Subscribe to Updates
Get the latest creative news from FooBar about art, design and business.
- ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
- 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
- ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
- ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
- ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
- ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ: ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
- ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
Author: admin
ತುಮಕೂರು: ರಸಗೊಬ್ಬರ, ಕೀಟನಾಶಕ ಬಳಕೆ ಮಾಡದೆ ಪೂರ್ಣ ಪ್ರಮಾಣದಲ್ಲಿ ಸಾವಯವ ಕೃಷಿಯಲ್ಲಿ ತೊಡಗಿಸಿ ಕೊಂಡಿರುವ ಗುಬ್ಬಿ ತಾಲ್ಲೂಕು ಅಮ್ಮನಘಟ್ಟ ಗ್ರಾಮದ ರೈತ ಎಸ್.ಶಂಕರಪ್ಪ ಅವರಿಗೆ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ತಮ್ಮ 8 ಎಕರೆ ಜಮೀನಿನಲ್ಲಿ ವಿವಿಧ ರೀತಿಯ ಗಿಡ, ಮರಗಳನ್ನು ಬೆಳೆಸಿದ್ದಾರೆ. 300 ತೆಂಗು, 1,200 ಅಡಿಕೆ, 2 ಸಾವಿರ ಬಾಳೆ, 16 ಹಲಸು, 15 ಮಾವು, 100 ಮೆಣಸು, ಸಪೋಟ ಸೇರಿದಂತೆ ವಿವಿಧ ತಳಿಯ ಗಿಡಗಳನ್ನು ಕಾಪಾಡುತ್ತಿದ್ದಾರೆ. ಸಾವಯವ ಪದ್ಧತಿಯಲ್ಲೇ ಗಿಡ, ಮರಗಳನ್ನು ಆರೈಕೆ ಮಾಡುತ್ತಿದ್ದು, ಉತ್ತಮ ಫಲ ನೀಡುತ್ತಿವೆ. ಮಳೆ ನೀರು ಸಂಗ್ರಹಿಸಿ, ಅದೇ ನೀರನ್ನು ಕೃಷಿಗೆ ಬಳಕೆ ಮಾಡಿಕೊಂಡಿದ್ದಾರೆ. ಕೃಷಿ ಜತೆಗೆ ಸಂಘ, ಸಂಸ್ಥೆಗಳಲ್ಲೂ ತೊಡಗಿಸಿಕೊಂಡು ಸಾವಯವ ಕೃಷಿಗೆ ನೆರವು ನೀಡುತ್ತಿದ್ದಾರೆ. ನಿಸರ್ಗ ಸಾವಯವ ಕೃಷಿ ಪರಿವಾರದ ನಿರ್ದೇಶಕ ಹಾಗೂ ಜಿಲ್ಲಾ ಸಂಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ‘ಸುಭಿಕ್ಷಾ ಆರ್ಗಾನಿಕ್ ಫಾರ್ಮರ್ಸ್ ಮಲ್ಟಿ ಸ್ಟೇಟ್ಸ್ ಕೋ-ಆಪರೇಟಿವ್ ಸೊಸೈಟಿ’ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುವ ಮೂಲಕ…
ಮಧುಗಿರಿ: ನಗರದ ರಸ್ತೆಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಕ್ರಮಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡಲು ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಪೊಲೀಸರ ತಾತ್ಸಾರವೇ ಕಾರಣ. ಕಿರಿದಾದ ರಸ್ತೆಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಆಕ್ರೋಶದ ಮಾತುಗಳು ಕೇಳಿ ಬಂದಿವೆ. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನಿತ್ಯ ಸಾವಿರಾರು ಮಂದಿ ಪಟ್ಟಣಕ್ಕೆ ಬರುತ್ತಾರೆ. ಆದರೆ ಅವರ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆಯಿಲ್ಲ. ಪಾದಚಾರಿ ಮಾರ್ಗವನ್ನು ಅಂಗಡಿ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಕೆಲವೆಡೆ ವಾಹನ ನಿಲುಗಡೆ ಸ್ಥಳವನ್ನೂ ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿರುವುದರಿಂದ ಕಿರಿಕಿರಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
ಕುಣಿಗಲ್: ತಾಲ್ಲೂಕಿನಲ್ಲಿ ಹೈನುಗಾರಿಕೆಯ ಪ್ರಗತಿಗೆ ಶಾಸಕರೇ ಅಡ್ಡಿಯಾಗಿದ್ದಾರೆ ಎಂದು ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಡಿ.ಕೃಷ್ಣಕುಮಾರ್ ಆರೋಪಿಸಿದ್ದು, ತಾಲ್ಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾರಂಭಕ್ಕೆ ವಿಫುಲ ಅವಕಾಶವಿದ್ದರೂ, ಅನಾನುಭವಿ ಶಾಸಕರ ಪ್ರಜ್ಞೆಯಿಂದಾಗಿ ಮತ್ತು ರಾಜಕಾರಣದಿಂದಾಗಿ ಸಂಘಗಳ ರಚನೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ತಾಲ್ಲೂಕಿನ ಗವಿಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರಾದೇಶಿಕ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಒಕ್ಕೂಟವು ರೂ. 27 ಕೋಟಿ ನಷ್ಟದಲ್ಲಿದ್ದರೂ, ಹಾಲು ಉತ್ಪಾದಕರ ಕೈಹಿಡಿದಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾರಂಭಕ್ಕೆ ವಿಫುಲ ಅವಕಾಶವಿದ್ದರೂ, ಅನಾನುಭವಿ ಶಾಸಕರ ಪ್ರಜ್ಞೆಯಿಂದಾಗಿ ಮತ್ತು ರಾಜಕಾರಣದಿಂದಾಗಿ ಸಂಘಗಳ ರಚನೆ ಸಾಧ್ಯವಾಗಿಲ್ಲ ಎಂದ ಅವರು ಆರೋಪಿಸಿದರು. ಕಳೆದ ಸಾಲಿನಲ್ಲಿ 218 ರಾಸುಗಳು ಮೃತಪಟ್ಟಿದ್ದು 87 ಲಕ್ಷ ರೂ. ಪರಿಹಾರ ಧನ, 52 ಮಂದಿ ಮೃತಪಟ್ಟಿದ್ದು 26 ಲಕ್ಷ ರೂ. ಪರಿಹಾರಧನ, 90 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಗಿದೆ. ಇಬ್ಬರು ಪಶುವೈದ್ಯರನ್ನು ಮತ್ತು ಸಂಚಾರಿ ಚಿಕಿತ್ಸಾ ಘಟಕವನ್ನು ಪ್ರಾರಂಭಿಸಿದ್ದು, ಪಶುವೈದ್ಯಕೀಯ ಸೇವೆಗಳನ್ನು ನೀಡಲಾಗುತ್ತಿದೆ.…
ತುಮಕೂರು: ‘ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಏತ ನೀರಾವರಿ ಯೋಜನೆಯಲ್ಲಿ ತಲಾವಾರು ನೀರು ಹಂಚಿಕೆ ಮಾಡಿರುವುದು ಅವೈಜ್ಞಾನಿಕ. ಇದು ಸತ್ಯ. ಯಾರಿಗೆ ಬೇಕಾದರೂ ದೂರು ನೀಡಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸವಾಲು ಹಾಕಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಬಿ.ಸುರೇಶ್ಗೌಡ ವಿರುದ್ಧ ಕಿಡಿಕಾರಿದರು. ಗ್ರಾಮಾಂತರ ಕ್ಷೇತ್ರದ ಏತ ನೀರಾವರಿ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಸಚಿವರು ನೀಡಿದ ಹೇಳಿಕೆ ವಿರುದ್ಧ ಪ್ರಧಾನಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ದೂರು ನೀಡುವುದಾಗಿ ಸುರೇಶ್ಗೌಡ ಹೇಳಿದ್ದರು. ನೀರು ಹಂಚಿಕೆ ಮಾಡುವುದು ರಾಜಕಾರಣಿಗಳ ಕೆಲಸವಲ್ಲ. ಇವರು ಯಾಕೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ನನ್ನ ಜತೆ ಸುರೇಶ್ಗೌಡ ಮಾತನಾಡಿಲ್ಲ. ಅವರನ್ನು ಓಲೈಸುವ ಅಗತ್ಯವಿಲ್ಲ. ನಾಲೆಯಿಂದ ಹರಿದು ಹೋಗುವ ಕೆರೆಗಳಿಗೆ ನೀರು ತುಂಬಿಸಲಾಗಿದೆ. ಗ್ರಾಮಾಂತರದಲ್ಲಿ ಪಂಪ್ ಮಾಡಿ ಹರಿಸಿದರೂ ಕೆರೆಗಳಲ್ಲಿ ನೀರು ನಿಲ್ಲುತ್ತಿಲ್ಲ. ಸಾಮರ್ಥ್ಯ ಇಲ್ಲದ ಪಂಪ್ ಅಳವಡಿಸಲಾಗಿದ್ದು, ನೀರು ತುಂಬಿಸುವುದು ಕಷ್ಟಕರವಾಗಿದೆ. ಈಗ 20 ಗಂಟೆ ಪಂಪ್ ಮಾಡಲು…
ತುರುವೇಕೆರೆ: ತಾಲ್ಲೂಕಿನ ಕಛೇರಿ ಮುಂಭಾಗದಲ್ಲಿ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು. ತಾಲ್ಲೂಕು ತಹಶೀಲ್ದಾರ್ ಚಲುವರಾಜು ರಾಷ್ಟ್ರಧ್ವಜ ಹಾಗೂ ನಾಡಧ್ವಜವನ್ನು ಧ್ವಜಾರೋಹಣ ನೆರವೇರಿಸಿದರು ನಂತರ ಎಲ್ಲಾ ಗಣ್ಯರು ಸೇರಿ ಭುವನೇಶ್ವರಿ ಪೋಟೋ ಗೆ ಪುಷ್ಪಾರ್ಚನೆ ಹಾಗೂ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮೂಲಕ ಉದ್ಘಾಟಿಸಿ. ಮುಖ್ಯ ಬಾಷಣಕಾರಣರವಾದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ವೈ ಟಿ ರಾಜಣ್ಣ ಕಾರ್ಯಕ್ರಮ ಕುರಿತು ಕನ್ನಡ ನಾಡಿನ ಎಲ್ಲಿಂದ ಬಂತು ಅದರ ಬಗ್ಗೆ ತಿಳಿಸಿಕೊಟ್ಟರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್.ಹಾಗೂ ಉಪಾಧ್ಯಕ್ಷ ವಿನಯ್ ಪ್ರಸಾದ್ ಕನ್ನಡ ನಾಡಿನ ಬಗ್ಗೆ ಎಲ್ಲರೂ ಎಲ್ಲಾ ಕಛೇರಿಯಲ್ಲಿ ಕನ್ನಡವನ್ನೇ ಬಳಸಿ ಹೇಳಿದರು.ತಾಲ್ಲೂಕು ತಹಶೀಲ್ದಾರ್ ಚಲುವರಾಜು ಕೂಡ ಕನ್ನಡ ನಾಡು ನುಡಿಯನ್ನು ವಿವರಿಸಿದರು. ಎಲ್ಲಾ ಗಣ್ಯರು ಎಲ್ಲರೂ ಸೇರಿ ನಿವೃತ್ತಿ ಶಿಕ್ಷಕ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಗೆ ಮತ್ತು ಆಶಾಕಾರ್ಯಕತರಿಗೆ ಸನ್ಮಾನಿಸಲಾಯಿತು. ಈ ಸಭೆಯ ಸಂದರ್ಭದಲ್ಲಿ .ತಹಶೀಲ್ದಾರ್ ಚಲುವರಾಜು. ತಾಲೂಕು ಪಂಚಾಯಿತಿ ಕಾಯನಿರ್ವಾಹಣಾಧಾಕಾರಿ ಲಿಂಗರಾಜು.ವೈ ಟಿ ರಾಜಣ್ಣ.…
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಜೂನಿಯರ್ ಮಹಿಳಾ ವಾಲಿಬಾಲ್ ಟೀಮ್ ನ ಸದಸ್ಯೆಯೋರ್ವಳನ್ನು ತಾಲಿಬಾನಿಗಳು ಶಿರಚ್ಚೇದನ ನಡೆಸಿದ ಘಟನೆ ನಡೆದಿದ್ದು, ಈ ಮೂಲಕ ತಾನು ಬದಲಾಗಿದ್ದೇನೆ ಎಂದು ಹೇಳಿಕೊಂಡಿದ್ದ ತಾಲಿಬಾನ್ ತನ್ನ ಕ್ರೂರತನ ಬಿಟ್ಟಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಮಹ್ಜಬಿನ್ ಹಕಿಮಿ ಹೆಸರಿನ ಆಟಗಾರ್ತಿಯನ್ನು ಶಿರಚ್ಛೇದ ಮಾಡಿರುವ ತಾಲಿಬಾನಿಗಳು, ಈ ವಿಚಾರವನ್ನು ಬಾಯಿ ಬಿಡದಂತೆ ಪೋಷಕರಿಗೆ ಬೆದರಿಕೆ ಒಡ್ಡಿತ್ತು ಎನ್ನಲಾಗಿದ್ದು, ಈ ಕಾರಣದಿಂದಾಗಿ ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ ಎಂದು ಅವರ ತಂಡದ ಕೋಚ್ ಹೇಳಿಕೆ ನೀಡಿದ್ದಾರೆ. ಅಶ್ರಫ್ ಘನಿ ಆಡಳಿತದ ಸರ್ಕಾರ ಬೀಳುವ ಮೊದಲು ಮಹ್ಜಬಿನ್ ಅವರು ಕಾಬೂಲ್ ಮುನಿಸಿಪಾಲಿಟಿ ವಾಲಿಬಾಲ್ ಕ್ಲಬ್ ನಲ್ಲಿ ಆಡಿದ್ದರು. ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಮಹ್ಜಬಿನ್ ಶಿರಚ್ಛೇದನದ ವಿಡಿಯೋ ವೈರಲ್ ಆಗಿದೆ ಎಂದು ತಿಳಿದು ಬಂದಿದೆ.
ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಕೋಮುಗಲಭೆಯಿಂದ ಉಂಟಾದ ಹಿಂಸಾಚಾರಕ್ಕೆ ಕಾರಣನಾದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 35 ವರ್ಷ ವಯಸ್ಸಿನ ಇಕ್ಬಾಲ್ ಹುಸೇನ್ ಬಂಧಿತ ವ್ಯಕ್ತಿ ಎಂದು ತಿಳಿದು ಬಂದಿದ್ದು, ಕಾಕ್ಸ್ ಬಝಾರ್ ನ ಶುಗಂಧಾ ಬೀಚ್ ಪ್ರದೇಶದಿಂದ ಈತನನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಹುಸೇನ್ ಕೊಮಿಲ್ಲಾದ ಸುಹಾನಗರ ಪ್ರದೇಶವನಾಗಿದ್ದು, ಅಕ್ಟೋಬರ್ 13ರಂದು ದುರ್ಗಾ ಪೂಜೆ ಪಂದಲ್ ಒಂದರಲ್ಲಿ ಪವಿತ್ರ ಕುರ್ ಆನ್ ಇರಿಸಿದ್ದ. ಇದು ಎರಡೂ ಧರ್ಮಿಯರ ನಡುವೆ ವಿವಾದಕ್ಕೆ ಕಾರಣವಾಗಿದ್ದು, ಇದೇ ವಿಚಾರಕ್ಕೆ ಬಾಂಗ್ಲಾದೇಶದ ಚಂದಪುರ್, ಹಜಿಗಾಂಜ್, ಚಟ್ಟೋಗ್ರಾಮ್ಸ್, ಕಾಕ್ಸ್ ಬಝಾರ್, ಪೆಕುವಾ, ರಂಗ್ ಪುರನ ಪ್ರಿಗಂಜ್ ಸೇರಿದಂತೆ ಹಲವೆಡೆಗಳಲ್ಲಿ ಕೋಮುಗಲಭೆ ನಡೆದಿತ್ತು ಎನ್ನಲಾಗಿದೆ. ಸಿಸಿ ಟಿವಿಯಲ್ಲಿ ದೊರೆತ ತುಣುಕಿನ ಆಧಾರದಲ್ಲಿ ಇಕ್ವಾಲ್ ಹುಸೇನ್ ನನ್ನು ಬಂಧಿಸಲಾಗಿದೆ ಎಂಧು ತಿಳಿದು ಬಂದಿದೆ.
ಬೆಂಗಳೂರು: ಪ್ರೀತಿಯ ತಮ್ಮನ್ನು ಕಳೆದುಕೊಂಡು ನಟ ಶಿವರಾಜ್ ಕುಮಾರ್ ಅವರು ತೀವ್ರ ದುಃಖಿತರಾಗಿದ್ದಾರೆ. ಪುನೀತ್ ಪಾರ್ಥಿವ ಶರೀರದ ಮುಂದೆ ಬಿಕ್ಕಿಬಿಕ್ಕಿ ಅತ್ತು ಶಿವರಾಜ್ ಕುಮಾರ್ ಅವರು ತೀವ್ರವಾಗಿ ಬಳಲಿ ಹೋಗಿರುವ ದೃಶ್ಯಗಳು ಕಂಡು ಬಂದಿದೆ. ಇನ್ನೂ ಕಿಚ್ಚ ಸುದೀಪ್ ಅವರು ಕೂಡ ಪುನೀತ್ ಅವರನ್ನು ಕಳೆದುಕೊಂಡಿರುವ ಶಿವರಾಜ್ ಕುಮಾರ್ ಅವರ ಸ್ಥಿತಿಯ ಬಗ್ಗೆ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ನನಗಿಂತ 13 ವರ್ಷ ಚಿಕ್ಕವನಾಗಿರುವ ಅಪ್ಪುವನ್ನು ತೋಳಿನಲ್ಲಿ ಎತ್ತಿಕೊಂಡು ಆಟವಾಡಿಸಿದ್ದೆ ಎಂದು ಶಿವರಾಜ್ ಕುಮಾರ್ ಅವರು ತಮ್ಮ ಬಾಲ್ಯದಿಂದ ಈವರೆಗಿನ ಅನ್ಯೋನ್ಯತೆಯ ಬಂಧವನ್ನು ನೆನೆ ನೆನೆದು ದುಃಖಿತರಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪುನೀತ್ ಜೊತೆಗೆ ಶಿವರಾಜ್ ಕುಮಾರ್ ಅವರು ವೇದಿಕೆ ಹಂಚಿಕೊಂಡಿದ್ದರು. ವೇದಿಕೆಯಲ್ಲಿ ಅಣ್ಣ ತಮ್ಮ ಜೊತೆಯಾಗಿ ಡಾನ್ಸ್ ಮಾಡಿದ್ದರು. ಪ್ರೀತಿಯ ಅಪ್ಪುಗೆ ಕೂಡ ಮಾಡಿದ್ದರು. ಆದರೆ, ಯಾರೂ ನಿರೀಕ್ಷಿಸದ ರೀತಿಯಲ್ಲಿ ಪುನೀತ್ ನಿಧನರಾಗಿದ್ದಾರೆ. ಮಾಧ್ಯಮಗಳಲ್ಲಿ ಕಂಡು ಬಂದಂತೆ ಶಿವರಾಜ್ ಕುಮಾರ್ ಅವರು ಬಿಕ್ಕಿ ಬಿಕ್ಕಿ ಅಳುತ್ತಾ, ನಿತ್ರಾಣವಾಗಿದ್ದಾರೆ. ಅವರಿಂದ ಪುನೀತ್ ಅವರ…
(ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಈ ಲೇಖನ) ಬಾಬಾಸಾಹೇಬ್ ಅಂಬೇಡ್ಕರ್ ಈ ದೇಶ ಕಂಡ ಮಹಾನ್ ಜ್ಞಾನಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗೆಯೇ ತನ್ನ ಜ್ಞಾನವನ್ನು ಸಮಾಜದ, ದೇಶದ ಒಳಿತಿಗೂ ಬಳಸಿದ್ದೂ ಕೂಡ ಅವರ ಹೆಗ್ಗಳಿಕೆ. ಜ್ಞಾನ ಎಂದರೆ ಅಲ್ಲಿ ವಿಜ್ಞಾನವೂ ಬರುತ್ತದೆ. ಅದರ ಬಗ್ಗೆ ಅಂಬೇಡ್ಕರರ ಒಲವು ಎಷ್ಟಿತ್ತು? ಆ ಕಾಲದ ವಿಜ್ಞಾನದ ಬರಹಗಳನ್ನು ಸಂಶೋಧನೆಗಳನ್ನು ಅಂಬೇಡ್ಕರ್ ಗಮನಿಸುತ್ತಿದ್ದರೆ? ಆ ಹಿನ್ನೆಲೆಯಲ್ಲಿ ಚಿಂತಿಸುತ್ತಿದ್ದರೆ? ಹೌದು, ಗಮನಿಸುತ್ತಿದ್ದರು. ವಿಜ್ಞಾನದ ಲೇಖನಗಳನ್ನು ಅದರ ಆಶಯಗಳನ್ನು ಕುರಿತು ಚಿಂತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅರಿವಾಗುವುದು ಅಂಬೇಡ್ಕರರಿಗಿದ್ದ ಆಳವಾದ ವಿಜ್ಞಾನದ ಜ್ಞಾನ ಮತ್ತು ಒಲವು. ಖಂಡಿತ, ಅಂತಹ ವಿಜ್ಞಾನದ ಜ್ಞಾನ ಮತ್ತು ಒಲವು ಇದ್ದಿದ್ದರಿಂದಲೇ ಅವರು ಜಾತಿ, ಅಸ್ಪೃಶ್ಯತೆಯಂತಹ ಸಾಮಾಜಿಕ ಸಮಸ್ಯೆಗಳಿಗೂ ವಿಜ್ಞಾನದ ಮಾದರಿಯಲ್ಲೇ ಪಕ್ಕಾ ಪರಿಹಾರ ಕಾಣುವಂತಹ ಮಾರ್ಗಗಳನ್ನು ಕಂಡುಕೊಳ್ಳಲು ಸಾಧ್ಯವಾದದ್ದು ಮತ್ತು ಅಂಬೇಡ್ಕರರ ಅಂತಹ ವಿಜ್ಞಾನದ ಒಲವನ್ನು ನಿಲುವನ್ನು ಈ ದೇಶದ ನಾಗರಿಕರು ಅರಿಯುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅಂತಹ ಒಂದು ಪ್ರಸಂಗವೊಂದನ್ನು…
ದಾವಣಗೆರೆ: ನಿಧಿಯ ಆಸೆಗೆ ವೈದ್ಯನೋರ್ವ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ವಿಚಾರ ಘಟನೆ ನಡೆದು 9 ತಿಂಗಳ ಬಳಿಕ ಬೆಳಕಿಗೆ ಬಂದಿದ್ದು, ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಡಾ.ಚನ್ನೇಶಪ್ಪ ಎಂಬಾ ಬಂಧಿತ ಆರೋಪಿಯಾಗಿದ್ದಾನೆ. 38 ಎಕರೆ ಜಮೀನು ಹೊಂದಿದ್ದ ಶ್ರೀಮಂತನಾಗಿರುವ ಈತ ಕುಡಿತ, ಕ್ಯಾಸಿನೋ ಜೂಜಾಟದ ಚಟ ಅಂಟಿಸಿಕೊಂಡಿದ್ದ ಎನ್ನಲಾಗಿದೆ. 18 ವರ್ಷಗಳ ಹಿಂದೆ ಶಿಲ್ಪಾ ಎಂಬವರನ್ನು ಈತ ಮದುವೆಯಾಗಿದ್ದ. ಮದುವೆಯ ಸಮಯದಲ್ಲಿ 700 ಗ್ರಾಂ ಚಿನ್ನ, 1 ಕೆ.ಜಿ.ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ(Dowry) ನೀಡಲಾಗಿತ್ತು. ಸಾಕಷ್ಟು ಆಸ್ತಿ ಹಣವಿದ್ದರೂ ಡಾ.ಚನ್ನೇಶಪ್ಪಗೆ ಹಣ ಆಸ್ತಿ ಹುಚ್ಚು ಹೆಚ್ಚಿತ್ತು ಎನ್ನಲಾಗಿದೆ. ವರದಕ್ಷಿಣೆ ತರುವಂತೆ ಪತ್ನಿಗೆ ನಿರಂತರ ಹಿಂಸೆಯನ್ನು ಕೂಡ ನೀಡಿದ್ದ ಎನ್ನಲಾಗಿದೆ. ಜೊತೆಗೆ ಮನೆಯಲ್ಲಿ ಆಗಾಗ ವಾಮಚಾರ ಮಾಡಿಸುತ್ತಾ, ನಿಧಿಗಾಗಿ ಶೋಧ ಮಾಡಿಸುತ್ತಿದ್ದ ಎಂದು ಹೇಳಲಾಗಿದೆ.…