Subscribe to Updates
Get the latest creative news from FooBar about art, design and business.
- ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್ ನಿಧನ
- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
- ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
- ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
- ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
- ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
- ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
- ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
Author: admin
ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಅನಧಿಕೃತವಾಗಿ ಇಟ್ಟಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಹಿರಿಯೂರು ತಾಲ್ಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ತಹಶೀಲ್ದಾರವರಿಗೆ ಮನವಿ ಸಲ್ಲಿಸಿತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದ ಆವರಣದಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟಿದ್ದು, ಇದು ಕಾನೂನು ಬಾಹಿರವಾಗಿರುತ್ತದೆ ಎಂದು ಸಂಘಟನೆ ದೂರಿದೆ. ಈಗಾಗಲೇ ಸದರಿ ಕಟ್ಟಡದಲ್ಲಿ ಮೂರು ಕೊಠಡಿಗಳು, ಒಂದು ಪೆಟ್ಟಿಗೆ ಅಂಗಡಿ ಹಾಗೂ ಟೀ ಹೋಟೆಲ್ ಗಳು , ಇವರಿಂದ ಪ್ರತಿ ತಿಂಗಳು ನೌಕರರ ಸಂಘದ ಭವನದವರು ಬಾಡಿಗೆ ಪಡೆಯುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ ಸುಮಾರು ಎರಡು ಸಾವಿರ ಸರ್ಕಾರಿ ನೌಕರರು ಇದ್ದು, ಇವರಿಂದ ಪ್ರತಿ ವರ್ಷಕ್ಕೆ ರೂ 200 ರೂ. ಪಡೆದರೂ ಇವರಿಂದಲೇ ವರ್ಷಕ್ಕೆ ನಾಲ್ಕು ಲಕ್ಷ ಹಣ ಸಂಘಕ್ಕೆ ಹೋಗುತ್ತಿದೆ. ಆದರೂ ಅತಿಯಾಸೆಯಿಂದ ಇರುವ ಸ್ವಲ್ಪ ಜಾಗದಲ್ಲಿ ಮತ್ತೆ ಮೂರು ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಳ್ಳಲು ನೀಡಲಾಗಿದೆ ಎಂದು ಸಂಘಟನೆಯ…
DLF ನಂತರ ಇಷ್ಟು ವರ್ಷಗಳ ಕಾಲ ನಡೆದ IPL ಪಂದ್ಯವಳಿಯ ಟೈಟಲ್ ಪ್ರಾಯೋಜಕತ್ವದಿಂದ ಚೀನಾ ಮೂಲದ ಸ್ಮಾರ್ಟ್ ಫೋನ್ ತಯಾರಿಕ ಸಂಸ್ಥೆ ವಿವೋ ಹಿಂದೆ ಸರಿದಿದೆ. ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ’ರವರ ಒಡೆತನದ ” ಟಾಟಾ ” ಗ್ರೂಪ್’ಗೆ IPL ಟೈಟಲ್ ಪ್ರಾಯೋಜಕತ್ವ ದೊರೆತಿದೆ. ವಿವೋ IPL ಟೈಟಲ್ ಪ್ರಾಯೋಜಕತ್ವವನ್ನು ” TATA “ಗೆ ವರ್ಗಾಯಿಸಲು ಸಲ್ಲಿಸಿದ ಅರ್ಜಿಗೆ BCCI ಸಮ್ಮತಿಸಿದೆ. ಈ ಬಗ್ಗೆ ಇಂದು ಬೆಳಗ್ಗೆ IPL ಚೇರ್ಮನ್ ಆದಂತಹ ಬೃಜೇಶ್ ಪಟೇಲ್’ರವರು ಸ್ಪಷ್ಟ ಪಡಿಸಿದ್ದಾರೆ. ಏನೇ ಆಗಲಿ IPLನ ಟೈಟಲ್ ಪ್ರಾಯೋಜಕತ್ವ ನಮ್ಮ ದೇಶದ ಸಹೃದಯಿ, ಸರಳ ಮತ್ತು ಸಮಾಜ ಸೇವಕ ” ಟಾಟಾ ” ಗ್ರೂಪ್’ಗೆ ದೊರೆತಿರುವುದು ದೇಶದ ಕೋಟ್ಯಾಂತರ ಜನರಿಗೆ ಖುಷಿ ತಂದಿದೆ. ಇನ್ನು ಮುಂದೆ Vivo IPL ಇರುವುದಿಲ್ಲ, TATA IPL ಮಾತ್ರ ಇರುತ್ತದೆ. ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಗುಬ್ಬಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಗುಬ್ಬಿ ತಾಲೂಕಿನ MN ಕೋಟೆ ವಲಯ ಎಂ.ಎನ್. ಕೋಟೆ ಕಾರ್ಯಕ್ಷೇತ್ರದ ಅದಲಗೆರೆ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ನಿರ್ದೇಶಕಿ ದಯಾಶೀಲ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಾತೃ ಶ್ರೀ ಅಮ್ಮನವರ ಆಶಯದಂತೆ ಜ್ಞಾನ ವಿಕಾಸ ಕೇಂದ್ರ ವು ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ಸ್ವ ಉದ್ಯೋಗ ನಡೆಸುವ ಹಲವು ಯೋಜನೆ ರೂಪಿಸುವ ಕುರಿತು ಸಂಕ್ಷಿಪ್ತವಾಗಿ ಮಹಿಳೆಯರಿಗೆ ಮಾಹಿತಿ ನೀಡುತ್ತಿದ್ದು, ಶ್ರೀ ಕ್ಷೇತ್ರವು ಮಹಿಳೆಯರ ಅಭಿವೃದ್ಧಿಗೆ ಸಾಕಷ್ಟು ಆರ್ಥಿಕ ಸಹಾಯ ತರಬೇತಿ ನೀಡುವಲ್ಲಿ ಮುಂದಾಗಿದೆ. ಅದರಂತೆ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮಹಿಳೆಯರಿಗೆ ಸಲಹೆ ನೀಡಿದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರು , ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಚಟುವಟಿಕೆ ನಡೆಸಿದರು. ಕಾರ್ಯ ಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಯಾಶೀಲ ಹಾಗೂ…
ಗುಬ್ಬಿ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತವರು ಕ್ಷೇತ್ರ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿ ಗಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟದ ಆಹಾರ ಸಾಮಗ್ರಿಗಳು ಸಿಗುತ್ತಿಲ್ಲ. ಸದ್ಯ ಹುಳು ಹಿಡಿದಿರುವ ಆಹಾರ ಸಾಮಗ್ರಿಗಳನ್ನು ಸರ್ಕಾರ ಪೂರೈಸುತ್ತಿದ್ದು, ಈ ಹುಳು ಹಿಡಿದ ಆಹಾರ ವಸ್ತುಗಳನ್ನೇ ಬಳಸಿ ಆಹಾರ ತಯಾರಿಸುವ ಅನಿವಾರ್ಯ ಸ್ಥಿತಿ ಶಾಲಾ ಅಡುಗೆ ಸಿಬ್ಬಂದಿಯದ್ದಾಗಿದೆ. ಗುಬ್ಬಿ ತಾಲ್ಲೂಕಿನ ಲ್ಲಿ ಒಟ್ಟು 441 ಸರ್ಕಾರಿ ಶಾಲೆಗಳಿದ್ದು, ಪ್ರತಿ ತಿಂಗಳು ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ 750 ಕೆ.ಜಿ.ಅಕ್ಕಿ ಸರಬರಾಜು ಆಗುತ್ತಿದೆ. 130 ಕ್ವಿಂಟಾಲ್ ಗೋದಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಒಬ್ಬ ವಿದ್ಯಾರ್ಥಿಗೆ ತಲಾ 100 ಗ್ರಾಂ ನಷ್ಟು ಲೆಕ್ಕದಲ್ಲಿ 5 ತಿಂಗಳ ಬಾಕಿ ಸೇರಿ 730 ಕ್ವಿಂಟಾಲ್ ಆಹಾರ ಸಾಮಗ್ರಿ ನೀಡಲಾಗಿದೆ ಎಂದು ಗುಬ್ಬಿ ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಯೋಗಾನಂದ್ ತಿಳಿಸಿದರು. ಪ್ರತಿ ಶಾಲೆಯಲ್ಲಿ ಆಹಾರ ತಯಾರಿಸಲು ಅಡುಗೆಯವರು ಹಾಗೂ ಸಹಾಯಕರು ಕೆಲಸ ಮಾಡುತ್ತಿದ್ದು ಕಳೆದ 6 ತಿಂಗಳಿಂದ ಇವರಿಗೆ…
ಮಾಯಸಂದ್ರ: ಕಳೆದ ಕೆಲವು ದಿನಗಳಿಂದ ಖಾಲಿ ಇದ್ದ ಮಾಯಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ “ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ” ( SDMC )ಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ಸರ್ವಾನುಮತದಿಂದ ಅವಿರೋಧವಾಗಿ ಕರಿಬಸವಪ್ಪನವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆಮಾಡಿದ್ದಾರೆ. ಉಪಾಧ್ಯಕ್ಷರಾಗಿ ಕಲಾವತಿಯವರು ಆಯ್ಕೆಯಾಗಿದ್ದಾರೆ. ಈ ವೇಳೆ ಮುಖ್ಯೋಪಾಧ್ಯಾಯರಾದ ಶಿವಲಿಂಗೇಗೌಡರು ಮತ್ತಿತರರು ಉಪಸ್ಥಿತರಿದ್ದರು. ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ಭಾರತದಾದ್ಯಂತ ನಿರ್ಗತಿಕರನ್ನು ಸಂಕಷ್ಟಕ್ಕೆ ಸಿಲುಕುತ್ತಿರುವ ಮಾರಕ ಕೊರೊನಾ ರೋಗದ ಸಂಕಷ್ಟ ಪರಿಸ್ಥಿತಿಯ ಎರಡೂ ಅಲೆಗಳ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದು, ಕೊರೊನಾ 3ನೇ ಅಲೆಯು ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದ್ದು ಈ ಬಾರಿ ತಾಲ್ಲೂಕಿನ ಮಕ್ಕಳ ಕಡೆ ಹೆಚ್ಚು ಗಮನ ಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್ ಹೇಳಿದರು. ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ 48 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಚಿಕಿತ್ಸೆ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೋಟರಿ, ರೆಡ್ ಕ್ರಾಸ್ ಸಂಸ್ಥೆಗಳು ಸಮನ್ವಯ ಸಾಧಿಸಿ, ಜನತೆಗೆ ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದ್ದು, ರೆಡ್ ಕ್ರಾಸ್ ಸಂಸ್ಥೆಗೆ ತಾಲ್ಲೂಕು ಆಡಳಿತದಿಂದ ನಿವೇಶನಕ್ಕೆ ಶಿಫಾರಸ್ಸು ಮಾಡಲಾಗಿದ್ದು, ನಮ್ಮ ಇಲಾಖೆಯಿಂದ ಎಲ್ಲಾ ತರಹದ ಸಹಕಾರ ನೀಡಲಾಗುವುದು ಎಂಬುದಾಗಿ ಹೇಳಿದರು. ತಾಲ್ಲೂಕು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆರೋಗ್ಯ ಸುರಕ್ಷಿತೆಗಾಗಿ ಕೋವಿಡ್ ಲಸಿಕೆಯನ್ನು ಪಡೆಯುವ ಜೊತೆಗೆ ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಮೌಳಿ ಹೇಳಿದರು. ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಹಾಗೂ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಸಿಬ್ಬಂದಿವರ್ಗದ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ಚಂದ್ರಮೌಳಿ, ಸುರಕ್ಷಾ ಅಧಿಕಾರಿಗಳಾದ ಮೋಹನ್, ಶೀಲ, ನಿರೀಕ್ಷಣ ಅಧಿಕಾರಿ ಚಂದ್ರಶೇಖರ್, ವಿವೇಕ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು.
ಮಧುಗಿರಿ : ಜಿಲ್ಲೆಯ ಎಲ್ಲಾ ಹಿರಿಯ ಸಹಕಾರಿಗಳ ಸಹಕಾರದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ನನ್ನ ಗೆಲುವು ಸಾಧ್ಯವಾಯಿತು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು. ಪಟ್ಟಣದ ತುಮುಲ್ ಉಪ ಕೇಂದ್ರದ ಕ್ಷೀರಭವನದಲ್ಲಿ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ಗೆ ಆಯ್ಕೆಯಾದ ಆರ್.ರಾಜೇಂದ್ರ ರವರಿಗೆ ಅಭಿನಂದನಾ ಕಾರ್ಯಕ್ರಮ, ಡೈರಿ-ಕ್ಯಾಲೆಂಡರ್ ಬಿಡುಗಡೆ ಹಾಗೂ ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರಿಗಳ ಮೂಲಕ ಯುವ ಸಹಕಾರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿರುವುದು ಖುಷಿ ತಂದಿದೆ ಎಂದರು. ನಮ್ಮ ತಾಲೂಕು ಉಪವಿಭಾಗವಾಗಿದ್ದು, ತುಮುಲ್ ವತಿಯಿಂದ ವಿದ್ಯಾರ್ಥಿನಿಯರ ಹಾಸ್ಟೆಲ್ ನ್ನು ಮಧುಗಿರಿಯಲ್ಲಿ ನಿರ್ಮಿಸಿ ವಿದ್ಯಾಭ್ಯಾಸಕ್ಕೆ ಅನೂಕೂಲ ಮಾಡಿಕೊಡಬೇಕಾಗಿದೆ ಎಂದ ಅವರು, ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ ಬದ್ಧವಾಗಿದ್ದೇನೆ. ಜಿಲ್ಲಾ ಬ್ಯಾಂಕ್ ನ ವತಿಯಿಂದ ಹಸು ಸಾಕಾಣಿಕೆಗಾಗಿ 32 ಜನರಿಗೆ 1ಕೋಟಿ 75 ಲಕ್ಷ ರೂ. ಗಳ ಸಾಲ ಮಂಜೂರು ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ನಲ್ಲಿ ಸಾಲ ಪಡೆದು ಮೃತಪಟ್ಟವರಿಗೆ ನೀಡಲಾಗುತ್ತಿದ್ದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಜ. 11 ರಂದು ಬೆಳಗ್ಗೆ ಶಾಸಕರ ಉಪಸ್ಥಿತಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೇ ತಾವುಗಳು ಖುದ್ದು, ಈ ಸಭೆಗೆ ಆಗಮಿಸಿ, ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ಸೂಚಿಸಿದ್ದಾರೆ. ರಾಷ್ಟ್ರೀಯ ಹಬ್ಬಗಳ ಕಾರ್ಯಕ್ರಮಗಳಲ್ಲಿ ಹಾಗೂ ಪೂರ್ವಭಾವಿ ಸಭೆಗಳಿಗೆ ಹಲವಾರು ಅಧಿಕಾರಿಗಳು ಭಾಗವಹಿಸದಿರುವುದು ಕಂಡು ಬಂದಿದ್ದು, ಜನಪ್ರತಿನಿಧಿಗಳು, ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಈ ಅಧಿಕಾರಿಗಳ ಗೈರು ಹಾಜರಿ ಬಗ್ಗೆ ತುಂಬಾ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ಇನ್ನು ಮುಂದೆ ಇಂತಹ ಪ್ರಸಂಗಗಳಿಗೆ ಅವಕಾಶ ನೀಡದೇ ಅಧಿಕಾರಿಗಳೇ ಖುದ್ದಾಗಿ ಪೂರ್ವಭಾವಿ ಸಭೆಯಲ್ಲಿ ಬಾಗವಹಿಸಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕೆ ತಪ್ಪಿದಲ್ಲಿ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಅನಿವಾರ್ಯವಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು. ಹಾಗೆಯೇ ಈ ಪೂರ್ವಭಾವಿ…
ಚಿತ್ರದುರ್ಗ:ಐತಿಹಾಸಿಕ ಮೇಕೆದಾಟು ಪಾದಯಾತ್ರೆಯ ಎರಡನೇಯ ದಿನದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ವಕ್ತರಾರು ಹಾಗೂ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಚಳ್ಳಕೆರೆ ತಾಲೂಕಿನ ಶಾಸಕರಾದ ಟಿ. ರಘುಮೂರ್ತಿ, ವೆಂಕಟರಮಣಪ್ಪ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy