Author: admin

ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್‌ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ ಎಂದರು. ವಿಧಾನಸಭೆ ಚುನಾವಣೆ ಹತ್ತಿರ ಇರುವ ಕಾರಣ ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಎಂಎಲ್ ಸಿ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಬದ್ದವಾದ ಪಕ್ಷ. ವಿಜಯೇಂದ್ರ ಅವರನ್ನು ಗುರುತಿಸುವ ಕೆಲಸ ಪಕ್ಷ ಮಾಡಲಿದೆ ಎಂದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಅವಕಾಶ ಕಲ್ಪಿಸಬೇಕೆಂದು ಪಕ್ಷದ ಚಿಂತನೆಯಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಕೊಪ್ಪಳ: ದತ್ತಪೀಠದ ಹೆಸರಲ್ಲಿ ಸಂಸದ, ಶಾಸಕರಾಗಿ ಅಧಿಕಾರಕ್ಕೆ ಬಂದವರು ಈಗೇನು ಮಾಡುತ್ತಿದ್ದಾರೆ ? ಅಲ್ಲಿ ಮುಸ್ಮಾನರು ನಮಾಜು ಮಾಡ್ತಾರೆ, ಮಾಂಸದ ಊಟ ಮಾಡ್ತಾರೆಂದರೇ ಏನರ್ಥ ? ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ದತ್ತಪೀಠದಲ್ಲಿ ಮುಸ್ಮಾನರು ನಮಾಜು ಮಾಡ್ತಾರೆ, ಮಾಂಸದ ಊಟ ಮಾಡ್ತಾರೆ ಎಂದರೆ ಏನರ್ಥ ? ಪೀಠದ 200 ಮೀಟರ್ ವ್ಯಾಪ್ತಿಯಲ್ಲಿ ನಮಾಜು ಮಾಡಬಾರದು, ಮಾಂಸದ ಊಟ ಮಾಡಬಾರದು ಎನ್ನುವ ನಿಯಮ ಇದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ. ದತ್ತ ಪೀಠದಿಂದಲೇ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಗೆದ್ದಿದ್ದಾರೆ. ಈಗ ಅವರೇನು ಮಾಡ್ತಿದ್ದಾರೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದರು. ಅಲ್ಲಿ ಧಾರ್ಮಿಕ ದತ್ತಿ ಇಲಾಖೆಯು ಪೀಠದ ಅಧಿಕಾರಿಯನ್ನು ಕಿತ್ತೊಗೆಯಬೇಕು. ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ನಮ್ಮಂತ ಹೋರಾಟಗಾರರಿಗೆ, ಹಿಂದುತ್ವವಾದಿಗಳಿಗೆ ರಾಜಕೀಯ ಬಾಗಿಲು ಮುಚ್ಚಿದೆ. ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ. ಬಿಜೆಪಿಗೆ ಯಾವುದೇ ಹಿಂದೂತ್ವ ಇಲ್ಲ. ಯೋಗಿ ಆದಿತ್ಯನಾಥ ತರ ರಾಜ್ಯದಲ್ಲಿ…

Read More

ಕೊಪ್ಪಳ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಗ್ಗೆ ಮಾತನಾಡಿದ ಅವರು, ಮಂದಿರ ನಿರ್ಮಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿದೆ ಎಂದು ಹೇಳಿದರು. ಕಾನೂನು ಎಲ್ಲಾ ನಾಗರಿಕರಿಗೆ ಸಮಾನವಾಗಿರಬೇಕು ಎಂಬ ಕಾರಣಕ್ಕಾಗಿ ಏಕರೂಪ ನಾಗರಿಕ ಸಂಹಿತೆಯನ್ನು ತರಲು ಬಿಜೆಪಿ ಬದ್ಧವಾಗಿದೆ ಎಂದು ಅವರು ಇದೇ ವೇಳೆ ಅವರು ಹೇಳಿದರು. ಪ್ರಸ್ತುತ ಯಾವುದೇ ಕೋಮು ಅಥವಾ ಧಾರ್ಮಿಕ ಪೂರ್ವಾಗ್ರಹವಿಲ್ಲದೆ ಅಪರಾಧ ಕೃತ್ಯಗಳಿಗೆ ಸಮಾನವಾಗಿ ಶಿಕ್ಷೆಯನ್ನು ನೀಡಲಾಗುತ್ತದೆ. ಅಂತೆಯೇ, ನಾಗರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಪರಾಧಿಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಸಚಿವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಹಿರಿಯೂರು: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕಾರಿಗೆ ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಶಾಸಕರ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹಿರಿಯೂರು ಮಾರ್ಗ ಮಧ್ಯೆ ತೆರಳುತ್ತಿದ್ದ ವೇಳೆ ಅತೀ ವೇಗ ಹಾಗೂ ಅಜಾಗರೋಕತೆಯಿಂದ ಬಂದ ಕಾರೊಂದು ಶಾಸಕರ ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಎಡ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯೂರು  ಗ್ರಾಮಾಂತರ ಪೋಲಿಸ್ ಠಾಣೆಯ ಅಧಿಕಾರಿ ಪಿ ಎಸ್ ಐ ಶಶಿಕಲಾ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು,  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಹಾರ ನಿರೀಕ್ಷಕರು , ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಹಿರಿಯೂರು ಸಿರಿಗನ್ನಡ ನಾಡು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿತ್ತು. ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ರಂಜಿತ ಲಾಡ್ಜ್ ಬಳಿಯಿಂದ ಮೆರವಣಿಗೆ ಆರಂಭಿಸಿ, ತಾಲ್ಲೂಕು ಕಛೇರಿಯವರೆಗೂ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ ಹಿರಿಯೂರು ಕಂದಾಯ, ಆಹಾರ ನಿರೀಕ್ಷಕರು ಹಾಗೂ ಶಿಕ್ಷಣಾಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಸಿರಿಗನ್ನಡನಾಡು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಕುಂದ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಕಂದಾಯ, ಆಹಾರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿ ಯಾವುದೇ ಸಮಸ್ಯೆ ತೆಗೆದುಕೊಂಡು ಹೋದರೂ ಉಡಾಫೆಯ ಮಾತುಗಳನ್ನಾಡುತ್ತಾರೆ. ಸರ್ಕಾರದಿಂದ ಬಡವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಮಾಹಿತಿ ಕೇಳಿದರೆ ದರ್ಪದ ಉತ್ತರ ನೀಡುತ್ತಾರೆ.…

Read More

ಗುಬ್ಬಿ: ಲಾರಿಯೊಂದಕ್ಕೆ ಮತ್ತೊಂದು ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಬ್ರಿಡ್ಜ್ ಬಳಿ ಬೆಳಿಗ್ಗೆ ಮುಂದೆ ಸಾಗುತ್ತಿದ್ದ ಲಾರಿಗೆ ಕೋಳಿ ಸಾಗಾಟದ ಲಾರಿ ವೇಗವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಪರಿಣಾಮವಾಗಿ ಲಾರಿಯಲ್ಲಿದ್ದ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಲಾರಿ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದು, ಲಾರಿಯ ಹಾರನ್  ಮೊಳಗುತ್ತಲೇ ಇದ್ದ ದೃಶ್ಯ ಕಂಡು ಬಂದಿದೆ. ಲಾರಿಯ ಸಿಗ್ನಲ್ ಕೂಡ ಆನ್ ನಲ್ಲಿರುವುದು ಪತ್ತೆಯಾಗಿದ್ದು, ಭೀಕರತೆಯಿಂದ ಕೂಡಿದೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಬಿ.ಕೋಡಿಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಒತ್ತಡಕ್ಕೆ ಭೇಟಿ ನೀಡಿ ಕಣ್ಣೊರೆಸುವ ಕೆಲಸ ಮಾಡಿದ್ದೀರಿ ಎಂದು ಫೋಷಕ ಚಿಕ್ಕೇಗೌಡ ಅಧಿಕಾರಿಗಳನ್ನು ತರಾಟೆಗೆತ್ತಕೊಂಡಿದ್ದು, ಹೆಣ್ಣು ಮಕ್ಕಳ ಕಿರಿಕಿರಿ ಅರ್ಥವಾಗುತ್ತಿಲ್ಲ. ನಿಮ್ಮ ಮನೆ ಮಕ್ಕಳನ್ನು ಇಲ್ಲಿಗೆ ಸೇರಿಸಿ ಆಗ ಬಡ ಮಕ್ಕಳ ಸಮಸ್ಯೆ ತಿಳಿಯುತ್ತೆ ಎಂದು ಸ್ಥಳೀಯ ಪೋಷಕ ಚಿಕ್ಕೇಗೌಡ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಪಟ್ಟಣದ ಬಿಇಓ ಕಚೇರಿಯಲ್ಲಿ ನಡೆಯಿತು. ಸರ್ಕಾರಿ ಶಾಲೆಯಲ್ಲಿ ಕೃಷಿಕ ವರ್ಗದ ಮಕ್ಕಳೇ ಹೆಚ್ಚಾಗಿ ಕುಗ್ರಾಮದ ಶಾಲೆಗಳು ಬಳಸುತ್ತಾರೆ. ಶೌಚಾಲಯವಿಲ್ಲದೆ ಇಲ್ಲಿನ ಮಕ್ಕಳು ಬೇಲಿ ಸಾಲಿಗೆ ಸರದಿಯಲ್ಲಿ ಹೋಗುತ್ತಾರೆ. ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಪರದಾಟ ಹೇಳತೀರದು.  ಶೌಚಾಲಯ ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿತ್ತು. ವಿಡಿಯೋ ಸಂವಾದದಲ್ಲಿ ಸಚಿವರೇ ಆಸಕ್ತಿ ವಹಿಸಿ ಬಿಇಒ ಗೆ ಹೇಳಿ . ನಾಲ್ಕು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಶೌಚಾಲಯ…

Read More

ತಿಪಟೂರು: ವ್ಯಾಪಾರಿಗಳು ಹಾಗೂ ರೈತರುಗಳು ಸಹಕಾರಿ ಸಂಘದಲ್ಲಿ ಸಾಲ ಪಡೆದು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿ ಸಹಕಾರಿ ಸಂಘವನ್ನು ಇಂದುಶ್ರೀ ಗುರುಪರದೇಶಿ ಕೇಂದ್ರ ಅವರು ತಿಳಿಸಿದರು. ತಿಪಟೂರು ನಗರದಲ್ಲಿ ಶ್ರೀ ಗುರು ಪರದೇಶಿ ಕೇಂದ್ರ ಸೌಂದರ್ಯ ಪತ್ತಿನ ಸಹಕಾರ ಸಂಘವನ್ನು ಉದ್ಘಾಟನೆಗೊಳಿಸಿ ಮಾತನಾಡಿದ ಶ್ರೀಗಳು, ವ್ಯಾಪಾರಿಗಳು ಮತ್ತು ರೈತರ ಹಿತದೃಷ್ಟಿಯಿಂದ ಸಹಕಾರ ಸಂಘವನ್ನು ತೆರೆದಿದ್ದು, ಸಾಲ ಪಡೆದ ಸದಸ್ಯರು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿದರೆ, ಮುಂದಿನ ಕಷ್ಟಸುಖಗಳಿಗೆ ನಿಮಗೆ ಹೆಚ್ಚು ಸಾಲ ಸಿಗುತ್ತದೆ. ಸಂಘವನ್ನು ಬೆಳೆಸುವ ಜವಾಬ್ದಾರಿ ನಿಮ್ಮದು ಎಂದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಮಾಜಿ ಶಾಸಕ ಕೆ ಷಡಕ್ಷರಿ ಎಪಿಎಂಸಿ ನಿರ್ದೇಶಕ ಕಂಚಗಟ್ಟ ಮಧುಸೂದನ್ ಚೌಡೇಶ್ವರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್ ಮಾದಿಹಳ್ಳಿ ಪ್ರಕಾಶ್ ನಾಗರಾಜ್ ಗಂಗನಘಟ್ಟ ಯೋಗಾನಂದ ಶಿವಪ್ರಸಾದ್ ಮುಂತಾದವರಿದ್ದರು ಇದ್ದರು ವರದಿ: ಆನಂದ, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಮಧುಗಿರಿ:  ತಾಲೂಕು  ವಾಸವಿ ಯುವತಿಯರ ಸಂಘ , ಆರ್ಯ ವೈಶ್ಯ ಮಂಡಳಿ ಮತ್ತು ಎಲ್ಲಾ ಆರ್ಯ ವೈಶ್ಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇತ್ತೀಚೆಗೆ ವಾಸವಿ ಜಯಂತಿಯ ಅಂಗವಾಗಿ ” ವಾಸವಿ ಶತ ಕಂಠ ಗೀತ ಗಾಯನ”,  “108 ವಿಧ ನೈವೇದ್ಯ ಸಮರ್ಪಣೆ” ಮತ್ತು  ” 108 ವಿಧದ ಹೂಗಳ ಅಲಂಕಾರ, ಹಾಗೂ 108 ಜನ ಮಹಿಳೆಯರಿಂದ ಸಾಂಪ್ರದಾಯಿಕ ಉಡುಗೆ ತೊಟ್ಟು, 108 ನಿಮಿಷಗಳ ಕಾಲ ಗೀತಗಾಯನ ನಡೆಸಿದ್ದರು.  ಈ ಕಾರ್ಯಕ್ರಮವು  ತೆಲುಗು ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ಸ್ಥಾನ ಪಡೆದಿದೆ.  ಅಂದಿನ ಕಾರ್ಯಕ್ರಮದಲ್ಲಿ ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಗೀತಾಫಣೀಶ್,  ನಿವೇದಿತಾ ಮಧು, ಸ್ವಪ್ನಾ ಸತೀಶ್, ಲಲಿತಾ ರಾಘವೇಂದ್ರ, ಆರ್ಯವೈಶ್ಯ ಮಂಡಳಿಯ ಗೌರವಾಧ್ಯಕ್ಷ ಡಿ.ಜಿ.ಶಂಕರನಾರಾಯಣ ಶೆಟ್ಟಿ,  ಅಧ್ಯಕ್ಷ ಕೆ.ಎನ್.ಶ್ರೀನಿವಾಸ್ ಮೂರ್ತಿ, ಭಾಗವಹಿಸಿದ್ದರು.  ತೆಲುಗು ಬುಕ್ ಆಫ್ ರೆಕಾರ್ಡ್ ಪ್ರಶಂಸಾ ಪತ್ರವನ್ನು ತಗ್ಗೀಹಳ್ಳಿ ರಾಮಕೃಷ್ಣ ಮಠದ ರಮಾನಂದ ಚೈತನ್ಯ ಸ್ವಾಮೀಜಿ ಸಂಘದ ಪದಾಧಿಕಾರಿಗಳಿಗೆ ನೀಡಿ ಗೌರವಿಸಿದ್ದಾರೆ ವರದಿ : ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ…

Read More

ಚಿಕ್ಕನಾಯ್ಕನಹಳ್ಳಿ:  ತಾಲೂಕು ಹುಳಿಯಾರು ಹೋಬಳಿ ಡಿಂಕನಹಳ್ಳಿ ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ 400ಕೆವಿ ಸ್ವಿಚಿಂಗ್ ಸ್ಟೇಷನ್ ಕಾಮಗಾರಿಯಿಂದ ನೂರಾರು ರೈತರಿಗೆ ತೊಂದರೆಯಾಗುತ್ತಿದ್ದು ಸರ್ಕಾರ ಕೂಡಲೇ ಸ್ವಿಚಿಂಗ್ ಸ್ಟೇಷನ್ ಬೇರೆಡೆಗೆ ಸ್ಥಳಾಂತರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ತಿಪಟೂರು ಗ್ರಾಮದೇವತೆ ಶ್ರೀಕೆಂಪಮ್ಮದೇವಿ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ದೊಡ್ಡಪೇಟೆ ಬಿ.ಹೆಚ್. ರಸ್ತೆ ಮೂಲಕ ಸಾಗಿ ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರಸಲ್ಲಿಸಲಾಯಿತು. ಪ್ರತಿಭಟನಾ ನಿರತರನ್ನ ಉದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಮೋರ್ಚ ಜಿಲ್ಲಾಧ್ಯಕ್ಷ ಕೋಡಿಹಳ್ಳಿ ಜಗದೀಶ್ ಮಾತನಾಡಿ,  ಸರ್ಕಾರ ಹುಳಿಯಾರು ಹೋಬಳಿ ಡಿಂಕನಹಳ್ಳಿ ಗ್ರಾಮದಲ್ಲಿ 400ಕೆವಿ ಸಾಮರ್ಥ್ಯದ ಸ್ವಿಚ್ಚಿಂಗ್ ಸ್ಟೇಷನ್ ಪ್ರಾರಂಭಿಸುತ್ತಿದ್ದು ಈ ಯೋಜನೆಯಿಂದ ಡಿಂಕನಹಳ್ಳಿ ಸೇರಿದಂತೆ ಸುತ್ತಮುತ್ತಲ ನೂರಾರು ಫಲವತ್ತಾದ ಕೃಷಿ ಜಮೀನು ಹಾಳಾಗುತ್ತಿದೆ ಎಂದರು. ಫಲಭರಿತ ತೆಂಗು, ಅಡಿಕೆ, ಬಾಳೆ ತೇಗ ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬೆಳೆಗಳು ನಷ್ಟವಾಗುತ್ತದೆ. ಆದರಿಂದ ಸರ್ಕಾರ ಬಂಜರು ಭೂಮಿ ಇರುವಂತಹ ಕಡೆಗೆ ಸ್ಥಳಾಂತರ ಮಾಡಿ ಅಲ್ಲಿಯ…

Read More