Author: admin

ತುಮಕೂರು: ಬೆಲೆ ಏರಿಕೆಯಾದಂತಹ ಸಂದರ್ಭದಲ್ಲಿಯೂ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಗೆ 30 ಸಾವಿರ ಮುನ್ನಡೆ ಸಿಕ್ಕಿರುವುದು ಆಶ್ಚರ್ಯವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಂದಗಿ ಹಾಗೂ ಹಾನಗಲ್ ಚುನಾವಣಾ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಸಿಂದಗಿಯಲ್ಲಿ ನಮ್ಮ ಪಕ್ಷಕ್ಕೆ ಅಷ್ಟೊಂದು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಏನು ಎನ್ನುವುದನ್ನು ಪರಿಶೀಲನೆ ಮಾಡುತ್ತೇವೆ ಎಂದು ಅವರು ಹೇಳಿದರು. ಇನ್ನೂ ಹಾನಗಲ್ ಕ್ಷೇತ್ರ ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯಾದರೂ ಅಲ್ಲಿ ನಾವು ಗೆದ್ದಿರುವುದು ಸಂತಸ ತಂದಿದೆ ಎಂದು ಜಿ.ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು.

Read More

ತುಮಕೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮತ್ತೋರ್ವ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದು, ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಶ್ರೀನಿವಾಸ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪುನೀತ್ ನಿಧನದ ಸುದ್ದಿ ಕೇಳಿ ಶ್ರೀನಿವಾಸ್ ಬೆಂಗಳೂರಿಗೆ ಬಂದಿದ್ದರು.  ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅವರ ಅಂತಿಮ ದರ್ಶನ ಪಡೆದು ಮನೆಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಮನೆಗೆ ತಲುಪಿದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆನೋವಿನಿಂದಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿ ಭರತ್ ಎಂಬವರು ಆತ್ಮಹತ್ಯೆಗೆ ಶರಣಾದ ಘಟನೆ ಕೂಡ ತುಮಕೂರು ಜಿಲ್ಲೆಯಲ್ಲಿ  ನಡೆದಿದ್ದು, ಹೀಗಾಗಿ ಜಿಲ್ಲೆಯಲ್ಲಿ ಇಬ್ಬರು ಪುನೀತ್ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

Read More

ತುಮಕೂರು: ಸಾಹಿತಿಗಳು ಶ್ರೇಷ್ಠತೆಯ ವ್ಯಸನದಿಂದ ಹೊರಬರ ಬಂದು ಜನಸಾಮಾನ್ಯರಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಕೆಲಸ ಮಾಡಬೇಕು ಎಂದು ಸಾಹಿತಿ ಡಾ.ಕೆ.ಆರ್.ಸಂಧ್ಯಾ ರೆಡ್ಡಿ ಸಲಹೆ ನೀಡಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೇಖಕಿ ಬಿ.ಸಿ.ಶೈಲಾ ನಾಗರಾಜ್ ಅವರಿಗೆ ಇಂದಿರಾರತ್ನ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಯುವಜನರು, ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಮೂಡಿಸಲು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕಾಗಿದೆ ಎಂದರು. ದೊಡ್ಡದೊಡ್ಡ ಸಾಹಿತಿಗಳು, ವಿಮರ್ಶಕರಿಗೆ ಜನಸಾಮಾನ್ಯರು ಲೆಕ್ಕಕ್ಕೇ ಇಲ್ಲ. ಸಾಮಾನ್ಯರ ಅಭಿರುಚಿ ತಿಳಿದುಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಶ್ರೇಷ್ಠತೆಯ ವ್ಯಸನದಿಂದ ನರಳುತ್ತಿದ್ದು, ಮಹಿಳಾ ಸಾಹಿತ್ಯವನ್ನು ಅವಗಣನೆಯಿಂದ ನೋಡುತ್ತಿದ್ದಾರೆ ಎಂದು ಸಂಧ್ಯಾ ರೆಡ್ಡಿ ವಿಷಾದ ವ್ಯಕ್ತಪಡಿಸಿದರು. ಕನಕ, ಬಸವ, ಅಂಬೇಡ್ಕರ್, ವಾಲ್ಮೀಕಿ ಜಯಂತಿಗಳನ್ನು ಸರ್ಕಾರಗಳು ಮಾಡುತ್ತವೆ. ಆಯಾ ಜಾತಿಯ ಮುಖಂಡರು, ಶಾಸಕರನ್ನು ಕರೆಸಿ ಪ್ರಶಸ್ತಿ ಕೊಡಿಸಿ ಕಾರ್ಯಕ್ರಮ ಮುಗಿಸುವುದರಿಂದ ಯಾರಿಗೂ ಮಹನೀಯರ ಕುರಿತು ಮಾಹಿತಿ ತಿಳಿಯುವುದಿಲ್ಲ. ಕಣ್ಣಿಗೆ ಪಟ್ಟಿ ಕಟ್ಟಿಕೊಂಡಂತೆ ಕಾರ್ಯಕ್ರಮ ನಡೆಸುತ್ತಾರೆ. ಅವರನ್ನು ಜಾತಿಗೆ ಸೀಮಿತಗೊಳಿಸಿ ಅರ್ಥಹೀನವಾಗಿ ಜಯಂತಿ ಆಚರಿಸುತ್ತಿದ್ದು, ಇದು…

Read More

ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ಕೋಡಿಪಾಳ್ಯ ಗ್ರಾಮದಲ್ಲಿ ನಟ ಅಭಿಮಾನಿ ಭರತ್ (30) ನೇಣು ಹಾಕಿಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ. ಪುನೀತ್ ಅಭಿಮಾನಿಯಾಗಿದ್ದು, ಅವರ ಸಾವನ್ನು ನೋಡಲಾಗುತ್ತಿಲ್ಲ. ಪುನೀತ್ ಹೋದ ಜಾಗಕ್ಕೆ ನಾನು ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ ಭರತ್ ಗಾರೆ ಕೆಲಸ ಮಾಡಿಕೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತನ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗುಬ್ಬಿ: ತಾಲ್ಲೂಕಿನ ಚೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ದ ಅವಿಶ್ವಾಸ ಮಂಡನೆ ಮಾಡಲು ಮುಂದಾದ ಘಟನೆ ನಡೆದಿದೆ. ದಿನಾಂಕ 30 /10/2021 ರ ಶನಿವಾರ ದಂದು ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿತ್ತು ಈ ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರು ಗ್ರಾಮ ಪಂಚಾಯ್ತಿ ಬಂದ ಅನುದಾನವನ್ನು  ಯಾವ ಯಾವ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ ಎಂಬ ಮಾಹಿತಿಯನ್ನು  ಕೇಳಿದರೆ, ಇದಕ್ಕೆ ಸಮಂಜಸವಲ್ಲದ ಉತ್ತರ ನೀಡಿದ ಗ್ರಾ.ಪಂ. ಅಧ್ಯಕ್ಷರ ನಡೆಗೆ  ಸಭೆಯಲ್ಲಿದ್ದ ಸದಸ್ಯರೆಲ್ಲರೂ  ಕೆಂಡಾಮಂಡಲವಾಗುವಂತ ನಿದರ್ಶನ  ಸಭೆಯಲ್ಲಿ ನಡೆಯಿತು . ಚೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ಬ್ಲಾಕ್ ನಿಂದ  ಚುನಾಯಿತ ಮಹಿಳಾ ಸದಸ್ಯರಾದ ಪದ್ಮರವರು  ಪಂಚಾಯಿತಿ ಅಭಿವೃದ್ಧಿಗೆಂದು 6 ಲಕ್ಷದ  80 ಸಾವಿರ  ಹಣವನ್ನು ಬಳಕೆ ಮಾಡಿರುವುದರ  ಬಗ್ಗೆ ರಸಿದಿ ಸಮೇತವಾಗಿ ಖರ್ಚು ವೆಚ್ಚದ ಮಾಹಿತಿಯನ್ನು ಕೇಳಿದಾಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯ ನಿರ್ವಹಿಸುವ  ಸಲಕರಣೆಗಳನ್ನು ನೀಡುವ  ಖಾಸಗಿ ಹಾರ್ಡ್ವೇರ್ ಅಂಗಡಿ  ಮಾಲಿಕನನ್ನು ಕರೆಸಿ ವಿಚಾರಿಸಿದಾಗ ನಾನು ನಮ್ಮ ಅಂಗಡಿಯಲ್ಲಿ ಖರೀದಿ ಮಾಡಿರುವ…

Read More

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು. ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೆ  ದೇವಾಲಯದ ಗೊಡೆಗೆ ಮುಜರಾಯಿ ಇಲಾಖೆಯಿಂದ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಗ್ರಾಮದ ಕೆಲವು ಕಿಡಿಗೇಡಿಗಳು ಮಾಡಿದ್ದರು. “ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮದ ಬೇಧವಿಲ್ಲದೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು. ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ್  ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ಗ್ರಾಮದ ದಲಿತರು ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ…

Read More

ಸರಗೂರು: ತಾಲ್ಲೂಕಿನ ಕೆ.ಬೆಳತೂರು ಗ್ರಾಮದಲ್ಲಿ ದಿವಂಗತ ಚಿಕ್ಕಮಾದು ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ  ಚಿಕ್ಕಮಾದು ಅಭಿಮಾನಿ ಬಳಗದ ವತಿಯಿಂದ ನಡೆಸಲಾಯಿತು. ಕೆ.ಬೆಳತೂರು ಬಸ್ ನಿಲ್ದಾಣದ ಬಳಿ  ದಿವಂಗತ ಚಿಕ್ಕಮಾದು ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ, ಪುಷ್ಪರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.  ಇದಕ್ಕೂ ಮೊದಲು ಆಕಾಲಿಕ ಮರಣ ಹೊಂದಿದ ಅಪ್ಪು ಅವರಿಗೆ 2 ನಿಮಿಷಗಳ ಕಾಲ ಮೌನಚಾರಣೆ ಮಾಡಲಾಯಿತು. ದಿವಂಗತ ಚಿಕ್ಕಮಾದು ಅವರ ನೆನಪಿನಾರ್ಥವಾಗಿ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಧನಸಹಾಯ ಮಾಡಿದರು.  ದಿವಂಗತ ಚಿಕ್ಕಮಾದು ಅವರು ಮಾಡಿರುವ ಸಾಧನೆಗಳ ಬಗ್ಗೆ ಚಿಕ್ಕವಯಸ್ಸಿನ ಮಕ್ಕಳು ಹಾಗೂ ವಯಸ್ಕರಿಗೆ ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಭೋಜನ ವ್ಯವಸ್ಥೆ ನಡೆಸಿ, ನೇರವೇರಿದ ಅಭಿಮಾನಿಗಳಿಗೆ ಹಂಚಿದರು.  ಇದೇವೇಳೆ ಚಿಕ್ಕಮಾದು ಅಭಿಮಾನಿ ಬಳಗದ ಮಂಜು, ಹರೀಶ್, ಪ್ರತಾಪ್, ಗೋಪಾಲ್,ಕೆಂಪ, ಪ್ರಸಾದ್ ಹಾಗೂ ಇನ್ನಿತರರು ಇದ್ದರು.

Read More

ತುಮಕೂರು: ಶ್ರೀ ಸಿದ್ಧಗಂಗಾ ಮಠದಲ್ಲಿ 10,000 ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ  ಬೃಹತ್ ಉಚಿತ  ಆರೋಗ್ಯ ತಪಾಸಣೆ, ಔಷಧಿಗಳ ವಿತರಣೆ ಹಾಗೂ ಮಕ್ಕಳಿಗೆ ಕನ್ನಡಕ ವಿತರಣೆಯ  ಉದ್ಘಾಟನಾ ಕಾರ್ಯಕ್ರಮ  25-10-21 ರಿಂದ 31-10-21ರವರೆಗೆ ನಡೆಯಿತು. ರೋಟರಿ ಬಿಲ್ವಪ್ರಿಯ ಬೆಳ್ಳಾವಿ ಹಾಗೂ ಲಯನ್ಸ್ ಕ್ಲಬ್ ಮತ್ತು ಬೆಂಗಳೂರಿನ 9  ರೋಟರಿ ಕ್ಲಬ್ ಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಆರೋಗ್ಯ ಶಿಬಿರದಲ್ಲಿ ಉಚಿತವಾಗಿ  ಕಣ್ಣಿನ ಚಿಕಿತ್ಸೆ ಚರ್ಮದ ಚಿಕಿತ್ಸೆ ದಂತ ಚಿಕಿತ್ಸೆ ಹಾಗೂ ವಿನ್ಸ್ ಕೈಗಳನ್ನು ತೊಳೆಯುವ  ವಿಧಾನ ಹಾಗೂ ದೇಹದ ಶುಚಿತ್ವದ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಮಕ್ಕಳ ಕಲಿಕಾ ಪೂರ್ವಕವಾಗಿ ರೋಟರಿ ಯೂತ್ ಲೀಡರ್ ಶಿಪ್ ಅವಾರ್ಡ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಣ್ಣಿನ ಲೋಪ ದೋಷವುಳ್ಳ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತವಾಗಿ ಕನ್ನಡಕ ವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆ.ಎಸ್.ನಾಗೇಂದ್ರ ಭಾಗವಹಿಸಿದ್ದರು.  ಗೌರವ ಅತಿಥಿಗಳಾಗಿ ಆಶಾ ಪ್ರಸನ್ನಕುಮಾರ್,  ಬಾಲಾಜಿ ಡಿಸ್ಟ್ರಿಕ್ಟ್ ಕಮ್ಯುನಿಟಿ…

Read More

ತುಮಕೂರು ಗ್ರಾಮಾಂತರ: ಶಾಸಕರಾದ ಡಿ.ಸಿ.ಗೌರಿಶಂಕರ್ ರವರು ಹೆಬ್ಬೂರಿನ ಸಿದ್ದ ನಾಯಕನ ಪಾಳ್ಯದ ನೂತನ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಾಲಯದ ಸ್ಥಿರ ಬಿಂಬ ಪ್ರತಿಷ್ಠಾಪನೆ, ಹಾಗೂ ಜ್ಞಾನ ವಿಮಾನ ಗೋಪುರ ಕಳಸ ಸ್ಥಾಪನೆ, ಜೀರ್ಣೋದ್ದಾರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  ದೇವರ ದರ್ಶನದ ಬಳಿಕ, ಭಕ್ತಾದಿಗಳಿಗೆ ಸ್ವತಃ ಶಾಸಕರೇ ಊಟ ಬಡಿಸಿದರು. ಈ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ  ಶಾಸಕರ ಕುಟುಂಬದ ವತಿಯಿಂದ ವೈಯಕ್ತಿಕವಾಗಿ 2,50,000 (ಎರಡೂವರೆ ಲಕ್ಷ) ಧನಸಹಾಯ  ನೀಡಿದರು. ತುಮಕೂರು ಸಿದ್ದಗಂಗಾ ಮಠ ಬಿಟ್ಟರೆ ಪ್ರತಿನಿತ್ಯ ಅನ್ನದಾಸೋಹ ಮಾಡುವ ಕುಟುಂಬ ಚನ್ನಿಗಪ್ಪ ರವರ ಕುಟುಂಬವಾಗಿದ್ದು, ಅದರಂತೆಯೇ ಮೂರು ದಿನಗಳ ಕಾಲ ನಡೆದ ದೇವಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಪೂರ್ಣ ಊಟದ ವ್ಯವಸ್ಥೆಯನ್ನು ಸ್ವತಃ ಶಾಸಕರೇ ಕಲ್ಪಿಸಿದ್ದರು.  ವರದಿ:  ಸಿದ್ದೇಶ್.N,S.ನೇಗಲಾಲ. ತುಮಕೂರು.

Read More

ಛಲವಾದಿ ಆದಿಜಾಂಭವ ಕೃಷಿ ಭೂಮಿ ರಹಿತರ ಕ್ಷೇಮಾಭಿವೃದ್ಧಿ ಸಂಘ ನವೆಂಬರ್ 2ರಂದು ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು 11 ಗಂಟೆಗೆ ನಡೆಸಲಾಯಿತು. 31 ಜನ  ಸದಸ್ಯರು ತಿಳಿಸಿದ ವಿಚಾರಗಳನ್ನು ಈ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಯಿತು. ಛಲವಾದಿ ಆದಿಜಾಂಭವ ಕೃಷಿ ಭೂಮಿ ರಹಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ  ಸಮುದಾಯದ ಮುಖಂಡರುಗಳಿಂದ ಸಭೆ ನಡೆಸಿದರು. ದಲಿತರಿಗೆ ಭೂಮಿ ಮತ್ತು ವಸತಿ ವಿಷಯವಾಗಿ ಚರ್ಚೆ ನಡೆಸಲಾಯಿತು, ಸಭೆಯಲ್ಲಿ ರಂಗಯ್ಯ, ರಾಮಯ್ಯ ಪಿ.ಎನ್. ರಘಣ್ಣ ಕೇಬಲ್, ಭಾನುಪ್ರಕಾಶ್ ರಾಘವೇಂದ್ರ ಸ್ವಾಮಿ, ಶಿವಾಜಿ ಜೈಪುರ, ಹಬ್ಬತ್ತನಹಳ್ಳಿ ಶ್ರೀನಿವಾಸ್, ಬಂಡೆಕುಮಾರ್, ರಾಮಯ್ಯ ಟಿ.ಸಿ.,  ಮತ್ತು ಶೇಖರ್ ಉಪಸ್ಥಿತರಿದ್ದರು.

Read More