Subscribe to Updates
Get the latest creative news from FooBar about art, design and business.
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
- ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
- ದರ್ಶನ್ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ
- ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!
- ಬಂಜಾರ ಭವನ ಉದ್ಘಾಟನೆ: ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ: ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
Author: admin
ವರ್ಕಳದಲ್ಲಿ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ (fire accident five death). ದುರ್ಘಟನೆಯಲ್ಲಿ ಒಂದು ಪುಟ್ಟ ಮಗು ಕೂಡಾ ಸೇರಿದೆ. ಘಟನೆ ಇಂದು ಮುಂಜಾನೆ ಸಂಭವಿಸಿದೆ. ಪ್ರತಾಪ್ (62), ಶೆರ್ಲಿ (53), ಅಖಿಲ್ (29), ಅಭಿರಾಮಿ (25) ಮತ್ತು ನಿಖಿಲ್ ಮತ್ತು ಅಭಿರಾಮಿ ಅವರ ಎಂಟು ತಿಂಗಳ ಮಗು ಸೇರಿದಂತೆ ಐದು ಜನರು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ (fire accident five death). ಪ್ರತಾಪ್ ಅವರ ಹಿರಿಯ ಮಗ ನಿಖಿಲ್ ಅವರಿಗೆ ತೀವ್ರ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ (Fire accident). ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರತಾಪನ್ ತರಕಾರಿ ವ್ಯಾಪಾರಿಯಾಗಿದ್ದರು. ಎರಡು ಅಂತಸ್ತಿನ ಕಟ್ಟಡದ ಕಾರ್ ಗ್ಯಾರೇಜ್ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿ ತೀವ್ರವಾಗಿ ಹೊತ್ತಿ ಉರಿಯಲು ಆರಂಭವಾಯಿತು ಎಂದು ಪ್ರತ್ಯಕ್ಷದರ್ಶಿಗಳು…
ಭಾರತವು ಅನೇಕ ವಿಚಿತ್ರ ಮತ್ತು ನಿಗೂಢ ದೇವಾಲಯಗಳ ತವರೂರು. ಕೆಲ ದೇವಾಲಯಗಳಲ್ಲಿ ವಿಚಿತ್ರ ಸಂಪ್ರದಾಯಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹೆಚ್ಚಿನ ಜನರು ಈ ದೇವಾಲಯಗಳಿಗೆ ವಿವಿಧ ರೀತಿಯ ವಸ್ತುಗಳನ್ನು ಅರ್ಪಿಸುತ್ತಾರೆ. ಹೀಗೆ ಮಾಡುವುದರಿಂದ ಇಷ್ಟಾರ್ಥಗಳು ಈಡೇರುತ್ತವೆಂದು ಅವರು ನಂಬಿದ್ದಾರೆ. ಹೀಗಾಗಿ ಚಿತ್ರ-ವಿಚಿತ್ರ ಸಂಪ್ರದಾಯಗಳನ್ನು ಅನೇಕ ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿದ್ದಾರೆ. ಇಂದು ನಾವು ನಿಮಗೆ ಮಧ್ಯಪ್ರದೇಶ(Madhya Pradesh)ದ ಮಂದಸೌರ್ನಲ್ಲಿರುವ ಅಂತಹ ವಿಚಿತ್ರ ದೇವಾಲಯದ ಬಗ್ಗೆ ತಿಳಿಸುತ್ತೇವೆ. ಇದು ತುಂಬಾ ವಿಚಿತ್ರ ಸಂಪ್ರದಾಯ ಹೊಂದಿರುವ ದೇವಸ್ಥಾನವಾಗಿದೆ. ಏಕೆಂದರೆ ಈ ದೇವಾಲಯದಲ್ಲಿ ಯಾವುದೇ ದೇವತೆ ಅಥವಾ ಯಾವುದೇ ಪಂಡಿತ-ಪುರೋಹಿತರು ಕುಳಿತುಕೊಳ್ಳುವುದಿಲ್ಲ. ಆದರೂ ಜನರು ಇಲ್ಲಿಗೆ ಬಂದು ತಲೆಬಾಗಿ ನಮಿಸುತ್ತಾ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ಈ ದೇವಾಲಯದ ಹೆಸರು ಸಾಗಸ್ ಬಾವ್ಜಿ ದೇವಾಲಯ(Sagas bavji Hindu Temple).ದಾರಿ ತಪ್ಪಿದ ಜನರಿಗೆ ದಾರಿ ತೋರುವ ದೇವರು ಸಾಗಸ್ ಬಾವ್ಜಿ(Sagas bavji) ಎಂದರೆ ಯಕ್ಷ. ಸಾಗಸ್ ಬಾವ್ಜಿಯನ್ನು ಧರ್ಮಗ್ರಂಥಗಳಲ್ಲಿ ಯಕ್ಷ ಎಂದು ಕರೆಯಲಾಗಿದೆ ಎಂದು ಸ್ಥಳೀಯ ಜನರು ನಂಬುತ್ತಾರೆ.…
ಬೆಂಗಳೂರು : ಮಳೆಗಾಲ ಬಂತೆಂದರೆ ಸೊಳ್ಳೆಗಳ (Mosquito) ಕಾಟ ಹೆಚ್ಚಾಗಿರುತ್ತದೆ. ಆದರೆ ಬೇಸಿಗೆಯ ಸಮಯದಲ್ಲಿಯೂ ಬೆಳಿಗ್ಗೆ, ಸಂಜೆ ಸೊಳ್ಳೆಗಳು ಹೆಚ್ಚಾಗಿರುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ (Dengue), ಮಲೇರಿಯಾ, ಚಿಕುನ್ ಗುನ್ಯಾದಂಥಹ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಮಾತ್ರವಲ್ಲ ಸೊಳ್ಳೆ ಕಚ್ಚಿದ ಸ್ಥಳದಲ್ಲಿ ತುರಿಕೆ ಕಾಣಿಸಿಕೊಂಡು ಚರ್ಮದ ಅಲರ್ಜಿ ಬಾದಿಸುತ್ತದೆ. ಮನೆಯ ಸುತ್ತ ಮುತ್ತ ಕೆಲವೊಂದು ಸಸ್ಯಗಳನ್ನು ನೆಡುವ ಮೂಲಕ ಸೊಳ್ಳೆ ಕಾಟದಿಂದ ಮುಕ್ತಿ ಪಡೆಯಬಹುದು. ಮನೆ ಸುತ್ತ ಈ ಗಿಡಗಳನ್ನು ನೆಟ್ಟರೆ ಸೊಳ್ಳೆಗಳು ಹತ್ತಿರವೂ ಸುಳಿಯುವುದಿಲ್ಲ: ಸೊಳ್ಳೆಗಳ (Mosquito) ಕಾಟ ತಪ್ಪಿಸಲು ಲೋಷನ್ ಗಳು , ಕ್ರೀಮ್ ಗಳು, ಮಾರುಕಟ್ಟೆಯಲ್ಲಿ ಸಿಗುತ್ತವೆ. ಆದರೆ ಇದರಲ್ಲಿ ರಾಸಾಯನಿಕಗಳಿರುತ್ತವೆ. ಈ ಕಾರಣದಿಂದಾಗಿ ಇವೆಲ್ಲವೂ ಚರ್ಮದ ಮೇಲೆ ಅಡ್ಡಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ ಸೊಳ್ಳೆಗಳ ಕಾಟವನ್ನು ತಪ್ಪಿಸುವ ಸಲುವಾಗಿ ನೈಸರ್ಗಿಕ ವಿಧಾನವನ್ನು ಅಳವಡಿಸಿಕೊಳ್ಳುವುದು ಉತ್ತಮ. ಚೆಂಡು ಹೂವು : ಚೆಂಡು ಹೂವು ಎಲ್ಲಾ ಕಾಲದಲ್ಲೂ ಅರಳುತ್ತದೆ. ಈ ಹೂವಿನ ಸುವಾಸನೆಯನ್ನು ಸೊಳ್ಳೆಗಳು ಇಷ್ಟಪಡುವುದಿಲ್ಲ. ಈ ಕಾರಣದಿಂದ ಸೊಳ್ಳೆಗಳು ಈ…
ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್ ಶಿಪ್ಗಳನ್ನು (Township) ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಜೆಡಿಎಸ್ನ ಸಿ.ಎನ್.ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್ಶಿಪ್ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್ಗೆ (Walk to work) ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಹೂಡಿಕೆದಾರರಿಗೆ ಸೌಲಭ್ಯಗಳು ಮತ್ತು ರಿಯಾಯ್ತಿಗಳನ್ನು ನೀಡುವುದನ್ನು ಕಡಿಮೆ ಮಾಡಿದ್ದು, ರಾಜ್ಯದ 2ನೇ ಹಂತದ ನಗರಗಳಾದ ತುಮಕೂರು, ಕಲ್ಬುರ್ಗಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ, ನೆರವು, ರಿಯಾಯ್ತಿ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಕನ್ನಡಿಗರಿಗೆ ಆದ್ಯತೆ: ಹೊಸ ಕೈಗಾರಿಕಾ ನೀತಿ-2020-25ರ…
ಪಾವಗಡ: ಮಹಿಳಾ ದಿನಾಚರಣೆಯು ಸಮಾಜದಲ್ಲಿ ಆಗುವ ಮತ್ತು ಆಗಿರುವ ಬದಲಾವಣೆಯ ಸಂಕೇತವಾಗಿದೆ ಎಂದು ಹೆಲ್ಪ್ ಸೊಸೈಟಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂದ್ಯಾ ಮಾನಂ ಶಶಿಕಿರಣ್ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಮಂಗಳವಾರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರನ್ನು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ರವರ ಧರ್ಮಪತ್ನಿ ಸಂದ್ಯಾ ಮಾನಂ ಶಿಶಿಕಿರಣ್, ಮಹಿಳೆ ಎಷ್ಟೇ ದೊಡ್ಡ ಹುದ್ದೆಯಲ್ಲಿದ್ದರೂ, ತನ್ನ ಕೌಟುಂಬಿಕ ಹೊಣೆಯನ್ನು ನಿಭಾಯಿಸಲೇ ಬೇಕಾಗುತ್ತದೆ. ಈಗಿನ ಕಾಲದಲ್ಲಿ ಪುರುಷರ ಎಲ್ಲಾ ಕಾರ್ಯಗಳನ್ನು ಮಾಡುವ ಸಾಮರ್ಥ್ಯ ವನ್ನು ಮಹಿಳೆ ಪಡೆದಿದ್ದಾಳೆ ಆದರೆ ಅದರಿಂದ ಜವಾಬ್ದಾರಿಗಳು ಹೆಚ್ಚು, ಹೊಣೆಗಾರಿಕೆಯು ಹೆಚ್ಚು ಎಂದು ಬನ್ನಿಸಿದರು. ಈ ಸಂದರ್ಭದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕಿಯರಾದ ಆರೋಗ್ಯ ಇಲಾಖೆಯ ನಿವೃತ್ತ ಅರೋಗ್ಯ ಸಹಾಯಕಿ ಯಶೋದಮ್ಮ,ಸಮಾಜ ಸೇವಕಿ ಹಾಗೂ ವಾಲ್ಮೀಕಿ…
ದ್ವಿತೀಯ ಪಿ.ಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ (PUC Final exam time table). ಏಪ್ರಿಲ್ 22 ರಿಂದ ಮೇ 18 ರವರೆಗೆ ಪಿಯು ದ್ವಿತೀಯ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಮುಂದಾಗಿದೆ. ದ್ವಿತೀಯ ಪಿ.ಯುಸಿ ಪರೀಕ್ಷೆಯ ಅಂತಿಮ ಮತ್ತು ಪರಿಷ್ಕೃತ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ (PUC Final exam time table). ಏಪ್ರಿಲ್ 22 ರಿಂದ ಪರೀಕ್ಷೆ ಆರಂಭವಾಗಲಿದೆ. ಮೇ 18ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನು ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಸ್ಪಷ್ಟಪಡಿಸಿದೆ (PUC exam date). ದ್ವಿತೀಯ ಪಿ.ಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಈ ಮೊದಲು ಪ್ರಕಟಿಸಲಾಗಿದ್ದು, ಅದರಲ್ಲಿ ಏಪ್ರಿಲ್ 22ರಿಂದ ಮೇ 11ರವರೆಗೆ ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಅಲ್ಲದೆ, ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 5ರ ಸಂಜೆ 5…
ಪಾವಗಡ: ಭಾರತೀಯ ಸೇನೆಯಲ್ಲಿ 20 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ರಾಜವಂತಿ ಗ್ರಾಮದ ಕೃಷ್ಣಪ್ಪ-ಗಂಗಮ್ಮ ಅವರ ಪುತ್ರ ಮೈಲಾರಲಿಂಗಪ್ಪ ಅವರಿಗೆ ರಾಜವಂತಿ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದರು. ಮೈಲಾರಲಿಂಗಪ್ಪನವರು ಜಮ್ಮುಕಾಶ್ಮೀರದಲ್ಲಿ ಒಂದು ವರ್ಷ, ಪಂಜಾಬ್ ನಲ್ಲಿ ಎರಡು ವರ್ಷ, ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆದ ಭಾಗವಾಗಿ ಆಫ್ರಿಕಾದಲ್ಲಿ ಕಾರ್ಯನಿರ್ವಹಿಸಿ ಮತ್ತು 11ಪ್ರಸಸ್ತಿಗಳನ್ನು ಪಡೆದುಕೊಂಡು ಸತತವಾಗಿ ಕೆಲಸ ನಿರ್ವಹಿಸಿ, ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಇವರ ದೇಶ ಸೇವೆಯನ್ನು ಗುರುತಿಸಿ ರಾಜವಂತಿ ಗ್ರಾಮಸ್ಥರು ಸನ್ಮಾನಿಸಿ, ಅಭಿನಂದನೆಗಳನ್ನು ಸಲ್ಲಿಸಿದರು. ಯಾದವ ಅಧ್ಯಕ್ಷರಾದ ನರಸಿಂಹಪ್ಪ, R C ಅಂಜಿನಪ್ಪ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರಧಾನಕಾರ್ಯದರ್ಶಿಗಳಾದ ಮೈಲಾರರೆಡ್ಡಿ, ಪುರಸಭೆ ಸದಸ್ಯರಾದ ಕೋಳಿ ಬಾಲಾಜಿ, ಗಿರೀಶ್, K T ಹಳ್ಳಿ ಚಿಕ್ಕಣ್ಣ, ರಾಮಾಂಜಿನಪ್ಪ, ಪಾಂಡು ಯಾದವ್, ಅನಿಲ್ ಯಾದವ್, ಭರತ್ ಯಾದವ್, ದಿವ್ಯತೇಜು ಯಾದವ್, ರಘುವೀರ್ ರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿ: ದೇವರಹಟ್ಟಿ ನಾಗರಾಜ. (ಕಸಬಾ ಹೋಬಳಿ ) ಪಾವಗಡ ನಮ್ಮತುಮಕೂರು.ಕಾಂನ ಕ್ಷಣ…
ಬೆಂಗಳೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-RPI(ಅಠವಳೆ) ರಾಜ್ಯ ಮಹಿಳಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಆರ್ ಪಿಐ ರಾಜ್ಯಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರ್.ಪಿ.ಐ. ಮಹಿಳಾ ಘಟಕದ ಅಧ್ಯಕ್ಷರಾದ ಸುಧಾರಾಣಿ ಅವರು ಆಶಯ ನುಡಿಗಳನ್ನಾಡಿದರು. ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯರಾದ ಡಾ.ಮಂಜುಳ ಉಮೇಶ್, ಸುಧಾ ಕೆ., ಬಿ.ಎನ್.ಗೀತಾ ಪ್ರಭಾರೆ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ವೇಳೆ ಸಗಾಯಿ ಮೇರಿ, ಕುಮಾರಿ, ಅಶ್ವತ್ಥಮ್ಯ, ಧನಲಕ್ಷ್ಮೀ, ಕಾವ್ಯಾ ವೆಂಕಟೇಶ್, ಅಂಬಿಕಾ, ಟಿ.ರಾಧಾ, ಖುಷ್ಬು ಶಮ, ಭಾಗ್ಯ ರೇವಣ್ಣ, ನಾಗವೇಣಿ, ವನಿತಾ ಶಿವು, ಚೈತ್ರಾನಾಗ, ರಮ್ಯಾ, ದೇವಿ, ಪವಿತ್ರ, ಎಂ.ಕೆ.ಶಶಿಕಲಾ ಡಿ.ವಿ ಮತ್ತಿತರು ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಮಧುಗಿರಿ: ಪಟ್ಟಣದ ಆರ್ ಎಂ ಸಿ ಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕಾಂತರಾಜು ಬಿನ್ ಲಕ್ಷ್ಮೀನಾರಾಯಣ ಅವರು ತಮ್ಮ ಎರಡೂ ಕಣ್ಣುಗಳನ್ನು ಕಳೆದುಕೊಂಡು ಅಸಹಾಯಕ ಜೀವನ ನಡೆಸುತ್ತಿದ್ದು, ಈ ವಿಚಾರ ತಿಳಿದ ಶಿಕ್ಷಕರೊಬ್ಬರು ಮಾನವೀಯತೆ ಮೆರೆದ ಘಟನೆ ನಡೆದಿದೆ. ಮುಂಜಾನೆ ವೇಳೆ ವಾಯು ವಿಹಾರಕ್ಕೆ ತೆರಳಿದ್ದ ಶಿಕ್ಷಕ ದಂಪತಿ ಫಣೀಂದ್ರನಾಧ್ ಹಾಗೂ ಇಂದ್ರಮ್ಮ ಅವರಿಗೆ ಕಾಂತರಾಜು ಕಂಡಿದ್ದು, ಕಣ್ಣುಗಳನ್ನು ಕಳೆದುಕೊಂಡಿರುವ ಅವರನ್ನು ಶಿಕ್ಷರು ವಿಚಾರಿಸಿದ್ದಾರೆ. ಈ ವೇಳೆ ತಾನು ಮೊದಲಿಗೆ ಒಂದು ಕಣ್ಣು ಕಳೆದುಕೊಂಡು ಹಮಾಲಿ ವೃತ್ತಿ ಮಾಡಿಕೊಂಡು ಜೀವನಸಾಗಿಸುತ್ತಿದ್ದೆ ಆದರೆ, ಬಳಿಕ ಆಕಸ್ಮಿಕವಾಗಿ ಮತ್ತೊಂದು ಕಣ್ಣನ್ನು ಕಳೆದುಕೊಂಡಿರುವುದಾಗಿ ಕಾಂತರಾಜು ತಿಳಿಸಿದ್ದಾರೆ. ಕಾರ್ಮಿಕನ ನೋವು ಕೇಳಿ ಫಣೀಂದ್ರನಾಧ್ ಅವರ ಹೃದಯ ಕರಗಿದ್ದು, ಅವರು ಕಾರ್ಮಿಕ ಕಾಂತರಾಜುನನ್ನು ಕರೆದು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಕಣ್ಣು ತಜ್ಞ ಡಾ.ಗಂಗಾಧರ್ ಅವರಿಗೆ ತೋರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು, ಇನ್ನೊಂದು ತಿಂಗಳಲ್ಲಿ ದೃಷ್ಟಿ ಮರಳಿ ಬರುತ್ತದೆ ಎಂದ ಭರವಸೆ ನೀಡಿದ್ದಾರೆ. ಇನ್ನೂ ಸದ್ಯ…
ತುಮಕೂರು: ಸಿರಾ ತಾಲ್ಲೂಕು ಸಿರಾ ನಗರದ ಸಂತೆ ಪೇಟೆಯಲ್ಲಿರುವ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕುಮಾರಿ ಆಶಾ ಕೆಎಸ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಈಶ್ವರಿ ವಿಶ್ವವಿದ್ಯಾನಿಲಯದ ಆಧ್ಯಾತ್ಮಿಕ ಚಿಂತಕರಾದ ಪಿ.ಎಚ್.ಮಹೇಂದ್ರಪ್ಪ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಮತಾ ಎಂ., ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಮತ್ತು ನರ್ಸಿಂಗ್ ಕಾಲೇಜಿನ ಡಾ.ರಾಮಕೃಷ್ಣ, ವಂಶವೃಕ್ಷ ಆಸ್ಪತ್ರೆಯ ಡಾ.ಮಾಲಿನಿ, ಪ್ರಸೂತಿ ತಜ್ಞರಾದ ಡಾ.ನಿರ್ಮಲ, ವಕೀಲರ ಸಂಘದ ಅಧ್ಯಕ್ಷ ಎಚ್.ಪಿ. ಧರಣೇಶ್ ಗೌಡ, ಉಪಾಧ್ಯಕ್ಷರಾದ ವೈ.ಟಿ.ರಾಮಚಂದ್ರಪ್ಪ, ಕಾರ್ಯದರ್ಶಿ ಕಂಬದೂರಪ್ಪ, ಖಜಾಂಚಿ ಗುರುಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ.ಮೋಹನ್ ಸಿ.ಆರ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಸದಾಶಿವ, ಗೋಪಾಲಕೃಷ್ಣ, ರಾಜಯೋಗಿನಿ ಬಿ.ಕೆ. ಶಾಂತ, ಡಾ.ಕಲಾ, ಮಂಜುಳಾ ಅನ್ನಪೂರ್ಣ ಅಂಗನವಾಡಿ ಕಾರ್ಯಕರ್ತರು ರಾಮಕೃಷ್ಣ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಕ್ರೇನ್ ನಿಂದ ಸಿರಾಕ್ಕೆ ಆಗಮಿಸಿದ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿ ಪ್ರಿಯಾಂಕ ಅವರನ್ನು ಸನ್ಮಾನಿಸಲಾಯಿತು ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ…