Author: admin

ಸರಗೂರು: ತಾಲ್ಲೂಕಿನ ಯಶವಂತಪುರ ಗ್ರಾಮದಲ್ಲಿ ಇಂದು ಸಣ್ಣ ಏತ ನೀರಾವರಿ ಇಲಾಖೆ ವತಿಯಿಂದ ಗ್ರಾಮದ ಗೂಡುಕಟ್ಟೆ, ಬಾಲನಕಟ್ಟೆ ಕೆರೆಗಳ ಸಂಪೂರ್ಣ ಅಭಿವೃದ್ಧಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ  ಶಿವಲಿಂಗಯ್ಯ ಯಶವಂತಪುರ, ಸಾಕಷ್ಟು ವರ್ಷಗಳಿಂದ ಪಾಳು ಬಿದ್ದಿದ್ದ ಕೆರೆಗಳಿಗೆ ಜೀವ ತುಂಬಿದಂತಾಗಿದೆ. ತಾಲ್ಲೂಕು ಕಂದಾಯ ಇಲಾಖೆ ವತಿಯಿಂದ ಬಾಲನಕಟ್ಟೆಯನ್ನು ಅಳತೆ ಮಾಡಿಸಬೇಕಿದೆ.  ಈ ಪ್ರಯತ್ನ ಸಹ ಸನಿಹದಲ್ಲಿದ್ದು, ತಹಸೀಲ್ದಾರರ ಗಮನ ಸೆಳೆಯಲಾಗಿದೆ.  ಶೀಘ್ರವಾಗಿ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಿದ್ದಾರೆ ಎಂಬ ಭರವಸೆಯಿದೆ ಎಂದರು. ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸಲು ಕೆರೆಯ ಸುತ್ತಮುತ್ತಲ ಜಮೀನಿನ ರೈತರು ಮತ್ತು ಸಾರ್ವಜನಿಕರು ಸಹಕರಿಸಬೇಕು ಕೆರೆಗಳ ಅಭಿವೃದ್ದಿ ಬಗ್ಗೆ ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದುರವರು ಕಳೆದ ಮೂರು ವರ್ಷಗಳ ನಮ್ಮ ಸತತ ಪ್ರಯತ್ನಕ್ಕೆ ಸಂಪೂರ್ಣವಾದ ಸಹಕಾರ ನೀಡಿ ಯೋಜನೆ ಅನುಷ್ಠಾನಗೊಳ್ಳಲು ಸಹಕರಿಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. ಶಾಸಕರ ಸಹಕಾರದಿಂದ ಇಂದು ಕೆರೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಈ…

Read More

ತಿಪಟೂರು : ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ ಗುರುವಾರ ಆದಿಚುಂಚನಗಿರಿಯ  ಬಾಲಗಂಗಾಧರನಾಥ ಸ್ವಾಮೀಜಿಯವರು 9ನೇ ಪುಣ್ಯಾರಾಧನಾ ಸಮಾರಂಭ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಳಕಳಿ ಕಾರಣದಿಂದಲೇ ಜಗತ್ತಿನಾದ್ಯಂತ ಚಿರಸ್ಮರಣಿಯಾರಾದ್ದು ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ. ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು ಜಾರಿಗೆ ತಂದು ಯಶಸ್ವಿಯಾಗಿ ಇತರರಿಗೆ ಪ್ರೇರಣೆಯಾದರು. ಆದ್ದರಿಂದ…

Read More

ತಿಪಟೂರು:  ತಾಲ್ಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ  ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ತೀರ್ಥವತಿ ಹಿಂದಿನ ಒಡಂಬಡಿಕೆಯ ಪ್ರಕಾರ ಅವಿರೋಧ ಆಯ್ಕೆಯಾಗಿದ್ದಾರೆ. ಗ್ರಾ.ಪಂ. ಅಧ್ಯಕ್ಷ ಎ.ಎಸ್.ಚಿನ್ನಸ್ವಾಮಿ, ಮಾಜಿ ಅಧ್ಯಕ್ಷ ಮಾಧುಸ್ವಾಮಿ ನಿಕಟಪೂರ್ವ ಉಪಾಧ್ಯಕ್ಷೆ ತೇಜಾವತಿ, ಟಿಎಪಿಸಿಎಂ ಎಸ್ ಅಧ್ಯಕ್ಷ ಶಂಕರ ಮೂರ್ತಿ, ತಾ.ಪಂ. ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯರಾದ ಚನ್ನಬಸವಯ್ಯ,ತಿ ಮ್ಮಣ್ಣ ನಟರಾಜ್, ನವೀನ್, ಲೋಕೇಶ್, ಮಲ್ಲಿಕಾರ್ಜುನಯ್ಯ, ಪವಿತ್ರ, ಜ್ಯೋತಿ, ರೇಣುಕಮ್ಮ ಮತ್ತು ಗ್ರಾಮದ ಚಂದ್ರಯ್ಯ ಸೇರಿದಂತೆ ಸದಸ್ಯರುಗಳು ಹಾಗೂ ಮುಖಂಡರುಗಳು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಚಂದ್ರಶೇಖರ್ ಕಾರ್ಯನಿರ್ವಹಿಸಿದ್ದು, ಪಿಡಿಒ ಗೋಪಿನಾಥ್ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ನೂತನ ಉಪಾಧ್ಯಕ್ಷೆ ತೀರ್ಥವತಿ ಈ ಸಂದರ್ಭ ಮಾತನಾಡಿ, ಎಲ್ಲ ಸದಸ್ಯರುಗಳ  ಬೆಂಬಲದೊಂದಿಗೆ ಗ್ರಾಮದ ಮತ್ತು ಪಂಚಾಯಿತಿಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಸರಗೂರು: ಆನೆಯ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಸರಗೂರು ತಾಲೂಕಿನ ಮಾದಪುರ ಗ್ರಾಮದಲ್ಲಿ ಗುರುವಾರ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ನಡೆದಿದೆ. ಮಾದಪುರ ಗ್ರಾಮದ ಪುಟ್ಟಸ್ವಾಮಿ ಎಂಬವರ  ಪುತ್ರ ಚಂದ್ರ ಎಂಬವರು ಆನೆಯ ದಾಳಿಗೊಳಗಾದವರಾಗಿದ್ದು, ಸದ್ಯ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಮಾಹಿತಿ ನೀಡಿದ ಮದಾಪುರ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಮಲ್ಲು, ಹಸು-ಕರುಗಳನ್ನು ಕಟ್ಟಿ ಹಾಕಲು ಚಂದ್ರ ಅವರು ಬೆಳಗ್ಗೆ ಬಂದಿದ್ದು, ಈ ವೇಳೆ ಶಬ್ಧ ಕೇಳಿ ಕಳ್ಳರು ಅಂದುಕೊಂಡು ಹುಡುಕುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಬೆಳಗ್ಗಿನ ಜಾವದಲ್ಲಿ ಇಬ್ಬನಿ ಇದ್ದ ಕಾರಣ ಕಾಡಾನೆ ಅವರಿಗೆ ಕಾಣಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಚಂದ್ರು ಅವರ ಭುಜ, ಕೈ ಹಾಗೂ ತಲೆಗೆ ಗಾಯವಾಗಿದ್ದು, ಸದ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ  ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಲ್ಲು ತಿಳಿಸಿದರು. ಇನ್ನೂ ಕಾಡಾನೆ ದಾಳಿಯಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣವೇ ಆನೆಯನ್ನು ಇಲ್ಲಿಂದ ಸ್ಥಳಾಂತರಿಸಬೇಕು. ಈ ಮೂಲಕ ಮುಂದೆ ಆಗಬಹುದಾದ…

Read More

ಹಿರಿಯೂರು: ಮಾಜಿ ಸಚಿವ, ಮಾಜಿ ಶಾಸಕರಾದ ಡಿ.ಸುಧಾಕರ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ  ತಾಲ್ಲೂಕಿನ ಸಮಸ್ತ  ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.  2022ರ ಈ ಮಕರ ಸಂಕ್ರಾಂತಿ ಹಬ್ಬವು ನಮ್ಮ ಹಿರಿಯೂರು ತಾಲ್ಲೂಕಿನ ಜನತೆಗೂ ಹಾಗೂ ನಾಡಿನ ಜನತೆಯ ಬಾಳಲಿ ಆರೋಗ್ಯ ಆಯಸ್ಸು ಕೊಟ್ಟು ಕಾಪಾಡಲಿ  ಹಾಗೂ ನಮ್ಮ ಹಿರಿಯೂರು ತಾಲ್ಲೂಕಿಗೆ ಇನ್ನು ಅತಿ ಹೆಚ್ಚು ಮಳೆ- ಬೆಳೆ ಆಗಿ ರೈತರ ಮುಖದಲ್ಲಿ ಎಂದೆಂದಿಗೂ ಸಂತೋಷ , ಮಂದಹಾಸ ತುಂಬಿರಲಿ ಎಂದು ಸುಧಾಕರ್ ಶುಭ ಹಾರೈಸಿದರು . ಸಾಂಕ್ರಾಮಿಕ ರೋಗವಾದ ಒಮಿಕ್ರೋನ್ ರೋಗವು ಬಹಳ ವೇಗವಾಗಿ ಹರಡುತ್ತಿದ್ದು,  ಈ ಹಿನ್ನೆಲೆಯಲ್ಲಿ  ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್ ನ್ನು ಬಳಸಿ ಹಾಗೂ ದೈಹಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಈ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸುವಂತೆ ಅವರು ಸಲಹೆ ನೀಡಿದರು. ವರದಿ: ಮುರುಳಿಧರನ್ ಆರ್., ಹಿರಿಯೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಸರಗೂರು: ಜೆಡಿಎಸ್ ಯುವ ನಾಯಕರಾದ ಜೈ ಪ್ರಕಾಶ್, ಹೆಚ್.ಡಿ.ಕೋಟೆ ಸರಗೂರು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶಾಸಕರಾಗಿ ಹೊರ ಹೊಮ್ಮಲಿದ್ದಾರೆ ಎಂದು ಪಡುವಲುಮಠದ ಶ್ರೀಗಳಾದ ಮಹದೇವಸ್ವಾಮಿ ಭವಿಷ್ಯ ನುಡಿದಿದ್ದಾರೆ. ಪಟ್ಟಣದ ಎರಡನೇಯ ಮುಖ್ಯ ರಸ್ತೆಯ ಬಸವಶ್ವೇರ ದೇವಸ್ಥಾನ ದ ಬಳಿ ಆಯೋಜಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಸ್ವಾಮೀಜಿ ಈ ಭವಿಷ್ಯ ನುಡಿದರು.  ಇದೇ ವೇಳೆ ಹನುಮ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜೈ ಪ್ರಕಾಶ್,  ಕೊವಿಡ್  ತಡೆಗಟ್ಟಲು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು. ಇದೇ ವೇಳೆ ಸ್ವಾಮೀಜಿಗೆ ಹೇಳಿದ ಭವಿಷ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಭರತ್ ಜೋಯಿಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಹಂಚಿಪುರ ಗುರುಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯರು ದಿವ್ಯ ನವೀನ್ ಕುಮಾರ್, ಸುಮರಾಮಚಂದ್ರ, ಶಿವಕುಮಾರ್(ವಿರೇಶ್) ಮುಖಂಡರು ರವಿ ಜಯರಾಮ ಸೇರಿದಂತೆ  ಹಲವು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ  ಎಪಿಎಂಸಿ ಪ್ರಭಾರೆ ಅಧ್ಯಕ್ಷರಾಗಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ  ಸಚಿವರಾದ ಡಿ.ಸುಧಾಕರ್ ಬೆಂಬಲಿತರಾದ ಷಣ್ಮುಖರವರು  ಎಪಿಎಂಸಿ ಪ್ರಭಾರೆ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದರು . ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್, ಕೆಪಿಸಿಸಿ ಸದಸ್ಯರಾದ ಎ.ಎಂ.ಅಮೃತೇಶ್ವರ ಸ್ವಾಮಿ ಸುರೇಶಬಾಬು,  ನಗರಸಭೆ ಅಧ್ಯಕ್ಷರಾದ ಶಂಶುನ್ನಿಸ ಎಪಿಎಂಸಿ ಮಾಜಿ ಅಧ್ಯಕ್ಷರಾದ ಇ.ಎಲ್.ಗೌಡ,  ವೇದಮೂರ್ತಿ,  ಮಲ್ಲನಾಯಕ ಮರಿ ಬಿ.ಎಲ್.ಗೌಡ,  ನಾಗಲಕ್ಷ್ಮಿ,  ಬಾಬು ಹುಚ್ಚಾವನಳ್ಳಿ,  ಡಾ.ಪ್ರಕಾಶ್, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಮಹಮದ್ ಪಕೃದ್ದಿನ,  ಪಾಪಣ್ಣ , ಜ್ಞಾನೇಶ್   ತಿಮ್ಮಣ್ಣ, ಸೇಠು ರಮೇಶಬಾಬು,  ಮಲ್ಲೇಶ್,  ರಾಜೇಶಗೌಡ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.  ವರದಿ:  ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy    

Read More

ಪಾವಗಡ:  ಸ್ವಾಮಿ ವಿವೇಕಾನಂದರು  ಯುಗ ಪುರುಷ  ಅಪ್ರತಿಮ ಆಧ್ಯಾತ್ಮಿಕ ಚಿಂತಕರಾಗಿದ್ದು, ಯುವಕರಿಗೆ ಸ್ಪೂರ್ತಿ ತುಂಬಿದ ವೀರ ಸನ್ಯಾಸಿ  ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ತಿಳಿಸಿದರು. ಹೆಲ್ಪ್ ಸೊಸೈಟಿ  ಹಮ್ಮಿಕೊಂಡಿದ್ದ ವಿವೇಕಾನಂದರ 159ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವೇಕಾನಂದರು “ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂಬ ಅಸಾಧಾರಣ ಮಾತುಗಳಿಂದ ಯುವಕರಿಗೆ ಸ್ಪೂರ್ತಿಯಾದವರು ಎಂದರು. ಈ ಕಾರ್ಯಕ್ರಮದಲ್ಲಿ ಮುಖಂಡರಾದ ಸುರೇಂದ್ರ, ಅನಿಲ್ ಕುಮಾರ್, ಶ್ರೀನಿವಾಸ್, ಗೌತಮ್, ವೀರ, ವೆಂಕಟ್ ನಾಯ್ಡು, ಪತ್ರಕರ್ತರಾದ ಲೋಕೇಶ್, ಜಯ ಸಿಂಹ, ನಾಗೇಶ್, ಸಂತೋಷ್, ಇದ್ದರು ವರದಿ:  ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶೆಟ್ಟಿಗೊಂಡನಹಳ್ಳಿ: ಶೆಟ್ಟಿಗೊಂಡನ ಹಳ್ಳಿಯಲ್ಲಿ ಹಲವು ದಶಕಗಳಿಂದ ವಾಸವಿರುವ ಗ್ರಾಮಸ್ಥರ ಹರ್ಷೋದ್ಘಾರ ಮುಗಿಲುಮುಟ್ಟಿದೆ. ಗ್ರಾಮದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆಶೆಟ್ಟಿಗೊಂಡನಹಳ್ಳಿ ಕೆರೆಗೆ ಹೇಮಾವತಿ ನೀರನ್ನುಹರಿಸಲಾಗಿದ್ದು , ಸ್ವಗ್ರಾಮ ಮತ್ತು ಅಕ್ಕಪಕ್ಕದ ಹಳ್ಳಿಯ ಜನರಿಗೆ ಖುಷಿ ತಂದಿದೆ. ಕಳೆದ  2-3 ವರ್ಷಗಳ ಹಿಂದೆಯೇ ಗ್ರಾಮದಲ್ಲಿ ಚಾನೆಲ್ ನಿರ್ಮಾಣವಾಗಿದ್ದರೂ ಸಹ ಕೆರೆಗೆ ಹೇಮಾವತಿ ನೀರು ಬಂದಿರಲಿಲ್ಲ. ಆದರೆ ಕಳೆದ ವರ್ಷ ರಾಜ್ಯದಲ್ಲಿ ಸುರಿದ ಬಾರಿ ಮಳೆಯಿಂದಾಗಿ, ತುಮಕೂರಿನ ಬಹುತೇಕ ಎಲ್ಲಾ ಕೆರೆಗಳು ತುಂಬಿದ್ದವು. ಆದ ಕಾರಣ ಖಾಲಿ ಇದ್ದ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಬಿಡಲಾಗಿದೆ. ಇಂದು ಈ ಕೆರೆಯೂ ತುಂಬಿ ಹರಿಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಅಕ್ಕಪಕ್ಕದ ಗ್ರಾಮಸ್ಥರು ಧಾವಿಸುತ್ತಿದ್ದಾರೆ. ವರದಿ: ವೆಂಕಟೇಶಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ:  ದೇಶದ ಸಂಸ್ಕೃತಿ ಉಳಿಯಲು ಗ್ರಾಮೀಣ ಭಾಗದ ಕೊಡುಗೆ ಅಪಾರವಾಗಿದೆ ಎಂದು ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿ.ಎನ್.ಮಧು ತಿಳಿಸಿದರು. ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ತಮ್ಮ ಕಚೇರಿ ಮುಂಭಾಗದಲ್ಲಿ ಕ್ಷೇತ್ರದ ಜನತೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕಬ್ಬು ಹಾಗೂ ಎಳ್ಳು-ಬೆಲ್ಲ ವಿತರಿಸುವ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಗರೀಕರಣ ಮತ್ತು ಆಧುನೀಕರಣದ ಜೀವನ ಶೈಲಿಯಿಂದ ಗ್ರಾಮೀಣ ಬದುಕಿನ ಹಳ್ಳಿಯ ಸೊಗಡು ಮಾಯವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ನಮ್ಮ ಸಂಸ್ಕೃತಿ ಉಳಿಸುವ ಪಣ ತೊಡಬೇಕು. ಹೊಸ ವರುಷ ಎಲ್ಲರಿಗೂ ಹರುಷ ತರಲಿದ್ದು, ಕ್ಷೇತ್ರದ ಅಭಿವೃದ್ದಿಗೆ ಎಲ್ಲರೂ ಒಗ್ಗಟ್ಟಾಗಬೇಕಾಗಿದೆ ಎಂದರು.   ಸ್ವಾಮಿ ವಿವೇಕಾನಂದರ ಜನ್ಮದಿನವಾದ ಇಂದು ಅವರ ಪ್ರೇರಣೆಯಿಂದ ಈ ಕಾರ್ಯ ಮಾಡುತ್ತಿದ್ದೇನೆ. ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಯುವಕರು ಮುಂದೆ ಬರಬೇಕು ಎಂದ ಅವರು  ಸದಾ ನಾನು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು. ಈ ವೇಳೆ ಮಧು ಚಾರಿಟಬಲ್ ಟ್ರಸ್ಟ್ ನ ಸದಸ್ಯರಾದ ನಾಗೇಶ್ ಬೈರೇಶ್ ಗೌಡ, ಮಂಜು, ಕೆಂಪೇಗೌಡ, ಚೇತನ್ ಗೌಡ,…

Read More