Author: admin

ತುಮಕೂರು: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸ್ವಂತ ನಿವೇಶನ ಮಂಜೂರು ಮಾಡಿ  ಸೂಕ್ತ ಕಟ್ಟಡ  ನಿರ್ಮಿಸಿ ಕೊಡುವ ಬಗ್ಗೆ  ಉನ್ನತ ಶಿಕ್ಷಣ ಇಲಾಖೆಯ ಸಚಿವರು ಡಾ. ಸಿ.ಎನ್. ಅಶ್ವಥ್‍ನಾರಾಯಣ್, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜ್, ಶಾಸಕ ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅವರಿಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಪತ್ರ ಬರೆದು ಮನವಿ ಮಾಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ತುಮಕೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 1993 ರಿಂದ ಪ್ರಾರಂಭಗೊಂಡಿರುವ “ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ”ವು ಕಳೆದ 27 ವರ್ಷಗಳಿಂದ ಇದೇ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿರುತ್ತದೆ. ಜೊತೆಗೆ ಗುಣಮಟ್ಟದ ಚಿತ್ರಕಲಾ ಶಿಕ್ಷಣವನ್ನು ನೀಡುತ್ತಿದೆ. ಮತ್ತು ಈ ಕಾಲೇಜಿನಲ್ಲಿ ಚಿತ್ರಕಲಾಭ್ಯಾಸ ಮಾಡಿದ ವಿದ್ಯಾರ್ಥಿಗಳು “ತುಮಕೂರು ವಿಶ್ವವಿದ್ಯಾನಿಲಯದ ಬಿ.ಎಫ್.ಎ. (ಬ್ಯಾಚುಲರ್ ಆಫ್ ಫೈನ್ ಆರ್ಟ್) ಪದವಿ ಪರೀಕ್ಷೆಯಲ್ಲಿ ಪ್ರಥಮ ಮತ್ತು ತೃತೀಯ ರ್ಯಾಂಕ್ ನೊಂದಿಗೆ ಗೋಲ್ಡ್‍ ಮೆಡಲ್ ಪಡೆದುಕೊಂಡಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ”. ಸರ್ಕಾರಿ ಚಿತ್ರಕಲಾ…

Read More

ತುರುವೇಕೆರೆ: ತುರುವೇಕೆರೆ ತಾಲ್ಲೂಕು ಸಂಪಿಗೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಯವರ ಉಪಸ್ಥಿತಿಯಲ್ಲಿ ಮತ್ತು ರೋಟರಿ ಬಿಲ್ವಪ್ರಿಯ ಬೆಳ್ಳಾವಿ ಇವರ ಸಹಯೋಗದಲ್ಲಿ  ರೋಟರಿ ಕ್ಲಬ್ ತುರುವೇಕೆರೆ , ನಿಟ್ಟೂರು ರೋಟರಿ ಕ್ಲಬ್, ತುಮಕೂರು ಸೆಂಟ್ರಲ್ ಕ್ಲಬ್, ತುಮಕೂರು ಈಸ್ಟ್ ಕ್ಲಬ್,ಸಿದ್ದರಬೆಟ್ಟ ರೋಟರಿ ಕ್ಲಬ್,  ಈ ಕ್ಲಬ್ ಗಳು ಸಿದ್ದಗಂಗಾ ಆಸ್ಪತ್ರೆ ತುಮಕೂರು ಮತ್ತು ಚನಾರೆ ಆಸ್ಪತ್ರೆ ರಾಜಾಜಿ ನಗರ , ಇಮ್ಯುನಾಲಜಿ&ಆರಥೈಟಿಸ್& ಎಜುಕೇಶನ್ ಟ್ರಸ್ಟ್ ಬೆಂಗಳೂರು ಇವರುಗಳ ಸಹಯೋಗದಲ್ಲಿ ಚಂಪಕಾ ಪ್ರೌಢಶಾಲೆ ಯಲ್ಲಿ ನಡೆಯಿತು. ಇಮ್ಯುನಾಲಜಿ&ಆರಥೈಟಿಸ್& ಎಜುಕೇಶನ್ ಟ್ರಸ್ಟ್ ಬೆಂಗಳೂರು ಇವರುಗಳ ಸಹಯೋಗದಲ್ಲಿ ಚಂಪಕಾ ಪ್ರೌಢಶಾಲೆ ಯಲ್ಲಿಉಚಿತ ಮಂಡಿನೋವು, ಬಾಡಿ ಕ್ಯಾಲ್ಸಿಯಂ, ಕೀಲು ಮೂಳೆ, ಸಂಧಿವಾತ, ಸ್ತ್ರೀ ರೋಗ,ಬಿಪಿ,ಸುಗರ್,ಬಿಎಂಡಿ&screening  ತಪಾಸಣೆ ಹಾಗೂ ಉಚಿತವಾಗಿ ಔಷಧಿ ಹಾಗೂ ನೀ ಪ್ಯಾಡ್ ಗಳನ್ನು ನೀಡಲಾಯಿತು  ಕಾರ್ಯಕ್ರಮವನ್ನು ಸಂಪಿಗೆ ಗ್ರಾಮ ಪಂಚಾಯಿತಿ  ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಚಂಪಕ ಪ್ರೌಢಶಾಲೆ ಶಿಕ್ಷಕರು ಹಾಗೂ ಪ್ರಸಾದ್ ಕೆಜೆ…

Read More

ಚಿಕ್ಕನಾಯಕನಹಳ್ಳಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷನನ್ನು ಟಾಟಾ ಏಸ್ ವಾಹನ ಡಿಕ್ಕಿ ಹೊಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಕೃತ್ಯವನ್ನು ಎಸಗಲಾಗಿದೆ ಎಂದು ವರದಿಯಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ 46 ವರ್ಷ ವಯಸ್ಸಿನ ಅಶೋಕ್ ಎಂಬವರು ಸೋಮಶೇಖರ್ ಎಂಬವರ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಟಾಟಾ ಏಸ್ ವಾಹನದಿಂದ ಹಿಂಬದಿಯಿಂದ ಡಿಕ್ಕಿ ಹೊಡೆಸಲಾಗಿದ್ದು, ಪರಿಣಾಮವಾಗಿ ಅಶೋಕ್ ಅವರು ಸ್ಥಳದಲ್ಲೇ ಸಾವನ್ನಪ್ಪಿ ಸೋಮಶೇಖರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯದ ವರದಿಗಳ ಪ್ರಕಾರ, ಗ್ರಾ.ಪಂ. ಉಪಾಧ್ಯಕ್ಷ ಅಶೋಕ್ ಹಾಗೂ ಭೀಮಾ ನಾಯ್ಕ್ ತಾಂಡದ ನಾಗರಾಜ್ ನಾಯ್ಕ್ ಎಂಬವರ ನಡುವೆ ಹಣಕಾಸಿನ ವಿಚಾರಕ್ಕಾಗಿ ವೈಷಮ್ಯವಿದ್ದು, ಈ ಹಳೆಯ ವೈಷಮ್ಯದಿಂದ ಈ ಹತ್ಯೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ

Read More

ಕೊರಟಗೆರೆ: ಬಸ್ ಹರಿದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆಯ ಕೊರಟಗರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆಂಪಕ್ಕ ಮೃತಪಟ್ಟ ಮಹಿಳೆಯಾಗಿದ್ದು, ಜೆಟ್ಟಿ ಅಗ್ರಹಾರ ಪೋಸ್ಟ್ ಆಫೀಸ್ ಗೆ ಆಗಮಿಸಿದ್ದ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಂದ ಖಾಸಗಿ ಬಸ್ಸೊಂದು ಕೆಂಪಕ್ಕ ಅವರ ಮೇಲೆ ಹರಿದಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೆಂಪಕ್ಕ ಅವರು ಥರಟಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯಾಗಿದ್ದರು ಎಂದು ತಿಳಿದು ಬಂದಿದೆ. ತಮ್ಮ ಪೆನ್ಷನ್ ಹಣವನ್ನು ಪಡೆಯಲು ಅವರು ಜೆಟ್ಟಿ ಅಗ್ರಹಾರ ಪೋಸ್ಟ್ ಆಫೀಸ್ ಗೆ ಆಗಮಿಸಿದ್ದರು ಎನ್ನಲಾಗಿದೆ. ರಸ್ತೆ ದಾಟಲು ಮುಂದಾಗುತ್ತಿದ್ದಂತೆಯೇ ಅತೀ ವೇಗದಿಂದ ಬಂದ ಬಸ್ ಕೆಂಪಕ್ಕ ಮೇಲೆ ಹರಿದಿದೆ. ಇನ್ನೂ ಘಟನೆ ನಡೆದ ತಕ್ಷಣವೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು…

Read More

ತಿಪಟೂರು: ಅಪ್ಪುವಿನ ಮೇಲಿನ ಪ್ರೀತಿಗಾಗಿ  ಅಪ್ಪ ಮಗ ಇಬ್ಬರು ಕೇಶ ಮುಂಡನ ಮಾಡಿಸಿಕೊಂಡು ಬಡಾವಣೆಯ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಸಿದ ಘಟನೆ ತುಮಕೂರಿನ ತಿಪಟೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ. ಅಪ್ಪು ಅಭಿಮಾನಿ ರವಿ ಎಂಬವರು ಹಾಗೂ ಅವರ ಪುತ್ರ ನಟರಾಜ್ ಅವರು ಈ ಕಾರ್ಯ ಮಾಡಿದ್ದು, ಕೇಶಮುಂಡನೆ ಮಾಡಿಕೊಂಡು, ಅನ್ನಸಂತರ್ಪಣೆ ನಡೆಸಿ, ಅಪ್ಪುವಿನ ಮೇಲಿನ ವಿಶೇಷ ಪ್ರೀತಿಯನ್ನು ಹೀಗೆ ತೋರ್ಪಡಿಸಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ತಿಥಿಕಾರ್ಯ ನೆರವೇರಿಸಿ, ಕೇಶಮುಂಡನ ಮಾಡಿ, ಕಾರ್ಯಕ್ರಮದಲ್ಲಿ ನೆರೆದಿದ್ದವರಿಗೆ ಅನ್ನ ಸಂತರ್ಪಣೆ ನಡೆಸಿದ್ದಾರೆ. ಇನ್ನೂ 11ನೇ ದಿನದ ತಿಥಿ ಕಾರ್ಯಕ್ಕೆ ನಾವು ಅಪ್ಪು ಸಮಾಧಿ ಬಳಿಗೆ ಹೋಗಬೇಕು ಹೀಗಾಗಿ ಇಂದೇ ಕಾರ್ಯಮಾಡಿ ಕೇಶ ಮುಂಡನ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದರು. ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ

Read More

ಶಿವಮೊಗ್ಗ: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿಯ ನಾಯಕರ ಬಗ್ಗೆ ಅವಹೇಳನಕಾರಿ ಮಾತುಗಳಾಡುವುದನ್ನೇ ಸಿದ್ದರಾಮಯ್ಯ ವೃತ್ತಿಯಾಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶವನ್ನು ಸಿದ್ಧರಾಮಯ್ಯ ತಪ್ಪಿಸಿದರು. ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದು ಬ್ಲ್ಯಾಕ್‌ ಮೇಲ್ ಮಾಡಿ ಮುಖ್ಯಮಂತ್ರಿಯಾದರು. ಅವರೊಬ್ಬ ಕಪಟ ರಾಜಕಾರಣಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 2006 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕೇವಲ 257 ಮತಗಳ ಅಂತರದಲ್ಲಿ ಗೆಲುವು ಕಂಡರು. ಕಾಂಗ್ರೆಸ್ ಪಕ್ಷದ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಮಹಾದೇವಪ್ಪ ಇಲ್ಲದಿದ್ದರೆ ಅಂದೇ ರಾಜಕೀಯದಿಂದ ಕಳೆದುಹೋಗುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ

Read More

ಕಾರವಾರ : ನಟ ಪುನೀತ್ ರಾಜ್ ಕುಮಾರ್ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಪುನೀತ್ ಅಭಿಮಾನಿಯೊಬ್ಬರು ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಅರುಣ್ ಪರಮೇಶ್ವರ್ ಎಂಬವರು ಈ ದೂರು ದಾಖಲಿಸಿದ್ದು,  ಪುನೀತ್ ರಾಜ್ ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ತಕ್ಷಣವೇ ಅವರು ರಮಣಶ್ರೀ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಸೂಕ್ತ ಚಿಕಿತ್ಸೆ ದೊರಕಿಲ್ಲ ಎನಿಸುತ್ತಿದೆ. ಅಲ್ಲದೇ ತಡವಾಗಿ ಅವರನ್ನು ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿದೆ. ಅವರಿಗೆ ಆಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಿಲ್ಲ ಎಂಬ ಮಾತು ಕೇಳಿ ಬಂದಿದೆ. ಇದರ ಬಗ್ಗೆ ತನಿಖೆ ನಡೆಯಬೇಕು ಎಂದು ಅಭಿಮಾನಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಪುನೀತ್ ಎಷ್ಟು ಗಂಟೆಗೆ ರಮಣಶ್ರೀ ಆಸ್ಪತ್ರೆಗೆ ದಾಖಲಾದರು. ಎದೆನೋವಿನ ಬಗ್ಗೆ ಎಷ್ಟು ನಿಮಿಷಗಳ ಕಾಲ ರಮಣಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಯಾವ ಮಾತ್ರೆಗಳನ್ನು ನೀಡಲಾಗಿದೆ. ಬಳಿಕ ಎಷ್ಟು ಗಂಟೆಗೆ ಅವರು ವಿಕ್ರಂ ಆಸ್ಪತ್ರೆಗೆ ತೆರಳಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಿ ಕ್ರಮಜರಗಿಸಬೇಕು ಎಂದು…

Read More

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ವಿಧಿಸಿದ್ದ ನೈಟ್ ಕರ್ಫ್ಯೂ ಹಿಂಪಡೆದು ಸರ್ಕಾರ ಇಂದು (ನವೆಂಬರ್ 5) ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿದಿಸಿದ್ದ ಆದೇಶ ವಾಪಸ್​ ಪಡೆಯಲಾಗಿದೆ. ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಹಾಗೂ ದೇಶಾದ್ಯಂತ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ ಎಂದು ಹೇಳಲಾಗಿದೆ. ಅದರಂತೆ ಕೊರೊನಾ ಹಿನ್ನೆಲೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂ ಇಂದಿನಿಂದ ಇರುವುದಿಲ್ಲ ಎಂದು ಸರ್ಕಾರ ಹೇಳಿದೆ. ಕೊರೊನಾ ಕೇಸ್ ಇಳಿಮುಖ ಹಿನ್ನೆಲೆ ನೈಟ್ ಕರ್ಫ್ಯೂ ವಾಪಸ್ ಪಡೆಯಲಾಗಿದೆ. ನೈಟ್ ಕರ್ಫ್ಯೂ ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಮುಂಜಾನೆ 5 ರವರೆಗೂ ವಿಧಿಸಿದ್ದ ನೈಟ್ ಕರ್ಫ್ಯೂ ಇವತ್ತಿನಿಂದಲೇ ಇರುವುದಿಲ್ಲ ಎಂದು ಸರ್ಕಾರ ಹೇಳಿದೆ. ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ

Read More

ಚಿತ್ರದುರ್ಗ: ಕೋಡಿಹಳ್ಳಿ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಶ್ರೀಗಳಾದ ಶ್ರೀಶ್ರೀಶ್ರೀ ಪರಮಪೂಜ್ಯ ಮಾರ್ಕಂಡೇಯ ಮುನಿಸ್ವಾಮೀಜಿಗಳು ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ  ಹಾಗೂ ಹಾಲಿ ಲೋಕಾಪಯೋಗಿ ಸಚಿವ ಗೋವಿಂದ ಕಾರಜೋಳರವರು ಸ್ವಾಮೀಜಿಯ ಅಂತಿಮ ದರ್ಶನ ಪಡೆದರು. ಸ್ವಾಮೀಜಿಗಳ ಅಂತಿಮ ದರ್ಶನದ ವೇಳೆ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳು, ಹಿರಿಯೂರು ಶಾಸಕ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ , ಪುರಸಭೆ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಹಾಜರಿದ್ದರು. ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ

Read More

ಸರಗೂರು:   ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಯಾಜಮಾನರು ಹಾಗೂ ಗ್ರಾಮಸ್ಥರು ಸೇರಿ ಎತ್ತಿನಗಾಡಿ ಎಳೆಯುವ ಸ್ವರ್ಧೆ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ  ಕೂಸಯ್ಯ ಎಂಬವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಸಣ್ಣಯ್ಯ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.  ಎತ್ತಿನ ಗಾಡಿ ಎಳೆಯುವ ಸ್ಪರ್ಧಾ ವಿಜೇತ ಯುವಕರಿಗೆ ಇದೇ ಸಂದರ್ಭದಲ್ಲಿ ಗಣ್ಯರು  ಬಹುಮಾನ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಯಜಮಾನರಾದ ಮಹದೇವಯ್ಯ, ಚಿಕ್ಕಣ್ಣ, ಜವರಯ್ಯ, ಗ್ರಾಮ ಪಂಚಾಯಿತಿ ಸದಸ್ಯ ರು ಮಾ ಅಧ್ಯಕ್ಷೆ ಹಾಗೂ ಹಾಲಿ  ರತ್ನಮ್ಮ ರಾಜೇಶ್ ಪ್ರಕಾಶ್ , ಶಿವರಾಜ್ ಅರಸು, ಭಾಗ್ಯ ಕೆಂಪಸಿದ್ದು ಭಾಗವಹಿಸಿದ್ದರು. ಗ್ರಾಮದ ಮುಖಂಡರು ಪುಟ್ಟಸ್ವಾಮಿ, ರಾಜಣ್ಣ, ಲೋಕೇಶ್, ಚೆಲುವರಾಜು, ಶಿವಮೂರ್ತಿ, ನಾಗೇಶ್, ನಾಗೇಂದ್ರ, ಪ್ರಸನ್ನಕುಮಾರ್, ಕೃಷ್ಣಮೂರ್ತಿ, ಪಾಪಣ್ಣ, ಮದನ್, ಪವರ್, ಸಿದ್ದು, ಹಾಗೂ ಗ್ರಾಮದ ಯುವಕರು ಇದ್ದರು. ವರದಿ: ಚಂದ್ರಹಾದನೂರು ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ

Read More