Subscribe to Updates
Get the latest creative news from FooBar about art, design and business.
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
- ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
- ದರ್ಶನ್ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ
- ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!
- ಬಂಜಾರ ಭವನ ಉದ್ಘಾಟನೆ: ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ: ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
Author: admin
ಮಧುಗಿರಿ: ತೀವ್ರ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರದಲ್ಲಿ ನಡೆದಿದೆ. ದೊಡ್ಡೇರಿ ಗೊಲ್ಲರಹಟ್ಟಿಯ ಮಂಜುಳ ಎಂಬವರು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ನೋವಿನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಇನ್ ಸ್ಪೆಕ್ಟರ್ ಹನುಮಂತರಾಯಪ್ಪ ಹಾಗೂ ಸಿಬ್ಬಂದಿ , ತಹಸೀಲ್ದಾರ್ ಭೇಟಿ ನೀಡಿದ್ದು, ಘಟನೆಯ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ವೇಳೇ ಗ್ರಾ.ಪಂ. ಸದಸ್ಯ ಮಂಜುನಾಥ ಕುಮಾರ್, ಮುದ್ದರಾಜು, ವಕೀಲರಾದ ಶಿವಣ್ಣ, ರಂಗಸ್ವಾಮಿ, ಗಂಗಾಧರ ಮತ್ತಿತರ ಗ್ರಾಮಸ್ಥರಿದ್ದರು. ವರದಿ: ಮಹಾಲಿಂಗ ಡಿ.ಎಲ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಈ ವರ್ಷ ರಣಜಿ ಟ್ರೋಫಿಯಲ್ಲಿ ತಮ್ಮ ಮೊದಲ ಪ್ರಥಮ ದರ್ಜೆಯ ಋತುವಿಗೆ ಮರಳಿದ ಎಸ್. ಶ್ರೀಶಾಂತ್ (S.Sreesanth) ಅವರು ಎಲ್ಲಾ ರೀತಿಯ ಕ್ರಿಕೆಟ್ ಮಾದರಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್ ನಲ್ಲಿ ನಿವೃತ್ತಿ ಘೋಷಿಸಿದ ಅವರು ಟೀಂ ಇಂಡಿಯಾವನ್ನು ಪ್ರತಿನಿಧಿಸುವುದು ಗೌರವದ ಸಂಗತಿ ಎಂದು ಹೇಳಿದ್ದಾರೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಈ ರಾಜ್ಯಗಳ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚುನಾವಣಾ ಫಲಿತಾಂಶ ಈ ವರ್ಷ ನಡೆಯಲಿರುವ ರಾಷ್ಟ್ರಪತಿ ಚುನಾವಣೆ (President election)ಮೇಲೂ ನೇರ ಪರಿಣಾಮ ಬೀರಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ಮಾರ್ಚ್ 10 ಅಂದರೆ ಇಂದು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ (five state election result). ಇಂದಿನ ಈ ಫಲಿತಾಂಶ 2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ಪಕ್ಷ ಅಥವಾ ಒಕ್ಕೂಟವು ನಿರ್ಣಾಯಕ ಪಾತ್ರ ವಹಿಸಲಿದೆ ಎನ್ನುವುದು ಕೂಡಾ ನಿರ್ಣಯವಾಗಲಿದೆ. ಹೆಚ್ಚಲಿದೆಯೇ ಬಿಜೆಪಿ ಸಂಕಷ್ಟ : ಎಕ್ಸಿಟ್ ಪೋಲ್ ಫಲಿತಾಂಶ (Exit poll 2022 result) ಭವಿಷ್ಯ ನುಡಿದಂತೆ ನಡೆದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಕಷ್ಟ ಎದುರಾಗಲಿದೆ. ಯುಪಿಯಲ್ಲಿ ನಡೆದ ಹಲವು ಎಕ್ಸಿಟ್ ಪೋಲ್ಗಳನ್ನು ವಿಶ್ಲೇಷಿಸಿದರೆ, ಬಿಜೆಪಿ…
ಬಹುನಿರೀಕ್ಷಿತ ‘ಪಂಚ’ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಐದೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಮತದಾರ ಪ್ರಭು ಯಾರಿಗೆ ಆಶೀರ್ವಾದ ಮಾಡಿದ್ದಾನೆಂಬುದು ಇಂದು ತಿಳಿದುಬರಲಿದೆ. ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ತಾಜಾ ಮಾಹಿತಿಯನ್ನು ನಾವು ಇಲ್ಲಿ ನಿಮಗೆ ನೀಡಲಿದ್ದೇವೆ. ಆರಂಭಿಕ ಟ್ರೆಂಡ್ ನ ಪ್ರಕಾರ ಪಂಜಾಬ್ನ ಮುಕೇರಿಯನ್ ವಿಧಾನಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನದಂದು ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಇಂಫಾಲ್ನ ಶ್ರೀ ಗೋವಿಂದಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ದೇಶದ ಮಿನಿ ಮಹಾಚುನಾವಣೆ ಎಂದು ಪರಿಗಣಿಸಲಾಗುತ್ತದೆ. ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಸಿಗಲಿದೆ, ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಕಮಾಲ್ ಮಾಡಿದರೆ, ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ…
ನೆಲಮಂಗಲ: ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 20 ಕಾರ್ಮಿಕರಿಗೆ ತೀವ್ರವಾದ ಗಾಯಗಳಾದ ಘಟನೆ ಇಲ್ಲಿನ ಚಿಕ್ಕ ಪಾಲನಹಳ್ಳಿ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ. ತಾಲ್ಲೂಕಿನ ಮಾರತ್ಹಳ್ಳಿ ಬಳಿಯಿರುವ ಟೆಕ್ಸ್ ಪೋರ್ಟ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹೆಣ್ಣುಮಕ್ಕಳು ಸಂಜೆ ಕೆಲಸ ಮುಗಿಸಿ ತಮ್ಮ ಊರುಗಳಿಗೆ ಈ ಬಸ್ಸಿನಲ್ಲಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಬಸ್ಸಿನ ಚಾಲಕ ಮದ್ಯದ ಅಮಲಿನಲ್ಲಿದ್ದು, ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದಾನೆ ಎನ್ನಲಾಗಿದೆ. ಚಿಕ್ಕ ಪಾಲನಹಳ್ಳಿ ಗೇಟ್ ಬಳಿ ಎದುರಿನಿಂದ ಬಂದ ಕಾರನ್ನು ತಪ್ಪಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ 3 ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಮಹಿಳೆಯರಿಗೆ ಗಾಯಳಾಗಿದ್ದು, ಕೆಲವು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಬಸ್ಸಿನಲ್ಲಿದ್ದ ಮಹಿಳೆಯರು ಎಷ್ಟೇ ಹೇಳಿದರೂ ಕೇಳದ ಚಾಲಕ, ನಿಮ್ಮೆಲ್ಲರ ಪ್ರಾಣ ನನ್ನ ಕೈಲಿದೆ ಎಂದು ಉಡಾಫೆ ಉತ್ತರವನ್ನು ನೀಡಿ, ಕುಡಿದ ಅಮಲಿನಲ್ಲಿ ಅತಿ ವೇಗದಿಂದ ಚಾಲನೆ ಮಾಡಿದ್ದರಿಂದ ಈ ಅವಘಡ…
ಹಿರಿಯೂರು: ತಾಲ್ಲೂಕಿನ ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ, ಐ.ಕ್ಯೂ.ಎ.ಸಿ, ಎನ್.ಎಸ್.ಎಸ್., ಕ್ರೀಡೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್ ಹಾಗೂ ರೋವರ್ಸ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ , ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗಿ ಉಳಿಯದೇ, ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ, ಗೌರವ ಹಾಗೂ ಸ್ವಾತಂತ್ರ್ಯ ಸಿಗುವಂತಾಗಬೇಕು ಎಂದು ಹೇಳಿದರು. ನಮ್ಮ ಭಾರತ ದೇಶದಲ್ಲಿ ಮಹಿಳೆಯರಿಗೆ ತಮ್ಮದೇ ಆದ ಸ್ಥಾನಮಾನ, ಗೌರವಗಳಿದ್ದು, ಸಮಾಜದಲ್ಲಿ ಮಹಿಳೆಯರನ್ನು ಅತ್ಯಂತ ಗೌರವಪೂರ್ಣವಾಗಿ ಕಾಣಲಾಗುತ್ತಿದೆ. ಆದರೂ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಇನ್ನು ಅನೇಕ ಮೂಢನಂಬಿಕೆ ಆಚರಣೆಗಳು, ಕಟ್ಟುಪಾಡುಗಳಿದ್ದು, ಈ ಎಲ್ಲಾ ಆಚರಣೆಗಳು ಹಾಗೂ ಕಟ್ಟುಪಾಡುಗಳಿಂದ ಮಹಿಳೆಯರು ಹೊರಬರಬೇಕು ಎಂದು ಕರೆ ನೀಡಿದರು. ಸಮಾಜದಲ್ಲಿ ಮಹಿಳೆಯರು ಮತ್ತು ಪುರುಷರು ಒಂದು ಕುಟುಂಬಕ್ಕೆ ಎರಡು ಕಣ್ಣುಗಳಿದ್ದಂತೆ, ಆದರೂ, ಕೆಲವು ಸಂದರ್ಭದಲ್ಲಿ ಪುರುಷರಿಂದ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಮಹಿಳೆಯರ …
ಕೊರಟಗೆರೆ: ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಿಳಾ ಘಟಕದ ವತಿಯಿಂದ ಸರಿಗಮಪ ಖ್ಯಾತಿಯ ಮಧುಗಿರಿ ಮೂಲದ ರತ್ನಮ್ಮ ಮಂಜಮ್ಮ ರವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು . ನಂತರ ರತ್ನಮ್ಮ ಜಯಮ್ಮ ರಿಂದ ಮಾದೇಶ್ವರನ ಗೀತೆಯನ್ನು ಹಾಡುವಂತೆ ಬಂದಿದ್ದ ಸಾರ್ವಜನಿಕರು ಕೇಳಿಕೊಂಡರು ಸಾರ್ವಜನಿಕರ ಬೇಡಿಕೆಯಂತೆ ರತ್ನಮ್ಮ ಮಂಜಮ್ಮ ಮಾದೇಶ್ವರನ ಗೀತೆಯನ್ನು ಹಾಡಿ ಬಂದಿದ್ದ ಸಾರ್ವಜನಿಕರಿಗೆ ಮನರಂಜಿಸಿದರು . ನಂತರ ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಮಾತನಾಡಿ, ನಾಡಿನ ಸಮಸ್ತ ಮಹಿಳೆಯರಿಗೆ ಮಹಿಳಾ ದಿನಾಚರಣೆಯ ಶುಭಾಶಯವನ್ನು ಕೋರಿ ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಒಂದು ಹೆಣ್ಣು ಇದ್ದೇ ಇರುತ್ತಾಳೆ ಆ ಮಹಾತಾಯಿಯ ತಾಳ್ಮೆಗೆ ನಾವೆಲ್ಲರೂ ಶರಣಾಗಲೇಬೇಕು ನಮ್ಮನ್ನು ಹೆತ್ತು ಹೊತ್ತು ಸಾಕಿ ಸಲುಹಿ ನಮ್ಮದೊಂದು ಗುರಿಯತ್ತ ಮುಟ್ಟಿಸುವಲ್ಲಿ ಹೆಣ್ಣಿನ ಮಹತ್ವ ಬಹು ದೊಡ್ಡದು ಎಂದು ತಿಳಿಸಿದರು . ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತಿಪಟೂರು: ತುಮಕೂರಿನಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿ ಯೋಜನೆ ಪ್ರಾರಂಭಗೊಂಡಿದೆ ಆದರೆ ರಾಷ್ಟ್ರೀಯ ಹೆದ್ದಾರಿ ಯೋಜನೆಯಾಗಿ ಮನೆ ನಿವೇಶನ ಹಾಗೂ ಜಮೀನು ಕಳೆದುಕೊಂಡ ತಾಲೂಕಿನ ತಿಪ್ಪನಹಳ್ಳಿ ಗ್ರಾಮಸ್ಥರಿಗೆ ಇನ್ನೂ ಕೂಡ ಸೂಕ್ತ ಪರಿಹಾರ ನೀಡಿಲ್ಲ ಪರಿಹಾರ ನೀಡುವವರೆಗೂ ಶಾಂತಿಯುತವಾಗಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು. ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಪ್ರತಿಭಟನೆ ಕೈಗೊಂಡ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಿಬ್ಬನಹಳ್ಳಿ ಕ್ರಾಸ್ ನಲ್ಲಿ 125ಕ್ಕೂ ಹೆಚ್ಚು ನಿವೇಶನದ ಮನೆಯನ್ನು ರಾಷ್ಟ್ರೀಯ ಹೆದ್ದಾರಿ ಗಾಗಿ ಸಂತ್ರಸ್ತರು ಕಳೆದುಕೊಂಡಿದ್ದಾರೆ. ಆದರೆ ಕಳೆದ ಆರು ವರ್ಷಗಳಿಂದ ಹೆದ್ದಾರಿ ಪ್ರಾಧಿಕಾರದವರು ನೋಟಿಸ್ ನೀಡಿದ್ದು ಬಿಟ್ಟರೆ, ಒಂದು ನಯಾ ಪೈಸೆ ಕೂಡ ಪರಿಹಾರದ ಹಣವನ್ನು ಇದುವರೆಗೂ ನೀಡಿರುವುದಿಲ್ಲ. ಭೂ ಕಾಯ್ದೆ ಪ್ರಕಾರ ಭೂಮಿ ಕಳೆದುಕೊಂಡವರಿಗೆ ಒಂದು ವರ್ಷದ ಒಳಗೆ ಪರಿಹಾರ ನೀಡಬೇಕು. ಆದರೆ ಭೂಮಿ ಕಳೆದುಕೊಂಡು ಆರು ವರ್ಷ ಕಳೆದರೂ ಕೂಡ ಜಿಲ್ಲಾಡಳಿತ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ನಿವೇಶನ ಮನೆ ಜಮೀನು…
ಕೊರಟಗೆರೆ: ಪಟ್ಟಣದ ಪತ್ರಕರ್ತರ ಭವನದಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅದ್ದೂರಿಯಿಂದ ಕೊರಟಗೆರೆಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯ್ತಿಯ ಅಧ್ಯಕ್ಷೆ ಕಾವ್ಯ ರಮೇಶ್, ಪತ್ರಕರ್ತರು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಅವರ ಸಂಘಟನೆ ಅವಶ್ಯಕವಾಗಿದೆ . ಸಮಾಜದ ಒಳಿತಿಗೆ ಶ್ರಮಿಸುವ ಮಾಧ್ಯಮದವರಿಗೆ ಅಗತ್ಯ ರೀತಿಯ ಸೌಕರ್ಯ ಮತ್ತು ಸವಲತ್ತುಗಳನ್ನು ನೀಡುವುದು ಸರ್ಕಾರಗಳ ಕರ್ತವ್ಯವಾಗಿದೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಯಾವುದೇ ಸಂಬಳ ಇರುವುದಿಲ್ಲ ಆದ್ದರಿಂದ ಸರ್ಕಾರ ಗ್ರಾಮೀಣ ಭಾಗದ ಪತ್ರಕರ್ತರಿಗೆ ಸೇರಬೇಕಾದ ಸವಲತ್ತುಗಳನ್ನು ಆದಷ್ಟು ಬೇಗ ನೀಡಲಿ ಎಂಬುದೇ ನಮ್ಮ ಆಶಯ ಎಂದರು. ನಿರ್ದೇಶಕರಾಗಿ ಆಯ್ಕೆಯಾಗಿರುವ ವಿಜೇತರಾಗಿರುವ ಟಿ.ಎಸ್. ಕೃಷ್ಣಮೂರ್ತಿ ಮಾತನಾಡಿ, ಈ ಬಾರಿಯ ಜಿಲ್ಲಾ ಪತ್ರಕರ್ತರ ಚುನಾವಣೆಯಲ್ಲಿ ಅತಿ ಹೆಚ್ಚು ಗ್ರಾಮೀಣ ಭಾಗದ ಪತ್ರಕರ್ತರು ವಿಜೇತರಾಗಿದ್ದಾರೆ. ಇದು ಒಳ್ಳೆಯ ವಿಷಯವೇ ಎಲ್ಲಾ ಗ್ರಾಮೀಣ ಪತ್ರಕರ್ತರಿಗೆ ಸರ್ಕಾರ ಹಾಗೂ ಅಧಿಕಾರಿಗಳಿಂದ ಸಲ್ಲಬೇಕಾಗಿರುವ ಸೌಕರ್ಯಗಳನ್ನು ಒದಗಿಸುವಲ್ಲಿ ಈ ಬಾರಿ ನಮ್ಮ ಪ್ರಾಮಾಣಿಕ ಪ್ರಯತ್ನವನ್ನು ಮೀರಿ ಪ್ರಯತ್ನಿಸುತ್ತಿವೆ. ಹಾಗೆಯೇ ಪ್ರತಿ ಬಜೆಟ್…
ಹಿರಿಯೂರು: ತಾಲ್ಲೂಕಿನ ವಾರ್ಡ್ ನಂ 30 ಮತ್ತು 31ನೇ ವಾರ್ಡಿನ ಹರಿಶ್ಚಂದ್ರ ಘಾಟ್ ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಲ್ಲಿನ ನಿವಾಸಿಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಕಾಂಗ್ರೆಸ್ ನ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ತೆರಳಿದ್ದ ಇಲ್ಲಿನ ಕುಮಾರಿ ನಂದಿನಿ ಗೌಡ ಅವರು ಸದಸ್ಯತ್ವ ಮಾಡಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ನಂದಿನಿ ಅವರ ಮೇಲೆ ದಾಳಿ ಮಾಡಿದ್ದು, ಪರಿಣಾಮವಾಗಿ ಅವರು ಗಾಯಗೊಂಡಿದ್ದಾರೆ. ಇನ್ನೂ “ಬೀದಿನಾಯಿಗಳು ನನ್ನ ಮೇಲೆ ದಾಳಿ ನಡೆಸಿದ ವೇಳೆ ಸ್ಥಳೀಯರು ನಾಯಿಯನ್ನು ಓಡಿಸಿ ನನ್ನ ಪ್ರಾಣ ರಕ್ಷಣೆ ಮಾಡಿದ್ದಾರೆ ಎಂದು ನಂದಿನಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಂದಿನಿ ಅವರ ತಂದೆ ಗೋಪಿ ಯಾದವ್, ಈ ವಾರ್ಡ್ ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳಿಗೆ ಮಹಿಳೆಯರಿಗೆ, ವೃದ್ಧರಿಗೆ ದಾರಿ ಹೋಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಇಷ್ಟಾದರೂ ಹಿರಿಯೂರು ನಗರ ಸಭೆ ಆಡಳಿತ ಕಂಡೂ ಕಾಣದಂತಿರುವುದು ಖಂಡನೀಯವಾಗಿದ್ದು, ತಕ್ಷಣವೇ ನಗರ…