Subscribe to Updates
Get the latest creative news from FooBar about art, design and business.
- ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
- ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
- ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
Author: admin
ಗುಬ್ಬಿ: ಗ್ರಾಹಕ ಪಾವತಿಸಿದ ಹಣವನ್ನು ಬೆಸ್ಕಾಂಗೆ ಪಾವತಿ ಮಾಡದೇ ವಂಚಿರುವ ಘಟನೆ ಗುಬ್ಬಿ ನಗರದ ಬೆಸ್ಕಾಂನಲ್ಲಿ ನಡೆದಿದ್ದು, ಕಿರಿಯ ಸಹಾಯಕರಾದ ಮಲ್ಲೇಶ್ ನಡೆಸಿದ ವಂಚನೆಗೆ ಗುಬ್ಬಿ ಬೆಸ್ಕಾಂ ಎಇಇ ಅನಿಲ್ ಕುಮಾರ್ ದಂಡ ಪಾವತಿಸುವಂತಾಗಿದೆ. ಗ್ರಾಹಕ ರೇಣುಕಾ ಪ್ರಸಾದ್ ಎಂಬವರು ಒಂದು ತಿಂಗಳ ಹಿಂದೆ ತಮ್ಮ ಅಂಗಡಿ ಮತ್ತು ರಾಗಿ ಮಿಲ್ ನ ಒಟ್ಟು 12,360 ರೂಪಾಯಿ ವಿದ್ಯುತ್ ಬಿಲ್ ನ್ನು ಗುಬ್ಬಿ ನಗರದ ಬೆಸ್ಕಾಂ ಕಚೇರಿಗೆ ತೆರಳಿ ಪಾವತಿಸಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಕಿರಿಯ ಸಹಾಯಕರಾದ ಮಲ್ಲೇಶ್, ಗ್ರಾಹಕ ನೀಡಿದ ಹಣವನ್ನು ಪಾವತಿಸದೇ ಪ್ರಿಂಟರ್ ಸಮಸ್ಯೆ ಇದೆ ಎನ್ನುವ ಕಾರಣ ನೀಡಿ ರಶೀದಿ ನೀಡದೇ, ಹಣವೂ ಪಾವತಿಸದೇ ವಂಚಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ತಾವು ವಂಚನೆಗೊಳಗಾಗಿರುವ ವಿಚಾರ ಗ್ರಾಹಕಗೆ ತಿಳಿದು ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು, ಸಿಬ್ಬಂದಿ ಮಲ್ಲೇಶ್ ವಿರುದ್ದ ಬೆಸ್ಕಾಂ ಎಇಇ ಅನಿಲ್ ಕುಮಾರ್ ಗೆ ದೂರು ನೀಡಿದ್ದಾರೆ. ಅನಿಲ್ ಕುಮಾರ್ ಅವರು ಮಲ್ಲೇಶ್ ನ್ನು ವಿಚಾರಣೆ ನಡೆಸಿದಾಗ,…
ತಿಪಟೂರು: ರಾಜ್ಯದೆಲ್ಲೆಡೆ ಸುಗ್ಗಿ ಹಬ್ಬವೆಂದು ಜನಜನಿತವಾಗಿರುವ ‘ಮಕರ ಸಂಕ್ರಾಂತಿ’ ಹಬ್ಬದ ಆಚರಣೆಗೆ ನಾಡಿನ ಜನತೆ ಕೊರೊನಾ ನಡುವೆ ಭೀತಿಯಲ್ಲೂ ಹಬ್ಬಕ್ಕೆ ಸಜ್ಜಾಗಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಗಳಲ್ಲಿ ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ, ಹೂ ಹಣ್ಣು ಸೇರಿದಂತೆ ಹಬ್ಬದ ಖರೀದಿ ಭರಾಟೆ ಜೋರಾಗಿದೆ ವರದಿ: ಮಂಜು ಗುರುಗದಹಳ್ಳಿ ಮಧುಗಿರಿ: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನರು ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಗುಂಪು ಗುಂಪಾಗಿ ಹಬ್ಬದ ಸಂತೆಯಲ್ಲಿ ಸಂಕ್ರಾಂತಿ ಹಬ್ಬದ ವಿಶೇಷವಾದ ಕಬ್ಬು, ಕಡಲೆಕಾಯಿ, ಗೆಣಸು, ಹೂ, ತರಕಾರಿ ಹಣ್ಣುಗಳನ್ನು ಖರೀದಿ ಮಾಡಿದರು. ಮಧುಗಿರಿ ಸಂತೆ ಮೈದಾನ ಮತ್ತು ಡೂಮ್ ಲೈಟ್ ಸರ್ಕಲ್ ಅಕ್ಕ ಪಕ್ಕದ ರಸ್ತೆ ಬೀದಿಗಳಲ್ಲಿ ರೈತರು ಮಾರಾಟ ಮಾಡುವುದುಮತ್ತು ಗ್ರಾಹಕರು ವ್ಯಾಪಾರ ವಹಿವಾಟು ನಡೆಸುವ ಸನ್ನಿವೇಶ ಕಂಡು ಬಂತು. ವರದಿ: ಮಹಾಲಿಂಗಯ್ಯ, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಸರಗೂರು: ಸರಗೂರು ಭಾಗದ ಜನರಿಗೆ ಸರಗೂರು ಬಸ್ ನಿಲ್ದಾಣದಲ್ಲಿಯೇ ಬಸ್ ಪಾಸ್ ನೀಡಬೇಕು ಎಂದು ವಿವಿದ್ದೋದ್ದೇಶ ಹಾಗೂ ಗ್ರಾಮೀಣ ನಗರ ಪುನರ್ವಸತಿ ತಾಲ್ಲೂಕು ಸಂಯೋಜಕರು ಜವರಾಜು ಮನವಿ ಮಾಡಿಕೊಂಡಿದ್ದಾರೆ. ಸರಗೂರು ತಹಶೀಲ್ದಾರ್ ಚಲುವರಾಜು ಅವರಿಗೆ ಮನವಿ ಮಾಡಿರುವ ಅವರು, ಸರಗೂರು ನೂತನ ತಾಲೂಕಾಗಿದ್ದು, ಆದರೆ ಹೆಚ್.ಡಿ.ಕೋಟೆ ಬಸ್ ನಿಲ್ದಾಣದಲ್ಲಿ ಬಸ್ ಪಾಸ್ ನೀಡುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ತಾಲೂಕಿನಲ್ಲಿ ಸುಮಾರು 1,225 ವಿಕಲಚೇತನರಿದ್ದು, ಇವರೆಲ್ಲರೂ ಹೆಚ್.ಡಿ.ಕೋಟೆಗೆ ಹೋಗಿ ಬಸ್ ಪಾಸ್ ಪಡೆದುಕೊಳ್ಳುವುದು ಕಷ್ಟಕರವಾಗಿದೆ ಎಂದು ಜವರಾಜು ತಿಳಿಸಿದರು. ಇನ್ನೂ ಉಪಾಧ್ಯಕ್ಷ ನಾಗರಾಜ್ ಸಾಗರೆ ಮಾತನಾಡಿ, ಸರಗೂರು ತಾಲ್ಲೂಕಿನಲ್ಲಿ ಅನೇಕ ಹಾಡಿ ಹಾಗೂ ಕಾಡಿನಂಚಿನ ಹಳ್ಳಿ ಪ್ರದೇಶಗಳಿದ್ದು. ಈ ಪ್ರದೇಶಗಳಿಂದ ಹೆಚ್.ಡಿ.ಕೋಟೆಗೆ ಬಸ್ ಪಾಸ್ ಗಾಗಿ ತೆರಳುವುದು ಕಷ್ಟಕರವಾಗಿದೆ. ಸರಗೂರು ನೂತನ ತಾಲೂಕಾದರೂ ಹೆಚ್.ಡಿ.ಕೋಟೆಯಲ್ಲಿ ಬಸ್ ಪಾಸ್ ವಿತರಿಸುವುದು ಸರಿಯಲ್ಲ. ಸರಗೂರು ಬಸ್ ನಿಲ್ದಾಣದಲ್ಲಿಯೇ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಬಸವರಾಜು ಕಂದೇಗಾಲ,…
ತಿಪಟೂರು: ಇಂದು ನಗರದ ಕೆರಗೋಡಿ ರಂಗಾಪುರ ಸುಕ್ಷೇತ್ರದಲ್ಲಿ ಇಂದು ವಿಜೃಂಭಣೆಯಿಂದ ನಡೆಯಬೇಕಾಗಿದ್ದ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿಯನ್ನು ಕೋವಿಡ್ ಕಾರಣದಿಂದ ಸರಳವಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಗುರುಪರದೇಶಿ ಮಹಾಸ್ವಾಮೀಜಿಗಳು ಕೆರಗೋಡಿ ರಂಗಾಪುರ, ಸಂಸದ ಜಿ.ಎಸ್.ಬಸವರಾಜ್, ಶಿಕ್ಷಣ ಸಚಿವರು ಬಿ.ಸಿ.ನಾಗೇಶ್, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಟಿ ಶಾಂತಕುಮಾರ್, ಮಾಜಿ ಶಾಸಕ ನಂಜಮರಿ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿ.ಬಿ.ಕ್ರಾಸ್ ಮಾಯಸಂದ್ರ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕಾಮಗಾರಿಯ ಅಂದಾಜು ವೆಚ್ಚ 1.25ಕೋಟಿ ಗಳದ್ದಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆ ಕಿರಿದಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಹಾಗೂ ಚರಂಡಿ ವ್ಯವಸ್ಥೆ ಅನಿವಾರ್ಯವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ರಸ್ತೆಯ ಎರಡೂ ಬದಿಯ ಚರಂಡಿ ಅಗಲೀಕರಣ ಅಗತ್ಯವಾಗಿದೆಎ ಎಂದರು. ಟಿ.ಬಿ.ಕ್ರಾಸ್ ನ ಅಂಗಡಿಯ ಮಾಲೀಕರು ಹಾಗೂ ಸಾರ್ವಜನಿಕರು ಮತ್ತು ಕ್ಷೇತ್ರದ ಮತದಾರ ಪ್ರಭುಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಈ ರಸ್ತೆ ಕಾಮಗಾರಿ ಯಶಸ್ವಿಯಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೊಂಡಜ್ಜಿ ವಿಶ್ವನಾಥ್, ಮುನಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಲಂಜಿಹಳ್ಳಿ, ತುರುವೇಕೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಅಂಜನ್…
ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆ ಅತ್ಯಂತ ಕಳಪೆ ಗುಣಮಟ್ಟ ಹೊಂದಿದ್ದು, ಇದರಿಂದಾಗಿ ಗ್ರಾಮಸ್ಥರು ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸುರೇಶ್ ಎಂಬುವರು ಈ ಸಂಬಂಧ ನಮ್ಮತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ, ಸುಮಾರು ಒಂದು ವರ್ಷದ ಹಿಂದೆ ಕಾಮಗಾರಿ ಆರಂಭ ಮಾಡಲಾಗಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೇ ಇಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದ್ದು, ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ಕೆಲಸ ನಿರ್ವಹಿಸಿ ಹೋಗಿದ್ದಾರೆ . ಹೀಗಾಗಿ ಒಂದು ವರ್ಷವಾದರೂ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು. ಇಂಜಿನಿಯರ್ ನಾಗೇಶ್ ವರಿಗೆ ಕರೆ ಮಾಡಿ ಕೆಲಸ ಬೇಗನೇ ಮುಗಿಸಿ ಕೊಡಿ ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರೂ ಕೂಡ ಇದರ ಕಡೆಗೆ ಗಮನ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದಾಗಿ ಇಲ್ಲಿನ ಗ್ರಾಮದ ಜನರು ನೀರಿಗಾಗಿ ಪರದಾಡುವಂತಾಗಿದೆ. ಕೆಲಸದ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರರು ಕೆಲಸವನ್ನು ಮುಗಿಸದೇ ಇದ್ದರೂ, ಅಧಿಕಾರಿಗಳು…
ದಾವಣಗೆರೆ: ಸಂಕ್ರಾಂತಿಯ ದಿನದಂದೇ ಜವರಾಯ ಅಟ್ಟಹಾಸ ಮೆರೆದಿದ್ದು, ಬೆಳ್ಳಂ ಬೆಳಗ್ಗೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕು ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ ಈ ಘಟನೆ ನಡೆದಿದ್ದು ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಾವನ್ನಪ್ಪಿದವರು ಯಾದಗಿರಿ ಜಿಲ್ಲೆಯ ಶಾಹಾಪುರ ನಿವಾಸಿಗಳು ಎನ್ನಲಾಗಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಸುಕಿನ ಜಾವ ಕಾರು ಚಾಲಕ ನಿದ್ದೆಮಂಪರಿನಲ್ಲಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೊರಟಗೆರೆ: ತಾಲೂಕಿನ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಕೇಂದ್ರ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಯನ್ನು ಹಿರೇಹಳ್ಳಿಯ ಕೆ.ವಿ.ಕೆ ವಿಜ್ಞಾನಿಗಳು ಮತ್ತು ನಮ್ಮ ರೈತರು ಶ್ರಮವಹಿಸಿ ಯಶಸ್ವಿಗೊಳಿಸಿರುವುದು ಒಣ ಬೇಸಾಯ ಪದ್ದತಿಯಲ್ಲಿ ರೈತರ ಜೀವನ ಮಟ್ಟ ಸುಧಾರಿಸುತ್ತದೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ತಾಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ನಿಕ್ರಾ ಯೋಜನೆಗೆ ಎಲೆರಾಂಪುರ ಗ್ರಾಮ ಪಂಚಾಯ್ತಿಗೆ ಕೇಂದ್ರ ಸರ್ಕಾರದ ಉತ್ತಮ್ ಪಂಚಾಯತ್ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಡಿ ನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಯೋಜನೆಯ ಸಮಗ್ರ ಅಭಿವೃದ್ದಿಯನ್ನು ಪರಿಶೀಲಿಸಿ ಮಾತನಾಡಿದರು. 2010 ರಲ್ಲಿ ಪ್ರಾರಂಭವಾದ ಈ ಯೋಜನೆ ಇಲ್ಲಿಯವರೆಗು ಬಹಳ ವ್ಯವಸ್ಥಿತವಾಗಿ ನಡೆದಿದೆ. ಹಿರೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಈ ಯೋಜನೆಯನ್ನು ಉತ್ತಮವಾಗಿ ಸಾಕಾರ ಮಾಡಿದ್ದಾರೆ. ನಮ್ಮ ರೈತರು ಇದನ್ನು ಒಪ್ಪಿಕೊಂಡು ಯಶಸ್ವಿಗೊಳಿಸಿದ್ದಾರೆ. ಈ ಯೋಜನೆ ಮಳೆಯಾದಾರಿತ ಖುಷ್ಕಿ ಬೇಸಾಯದ ರೈತರಿಗೆ ಅತ್ಯುತ್ತಮವಾಗಿ ಉಪಯುಕ್ತವಾಗಿದೆ. ಒಣಪ್ರದೇಶದಲ್ಲಿ ಲಾಭದಾಯಕ ಗೋಡಂಬಿ, ನಲ್ಲಿ,…
ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ ಸಮನ್ವಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಾಲಕಿ ತಾಯಿ ಅಮೃತಾ ನಾಯ್ಡು ಅವರಿಗೆ ಗಂಭೀರ ಗಾಯವಾಗಿದೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ರಾಜ್ಯಾದ್ಯಂತ ಅತಿ ವೇಗವಾಗಿ ಕೊರೊನಾ 3ನೇ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೇರವಾಗಿ ಸಂಪರ್ಕ ಇರುವ ಬೀದಿ ಬದಿ ವ್ಯಾಪಾರಿಗಳು ವರ್ತಕರುಗಳೆಲ್ಲರೂ ಇಂದಿನಿಂದ ಬೂಸ್ಟರ್ ಡೋಸ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂಬುದಾಗಿ ಕ್ಷೇತ್ರದ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ ಮನವಿ ಮಾಡಿದರು. ಹಿರಿಯೂರು ನಗರದ ಗಾಂಧಿ ಸರ್ಕಲ್ ಬಳಿ ಇರುವ ನೆಹರೂ ಮಾರ್ಕೆಟ್ ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಹಮ್ಮಿಕೊಳ್ಳಲಾಗಿದ್ದ ಕೋವಿಡ್ -19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊರೊನಾ ಸೋಂಕಿತರಿಗೆ ಸ್ಥಳದಲ್ಲೇ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ನೀಡುವ ಕೆಲಸವನ್ನು ಇಂದಿನಿಂದಲೇ ಪ್ರಾರಂಭವಾಗುತ್ತದೆ, ಸಾರ್ವಜನಿಕರು ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಕೋವಿಡ್ 3 ನೇ ಅಲೆಯನ್ನು ಹಿರಿಯೂರು ತಾಲ್ಲೂಕಿನಲ್ಲಿ ತಡೆಗಟ್ಟಲು ಸರ್ಕಾರದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಾರ್ವಜನಿಕರು ಸರ್ಕಾರದೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು…