Subscribe to Updates
Get the latest creative news from FooBar about art, design and business.
- 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
- SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
- ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
- ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
- ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
- ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
- ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
- ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
Author: admin
ಸರಗೂರು: ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಗುರುವಾರ ಈ ಘಟನೆ ನಡೆದಿದ್ದು, ಪಟ್ಟಣ ಪಂಚಾಯತಿ ಉಪಾಧ್ಯಕ್ಷ ವಿನಾಯಕ ಪ್ರಸಾದ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಮುಖಂಡ ಹಾಗೂ ಪಟ್ಟಣ ಪಂಚಾಯತಿ ಸದಸ್ಯೆ ಉಮಾ ಪತಿ ರಾಮು ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಪಂಚಾಯತಿ ಮುಖ್ಯ ಅಧಿಕಾರಿ ಸತೀಶ್ ಅವರ ಹತ್ತಿರ ವಾರ್ಡ್ ಸಮಸ್ಯೆ ಬಗ್ಗೆ ರಾಮು ಚರ್ಚೆ ಮಾಡುತ್ತಿದ್ದ ಸಂದರ್ಭದಲ್ಲಿ ಉಪಾಧ್ಯಕ್ಷ ವಿನಾಯಕ ಪ್ರಸಾದ್, ಸದಸ್ಯ ಶಿವಕುಮಾರ್, ಅಧ್ಯಕ್ಷೆ ಪತಿ ಶ್ರೀನಾಥ್ ಎಂಬುವವರು ಏಕಾಏಕಿ ರಾಮು ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯ ಬಳಿಕ ಗಾಯಾಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಗಲಾಟೆ ಮಾಡಿಕೊಂಡ ಎಲ್ಲರೂ ಕೂಡ ಬಿಜೆಪಿ ಪಕ್ಷದವರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೋಲಿಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ವರದಿ: ಚಂದ್ರ ಹಾದನೂರು…
ಚಿತ್ರದುರ್ಗ: ಕಳೆದು ಹೋಗಿದ್ದ 30 ಸಾವಿರ ರೂಪಾಯಿ ಬೆಲೆಯ ಆಂಡ್ರಾಯ್ಡ್ ಮೊಬೈಲ್ ನ್ನು ಪೊಲೀಸರು ಆಟೋ ಚಾಲಕನಿಗೆ ಹಿಂದಿರುಗಿಸಿದ ಘಟನೆ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ನಡೆದಿದೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಪಾಲವ್ವನಹಳ್ಳಿ ಗ್ರಾಮದ ವಾಸಿ ದಶರಥ ಎಂಬವರು ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದು ಕಷ್ಟಪಟ್ಟು ಸಂಪಾದಿಸಿದ 30 ಸಾವಿರ ರೂಪಾಯಿಯಲ್ಲಿ ಅಂಡ್ರಾಯ್ಡ್ ಮೊಬೈಲ್ ಖರೀದಿಸಿದ್ದರು. ಆದರೆ, ಬುಧವಾರ ಚಿತ್ರದುರ್ಗ ದಿಂದ ಹಿರಿಯೂರು ನಗರಕ್ಕೆ ಬರುತ್ತಿದ್ದ ವೇಳೆ ಅವರ ಮೊಬೈಲ್ ಕಳೆದು ಹೋಗಿತ್ತು. ಈ ಸಂಬಂಧ ಅವರು ಹಿರಿಯೂರು ನಗರ ಪೋಲಿಸ್ ಠಾಣೆಗೆ ದೂರು ನೀಡಲು ಆಗಮಿಸಿದ್ದಾರೆ. ಈ ವೇಳೆ ಅವರ ಮೊಬೈಲ್ ಪೊಲೀಸರ ವಶದಲ್ಲಿರುವುದು ತಿಳಿದು ಬಂದಿದೆ. ದಶರಥ ಅವರ ಮೊಬೈಲ್ ಮಹಿಳೆಯೊಬ್ಬರಿಗೆ ಬಿದ್ದು ಸಿಕ್ಕಿತ್ತು. ಅದನ್ನು ಅವರು ಪೊಲೀಸರಿಗೆ ಹಸ್ತಾಂತರಿಸಿದ್ದರು. ಇದರಿಂದಾಗಿ ಮೊಬೈಲ್ ಕಳೆದುಕೊಂಡು ಆತಂಕದಲ್ಲಿದ್ದ ಯುವಕ ನಿಟ್ಟುಸಿರು ಬಿಟ್ಟಿದ್ದು, ದೂರು ದಾಖಲಿಸಲು ಆಗಮಿಸುವ ವೇಳೆಯೇ ತನ್ನ ಮೊಬೈಲ್ ಕೈ ಸೇರಿದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ತಮ್ಮ…
ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ರವರು ನಾಳೆ ವರದಿ ನೀಡಲಿದ್ದು, ವರದಿಯನ್ನಾಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಗಳಲ್ಲಿ ಅಳವಡಿಸಿರುವ ಕೆಲ ಪಾಠಗಳ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ, ಶಿಕ್ಷಣ ಸಚಿವರಿಗೆ ವರದಿ ನೀಡುವಂತೆ ಸೂಚಿಸಿದ್ದೇನೆ. ಎಲ್ಲ ಆಯಾಮಗಳಿಂದಲೂ ಪರಿಶೀಲಿಸಿ ಶಿಕ್ಷಣ ಸಚಿವರು ನಾಳೆ ವರದಿ ನೀಡುವರು ಎಂದರು.ಕೆಲ ಸ್ವಾಮೀಜಿಗಳು, ಶಿಕ್ಷಣ ತಜ್ಞರೂ ಸಹ ತಮಗೆ ಪತ್ರ ಬರೆದಿದ್ದಾರೆ. ಶಿಕ್ಷಣ ಸಚಿವರ ವರದಿ ನಂತರ ಈ ಎಲ್ಲ ಗೊಂದಲಗಳಿಗೂ ತೆರೆ ಎಳೆಯುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.ಕೆಲ ಸಾಹಿತಿಗಳು ತಮ್ಮ ಪಠ್ಯಗಳನ್ನು ಶಾಲಾ ಪಠ್ಯದಿಂದ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಶಿಕ್ಷಣ ಸಚಿವರ ವರದಿ ನಂತರ ಈ ಎಲ್ಲದ್ದಕ್ಕೂ ಒಂದು ತೆರೆ ಬೀಳುತ್ತದೆ. ನಾಳೆಯೇ ಶಿಕ್ಷಣ ಸಚಿವರು ವರದಿ ನೀಡುತ್ತಾರೆ ಎಂದರು. ಹಿಜಾಬ್ ಮತ್ತು ಲವ್ಜಿಹಾದ್ಗಳಿಗೆ ತೆರೆ ಎಳೆಯಲು ಕಾನೂನುಗಳನ್ನು…
ಮಾದಕವಸ್ತು, ಅಫೀಮು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಖದೀಮನೊಬ್ಬನನ್ನು ಬಂಧಿಸಿರುವ ಮಲ್ಲೇಶ್ವರಂ ಪೊಲೀಸರು700 ಗ್ರಾಂ ಅಫೀಮು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಮುದ್ದನ ಪಾಳ್ಯದ ಚರಾಂ ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ವಿನಾಯಕ್ ಜೋಷಿ ಅವರು ತಿಳಿಸಿದ್ದಾರೆ.ರಾಜಸ್ತಾನದಿಂದ ೫ ವರ್ಷಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಆರೋಪಿಯು ಪೀಣ್ಯಾದ ಎಲೆಕ್ಟ್ರಿಕ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಹೆಚ್ಚಿನ ಹಣದಾಸೆಗೆ ರಾಜಸ್ತಾನದಿಂದ ಅಫೀಮನ್ನು ರೈಲಿನಲ್ಲಿ ಕಳ್ಳ ಸಾಗಾಣಿಕೆ ಮಾಡಿಕೊಂಡು ಬಂದು ಯಶವಂತಪುರ, ಮಲ್ಲೇಶ್ವರಂ ಸುತ್ತಮುತ್ತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ.ಮಲ್ಲೇಶ್ವರಂ ೧೮ನೇ ಕ್ರಾಸ್ನ ಆಟದ ಮೈದಾನದ ಬಳಿ ಆರೋಪಿಯು ಅಫೀಮು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯಾಧರಿಸಿ ದಾಳಿ ನಡೆಸಿದ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತವರ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ವೇಳೆ ಆರೋಪಿ ಬಳಿ 200ಗ್ರಾಂ ಅಫೀಮು ದೊರೆತ್ತಿದ್ದು, ಹೆಚ್ಚಿನ ವಿಚಾರಣೆಯಲ್ಲಿ ಆತ ಮುದ್ದನಪಾಳ್ಯದ ಮನೆಯಲ್ಲಿ500 ಗ್ರಾಂ ಅಫೀಮು ಬಚ್ಚಿಟ್ಟಿರುವ ಮಾಹಿತಿ ನೀಡಿದ್ದು, ಅದನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು. ವರದಿ…
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರನ್ನು ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಅಷ್ಟಕ್ಕೂ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಇಂದಿಲ್ಲಿ ಪ್ರಶ್ನಿಸಿದರು.ನಗರದಲ್ಲಿ ಜಿ.ಪಂ. ಕೆಡಿಪಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಪಾರು ಮಾಡಬೇಕೆಂದರೆ ಅದಕ್ಕೆ ಆದಂತಹ ನಿಯಮಾವಳಿಗಳಿವೆ. ಈ ರೀತಿ ಮಾತನಾಡುವವರಿಗೆ ಆ ನಿಯಮಾವಳಿಗಳ ಬಗ್ಗೆ ಗೊತ್ತಿಲ್ಲ ಎಂದರು.ರೋಹಿತ್ ಚಕ್ರತೀರ್ಥ ಗಡಿಪಾರು ಆಗುವಂತಹ ಅಪರಾಧ ಏನು ಮಾಡಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳುತ್ತಾರೆ ಎಂದು ಅದನ್ನೆಲ್ಲ ನಾವು ಕೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.ಬಸವಣ್ಣನ ಪಠ್ಯ ತಿರುಚಲಾಗಿದೆ ಎಂದು ಸ್ವಾಮೀಜಿಯವರು ಸಿಟ್ಟಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಶಿಕ್ಷಣ ಸಚಿವರು ಆ ಬಗ್ಗೆ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು. ಈ ಘಟನೆ 2017ಲ್ಲಿ ಆಗಿರುವಂತಹದ್ದು. ಈಗಾಗಲೇ ಆ ಬಗ್ಗೆ ಕಾಂಗ್ರೆಸ್ ಸರ್ಕಾರದ…
ಸುಮಾರು 38 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್ಗಳ ಮರುವಿಂಗಡಣೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2011ಸಾಲಿನ ಜನಗಣತಿ ಪ್ರಕಾರ 243ವಾರ್ಡ್ ನಿಗದಿ ಮಾಡಲಾಗಿದ್ದು, ಪ್ರತಿ ವಾರ್ಡ್ ನಲ್ಲಿ ೩೮ ಸಾವಿರ ಆಸುಪಾಸಿನಲ್ಲಿ ಜನಸಂಖ್ಯೆ ಇರಲಿದೆ ಎಂದು ಹೇಳಿದರು. ಕರಡು ಪ್ರತಿಯನ್ನು ಪ್ರಕಟಿಸಿ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದರು. ನಗರದಲ್ಲಿ ಮಳೆ ಕುರಿತು ಪ್ರತಿಕ್ರಿಯಿಸಿದ ಅವರು, ಮೇ ತಿಂಗಳಿನಲ್ಲಿ ಒಂದು ವಾರ ಸತತ ಮಳೆ ಸುರಿದಿದೆ. ನಾಲ್ಕೈದು ದಿನದಿಂದ ಭರದಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಾಗುತ್ತಿದೆ. ಇದೇ ತಿಂಗಳ ೬ನೇ ನೇ ತಾರೀಖಿನ ಒಳಗೆ ರಸ್ತೆ ಗುಂಡಿ ಮುಕ್ತ ಮಾಡಲಾಗುವುದು ಎಂದು ಹೇಳಿದರು. ನಗರದಲ್ಲಿರುವ ಗುಂಡಿಗಳ ಸರಾಸರಿ ಅಳತೆ ಎರಡು ಅಡಿ ವಿಸ್ತೀರ್ಣವಿದೆ ಎಂದ ಅವರು, ಪ್ರತಿ ವಾರ್ಡ್ ಗೆ ೩೦ ಲಕ್ಷ ರಸ್ತೆ ಗುಂಡಿ ಮುಚ್ಚಲು ಮೀಸಲಿಡಲಾಗಿದೆ.ಹೀಗಾಗಿ, ಶೀಘ್ರದಲ್ಲೇ ರಸ್ತೆ ಗುಂಡಿ…
ಆದಾಯ ತೆರಿಗೆ ವಂಚಕರಿಗೆ ಐಟಿ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ೫೦ಕ್ಕೂ ಹೆಚ್ಚು ಕಡೆಗಳಲ್ಲಿ ಹಠಾತ್ ಲಗ್ಗೆ ಹಾಕಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಾಲಾಡಿದ್ದಾರೆ. ಬೆಂಗಳೂರು ಸೇರಿದಂತೆ, ರಾಜ್ಯಾದ್ಯಂತ ೫೦ಕ್ಕೂ ಕಡೆಗಳಲ್ಲಿ ಇಂದು ಮುಂಜಾನೆಯಿಂದಲೇ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆಯ 600 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆಗಳಲ್ಲಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಆಸ್ತಿ ಪಾಸ್ತಿಗಳು ಮನೆಯಲ್ಲಿನ ಐಷಾರಾಮಿ ವಸ್ತುಗಳು ಚಿನ್ನ ಬೆಳ್ಳಿ ಆಭರಣಗಳ ಮಾಹಿತಿ ಕಲೆಹಾಕಿದ್ದಾರೆ. ಹಲವು ದಿನಗಳ ಪೂರ್ವ ಸಿದ್ದತೆಯೊಂದಿಗೆ ಸರ್ಚ್ ವಾರೆಂಟ್ ತಂದು ಉದ್ಯಮಿಗಳು,ಬಿಲ್ಡರ್ ಗಳು, ಆದಾಯ ತೆರಿಗೆ ವಂಚನೆಯ ಇತರರ ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದ್ದು,…
ದೇಶದಾದ್ಯಂತ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಳಿಕೆಯಾಗಿದೆ. ೧೯ ಕೆಜಿ ವಾಣಿಜ್ಯ ಎಲ್ಪಿಜಿ ಪ್ರತಿ ಸಿಲಿಂಡರ್ಗೆ ೧೩೫ ರೂ.ಗಳಷ್ಟು ಕಡಿಮೆಯಾಗಿದೆ.ಹಣದುಬ್ಬರಕ್ಕೆ ಕಡಿವಾಣ ಹಾಕಲು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ದರ ಕಡಿತಗೊಳಿಸಲಾಗಿದೆ. ಹೊಸ ದರ ಇಂದಿನಿಂದ ದೇಶಾದ್ಯಂತ ಅನ್ವಯವಾಗಲಿದೆ. ಆದರೆ ಗೃಹಬಳಕೆಯೆ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚೆಗೆ ಪೆಟ್ರೋಲ್, ಡಿಸೇಲ್ದರ ಇಳಿಕೆಯಾದ ಬೆನ್ನಲೇ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಳಿಕೆಯಾಗಿರುವುದು ಹೊಟೇಲ್ ಉದ್ದಿಮೆದಾರರಿಗೆ ತುಸು ನೆಮ್ಮದಿ ತಂದಿದೆ. ಗ್ರಾಹಕರು ತುಸು ನಿರಾಳರಾಗಿದ್ದಾರೆ.ಈ ಹಿಂದೆ ನಿಗದಿ ಮಾಡಿರುವ ಬೆಲೆಗೆ ಗೃಹಬಳಕೆ ಸಿಲಿಂಡರ್ದೊರೆಯಲಿದೆ. ಅದರಂತೆ ಬೆಂಗಳೂರಿನಲ್ಲಿ ಗೃಹಬಳಕೆಯ ೧೪.೨ ಕೆ.ಜಿ. ತೂಕದ ಸಿಲಿಂಡರ್ ದರ ೧,೦೦೬ ರಷ್ಟಿದೆ. ಕಳೆದ ತಿಂಗಳು ಮೇ ೧ರಂದು ೧೯ ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ೧೦೨.೫೦ ರೂ ಏರಿಕೆಯಾಗಿತ್ತು. ಇದಕ್ಕೂ ಮುನ್ನ ಏಪ್ರಿಲ್ ೧ ರಂದು ಎಲ್ಪಿಜಿ ಸಿಲಿಂಡರ್ಗೆ ೨೫೦ ರೂ. ಮಾರ್ಚ್೧ ರಂದು ೧೦೫ ರೂ.ಗಳಷ್ಟು ಹೆಚ್ಚಿಸಲಾಗಿತ್ತು.ಕಳೆದ ತಿಂಗಳಷ್ಟೇ, ಏರುತ್ತಿರುವ ಹಣದುಬ್ಬರದ ಮಧ್ಯೆ ಪೆಟ್ರೋಲ್…
ಗುಬ್ಬಿ: ನಿಟ್ಟೂರು ಗ್ರಾಮದಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ, ರಾಷ್ಟ್ರೀಯ ಹೆದ್ದಾರಿ 206ರ ನಿಟ್ಟೂರು ಗ್ರಾಮದಲ್ಲಿ ರೈತರು, ದಲಿತ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸ್ಥಳೀಯ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಳೆದ ನಾಲ್ಕು ತಿಂಗಳ ಹಿಂದೆ ಕೆಳ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಆದರೆ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ. ನಿಟ್ಟೂರು ಬಸ್ ನಿಲ್ದಾಣದಲ್ಲಿ ಮೇಲ್ಸೆತುವೆ ನಿರ್ಮಾಣದಿಂದ ಸಾರ್ವಜನಿಕ ರಿಗೆ ಬಹಳ ತೊಂದರೆಯಾಗಿಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಶಾಸಕ, ಸಂಸದರ ಮಾತಿಗೂ ಬೆಲೆಕೊಡುತ್ತಿಲ್ಲ ಎಂದು ಪ್ರತಿಭಟನಾಕಾರರು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಸೇರಿದ ಜನರು, ಈ ಸ್ಥಳದಲ್ಲಿ ಅಂಡರ್ ಪಾಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಈಗ ಆರಂಭವಾಗಿರುವ ಕಾಮಕಾರಿಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾಯಿಸಿದ್ದು, ಮೇಲ್ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದ್ದು, ಸಾರ್ವಜನಿಕರು ನಗರಕ್ಕೆ ಆಗಮಿಸಬೇಕಾದರೆ 2 ಕಿ.ಮೀ. ಹೆಚ್ಚುವರಿ ಪ್ರಯಾಣ ಮಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ…
ತಿಪಟೂರು: ಆರ್ ಎಸ್ ಎಸ್ ತತ್ವ ಸಿದ್ಧಾಂತವನ್ನು ತುಂಬಿ ವಿದ್ಯಾರ್ಥಿಗಳ ಮನಸ್ಸನ್ನು ಕಲುಶಿತಗೊಳಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಈ ಕೂಡಲೇ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ರನ್ನು ವಜಾ ಮಾಡಬೇಕು ಎಂದು ಸಾಹಿತಿ ಗಂಗಾಧರಯ್ಯ ಒತ್ತಾಯಿಸಿದರು. ನಗರದಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನ ನಡೆದಿದೆ. ಸರ್ಕಾರ ಮನಬಂದಂತೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ ಎಂಧು ಅವರು ಆಕ್ರೋಶ ವ್ಯಕ್ತಪಡಿಸಿದರು. ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಬೇಕು. ಇಲ್ಲವೇ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆ ನೀಡಬೇಕು ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದ್ದರೂ ಶಿಕ್ಷಣ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎಂದು ಹೇಳಿದರು. ಶಿಕ್ಷಣ ಸಚಿವರೇ ನಿಮಗೆ ಧೈರ್ಯವಿದ್ದರೆ ಬಸವಣ್ಣ, ಅಂಬೇಡ್ಕರ್, ಕುವೆಂಪು ನನಗೆ ಇಷ್ಟ ಇಲ್ಲ ಎಂದು ಹೇಳಿ, ಚುನಾವಣೆ ಎದುರಿಸಿ ಗೆದ್ದು ಬನ್ನಿ. ಚುನಾವಣಾ ಸಮಯದಲ್ಲಿ ಅವರೆಲ್ಲ ಬೇಕು. ಆದರೆ ಪಠ್ಯಪುಸ್ತಕದಲ್ಲಿ ಏಕೆ ಬೇಡ ಎಂದು ಅವರು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹೊನ್ನವಳ್ಳಿ ಕೆ.ಎಸ್.…