Author: admin

ಮಹಾನಾಯಕ ಡಾಟ್ ಇನ್(www.mahanayaka.in) ಅಂತರ್ಜಾಲ ಮಾಧ್ಯಮವು 2020 ಅಕ್ಟೋಬರ್ 20ರಂದು ಓದುಗರಿಂದಲೇ ಲೋಕಾರ್ಪಣೆಯಾಯಿತು. ಇದೀಗ ಮಹಾನಾಯಕ ಅಂತರ್ಜಾಲ ಮಾಧ್ಯಮ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮಹಾನಾಯಕ ಮಾಧ್ಯಮವನ್ನು ಬಹಳಷ್ಟು ಪ್ರೀತಿಯಿಂದ ಜನರು ಸ್ವೀಕರಿಸಿದ್ದಾರೆ. ಮಾಧ್ಯಮದ ಉತ್ತಮ ಅಂಶಗಳನ್ನು ಗಮನಿಸಿ ನಮ್ಮನ್ನು ಪ್ರೋತ್ಸಾಹಿಸಿದ್ದಾರೆ. ತಪ್ಪುಗಳು ಕಂಡು ಬಂದಾಗ ನಮ್ಮ ಗಮನಕ್ಕೆ ತಂದು ಅವುಗಳನ್ನು ತಿದ್ದುವ ಕೆಲಸವನ್ನೂ ಮಾಡಿದ್ದಾರೆ. ಹೀಗೆ ಓದುಗರಿಂದಲೇ ಉದ್ಘಾಟನೆಗೊಂಡ ಮಹಾನಾಯಕ ಮಾಧ್ಯಮ ಕೇವಲ ಒಂದೇ ವರ್ಷಗಳಲ್ಲಿ ಲಕ್ಷಾಂತರ ಓದುಗರ ಅಚ್ಚುಮೆಚ್ಚಿನ ತಾಣವಾಗಿದೆ. ಓದುಗರ ಈ ಪ್ರೀತಿ ವಿಶ್ವಾಸಕ್ಕೆ ಮಹಾನಾಯಕ ಬಳಗ ಆಭಾರಿಯಾಗಿದೆ. ಈ ಒಂದು ವರ್ಷಗಳ ಅವಧಿಯಲ್ಲಿ ಸಾವಿರಾರು ಆನ್ ಲೈನ್ ಮಾಧ್ಯಮಗಳ ನಡುವೆಯೇ ಮಹಾನಾಯಕ ಮಾಧ್ಯಮವನ್ನು ಓದುಗರು ಪ್ರತ್ಯೇಕವಾಗಿ ಗುರುತಿಸಿದ್ದಾರೆ. ಸರ್ಕಾರದ, ಜನಪ್ರತಿನಿಧಿಗಳ ತಪ್ಪುಗಳನ್ನು ಎತ್ತಿತೋರಿಸಲು ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಬಳಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೋಷಿತ ಜನರ ಸಂಕಷ್ಟಗಳು, ದಲಿತ ದೌರ್ಜನ್ಯಗಳು, ಅಸ್ಪೃಷ್ಯತೆ ಆಚರಣೆ, ಕೋಮುವಾದ, ಧಾರ್ಮಿಕ ಅಸಮಾನತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮೊದಲಾದ ಘಟನೆಗಳ ಸಂದರ್ಭದಲ್ಲಿ ಜಾತಿ,…

Read More

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಸಂಬಂಧ ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಇನ್ನೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ಸಂದರ್ಭದಲ್ಲಿ  ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ವೈದ್ಯರ ನಿರಂತರ ಚಿಕಿತ್ಸೆಯ ಬಳಿಕವೂ ಪುನೀತ್ ರಾಜ್ ಕುಮಾರ್ ಅವರು ಚೇತರಿಸಿಕೊಳ್ಳದೇ ನಿಧನರಾಗಿದ್ದಾರೆ.

Read More

ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮಿತ್ತ  ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು (ಟಾಟಾ ಮಹೀಂದ್ರ )  ಗಾಡಿಯು ಒಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ಹೊನ್ನವಳ್ಳಿ ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ತಿಳಿದ ಕೂಡಲೇ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರುಗಳು ಗೇಟ್ ನಲ್ಲಿ ಶವಗಳನ್ನಿರಿಸಿ, ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ಈ…

Read More

ಮಂಗಳೂರು: ನಗರದಲ್ಲಿರುವ ಪಬ್ ಗಳು ನಿಯಮ ಮೀರಿ ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿಯ ಮಂಗಳೂರು ಪೊಲೀಸರು ಗುರುವಾರ ಏಕಾಏಕಿ ಪಬ್ ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಕೊವಿಡ್ ನಿಯಮಗಳ ಉಲ್ಲಂಘನೆ, ಪಬ್ ನೊಳಗೆ ಬೆಳಕಿನ ವ್ಯವಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಪಬ್ ಗೆ ದಾಳಿ ನಡೆಸಿದ ಪೊಲೀಸರು, ನಿಯಮ ಪಾಲನೆ ಮಾಡುವಂತೆ  ಮೇಲ್ವಿಚಾರಕರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

Read More

ಉಡುಪಿ: ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 16ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿಯಯನ್ನು ಬಂಧಿಸಿದ್ದಾರೆ.  ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ ಎಂದು ಗುರುತಿಸಲಾಗಿದೆ. ಘಟನೆಯು ಅಕ್ಟೋಬರ್ 16ರಂದು ಉಡುಪಿಯ ಇಂದ್ರಾಳಿ ಫ್ಲ್ಯಾಟ್ ನಲ್ಲಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಗೆಳತಿಯ ಮೇಲೆ ಆರೋಪಿ ಆರ್ಯನ್ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More

ಕೋಲಾರ: ಸ್ನೇಹಿತರ ವಾಟ್ಸಾಪ್ ಗೆ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟನದಲ್ಲಿ ನಡೆದಿದ್ದು, ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 17 ವರ್ಷ ವಯಸ್ಸಿನ ಕಿಶೋರ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದಾನೆ. ಈ ವಿದ್ಯಾರ್ಥಿಯು ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಎನ್ನಲಾಗಿದೆ. ಅ.26ರಂದು ಸಂಜೆ ವೇಳೆ ಸ್ನೇಹಿತರ ವಾಟ್ಸಾಪ್ ಗ್ರೂಪ್ ಗೆ ಮೆಸೇಜ್ ಹಾಕಿದ ಕಿಶೋರ್, “ ಮಿಸ್ ಯೂ ಫ್ರೆಂಡ್ಸ್, ನಾನು ಹೋಗ್ತಿದ್ದೀನಿ… ನನ್ನದು ಬ್ಯಾನರ್ ಹಾಕಿ” ಎಂದು ಸಂದೇಶ ಕಳುಹಿಸಿದ್ದಾನೆ. ಆತ್ಮಹತ್ಯೆಗೂ ಮೊದಲು ಕೆರೆಯ ಫೋಟೋವನ್ನು ಗ್ರೂಪ್ ಗೆ ಶೇರ್ ಮಾಡಿದ್ದಾನೆ ಎಂದು ಹೇಳಲಾಗಿದೆ.  ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ವಿದ್ಯಾರ್ಥಿಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಇನ್ನೂ ಕಾಲೇಜು ಪ್ರಾಂಶುಪಾಲ ಸುಗ್ರಮಣಿ ಅವರು ಬೈದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು  ಪೋಷಕರು ಆರೋಪಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ  ನಿರಂತರವಾಗಿ ಸಂಪರ್ಕದಲ್ಲಿದ್ದ 48 ವರ್ಷ ವಯಸ್ಸಿನ ಅನಂತ್ ಭಟ್,  ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಎಂದು ಆರೋಪಿಸಲಾಗಿದೆ. ಆರೋಪಿ ರಾಜೇಶ್ ಭಟ್ ಬಳಸುತ್ತಿದ್ದ ಕಾರು ಮತ್ತು ಮೊಬೈಲ್ ಫೋನ್ ನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದ ಎಂದು ಹೇಳಲಾಗಿದೆ. ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ತನ್ನ ಕಚೇರಿಯಲ್ಲಿ ತರಬೇತಿಗಾಗಿ ಬಂದಿದ್ದ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿ ರಾಜೇಶ್ ಭಟ್ ತಲೆ ಮರೆಸಿಕೊಂಡಿದ್ದಾನೆ.

Read More

ಉಳ್ಳಾಲ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಫ್ಲೈಓವರ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಕುಂಪಲ ನಿವಾಸಿ 50 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಎಂಬವರು ಮೃತಪಟ್ಟ ದ್ವಿಚಕ್ರ ಸವಾರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕುಂಪಲ ಕಡೆಗೆ ಅವರು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸುಬ್ರಹ್ಮಣ್ಯ ಅವರು, ರಸ್ತೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು  ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿದಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿತ್ತು.  ಅಷ್ಟರಲ್ಲೇ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ.  ಆಸ್ಪತ್ರೆಗಳ ಮೂಲಗಳ ಪ್ರಕಾರ ನಟ ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ಅಪ್ಪು ವರ್ಕ್​ಔಟ್​ ಮಾಡುತ್ತಿದ್ದರು. ಆ ವೇಳೆ ಕುಸಿದು ಬಿದ್ದ ಅಪ್ಪು ಅವರನ್ನ ಕೂಡಲೇ ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

Read More

ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದು, ಬಿಜೆಪಿಯಿಂದ  30-40 ಲಕ್ಷ ಹಣ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ವಿಡಿಯೋವೊಂದನ್ನು ಹಂಚಿಕೊಂಡು, ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿರುವ ದೃಶ್ಯವನ್ನು ತೋರಿಸಿದ್ದಾರೆ.

Read More