Subscribe to Updates
Get the latest creative news from FooBar about art, design and business.
- ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
- 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
- ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
- ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
- ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
- ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ: ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
- ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
Author: admin
ಆಶ್ರಯವಿಲ್ಲದೆ ಜೀವಗಳಿಗೆ ಬದುಕು ಸವಾಲಾಗಿ ಬಿಡುತ್ತದೆ. ಇಡೀ ಜೀವನವೆಲ್ಲಾ ಕೆಸರಲ್ಲಿ ನಡೆಯುವ ಅನುಭವ .ಎಲ್ಲಿ ತಪ್ಪು ಹೆಜ್ಜೆ ಇಟ್ಟರು ಜಾರಿ ಬೀಳುವ ಭಯ. ಸಂಬಂಧಗಳು ಗಟ್ಟಿಯಾಗಿ ನಿಲ್ಲುವ ಬದಲಿಗೆ ಕಿತ್ತು ಹೋಗುವ ಸಂಭವವೇ ಹೆಚ್ಚು. ಆಗ ನನಗೆ 18ರ ಪ್ರಾಯ .ಬಹಳ ಪ್ರಯಾಸದಿಂದ 10 ನೇ ತರಗತಿ ಮುಗಿಸಿದ್ದೆ. ಅಪ್ರಬುದ್ಧ ವಯಸ್ಸು. ಕನಸು ಕಾಣುವ ಹಂಬಲ ಎಲ್ಲರಂತೆ ಓದು ಮುಂದುವರಿಸುವ ಆಸೆ. ಕಂಡ ಕನಸೆಲ್ಲಾ ನನಸಾಗುವುದು ಸುಲಭದ ಮಾತಲ್ಲ. ಇಸ್ಲಾಮಿನ ಶಿಕ್ಷಣ ಪಡೆದಿದ್ದ ತಂದೆಯವರು ಊರಿನ ಮಸೀದಿಯಲ್ಲಿ ಮೌಲವಿಗಳಾಗಿ ಸೇವೆಸಲ್ಲಿಸುತ್ತಿದ್ದರು. ಆಗ ಅವರಿಗೆ ತಿಂಗಳ ಸಂಬಳದ ರೂಪದಲ್ಲಿ 40 ರೂಪಾಯಿ ಊರಿನ ಹಿರಿಯರು ವಂತಿಗೆ ರೂಪದಲ್ಲಿ ಕೊಡುತ್ತಿದ್ದರು. ನಿಗದಿತ ಹಣ ಸರಿಯಾಗಿ ತಲುಪಿದ್ದು ಕಾಣಲಿಲ್ಲ. ತಿಂಗಳೆಲ್ಲಾ ಊರಿನ ಉಸಾಬರಿ ಮಾಡಿದರೂ ಕೊಡುವ ದುಡ್ಡು 4 ದಿನಕ್ಕೆ ಸಾಕಾಗುತ್ತಿರಲಿಲ್ಲ. ಗುಡಿಸಲ ಬದುಕು ಮೂರಾಬಟ್ಟೆ ಎಂಬಂತೆ ಬಡತನ ಕಿತ್ತು ತಿನ್ನುತ್ತಿತ್ತು. ಮಕ್ಕಳಿಂದ ತುಂಬಿದ ಸಂಸಾರ. ಮೂರು ಗಂಡು ನಾಲ್ಕು ಹೆಣ್ಣು ಮಕ್ಕಳು. ತಂದೆ-ತಾಯಿ ಸೇರಿ…
ಸರಗೂರು: ಡಿಬಿ ಕುಪ್ಪೆ ಗ್ರಾಮದ ವ್ಯಾಪ್ತಿಯ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೇನೆ ಎಂದು ಮಾಜಿ ಶಾಸಕ ಚಿಕ್ಕಣ್ಣ ಹೇಳಿದರು ಸರಗೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಬಿ ಕುಪ್ಪೆ, ಆನೆ ಮಾಳ, ಮಚ್ಚೂರು ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಇದುವರೆಗೂ ಹಕ್ಕು ಪತ್ರ ನೀಡಿಲ್ಲ ಇದು ಹಲವು ವರ್ಷಗಳಿಂದ ದೊಡ್ಡ ಸಮಸ್ಯೆಯಾಗಿದೆ ಕೂಡಲೇ ಹಕ್ಕು ಪತ್ರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಜತೆ ಚರ್ಚಿಸಿದ್ದೇನೆ. ಮನವಿ ಪತ್ರವನ್ನು ನೀಡಿದ್ದೇನೆ ಮುಂದಿನ ದಿನಗಳಲ್ಲಿ ಹಕ್ಕು ಪತ್ರ ನೀಡಲು ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು ಯುವ ಮುಖಂಡ ಜಯಪ್ರಕಾಶ್. ಜೆಡಿಎಸ್ ಪಕ್ಷದ ಅಧ್ಯಕ್ಷ ರಾಜೇಂದ್ರ. ನಾಗನಾಯಕ. ಪುರಸಭೆ ಸದಸ್ಯ ಹರೀಶ್ ಗೌಡ.ರಾಜೇಗೌಡ.ಎನ್ ಡಿ ರಾಜಣ್ಣ. ಇನ್ನಿತರರು ಇದ್ದರು.
ಹೆಚ್ ಡಿ ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಬಿನಿಗೆ ತೆರಳಿ ಬಾಗಿನ ಸಮರ್ಪಿಸಿದರು. ಮುಖ್ಯಮಂತ್ರಿಯಾದ ಮೊದಲನೆ ವರ್ಷವೆ ಬಾಗಿನ ಅರ್ಪಿಸುವ ಅವಕಾಶ ಬಸವರಾಜ ಬೊಮ್ಮಾಯಿವರಿಗೆ ಒದಗಿಬಂದಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಲವು ಸಚಿಬರು ಹಾಗೂ ಶಾಸಕರೊಡನೆ ಕಪಿಲೆಗೆ ಬಾಗಿನ ಸಮರ್ಪಿಸಿದರು ನಂತರ ಮಾತನಾಡಿದ ಅವರು ರೈತರ ಮೊಗದಲ್ಲಿ ಮಂದಹಾಸ ಮೂಡಬೇಕದರೆ ಕೆರೆ ಕಟ್ಟೆಗಳು ತುಂಬಿ ಹರಿಯಬೇಕು ಈ ವರ್ಷ ಉತ್ತಮ ಮಳೆಯಾಗಿದ್ದು ಕಬಿನಿ ಅಣೆಕಟ್ಟು ತುಂಬಿದ್ದು ರೈತರ ಮುಖದಲ್ಲಿ ಸಂತೋಷ ಮೂಡಿದೆ ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುವ ಶಕ್ತಿ ಹೆಚ್ ಡಿ ಕೋಟೆ ವನಸಿರಿ ನಾಡಿಗಿದೆ ಮುಂದೆ ಕಬಿನಿಯಲ್ಲಿ ಉತ್ತಮ ಉದ್ಯಾನ ನಿರ್ಮಾಣ ಮಾಡಲು ನನ್ನ ಸಹಕಾರ ಇದ್ದೆ ಇರುತ್ತದೆ ಎಂದರು. ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಕೊಳ್ಳೆಗಾಲ ಶಾಸಕ ಎನ್ ಮಹೇಶ್, ನಂಜನಗೂಡು ಶಾಸಕ ಹರ್ಷವರ್ದನ್ ಸೇರಿದಂತೆ ಇತರೆ …
ತುಮಕೂರು: ನಗರದ ಸ್ಟೇಶನ್ ರಸ್ತೆಯ “ಸಮೃದ್ಧಿ ಗ್ರ್ಯಾಂಡ್” ಹೊಟೇಲ್ ನಲ್ಲಿ ಜಿ.ಎಲ್.ನಟರಾಜು ಅವರ ಸಾರಥ್ಯದ “ನಮ್ಮ ತುಮಕೂರು” ಡಿಜಿಟಲ್ ಮಾಧ್ಯಮವು ಸೋಮವಾರ(01-11-2021) ಲೋಕಾರ್ಪಣೆಯಾಯಿತು ಕನ್ನಡ ರಾಜ್ಯೋತ್ಸವ ಶುಭ ದಿನದಂದು ಸಂಜೆ ನಡೆದ ಲೋಕಾರ್ಪಣೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಶ್ವವಿದ್ಯಾನಿಲಯ ಕಲಾ ಕಾಲೇಜು ತುಮಕೂರಿನ ಕನ್ನಡ ವಿಭಾಗದ ಮುಖ್ಯಸ್ಥ ಬಿ.ಕರಿಯಣ್ಣ ಮಾತನಾಡಿ, ಮಾಧ್ಯಮಗಳು ಯಾವುದೇ ಮುಲಾಜಿಗೆ ಒಳಗಾಗಿ ಪರರ ಆಧೀನವಾಗಬಾರದು ಮತ್ತು ಗ್ರಾಮೀಣ ಪ್ರದೇಶದ ಶೋಷಿತರು, ನೊಂದವರ ಧ್ವನಿಯಾಗಬೇಕು. ನಟರಾಜುರವರ “ನಮ್ಮ ತುಮಕೂರು” ಮಾಧ್ಯಮ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿ ಎಂದು ಶುಭಕೋರಿದರು. ಇನ್ನೋರ್ವ ಮುಖ್ಯ ಅತಿಥಿ ಸಾಹಿತಿ ಎನ್.ನಾಗಪ್ಪನವರು ಮಾತನಾಡಿ, ಹಸಿರು ಬೆಳೆದು ಅನ್ನ ನೀಡುವ ರೈತರ ಉಸಿರು ಉಳಿಸಲು, ರೈತರ ಅಭಿವೃದ್ಧಿಗೆ ಮಾಧ್ಯಮ ಬೆಳಕು ಚೆಲ್ಲಲಿ. ಈ ನಿಟ್ಟಿನಲ್ಲಿ “ನಮ್ಮ ತುಮಕೂರು” ಮಾಧ್ಯಮದ ಮೂಲಕ ನಟರಾಜು ಕೆಲಸ ಮಾಡುವಂತಾಗಲಿ ಎಂದು ಹಾರೈಸಿದರು. ನಗರದ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರಿ ಅವರು ಮಾತನಾಡಿ, ನಟರಾಜು ಅವರು ತಮ್ಮ ವಿದ್ಯಾರ್ಥಿ…
ಬೆಂಗಳೂರು: ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.6ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನ.2ರಂದ 6ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಮುಂದುವರಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೇ 3ರಿಂದ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇದೇ 6ರಿಂದ ಮಳೆ ಹೆಚ್ಚಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು.
ಗುಬ್ಬಿ: ಕನ್ನಡಿಗರ ಹಬ್ಬದ ದಿನದಂದೇ ಗ್ರಾಮೀಣ ಭಾಗದ ಜನತೆಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಗುಬ್ಬಿ ನಗರದಲ್ಲಿ ಎಲ್ಲ ವೈದ್ಯಕೀಯ ಸೇವೆಗಳನ್ನು ಒಳಗೊಂಡ ನೂತನ ಚಾಲುಕ್ಯ ಹೈಟೆಕ್ ಆಸ್ಪತ್ರೆ ಪ್ರಾರಂಭವಾಗಿರುವುದು ತಾಲೂಕಿನ ಜನತೆಗೆ ವರದಾನವಾಗಲಿದ್ದು, ಒಂದೇ ಕಡೆ ಎಲ್ಲ ರೀತಿಯ ಆರೋಗ್ಯ ಸೇವೆಗಳು ಜನತೆಗೆ ದೊರೆಯುವ ನಿಟ್ಟಿನಲ್ಲಿ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಮುರಳಿಧರ್ ಮತ್ತು ನಾಗಭೂಷಣ್ ಮತ್ತು ಇವರ ಕುಟುಂಬದ ಇನ್ನು ಉಳಿದ ನಾಲ್ಕು ಜನ ವೈದ್ಯರು ಸೇರಿ ವೈದ್ಯಕೀಯ ಸೇವೆ ನೀಡಲು ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ಗುಬ್ಬಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಚಾಲುಕ್ಯ ಆಸ್ಪತ್ರೆ ಉದ್ಘಾಟನೆ ಮಾಡಿ ಮಾತನಾಡಿದ ಅವರು ಈ ಆಸ್ಪತ್ರೆಯಲ್ಲಿ 30 ಹಾಸಿಗೆಯುಳ್ಳ ಹೈಟೆಕ್ ಆಸ್ಪತ್ರೆಯಾಗಿದ್ದು ಅದರಲ್ಲಿ10 ಹಾಸಿಗೆಗಳನ್ನು ಗ್ರಾಮೀಣ ಭಾಗದ ನಿರ್ಗತಿಕರು ನಿರಾಶ್ರಿತರು ಹಾಗೂ ಅಸಹಾಯಕರಿಗೆ ಮೀಸಲಿರಿಸಿದ್ದು ಅವರಿಗೆ ಉಚಿತವಾಗಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳನ್ನು ನೀಡಲು ಮುಂದಾಗಿರುವುದು ಬಹಳ ಹೆಮ್ಮೆಯ…
ತಿಪಟೂರು: ಪ್ರತಿಯೊಬ್ಬ ಮಾನವನ ಜೀವನದಲ್ಲಿಯೂ ಕ್ರೀಡೆ ಅವಿಭಾಜ್ಯ ಅಂಗವಾಗಬೇಕಿದ್ದು, ದೈಹಿಕ ಸದೃಢತೆಯ ಬಗ್ಗೆ ಕಾಳಜಿವಹಿಸುವ ಅಗತ್ಯವಿದೆ. ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಡಿವೈಎಸ್ ಪಿ ಸಿದ್ದಾರ್ಥ ಗೋಯಲ್ ತಿಳಿಸಿದರು. ನಗರದ ಅರಳಿಕಟ್ಟೆಯ ಬಳಿ ತಿಪಟೂರು ಸ್ಫೋರ್ಟ್ ಕ್ಲಬ್ ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ 20ನೇ ವರ್ಷದ ಪುರುಷರ ಮತ್ತು ಮಹಿಳೆಯರ ರಾಜ್ಯಮಟ್ಟದ ರಸ್ತೆ ಓಟದ ಸ್ಫರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿವೈಎಸ್ ಪಿ ಸಿದ್ದಾರ್ಥ ಗೋಯಲ್, ಕ್ರೀಡೆ ಇಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ ಎಂದರು. ಸ್ಫರ್ಧಾ ಮನೋಭಾವನೆಯಿಂದ ಭಾಗವಹಿಸಿ ತಮ್ಮ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ಧಿಸಿಕೊಳ್ಳುವತ್ತ ಚಿತ್ತವನ್ನು ಹರಿಸಬೇಕಿದೆ. ಆರೋಗ್ಯ ಹಾಗೂ ಸುಸ್ಥಿರತೆಗೆ ಕ್ರೀಡೆ ಹೆಚ್ಚು ಬಲವನ್ನು ನೀಡುವಂತದ್ದಾಗಿದ್ದು ಅದರ ಮಹತ್ವವನ್ನು ಅರಿತುಕೊಂಡು ತಾರತಮ್ಯವಿಲ್ಲದೇ ತೋಡಗಿಸಿಕೊಳ್ಳಬೇಕು.ಸೋಲು-ಗೆಲುವು ಕ್ರೀಡೆಗಳಲ್ಲಿ ಸಾಮಾನ್ಯವಾಗಿದ್ದು ತಮ್ಮ ಮನೋಸ್ಥೈರ್ಯವನ್ನು ಸೋತಾಗ ಹೆಚ್ಚಿಸಿಕೊಳ್ಳಬೇಕೆ ಹೊರತು ಕುಗ್ಗಿಸಿಕೊಳ್ಳಬಾರದು ಹದಿಹರೆಯದವರಿಂದ ಹಿಡಿದು ಎಲ್ಲಾ ವಯೋಮಾನದವರು ದಿನನಿತ್ಯವೂ ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸದೃಢತೆಯನ್ನು ಸಂಪಾದಿಸಿಕೊಳ್ಳಬೇಕು…
ಪಾವಗಡ: ಗಡಿ ಭಾಗಗಳಲ್ಲಿ ಕನ್ನಡ ಭಾಷೆ ಕಂಪು ಹೆಚ್ಚಿಸಲು ಸರ್ಕಾರ ಅಗತ್ಯ ಕ್ರಮ ಮತ್ತು ಅಭಿವೃದ್ದಿಗೆ ಒತ್ತು ನೀಡಬೇಕು ಕ.ರ .ವೇ ಪ್ರಧಾನ ಕಾರ್ಯದರ್ಶಿ ಓಂಕಾರ ನಾಯಕ ಸರ್ಕಾರಕ್ಕೆ ಅಗ್ರಹಿಸಿದರು. ಪಾವಗಡ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ ) ವತಿಯಿಂದ ಇಂದು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ನಡೆದ 66 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪಾವಗಡ ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದಿ.ಪುನೀತ್ ರಾಜ್ ಕುಮಾರ್ ರವರಿಗೆ ಮೌನಚಾರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ರಾಜ್ಯದ ಭಾಷೆ ಮತ್ತು ಇನ್ನಿತರ ಸಮಸ್ಯೆಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಬೇಕು. ಗಡಿ ಭಾಗಗಳಲ್ಲಿ ಅನೇಕ ತೊಂದರೆಗಳು ಅಲ್ಲಿನ ಕನ್ನಡಿಗರು ಅನುಭವಿಸುವ ನಿದರ್ಶನಗಳು ಇತ್ತೀಚಿನ ದಿನಗಳಲ್ಲಿ ಗೋಚರಿಸುತ್ತಿದೆ ಅದನ್ನು ಸರ್ಕಾರಗಳು ಸರಿ ಪಡಿಸುವ ಮತ್ತು ಅಲ್ಲಿನ ಭಾಷೆ ನೆಲ ಜಲ ಗಾಳಿ ನೀರು ರಕ್ಷಣೆಗೆ ಮುಂದಾಗಬೇಕು ಎಂದರು ಜೊತೆಗೆ ಗಡಿ ನಾಡಿನ ತಾಲೂಕು ಕೇಂದ್ರ ಮತ್ತು…
ಕುಂಚಬ್ರಹ್ಮ, ಕುಂಚ ಕಲಾವಿದ, ರೇಖೆಗಳ ಮೋಡಿಗಾರ, ಕರ್ನಾಟಕ ಕಂಡ ಮಹಾನ್ ಹಿರಿಯಜೀವಿ 69ರ ವಸಂತದಲ್ಲಿ ಪಾದಾರ್ಪಣೆ ಮಾಡಿದ ಮುತ್ಸದ್ದಿ ಚಿತ್ರಕಲಾ ಶಿಕ್ಷಕರಾಗಿ, ತುಮಕೂರು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಮುಖ್ಯಸ್ಥರಾಗಿದ್ದರು ಸರ್ಕಾರಿ ಕಲಾಶಾಲೆ ಪ್ರಾರಂಭಿಸಲು ಪರಿಶ್ರಮ ಪಟ್ಟಿದ್ದಲ್ಲದೆ ಇತಿಹಾಸ ಪುಟ ಬರೆದ ಮಹಾನ್ ವ್ಯಕ್ತಿ ಸಾವಿರಾರು ವಿದ್ಯಾರ್ಥಿಗಳಿಗೆ ಚಿತ್ರಕಲಾ ವಿದ್ಯಾದಾನ ಮಾಡಿ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಲು ಸಹಾಯ ಮಾಡಿ ದಾರಿದೀಪವಾಗಿದ್ದಾರೆ “ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ತುಮಕೂರು” ವಿದ್ಯಾರ್ಥಿಗಳ ಪ್ರೀತಿಯೇ ಇದಕ್ಕೆ ಸಾಕ್ಷಿಯಾಗಿದೆ ಇಂತಹ ಮಹಾನ್ ವ್ಯಕ್ತಿಯಾದ ಡಾ. ಎಂ.ಕೋಟೆಪ್ಪ A.M., G.D., M.A., M.Ed., M.Phil., Ph.D., P.G.D.H.E (IGNOU) ನವರ ಪರಿಚಯವನ್ನು ಗೊಲನ ಎಂಟರ್ ಪ್ರೈಸಸ್ ಮಾಲೀಕರಾದ ನಟರಾಜು ಜಿ.ಎಲ್. ರವರ ಸಾರಥ್ಯದಲ್ಲಿ “ನಮ್ಮ ತುಮಕೂರು ಡಾಟ್ ಕಾಮ್ ಎಂಬ ಹೆಸರಿನ ಆನ್ಲೈನ್ ಮಾಧ್ಯಮ”ದಲ್ಲಿ ಮೊದಲನೇ ಸಂಚಿಕೆ ನವಂಬರ್ 1ನೇ ತಾರೀಖು 2021ರ ಕಲಾವಿದ ಪರಿಚಯ ಪುಟದ ಸಂಚಿಕೆಯಲ್ಲಿ ಬರೆಯಲು ಅವರ ಶಿಷ್ಯಂದಿರ ಬಳಗದಲ್ಲಿ ಒಬ್ಬರಾದ ರಾಜ್ಯಮಟ್ಟದ…
ಬೆಂಗಳೂರು: ಎಂಟು ಇಲಾಖೆಗಳ 58 ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ‘ಜನಸೇವಕ’ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಚಾಲನೆ ನೀಡಿದರು. ವಿಧಾನಸೌಧದ ಎದುರಿನ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಜನಸೇವಕ, ಏಕೀಕೃತ ದೂರು ಪರಿಹಾರ ವ್ಯವಸ್ಥೆ ಮತ್ತು ಸಾರಿಗೆ ಇಲಾಖೆಯ ಕಾಗದ ರಹಿತ ಮತ್ತು ಸಂಪರ್ಕ ರಹಿತ ಸೇವೆಗಳನ್ನು ಉದ್ಘಾಟಿಸಿದರು. ಜನಸೇವಕ ಯೋಜನೆಯಲ್ಲಿ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಆಧಾರ್), ಕಂದಾಯ ಇಲಾಖೆಯ 21, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಂಡಳಿಯ ಒಂಬತ್ತು, ಬಿಬಿಎಂಪಿಯ 18, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಒಂದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಂದು, ಪೊಲೀಸ್ ಇಲಾಖೆಯ ಮೂರು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಒಂದು ಸೇವೆಯನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಸೋಮವಾರದಿಂದ ಜಾರಿಗೆ ತರಲಾಗಿದೆ. 2022ರ ಜನವರಿ 26ರೊಳಗೆ ರಾಜ್ಯದ ಎಲ್ಲ ಕಡೆಗಳಲ್ಲೂ ಜಾರಿಗೊಳಿಸುವ ಗುರಿ…