Subscribe to Updates
Get the latest creative news from FooBar about art, design and business.
- ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
- ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
- ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಳಿಯಾರ್ ರಸ್ತೆಯಲ್ಲಿರುವ ಭಗವತಿ ಪೌದಿಯಮ್ಮನ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಭಗವತಿ ಅಮ್ಮನವರ 3 ನೇ ವರ್ಷದ ಕುಂಭಾಭಿಷೇಕ ಪ್ರಯುಕ್ತವಾಗಿ ಭಕ್ತಾದಿಗಳಿಂದ ವಿಶೇಷ ಪೂಜೆ , ದೇವಿಯ ಮೆರವಣಿಗೆ, ದೇವಿಗೆ ಭಜನೆಗಳು, ಸರಣಿ ಚಪ್ಪಾಳೆ ಹಾಗೂ ಭಕ್ತಾಧಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಸಚಿವ ಡಿ.ಸುಧಾಕರ್ ಹಾಗೂ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಖಾದಿ ರಮೇಶ್ , ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ವಿ ., ನಗರಸಭೆ ಉಪಾಧ್ಯಕ್ಷರಾದ ಪ್ರಕಾಶ್ ಬಿ .ಎನ್. , ಜ್ಞಾನೇಶ್ ಹಾಗೂ ಎಸ್. .ಎಸ್. ಎ.ಟಿ. ಲಾರಿ ಟ್ರಾನ್ಸ್ ಪೋರ್ಟ್ ಮಾಲಿಕರಾದ ಸೆಲ್ವಂ ಹಾಗೂ ಕುಟುಂಬಸ್ಥರು , ನಗರಸಭೆ ಸದಸ್ಯೆ ಸುರೇಖಾ ಮಣಿ ಹಾಗೂ ದೇವಸ್ಥಾನದ ಅರ್ಚಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿದರು . ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಗುಬ್ಬಿ: ಚೇಳೂರು ಹೋಬಳಿಯ ರಂಗನಹಳ್ಳಿ ಗ್ರಾಮದ ಗೋಮಾಳದ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತ ಕುಟುಂಬಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಕೆಲಸಕ್ಕೆ ಮುಂದಾದರೆ ಅಧಿಕಾರಿಗಳನ್ನು ರೈತರೇ ಕಟ್ಟಿಹಾಕಿ ಕೇಸು ದಾಖಲಿಸುತ್ತಾರೆ ಎಂದು ಬಗ್ಗೆ ಗುಬ್ಬಿ ಶಾಸಕ ಎಸ್. ಆರ್.ಶ್ರೀ ನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 40ವರ್ಷಗಳಿಂದ ಜಮೀನಿನಲ್ಲಿ ಅನುಭವದಲ್ಲಿದ್ದು, ಕಂದಾಯ ಇಲಾಖೆ ವತಿಯಿಂದ ಸಾಗುವಳಿ ಪತ್ರ ಪಡೆದು ಲಕ್ಷಾಂತರ ರೂ. ಹಣ ವ್ಯಯಿಸಿ ಜಮೀನು ಅಭಿವೃದ್ಧಿ ಪಡಿಸಿ ಕೆಲ ಕುಟುಂಬದವರು ವಾಸದ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಇಂತಹ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಈ ಸ್ವತ್ತು ನಮಗೆ ಸೇರಿದ್ದು ಎಂದು ಅನುಭವದಲ್ಲಿರುವ ರೈತರನ್ನು ಸ್ಥಳ ಬೀಡುವಂತೆ ಮತ್ತು ಜಮೀನಿನಲ್ಲಿ ಬೆಳೆದ ಬೆಳೆ ನಾಶಪಡಿಸುವುದು ಹಾಗೂ ಕೇಸು ದಾಖಲು ಮಾಡುವುದಾಗಿ ಹೆದರಿಸುವುದು ಸರಿಯಲ್ಲ, ಅರಣ್ಯ…
ಸರಗೂರು: ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ ಹೀಗಾಗಿ ತಾಲ್ಲೂಕು ಆಡಳಿತ ಸೋಂಕಿತರ ಚಿಕಿತ್ಸೆ ಗಾಗಿ ಬೆಡ್ ಆಕ್ಸಿಜನ್ ಹಾಗೂ ಔಷಧ ಇನ್ನಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೊವಿಡ್ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ವೈದ್ಯರು ಸಾರ್ವಜನಿಕರ ಚಿಕಿತ್ಸೆ ಗೆ ಸದಾ ಸಿದ್ದರಾಗಿರಬೇಕು ಎಂದು ಹೇಳಿದರು. ಸಾರ್ವಜನಿಕ ರು ಸರ್ಕಾರದ ಮಾರ್ಗ ಸೂಚಿಯನ್ನು ಉಲ್ಲಂಘಿಸದೇ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸುವ ಮೂಲಕ ದೈಹಿಕ ಅಂತರ ಕಾಯ್ದು ಕೊಳ್ಳಬೇಕು. ಲಸಿಕೆ ಪಡೆಯದವರನ್ನು ಗುರುತಿಸಿ ತಾಲ್ಲೂಕು ಆಡಳಿತ ಪೋಲಿಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಲಸಿಕೆ ಕೊಡಿಸಬೇಕು. ಮಕ್ಕಳ ಆರೋಗ್ಯ ದ ಹಿತದೃಷ್ಟಿಯಿಂದ ಲಸಿಕೆ ಕೊಡಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದು ಹೇಳಿದರು. ಇನ್ನೂ ರಾತ್ರಿ ವೇಳೆ…
ತಿಪಟೂರು: ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಯುವ ಸೇನಾನಿ, ಸ್ವಾಮಿ ವಿವೇಕಾನಂದ ರವರ 159 ನೇ ಜನ್ಮದಿನೋತ್ಸವ ಆಚರಣೆಯು ತಿಪಟೂರು ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆಯ ಆವರಣದಲ್ಲಿ ನಡೆಯಿತು. ತುಮಕೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಹರ್ಷ, ಜಯಕರ್ನಾಟಕ ಜನಪರ ವೇದಿಕೆ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿದರು. ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬಿ.ಬಿ. ಬಸವರಾಜ್, ತಾಲ್ಲೂಕು ಉಪಾಧ್ಯಕ್ಷ ಸಿದ್ದೇಶ್, ನಿವೃತ್ತ ನೌಕರ ಜಯದೇವಪ್ಪ,ವಿದ್ಯಾರ್ಥಿ ಘಟಕದ ತರುಣ್, ಗಿರೀಶ್, ಹರೀಶ್, ಮುಖಂಡರಾದ ಕೃಷ್ಣೋಜಿರಾವ್ ಮತ್ತು ರಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಚಿಲ್ಲಹಳ್ಳಿ ಗ್ರಾಮದಲ್ಲಿನ ಶ್ರೀ ಶಬರಿಮಲೆ ಸ್ವಾಮಿ ಅಯ್ಯಪ್ಪ ಸ್ವಾಮಿ ಭಕ್ತರ ಮಂಡಲ ಪೂಜೆ ಕಾರ್ಯಕ್ರಮ ನಡೆಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕ, ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಿ.ಸುಧಾಕರ್ ರವರು ಭಾಗವಹಿದರು. ಈ ಸಂದರ್ಭದಲ್ಲಿ ಅಬ್ಬಿನ ಹೊಳೆ ಹಾಗೂ ಹರಿಯಬ್ಬೆ ಗ್ರಾಮ ಪಂಚಾಂಯತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ಹಿರಿಯ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಾಧಿಗಳು ಸಹ ಶ್ರೀ ಅಯ್ಯಪ್ಪ ಸ್ವಾಮಿಯ ಮಂಡಲಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ತಾಲ್ಲೂಕಿನ ಐಮಂಗಲ ಹೋಬಳಿಯ ಬುರುಜಿನರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ವಿವಿಧ ವಸತಿ ಯೋಜನೆಯಡಿ ವಸತಿ ನೀಡಲು ಗ್ರಾಮ ಸಭೆ ನಡೆಸಲಾಗುತ್ತಿದೆ ಎಂದು ಶಾಸಕಿ ಕೆ .ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಬುರುಜನರೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸಬ್-ಕೀ ಯೋಜನೆ – ಸಬ್ ಕಾ ವಿಕಾಸ್ ಅಡಿಯಲ್ಲಿ ಜನಯೋಜನಾ ಅಭಿಯಾನ ಯೋಜನೆ ಹಾಗೂ 2021-22 ನೇ ನಮ್ಮ ಗ್ರಾಮ-ನಮ್ಮ ಯೋಜನೆಯ ವಾರ್ಡ್-ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮ ಶ್ರೀನಿವಾಸ್ ಅವರು ಮಾತನಾಡಿದರು. ಅವಶ್ಯಕತೆ ಇರುವ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದು, ಹೆಚ್ಚುವರಿ ವಸತಿ ಮಂಜೂರು ಮಾಡುವಂತೆ ಸದಸ್ಯರು, ಮುಖಂಡರುಗಳು, ಗ್ರಾಮಸ್ಥರು ಶಾಸಕಿಗೆ ಮನವಿ ಮಾಡಿದರು. ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಬೇರಪ್ಪ, ಉಪಾಧ್ಯಕ್ಷೆ ತಾಹೆರಾ ಬಾನು, ಜಿ.ಪಂ. ಮಾಜಿ ಸದಸ್ಯೆ ರಾಜೇಶ್ವರಿ, ಸುಮ, ಸಿದ್ದೇಶ್ವರಿ, ರಾಜಮ್ಮ, ಕವಿತ, ಸುರೇಶ್, ಲತಾ ಮುಖಂಡರಾದ ಮೈಲಾರಪ್ಪ, ಲಿಂಗಾರೆಡ್ಡಿ, ನವೀನ್, ಜಯಣ್ಣ ಇತರರು ಉಪಸ್ಥಿತರಿದ್ದರು.…
ತುರುವೇಕೆರೆಯ ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ತುರುವೇಕೆರೆಯ ನಟರಾಜ್ ರವರು ಆಯ್ಕೆಯಾಗಿದ್ದು, ಅವರನ್ನು ಪಟ್ಟಣದ A.V.S. S. ಕಚೇರಿಯಲ್ಲಿ ತುರುವೇಕೆರೆ ಛಲವಾದಿ ಮಹಾ ಸಭಾದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲ ನಟರಾಜ್, ನನ್ನ ವೃತ್ತಿಯಲ್ಲಿ ಈಗ ಹೆಚ್ಚಿನ ಜವಾಬ್ದಾರಿ ನನ್ನ ಹೆಗಲಿಗಿದೆ. ನ್ಯಾಯಯುತವಾದ ಕೇಸುಗಳನ್ನು ತೆಗೆದುಕೊಂಡು ವಾದ ಮಾಡುತ್ತೇನೆ. ಬಡವರ ಹಾಗೂ ಅಶಕ್ತರಿಗೆ ನನ್ನ ಕೈಲಾದ ಸೇವೆ ಮಾಡುತ್ತೇನೆ ಎಂದರು. ಈ ಕಾರ್ಯಕ್ರಮದಲ್ಲಿ ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಡೊಂಕಿಹಳ್ಳಿ ರಾಮಯ್ಯ, ಉಪಾಧ್ಯಕ್ಷರಾದ ಬೀಚನಹಳ್ಳಿ ಮಹಾದೇವಯ್ಯ, ಡಿ.ಎಸ್.ಎಸ್.ತಾಲೂಕು ಸಂಚಾಲಕ ಕುಣಿಕೆನಹಳ್ಳಿ ಜಗದೀಶ್, ಪು ರಾಮಚಂದ್ರು, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾದ ಕೊಡಗಿಹಳ್ಳಿ ಹನುಮಂತಯ್ಯ, ಕಿರಣ್ ಕುಮಾರ್ ಮುಂತಾದ ಸಮಾಜದ ಬಾಂಧವರು ಹಾಜರಿದ್ದು ಅಭಿನಂದಿಸಿದರು. ವರದಿ: ಸುರೇಶ್ ಬಾಬು. ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು : ತಾಲ್ಲೂಕು ಕಸಬಾ ಹೋಬಳಿ ಮಾದಿಹಳ್ಳಿ ಗ್ರಾಮದಲ್ಲಿ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ 273 ನೇ ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶ ಕೆ ದಯಾಶೀಲ, ಕ್ಷೇತ್ರದ ವತಿಯಿಂದ 1143838 ರೂ. ಮತ್ತು ಗ್ರಾಮಸ್ಥರ ಸಹಕಾರ 5,50,000 ರೂ.ಗಳು ಒಟ್ಟು 16 ಲಕ್ಷದ 93000 238 ರೂಗಳು ಕೆರೆಯ ಜೀರ್ಣೋದ್ದಾರ ಮಾಡಲಾಗಿದೆ ಎಂದು ತಿಳಿಸಿದರು . ಯೋಜನಾಧಿಕಾರಿ ಪ್ರವೀಣ್ ಕೆರೆಯನ್ನು ಅಭಿವೃದ್ಧಿಪಡಿಸಿ ಈ ಸಮುದಾಯದ ವಿಭಾಗದಿಂದ ಜೀರ್ಣೋದ್ಧಾರ ಮಾಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಧುಸ್ವಾಮಿ ನಿರ್ದೇಶಕ ಪ್ರಕಾಶ್ ಗ್ರಾಮದ ಸಿದ್ದರಾಮಯ್ಯ ಸಂಘದ ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು, ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಾಯಸಂದ್ರ: ಜನವರಿ 7 ರಿಂದ 10 ರಂದು ರಂಗಶಾಲಾ ಕ್ರೀಡಾಂಗಣ ಪೊಕಾರ ನೇಪಾಳದಲ್ಲಿ TAFTYGAS-5 ನೇ ಅಂತರಾಷ್ಟ್ರೀಯ ಕ್ರೀಡಾಕೂಟ 2021-22 ಜರುಗಿತು. ಈ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮಾಯಸಂದ್ರ ಶಾಖೆಯ ಎಸ್ ಬಿ ಜಿ ವಿದ್ಯಾಲಯದ ವಿದ್ಯಾರ್ಥಿಗಳು 17 ವರ್ಷದ ಬಾಲಕಿಯರ ವಿಭಾಗದಲ್ಲಿ ಅಂತಿಮ ಪಂದ್ಯಾವಳಿಯಲ್ಲಿ ನೇಪಾಳ ವಿರುದ್ಧ ಭಾರತ ತಂಡವು ಮೂರು ಗೋಲಿನ ಅಂತರದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. 19 ವರ್ಷದ ಬಾಲಕರ ವಿಭಾಗದಲ್ಲಿ ಒಂದು ಗೋಲಿನ ಅಂತರದಲ್ಲಿ ನೇಪಾಳದ ವಿರುದ್ಧ ಭಾರತ ತಂಡವು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದಿದ್ದಾರೆ. ವಿದೇಶಿ ನೆಲದಲ್ಲಿ ಸಾಧನೆ ಮಾಡಿ ಬಂದ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮಿಜಿ ಮತ್ತು ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಆಶೀರ್ವದಿಸಿ ಶುಭಾ ಹಾರೈಸಿದ್ದಾರೆ. TAFTYGAS ಭಾರತದ ಕಾರ್ಯದರ್ಶಿಗಳಾದ…
ತುಮಕೂರು: ದಲಿತ ಸಂಘಟನೆಗಳ ಒಕ್ಕೂಟ ಮತ್ತು ಭೀಮಬಾಯಿ ಮಹಿಳಾ ಸ್ವಸಹಾಯ ಅರಕೆರೆ, ಕಸಬಾ ಹೋಬಳಿ ಇವರ ಸಹಯೋಗದೊಂದಿಗೆ ಭೀಮಬಾಯಿ ಮಹಿಳಾ ಸ್ವ-ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ಅರಕೆರೆ ಗ್ರಾಮದ ತೋವಿನಕೆರೆ ರಸ್ತೆ ಬಳಿ ನಡೆಯಿತು. ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಅವರು ಭೀಮಬಾಯಿ ಮಹಿಳಾ ಸ್ವ-ಸಹಾಯ ಸಂಘವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ರಾಮಯ್ಯ, ಸಾಮಾಜಿಕ ಹೋರಾಟಗಾರ ರವಿ ತೊಂಡಗೆರೆ, ಆರ್ ಪಿ ಐ ಪ್ರಧಾನ ಕಾರ್ಯದರ್ಶಿ ಕೆಂಚರಾಯ ಕಲಾಕಾರ್ ಹುಲಿಕುಂಟೆ ಭಾಗವಹಿಸಿದ್ದರು. ಆರ್ ಪಿಐ ತುಮಕೂರು ಜಿಲ್ಲಾಧ್ಯಕ್ಷ ನಟರಾಜ್ ಜಿ.ಎಲ್., ಆರ್ ಪಿಐ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ಎನ್.ಮಂಜುಳ ಹಾಗೂ ರೂಪಾ, ನರಸಿಂಹ ಮೂರ್ತಿ, ಶಿವಣ್ಣ, ರವೀಶ್, ಅನಿಲ್ ಪಟೇಲ್, ವನಜಾಕ್ಷಿ ಚಂದ್ರಶೇಖರ್ ಪ್ರೇಮಕುಮಾರಿ ಮೊದಲಾದವರು ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು. ನರಸಿಂಹ ಮೂರ್ತಿ ಸಮಾಜ ಸೇವಕರು ಮತ್ತು ಶಿವಣ್ಣ ಹೊಸಹಳ್ಳಿ ಕಾರ್ಯಾಧ್ಯಕ್ಷರು ಮತ್ತು ಗೋಪಾಲ್ ಹಾಗೂ ರವೀಶ್ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು…