Subscribe to Updates
Get the latest creative news from FooBar about art, design and business.
- ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
- ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
Author: admin
ನಂಜನಗೂಡು: ಜೀವನಕ್ಕೆ ಆಧಾರವಾಗಿದ್ದ ಎರಡು ಹಸುಗಳನ್ನು ಹುಲಿಯೊಂದು ಕೊಂದು ಹಾಕಿದ್ದು, ಇದರಿಂದ ತಾಲ್ಲೂಕಿನ ಹೆಡಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಮಹದೇವನಗರ ಗ್ರಾಮದ ಸಾಕಮ್ಮ ಕೊಂ ಪಾಪಣ್ಣ ಎಂಬವರಿಗೆ ತೀವ್ರ ನಷ್ಟವಾಗಿದೆ. ಅಂದಾಜು 150000 ರೂ. ಬೆಲೆ ಬಾಳುವ ಹಾಲು ಕರೆಯುವ ಹಿಲಾತಿ ಹಸುಗಳನ್ನು ಬಂಡೀಪುರ ರಾಷ್ಟ್ರೀಯ ಹುಲಿ ಸುರಕ್ಷಿತ ಅರಣ್ಯದಿಂದ ಬಂದ ಹುಲಿಯೊಂದು ಕೊಂದು ತಿಂದು ಹಾಕಿದೆ. ಹಸುಗಳನ್ನೇ ನಂಬಿ ಬದುಕುತ್ತಿದ್ದ ಕುಟುಂಬ ಇದೀಗ, ಹಸುಗಳನ್ನು ಕಳೆದುಕೊಂಡು ಕಂಗಾಲಾಗಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳಿಗೆ ದೂರು ನೀಡಿದರೆ, ಈ ಜಮೀನು ಅರಣ್ಯ ಪ್ರದೇಶದ ಭಾಗದಲ್ಲಿರುವುದರಿಂದ ಯಾವುದೇ ಪರಿಹಾರ ನೀಡಲು ಬರುವುದಿಲ್ಲವೆಂದು ನಿರ್ಲಕ್ಷಿಸುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯತನದ ಉತ್ತರದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದು, ಆದರೆ ಸ್ಥಳೀಯರ ನೆರವಿನಿಂದ ಅವರನ್ನು ರಕ್ಷಿಸಲಾಗಿದೆ ಎನ್ನಲಾಗಿದೆ. ಕುಟುಂಬದ ಸದಸ್ಯರು ಮಾನಸಿಕವಾಗಿ ತೀವ್ರ ನೊಂದಿದ್ದು, ಅವರಿಗೆ ತಕ್ಷಣವೇ ಪರಿಹಾರ ನೀಡುವ ಮೂಲಕ ಮಾನಸಿಕ ಸ್ಥೈರ್ಯವನ್ನು ತುಂಬುವ ಕೆಲಸವನ್ನು ಇಲಾಖಾಧಿಕಾರಿಗಳು ಮಾಡಬೇಕು. ಆ ಕುಟುಂಬಕ್ಕೆ ಏನಾದರೂ…
ವಿದ್ಯಾಭ್ಯಾಸಕ್ಕೆ ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುವುದರಿಂದ ಕಠಿಣ ಕ್ರಮಗಳನ್ನ ಕೈಗೊಳ್ಳುವುದರಿಂದ ಮಕ್ಕಳು ಮತ್ತಷ್ಟು ಮಾನಸಿಕವಾಗಿ ಕುಗ್ಗುವುದು ಅಲ್ಲದೇ ಮೆದುಳಿನ ಶಕ್ತಿ ಮತ್ತಷ್ಟು ದುರ್ಬಲಗೊಳ್ಳುತ್ತದೆ ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಮನೋವಿಜ್ಞಾನ ಮತ್ತು ಅಭಿವೃದ್ಧಿ ತಜ್ಞರು ನೀಡಿರುವ ವರದಿಯಲ್ಲಿ ಈ ಆತಂಕಕಾರಿ ಅಂಶವನ್ನ ಬಹಿರಂಗಪಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಮಾನಸಿಕವಾಗಿ ಹಾಗೂ ಓದುವಂತೆ ಹೆಚ್ಚಿನ ಒತ್ತಡವನ್ನಹೇರಲಾಗ್ತಿದೆ. ಕಠಿಣ ಕ್ರಮಗಳನ್ನ ಅನುಸರಿಸಲಾಗ್ತಿದೆ. ಹೆಚ್ಚಿಕ ಅಂಕಗಳನ್ನ ಪಡೆಯಲೇ ಬೇಕೆಂಬ ಪೋಷಕರ ಒತ್ತಾಯದಿಂದ ಅನೇಕ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗ್ತಿದ್ದಾರೆ. ಈ ರೀತಿಯ ಬೆಳವಣಿಯಲ್ಲಿ ಅವರ ಮೆದುಳಿನ ಶಕ್ತಿ ಮತ್ತಷ್ಠು ಕುಂಠಿತಗೊಳ್ಳುತ್ತಿದೆ ಎನ್ನಲಾಗಿದೆ. ಮಕ್ಕಳ ಬೆಳವಣಿಗೆಯ ಮೇಲೆ, ಅವರ ನಡತೆ, ಜೀವನದಲ್ಲಿ ಅವರ ಆಯ್ಕೆ ( ಸಕಾರಾತ್ಮಕವಾಗಿಯೂ ಇರಬಹುದು, ಅಥವ ನಕಾರಾತ್ಮಕವಾಗಿಯೂ ಇರಬಹುದು) ಎಲ್ಲವೂ ಕೂಡ ಇದರ ಭಾಗವಾಗಿರುತ್ತದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ತುಮಕೂರು: ಗ್ರಾಮಾಂತರ ಕ್ಷೇತ್ರದ ಹರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐನಾಪುರ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಿವಪ್ರಸಾದ್ ಎಂಬುವವರು ಜೀವಂತವಿರುವಾಗಲೇ ಮೃತಪಟ್ಟಿದ್ದಾರೆ ಎಂದು ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ತುಮಕೂರಿನ ತಾಲೂಕು ಕಚೇರಿ ಆವರಣದಲ್ಲಿ ಮಾಹಿತಿ ನೀಡಿದ ಐನಾಪುರ ಗ್ರಾ.ಪಂ. ಮಾಜಿ ಸದಸ್ಯ ಶಿವಕುಮಾರ್, ನಾನು ಜೀವಂತವಾಗಿರುವಾಗಲೇ , ನಾನು ಮೃತಪಟ್ಟಿದ್ದೇನೆ ಎಂಬ ಕಾರಣ ನೀಡಿ, ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಸಂದೇಶ ತಮ್ಮ ಮೊಬೈಲ್ ಸಂಖ್ಯೆಗೆ ಬಂದಿದ್ದು , ಈ ಮೂಲಕ ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರನ್ನು ನೇರವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಮೂಲಕ ತಮ್ಮನ್ನು ತಮ್ಮ ಕಾರ್ಯಚಟುವಟಿಕೆಗಳನ್ನು ಕಟ್ಟಿಹಾಕುವ ಪ್ರಯತ್ನವನ್ನು ರಾಜಕೀಯ ವಿರೋಧಿಗಳು ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ಹಾಗೂ ತಹಸಿಲ್ದಾರ್ ಅವರ ಗಮನಕ್ಕೆ ತಂದಿದ್ದು , ಈ ವಿಷಯಕ್ಕೆ ಸಂಬಂಧಿಸಿದಂತೆ ತಹಸಿಲ್ದಾರ್ ಅವರು ಆನ್ಲೈನ್ ಮೂಲಕ ಅಪ್ಡೇಟ್ ಆಗಿದೆ ಎಂದು ಮಾಹಿತಿ ನೀಡಿದ್ದು, ಇದಕ್ಕೆ…
ದೇಶದಲ್ಲಿ ಸಂಪರ್ಕ ಕ್ರಾಂತಿಯನ್ನು ಸೃಷ್ಟಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಪ್ರಸಕ್ತ ವರ್ಷದಲ್ಲಿ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ಸಂಸತ್ನಲ್ಲಿಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಂಡಿಸಿದ 2022-23ನೇ ಸಾಲಿನ ಬಜೆಟ್ನಲ್ಲಿ, ಪ್ರಸಕ್ತ ವರ್ಷ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೊಷಣೆ ಮಾಡಿದರು. ಸಂಸತ್ನಲ್ಲಿಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಂಡಿಸಿದ 2022-23ನೇ ಸಾಲಿನ ಬಜೆಟ್ನಲ್ಲಿ, ಪ್ರಸಕ್ತ ವರ್ಷ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೊಷಣೆ ಮಾಡಿದರು.ಇದಕ್ಕಾಗಿ ಅಗತ್ಯವಾದ ಅನುದಾನವನ್ನು ಸಾರಿಗೆ ಇಲಾಖೆಗೆ ಒದಗಿಸುವುದಾಗಿಯೂ ಪ್ರಕಟಿಸಿದರು. ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಿಂದ ಸಂಪರ್ಕ ಕ್ರಾಂತಿಯಾಗಲಿದ್ದು ಇದರಿಂದ ಕೈಗಾರಿಕೆಗಳ ಸ್ಥಾಪನೆ ಹಾಗೂ ಆರ್ಥಿಕ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಪಾವಗಡ: ತಾಲೂಕು ನಿಡಿಗಲ್ ಹೋಬಳಿ ಕೊತ್ತೂರು ಗ್ರಾಮದಲ್ಲಿ ಶಾಲೆಯ ಹಿಂಭಾಗದಿಂದ ಗೋಪಾಲ್ ರೆಡ್ಡಿ ಮನೆಯವರೆಗೂ ಕೆಲವು ಮನೆಗಳ ಮೇಲೆ ವಿದ್ಯುತ್ ತಂತಿ ಸಂಪರ್ಕವಿದ್ದು, ಮನೆಯ ತಾರಸಿಯ ಮೇಲೆ ನಿಂತರೆ ಕೈಗೆಟುಕುವ ಅಂತರದಲ್ಲಿ ವಿದ್ಯುತ್ ತಂತಿಗಳು ಜೋತಾಡುತ್ತಿವೆ. ಇಲ್ಲಿ ವಿದ್ಯುತ್ ತಂತಿಗಳ ಅವ್ಯವಸ್ಥೆಗಳ ಬಗ್ಗೆ ಹಲವಾರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳ ಗಮಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆಯ ತಾರಸಿ ಮೇಲೆ ಯಾರಾದರೂ ಮಕ್ಕಳು ಹತ್ತಿ, ವಿದ್ಯುತ್ ತಂತಿ ಸ್ಪರ್ಶಿಸಿ ಅನಾಹುತವಾದರೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ. ಗ್ರಾಮಸ್ಥರಾದ ಗೋಪಾಲಪ್ಪ, ರಮೇಶ್, ರಾಮಕೃಷ್ಣಪ್ಪ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ನಂದೀಶ್ ಕೊತ್ತೂರು ನಿಡಿಗಲ್ಲು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಗುಬ್ಬಿ: ರಾಯಚೂರು ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಫೊಟೋ ತೆರವುಗೊಳಿಸಿ, ಉದ್ಧಟತನ ತೋರಿರುವುದನ್ನು ವಿರೋಧಿಸಿ ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಬಸವೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಗುಬ್ಬಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ, ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ಧ ಘೋಷಣೆ ಕೂಗುವ ಮೂಲಕ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ಕಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎಲ್.ರವಿಕುಮಾರ್, ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ, ಕಡಬ ಶಂಕರ್, ಕೋಡಿಯಾಲ ಮಹದೇವ್, ಕುಂದರನಹಳ್ಳಿ ನಟರಾಜ್, ಗಿರೀಶ್, ಲಕ್ಕೇನಹಳ್ಳಿ ನರಸೀಯಪ್ಪ, ಹಾಗಲವಾಡಿ ಚಿರಂಜೀವಿ, ಮಂಜೇಶ್, ಯಲಚಿಹಳ್ಳಿ ನಾರಾಯಣ್, ಇಡಗೂರು ಮಂಜುನಾಥ್, ಮಂಚಿಹಳ್ಳಿ ಶಿವಸ್ವಾಮಿ ಇತರ ದಲಿತ ಮುಖಂಡರು ಹಾಜರಿದ್ದರು. ವರದಿ: ಮಂಜುನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ರ ಸಾಲಿನ ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು. ಸಂಪ್ರದಾಯದ ಪ್ರಕಾರ, ಹಣಕಾಸು ಸಚಿವೆ ಸಂಸತ್ಗೆ ತೆರಳುವ ಮುನ್ನ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆ ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್ರಾವ್ ಕರಾಡ್, ಪಂಕಜ್ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ 2022-23ರ ಕೇಂದ್ರ ಬಜೆಟ್ ಮಂಡನೆಗೆ ಮೊದಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.ತರುವಾಯ ಬಜೆಟ್ನ ಅನುಮೋದನೆಗಾಗಿ ಕೇಂದ್ರ ಸಚಿವ ಸಂಪುಟದ ಸಭೆ ನಡೆಯಿತು. ಬಜೆಟ್ನ ವಾಸ್ತವಿಕ ಮಂಡನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟ 2022-23ರ ಹಣಕಾಸು ವರ್ಷದ ಬಜೆಟ್ಗೆ ಅನುಮೋದನೆ ನೀಡುತ್ತದೆ.ಸಾಂಪ್ರದಾಯಿಕವಾಗಿ ಹಣಕಾಸು ಸಚಿವರು ಆಗಮಿಸುವ ಮುನ್ನ ಬಜೆಟ್ನ ಪ್ರತಿಗಳನ್ನು ಸಂಸತ್ ಸಮುಚ್ಚಯಕ್ಕೆ…
2022 ರ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿಯಾಗಿದೆ ಎಂದು ಹೇಳಿದರು. “ಪಿಎಂ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಎಳೆಯುತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳಿಗೆ ಕಾರಣವಾಗುತ್ತದೆ” ಎಂದು ಅವರು ಹೇಳಿದರು. ದೇಶದಲ್ಲಿ ಯುವಕರು, ಮಹಿಳೆಯರು ಮತ್ತು ಬಡವರ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಅವರು ಹೇಳಿದರು. “ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್ಐ) ಯೋಜನೆಯು ಆತ್ಮನಿರ್ಭರ ಭಾರತವನ್ನು ಸಾಧಿಸಲು ಅತ್ಯುತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ, ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ರಚಿಸುವ ಸಾಮರ್ಥ್ಯವಿದೆ” ಎಂದು ಅವರು ಹೇಳಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ನಾಲ್ಕನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ, ಇದು ಭಾರತಕ್ಕೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಟ್ಯಾಗ್ ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿದೆ. ಉತ್ತರ ಪ್ರದೇಶದಲ್ಲಿ…
ನಿನ್ನೆ ಒಂದು ದಿನದಲ್ಲಿ ದೇಶದಲ್ಲಿ ಹೊಸದಾಗಿ 1,67,059 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಭಾರತದ ಒಟ್ಟಾರೆ ಕೋವಿಡ್-19 ಸೋಂಕಿನ ಪ್ರಮಾಣ 4.14 ಕೋಟಿಗೂ ಅಧಿಕ ಸಂಖ್ಯೆಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಿಳಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,192 ಜನರು ಕೊರೊನಾದಿಂದ ಮರಣಿಸುವುದರೊಂದಿಗೆ ಒಟ್ಟಾರೆ ಕೋವಿಡ್-19 ಮರಣ ಪ್ರಮಾಣ 4,96,242ಕ್ಕೇರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 88,209ರಷ್ಟು ಇಳಿಕೆ ಕಂಡಿದ್ದು, 17,43,059ಕ್ಕೆ ತಲುಪಿದೆ. ಇದು ಒಟ್ಟಾರೆ ಸೋಂಕುಗಳ 4.20 ಪ್ರತಿಶತದಷ್ಟಿದೆ. ದೇಶದಲ್ಲಿ ಸಮಗ್ರ ಚೇತರಿಕೆ ಪ್ರಮಾಣ ಶೇ.94.60ರಷ್ಟಿದೆ ಎಂದು ಸಚಿವಾಲಯ ಹೇಳಿದೆ.ದೈನಿಕ ಪಾಸಿಟಿವಿಟಿ ದರ ಶೇ.11.69ರಷ್ಟು ದಾಖಲಾಗಿದೆ. ವಾರದ ಪಾಸಿಟಿವಿಟಿ ದರ ಶೇ.15.25ರಷ್ಟಿದೆ. ಕೊವಿಡ್ನಿಂದ ಚೇತರಿಸಿಕೊಂಡವರ ಸಂಖ್ಯೆ 3,92,30,198ಕ್ಕೇರಿದೆ. ಕೋವಿಡ್ನಿಂದ ಆದ ಸಾವಿನ ಸಂಖ್ಯೆ 1.20 ಪ್ರತಿಶತದಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ 8 ಗಂಟೆಗೆ ತಾಜಾ ಮಾಹಿತಿ ನೀಡಿದೆ. ಹೊಸ ಪ್ರಕರಣಗಳೊಂದಿಗೆ ಒಟ್ಟಾರೆ ಸೋಂಕಿನ ಪ್ರಮಾಣ 4,14,69,499ಕ್ಕೆ ತಲುಪಿದೆ. ಕೋವಿಡ್ ಲಸಿಕೆ…
ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿಯೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತೈಲ ಕಂಪೆನಿಗಳು ಇಳಿಕೆ ಮಾಡಿವೆ. ಇಂದಿನಿಂದ 19 ಕೆಜಿ ತೂಕದ ವಾಣಿಜ್ಯಸಿಲಿಂಡರ್ ಬೆಲೆಯನ್ನು 91.50 ರೂ. ನಷ್ಟು ಇಳಿಕೆ ಮಾಡಲಾಗಿದೆ. ಹೊಸ ವರ್ಷದ ಮೊದಲ ದಿನದಂದು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ನೂರು ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು. ಈಗ 91ರೂ. ಕಡಿತಗೊಳಿಸಲಾಗಿದ್ದು, ಒಟ್ಟಾರೆ 191 ರೂ.ಗಳಷ್ಟು ಬೆಲೆ ಇಳಿಕೆಯಾದಂತಾಗಿದೆ. 14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB