Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ಕೆಪಿಎಸ್ ಶಾಲೆಗಳಲ್ಲಿ ಆ ಕ್ಷೇತ್ರದ ಶಾಸಕರನ್ನು ಅಧ್ಯಕ್ಷರನ್ನಾಗಿಸಿರುವ ತಿದ್ದುಪಡಿ ಆದೇಶ ನಿಯಮ ಬಾಹಿರವಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾಪೋಷಕರಾದ ಪಿ.ನಿರಂಜನಾರಾಧ್ಯ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಯವರೆಗೆ ಗುಣಾತ್ಮಕ ಶಿಕ್ಷಣ ಒದಗಿಸಲು ಪ್ರಾರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಈ ಹಿಂದೆ ಶಿಕ್ಷಣ ಹಕ್ಕು ಕಾಯಿದೆ ಹಾಗು ನಿಯಮಗಳ ಅನ್ವಯ ಪಾಲಕರಿಂದ ಆಯ್ಕೆಯಾದ ಪೋಷಕ ಪ್ರತಿನಿಯೊಬ್ಬರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ 2021 ಅಕ್ಟೋಬರ್ 26ರ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿತ್ತು.ಈ ತೀರ್ಮಾನ ನಿಯಮ ಮತ್ತು ಸುತ್ತೋಲೆಗಳ ಅನ್ವಯ ಕ್ರಮಬದ್ಧವಾಗಿತ್ತು. ಅಧ್ಯಕ್ಷರ ಜೊತೆಗೆ ಕ್ಷೇತ್ರದ ಶಾಸಕರು ಸಮಿತಿಯಲ್ಲಿ ಗೌರವಾಧ್ಯಕ್ಷರಾಗಿ ಇರುವಂತೆ ತಿಳಿಸಲಾಗಿತ್ತು. ಶಾಲೆಗಳ ಅಭಿವೃದ್ಧಿಗೆ 2 ಕೋಟಿ ರೂ. ಹಣ ಮಂಜೂರಾದ ಸುದ್ದಿ ಕೇಳಿದಾಕ್ಷಣ ಶಾಸಕರು ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ಸರಕಾರದ ಮೇಲೆ ಒತ್ತಡ ಹಾಕಿ, ಕ್ರಮಬದ್ಧವಾದ ಹಿಂದಿನ ತೀರ್ಮಾನವನ್ನು ಅಸಿಂಧುಗೊಳಿಸಿದ್ದಾರೆ.2022ರ ಜನವರಿ…
ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಒತ್ತಾಯಿಸಿದರು. ನನಗೆ ಮಹಿಳೆ ಗೊತ್ತೇ ಇಲ್ಲ ಎಂದು ಹೇಳುವ ಶಾಸಕರು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ಗೆ ತಮ್ಮ ಪತ್ನಿಯನ್ನು ಕರೆದುಕೊಂಡು ಮಾತುಕತೆಗೆ ಬಂದಿದ್ದಾದರೂ ಏಕೆ? ಪರಿಚಯವಿಲ್ಲ ಎಂದ ಮೇಲೆ ಬರುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. ನಾನು ಶಾಸಕರಿಗೆ ಯಾವುದೇ ರೀತಿಯಲ್ಲೂ ಬ್ಲಾಕ್ಮೇಲ್ ಮಾಡುತ್ತಿಲ್ಲ. ಪ್ರಸ್ತುತ ನಾನು ಬ್ಯೂಟಿಪಾರ್ಲರ್ ನಡೆಸುತ್ತಿದ್ದೇನೆ.…
ತುಮಕೂರು: ತುಮಕೂರು ಜಿಲ್ಲಾ ಪಂಚಾಯತ್ ತುಮಕೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಶಾಂತಾರಾಮ ಕೆ.ಜಿ ನಿವೃತ್ತ ಐ.ಎ.ಎಸ್. ಅಧಿಕಾರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಂತಾರಾಮ ಕೆ.ಜಿ. ಅವರ ನಿಧನದ ಹಿನ್ನೆಲೆಯಲ್ಲಿ, ಸಾರ್ವಜನಿಕರು ತೀವ್ರ ನೋವು ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಶಾಂತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ತಾಲೂಕಿನ ವೈ.ಎನ್. ಹೊಸಕೋಟೆ ನಾಡ ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿಲ್ಲ. ಸಾರ್ವಜನಿಕರು ದಾಖಲೆಗಳನ್ನು ಪಡೆದುಕೊಳ್ಳಲು ಕಟ್ಟಡ ಸೈಡಿನ ಕಿಟಕಿಯಲ್ಲಿ ರಣ ಬಿಸಿಲಿನಲ್ಲಿ ಕ್ಯೂ ನಿಲ್ಲುವಂತಹ ಸ್ಥಿತಿ ಎದುರಾಗಿದೆ. ಈ ಸಂಬಂಧ ಕೂಡಲೇ ಇದಕ್ಕೆ ಸಂಬಂಧ ಪಟ್ಟವರು ಸೂಕ್ತ ವ್ಯವಸ್ಥೆಯನ್ನು ಮಾಡಿಕೊಡಬೇಕು. ನಾಡ ಕಚೇರಿಯಲ್ಲೇ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಕೊಡಲು ಸಾಧ್ಯವಾಗದವರು ಇನ್ನು ಜನರಿಗೆ ಏನು ಸೇವೆ ನೀಡುತ್ತಾರೆ ಎನ್ನುವ ಪ್ರಶ್ನೆಗಳನ್ನು ಇದೀಗ ಸಾರ್ವಜನಿಕರು ಕೇಳುವಂತಾಗಿದೆ. ಒಂದೋ ಕಚೇರಿಯೊಗೆ ಕರೆದು ದಾಖಲೆಗಳನ್ನು ಕೊಡಬೇಕು. ಸಾರ್ವಜನಿಕರನ್ನು ಬಿಸಿಲಲ್ಲಿ ನಿಲ್ಲಿಸಿ ಅಧಿಕಾರಿಗಳು ನೆರಳಲ್ಲಿ ಕುಳಿತು ನಡೆಸುತ್ತಿರುವ ದರ್ಬಾರ್ ಮೊದಲು ನಿಲ್ಲಿಸಬೇಕು. ನೀವು ಜನರ ಸೇವಕರೇ ಹೊರತು, ಆಳುವ ದೊರೆಗಳಲ್ಲ ಎನ್ನುವುದನ್ನು ಮೊದಲು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಇದೊಂದು ದುರಾಹಂಕಾರದ ಪರಮಾವಧಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಡಾ.ರೆಡ್ಡೀಸ್ ಫೌಂಡೇಶನ್ ತುಮಕೂರು ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 10ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಸಿಸಿ ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾಗೊಂಡಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ 0816-2278488 ಇವರನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹಿರಿಯೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿಯ ದರ್ಬಾರ್ ಹಾಗೂ ಇದರ ವಿರುದ್ಧ ಕ್ರಮಕೈಗೊಳ್ಳದೇ ಅಸಹಾಯಕತೆ ವ್ಯಕ್ತಪಡಿಸುತ್ತಿರುವ ಜಿಲ್ಲಾಡಳಿತದ ವಿರುದ್ಧ ಮಾಜಿ ಸಚಿವ ಡಿ.ಸುಧಾಕರ್ ಹಾಗೂ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆದಿವಾಲ ಗ್ರಾಮದಲ್ಲಿ ರೂ. 25 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಹೈಟೆಕ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಯ ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಶಾಸಕಿಯ ಪತಿಯ ಫೋಟೋವನ್ನು ದೊಡ್ಡದಾಗಿ ಹಾಕಲಾಗಿತ್ತು. ಜೊತೆಗೆ ಶಾಸಕಿ ಮಾಡಬೇಕಾದ ಭಾಷಣವನ್ನು ಅವರ ಪತಿ ಮಾಡಿದ್ದರು ಇದರ ಬಗ್ಗೆ ಕ್ರಮಕೈಗೊಳ್ಳಬೇಕಾದ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ, ನಾನು ಜಿಲ್ಲಾಧಿಕಾರಿಯಾಗಿದ್ದರೂ ಬಹಳ ಅಸಹಾಯಕಳಾಗಿದ್ದೇನೆ ಎಂದು ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಖಾದಿರಮೇಶ್ ಹೇಳಿದರು. ಶಾಸಕಿ ಪೂರ್ಣಿಮಾಶ್ರೀನಿವಾಸ್ ರವರ ಪತಿ ಡಿ.ಟಿ ಶ್ರೀನಿವಾಸ್ ರವರು ಹಿರಿಯೂರು ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ಪಿ ಡಿ ಓ ಅಧಿಕಾರಿಗಳನ್ನು ಕರೆದುಕೊಂಡು, …
ಕೋಮುವಾದದ ವಿಷ ಕಾರಲು ಕೇಸರಿ ವಸ್ತ್ರವನ್ನು ಬಳಸುತ್ತಿರುವ ಹಿಂದೂ ಮತೀಯವಾದಿಗಳು ತಿಳಿದುಕೊಳ್ಳಬೇಕಾದ ವಾಸ್ತವ ಸಂಗತಿ ಏನೆಂದರೆ…, ಕೇಸರಿ ವಸ್ತ್ರ ಮೂಲದಲ್ಲಿ ಬುದ್ಧಗುರು, ಬಸವಾದಿ ಪ್ರಮಥ ಶರಣರು, ಪಂಚಗಣಾಧೀಶರು ಹಾಗೂ ದೇಶಿ ಯೋಗಧಾರೆಯ ಸಾಧು ಸನ್ಯಾಸಿ ಯೋಗಿಗಳು ಧರಿಸುತ್ತಿದ್ದ ಧರ್ಮಾತೀತ ವಸ್ತ್ರವಾಗಿತ್ತು. ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮದ ದೀಕ್ಷೆಯನ್ನು ಪಡೆದ ಬಳಿಕ ಬುದ್ಧಗುರುವಿನಂತೆ ಇದೇ ಕೇಸರಿ ಚೀವರವನ್ನು ಧರಿಸಿದ್ದರು. ಆಗೆಲ್ಲಾ ಕೇಸರಿ ಶಾಲು ಹಿಂದೂ ಮತೀಯವಾದಿಗಳ ಲಾಂಛನವಾಗಿರಲಿಲ್ಲ. ಇಂತಹ ಕೇಸರಿಯನ್ನು ಹಿಂದೂಧರ್ಮದ ಗುರುತಿನ ಬಣ್ಣದ ವಸ್ತ್ರವನ್ನಾಗಿ ಹೈಜಾಕ್ ಮಾಡಿರುವ ಹಿಂದೂ ಮತೀಯವಾದಿಗಳು ಹಚ್ಚುತ್ತಿರುವ ಬೆಂಕಿಗೆ ವಿದ್ಯಾರ್ಥಿಗಳು ದೀಪದ ಹುಳುಗಳಂತೆ ಆಕರ್ಷಿತವಾಗಬಾರದು. ದೀಪದ ಹುಳುಗಳು ರೆಕ್ಕೆ ಸುಟ್ಟು ಬೀಳುವಂತೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಸುಟ್ಟುಕೊಳ್ಳಬಾರದು. ನ್ಯಾಯಾಲಯವು ಬುದ್ಧಗುರು ಬಸವಣ್ಣ ಅಂಬೇಡ್ಕರ್ ಬಳಸಿರುವ ಕೇಸರಿ ವಸ್ತ್ರವನ್ನು ಕೋಮುವಾದವನ್ನು ಪ್ರಚೋದಿಸುವ ಲಾಂಛನವನ್ನಾಗಿ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಬಳಸಿಕೊಳ್ಳಬಾರದೆಂದು ನಿಷೇಧ ಹೇರಲು ನಾವು ಸರ್ಕಾರವನ್ನು ಒತ್ತಾಯಿಸುವ ಅಗತ್ಯವಿದೆ. ಡಾ.ವಡ್ಡಗೆರೆ ನಾಗರಾಜಯ್ಯ 8722724174 ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಮಧುಗಿರಿ: ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ರಥಸಪ್ತಮಿ ಅಂಗವಾಗಿ’ ಬ್ರಹ್ಮ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಮಂಗಳವಾರ ನಡೆಸಲಾಯಿತು. ಉತ್ಸವಮೂರ್ತಿಯನ್ನು ದೇವಸ್ಥಾನದ ಪ್ರಾಂಗಣದಲ್ಲಿ ಮೂರು ಬಾರಿ ಪ್ರಾಕಾರೋತ್ಸವ ನಡೆಸಿ ದೇವಸ್ಥಾನದ ಮುಂಭಾಗದಲ್ಲಿ ರಥೋತ್ಸವಕ್ಕೆ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಮಂಗಳವಾದ್ಯಗಳೊಂದಿಗೆ ತಂದು ಕುಳ್ಳಿರಿಸಲಾಯಿತು. ಪೂಜೆ ನಡೆಸಿ ರಥವನ್ನು ಎಳೆಯಲಾಯಿತು. ಈ ವೇಳೆ ಭಕ್ತರು ಬಾಳೆಹಣ್ಣನ್ನು ರಥದ ಮೇಲೆ ಎಸೆದು ತಮ್ಮ ಇಷ್ಟಾರ್ಥಗಳು ಸಿದ್ದಿಗಾಗಿ ಪ್ರಾರ್ಥಿಸಿಕೊಂಡರು. ಈ ವೇಳೆ ಧಾರ್ಮಿಕ ಮುಖಂಡ ಡಾ.ಎಂ.ಜಿ. ಶ್ರೀನಿವಾಸ ಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ಶಂಕರ ಸೇವಾ ಸಮಿತಿಯ ಬಿ.ಆರ್.ಸತ್ಯನಾರಾಯಣ, ಕಲಾರಂಗದ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ, ಪುರಸಭಾ ಮಾಜಿ ಅಧ್ಯಕ್ಷ ಎಂ.ವಿ.ಗೋವಿಂದರಾಜು, ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್, ರೆವಿನ್ಯೂ ಇನ್ಸ್ ಪೆಕ್ಟರ್ ಜಯರಾಮಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ ನಾಗೇಶ್, ಪುರಸಭಾ ಸದಸ್ಯ ಲಾಲಾಪೇಟೆ ಮಂಜುನಾಥ್, ಮಾಜಿ ಸದಸ್ಯ ರುಗಳಾದ ಆರ್.ಎಲ್.ಎಸ್. ರಮೇಶ್ ,ಮಂಜುನಾಥ್, ಸೇವಾಕರ್ತರಾದ ದೂಲಿ ಬಾಬು, ಯತೀಶ್ ಬಾಬು ,ಎಸ್ ಬಿ ಐ ಗೋಪಾಲ್, ಜಿ. ಆರ್.ಧನ್…
ಪಾವಗಡ: ತಾಲ್ಲೂಕು ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಮ್ಮನಹಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದ ಸಿಸಿ ರಸ್ತೆ, ಸಿ ಆರ್ ಪಾಳ್ಯ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಸಿಸಿ ರಸ್ತೆ, ಎ ಎಚ್ ಪಾಳ್ಯ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಸಿಸಿ ರಸ್ತೆ, ಗುಜ್ಜನಡು ಗ್ರಾಮದಲ್ಲಿ 15 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ವೆಂಕಟರಮಣಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮುಖಂಡರುಗಳಾದ ಬೋಜರಾಜ್, ನಂಜುಂಡಪ್ಪ,ಸೀನಪ್ಪ, ಡಿ.ಮಂಜುನಾಥ್, ಕೆ.ಎಚ್. ಪ್ರಕಾಶ್, ಸ್ವಾರಣ್ಣ,ಅನಿಲ್ ಕುಮಾರ್, ಜಿ.ಸಿ.ದೇವರಾಜ್,ಗುತ್ತಿಗೆದಾರರಾದ ಕೋಡೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಸುಜಿತ್,ಮಹಿಳಾ ನಾಯಕಿ ನಾಗಮ್ಮ, ಪೂಜಾರಪ್ಪ, ಸಾಮಾಜಿಕ ಜಾಲತಾಣ ಸದಸ್ಯ ಪಾಪಣ್ಣ ವಿ.ಹೆಚ್. ಪಾಳ್ಯ ಸೇರಿದಂತೆ ಲೋಕೋಪಯೋಗಿ ಇಲಾಖೆ ಎಇಇ ಅನಿಲ್ ಕುಮಾರ್, ಸತ್ಯೆಂದ್ರ ಪ್ರಸಾದ್ ಮತ್ತಿತರರು ಹಾಜರಿದ್ದರು. ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಸರಗೂರು: ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ಸೇವೆಯಿಂದ ವಜಾಗೊಳಿಸಿ ಬೃಹತ್ ಪ್ರತಿಭಟನೆ ನಡಿಸಲಾಯಿತು. ಸರಗೂರು ಪಟ್ಟಣದ ಅಂಗಡಿ ಮುಗ್ಗಟ್ಟು ಮಾಲಿಕರು ಸೇರಿದಂತೆ, ಸರಗೂರು ಬಂದ್ ಗೆ ಸಂವಿಧಾನ ಸಂರಕ್ಷಣಾ ಸಮಿತಿ ವರ್ತಕರ ಮಂಡಳಿ ಕರೆ ನೀಡಿದ ಬಳಿಕ ಎಲ್ಲಾ ಬಂದ್ ಗೆ ಬೆಂಬಲ ನೀಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಶುರುವಾದ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅನುಯಾಯಿಗಳು , ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರು ಭಾರೀ ಜನಸಂಖ್ಯೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಮತ್ತು ಗಡಿಪಾರು ಮಾಡಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ, ಪ.ಪಂ. ಸದಸ್ಯ ಎಸ್.ಎಲ್.ರಾಜಣ್ಣ, ಮಲ್ಲಿಕಾರ್ಜುನ ಗೌಡ ಕಿಡಿಗೇಡಿ, ದೇಶದ್ರೋಹಿ, ಮನುವಾದಿ ಮನಸ್ಥಿತಿಯ ನ್ಯಾಯಾಧೀಶ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರನ್ನು ತಕ್ಷಣವೇ ವಜಾಗೊಳಿಸಿ, ಗಡಿಪಾರು ಮಾಡಲು ಒತ್ತಾಯಿಸಿದರು. ಮೈಸೂರು…