Subscribe to Updates
Get the latest creative news from FooBar about art, design and business.
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
- ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
- ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
- ತುಮಕೂರು ಹಾಲು ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
- ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
- 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
Author: admin
ಗುಬ್ಬಿ: ಪಟ್ಟಣದ ಸ್ವಚ್ಛತೆಗೆ ಎಲ್ಲರೂ ಕೂಡ ಕೈಜೋಡಿಸಬೇಕು ಇದರಿಂದ ಪಟ್ಟಣವನ್ನು ಸ್ವಚ್ಛಂದವಾಗಿ ಇಟ್ಟುಕೊಳ್ಳಬಹುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ ಕರೆ ನೀಡಿದರು. ಪಟ್ಟಣದ ವಿನಾಯಕ ನಗರದಲ್ಲಿ ಹೈನುಗಾರಿಕೆ ಮಾಡುತ್ತಿರುವ ಕುಟುಂಬವೊಂದು ಮನೆಯ ಪಕ್ಕದಲ್ಲಿಯೇ ಸಗಣಿ ತಿಪ್ಪೆಯನ್ನು ಹಾಕಿದ್ದರು. ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದಾಗಿ ತಿಪ್ಪೆ ದುರ್ವಾಸನೆಯಿಂದ ಕೂಡಿದ್ದರಿಂದ ನಾಗರೀಕರು ತಿಪ್ಪೆಯನ್ನು ತೆಗೆಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೂಡಲೇ ಕ್ರಮವಹಿಸಿ ಮಾತನಾಡಿದ ಅವರು , ಎಲ್ಲರ ಸಹಕಾರದಿಂದ ಸ್ವಚ್ಛ ಪರಿಸರವನ್ನು ನಿರ್ಮಿಸಬೇಕಾಗಿದೆ. ತಮ್ಮ ಮನೆಯ ಮುಂದೆ ಹಿಂದೆ ಸ್ವಚ್ಛತೆಯನ್ನು ಕಾಪಾಡಿ ಕೊಂಡಾಗ ರೋಗರುಜಿನಗಳಿಂದ ದೂರವಿರಬಹುದು ಹಾಗಾಗಿ ವಿನಾಯಕ ನಗರದಲ್ಲಿ ಹಾಕಿದಂತಹ ತಿಪ್ಪೆಯನ್ನು ಅಲ್ಲಿಂದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ ಅಲ್ಲಿನ ಜನರಿಗೆ ಸಮಸ್ಯೆ ಆಗದಂತೆ ಪಟ್ಟಣ ಪಂಚಾಯಿತಿ ಕ್ರಮವಹಿಸಿದೆ ಎಂದರು. ತಿಪ್ಪೆ ಹಾಕಿದ್ದ ರೈತ ಕುಟುಂಬಕ್ಕೂ ಸಹ ಪರಿಸರದ ಬಗ್ಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಮಾಹಿತಿಯನ್ನು ನೀಡಿ ಅವರಿಂದ ಮತ್ತೊಮ್ಮೆ ಇಲ್ಲಿ ತಿಪ್ಪೆ ಆಗದಂತೆಮನವಿ ಮಾಡಿದ್ದೇನೆ ಎಂದು ತಿಳಿಸಿದರು. ವರದಿ: ಮಂಜುನಾಥ್, ಗುಬ್ಬಿ…
ತುಮಕೂರು: ಟಿಪ್ಪು ಓರ್ವ ದೇಶ ಭಕ್ತ. ಅವರು ಮತಾಂಧ ಆಗಿದ್ದರೆ ಹಿಂದೂ ದೇವಾಲಯಗಳು ಉಳಿಯುತ್ತಿತ್ತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಡಿವಾಳ-ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮಗೆ ಗಾಂಧಿ ಹೇಳಿರುವ ಹಿಂದೂವಾದ ಬೇಕು. ಗೋಡ್ಸೆ ಹೇಳಿರುವ ಹಿಂದೂವಾದ ಬೇಡ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಾನು ಅಲ್ಪಸಂಖ್ಯಾತರ ಪರ ಮಾತಾಡಿದ್ರೆ ಈ ಸಂಘ ಪರಿವಾರವರು ನನಗೆ ನೀನೇನು ಮುಸ್ಲಿಂ ಜಾತಿಗೆ ಹುಟ್ಟಿದವನಾ? ಎಂದು ಕೇಳುತ್ತಾರೆ. ಧರ್ಮ ಧರ್ಮಗಳ ನಡುವೆ ಗೋಡೆ ಕಟ್ಟುವ ಕೆಲಸ ಸಂಘಪರಿವಾರ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಬಸವರಾಜ ಬೊಮ್ಮಾಯಿ ಮಾತ್ರ ಹಿಂದೂ ಅಲ್ಲ. ನಾನೂ ಕೂಡ ಹಿಂದೂ, ನನ್ನ ಅಪ್ಪ ಕೂಡ ಹಿಂದೂ. ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ. ಹಿಂದೆ ಗೋಮಾಂಸ ತಿಂತೀರಾ ಎಂದು ನನಗೆ ಕೇಳಿದ್ದರು. ಆ ವೇಳೆ ಆಹಾರ ನಮ್ಮ ಹಕ್ಕು ಅದನ್ನು ಕೇಳುವರು ನೀವ್ಯಾರು ಅಂತಾ ಕೇಳಿದ್ದೆ ಎಂದು ಅವರು ಹೇಳಿದರು. ಬಿನ್ ಲಾಡನ್ ಹೇಳಿರುವ ಇಸ್ಲಾಂ ಧರ್ಮ ಬೇಡ. ಪೈಗಂಬರ್ ಹೇಳಿರುವ…
ಗುಬ್ಬಿ: ಅಂಚೆ ಕಚೇರಿಯ ವಾಹನ, ಓಮಿನಿ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಹೇರೂರು ಗ್ರಾಮದ ಸಮೀಪ ಸಿಐಟಿ ಕಾಲೇಜು ಬಳಿ ನಡೆದಿದೆ. ಗಾಯಾಳುಗಳು ತಿಪಟೂರು ತಾಲೂಕಿನ ನೋವಿನಕೆರೆ ಹೋಬಳಿಯ ಧರ್ಮ ಗೌಡನಪಾಳ್ಯ ಗ್ರಾಮದಲ್ಲಿ ಎಂದು ತಿಳಿದು ಬಂದಿದೆ. ತುಮಕೂರಿನಿಂದ ನೊಣವಿನಕೆರೆ ಕಡೆಗೆ ಧಾವಿಸುತ್ತಿದ್ದ ಓಮಿನಿ, ತಿಪಟೂರಿನಿಂದ ತುಮಕೂರಿನ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸ್ಥಗಿತಗೊಂಡಿದ್ದು, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ವರದಿ: ಮಂಜುನಾಥ್ , ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ನಮ್ಮೆಲ್ಲರ ಜಾತಿ ಒಂದೆ. ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಸಾರಿದರು. ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದರು. ಇದೇ ವೇಳೆ ಇಸ್ಲಾಂ ಧರ್ಮ ಗುರುಗಳ ತಟ್ಟೆಯಿಂದ ತುತ್ತು ತೆಗೆದುಕೊಂಡು ಸ್ವೀಕರಿಸಿದರಲ್ಲದೇ ದಲಿತ ಸ್ವಾಮೀಜಿಗೆ ಕೈತುತ್ತು ತಿನ್ನಿಸಿ, ತಾವೂ ಕೈ ತುತ್ತು ತಿನ್ನುವ ಮೂಲಕ ಸಹೋದರತೆ ಮೆರೆದರು. ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ನಮ್ಮ ತುಮಕೂರು ವರದಿ: ದೇಶದಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸಮಾಜವನ್ನು ಒಡೆಯಬೇಕೆನ್ನುವ ದುರುದ್ದೇಶ ಇಲ್ಲಿ ಅಡಗಿದೆ. ಸಮುದಾಯಗಳ ನಡುವೆ ಸೌಹಾರ್ದಯುತ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಸಾಕಷ್ಟು ಕೆಲಸ ಮಾಡಿದೆ. ಈ ಸಮುದಾಯಗಳನ್ನು ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅಮಾನಿಕೆರೆಯಲ್ಲಿರುವ ಗಾಜಿನಮನೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಲ್ಪಸಂಖ್ಯಾತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಅಲ್ಪ ಸಂಖ್ಯಾತ ಸಮುದಾಯಗಳನ್ನು ಅಭಿವೃದ್ಧಿ ಮಾಡಲು ನಮ್ಮ ಪಕ್ಷ ಬದ್ಧವಾಗಿದೆ ಎಂದರು. ಇತ್ತೀಚೆಗೆ ದೇಶದಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸಮಾಜವನ್ನು ಒಡೆಯಬೇಕೆನ್ನುವ ದುರುದ್ದೇಶ ಇದರಲ್ಲಿ ಅಡಗಿದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಡಾ. ಸಯ್ಯದ್ ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇನ್ನೂ ರಾಜ್ಯ ರಾಜ್ಯ ಮಡಿವಾಳರ ಸಂಘ ತುಮಕೂರಿನಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಡಿವಾಳ ಸಮುದಾಯದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆ ಬಸವರಾಜ್ ಹಾಸ್ಪಿಟಲ್ ರಸ್ತೆಯಲ್ಲಿರುವ ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದಿವಂಗತ ರಾಜೀವ್ ಗಾಂಧಿಯವರ 31ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಡಿ.ಸುಧಾಕರ್, ಈ ಹಿರಿಯೂರು ತಾಲ್ಲೂಕಿನಲ್ಲಿ,10 ವರ್ಷಗಳ ಕಾಲ ಎಲ್ಲಾ ವರ್ಗದ ಜನರಿಗೆ ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ. ನನ್ನ ಆಡಳಿತ ಅವಧಿಯಲ್ಲಿ ಹಿರಿಯೂರು ತಾಲ್ಲೂಕಿನಲ್ಲಿ ಆದಂತಹ ಅಭಿವೃದ್ದಿ ಕಾರ್ಯಗಳು ಇನ್ನೂ ಯಾರಿಂದಲೂ ಮಾಡಲು ಸಾಧ್ಯವಿಲ್ಲ. ಹಿರಿಯೂರು ತಾಲ್ಲೂಕಿಗೆ ನನ್ನ ಆಡಳಿತ ಅವಧಿಯಲ್ಲಿ ಆದಂತ ಕೋಟ್ಯಾಂತರ ರೂ.ಗಳ ಚೆಕ್ ಡ್ಯಾಂಗಳು, ಮುರಾರ್ಜಿ ಶಾಲೆಗಳು, ರಸ್ತೆ ಅಭಿವೃದ್ದಿ ಕೆಲಸಗಳನ್ನ ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ನಾನು ಮೂಲತಃ ರಾಜಕಾರಣಿಯಲ್ಲ. ನಾನು ರಾಜಕೀಯ ಮಾಡಲೂ ಬಂದಿಲ್ಲ. ನನ್ನ ಕೈಲಾದಷ್ಟು ಸಹಾಯ ಮಾಡಲು ಬಂದಿರುವ ವ್ಯಕ್ತಿ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಎಲ್ಲಾರೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಂಜನಾ ಹಾಗೂ ಸೃಷ್ಠಿ ವಿ.ಆರ್. ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ನಮ್ಮ ಹಿರಿಯೂರು ತಾಲ್ಲೂಕಿಗೆ , ಜಿಲ್ಲೆಗೆ , ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ್ದಾರೆ. ಸಂಜನಾ ರಾಷ್ಟ್ರೀಯ ಅಕಾಡೆಮಿ ಸ್ಕೂಲ್ ನ ವಿದ್ಯಾರ್ಥಿನಿಯಾಗಿದ್ದು, ಸೃಷ್ಠಿ ವಿ ಆರ್ ಅವರು ಮಸ್ಕಲ್ ಗ್ರಾಮದ ಬೀಮನಬಂಡೆ ಯಜ್ಞ ವಾಲ್ಕ್ಯ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ. ಸಂಜನಾ ಮತ್ತು ಸಂಜನಾ ತಾಯಿ ಸಂಜನಾ ಹಾಗೂ ಸೃಷ್ಠಿ ವಿ ಆರ್ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಕನಸು ಕಂಡಿದ್ದರು. ಅವರ ಕನಸು ಶಾಲಾ ಶಿಕ್ಷಕರ ಸಹಕಾರ ಹಾಗೂ ಕುಟುಂಬಸ್ಥರ ಪ್ರೋತ್ಸಾಹದೊಂದಿಗೆ ಇಂದು ನೆರವೇರಿದೆ. ಇನ್ನೂ ತಮ್ಮ ಸಾಧನೆಯ ಕುರಿತಾಗಿ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಸಂಜನಾ ಹಾಗೂ ಸೃಷ್ಠಿ ವಿ ಆರ್ ಅವರು, ವಾರ್ಷಿಕ ಪರೀಕ್ಷೆ ರೀತಿಯಲ್ಲಿಯೇ ಆಗಾಗ ಕಿರುಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ…
ರಾಮನಗರ: ಜಿಲ್ಲೆ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತು ಮಾಜಿ ಸಚಿವ ಎಚ್.ಎಂ. ರೇವಣ್ಣ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ರೇವಣ್ಣ ಅವರಿಗೇ ಟಿಕೆಟ್ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆಯುವ ಮೂಲಕ ಬಾಲಕೃಷ್ಣ ನೇರ ಯುದ್ಧಕ್ಕೆ ಇಳಿದಿದ್ದಾರೆ. ರಾಜಕೀಯ ಜೀವನದುದ್ದಕ್ಕೂ ರೇವಣ್ಣ ವಿರುದ್ಧವೇ ಬಾಲಕೃಷ್ಣ ಹೋರಾಟ ಮಾಡಿಕೊಂಡು ಬಂದಿದ್ದು, ಕಾಂಗ್ರೆಸ್ ಸೇರ್ಪಡೆ ನಂತರವೂ ಇಬ್ಬರ ನಡುವಿನ ಸಂಬಂಧ ಗಟ್ಟಿ ಆಗಲೇ ಇಲ್ಲ. ಇದರಿಂದಾಗಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುವುದನ್ನು ತಡೆಯುವ ಸಲುವಾಗಿಯೇ ಬಾಲಕೃಷ್ಣ ಪತ್ರ ಸಮರ ಸಾರಿದ್ದಾರೆ. ಅಸಲಿಗೆ ಆಗಿದ್ದೇನು?: ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಬಾಲಕೃಷ್ಣ ಪರಾಭವದ ನಂತರವೂ ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳಲಿಲ್ಲ. ಜೆಡಿಎಸ್ ಶಾಸಕ ಎ.ಮಂಜುನಾಥ್, ಎಚ್.ಎಂ. ರೇವಣ್ಣ ಅವರ ಗರಡಿಯಲ್ಲಿಯೇ ಪಳಗಿದ್ದು, ಕಳೆದ ಚುನಾವಣೆಯಲ್ಲಿ ರೇವಣ್ಣ ಅವರು ಮಂಜುನಾಥ್ ಪರವಾಗಿಯೇ ಕೆಲಸ ಮಾಡಿದ್ದಾರೆ ಎನ್ನುವ ಆರೋಪ ಕಾರ್ಯಕರ್ತರಲ್ಲಿ ಇದೆ. ಆದರೆ, ಬಾಲಕೃಷ್ಣ ಮುಂದಿನ…
ಕೋಲಾರ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ದೊಡ್ಡ ಬಫೂನ್. ಅವರು ಯಾವಾಗ ಯಾವ ಪಕ್ಷದಲ್ಲಿ ಇರುತ್ತಾರೆ, ಯಾರನ್ನು ಹೊಗಳುತ್ತಾರೆ, ಯಾರನ್ನು ತೆಗಳುತ್ತಾರೆ ಎಂಬುದು ಗೊತ್ತಿಲ್ಲ ಎಂದು ಸಂಸದ ಎಸ್.ಮುನಿಸ್ವಾಮಿ ವ್ಯಂಗ್ಯವಾಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಇಹ್ರಾಹಿಂ ರಾಜಕೀಯವಾಗಿ ಹತಾಶರಾಗಿದ್ದಾರೆ. ಅವರಿಗೆ ರಾಜಕೀಯ ಬದ್ಧತೆ ಇಲ್ಲ ಎಂದು ಟೀಕಿಸಿದರು. ಜಿಲ್ಲೆಯ ಬಹುತೇಕ ಕೆರೆಗಳು ತುಂಬಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಿಲ್ಲೆಯ ಜನರ ಆಶಯ ಈಡೇರಿಸಿದೆ. ಇಬ್ರಾಹಿಂ ಅವರು ಜಿಲ್ಲೆಗೆ ಬಂದು ನೀರಿನ ವಿಚಾರದಲ್ಲಿ ಜಲಧಾರೆ ಹರಿಸುವ ಅವಶ್ಯಕತೆಯಿಲ್ಲ. ಇಲ್ಲಿ ಬಂದು ಸುಮ್ಮನೆ ಮುಸ್ಲಿಮರ ಓಲೈಕೆಗೆ ಮಾತನಾಡಿದರೆ ಪ್ರಯೋಜನವಿಲ್ಲ ಎಂದರು. ಮುಸ್ಲಿಂ ಮತದಾರರು ನಮ್ಮ ಜತೆಗೂ ಇದ್ದಾರೆ. ನಾನು ಕೋಲಾರಕ್ಕೆ ಬಂದು ಬೆಂಕಿ ಹಚ್ಚಿಲ್ಲ, ಬದಲಿಗೆ ಬೆಂಕಿಯಂತಿದ್ದ ಕೋಲಾರವನ್ನು ತಣ್ಣಗೆ ಮಾಡಿದ್ದೇವೆ. ಆದರೆ, ಇಬ್ರಾಹಿಂ ಬೆಂಕಿ ಇಡುವುದಕ್ಕೆ ಕೋಲಾರಕ್ಕೆ ಬಂದಿದ್ದಾರೆ ಎಂದು ಗುಡುಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ. ದೇಶದ ಜನರ ಬಗೆಗೆ ಕಾಳಜಿ ಹೊಂದಿರುವ ನರೇಂದ್ರ ಮೋದಿಯವರು ಓರ್ವ ಸಂವೇದನಾಶೀಲ ನಾಯಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಪೆಟ್ರೋಲ್ಗೆ 8 ರೂ. ಮತ್ತು ಪ್ರತಿ ಲೀಟರ್ ಡೀಸೆಲ್ಗೆ 6 ರೂ. ಕಡಿತ ಮಾಡಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಸದ್ಯ ಜಾಗತಿಕ ಪರಿಸ್ಥಿತಿ ಸವಾಲಿನಿಂದ ಕೂಡಿದ್ದರೂ, ಈ ಬೆಲೆ ಇಳಿಕೆಗಳು ಜನರಿಗೆ ಬಹುದೊಡ್ಡ ನಿರಾಳತೆ ಒದಗಿಸಲು ಕಾರಣವಾಗಿದೆ. ಪ್ರತಿ ವರ್ಗದ ಮೇಲೆಯೂ ಪ್ರಧಾನಿಗಿರುವ ಕಾಳಜಿ ಅವರೊಬ್ಬ ಸಂವೇದನಾಶೀಲ ನಾಯಕ ಎಂಬುದನ್ನು ತಿಳಿಸುತ್ತದೆ ಎಂದಿದ್ದಾರೆ. ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ನಿರ್ಧಾರ ಮಾಡಿದೆ. ಉಜ್ವಲ ಯೋಜನೆ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ ಗೆ 200 ರೂ. ಸಬ್ಸಿಡಿ ನೀಡುವ ಘೋಷಣೆಯೂ ಮಹತ್ವದ ಕ್ರಮ…