Subscribe to Updates
Get the latest creative news from FooBar about art, design and business.
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
- ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
- ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
- ತುಮಕೂರು ಹಾಲು ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
- ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
- 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
Author: admin
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಕೆಇಬಿ ಕಚೇರಿ ಮುಂಭಾಗ ದೊಡ್ಡ ಆಲದಮರ ಬಿದ್ದು, ಹುಳಿಯಾರು – ತಿಪಟೂರು ರಸ್ತೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ವಿದ್ಯುತ್ ತಂತಿಯ ಮೇಲೆಯೇ ಮರ ಬಿದ್ದ ಪರಿಣಾಮ ರಸ್ತೆ ಬಂದ್ ಆಗಿರುವುದಲ್ಲದೇ ಈ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಂಡಿದೆ. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಈ ಮಾರ್ಗದ ಬದಿಯಲ್ಲಿ ಹಳೆಯ ಕಾಲದ ಸಾಕಷ್ಟು ಮರಗಳಿದ್ದು, ಗಾಳಿ, ಮಳೆಗಳ ಸಂದರ್ಭದಲ್ಲಿ ರಸ್ತೆಗೆ ಬೀಳುತ್ತಿವೆ. ಪದೇ ಪದೇ ಇಂತಹ ಘಟನೆಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಸಂಬಂಧ ಪಟ್ಟವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಚಲಿಸುತ್ತಿರುವ ವಾಹನಗಳ ಮೇಲೆ ಮರಗಳು ಉರುಳಿ ಬಿದ್ದು, ಸಾವು ನೋವು ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿರುವ ಮರಗಳ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ವರದಿ: ಆನಂದ ತಿಪಟೂರು…
ಬೆಂಗಳೂರು: ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದರು. ಇದೀಗ ನಾಳೆ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧವಾಗಿದೆ. ಇನ್ನೊಂದೆಡೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾತರದಿಂದ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನದ ವೇಳೆಗೆ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ನಾಳೆ ಪರೀಕ್ಷೆ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ವೆಬ್ ಸೈಟ್ ಗಳಿಗೆ ಭೇಟಿ ನೀಡಬಹುದಾಗಿದೆ. ಹಾಗೆಯೂ ಯಾರಿಗಾದರೂ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಲು ಸಾಧ್ಯವಾಗದಿದ್ದರೆ. ಮೇ 20ರಂದು ನಿಮ್ಮ ಶಾಲೆಗಳಲ್ಲಿಯೇ ಫಲಿತಾಂಶಗಳು ಪ್ರಕಟಗೊಳ್ಳಲಿದೆ. ಹಾಗಾಗಿ ವಿದ್ಯಾರ್ಥಿಗಳು ಆತಂಕಕ್ಕೀಡಾಗಬೇಕಾದ ಅಗತ್ಯವಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್’ ಚಿತ್ರವೇ ಕಾರಣ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ. ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗಿತ್ತು. ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೇವೆ. 2016ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿಲ್ಲ ಎಂದರು. ಅಲ್ಲದೆ, ಕಾಶ್ಮೀರ ಫೈಲ್ಸ್ ಚಲನಚಿತ್ರವು ಹಿಂಸಾಚಾರವನ್ನು ಪ್ರಚೋದಿಸಿದೆ ಎಂದ ಅವರು, ಕೇಂದ್ರ ಸರ್ಕಾರ ನಮ್ಮ ಎಲ್ಲಾ ಮಸೀದಿಗಳ ಹಿಂದೆ ಬಿದ್ದಿದ್ದಾರೆ. ಕೇಂದ್ರ ಸರ್ಕಾರವು ನೈಜ ವಿಷಯಗಳಿಂದ ವಿಚಲಿತರಾಗಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಈಗ ಜ್ಞಾನವಾಪಿ ಮಸೀದಿಯ ಹಿಂದೆ ಇದ್ದಾರೆ ಎಂದು ಹೇಳಿದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೊರಟಗೆರೆ: ಕೊರಟಗೆರೆಯಿಂದ ಮಲ್ಲೇಶ್ವರಕ್ಕೆ ಹೋಗುವ ರಸ್ತೆ ಮಧ್ಯದಲ್ಲಿ ಸೇತುವೆ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು. ರಸ್ತೆಗಳಿಗೆ ಮಣ್ಣನ್ನು ಹಾಕುತ್ತೇವೆ ಎಂದು ಟಿಪ್ಪರ್ ಗಟ್ಟಲೆ ಮಣ್ಣನ್ನು ಅಗೆದು ಹೊರ ಸಾಗಿಸುತ್ತಿರುವ ಘಟನೆ ನಡೆದಿದ್ದು, ಇದು ಸ್ಥಳೀಯ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ ಅಥವಾ ಕಂಡರೂ ಕಾಣದಂತೆ ಗಾಢನಿದ್ರೆಯಲ್ಲಿ ಮಲಗಿದ್ದಾರೆಯೇ ಎನ್ನುವ ಪ್ರಶ್ನೆಗಳು ಕೇಳಿಬಂದಿವೆ. ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಬಜನಹಳ್ಳಿ ಹಾಗೂ ಕ್ಯಾಮೇನಹಳ್ಳಿ ಹೋಗುವ ರಸ್ತೆ ಪಕ್ಕದಲ್ಲಿರುವ ದೊಡ್ಡ ದೊಡ್ಡ ಬೆಟ್ಟಗಳೇನ್ನೆ ಕರಗಿಸುತ್ತಿರುವ ಗುತ್ತಿಗೆದಾರರು, ದೊಡ್ಡ ದೊಡ್ಡ ಜೆಸಿಬಿ ಹಿಟಾಚಿಗಳನ್ನು ತಂದು ದೊಡ್ಡ ಬೆಟ್ಟಗಳನ್ನೇ ಕರಗಿಸಿ ಭೂತಾಯಿಯ ಒಡಲಿಗೆ ಕೊಡಲಿ ಹಾಕುತ್ತಿದ್ದಾರೆ. ಇಂತಹ ದೊಡ್ಡ ದೊಡ್ಡ ಗುತ್ತಿಗೆದಾರರ ಕಂಪನಿಗಳನ್ನು ಕೂಡಲೇ ರದ್ದು ಮಾಡಬೇಕು. ಇಷ್ಟು ದೊಡ್ಡ ಪ್ರಮಾಣದಲ್ಲಿ ಮಣ್ಣು ಅಗೆದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದರ ಬಗ್ಗೆ ಮಣ್ಣನ್ನು ಅಗೆಯುತ್ತಿದ್ದ ವ್ಯಕ್ತಿಯನ್ನು ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ನಮ್ಮ ಗುತ್ತಿಗೆದಾರರ ಬಳಿ ಕೇಳಿ ಎಂದು ಹೇಳುತ್ತಾರೆ. ಅವರಿಗೆ ಕರೆ ಮಾಡಿ ಕೇಳಿದಾಗ ಇದಕ್ಕೆಲ್ಲಾ ನಾವು ಪರ್ಮಿಷನ್…
ಪ್ರಸಿದ್ಧ ಅಮರನಾಥ ಯಾತ್ರೆಗೆ ಜೂನ್ ೩೦ ರಿಂದ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಕೈಗೊಳ್ಳಬೇಕಾಗಿರುವ ಭದ್ರತೆ ಬಗ್ಗೆ ಚರ್ಚೆ ನಡೆಸಲಾಯಿತು. ಇತ್ತೀಚೆಗೆ ಕಾಶ್ಮೀರ ಪಂಡಿತ ಸಮುದಾಯದ ನೌಕರ ರಾಹುಲ್ ಭಟ್ ಅವರನ್ನು ಭಯೋತ್ಪಾದಕ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಕಾಶ್ಮೀರಿ ಪಂಡಿತರು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅಮಿತ್ ಷಾ ಈ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಮ್ಮು-ಕಾಶ್ಮೀರದ ಲೆಫ್ಟಿನೆಟ್ ಗವರ್ನರ್ ಮನೋಜ್ ಸಿನ್ಹಾ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಗುಪ್ತಚರ ಇಲಾಖೆಯ ಮುಖ್ಯಸ್ಥ ಅರವಿಂದ್ ಕುಮಾರ್, ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದವು. ಹಿಂದಿನ ಸಭೆಯಲ್ಲಿ ಅಮರನಾಥ್ ದೇವಾಲಯದ ಆಡಳಿತ ಮಂಡಳಿ ಸದಸ್ಯರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಜಮ್ಮು- ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭದ್ರತಾ ಸಂಸ್ಥೆಗಳಿಗೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಚುರುಕುಗೊಳಿಸುವಂತೆ…
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಸಿಲಿನ ದಗೆಗೆ ಜನ ಹೈರಾಣಾಗಿದ್ದಾರೆ. ಹರಿಯಾಣ ಗಡಿಯ ಮಂಗೇಶ್ಕರ್ನಲ್ಲಿ ಗರಿಷ್ಠ ತಾಪಮಾನ 48.8 ಡಿಗ್ರಿ ತಲುಪಿದ್ದು ಹೊಸ ಆತಂಕಕ್ಕೆ ಕಾರಣವಾಗಿದೆ. ಬಿಸಿಗಾಳಿಯ ವಾತಾವರಣ ಹಾಗೂ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿರುವುದು ಹವಾಮಾನ ವೈಪರಿತ್ಯದ ಸಂಕೇತ ಎಂದು ಪರಿಸರವಾದಿಗಳು ಎಚ್ಚರಿಸಿದ್ದಾರೆ. ಮಳೆ ಕೊರತೆ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ. ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಬಿಸಿ ಗಾಳಿ ಹೆಚ್ಚಾಗಿ ಬೀಸುತ್ತಿದೆ. ನವದೆಹಲಿಯ ಪಶ್ಚಿಮದಲ್ಲಿ ಕಳೆದ 2 ತಿಂಗಳಿನಿಂದ ದಟ್ಟಮೋಡದವ ವಾತಾವರಣ ಸೃಷ್ಟಿಯಾದರೂ ಮರೆಯಾಗುತ್ತಿಲ್ಲ. ಮೋಡ ಮುಸುಕಿನ ಸನ್ನಿವೇಶದಲ್ಲಿ ಬಿರುಗಾಳಿ ಬೀಸುವುದು ಸಾಮಾನ್ಯವಾಗಿದೆ. ಇದರಿಂದ ಉಷ್ಣಾಂಶ ಹೆಚ್ಚಾಗುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಯಾದಗಿರಿ: ಜಿಲ್ಲೆಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಡಾ.ಆರ್.ಕೋದಂಡರಾಮ್ ಅವರ ಮಾರ್ಗದರ್ಶನದಲ್ಲಿ ಸರಳ ಸಾಮೂಹಿಕ ವಿವಾಹ ಮತ್ತು ಮಂತ್ರ ಮಾಂಗಲ್ಯ ಬುದ್ಧ ವಂದನಾ ಹಾಗೂ ಮಂಗಲಧಾರಣೆ ನೆರವೇರಿಸಲಾಯಿತು. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಜೋಡಿಗಳಿಗೆ ವಿವಾಹವನ್ನು ನೇರವೇರಿಸಲಾಯಿತು. ವಿವಾಹ ಕಾರ್ಯಕ್ರಮವನ್ನು ನಾಗಪುರದ ನಾಗಾರ್ಜುನ ಬಂತೇಜಿಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಾಜ್ಯ ಗೌರವ ಅಧ್ಯಕ್ಷರಾದ ಶಿವರುದ್ರಪ್ಪ, ರಾಜ್ಯ ಉಪಾಧ್ಯಕ್ಷರಾದ ಆನಂದ್ ಕುಮಾರ್ ಎಂ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಜೆ.ಇ., ರಾಜ್ಯ ಕಾರ್ಯದರ್ಶಿಗಳು ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ ., ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಕಾಶೀನಾಥ್ ನಾಟೇಕರ್ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಅಧ್ಯಕ್ಷರಾದ ನಾಗೇಶ್ ಮತ್ತಿತರರು ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್.,…
ಸರಗೂರು: ತಾಲ್ಲೂಕಿನ ನಾಯಕ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಹಾಗೂ ಆದಿಜಾಂಭವ ಸಮಿತಿ ಆದಿವಾಸಿ ಬುಡಕಟ್ಟು, ಗಿರಿಜನ ಪ್ರಗತಿಪರ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಪರಮ ಪೂಜ್ಯ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರ ಹೋರಾಟಕ್ಕೆ ಬೆಂಬಲ ನೀಡಲು ಕರೆ ನೀಡಲಾಯಿತು. ತಾಲ್ಲೂಕಿನ ನಾಮಧಾರಿಗೌಡನ ಕಲ್ಯಾಣ ಮಂಟಪದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿ ನಮ್ಮ ಜನಾಂಗಕ್ಕೆ ಸಂವಿಧಾನ ಬದ್ಧವಾಗಿ ಸರ್ಕಾರ ನೀಡಬೇಕಾಗಿರುವ ಪರಿಶಿಷ್ಟ ಪಂಗಡ 7.5ರಷ್ಟು ಮತ್ತು ಪರಿಶಿಷ್ಟ ಜಾತಿ 17ರಷ್ಟು ಮೀಸಲಾತಿ ಹೆಚ್ಚಳಕ್ಕಾಗಿ ಸುಮಾರು 95 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಗ್ರಹ ಧರಣಿ ಕುಳಿತಿದ್ದಾರೆ. ಆದರೆ ಈವರೆಗೆ ನ್ಯಾಯ ದೊರಕದೇ ಇರುವುದು ನೋವಿನ ಸಂಗತಿ ಎಂದರು. ಪಟ್ಟಣ ಪಂಚಾಯತ್ ಸದಸ್ಯ ಹಾಗೂ ನಾಯಕ ಸಮಾಜದ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, ಪರಮ ಪೂಜ್ಯ ಶ್ರೀ ಪ್ರಸನಾನಂದ ಸ್ವಾಮೀಜಿಗೆ ಬೆಂಬಲ ಸೂಚಿಸಿ ರಾಜ್ಯದ ಎಲ್ಲಾ ತಾಲ್ಲೂಕು…
ಕೊರಟಗೆರೆ: ಸರ್ಕಾರದಿಂದ ಶಾಲಾ ಕಾಲೇಜುಗಳ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಮಾಡಲಾಗಿದ್ದರೆ, ಇತ್ತ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿಕೆ ಮಾಡದೇ ಗೋಡಾನ್ ನಲ್ಲಿ ಕೊಳೆಯಲು ಹಾಕಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕೊರಟಗೆರೆ ತಾಲೂಕಿನ ವೈದ್ಯಾಧಿಕಾರಿ ವಿಜಯ್ ಕುಮಾರ್ ಅವರ ನಿರ್ಲಕ್ಷ್ಯದಿಂದಾಗಿ ಬಡ ಹೆಣ್ಣುಮಕ್ಕಳಿಗೆ ಸೇರಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ಯಾನಿಟರಿ ಪ್ಯಾಡ್ ಗಳು ಆಸ್ಪತ್ರೆ ವಠಾರದಲ್ಲಿರುವ ಗೋಡಾನ್ ನಲ್ಲಿ ಕೊಳೆಯುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ, ಬಡ ಹೆಣ್ಣು ಮಕ್ಕಳಿಗೆ ಈ ಕೊಡುಗೆ ನೀಡಿದೆ. ಆದರೆ, ಇದು ಫಲಾನುಭವಿಗಳಿಗೆ ದೊರಕದೇ ಈ ರೀತಿಯಾಗಿ ಗೋಡಾನ್ ನಲ್ಲಿ ಕೊಳೆಯುತ್ತಿರುವುದು ದುರದೃಷ್ಟಕರವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ತಕ್ಷಣವೇ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಪಾಳು ಬಿದ್ದಿರುವ ಸ್ಥಿತಿಯಲ್ಲಿರುವ ಗೋಡಾನ್ ನಲ್ಲಿ ಸ್ಯಾನಿಟರಿ ಪ್ಯಾಡ್ ಗಳು ಕಂಡು ಬಂದಿದ್ದು,…
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಬೇರೆ ನಗರಗಳಲ್ಲೂ ಸಹ 100 ರೂ.ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಚಂಡಮಾರುತದಿಂದ ಅಕ್ಕಪಕ್ಕದ ರಾಜ್ಯಗಳಲ್ಲಿ ಟೊಮೆಟೊ ಬೆಳೆಗೆ ಭಾರಿ ಹಾನಿಯಾಗಿದ್ದು, ಬೆಲೆ ಗಗನಕ್ಕೇರಿದೆ. ಚಂಡಮಾರುತದ ಜತೆಗೆ ಬಿರುಗಾಳಿ ಸಹಿತ ಮಳೆಯಿಂದಾಗಿ ಬೆಳೆ ಹಾನಿಯಾಗಲು ಪ್ರಮುಖ ಕಾರಣವಾಗಿದೆ. ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರಿಂದಾಗಿ ಬೆಲೆ ಗಗನಕ್ಕೇರಿದೆ.ಟೊಮೆಟೊ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB