Author: admin

ಬೆಂಗಳೂರು:  ನವೆಂಬರ್ 26ರಂದು ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಸೂಚನೆ ನೀಡಿದೆ. ನವೆಂಬರ್ 26, 1949ರಂದು ಭಾರತದ ಸಂವಿಧಾನ ಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ದಿನವಾಗಿದ್ದು, ಈ ಸವಿ ನೆನಪಿಗಾಗಿ ನವೆಂಬರ್ 26ರಂದು  ಸಂವಿಧಾನದ ಪ್ರಸ್ತಾವಣೆಯನ್ನು ಕಡ್ಡಾಯವಾಗಿ ಓದುವ ಮತ್ತು ಸಂವಿಧಾನದ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲು ಸೂಚನೆ ನೀಡಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ತುಮಕೂರಿನಲ್ಲಿ ಇಂದು ಕಾಂಗ್ರೆಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸುವ ಮುನ್ನ ಇಲ್ಲಿನ ಎಚ್‌ ಎಂಎಸ್‌ ಕಾಲೇಜಿಗೆ ಭೇಟಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದರು. ಈ ವೇಳೆ  ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಂಸದರಾದ ಜಿ.ಸಿ.ಚಂದ್ರಶೇಖರ್‌, ಶಾಸಕರಾದ ವೆಂಕಟರಮಣಪ್ಪ, ಮಾಜಿ ಸಂಸದರಾದ ಮುದ್ದ ಹನುಮೇಗೌಡ, ಮಾಜಿ ಶಾಸಕರಾದ ಕೆ.ಎನ್‌.ರಾಜಣ್ಣ, ಮಾಜಿ ಶಾಸಕರು ಹಾಗೂ ಕಾಲೇಜಿನ ಮುಖ್ಯಸ್ಥರಾದ ರಫೀಕ್‌ ಅಹ್ಮದ್‌, ಮಾಜಿ ಶಾಸಕರಾದ ಷಡಕ್ಷರಿ, ಶಫಿ ಅಹ್ಮದ್‌, ಜಯಚಂದ್ರ ಮೊದಲಾದವರು ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಕೃಷಿ ಕಾಯ್ದೆ ವಾಪಸ್ ಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಮಯದಲ್ಲಿ 750ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಇದೀಗ ಕಾಯ್ದೆಯನ್ನು ವಾಪಸ್ ಪಡೆದುಕೊಳ್ಳುತ್ತೇನೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಹೇಳಬೇಕೆ? ಎಂದು ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ ಗಾಜಿನ ಮನೆಯಲ್ಲಿ ಭಾನುವಾರ ನಡೆಯಲಿರುವ ಕಾಂಗ್ರೆಸ್ ಪಕ್ಷ ಜನಜಾಗೃತಿ ಅಭಿಯಾನದ ಸಿದ್ಧತೆಗಳನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆ, ಚಳಿ, ಗಾಳಿಯಲ್ಲಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ರೈತರನ್ನು ಅಯ್ಯೋ ಎನ್ನಿಸಿದ ಸರ್ಕಾರ ಅಭಿನಂದನೆಗೆ ಅರ್ಹವಲ್ಲ. ಒಂದು ವರ್ಷದಿಂದ ಧರಣಿ ಕುಳಿತಿದ್ದರೂ ಕನಿಷ್ಠ ಸೌಜನ್ಯಕ್ಕೂ ಭೇಟಿಯಾಗಿ ಮಾತುಕತೆ ನಡೆಸಲಿಲ್ಲ. ಈಗ ವಾಪಸ್ ಪಡೆಯುವುದಾಗಿ ಹೇಳಿರುವುದಕ್ಕೆ ಮೋದಿ ಅವರನ್ನು ಅಭಿನಂದಿಸಿದರೆ, ಹೋರಾಟನಿರತ ರೈತರಿಗೆ ಮಾಡಿದ ಅಪಮಾನವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ರೈತರ ಪ್ರತಿಭಟನೆ ವಿಶ್ವದ ಗಮನ ಸೆಳೆದಿತ್ತು. ಹಲವು ರಾಷ್ಟ್ರಗಳು ಈ ಬಗ್ಗೆ ಮಾತನಾಡಿದ್ದವು. ಆದರೂ ಸ್ಪಂದಿಸಲಿಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆ…

Read More

ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ನಗರದ ಕ್ಯಾತ್ಸಂದ್ರ 34 ನೇ ವಾರ್ಡ್ ನ SLN ಬಡಾವಣೆಯಲ್ಲಿ ಮನೆಯೊಂದು ಕುಸಿದು ಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಮನೆಯಲ್ಲಿ ವಾಸಿಸುತ್ತಿದ್ದವರು ಬೀದಿ ಪಾಲಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಭೂಮಿ ವಸತಿ ಹೋರಾಟ ಸಮಿತಿಯ ಹೋರಾಟದಿಂದಾಗಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಮನೆ ಬಿದ್ದ ಬಳಿಕ ಕುಟುಂಬದ 8—10 ಸದಸ್ಯರು ಸಂಕಷ್ಟದಲ್ಲಿದ್ದರು. ಇವರಿಗೆ ಸರಿಯಾದ ನಿದ್ದೆ ಹಾಗೂ ಸರಿಯಾದ ಆಹಾರ ವ್ಯವಸ್ಥೆ ಇಲ್ಲದೆ ಕಂಗಾಲಾಗಿದ್ದರು ಎನ್ನಲಾಗಿದೆ. ಈ ವಿಚಾರವನ್ನು ಪಾಲಿಕೆ ಆಯುಕ್ತರಿಗೆ ತಿಳಿಸಿದಾಗ ಅವರು ಪರಿಶೀಲನೆ ನಡೆಸಲು ಅಧಿಕಾರಿಗಳನ್ನು ಕಳುಹಿಸಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಬಡಾವಣೆಯಲ್ಲಿರುವ ಸಮುದಾಯ ಭವನವನ್ನು ಸ್ವಚ್ಛ ಮಾಡಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿ ಕೊಡುತ್ತೇವೆಂದು ಕೇವಲ ಭರವಸೆ ನೀಡಿ ವಾಪಸ್ ಹೋಗಿದ್ದರೆನ್ನಲಾಗಿದೆ. ಆದರೆ ಕುಟುಂಬಕ್ಕೆ ಯಾವುದೇ ವ್ಯವಸ್ಥೆಗಳನ್ನು ಮಾಡಿಸಿಕೊಡಲಾಗಿಲ್ಲ ಎಂದು ಭೂಮಿ ವಸತಿ ಹೋರಾಟ ಸಮಿತಿಯು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು.…

Read More

ತಿರುವನಂತಪುರ: ಕೇರಳದ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ಚಾಲಕ 48 ವರ್ಷ ವಯಸ್ಸಿನ ಚೇರ್ತಾಲ ಮೂಲದ ತೇಜಸ್ ಅವರ ಮೃತದೇಹ  ಭಾನುವಾರ ಬೆಳಿಗ್ಗೆ ರಾಜಭವನದ ತನ್ನ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ  ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತೇಜಸ್ ಶನಿವಾರ ರಾತ್ರಿ ಕರ್ತವ್ಯ ನಿರತರಾ್ಗಿದ್ದು, ಅವರು ವಿಮಾನ ನಿಲ್ದಾಣಕ್ಕೆ ವಾಹನ  ಚಲಾಯಿಸಿದ್ದರು. ಹಾಗೂ ರಾತ್ರಿ 9 ಗಂಟೆಯ ಹೊತ್ತಿಗೆ ಕ್ವಾರ್ಟರ್ಸ್ ಗೆ ಮರಳಿದ್ದರು. ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಡೆತ್ ನೋಟ್ ದೊರಕಿದ್ದು ಇವರು ವೈಯಕ್ತಿಕ ಸಮಸ್ಯೆಯಿಂದ  ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ತೇಜಸ್ ಕೆಲವು  ವರ್ಷಗಳಿಂದ ರಾಜಭವನದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700 .

Read More

ತುಮಕೂರು: ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೊಪ್ಪು, ತರಕಾರಿ ಕಟಾವು ಸಾಧ್ಯವಾಗದ ಹಿನ್ನೆಲೆಯಲ್ಲಿ  ತರಕಾರಿ ಬೆಲೆ ಗಗನಕ್ಕೆ ಏರಿದ್ದು, ತರಕಾರಿ ಬೆಲೆ ಎರಡು ಮೂರು ಪಟ್ಟು ಏರಿಕೆಯಾಗಿದೆ. ಕೋಲಾರ ಜಿಲ್ಲೆಯಲ್ಲಿ ಟೊಮೆಟೋ ಬೆಲೆ ಸಂಪೂರ್ಣವಾಗಿ ನಾಶವಾಗಿರುವ ಹಿನ್ನೆಲೆಯಲ್ಲಿ  ಟೊಮೆಟೋ ಬೆಲೆ ಗಗನಕ್ಕೇರಿದ್ದು,  ಜಿಲ್ಲೆಗಳಲ್ಲಿ ಸಾರ್ವಕಾಲಿಕ ದಾಖಲೆಗಳನ್ನು ಮುರಿದು ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಮೇಲಕ್ಕೆ ಜಿಗಿಯುತ್ತಲೇ ಇದೆ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಸುಮಾರು 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೊ ಬೆಳೆಯಲಾಗುತ್ತದೆ. ತಿಂಗಳ ಹಿಂದೆ ಕೋಲಾರ ಎಪಿಎಂಸಿಯಲ್ಲಿ 16,394 ಕ್ವಿಂಟಾಲ್ ಇದ್ದ ಟೊಮೆಟೊ ಆವಕ ಶನಿವಾರ 4,133 ಕ್ವಿಂಟಾಲ್ಗೆ ಇಳಿಕೆಯಾಗಿದೆ. ಟೊಮೆಟೊ ಆವಕ ಕುಸಿದಿರುವ ಕಾರಣಕ್ಕೆ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ತಿಂಗಳ ಹಿಂದೆ ಸ್ಥಳೀಯ ಮಾರುಕಟ್ಟೆಯಲ್ಲಿ ಟೊಮೆಟೊ ಸಗಟು ಬೆಲೆ ಕ್ವಿಂಟಾಲ್ಗೆ ಕನಿಷ್ಠ ರೂ. 330 ಮತ್ತು ಗರಿಷ್ಠ ರೂ. 3,330 ಇತ್ತು. ಶನಿವಾರ ಟೊಮೆಟೊ ಬೆಲೆ ಕನಿಷ್ಠ ರೂ. 2,000 ಹಾಗೂ…

Read More

ಉತ್ತರ ಪ್ರದೇಶ ; ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜಸ್ಥಾನ ರಾಜ್ಯಪಾಲ ಕಲ್‌ ರಾಜ್ ಮಿಶ್ರಾ  ಸ್ವಾಗತಿಸಿದ್ದಾರೆ. ರೈತರ ದೀರ್ಘಕಾಲದ ಪ್ರತಿಭಟನೆಯ  ಫಲವಾಗಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಿಗ್ಗೆ ಘೋಷಿಸಿದ್ದರು. ಆದರೆ ಅಗತ್ಯವಿದ್ದರೆ ಕೃಷಿ ಕಾಯ್ದೆಗಳನ್ನು ಮರು ಜಾರಿಗೊಳಿಸಬಹುದು ಎಂದು ಕಲ್‌ ರಾಜ್ ಮಿಶ್ರಾ  ಹೇಳಿರುವುದಾಗಿ ‘ಎಎನ್ ‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ‘ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ಪ್ರಯತ್ನಿಸಿದ್ದು, ಕೃಷಿ ಕಾಯ್ದೆಗಳ ಪ್ರಯೋಜನಗಳನ್ನು ರೈತರು ಅರ್ಥಮಾಡಿಕೊಳ್ಳಬಹುದು ಎಂದು ಭಾವಿಸಿತ್ತು. ಆದರೆ, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದರು ಎಂದು ಅವರು ಹೇಳಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಗುಬ್ಬಿ: ನಗರದ ಚಿಕ್ಕೋನಹಳ್ಳಿ ಮಾರ್ಗದ ಎಡೆಯೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯು ಅವೈಜ್ಞಾನಿಕವಾಗಿದ್ದು, ಇಲ್ಲಿ ಅಪಘಾತಗಳು ಸರ್ವೇ ಸಾಮಾನ್ಯ ಎಂಬಂತಾಗಿದೆ. ಕೆಶಿಎಫ್ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಈ ರಸ್ತೆಯ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರಿಗೆ ನೆಮ್ಮದಿ ಇಲ್ಲದಂತಾಗಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂದು ರಸ್ತೆ ಡಿವೈಡರ್ ಗೆ ಲಾರಿಯೊಂದು ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಸ್ಥಳದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿತ್ತು. ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಕಿರಿದಾದ ರಸ್ತೆಗೆ ಡಿವೈಡರ್ ಹಾಕಲಾಗಿರುವುದರಿಂದ ಆಗಾಗ ಇಲ್ಲಿ ಅಪಘಾತಗಳಾಗುತ್ತಿವೆ ಎಂದು ರೈತ ಮುಖಂಡ ಲೋಕೇಶ್ ಆರೋಪಿಸಿದ್ದಾರೆ.  ಈ ರಸ್ತೆ ಅವ್ಯವಸ್ಥೆಯನ್ನು ಶೀಘ್ರವೇ ಪರಿಹರಿಸಬೇಕು.  ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿ ರಸ್ತೆ ಸೂಚನಾ ಫಲಕವನ್ನು ಅಳವಡಿಸಿ ವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಾಣ ಮಾಡಬೇಕು. ಇಲ್ಲವಾದರೆ ಸಂಬಂಧ ಪಟ್ಟ ಇಲಾಖೆಯ ವಿರುದ್ಧ ಸಾರ್ವಜನಿಕರು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು  ರೈತ ಸಂಘದ ಮುಖಂಡ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ…

Read More

ತಿಪಟೂರು: ಕೇಂದ್ರ ಸರ್ಕಾರವು ಹೊಸ 3 ಕೃಷಿ ಕಾಯ್ದೆಗಳನ್ನುವಾಪಸ್ ಪಡೆದ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ನಗರದ ನಗರಸಭೆ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು. 3 ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಕಾಂಗ್ರೆಸ್ ಮುಖಂಡ ಟೂಟ ಶಶಿಧರ್ ಹೇಳಿದರು. ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ ರೈತರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯಬೇಕು ಮತ್ತು ಈ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ರೈತ ಮುಖಂಡರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಡಿಎಸ್ ಎಸ್ ಉಪಾಧ್ಯಕ್ಷ ಶಿವಕುಮಾರ್ ಮತಿಘಟ್ಟ. ರೈತ ಮುಖಂಡರು ಮತ್ತು ಇನ್ನು ಮುಂತಾದ ಮುಖಂಡರುಗಳು ಹಾಜರಿದ್ದರು ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು…

Read More

ತಿಪಟೂರು: ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಇಂದು ನಡೆಯುತ್ತಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ರವರೆಗೆ ನಡೆಯಲಿದೆ. ಜಿಲ್ಲಾ ಅಧ್ಯಕ್ಷರ ಸ್ಥಾನಕ್ಕೆ ಆರು ಮಂದಿ ಮತ್ತು ರಾಜ್ಯಾಧ್ಯಕ್ಷರ ಸ್ಥಾನಕ್ಕೆ 21 ಮಂದಿ ಸ್ಪರ್ಧಿಸಲಿದ್ದಾರೆ. ಜಿಲ್ಲಾ ಅಧ್ಯಕ್ಷರ ಸ್ಥಾನದ ಮತಪತ್ರ ಗುಲಾಬಿ ಬಣ್ಣ ಮತ್ತು ರಾಜ್ಯಾಧ್ಯಕ್ಷರ ಸ್ಥಾನದ  ಬಿಳಿ ಬಣ್ಣದ ಮತಪತ್ರವಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ತು ಚುನಾಯಿತ ಅಭ್ಯರ್ಥಿಗಳು ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಿದ್ದಾರೆ. ಇಂದು ಸಂಜೆ 6 ಗಂಟೆಯ ಒಳಗಡೆ ಚುನಾಯಿತ ಅಭ್ಯರ್ಥಿಗಳ ಗೆಲುವಿನ ಮತ ಎಣಿಕೆ ನಡೆಯುತ್ತದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ ಇಂದು ಬೆಳಗ್ಗೆ 8 ಗಂಟೆಯಿಂದಲೇ ತಿಪಟೂರಿನಲ್ಲಿ ಸಹ ಮತಗಟ್ಟೆಗಳ ಮುಂದೆ ಮತದಾರರು ಮತ ಹಾಕಲು ಬರುತ್ತಿದ್ದಾರೆ. ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವರದಿ: ಮಂಜು ಗುರಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More