Author: admin

ತುಮಕೂರು: ಪ್ರತಿಯೊಬ್ಬರು ಖಾದಿ ಬಟ್ಟೆಗಳನ್ನು ಧರಿಸುವ ಮೂಲಕ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಬೇಕು ಎಂದು ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಹೇಳಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು (ಕೈಮಗ್ಗ) ಜವಳಿ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳ ನಿ., ಕಾವೇರಿ ಹ್ಯಾಂಡ್ಲೂಮ್ಸ್, ಬೆಂಗಳೂರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿ.ಪಂ, ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ 14 ದಿನಗಳ ಕಾಲ ಏರ್ಪಡಿಸಲಾಗಿರುವ ರಾಜ್ಯ ಹ್ಯಾತ್ಕರ್ಗ ವಿಶೇಷ ಕೈಮಗ್ಗ ಮೇಳ ವಸ್ತು ಭಂಡಾರ-2026 ಉದ್ಘಾಟಿಸಿ ಅವರು ಮಾತನಾಡಿದರು. ನೇಕಾರರು ಬಹಳ ಕಷ್ಟಪಟ್ಟು ಬಟ್ಟೆಗಳನ್ನು ನೆಯ್ಗೆ ಮಾಡುತ್ತಾರೆ. ಅವರು ನೆಯ್ಗೆ ಮಾಡುವ ಬಟ್ಟೆಗಳನ್ನು ಪ್ರತಿಯೊಬ್ಬರೂ ಖರೀದಿಸಿ ತೊಟ್ಟರೆ ಆ ಸಮುದಾಯದ ಬೆಳವಣಿಗೆಗೆ ಸಹಕರಿಸಿದಂತಾಗುತ್ತದೆ. ಹಾಗಾಗಿ ನಾವೆಲ್ಲರೂ ಹೆಚ್ಚು ಹೆಚ್ಚು ಖಾದಿ ಬಟ್ಟೆಗಳನ್ನು ಧರಿಸಲು ಮುಂದಾಗಬೇಕು ಎಂದರು. ವ್ಯಕ್ತಿತ್ವದಲ್ಲಿ ತೂಕ ಇದ್ದರೆ ನಾವು ತೊಡುವ ಬಟ್ಟೆಗೂ ಮೌಲ್ಯ ಬರುತ್ತದೆ. ಬಣ್ಣ ಬಣ್ಣದ…

Read More

ತುಮಕೂರು: ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಹೊರಗೆ ಉಳಿಯುತ್ತಿದ್ದು, ಆ ಮಕ್ಕಳನ್ನು ಶಾಲೆಗೆ ಮರಳಿ ಕರೆತರುವುದು ಆಯಾಯ ಶಾಲೆಗಳ ಶಿಕ್ಷಕರಿಗೆ ಸವಾಲಿನ ಕೆಲಸವಾಗಿದೆ ಎಂದು ಡಿಡಿಪಿಐ ರಘುಚಂದ್ರ ತಿಳಿಸಿದರು. ನಗರದ ಧಾನ್ಯ ಪ್ಯಾಲೇಸ್‌ ನಲ್ಲಿ ತಹರೀಕ್ ಉರ್ದು–ಅದಬ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಕರು ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಯ ಶಿಕ್ಷಕರು ಒಂದು ಮಾದರಿ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡರೆ, ಮಕ್ಕಳು ತಾನಾಗಿಯೇ ಶಾಲೆಗೆ ಪ್ರವೇಶ ಪಡೆಯುತ್ತಾರೆ. ಇಂದಿನ ಅಗತ್ಯಕ್ಕೆ ಅನುಗುಣವಾಗಿ, ಜ್ಞಾನದ ಜೊತೆಗೆ, ಮಾನವೀಯ ಗುಣಗಳನ್ನು ಕಲಿಸುವತ್ತ ಶಿಕ್ಷಕರು ಮುಂದಾಗಬೇಕೆಂದರು. ಉರ್ದು ಶಾಲೆಗಳು ಪ್ರಮುಖವಾಗಿ ಶಿಕ್ಷಕರ ಕೊರತೆ ಎದುರಿಸುತ್ತಿದೆ. ಬಹುತೇಕ ಅತಿಥಿ ಉಪನ್ಯಾಸಕರಿಂದ ಶಾಲೆಗಳಲ್ಲಿ ಪಾಠ ಪ್ರವಚನ ನಡೆಯುತ್ತಿವೆ. ಉತ್ತಮ ಫಲಿತಾಂಶದ ಹಿನ್ನೆಲೆಯಲ್ಲಿ ಸ್ವಲ್ಪ ಒತ್ತಡ ಹಾಕಿದರೂ ಕೆಲಸಕ್ಕೆ ಬರುವುದಿಲ್ಲ. ಹಾಗಾಗಿ ಸಮುದಾಯದ ಮುಖಂಡರು ಹಾಗೂ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತಂದು ಖಾಯಂ ಉಪನ್ಯಾಸಕರ ನೇಮಕಕ್ಕೆ ಮುಂದಾಗಬೇಕೆಂದು ಡಿಡಿಪಿಐ ರಘುಚಂದ್ರ…

Read More

ಕುಣಿಗಲ್: ಅಮೆರಿಕಾದ ಲೈಂಗಿಕ ಅಪರಾಧಿ ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಶನಿವಾರ ಪಟ್ಟಣದ ಗ್ರಾಮದೇವತೆ ಸರ್ಕಲ್ ಬಳಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ, ಕುಣಿಗಲ್ ಕ್ಷೇತ್ರದ ಅಧ್ಯಕ್ಷ ಸಿ.ಬಿ.ಸಂತೋಷ್, ಕುಣಿಗಲ್ ಬ್ಲಾಕ್ ಅಧ್ಯಕ್ಷ ಮಾರುತಿ, ಹುಲಿಯೂರುದುರ್ಗ ಬ್ಲಾಕ್ ಅಧ್ಯಕ್ಷ ಪಾಲಗೆರೆ ರಾಮು ಅವರ ನೇತೃತ್ವದಲ್ಲಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಗ್ರಾಮದೇವತೆ ವೃತ್ತದಿಂದ ಎಸ್.ಹುಚ್ಚಮಾಸ್ತಿಗೌಡ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ಕುಣಿಗಲ್ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ.ಸಂತೋಷ್ ಮಾತನಾಡಿ, ಅಮೆರಿಕಾದ ಲೈಂಗಿಕ ಅಪರಾಧಿ ಜೆಫ್ರಿ ಎಫ್ಟೀನ್, ಅಪ್ರಾಪ್ತ ಹೆಣ್ಣು ಮಕ್ಕಳನ್ನು ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡು, ವಿವಿಧ ದೇಶಗಳ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಒಡನಾಟವನ್ನು ಹೊಂದಿದ್ದನು. ಅಮೆರಿಕಾದಲ್ಲಿ…

Read More

ತುಮಕೂರು: 2025–26ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಹತ್ವದ ಸಭೆ ನಡೆಸಿದರು. ಜಿಪಂ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಪರೀಕ್ಷೆ 1 ಮತ್ತು 2 ರಲ್ಲಿ ಶೇಕಡ 50ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯ ಶಿಕ್ಷಕರುಗಳು, ಡಿಡಿಪಿಐ, ಬಿಇಒಗಳೊಂದಿಗಿನ ಸಭೆಯಲ್ಲಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು. ಜೊತೆಗೆ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬಂದ ನ್ಯೂನತೆಗಳ ಕುರಿತು ಚರ್ಚಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ನಗರ ಪ್ರದೇಶಗಳಲ್ಲಿ ಈಗಾಗಲೇ ಟ್ಯಾಂಕರ್ ನೀರು ಸರಬರಾಜು ಮಾಡುತ್ತಿರುವ ಕ್ರಮ ಸರಿಯಲ್ಲ, ಇಲ್ಲಿಯವರೆಗೆ ನೀರು ಸಂಗ್ರಹಕ್ಕೆ ನಗರಾಡಳಿತ ಯಾವ ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿ ಬೇಸಿಗೆ ಬಂದ ಕೂಡಲೇ ಟ್ಯಾಂಕರ್ ಸರಬರಾಜು ಎಂಬ ಉತ್ತರ ಬರುವುದು ಸಮಾಧಾನಕರವಲ್ಲ. ಇದಕ್ಕೆ ಸರಿಯಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗೃತ ಕ್ರಮದ ವ್ಯವಸ್ಥೆ ಮಾಡಿಕೊಳ್ಳದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಾತ್ರೆಗೆ ಅನುಮತಿ ಕಡ್ಡಾಯ: ಬೇಸಿಗೆ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಜಾತ್ರೆಗಳು ಆಗುತ್ತವೆ. ಈ ಸಂದರ್ಭದಲ್ಲಿ ಜನರ ಕ್ಷೇಮ ಕಾಳಜಿಗೆ ಯಾವ ಕ್ರಮ ಅನುಸರಿಸಿದ್ದೀರಿ ಎಂದು ಉಪ ವಿಭಾಗಾಧಿಕಾರಿಗಳನ್ನು ಪ್ರಶ್ನಿಸಿದ ಅವರು, ಯಾವುದೇ ಜಾತ್ರೆ ಹಬ್ಬ ಆಚರಿಸಲು ಸ್ಥಳೀಯ ಆಡಳಿತದ ಅನುಮತಿ ಕಡ್ಡಾಯವಾಗಿ ಪಡೆಯಬೇಕು.…

Read More

ತುಮಕೂರು: ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಗೂಳೂರು ಹೋಬಳಿಗೆ ಸೇರಿದ ಹೆತ್ತೇನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಬಂಗಾರದ ಚೆಲುವೆ, ಭವರೋಗವೈದ್ಯೆ ಮಕ್ಕಳ ತಾಯಿ ಎಂದೇ ಹೆಸರುವಾಸಿಯಾಗಿರುವ ಅನಾದಿಕಾಲದಿಂದಲೂ ಭಕ್ತರನ್ನು ಹರಸುತ್ತ ಬಂದಿರುವ ಕ್ಷೇತ್ರಮಾತೆ ಶ್ರೀ ಆದಿಶಕ್ತಿ ಮಾರಮ್ಮನವರ ಜಾತ್ರಾ ಮಹೋತ್ಸವ ಫೆಬ್ರವರಿ 16 ಮತ್ತು 17ರಂದು ನಡೆಯಲಿದೆ. ಗ್ರಾಮದ ಮನೆಮನೆಗಳನ್ನು ದೇವಾಲಯಗಳನ್ನು ಶುಚಿಗೊಳಿಸಿ ಸುಣ್ಣ ಬಣ್ಣಗಳೊಂದಿಗೆ ಅಲಂಕರಿಸಿ ದಿನಾಂಕ 14 ರಂದು ಅಮ್ಮನವರನ್ನು ತವರುಮನೆ ಕಂಬತ್ತನಹಳ್ಳಿಗೆ ಕಳುಹಿಸಿಕೊಡಲಾಗುವುದು. ಸುತ್ತಮುತ್ತಲ ಗ್ರಾಮಗಳಾದ ಹೆತ್ತೇನಹಳ್ಳಿ ಪಾಳ್ಯ, ಕುಮ್ಮಂಜಪಾಳ್ಯ, ರಂಗಯ್ಯನಪಾಳ್ಯ, ಕಂಬತ್ತನ ಹಳ್ಳಿಗಳ ಭಕ್ತರಿಂದ ಪೂಜೆ ಸ್ವೀಕರಿಸಿ 15ರ ಭಾನುವಾರ ಹೆತ್ತೇನಹಳ್ಳಿಗೆ ಹೂವಿನ ಹಾರ ತುಂಬಿದ ವಧುವಿನಂತೆ ಸಿಂಗರಿಸಿ ಕಳುಹಿಸಿಕೊಡಲಾಗುವುದು. ಈ ದೃಶ್ಯವನ್ನು ಕಣ್ಣು ತುಂಬಿಕೊಳ್ಳುವುದೇ ಒಂದು ಭಾಗ್ಯ ಎನ್ನುತ್ತಾರೆ ಭಕ್ತರು. ಫೆ. 16ರ ಸೋಮವಾರ ರಥವನ್ನು ಬಣ್ಣ ಬಣ್ಣದ ವಸ್ತ್ರ ಧ್ವಜಗಳಿಂದ ಸಿದ್ಧಗೊಳಿಸಿ ಅಲಂಕೃತಗೊಳಿಸಲಾಗುವುದು. ಅಗ್ನಿಕೊಂಡವನ್ನು ಸಿದ್ಧಪಡಿಸಲಾಗುವುದು. ಇದರ ಜೊತೆಗೆ, ಗುಗ್ಗಿರಿ ಪೂಜೆ, ಕಿಚ್ಚು ಹಾಯುವುದು, ತುಂಬೆ ಹೂವಿನ ವಿಶೇಷ ಪೂಜೆ ನೆರವೇರಿಸಿ ಸೋಮವಾರ ರಾತ್ರಿ…

Read More

ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು : ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಸಿದ್ದರಬೆಟ್ಟವು ಅತ್ಯಂತ ಪ್ರಾಚೀನ ಮತ್ತು ಪೌರಾಣಿಕ ಇತಿಹಾಸವನ್ನು ಹೊಂದಿರುವ ಸುಕ್ಷೇತ್ರವಾಗಿದ್ದು. ಈ ಪುಣ್ಯಕ್ಷೇತ್ರವನ್ನು ಸಿದ್ದರ ತಪೋಭೂಮಿ, ಆಯುರ್ವೇದಿಕ್ ದಿವ್ಯ ಔಷಧಿಗಳ ತಾಣ, ನವಕೋಟಿ ಸಿದ್ದರು ತಪಸ್ಸು ಮಾಡಿದ ಪುಣ್ಯಸ್ಥಳವೆಂದು ಸಹ ಈ ಕ್ಷೇತ್ರವನ್ನು ಕರೆಯಲ್ಪಡುತ್ತಾರೆ. ಪೌರಾಣಿಕ ಹಿನ್ನೆಲೆಯನ್ನು ಹೊಂದಿರುವ ಸುಕ್ಷೇತ್ರವಾಗಿದ್ದು ರಾಮಾಯಣ ಕಾಲದಲ್ಲಿ ಶ್ರೀ ಆಂಜನೇಯ ಸ್ವಾಮಿಯು ಹಿಮಾಲಯದಿಂದ ಸಂಜೀವಿನಿ ಪರ್ವತವನ್ನು ಹೊತ್ತು ತರುವಾಗ ಒಂದು ತುಂಡು ಕಳಚಿ ಬಿದ್ದ ಕ್ಷೇತ್ರವಾಗಿದೆ ಎಂಬಾ ಇತಿಹಾಸವು ಇದೆ. ಇಂದಿಗೂ ಕೂಡ ಶ್ರೀ ಸಿದ್ಧರಬೆಟ್ಟ ಕ್ಷೇತ್ರದಲ್ಲಿ ಸಂಜೀವಿನಿ ಸೇರಿದಂತೆ ಜೀವಾಮೃತ ನೀಡುವ ಗಿಡ ಮೂಲಿಕೆಗಳು, ದಿವ್ಯ ಔಷಧಿಯ ಸಸ್ಯಗಳು ಇರುವುದು ಸತ್ಯವಾಗಿದೆ. ಈ ಕಾರಣಗಳಿಂದ ಈ ಸಿದ್ಧರಬೆಟ್ಟ ಕ್ಷೇತ್ರವನ್ನು “ಸುವರ್ಣ ಗಿರಿ” ಮತ್ತು “ರಸ ಸಿದ್ಧರಬೆಟ್ಟ” ಎಂದು ಕರೆಯುತ್ತಾರೆ.  ಸುವರ್ಣಮುಖಿ ನದಿಯ ಉಗಮ ಸ್ಥಾನವಾಗಿದೆ. ನವಕೋಟಿ ಸಿದ್ದರು ಈ ಪುಣ್ಯಭೂಮಿಯಲ್ಲಿ ತಪಸ್ಸು ಮಾಡಿದ ಹಿನ್ನೆಲೆಯಿಂದ ಈ ಕ್ಷೇತ್ರವನ್ನು “ಸಿದ್ದರಬೆಟ್ಟ” ಎಂದು ನಾಮಕರಣ…

Read More

ಹಾವೇರಿ: ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯ ವಿಷಯವಾಗಿರುವ ‘ಅಧಿಕಾರ ಹಂಚಿಕೆ’ ಅಥವಾ ‘ಅಧಿಕಾರ ಹಸ್ತಾಂತರ’ದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಸರ್ಕಾರದ ‘ಸಾಧನಾ ಸಮಾವೇಶ’ದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆಯ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. “ಅಧಿಕಾರ ಹಂಚಿಕೆಯ ಬಗ್ಗೆ ನಾನು ಈಗಾಗಲೇ ಮಾತನಾಡಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಆದರೂ ನೀವು ಯಾಕೆ ಪದೇ ಪದೇ ಅದೇ ಪ್ರಶ್ನೆಯನ್ನು ಕೇಳುತ್ತೀರಿ?” ಎಂದು ಮಾಧ್ಯಮದವರ ವಿರುದ್ಧ ಆಕ್ರೋಶ ಹೊರಹಾಕಿದರು. ಇದೇ ವೇಳೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಶ್ರಮಕ್ಕೆ ತಕ್ಕ ಫಲ ಸಿಗಲಿದೆ” ಎಂದು ಮಾಡಿದ್ದ ಟ್ವೀಟ್ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹೈಕಮಾಂಡ್ ಏನಾದರೂ ಟ್ವೀಟ್ ಮಾಡಿದೆಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಸಂದೇಶ ನೀಡಿದರು. ಇದೇ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಈ ವಿಷಯದ…

Read More

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರು ಗ್ರಾಮದ ನಿವಾಸಿ ಪ್ರಿಯಾಂಕ (29) ನಾಪತ್ತೆಯಾದ ಮಹಿಳೆ. ಇವರು ಫೆಬ್ರವರಿ 12ರಂದು ಚಿಕ್ಕಮಗಳೂರಿನಲ್ಲಿ ನಡೆದ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು. ಮದುವೆ ಮುಗಿಸಿ ತವರು ಮನೆ ಮತ್ತಾವರಕ್ಕೆ ಬಂದಿದ್ದ ಅವರು, ಅಲ್ಲಿಂದ ಬೇಲೂರಿಗೆ ಬಸ್ ಹತ್ತಿದ್ದರು. ಬೇಲೂರಿನಲ್ಲಿ ಬಸ್ ಇಳಿದ ನಂತರ ತಮ್ಮ ಚಿಕ್ಕಮ್ಮನಿಗೆ ಕರೆ ಮಾಡಿದ್ದ ಪ್ರಿಯಾಂಕ, “ಪರಿಚಯಸ್ಥರು ಸಿಕ್ಕಿದ್ದಾರೆ, ಅವರ ಜೊತೆ ಹೋಗುತ್ತಿದ್ದೇನೆ” ಎಂದು ತಿಳಿಸಿದ್ದರು. ಅತ್ತ ಪತಿ ರುದ್ರೇಶ್ ಅವರಿಗೆ ಕರೆ ಮಾಡಿ ಕುಣಿಗಲ್‌ ಗೆ ಬಂದು ಪಿಕಪ್ ಮಾಡಿಕೊಳ್ಳುವಂತೆ ತಿಳಿಸಿದ್ದರು. ಆದರೆ, ರಾತ್ರಿ 8:30ರ ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಕೊಲೆ ಶಂಕೆ ಏಕೆ? ಪ್ರಿಯಾಂಕ ನಾಪತ್ತೆಯಾದ ನಂತರ ಹುಡುಕಾಟ ನಡೆಸಿದಾಗ, ಹಾಸನ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಅವರ ಒಳ ಉಡುಪು, ಚಪ್ಪಲಿ ಮತ್ತು ವ್ಯಾನಿಟಿ ಬ್ಯಾಗ್…

Read More

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಿರುವ ‘ಸಾಧನಾ ಸಮಾವೇಶ’ದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನು “ಶೂನ್ಯ ಸಾಧನೆಯ ಹಾಗೂ ಭ್ರಷ್ಟಾಚಾರದ ಸಮಾವೇಶ” ಎಂದು ಅವರು ಟೀಕಿಸಿದ್ದಾರೆ. ಶನಿವಾರ ಹಾವೇರಿಯಲ್ಲಿ ನಡೆದ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,000 ದಿನಗಳ ಆಡಳಿತದಲ್ಲಿ ಸರ್ಕಾರ ಯಾವುದೇ ಗಣನೀಯ ಸಾಧನೆ ಮಾಡಿಲ್ಲ. ಇದೊಂದು ವ್ಯರ್ಥ ಆಡಳಿತದ ಪ್ರದರ್ಶನ ಎಂದು ಅವರು ಕಿಡಿಕಾರಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಹಕ್ಕು ಪತ್ರ ನೀಡುವ ನೆಪದಲ್ಲಿ ನೋಂದಣಿ ಶುಲ್ಕದ ಹೆಸರಿನಲ್ಲಿ ಬಡವರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಖಜಾನೆ ತುಂಬಿಸಿಕೊಳ್ಳಲು ಸರ್ಕಾರ ಬಡವರ ತಲೆ ಮೇಲೆ 3-4 ಲಕ್ಷ ರೂ.ಗಳ ಹೊರೆ ಹಾಕುತ್ತಿದೆ ಎಂದು ದೂರಿದ್ದಾರೆ. ಕಂದಾಯ ಇಲಾಖೆಯಲ್ಲಿ ಹಕ್ಕು ಪತ್ರ ನೀಡುವ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಸಾಧನೆಯ ಸಮಾವೇಶವಲ್ಲ, ಬದಲಿಗೆ…

Read More