Subscribe to Updates
Get the latest creative news from FooBar about art, design and business.
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
Author: admin
ಪಾವಗಡ: ರಾಜವಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್. ಹೊಸಕೋಟೆ ಗ್ರಾಮದ ಯುವಕ ಸಾವಿನಲ್ಲೂ ಸಹ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದು, ಈ ತ್ಯಾಗಿ ಯುವಕನ ಮನೆಗೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಕೆಲ ದಿನಗಳ ಹಿಂದೆ ಪಾವಗಡ ಪಟ್ಟಣದ ಹೊರವಲಯದಲ್ಲಿ ಆರ್. ಹೊಸಕೋಟೆ ಗ್ರಾಮದ 39 ವರ್ಷದ ಯುವಕ ಹನುಮಂತರಾಯಪ್ಪ ಅಪಘಾತಕ್ಕಿಡಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಪಡೆಯುವಾಗ ಚಿಕಿತ್ಸೆ ಫಲಕಾ ರಿಯಾಗದೆ ಸಾವನ್ನಪ್ಪಿದ್ದು, ಸಾವಿನಲ್ಲೂ ಸಹ ಪೋಷಕರು ಯುವಕನ ಮೂತ್ರಪಿಂಡ ಹಾಗೂ ಅಂಗಾಂಗಗಳನ್ನು 4 ರೋಗಿಗಳಿಗೆ ದಾನ ಮಾಡಿ, ಅಮೂಲ್ಯ ಜೀವಗಳನ್ನು ಉಳಿಸಿ ಸಾರ್ಥಕತೆ ಮೆರೆದಿದ್ದಾರೆ. ಸಾರ್ಥಕತೆ ಮೆರೆದ ಯುವಕನ ಕುಟುಂಬಕ್ಕೆ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿ ಆರ್ಥಿಕ ಸಹಾಯ ನೀಡಿ, ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಕೈ ಜೋಡಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಸದಸ್ಯರಾದ…
ಸಿರಾ: ಆರೋಗ್ಯ ಇಲಾಖೆ ತಾಲ್ಲೂಕಿನಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನಕ್ಕೆ ಸಿರಾ ತಾಲ್ಲೂಕು ಶಾಸಕ ಡಾ.ರಾಜೇಶ್ ಗೌಡ ಚಾಲನೆ ನೀಡಿದರು. ಸಿರಾ ನಗರದ ಸಪ್ತಗಿರಿ ಬಡಾವಣೆಯಲ್ಲಿ ಐದು ವರ್ಷದ ಒಳಗಿನ ಮಗುವಿಗೆ ಪೊಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮಮತ, ತಾಲೂಕು ವೈದ್ಯಾಧಿಕಾರಿಗಳು ಡಾ.ಮೋಹನ್, ಡಾ. ಡಿ.ಎಂ.ಗೌಡ,ಡಾ ರಾಮಕೃಷ್ಣ ಅರೋಗ್ಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯು ತಾಲ್ಲೂಕಿನಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಹನಿ ಹಾಕುವ ಗುರಿಯನ್ನು ಹೊಂದಿದೆ. ಕೊರೋನಾ ಮೂರನೇ ಅಲೆಯಿಂದಾಗಿ ಕಳೆದ ಜನವರಿ ತಿಂಗಳಿನಲ್ಲಿ ನಡೆಯಬೇಕಾದ ಪೊಲಿಯೋ ಅಭಿಯಾನವನ್ನು ಮುಂದೂಡಲಾಗಿತ್ತು. ಅಭಿಯಾನದಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳೂ ಲಸಿಕೆ ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆಯು ಕಾರ್ಯಕರ್ತರನ್ನು ಬಳಸಿಕೊಂಡು ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ತಾಲ್ಲೂಕಿನ ಎಲ್ಲಾ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದರು. ವರದಿ: ಎ.ಎನ್. ಪೀರ್ ,…
ಹಿರಿಯೂರು: ನಗರದ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಸುರೇಖಾಮಣಿ ಅವರ ನೇತೃತ್ವದಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಮಾಜಿ ಸಚಿವ ಡಿ. ಸುಧಾಕರ್ ನೇಮಕಾತಿ ಪತ್ರ ವಿತರಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಮತ್ತು ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾನಂದಿನಿಗೌಡ ಆದೇಶದ ಮೇರೆಗೆ ನೇಮಕಾತಿ ಪತ್ರ ವಿತರಿಸಲಾಯಿತು. ಹಿರಿಯೂರು ನಗರದ 31 ವಾರ್ಡ್ ಗಳು ಹಾಗೂ 31 ಗ್ರಾಮ ಪಂಚಾಯತಿಯ ಅಧ್ಯಕ್ಷರು , ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಗಳು ಹಾಗೂ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿ .ಸುಧಾಕರ್, ತಕ್ಷಣದಿಂದಲೇ ಈ ಆದೇಶ ಜಾರಿಯಾಗಿದ್ದು, ಪದಾಧಿಕಾರಿಗಳು ನಿಷ್ಠ ಹಾಗೂ ಪ್ರಾಮಾಣಿಕತೆಯಿಂದ ತಮಗೆ ವಹಿಸಿದ ಜವಾಬ್ದಾರಿಯನ್ನು ನಾಯಕರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಿರ್ವಹಿಸಿ ಎಂದು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್…
ಗುಬ್ಬಿ: ತಾಲ್ಲೂಕು ಕಲ್ಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮವಾದ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿಗಳಾದ ಡಾ. ದೀಪಕ್ ಗೋಲ್ಚ ರವರು, ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪಲ್ಸ್ ಪೋಲಿಯೊ ಲಸಿಕೆಯನ್ನು 5 ವರ್ಷಗಳ ಒಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಹಾಕಿಸಬೇಕು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದರು ಇದೆ ಸಂದರ್ಭದಲ್ಲಿ ಫಾರ್ಮಷಿಷ್ಟ್ ಅಧಿಕಾರಿ NH ಉಮೇಶ್ ರವರು ಮಾತನಾಡಿ, ಪಲ್ಸ್ ಪೋಲಿಯೊ ಲಸಿಕೆಯನ್ನು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಸರ್ಕಾರವು ಉಚಿತವಾಗಿ ನೀಡಲಾಗುತ್ತಿದೆ . ಎಲ್ಲರೂ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ, ಪೋಲಿಯೊ ಮುಕ್ತ ಸಮಾಜ ನಿರ್ಮಾಣ ಮಾಡಿ. ಪೋಲಿಯೊ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ ವಂದಂತಿಗಳಿಗೆ ಕಿವಿಕೊಡಬೇಡಿ ಲಸಿಕೆಯನ್ನು ಹಾಕಿಸದಿದ್ದರೆ ಬೆಳೆಯುತ್ತಿರುವ ಮಕ್ಕಳಲ್ಲಿ ಅಂಗವಿಲತೆಯಾಗುವ ಸಾಧ್ಯತೆ ಇರುತ್ತದೆ ಎಂದು ಜಾಗೃತಿ ಮೂಡಿಸಿದರು. ಇದೆ ಸಂದರ್ಭದಲ್ಲಿ ಸಮಾಜ ಸೇವಕರು, , ಶ್ರೀ ಜೈ…
ಮಧುಗಿರಿ: ತಾಲ್ಲೂಕಿನ ಐ.ಡಿ.ಹಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ರೈತನ ಮೇಲೆ ಕರಡಿ ದಾಳಿ ಮಾಡಿದ ಘಟನೆ ಶನಿವಾರ ರಾತ್ರಿ 9 ಗಂಟೆ ಸಮಯದಲ್ಲಿ ನಡೆದಿದೆ. ಮಲ್ಲೇರಂಗಪ್ಪ(57) ಕರಡಿಯ ದಾಳಿಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಇವರು ಕಡು ಬಡತನ ಹೊಂದಿದ ಕುಟುಂಬದ ರೈತರಾಗಿದ್ದು, ವ್ಯವಸಾಯದಿಂದ ಜೀವನ ನಡೆಸುತ್ತಿದ್ದಾರೆ. ಕರಡಿಯ ದಾಳಿಯಿಂದಾಗಿ ಇವರ ತಲೆಯ ಮೇಲ್ಭಾಗ ಹಾಗೂ ಕೈ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುವನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಸುತ್ತಮುತ್ತ ಹಳ್ಳಿಗಳಲ್ಲಿ ಈ ಹಿಂದೆ ಕುರಿಗಳ ಮೇಲೆ ದಾಳಿ ಮಾಡಿದ್ದು, ಹಾಗೆ ರಸ್ತೆಯಲ್ಲಿ ಹೋಗುವಾಗ ವಾಹನ ಸವಾರರಿಗೂ ಸಹ ಕಾಣಿಸಿಕೊಂಡಿದೆ ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದ್ದು ಅರಣ್ಯಾಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಜಲಾಲ್ ಭಾಷಾ ಐಡಿಹಳ್ಳಿ ಮನವಿ ಮಾಡಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಾ ತ್ಮಕ ಕಾನೂನುಗಳನ್ನು ಭಾರತ ದೇಶದ ಪ್ರತಿಯೊಬ್ಬರೂ ಗೌರವಿಸಬೇಕು. ಕಾನೂನಿಗೆ ಗೌರವ ಕೊಡದವರು ದೇಶ ಬಿಟ್ಟು ಹೊರಗಡೆ ಹೋಗ ಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅಭಿಪ್ರಾಯ ಪಟ್ಟರು. ನಗರದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಡಿ ದೇಶಕ್ಕೆ ಅನ್ವಯ ವಾಗುವಂತೆ ಏಕರೂಪ ನಾಗರಿಕ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದು, ಇದಕ್ಕೆ ಹಿಂದೂಗಳು, ಮುಸ ಲ್ಮಾನರು, ಕ್ರೈಸ್ತರು ಸೇರಿದಂತೆ ಎಲ್ಲ ಸಮುದಾಯದವರು ಸಹಕಾರ ನೀಡಬೇಕು ಎಂದು ವಿನಂತಿಸಿಕೊoಡರು. ಶಿವಮೊಗ್ಗದಲ್ಲಿ ಭಜ ರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿದ್ದು, ಅಲ್ಲಿನ ಸ್ಥಿತಿಗತಿಯ ವೀಕ್ಷಣೆಗೆ ನಮ್ಮ ನಾಲ್ಕೈದು ಜನ ಸ್ನೇಹಿತರು ಭೇಟಿ ನೀಡಿ, ಪರಿಶೀಲಿಸಿ, ಮೃತನ ಕುಟುಂ ಬಕ್ಕೆ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಇದು ಶ್ಲಾಘನೀಯ ಎಂದರು. ನಮ್ಮ ಒಂದು ತಿಂಗಳ ಗೌರವಧನವನ್ನು ಮೃತನ ಕುಟುಂಬದ ಖಾತೆಗೆ ಜಮಾ ಮಾಡುತ್ತಿದ್ದು ನಮ್ಮ ಸ್ನೇಹಿ…
ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಮದಲೂರು ಕೆರೆಯಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಜಾನುವಾರು ತೊಳೆಯಲು ಕೆರೆಗೆ ಇಳಿದಿದ್ದ ಅಣ್ಣ ತಮ್ಮ ನೀರಲ್ಲಿ ಮುಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗಂಗಾಧರ(28), ಹನುಮಂತ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಣ್ಣ ತಮ್ಮ ಇಬ್ಬರು ಜಾನುವಾರುಗಳನ್ನು ಸ್ನಾನ ಮಾಡಿಸಲೆಂದು ಮದಲೂರು ಕೆರೆ ಬಳಿಗೆ ಬಂದಿದ್ದಾರೆ. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಜಾನುವಾರಗಳನ್ನು ಸ್ನಾನ ಮಾಡಿಸುತ್ತಿದ್ದ ವೇಳೆ ತಮ್ಮ ಆಯತಪ್ಪಿ ನೀರಿಗೆ ಬಿದ್ದಿದ್ದು, ಈ ವೇಳೆ ತಮ್ಮನನ್ನು ಕಾಪಾಡಲು ಅಣ್ಣ ನೀರಿಗೆ ಜಿಗಿದ್ದಿದ್ದಾನೆ. ಈ ವೇಳೆ ಸೆಳೆಗೆ ಸಿಲುಕಿ ಇಬ್ಬರೂ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸಿರಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರಗಿಸಿದ್ದಾರೆ. ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಿತು. ಮಸ್ಕಲ್ ಗ್ರಾಮದಲ್ಲಿನ ಮಸ್ಕಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ ವೀರೇಶ್ ಹಾಗೂ ಉಪಾಧ್ಯಕ್ಷರಾದ ವೈ ನಾಗರಾಜು ಅವರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳ ವೀರೇಶ್ , ಉಪಾಧ್ಯಕ್ಷರಾದ ವೈ.ನಾಗರಾಜ್, ಆಶಾ, ಕಾರ್ಯಕರ್ತರಾದ ಶಿವಮ್ಮ, ಅಂಗನವಾಡಿ ಕಾರ್ಯಕರ್ತರಾದ ಕರಿಯಮ್ಮ, ನಳಿನ, ಪವಿತ್ರ, ವನಜಾಕ್ಷ, ವಸಂತಮ್ಮ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ- ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಶೆಟ್ಟಿಗೊಂಡನಹಳ್ಳಿ: ರಾಜ್ಯದ ವಿವಿಧೆಡೆ ಇಂದು ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಶೆಟ್ಟಿಗೊಂಡನಹಳ್ಳಿಯಲ್ಲಿ ಕೂಡ ಲಸಿಕೆಗೆ ಚಾಲನೆ ನೀಡಲಾಯಿತು. ಬೆಳಗಿನ ಜಾವ 7ಕ್ಕೆ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಶಶಿಧರ್ ಅವರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜ್ಯೋತಿ ಬೆಳಗುವುದರ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿಗಳು ಹಾಜರಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಪುಟ್ಟಸಂದ್ರ ಗ್ರಾಮದಲ್ಲಿ ಶ್ರೀ ಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಂಗಸಜ್ಜಿಕೆ ವರ್ಣ ವಸ್ತ್ರಾಲಂಕಾರ ಕೊಡಿಗೇನಹಳ್ಳಿ ನಾಗರಾಜಕೊಡಿಗೇನಹಳ್ಳಿ ನಾಗರಾಜುರವರ ಶ್ರೀಲಕ್ಷ್ಮೀನರಸಿಂಹಸ್ವಾಮಿ ಡ್ರಾಮಾ ಸೀನ್ಸ್ ಮತ್ತು ಶ್ರೀ ವಿಷ್ಣು ಸಾಯಿ ಕಲಾವಿದರ ಸಂಘ ತುಮಕೂರು ಇವರ ಕಲಾ ತಂಡದ ವತಿಯಿಂದ ಪುಟ್ಟ ಸಂಗ್ರಾಮದಲ್ಲಿ ಶ್ರೀ ಕುರುಕ್ಷೇತ್ರ ನಾಟಕವನ್ನು ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ದಿವಂಗತ ಚನ್ನಿಗಪ್ಪ ರವರ ಹಿರಿಯ ಪುತ್ರ ಅರುಣ್ ಕುಮಾರ್ , ಕೊರಟಗೆರೆ ವಿಧಾನಸಭಾ ಕ್ಷೇತ್ರವು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ರವರ ಶ್ರಮವಹಿಸಿ ಪ್ರಸ್ತುತ ಸರ್ಕಾರದಿಂದ ನೂರಾರು ಕೋಟಿ ಅನುದಾನತಂದು ಕ್ಷೇತ್ರವನ್ನು ಸಾಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಡಾ.ಜಿ ಪರಮೇಶ್ವರ್ ಅವರನ್ನು ಗೆಲ್ಲಿಸಿ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ. ಹಾಗೆಯೇ ತುಮಕೂರು ಜಿಲ್ಲೆಯ ಹೆಸರಾಂತ ರಾಜಕಾರಣಿಯಾದ ಕೆ.ಎನ್ .ರಾಜಣ್ಣ ರವರನ್ನು ಮಧುಗಿರಿ ಕ್ಷೇತ್ರದಿಂದ…