಯು ಕೊನೆಯುಸಿರೆಳೆದ ದಿನ ವಿಧಿ ವಿಧಾನ ಕಾರ್ಯಗಳನ್ನು ಮಾಡಿದ ಪಂಡಿತರಿಗೆ ಮಗ ಅಪ್ಪನಿಗೆ ಹಳೆಯ ಚಪ್ಪಲಿ ತೊಡಿಸಲು ಕೋರುತ್ತಾನೆ. ಆದರೆ ಪಂಡಿತರು ಸಾಧ್ಯವೇ ಇಲ್ಲ ಇದು ನಮ್ಮ ಅಂತ್ಯಕ್ರಿಯೆ ಸಂಪ್ರದಾಯದಲ್ಲೇ ಇಲ್ಲವೆಂದು ನಿರಾಕರಿಸುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರು ಆ ಶ್ರೀಮಂತ ವ್ಯಕ್ತಿಗೆ ಹಳೆಯ ಚಪ್ಪಲಿ ತೊಡಿಸಲು ಸಾಧ್ಯವೇ ಆಗುವುದಿಲ್ಲ! ಈ ವಿಚಾರವಾಗಿ…
ಕುಣಿಗಲ್: ಮನೆಯೊಂದರ ಕಾಂಪೌಂಡ್ ನಲ್ಲಿದ್ದ ಹಾವು ಹಾಗೂ ಮೊಟ್ಟೆಯನ್ನು ಉರಗತಜ್ಞ ಮಹಂತೇಶ್ ರಕ್ಷಿಸಿದ್ದಾರೆ. ಕುಣಿಗಲ್ ನ ಮಹಂತೇಶ್ ಅವರಿಗೆ ಅಗ್ರಹಾರದ ಮುಜಾಹಿದ್ ಖಾನ್ ಎಂಬವರು ಕರೆ ಮಾಡಿ ಮನೆಯ ಕಾಂಪೌಂಡ್ ನಲ್ಲಿ ಹಾವು ಇದೆ ಎಂದು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ಮನೆಯ ಕಾಂಪೌಂಡ್ ನಲ್ಲಿದ್ದ ನೀರು ಹಾವನ್ನು ರಕ್ಷಿಸಿದ್ದಾರೆ. ಇನ್ನೂ ಹಾವು ಮೊಟ್ಟೆಯಿಟ್ಟಿದ್ದು, ಮೊಟ್ಟೆ ಹಾಗೂ ಹಾವನ್ನು ಸುರಕ್ಷತೆ ಬಾಕ್ಸ್ ನಲ್ಲಿ ಹಾಕಿ ಇಟ್ಟಿದ್ದಾರೆ. ಇದೇ ವೇಳೆ ಈ ಹಾವಿನ ಬಗ್ಗೆ ವಿವರಣೆ ನೀಡಿದ ಅವರು, ಹಾವು ಮೊಟ್ಟೆ ಹಾಕಿದ ನಂತರ ಸುರಕ್ಷಿತವಾಗಿ ಮೊಟ್ಟೆಗಳನ್ನು ಮರಳಿನಲ್ಲಿ ಇಟ್ಟು ಅದಕ್ಕೆ ಬೆಚ್ಚಗಿನ ಶಾಖ ಬರುವ ಹಾಗೆ ವ್ಯವಸ್ಥೆ ಮಾಡಿ ಅಲ್ಲೇ ಮರಿ ಮಾಡಿಸಬೇಕಾಗುತ್ತದೆ. ಮೊಟ್ಟೆ ಹೊಡೆದು ಮರಿಗಳು ಹೊರಬರುವುದಕ್ಕೆ 45 ದಿನ ಆಗಬಹುದು. ತದನಂತರ ಮರಿಗಳನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅವರು ತಿಳಿಸಿದರು. ಇದುವರೆಗೂ 3 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಹಾವುಗಳನ್ನು ಸ್ನೇಕ್ ಮಹಂತೇಶ್ ರಕ್ಷಿಸಿದ್ದಾರೆ. ವರದಿ:…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 21 ರಲ್ಲಿರುವ ಶ್ರೀ ಮುರುಗನ್ ( ಸುಬ್ರಮಣ್ಯಂ) ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಕ್ರಾಂತಿ ಸಂದರ್ಭದಲ್ಲಿ ತಮಿಳರು ಪ್ರಮುಖ ತೈಮಾಸಂ ಎಂದು ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸುತ್ತಾರೆ. ಈ ತಿಂಗಳಲ್ಲಿ ಸುಬ್ರಮಣ್ಯಂ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವ ಈ ಹಬ್ಬವು ಈ ಕೊವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲ್ಪಟ್ಟಿತು. ಪೂಜೆಯ ವೇಳೆ ಸ್ವಾಮಿ ಶ್ರೀ ಸುಬ್ರಮಣ್ಯಂ ( ಮುರುಗನ್ ) ದೇವರಿಗೆ ಹೂವಿನ ಅಲಂಕಾರ, ಕರ್ಪೂರದಾರತಿ, ಮಹಾಮಂಗಳಾರತಿ ಕಾರ್ಯಕ್ರಮಗಳು ಸರಳವಾಗಿ ಆಚರಿಸಲ್ಪಟ್ಟಿತ್ತು. ಈ ಸಂದರ್ಭದಲ್ಲಿ ಸಕಲ ಭಕ್ತಾಧಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿಸಲ್ಪಟ್ಟಿತ್ತು . ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು, ದೇವಸ್ಥಾನದ ಅರ್ಚಕರು ಹಾಗೂ ಕುಟುಂಬಸ್ಥರು ಸುಬ್ರಮಣ್ಯಂ ಸ್ವಾಮಿಗೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಗುಬ್ಬಿ: ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀ ನಿವಾಸ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿಯ ಮಸಿಯಮ್ಮನಹಟ್ಟಿ ಗ್ರಾಮದಲ್ಲಿ ಕಾಡಾಯೋಜನೆಯಡಿ 57 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕ್ರಮವಹಿಸಿದರೂ, ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕೊರೊನಾ ಮೂರನೇ ಅಲೆ ಹರಡುತ್ತಿದ್ದು ಜನತೆ ಸಾಕಷ್ಟು ಜಾಗೃತಿ ವಹಿಸಬೇಕು ಎಂದರು. ವಿಕೇಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಸಹ ಜನತೆ ಸಾಕಷ್ಟು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೊರೊನಾ ಮೊದಲನೇ ಅಲೆಯಲ್ಲಿ ಸಾಕಷ್ಟು ಸಾವು ಸಂಭವಿಸಿದೆ. ಜನತೆ ಈ ಬಾರಿಯೂ ಸಹ ನಿರ್ಲಕ್ಷ್ಯ ವಹಿಸಿದರೆ, ಮೊದಲಿಗಿಂತ ಹೆಚ್ಚು ಸಾವು ನೋವುಗಳು ಸಂಭಸಲಿದೆ. ಆದರಿಂದ ಜನತೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು. ವರದಿ: ಡಿ.ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿತ ಅಭ್ಯರ್ಥಿ ಮಂಜುಳ ಅವರು ಗ್ರಾ.ಪಂ. ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಅಭ್ಯರ್ಥಿ ಮಂಜುಳವೀರೇಶ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಇತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದ ಜಗದ್ಗುರುಗಳಾಗಿದ್ದ ದಿ. ಶ್ರೀ ಪುಣ್ಯಾನಂದಪುರಿ ಮಹಾ ಸ್ವಾಮೀಜಿಗಳವರ ಪೂರ್ವಾಶ್ರಮದ ತಂದೆಯವರಾದ ರಂಗಸ್ವಾಮಿ(75) ವರ್ಷ ಇಂದು ಬಸವೇಶ್ವರ ನಗರದ ತಮ್ಮ ನಿವಾಸದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರ. ಇವರ ನಿಧನಕ್ಕೆ ತಾಲೂಕು ವಾಲ್ಮೀಕಿ ಸಮಾಜ ತೀವ್ರ ಸಂತಾಪ ವ್ಯಕ್ತಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೆಚ್.ಡಿ.ಕೋಟೆ: ಸರಗೂರು ಮೈಸೂರು ಮಾನಂದವಾಡಿಯ ಮುಖ್ಯರಸ್ತೆಯಾಗಿರುವ ಅಂತರಸಂತೆ ಗ್ರಾಮದಲ್ಲಿ ಪೊಲೀಸ್ ಠಾಣೆಯಾದರೆ, ಇದು ಸಾರ್ವಜನಿಕರಿಗೆ ಹೆಚ್ಚಿನ ರೀತಿಯ ಅನುಕೂಲವಾಗಲಿದೆ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು. ತಾಲ್ಲೂಕಿನ ಅಂತರಸಂತೆ ಗ್ರಾಮದ ನೂತನ ಪೊಲೀಸ್ ಠಾಣೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಅಂತರಸಂತೆ ಭಾಗದಲ್ಲಿದ್ದ ಉಪ ಪೊಲೀಸ್ ಠಾಣೆಯನ್ನು ಬದಲಾಯಿಸಿ, ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂಬುದು ಈ ಭಾಗದ ಜನರ ಬಹುವರ್ಷಗಳ ಬೇಡಿಕೆಯಾಗಿತ್ತು. ಆದರೆ ಈ ಬೇಡಿಕೆ ಈಗ ಈಡೇರುತಿದೆ. ಒಂದು ಪೊಲೀಸ್ ಠಾಣೆಗೂ ಉಪ ಠಾಣೆಗೂ ಹೆಚ್ಚಿನ ವ್ಯತ್ಯಾಸವಿರುವುದಿಲ್ಲ, ಬದಲಿಗೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸುತ್ತೇವೆ, ಉಪಠಾಣೆಯಲ್ಲಿ ಎಫ್ ಐ ಆರ್ ಹಾಕುವುದಿಲ್ಲ. ಆದರೆ ಸಮಸ್ಯೆಗಳಿಗೆ ಎರಡು ಕಡೆ ಸ್ಪಂದಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಪೊಲೀಸ್ ಠಾಣೆಯನ್ನು ಮಾಡಲು ಸರ್ಕಾರದ ಸಾಕಷ್ಟು ನಿಯಮಗಳಿವೆ. ಹಳೆ ಠಾಣೆಯಲ್ಲಿ 750 ಕೇಸ್ ಆಗಿರಬೇಕು ಮತ್ತು ಜನಸಂಖ್ಯೆ ಮುಖ್ಯವಾಗಿರುತ್ತದೆ. ಆದ್ದರಿಂದ ಇದು ಮುಖ್ಯ ರಸ್ತೆಯೂ ಸಹ ಹೌದು ಎಂದು…
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಈಚನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪುಷ್ಪ ಜಗದೀಶ್ ಹಿಂದಿನ ಒಡಂಬಡಿಕೆಯ ಪ್ರಕಾರ, ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷೆ ಶ್ರುತಿ ಜಯದೇವ್, ನಿಕಟಪೂರ್ವ ಉಪಾಧ್ಯಕ್ಷ ಕೆ.ಬಿ.ನವೀನ್ ಕುಮಾರ್, ಸದಸ್ಯರಾದ ಭಾಗ್ಯ,ಗೀತಾ, ಉಮೇಶ್ ನಾಗರಾಜ್, ಸುಧಾ ಮತ್ತು ಗೀತಾ ಸೇರಿದಂತೆ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ಪಿಡಿಒ ಶಿವಕುಮಾರ್, ಕಾರ್ಯದರ್ಶಿ ಭರತ್ ಕುಮಾರ್ ಮತ್ತು ಸಿಬ್ಬಂದಿ ವರ್ಗ ಹಾಗೂ ಮುಖಂಡ ಈಚನೂರು ರಾಜಶೇಖರ್ ಅಭಿನಂದನೆ ಸಲ್ಲಿಸಿದರು. ನೂತನ ಉಪಾಧ್ಯಕ್ಷೆ ಪುಷ್ಪ ಜಗದೀಶ್ ಮಾತನಾಡಿ, ಎಲ್ಲ ಸದಸ್ಯರುಗಳ ಬೆಂಬಲದೊಂದಿಗೆ ಗ್ರಾಮದ ಮತ್ತು ಪಂಚಾಯಿತಿಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಫ್ಘಾನಿಸ್ತಾನ: ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ, ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬಾದ್ಘಿಸ್ನು ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ್ದು, ಇಲ್ಲಿನ ಮನೆಗಳ ಮೇಲ್ಛಾವಣಿ ಕುಸಿದು ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ತಿಳಿಸಿದ್ದಾರೆ. ಈಗಾಗಲೇ ಅಪ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗಿದ್ದು ಜನರು ಸಾಕಷ್ಟು ನರಳುತ್ತಿದ್ದಾರೆ ಇದರ ಮಧ್ಯೆ ಈ ಭೂಕಂಪನವು ಇನ್ನಷ್ಟು ನೋವು ನೀಡಿದೆ. ಯುಎಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಆಳವಿಲ್ಲದ ಭೂಕಂಪನವು 5.3 ತೀವ್ರತೆಯನ್ನು ಹೊಂದಿದೆ. ಅಪ್ಘಾನಿಸ್ತಾನವು ಆಗಾಗ್ಗೆ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗುಳ ಜಂಕ್ಷನ್ನ್ ಸಮೀಪದಲ್ಲಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಬಡವರು ಆಹಾರಕ್ಕಾಗಿ, ಬಟ್ಟೆಗಾಗಿ ಸಂಕಷ್ಟ ಪಡುತ್ತಿದ್ದಾರೆ. ಮತ್ತೊಂದೆಡೆ, ಇದೇ ಅವಧಿಯಲ್ಲಿ ದೇಶದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಬಡವ ಶ್ರೀಮಂತರ ಅಂತರ ಕೊರೊನಾ ಕಾಲದಲ್ಲಿ ಏರಿಕೆಯಾಗಿದೆ. ಎನ್ ಜಿಒ ಆಕ್ಸ್ ಫ್ಯಾಮ್ ಇಂಡಿಯಾದ ವರದಿಯ ಪ್ರಕಾರ, 2021 ರಲ್ಲಿ ಭಾರತದಲ್ಲಿ ಶೇಕಡಾ 84 ರಷ್ಟು ಕುಟುಂಬಗಳ ಆದಾಯವು ಕುಸಿದಿದೆ. ಆದರೆ ಭಾರತೀಯ ಬಿಲಿಯನೇರ್ ಗಳ ಸಂಖ್ಯೆ 102 ರಿಂದ 142 ಕ್ಕೆ ಏರಿದೆ. ಇಂದು ವಿಶ್ವ ಆರ್ಥಿಕ ವೇದಿಕೆ 2022 ರ ಮೊದಲ ದಿನ. ಈ ಸಂದರ್ಭದಲ್ಲಿ, ಆಕ್ಸ್ ಫ್ಯಾಮ್ ಇಂಡಿಯಾ ವಾರ್ಷಿಕ ಅಸಮಾನತೆಯ ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ, ಕರೋನಾ ಅವಧಿಯಲ್ಲಿ ಭಾರತೀಯ ಬಿಲಿಯನೇರ್ ಗಳ ಒಟ್ಟು ಸಂಪತ್ತು ದ್ವಿಗುಣಗೊಂಡಿದೆ. ಟಾಪ್-10 ಶ್ರೀಮಂತರು ಮುಂದಿನ 25 ವರ್ಷಗಳ ಕಾಲ ದೇಶದ ಎಲ್ಲಾ ಶಾಲಾ-ಕಾಲೇಜುಗಳನ್ನು ನಡೆಸಬಲ್ಲಷ್ಟು ಸಂಪತ್ತನ್ನು ಹೊಂದಿದ್ದಾರೆ ಎಂಬ ಅಂಶದಿಂದ ಅವರ ಸಂಪತ್ತನ್ನು ಅಳೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…