Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಪಾವಗಡ: ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿರುವ ದವಡಬೆಟ್ಟ ಗ್ರಾಮದ ತಾಂಡಾದಲ್ಲಿ ಶ್ರೀಮತಿ ಸಾಯಿ ಸುಮನ್ ಹನುಮಂತರಾಯಪ್ಪ ಅಭಿಮಾನಿಗಳ ಬಳಗದ ವತಿಯಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಪಂದ್ಯಾವಳಿಗೆ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಾಯಿ ಸುಮನ್ ಸಮಾಜ ಸೇವೆಯ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ, ಅವರು ಅನೇಕ ಜನಪ್ರಿಯ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಸಾಯಿ ಸುಮನ್ ಹನುಮಂತರಾಯಪ್ಪ ಮಾತನಾಡಿ, ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಸರ್ಕಾರದ ವತಿಯಿಂದ ಸಹಾಯ-ಸಹಕಾರ ನೀಡುವ ಬಗ್ಗೆ ತಾಲೂಕು ಮಟ್ಟದಲ್ಲಿ ಕ್ರೀಡಾ ತರಬೇತಿ ಕೇಂದ್ರವನ್ನು ಸರ್ಕಾರ ಮಾಡಿಕೊಡಬೇಕೆಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಈ ಗ್ರಾಮದ ಮುಖಂಡರುಗಳಾದ ಹನುಮಂತರಾಯಪ್ಪ, ಈರಣ್ಣ, ನಾಗರಾಜಪ್ಪ, ಕೃಷ್ಣಪ್ಪ ನಾಯಕ್, ರಾಜಕುಮಾರ್, ಜಗನ್ನಾಥ್, ಮಾರಪ್ಪ, ಹೆಂಜಾರಪ್ಪ ಮತ್ತಿತರು ಭಾಗವಹಿಸಿದ್ದರು. ವರದಿ: ನಂದೀಶ್, ಕೊತ್ತೂರ್ ನಿಡಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ತುಮಕೂರು: ಹಿಂದೂ ಮುಸ್ಲಿಂರ ನಡುವಿನ ಬಾಂಧವ್ಯ ಸೋದರತೆ, ಭಾವೈಕ್ಯತೆ ಸಾರುವ ಪರಂಪರೆಯನ್ನು ಇಂದು ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಶಾಂತಿ ಕದಡುವಂತಾಗುತ್ತಿದೆ, ಬದಲಿಗೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಬಿ.ಕಲ್ಕೆರೆ ಅಲ್ಲಮ ಪ್ರಭು ಪೀಠಾಧ್ಯಕ್ಷರಾದ ತಿಪ್ಪೇರುದ್ರ ಸ್ವಾಮೀಜಿ ಅಭಿವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ನಡೆದ ಹಿಜಾಬ್ ಹಾಗೂ ಕೇಸರಿ ಶಾಲು, ಶಾಲಾ ಕಾಲೇಜು ತೆರೆಯುವ ಕುರಿತಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದೆಲ್ಲೆಡೆ ಉದ್ವಿಗ್ನ ವಾತಾವರಣ ತಾರಕಕ್ಕೇರಿರುತ್ತಿದೆ. ಪರಿಣಾಮ ಹಿಂದೂ ಮುಸ್ಲಿಂ ನಡುವೆ ಸೋದರ ಸಮಾನತೆ ಭಾವನೆಗೆ ಧಕ್ಕೆಯುಂಟಾಗುತ್ತಿದೆ. ಅಲ್ಲದೆ ಬಂಗಾರದಂತಹ ಭವಿಷ್ಯ ಕಟ್ಟಿಕೊಳ್ಳುವ ಮಕ್ಕಳ ಬದುಕಲ್ಲಿ ಹಿಜಾಬ್ , ಸಮವಸ್ತ್ರದ ಕಿಡಿ ಬರೆ ಎಳೆದಂತಾಗುತ್ತಿದೆ. ವಿಚಾರದಲ್ಲಿ ಈ ಸ್ವಾರ್ಥ ರಾಜಕೀಯ ನಾಯಕರ ಹಸ್ತಕ್ಷೇಪವಿದೆ ಎಂದು ಆರೋಪಿಸಿದರು. ಈಗಾಗಲೇ ಕೊರೊನಾ ಎಂಬ ಮಹಾಮಾರಿ ಅಟ್ಟಹಾಸದಿಂದ ನಲುಗಿದ್ದ ಮಕ್ಕಳು ಶಾಲೆ ಕಾಲೇಜುಗಳಿಂದ ದೂರ ಉಳಿಯಬೇಕಾಯಿತು. ಪೋಷಕರು ಪ್ರತಿದಿನ ಗೊಂದಲಕ್ಕೀಡಾಗುವ ಆತಂಕದ…
ಹುಬ್ಬಳ್ಳಿ- ಧಾರವಾಡ : ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅವಮಾನ ಎಸಗಿದ ರಾಯಚೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಲ್ಲಿಕಾರ್ಜುನ ಗೌಡ ವಿರುದ್ಧ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಭಾರತೀಯ ದಲಿತ ಸಂಘರ್ಷ ಸಮಿತಿ ಧಾರವಾಡ ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿತು. ಹುಬ್ಬಳ್ಳಿ- ಧಾರವಾಡ ಮಹಾನಗರದ ಸಮಾಜ ಸೇವಾ ರತ್ನ ಡಾ.ಹೆಚ್ ಪ್ರಕಾಶ ಬೀರಾವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಫೋಟೋವನ್ನು ತೆರವುಗೊಳಿಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಉದ್ಧಟತನ ತೋರಿದ್ದಾರೆ. ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಹು.ದಾ.ಮ.ನ. ಅಧ್ಯಕ್ಷರಾದ ಲಕ್ಷ್ಮಣಕುಡ್ಲೂರು, ರಾಜ್ಯ ಹಿರಿಯ ಉಪಾಧ್ಯಕ್ಷರಾದ ಕಲ್ಮೇಶ ಹಾದಿಮುನಿ, ಬೆಳಗಾವಿ ವಿಭಾಗಿ ಅಧ್ಯಕ್ಷರಾದ ಶಂಕರಪ್ಪ ಎಲಿಮೇತ್ರಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಶಿವಾನಂದ ಹಲಮನಿ ಇತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ ( ಹುಬ್ಬಳ್ಳಿ- ಧಾರವಾಡ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಮಾಯಸಂದ್ರ : ಐದು ವರ್ಷಕ್ಕೊಮ್ಮೆ ನಡೆಯುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಆಯ್ಕೆಯಲ್ಲಿ ಒಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಿ ಐದು ವರ್ಷ ಅಧಿಕಾರದಲ್ಲಿರುವುದು ವಾಡಿಕೆ. ಆದರೆ ಕನ್ನಡ ಸಾಹಿತ್ಯ ಪರಿಷತ್ತು ಮಾಯಸಂದ್ರ ಹೋಬಳಿ ಘಟಕಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಐದು ವರ್ಷಕ್ಕೆ ಐದು ಅಧ್ಯಕ್ಷರನ್ನು ಸದಸ್ಯರು ಆಯ್ಕೆ ಮಾಡುವ ಮೂಲಕ ಹೊಸದೊಂದು ಪ್ರಯೋಗ ಮತ್ತು ಇತಿಹಾಸಕ್ಕೆ ಕ.ಸಾ.ಪ ಸಾಕ್ಷಿಯಾಯಿತು. ಮಾಯಸಂದ್ರದ ಕನ್ನಡ ಭವನದಲ್ಲಿ ಇಂದು ನಡೆದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ತಾಲ್ಲೂಕಿನ ಕ.ಸಾ.ಪ. ಪ್ರಮುಖರು ಮತ್ತು ಸದಸ್ಯರ ಸಮ್ಮುಖದಲ್ಲಿ ಮಾತನಾಡಿದ ಕ.ಸಾ.ಪ ನಿಕಟಪೂರ್ವ ಅಧ್ಯಕ್ಷರಾದ ಎನ್.ಆರ್.ಜಯರಾಮ್, ” ಕನ್ನಡ ತಾಯಿಯ ಸೇವೆ ಮಾಡಲು ಅನೇಕರು ಬಹಳ ಉತ್ಸುಕರಾಗಿದ್ದು, ಎಲ್ಲರಿಗೂ ಅವಕಾಶ ಸಿಗಬೇಕೆಂದರೆ ವರ್ಷಕ್ಕೊಮ್ಮೆಯಂತೆ ಅಧ್ಯಕ್ಷರು ಆಯ್ಕೆಯಾಗಿ ಕನ್ನಡ ಸೇವೆ ಮಾಡಬೇಕೆಂಬುದೇ ನನ್ನ ಅಭಿಪ್ರಾಯ ” ಎಂದರು. ಎನ್.ಆರ್.ಜಯರಾಮ್’ರವರ ಅಭಿಪ್ರಾಯಕ್ಕೆ ಸರ್ವಸದಸ್ಯರಿಂದ ವ್ಯಾಪಕ ಬೆಂಬಲ ವ್ಯಕ್ತವಾದ ಕಾರಣ, ತಕ್ಷಣ ಇದೇ ನಿರ್ಧಾರವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಇದರಂತೆ ವರ್ಷಕ್ಕೊಮ್ಮೆಯಂತೆ ಐದು ವರ್ಷಗಳಿಗೆ ಆಯ್ಕೆಯಾದ…
ತುಮಕೂರು: ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ವಿವಾದದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಕಿಡಿಗೇಡಿಗಳಿಗೆ ಎಚ್ಚರಿಸುವ ಸಲುವಾಗಿ ಇಂದು ತುಮಕೂರು ನಗರದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಕೆಎಸ್ ಆರ್ ಪಿ ತುಕಡಿಗಳು ಪಥಸಂಚಲನ ನಡೆಸಿದ್ದು, ತುಮಕೂರು ನಗರದ ಗುಬ್ಬಿ ಗೇಟ್ ನಿಂದ, ಸಂತೆಪೇಟೆ, ಬಿ.ಜೆ. ಪಾಳ್ಯ ವೃತ್ತ, ಎಸ್.ಎಸ್ ಟೆಂಪಲ್ ರೋಡ್, ಚಾಂದಿನಿ ರಸ್ತೆ, ವೀರಸಾಗರ, ದಾನ ಪ್ಯಾಲೇಸ್, ಸದಾಶಿವನಗರ ಬನಶಂಕರಿ ಮುಖ್ಯರಸ್ತೆ, ಶಾಂತಿನಗರ ವಿಶ್ವಣ್ಣ ಲೇಔಟ್, ಮರಳೂರು ದಿಣ್ಣೆ ರಸ್ತೆಗಳಲ್ಲಿ ಪೊಲೀಸ್ ಪಥಸಂಚಲನ ನಡೆಯಿತು. ಈಗಾಗಲೇ ಹಿಜಾಬ್ ಮತ್ತು ಕೇಸರಿ ಶಾಲಿನ ಪ್ರಕರಣ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ ಹಾಗೂ ನ್ಯಾಯಾಲಯ ನೀಡುವ ಆದೇಶ ಸೂಚನೆಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ ಧರಣಿ ಮುಂತಾದವುಗಳನ್ನು ಮಾಡಬಾರದು ಹಾಗೂ ಸುಳ್ಳು ಸಂದೇಶ ಮತ್ತು ವದಂತಿಗಳಿಗೆ ಕಿವಿ ಕೊಡಬಾರದು ಹಾಗೂ ಸಾಮಾಜಿಕ…
ತುಮಕೂರು: ಜಿಲ್ಲೆಯ ಜನತೆ ಶಾಂತಿಪ್ರಿಯರು, ಇಲ್ಲಿನ ಎಲ್ಲಾ ಸಮುದಾಯ, ಎಲ್ಲಾ ವರ್ಗ, ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲರೂ ಸಹ ಶಾಂತಿಪ್ರಿಯರು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ಹೇಳಿದರು. ಶಾಲಾ ಕಾಲೇಜುಗಳಲ್ಲಿ ಸೃಷ್ಟಿಸಲಾಗಿರುವ ಹಿಜಬ್ ಹಾಗೂ ಕೇಸರಿ ಶಾಲು ವಿವಾದ ಸಂಬಂಧ ಪ್ರತಿಕ್ರಿಯಿಸಿದ ಅವರು, ತುಮಕೂರು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಜಿಲ್ಲಾಡಳಿತ , ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರದಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು. ಧಾರ್ಮಿಕ ಭಾವನೆಗಳ ಸಂಕೇತವಾಗಿರುವ ಯಾವುದೇ ವಸ್ತ್ರಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ತೆರಳದಂತೆ ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸರ್ಕಾರದ ಆದೇಶದ ಅನ್ವಯ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು , ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಆದೇಶದ ಅನ್ವಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತುಮಕೂರು ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಯ…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮದಲ್ಲಿ ಗ್ರಾಮೀಣ ಭಾಗದ ಕುಡಿಯುವ ನೀರಿನ ಯೋಜನೆಗೆ ಕಲ್ಪಿಸಿದ ಹೇಮಾವತಿ ಬಹು ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಹೊಡೆದು ಭಾರಿ ಪ್ರಮಾಣದ ನೀರು ಪೋಲಾಗಿದೆ ಪೈಪ್ ಒಡೆದು ಕಾರಂಜಿಯಂತೆ ಹರಿಯುತ್ತಿದ್ದ ನೀರನ್ನು ನೋಡಲು ಸಾರ್ವಜನಿಕರು ನೆರೆದಿದ್ದು, ನೀರು ಪೋಲಾಗುತ್ತಿರುವುದನ್ನು ಕಂಡು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಣುವಿನಕುರಿಕೆಯಿಂದ ತೋವಿನಕೆರೆ ಭಾಗದ ಗ್ರಾಮೀಣ ಪ್ರದೇಶಗಳಿಗೆ ಸರಬರಾಜು ಆಗುವ ಬಹು ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಇದಾಗಿದ್ದು, ಪೈಪ್ ಒಡೆದ ಪರಿಣಾಮ ತೋವಿನಕೆರೆಯ ಕೈಮರ ರಸ್ತೆಯಲ್ಲಿ ನೀರು ಚಿಮ್ಮಿದ್ದು, ಕಾರಂಜಿಯಂತೆ ನೀರು ಚಿಮ್ಮಿದೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಸರಗೂರು: ಶಾಸಕ ಅನೀಲ್ ಚಿಕ್ಕಮಾದು ಅವರ 33ನೇ ವರ್ಷದ ಹುಟ್ಟು ಹಬ್ಬವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಆಚರಣೆ ಮಾಡಿದರು. ಪಟ್ಟಣದ ಮಹಾವೀರ ಸರ್ಕಲ್ ಬಳಿ ಶಾಸಕ ಅನಿಲ್ ಚಿಕ್ಕಮಾದು ರವರಿಗೆ ಸರಗೂರು ಕಾಂಗ್ರೆಸ್ ಪಕ್ಷದ ಮತ್ತು ಯೂತ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮದ ಮುಖಂಡರು ಸೇರಿ ಪಟಾಕಿ ಸಿಡಿಸಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಹುಟ್ಟು ಹಬ್ಬದ ಪ್ರಯುಕ್ತ ಶಾಸಕ ಅನಿಲ್ ಚಿಕ್ಕಮಾದು ತಾಲ್ಲೂಕಿನ ನಾಡದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ಆರ್ಶೀವಾದ ಪಡೆದು, ನಂತರ ಸಾರ್ವಜನಿಕ ಆಸ್ಪತ್ರೆ ಗೆ ಹೊರರೋಗಿಗಳಿಗೆ ಹಣ್ಣುಗಳನ್ನು ಹಂಚಿದರು. ಬಳಿಕ ಪಟ್ಟಣದ ಮಹಾವೀರ ಸರ್ಕಲ್ ಬಳಿ ಇರುವ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕಾರ್ಯಕರ್ತರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಅನಿಲ್ ಚಿಕ್ಕಮಾದು ,ಕಾರ್ಯಕರ್ತರು ಜೊತೆ ಗೂಡಿ ಕೇಕ್ ಯನ್ನು ಕತ್ತರಿಸಿ ಕಾರ್ಯಕರ್ತರ ಜೊತೆಗೆ ಖುಷಿ ಹಂಚಿಕೊಂಡರು. ಬಳಿಕ ಮಾತನಾಡಿದ ಅವರು, ತಾಲ್ಲೂಕಿನ ಜನತೆ…
ಕೊರಟಗೆರೆ : ತಾಲ್ಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ಭವನವನ್ನು ನಿರ್ಮಿಸಲು ಜಾಗ ಮಂಜೂರು ಮಾಡಲು ತಹಶೀಲ್ದಾರ್ ನಹೀದ ಜಮ್ ಜಮ್ ರವರಿಗೆ ಮನವಿ ಸಲ್ಲಿಸಲಾಯಿತು. ಕನ್ನಡಪರ ಸಂಘಟನೆಗಳಾದ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ಸುವರ್ಣ ವೇದಿಕೆ ಮತ್ತು ಹಲವು ಕನ್ನಡ ಪರ, ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಕೆ.ಎನ್.ನಟರಾಜ್, ಕರ್ನಾಟಕ ರಣಧೀರರ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ.ಎಂ.ಎನ್, ಕರುನಾಡ ಸುವರ್ಣ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಹರೀಶ್ ಬಾಬು, ಕನ್ನಡ ಪರ ಹೋರಾಟಗಾರರಾದ ದಿನೇಶ್, ವಿನಯ್ ದಾಸರಹಳ್ಳಿ, ಮಾರುತಿ, ಸುರೇಶ್ ದೊಡ್ಡಯ್ಯ ಹಾಗೂ ಪ್ರಗತಿಪರ ಹೋರಾಟಗಾರರು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಮಧುಗಿರಿ: ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಐಸಿಯು ಸೌಲಭ್ಯವುಳ್ಳ ಆಂಬುಲೆನ್ಸ್ ನ್ನು ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೊಡುಗೆಯಾಗಿ ನೀಡಿ್ದರು. ಈ ನೂತನ ಆ್ಯಂಬುಲೆನ್ಸ್ ಗೆ ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಶಾಸಕರಾದ ವೈ.ಎ.ನಾರಾಯಣ ಸ್ವಾಮಿ ಹಾಗೂ ಅನೇಕ ಕಾರ್ಯಕರ್ತರೊಂದಿಗೆ ಚಿದಾನಂದ್ ಎಂ. ಗೌಡ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಚಿದಾನಂದ್ ಎಂ.ಗೌಡ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿನ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರಗಳು ಕೋವಿಡ್ 1,2,3ನೇ ಅಲೆಯನ್ನು ದೇಶಾದ್ಯಂತ ಸಮರ್ಥವಾಗಿ ನಿರ್ವಹಿಸಿದೆ. ಬಿಜೆಪಿ ಸರ್ಕಾರ ಜನರ ಜೀವ ರಕ್ಷಣೆಗೆ, ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವುದರ ಮೂಲಕ ಆಸ್ಪತ್ರೆಗಳಲ್ಲಿ ಆಮೂಲಾಗ್ರ ಬದಲಾವಣೆ ತಂದು ವೈದ್ಯ ಕೊರತೆ, ಆಕ್ಸಿಜನ್ ಕೊರತೆ ನೀಗಿಸಲಾಗಿದೆ. ಸರ್ಕಾರದ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಅವಲಂಬನೆ ಹೆಚ್ಚಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ಸ್ವದೇಶಿ…