Subscribe to Updates
Get the latest creative news from FooBar about art, design and business.
- ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
- ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
- ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
- DIGITAL ARREST ಬಗ್ಗೆ ಎಚ್ಚರವಿರಲಿ!
- ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
- ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
- ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
- “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
Author: admin
ತುಮಕೂರು: 30 ವರ್ಷಗಳ ಕಾಲ ಕನ್ನಡ ಉಪನ್ಯಾಸಕನಾಗಿ ಕೆಲಸದ ಜೊತೆಗೆ ಬೋಧನೆ ಮಾಡಿಕೊಂಡು ಬಂದಿದ್ದು, ನಂಬರ್ 21ರಂದು ನಡೆಯುವ ಕಸಾಪದ ತುಮಕೂರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಪಿಯುಸಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆಎಸ್ ಸಿದ್ದಲಿಂಗಪ್ಪ ನವರು ತಿಳಿಸಿದರು. ತಿಪಟೂರು ಜಯದೇವ ವಿದ್ಯಾರ್ಥಿನಿಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ಗುಬ್ಬಿ ತಾಲೂಕು ಕಸಾಪ ಅಧ್ಯಕ್ಷರಾಗಿ ಕೆಲಸ ಮಾಡಿದೆ. ವಾರ್ಷಿಕವಾಗಿ ಸದಸ್ಯರು ಸಮ್ಮೇಳನವನ್ನು ನಡೆಸುವುದು ಕನ್ನಡ ವಿದ್ಯಾರ್ಥಿಗಳು ಉಪನ್ಯಾಸಕರು ರನ್ನು ಕೈಜೋಡಿಸಿ ಪ್ರತಿ ಗ್ರಾಮದ ನಿತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಜೊತೆಗೆ ಹೋಬಳಿ ತಾಲೂಕು ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ ಎಂದರು. ರಾಮನಗರದಲ್ಲಿರುವ ಜನಪದ ಲೋಕದಂತೆ ತುಮಕೂರು ಜಿಲ್ಲೆಯಲ್ಲಿ ಕನ್ನಡ ಕಲಾ ಗ್ರಾಮವನ್ನು ಸ್ಥಾಪಿಸುವ ಮೂಲಕ ಜಿಲ್ಲೆಯ ಸಾಹಿತಿಗಳು ಬರಹಗಾರನನ್ನು ನೆನಪಿಸುವಂತೆ ನಾನು ಮಾಡುತ್ತೇನೆ ಎಂದು ಅವರು ಹೇಳಿದರು. ಈ ವೇಳೆ ಹೊನ್ನವಳ್ಳಿ ಪ್ರಾಂಶುಪಾಲರಾದ ಶಿವಕುಮಾರ್ ದಯಾನಂದ್ ಶಿಕ್ಷಕರು ಕಂಟಲಗೆರೆ ನಾಗರಾಜು ಮತ್ತಿತರು ಇದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್…
ಹೆಚ್ ಡಿ ಕೋಟೆ: ಆಂಬ್ಯುಲೆನ್ಸ್ ಸೇವೆ ಇಲ್ಲದೆ ಬೊಮ್ಮಲಾಪುರ ಹಾಡಿಯ ಬಾಣಂತಿ ರಂಜಿತಾ ಅವರು ಹೆರಿಗೆಗಾಗಿ ಒಂದು ಕಿ.ಮೀ ದೂರದ ತನಕ ನಡೆದಿರುವ ಘಟನೆ, ಪತ್ರಿಕೆಯಲ್ಲಿ ವರದಿಯಾದ ಬಳಿಕ ತಾಲೂಕು ಆರೋಗ್ಯಾಧಿಕಾರಿ ಡಾ” ಟಿ. ರವಿಕುಮಾರ್ ಮತ್ತು ತಂಡದವರು, ಇಂದು ರಂಜಿತಾ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು ಬೊಮ್ಮಲಾಪುರ ಹಾಡಿಯ ರಸ್ತೆಗೆ 300 ಮೀಟರ್ ನಷ್ಟು ಜಲ್ಲಿ- ಕಲ್ಲುಗಳನ್ನು ಹಾಕಿರುವುದರಿಂದ ಆಂಬ್ಯುಲೆನ್ಸ್ ಮನೆಯ ತನಕ ಬರಲು ಸಾಧ್ಯವಾಗಿರಲಿಲ್ಲ ಎಂದರು. ನಡೆದುಕೊಂಡು ಬಂದಂತಹ ರಂಜಿತಾ ಅವರನ್ನು ಗ್ರಾಮದ ಜನತೆ ಹಾಗೂ ಆಶಾಕಾರ್ಯಕರ್ತೆಯರ ಸಹಕಾರದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಾಯಿತು ಎಂದು ಹೇಳಿದರು. ತಾಯಿ ಮತ್ತು ಮಗುವಿನ ಆರೋಗ್ಯವನ್ನು ವಿಚಾರಿಸಿ, ತಾಯಿಗೆ ರಕ್ತ ಕಡಿಮೆಯಾಗಿರುವುದರಿಂದ ರಕ್ತ ಪರೀಕ್ಷೆ ಮಾಡುವಂತೆ ಸ್ಥಳೀಯ ವೈದ್ಯಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಆಶಾಕಾರ್ಯಕರ್ತೆಯರು ಹಾಗೂ ಇನ್ನಿತರರು ಇದ್ದರು. ವರದಿ: ಚಂದ್ರ ಹಾದನೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…
ಕೊರಟಗೆರೆ: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಅವ್ಯವಸ್ಥೆ ವಿರುದ್ಧ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಅವ್ಯವಸ್ಥೆಯಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತವಾದ ಪರಿಣಾಮವಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ದೀಪಾವಳಿ ಪ್ರಯುಕ್ತ ಸರಣಿ ರಜಾ ಇರುವ ಕಾರಣ ತಮ್ಮ ಮನೆಗಳಿಗೆ ತೆರೆಳಿದ್ದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಪಟ್ಟಣದ ಡಾ, ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆಯುತ್ತಿದ್ದ ಅವ್ಯವಸ್ಥೆ ಬಗ್ಗೆ ತಂದೆ ತಾಯಿಗಳಿಗೆ ತಿಳಿಸಿದ ಪರಿಣಾಮ ವಿವಿಧ ತಾಲ್ಲೂಕುಗಳಿಂದ ಪೋಷಕರು ಮಕ್ಕಳೊಂದಿಗೆ ಆಗಮಿಸಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ದ ಪ್ರತಿಭಟನೆ ನಡೆಸಿ ವಾಗ್ವಾದಕ್ಕೆ ಇಳಿದಿದ್ದಾರೆ. ಶಾಲೆಯಲ್ಲಿನ ಅವ್ಯವಸ್ಥೆ, ಅಭದ್ರತೆ, ಹುಳು ಬಿದ್ದಿರುವ ಊಟ, ಪ್ರಾಂಶುಪಾಲರು ಭೋದಕವರ್ಗದ ಕಿತ್ತಾಟ ಸೇರಿದಂತೆ ಹಲವು ಸಾಲು ಸಾಲು ದೂರುಗಳ ಕೇಳಿ ಬಂದಿವೆ. ವಿದ್ಯಾರ್ಥಿ ನಿಲಯದ ತಾತ್ಕಾಲಿಕ ಭದ್ರತಾ ಸಿಬ್ಬಂದಿ ಲೋಕೇಶ್ ಅನಗತ್ಯವಾಗಿ ಹೆಣ್ಣು ಮಕ್ಕಳ ಕೊಠಡಿಗೆ ಬಾಗಿಲು ತಟ್ಟಿ ಮುನ್ಸೂಚನೆ ನೀಡದೇ ವಿನಾಕಾರಣ ಬಂದು ತೊಂದರೆ ನೀಡುತ್ತಿರುವುದನ್ನು ಹೆಣ್ಣುಮಕ್ಕಳು ಒಕ್ಕೊರಳಿನಲ್ಲಿ ಖಂಡಿಸಿದರು. ಇಷ್ಟೆಲ್ಲ ಸಮಸ್ಯೆಗಳಿದ್ದರೂ…
ತಿಪಟೂರು: ತಿಪಟೂರು ತಾಲ್ಲೂಕಿನ ಹೋನವಳಿ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರುಗದಹಳ್ಳಿ ಗ್ರಾಮ ದೇವತೆ ಶ್ರೀ ಕೊಲ್ಲಾಪುರದಮ್ಮ ದೇವಸ್ಥಾನದ ಅಭಿವೃದ್ಧಿಗೆ 100000 ರೂ. ಗಳ ಮಂಜೂರಾತಿಯ ಚೆಕ್ಕನ್ನು ಮತ್ತು ರಾಮಮಂದಿರಕ್ಕೆ 65000 ರೂ.ಗಳನ್ನು ಸರ್ಕಾರದ ವತಿಯಿಂದ ಪ್ರಾಥಮಿಕ ಪ್ರೌಢಶಿಕ್ಷಣ ಸಚಿವರಾದ ಬಿಸಿ ನಾಗೇಶ್ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಸದಸ್ಯರು ಉಮಾ ಶಂಕರ್ ಗುರುಗದಹಳ್ಳಿ ಮತ್ತು ಉಮೇಶ್ ಸದಸ್ಯರು ಗುರುಗದಹಳ್ಳಿ ಮತ್ತು ಗ್ರಾಮಸ್ಥ ಮುಖಂಡರು ಹಾಜರಿದ್ದರು ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ತಾಲೂಕಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಪ್ರಾಂಶುಪಾಲರು ವಿತರಿಸಿದರು. ಮತ್ತು ದಿನೇಶ್ ಕುಮಾರ್ ಆರೋಗ್ಯ ಇಲಾಖೆ ಡಿ ದರ್ಜೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಇಂದು ಕಾಲೇಜಿಗೆ ಗ್ರೀನ್ ಬೋರ್ಡ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು. ನಗರಸಭೆ ಅಧ್ಯಕ್ಷರಾದ ರಾಮ್ ಮೋಹನ್ ಮತ್ತು ಡಿ ಗ್ರೂಪ್ ನೌಕರ ದಿನೇಶ್ ಕಾಲೇಜಿನ ಶಿಕ್ಷಕರು ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಬಿಜೆಪಿಯಿಂದ ದಲಿತ ಮುಖ್ಯಮಂತ್ರಿ ಎನ್ನುವ ಮಾತು ಅನಗತ್ಯ. ಸಮಾನತೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷ ದಲಿತರಿಗೆ ಸಿಎಂ ಪದವಿ ನೀಡುವ ಬಗ್ಗೆ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ, ಕಾಂಗ್ರೆಸ್ ನ ಹಿರಿಯ ನಾಯಕ ಜಿ.ಪರಮೇಶ್ವರ್ ಹೇಳಿದರು. ಭಾನುವಾರ ನಡೆದ ಕಾಂಗ್ರೆಸ್ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯುವರು ರಾಜಕಾರಣದ ದೃಷ್ಠಿಯಿಂದ ದಲಿತ ಸಿಎಂ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಕಾಂಗ್ರೆಸ್ ದಲಿತ ನಾಯಕರಿಗೆ ಅವರ ಅರ್ಹತೆ ಆಧಾರದಲ್ಲಿ ಸಂದರ್ಭ ಒದಗಿ ಬಂದಾಗಲೆಲ್ಲ ಉನ್ನತ ಸ್ಥಾನ ಮಾನ ನೀಡಿದೆ. ಮಹಾರಾಷ್ಟ್ರದ ದಲಿತ ನೇತಾರ ಸುಶೀಲ್ ಶಿಂಧೆ ಅವರನ್ನು ರಾಜ್ಯಪಾಲರನ್ನಾಗಿಸಿದ್ದು ಕಾಂಗ್ರೆಸ್ ಎಂದರು. ಮೇದಾವಿ ರಾಜನೀತಿಜ್ಞ ಕೆ.ಆರ್.ನಾರಾಯಣ್ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಸಂವಿಧಾನಕ್ಕೆ ಅಪಮಾನಿಸುವಂತೆ ದಲಿತ ಸಮುದಾಯವನ್ನು ಅನಗತ್ಯವಾಗಿ ಎಳೆದು ತರುವುದು ಬೇಡ ಎಂದು ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417…
ಮತಿಘಟ್ಟ: (ತಿಪಟೂರು ತಾಲ್ಲೂಕು ) ಪುನೀತ್ ರಾಜಕುಮಾರ್ ರವರ ಪುಣ್ಯ ತಿಥಿ ಆಚರಿಸಲಾಯಿತು ಧರ್ಮದರ್ಶಿ ಹಾಗೂ ತಾಲ್ಲೂಕು ಜೆ ಡಿ ಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ ಮತ್ತು ಜೆ ಡಿ ಎಸ್ ಸಿದ್ಧಬಸಪ್ಪ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪುಣ್ಯಾರಾಧನೆ ಅಂಗವಾಗಿ ಅಭಿಮಾನಿಗಳಿಗಾಗಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಪುನೀತ್ ಪತ್ನಿ ಅಶ್ವಿನಿ, ನಟ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಕುಟುಂಬದ ಸದಸ್ಯರು ಆಗಮಿಸಿದ್ದಾರೆ. ಈ ವೇಳೆ ಪುನೀತ್ ಪತ್ನಿ ಅಶ್ವಿನಿ ಅಗಲಿದ ಅಪ್ಪುರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್ ಪಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಡಿವೈಎಸ್ಪಿ ರಮೇಶ (52) ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್ ಬಿ ಮತ್ತು ಡಿವೈಎಸ್ ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್ಪಿ ಜಿ.ರಾಧಿಕಾ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿದ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದ್ದು, ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದಲೇ ಅನ್ನ ಸಂತರ್ಪಣೆ ಆರಂಭವಾಯಿತು. ಒಂದು ಬಾರಿಗೆ ಸುಮಾರು 5 ಸಾವಿರ ಜನರು ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. 4 ಸಾವಿರ ಮಾಂಸಾಹಾರಿ ಹಾಗೂ ಒಂದು ಸಾವಿರ ಸಸ್ಯಹಾರಿ ಕೌಂಟರ್ ಗಳನ್ನು ಸಿದ್ಧಪಡಿಸಲಾಗಿದೆ. 2 ಗೇಟ್ ಗಳಲ್ಲಿ 5 ಸಾವಿರ ಕುರ್ಚಿ ಟೇಬಲ್ ಹಾಕಲಾಗಿದೆ. ಇನ್ನೂ ಅನ್ನ ಸಂತರ್ಪಣೆಗೆ ಸಾಗರ ರೀತಿಯಲ್ಲಿ ಅಪ್ಪು ಫ್ಯಾನ್ಸ್ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ದೊಡ್ಡ ಜನ ಸಮೂಹವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನೂ ಅಭಿಮಾನಿಗಳು ಪ್ಯಾಲೇಸ್ ಗ್ರೌಂಡ್ ಗೆ ಸಾಲಾಗಿ ಬರುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು. ಬಳಿಕ ಅಪ್ಪು ಅಭಿಮಾನಿಗಳಿಗೆ ಊಟ ಬಡಿಸಿದರು. ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅನ್ನ ಸಂತರ್ಪಣೆಯಲ್ಲಿ ಭಾಗವಹಿಸುತ್ತಿದ್ದಾರೆ. ‘ದೊಡ್ಮನೆ’ ಎಂಬ ಪದಕ್ಕೆ ಅರ್ಥ ಬರುವಂತೆಯೇ ಇಂದು ಲಕ್ಷಾಂತರ ಜನರು ಯಾವುದೇ…