Author: admin

ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಚಂಬೆಳಕಿನ ಕವಿ ನಾಡೋಜ ಡಾ.ಚನ್ನವೀರ ಕಣವಿ(93) ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದ ಕಣವಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಜ.14ರಂದು ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ಫಾರ್ಮ್‍ಹೌಸ್‍ನಲ್ಲಿ ಇಂದು ಸಂಜೆ ನೆರವೇರಲಿದೆ. ಇದಕ್ಕೂ ಮುನ್ನ ಕರ್ನಾಟಕದ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಇಲ್ಲಿಗೆ ಆಗಮಿಸಿದ ಬಂಧುಮಿತ್ರರು, ಸಾಹಿತ್ಯ ಬಳಗ, ರಾಜಕಾರಣಿಗಳು, ಬರಹಗಾರರು, ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದು ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿದರು.ಕಣವಿ ನಡೆದು ಬಂದ ದಾರಿ: ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿ ಜನಿಸಿದರು. ಶಿರುಂಡ, ಗರಗಗಳಲ್ಲಿ 1940-46ರಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950ರಲ್ಲಿ ಬಿ.ಎ ಪದವಿ, 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನೂ ಗಳಿಸಿದರು. 1952ರಲ್ಲಿ ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿಯಾಗಿ ಸೇವೆ…

Read More

ಹಿರಿಯೂರು:  ಪಂಜಾರ ( ಲಂಬಾಣಿ ) ಸಮುದಾಯದ ಆರಾಧ್ಯದೈವವಾದ ಸಂತ ಸೇವಾಲಾಲರು ಒಬ್ಬ ಧಾರ್ಮಿಕ ನಾಯಕ ಹಾಗೂ ಪವಾಡ ಪುರುಷರೂ ಆಗಿದ್ದು, ಸಮಾಜದ ಎಲ್ಲಾ ವರ್ಗದ ಜನರೂ ಸತ್ಯಧರ್ಮದಿಂದ ಬಾಳುವ ಮೂಲಕ ಹಸಿದವರಿಗೆ ಅನ್ನ, ದಣಿದವರಿಗೆ ನೀರು ಕೊಡುವ ಮೂಲಕ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಾರಿದ ಮಹಾನ್ ಸಮಾಜ ಸುಧಾರಕರು ಎಂದು ಜಿಲ್ಲಾ ಪಂಜಾರ ಸಮಾಜದ  ಅಧ್ಯಕ್ಷರು ಹಾಗೂ ಜಿ.ಪಂ. ಮಾಜಿ ಸದಸ್ಯರಾದ ಎಂ.ನಾಗೇಂದ್ರ ನಾಯ್ಕ ಹೇಳಿದರು. ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಸಂತ ಸೇವಾಲಾಲ್ ಜಯಂತ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು  ಮಾತನಾಡುತ್ತಿದ್ದರು. ಇದೇ ವೇಳೆ ವಿಶೇಷ ಉಪನ್ಯಾಸ ನೀಡಿದ ಮುಖ್ಯ ಶಿಕ್ಷಕರಾದ ರಮೇಶ್ ನಾಯ್ಕ, ದೇಶದಲ್ಲಿನ ಅಸ್ಪಶ್ಯತೆ, ಜಾತಿಪದ್ದತಿ, ಧರ್ಮಾಂಧತೆಯನ್ನು ತೊಡೆದು ಹಾಕಲು ಹಲವಾರು ಮಹನೀಯರು ಹೋರಾಡಿದ್ದು, ಅವರಲ್ಲಿ ಬಂಜಾರ ಸಮುದಾಯದ ಸಂತ ಸೇವಾಲಾಲ ಮಹಾರಾಜರು ಸಹ ಒಬ್ಬರಾಗಿದ್ದಾರೆ. ಇವರು ಸಮಾಜದ ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವಿಸಬೇಕು ಎಂಬ ಸಂದೇಶವನ್ನು…

Read More

ಹಿರಿಯೂರು: ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮಾತ್ರ ಪರೀಕ್ಷೆ ಬರೆಯುವುದಾಗಿ  ನಗರದ ಪ್ರಧಾನ ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದು, ಪರೀಕ್ಷೆ ಬರೆಯದೇ ವಾಪಸ್ ತೆರಳಿದ ಘಟನೆ ನಡೆದಿದೆ. ಹಿರಿಯೂರು ನಗರದ ಜೂನಿಯರ್ ಕಾಲೇಜ್ ಮುಂಭಾಗದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿವರ್ಗ ಕಾಲೇಜು ಗೇಟಿನ ಮುಂಭಾಗದಲ್ಲೇ ತಡೆಯೊಡ್ಡಿದರು. ಈ ವೇಳೆ ವಿದ್ಯಾರ್ಥಿನಿಯರು ಹಾಗೂ ಕಾಲೇಜು ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯ ಹೈಕೋರ್ಟ್ ಆದೇಶವನ್ನು ನಾವೆಲ್ಲಾ ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಆದ್ದರಿಂದ ಹೈಕೋರ್ಟ್ ಅಂತಿಮ ಆದೇಶ ಬರುವವರೆಗೆ  ಶಾಂತಿಯಿಂದಿರಿ, ಈಗ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಜಾಬ್ ತೆಗೆದು ಹೋಗಿ ಪರೀಕ್ಷೆ ಬರೆಯಿರಿ ಎಂದು ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ಪೋಲೀಸ್ ಅಧಿಕಾರಿಗಳು ವಿದ್ಯಾರ್ಥಿ ಹಾಗೂ ಪೋಷಕರರಲ್ಲಿ ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ಹಾಗೂ  ಪೋಷಕರು ನಮಗೆ ಧರ್ಮವೇ ಮುಖ್ಯ, ನಾವು ಸತ್ತಾಗ…

Read More

ತುಮಕೂರು: ವಿದ್ಯಾರ್ಥಿನಿಯರು ಕಾಲೇಜು ಮುಂಭಾಗದಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಆಗಮಿಸಿದ್ದು, ಆದರೆ ವಿದ್ಯಾರ್ಥಿನಿಯರಿಗೆ ಹಿಜಾಬ್ ನೊಂದಿಗೆ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗಿಲ್ಲ. ಪೊಲೀಸರು ವಿದ್ಯಾರ್ಥಿನಿಯರ ಮನವೋಲಿಕೆಗೆ ಸಾಕಷ್ಟು  ಪ್ರಯತ್ನ ನಡೆಸಿದರೂ  ಹಠ ಹಿಡಿದಿರುವ ವಿದ್ಯಾರ್ಥಿನಿಯರು, ಹಿಜಾಬ್ ಇಲ್ಲದೆ ತರಗತಿ ಪ್ರವೇಶಿಸುವುದಿಲ್ಲ ಎಂದು ತರಗತಿ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಹಿಜಾಬ್​ ವಿವಾದ  ದಿನೇ ದಿನೇ ತಾರಕ್ಕಕ್ಕೇರುತ್ತಿದ್ದು, ತರಗತಿ ಪ್ರವೇಶಕ್ಕೆ ಅನುಮತಿ ನೀಡದೇ ಇರುವುದನ್ನು ವಿರೋಧಿಸಿ ವಿದ್ಯಾರ್ಥಿನಿಯರು, ತುಮಕೂರಿನ ಟೌನ್  ಹಾಲ್ ಬಳಿಯಿರುವ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್​ ನಲ್ಲಿಯೂ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಹಿಜಾಬ್ ಧರಿಸಿ ಶಾಲೆಗೆ ಪ್ರವೇಶ ನೀಡಲು ಶಾಲಾ ಸಿಬ್ಬಂದಿ ನಿರಾಕಿರಿಸಿದ್ದು, ಆದರೆ, ನಾವು ಹಿಜಾಬ್ ಧರಿಸಿಯೇ ಬರುತ್ತೇವೆ. ಇಲ್ಲವಾದರೆ, ಶಾಲೆಗೆ ಬರುವುದಿಲ್ಲ ಎಂದು ವಿದ್ಯಾರ್ಥಿನಿಯರು ಹೇಳುತ್ತಿದ್ದು, ಕೊನೆಗೆ  ಅಸಹಾಯಕರಾಗಿ ಮನೆಗೆ ತೆರಳುತ್ತಿರುವುದು ಕಂಡು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಗದಗ: ಜಯ ಕರ್ನಾಟಕ ಸಂಘಟನೆಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ.  ಲಕ್ಷ್ಮೇಶ್ವರ ಪಟ್ಟಣದಿಂದ ಗದಗ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು , ಕೂಡಲೇ ರಸ್ತೆ ನವೀಕರಣಗೊಳಿಸಬೇಕೆಂದು ತಾಲೂಕ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಇಸ್ಮಾಯಿಲ್  ಆಡೂರ ಅವರ ನೇತೃತ್ವದಲ್ಲಿ ಪಟ್ಟಣದ ಶಿಗ್ಲಿ ನಾಕಾದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಹದಗೆಟ್ಟಿರುವ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರಾದ ಡಿ.ಬಿ. ನರೇಂದ್ರ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕ ಅಧ್ಯಕ್ಷ ಇಸ್ಮಾಯಿಲ ಆಡೂರ, ಲಕ್ಷ್ಮೇಶ್ವರ ದಿಂದ ಗದಗ ಹೋಗುವ ಮಾರ್ಗದ  ರಸ್ತೆಯು ತಗ್ಗು ಗುಂಡಿಗಳು ಬಿದ್ದು ವಾಹನ ಸವಾರರು ಹರಸಾಹಸ ದಿಂದ ಸಂಚರಿಸುವ ಪರಸ್ಥಿತಿ ನಿರ್ಮಾಣ ವಾಗಿದೆ. ಈ ರಸ್ತೆಯ ಮೂಲಕ ದಿನನಿತ್ಯ ನೂರಾರು ಸರಕಾರಿ ನೌಕರರು,  ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಂಗವಿಕಲರು,  ವೃದ್ಧರು,  ಮಹಿಳೆಯರು ತಮ್ಮ ಕೆಲಸ ಕಾರ್ಯಗಳಿಗೆ ಗದಗ ನಗರಕ್ಕೆ ಹೋಗಿ ಬರುತ್ತಾರೆ. ಈ  ರಸ್ತೆ ಸಂಪೂರ್ಣ ಹದೆಗೆಟ್ಟಿರುವುದರಿಂದ ಸಮಯಕ್ಕೆ ಸರಿಯಾಗಿ…

Read More

ತುಮಕೂರು: ಜಿಲ್ಲೆಯ ಗುಬ್ಬಿ, ಕೊರಟಗೆರೆ ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಘಟಕ ಪ್ರಾರಂಭಿಸಬೇಕು, ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಮತ್ತು ಗ್ರಾಮಾಂತರದ ವಿವಿಧ ಭಾಗಗಳಿಗೆ ಬಸ್ ಸೌಕರ್ಯ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಕೆಪಿಸಿಸಿ ಮಾಧ್ಯಮ ವಿಶ್ಲೇಷಕರು ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮುರಳೀಧರ ಹಾಲಪ್ಪ ಅವರು ಒತ್ತಾಯಿಸಿದರು. ನಗರದ ಅಂತರಸನಹಳ್ಳಿಯಲ್ಲಿರುವ ಸಾರಿಗೆ ನಿಯಂತ್ರಣಾಧಿಕಾರಿಗಳ ಕಚೇರಿಗೆ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ ಮತ್ತು ತುಮಕೂರು ನಗರದ ಕಾಂಗ್ರೆಸ್ ಮುಖಂಡರೊoದಿಗೆ ನಿಯೋಗದಲ್ಲಿ ತೆರಳಿ ಕ.ರಾ.ರ.ಸಾ.ನಿ.ದ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜು ಅವರೊಂದಿಗೆ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುರಳೀಧರ ಹಾಲಪ್ಪ ಅವರು ಗುಬ್ಬಿ, ಚಿಕ್ಕನಾಯಕನಹಳ್ಳಿ, ಕೊರಟಗೆರೆ ತಾಲ್ಲೂಕುಗಳಲ್ಲಿ ಬಸ್ ಡಿಪೋ ಪ್ರಾರಂಭಿಸುವುದರಿoದ ಅಲ್ಲಿನ ಸ್ಥಳೀಯರಿಗೆ ಉದ್ಯೋಗದ ಜೊತೆಗೆ ಆ ಭಾಗದ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ನಿವಾರಿಸಿದಂತಾಗುತ್ತದೆ. ಆದುದರಿಂದ ಶೀಘ್ರವಾಗಿ ಬಸ್ ಡಿಪೋ ಪ್ರಾರಂಭಿಸಬೇಕೆoದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ…

Read More

ತಿಪಟೂರು:  ತಾಲ್ಲೂಕು ಶ್ರೀ ಸೇವಾಲಾಲ್ ಲಂಬಾಣಿ ಸಂಘದ ವತಿಯಿಂದ ಸಂತ ಶ್ರೀ ಸೇವಾಲಾಲ್ ರವರ 283ನೇ ಜಯಂತೋತ್ಸವ ಆಚರಿಸಲಾಯಿತು. ನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ಗಳನ್ನು ವಿತರಿಸುವ ಮೂಲಕ ಸಂತ ಶ್ರೀ ಸೇವಾಲಾಲ್  ರವರ 283ನೇ ಜಯಂತೋತ್ಸವ ಆಚರಿಸಲಾಯಿತು. ಆಯೋಜಕ ಮತ್ತು ಅಧ್ಯಕ್ಷ ಬಿ.ಟಿ.ಕುಮಾರ್, ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕ ಟೀಕಾನಾಯ್ಕ್, ಡಾ.ರವಿ ಕುಮಾರ್ ಮಾತನಾಡಿದರು. ಉಪನ್ಯಾಸಕ ಕೆ.ಎನ್.  ರೇಣುಕಯ್ಯ, ಸಂಘಟನೆಯ ಪದಾಧಿಕಾರಿಗಳಾದ ಬೆಸ್ಕಾಂ ರವಿಕುಮಾರ್, ಚೇತನ್,  ಯೋಗೀಶ್, ಮಂಜು ನಾಯ್ಕ, ಮುಖಂಡರುಗಳಾದ ಸಿದ್ದಾನಾಯಕ್, ರಾಜನಾಯಕ್,   ಬಿ.ಬಿ. ಬಸವರಾಜ್, ಲೋಕೇಶ್, ರವಿ ಹಿಂಡಿಸ್ಕೆರೆ, ಸಿದ್ದೇಶ್, ಧನಂಜಯ, ಉಮಾಶಂಕರ್, ಸ್ವಾಮಿ ವಿದ್ಯಾರ್ಥಿ ಘಟಕದ ರಾಖಿ ರಾಥೋಡ್ ಮತ್ತು ರಾಹುಲ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು  ಸಮಾಜದ ಮುಖಂಡರುಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು: ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್,  ಗ್ರೇಡ್-2 ತಹಸೀಲ್ದಾರ್, ಶಿರಸ್ತೇದಾರ್,  ಸಮಾಜ ಕಲ್ಯಾಣಾಧಿಕಾರಿಗಳು, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಹಿಂದುಳಿದ ವರ್ಗದ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರಾದ  ರೇಣುಕಯ್,  ಟಿ.ಕೆ.ನಾಯ್ಕರ,  ಸಮಾಜದ ಮುಖಂಡರುಗಳಾದ ಸಿದ್ದನಾಯ್ಕ,  ರಾಮನಾಯ್ಕ, ಮಂಜನಾಯ್ಕ, ಬಿ.ಟಿ.ಕುಮಾರ್ ಸಮಾಜದ ಮುಖಂಡರುಗಳು ಕಚೇರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.  ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಟಾಟಾ ಗ್ರೂಪ್ ಇಲ್ಕರ್ ಆಯ್ಸಿ ಅವರನ್ನು (ಮಾಜಿ ಟರ್ಕಿಷ್ ಏರ್‍ಲೈನ್ಸ್ ಅಧ್ಯಕ್ಷ) ಏಪ್ರಿಲ್ 1 ಅಥವಾ ಅದಕ್ಕಿಂತ ಮೊದಲು ಅನ್ವಯವಾಗುವಂತೆ ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಕಾರಿ(ಎಂಡಿ ಮತ್ತು ಸಿಇಒ) ಯಾ ನೇಮಕ ಮಾಡಿದೆ. ಟಾಟಾ ಗ್ರೂಪ್ ಕಳೆದ ತಿಂಗಳು ಭಾರತ ಸರ್ಕಾರದಿಂದ ಸ್ವಾೀಧಿನಪಡಿಸಿಕೊಂಡ ವಿಮಾನಯಾನ ಸಂಸ್ಥೆ ಮುನ್ನೆಡೆಸಲ ಓರ್ವ ಸಾಗರದಾಚೆಯ ಮುಖ್ಯಸ್ಥರನ್ನು ನೇಮಿಸುವ ಯೋಜನೆಗಳ ಅನುಸಾರ ಈ ಬೆಳವಣಿಗೆಯಾಗಿದೆ. ಇಲ್ಕರ್ ಆಯ್ಸಿ ಅವರು 2015ರಿಂದ ಟರ್ಕಿಷ್ ಏರ್ ಲೈನ್ಸ್‍ನ ಅಧ್ಯಕ್ಷರಾಗಿದ್ದರು ಮತ್ತು ಈ ವರ್ಷದ ಜನವರಿ 27ರಂದು ಕೇಂದ್ರ ಸರ್ಕಾರವು ಟಾಟಾ ಸಮೂಹಕ್ಕೆ ಏರ್ ಇಂಡಿಯಾವನ್ನು ಹಸ್ತಾಂತರಿಸಿದ ದಿನ ಆಯ್ಸಿ ಅವರು ರಾಜೀನಾಮೆ ನೀಡಿರುವುದನ್ನು ಟರ್ಕಿಷ್ ಏರ್‍ಲೈನ್ಸ್ ಪ್ರಕಟಿಸಿದೆ. ತಮ್ಮ ವೃತ್ತಿ ಜೀವನದ ಅವಯಲ್ಲಿ ಆಯ್ಸಿ ಅವರು ಇಸ್ತಾಂಬುಲ್‍ನ ಅಂದಿನ ಮೇಯರ್ ರೆಸೆಪ್ ತಯ್ಯಿಪ್ ಎರ್ಡೋಗಾನ್ ಅವರಿಗೆ ಇಸ್ತಾನ್‍ಬುಲ್ ಮಹಾನಗರ ಪಾಲಿಕೆಯಲ್ಲಿ ಸಲಹೆಗಾರರಾಗಿದ್ದರು. ಎರ್ಡೋಗಾನ್ ಅವರು ಟರ್ಕಿಯ ಈ ಮಹಾನಗರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡರು.…

Read More

ತುಮಕೂರು ರಸ್ತೆಯ ಗೊರಗುಂಟೆ ಪಾಳ್ಯ ಮತ್ತು ನಾಗಸಂದ್ರ ನಡುವಿನ ಮೇಲ್ಸೇತುವೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಸುರೇಶ್‍ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಈ ಭಾಗದಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಸಾಕಷ್ಟು ಸಮಸ್ಯೆಯಾಗಿದೆ. ಇದರ ಬಗ್ಗೆ ಕಳೆದ ಜ.20ರಂದು ನಾನು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ದುರಸ್ತಿ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಭಾಗದ ಪ್ರಧಾನ ವ್ಯವಸ್ಥಾಪಕರು ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಐಐಎಸ್‍ ಸಿ ತಜ್ಞರ ಅಭಿಪ್ರಾಯಕ್ಕಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದ್ದರು. ಇದು ಬಂದ ಕೂಡಲೇ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದರು. ಆದರೆ, ಸರಿಸುಮಾರು ಒಂದು ತಿಂಗಳಾಗುತ್ತಿದ್ದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಪ್ರತಿನಿತ್ಯ ಅನುಭವಿಸುತ್ತಿರುವ ಬವಣೆಯಿಂದಾಗಿ ರೋಸಿ ಹೋಗಿದ್ದಾರೆ.ಸಾರ್ವಜನಿಕರ ಹಿತದೃಷ್ಟಿಯಿಂದ ತಾವು ಕ್ರಮ ಕೈಗೊಂಡು…

Read More