Subscribe to Updates
Get the latest creative news from FooBar about art, design and business.
- ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
- ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
- ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
- ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
- ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
- ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
- ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
Author: admin
ಹಿರಿಯೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಿ.ಸುಧಾಕರ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿದರು. ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಖಾದಿ ರಮೇಶ್ ಅವರ ನೇತೃತ್ವದಲ್ಲಿ ನೇಮಕಾತಿ ಪತ್ರವನ್ನು ನೀಡಲಾಯಿತು. ಕಾಂಗ್ರೆಸ್ ಪಕ್ಷದ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಪಕ್ಷದ ಸ್ಥಳೀಯ ನಾಯಕರುಗಳಿಗೆ ನೀಡಿರುವಂತಹ ಜವಾಬ್ದಾರಿ ಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಇದೇ ವೇಳೆ ಅವರು ಆಶಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ ಪಿ ಸಿ ಸಿ ಕಾರ್ಮಿಕ ವಿಭಾಗದ ಸುಜಾತ , ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯದರ್ಶಿ ಜ್ಯೋತಿಲಕ್ಷ್ಮಿ, ಕಾರ್ಮಿಕ ವಿಭಾಗದ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ, ಕಲ್ಲಹಟ್ಟಿ ಹರೀಶ್ , ಗೋಪಾಲಪುರ ಗಿರೀಶ್, ಚಿದಾನಂದ ಸ್ವಾಮಿ, ಜ್ಞಾನೇಶ್, ಎಸ್.ತಿಮ್ಮಯ್ಯ, ಶಶಿಕಲಾ ಸುರೇಶ್ ಹಾಗೂ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು, …
ಮಧುಗಿರಿ: ತಾಲೂಕಿನ ಐ.ಡಿ. ಹಳ್ಳಿ ಹೋಬಳಿಯ ಹೂವಿನಹಳ್ಳಿ ಗ್ರಾಮದ ವಸಂತರಾಜ್ ಅವರು ಸೇನೆಯಲ್ಲಿ ಸುಬೇದಾರ್ ಹಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಅಪಘಾತದಲ್ಲಿ ನಿಧನರಾಗಿದ್ದಾರೆ. ತಾಯಿ ನಾಡಿಗೆ 25 ವರ್ಷಗಳ ಸೇವೆ ಸಲ್ಲಿಸಿರುವ ಇವರು ಇನ್ನೂ ಎರಡು ವರ್ಷ ಸೇವೆಯನ್ನು ಸಲ್ಲಿಸಬೇಕಿತ್ತು. ಆದರೆ ಧಾರವಾಡ ಹೈವೆಯಲ್ಲಿ ಶುಕ್ರವಾರ ಲಾರಿ ಮತ್ತು ಕಾರು ಅಪಘಾತದಲ್ಲಿ ವೀರ ಮರಣವನ್ನು ಹೊಂದಿದ್ದಾರೆ. ಅವರ ಅಂತ್ಯ ಸಂಸ್ಕಾರ ಮೃತರ ಗ್ರಾಮವಾದ ಹೂವಿನಹಳ್ಳಿಯಲ್ಲಿ ನಡೆಯಿತು. ಇನ್ನೂ ಅಗಲಿದ ವೀರಯೋಧ ವಸಂತರಾಜ್ ಅವರ ಅಂತಿಮ ದರ್ಶನ ಪಡೆದ ವೀರಭದ್ರಯ್ಯ ಎಂ.ವಿ., ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ 4 ಲಕ್ಷ ರೂ. ಮೌಲ್ಯದ ಮದ್ಯವನ್ನು ನ್ಯಾಯಾಲಯದ ಆದೇಶದ , ಮೇರೆಗೆ ನಾಶಪಡಿಸಲಾಯಿತು. ಮಧುಗಿರಿ ಪ್ರಭಾರ ತಹಸೀಲ್ದಾರ್ ಕಮಲಮ್ಮ, ಸಿರಾ ಡಿಪೋ ಮ್ಯಾನೇಜರ್ ವೀರಾರೆಡ್ಡಿ, ಅಬಕಾರಿ ಅಧೀಕ್ಷಕರಾದ ಸುರೇಶ ಆರ್. ಮತ್ತು ಅಬಕಾರಿ ನಿರೀಕ್ಷಕರಾದ ರಾಮ್ ಮೂರ್ತಿ ಎಸ್ ಇವರ ನೇತೃತ್ವದಲ್ಲಿ ಅಕ್ರಮ ಮದ್ಯವನ್ನು ನಾಶಪಡಿಸಲಾಯಿತು. ಒಟ್ಟು 220 ಮೊಕದ್ದಮೆಗಳಲ್ಲಿ ಅಬಕಾರಿ ಇಲಾಖೆಯು ಮದ್ಯ, ಬಿಯರ್, ಸೇಂದಿಯನ್ನು ವಶಪಡಿಸಿಕೊಂಡಿದ್ದರು. 824.510 ಲೀಟರ್ ಮಧ್ಯ, 42.940 ಲೀಟರ್ ಬಿಯರ್ ನ್ನು ವಶಪಡಿಸಿಕೊಳ್ಳಲಾಗಿತ್ತು. ಇದನ್ನು ಪುರಸಭಾ ಇಲಾಖೆಯ ಘನ ತಾಜ್ಯ ವಿಲೇವಾರಿ ಘಟಕದಲ್ಲಿ ನಾಶಪಡಿಸಲಾಗಿದೆ. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ನಗರದ ಸದಾಶಿವನಗರ ನಾಗಾರ್ಜುನ ಕಾಂಪ್ಲೆಕ್ಸ್ ಬಳಿ ಜನನಿಬಿಡ ಪ್ರದೇಶದಲ್ಲಿ ಫ್ಯೂಸ್ ಕಟೌಟರ್ ( Fuse cutouter)ವೊಂದು ಜನರ ಪ್ರಾಣ ಬಲಿಗಾಗಿ ಕಾಯುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯತನದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಲಂಚಮುಕ್ತ ವೇದಿಕೆಯ ವಾಟ್ಸಾಪ್ ಗ್ರೂಪ್ ನಲ್ಲಿ ಈ ವಿಚಾರ ಚರ್ಚೆಯಾದ ವೇಳೆ ಇದೇ ಗ್ರೂಪ್ ನಲ್ಲಿದ್ದ ತುಮಕೂರು ಕಾರ್ಯನಿರ್ವಾಹಕ ಅಭಿಯಂತರರು ತಕ್ಷಣವೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ನೆಲದಿಂದ ಕೇವಲ 3 ಅಡಿ ಎತ್ತರದಲ್ಲಿ ಫ್ಯೂಸ್ ಕಟೌಟರ್ ಇದ್ದು, ಯಾರಾದರೂ ತಪ್ಪಿ ಸ್ಪರ್ಶಿಸಿದರೆ, ಪ್ರಾಣ ಹಾನಿಯಾಗುವ ಸಾಧ್ಯತೆಗಳಿವೆ. ಇಷ್ಟೊಂದು ಅವೈಜ್ಞಾನಿಕವಾಗಿ ಇದನ್ನು ಹೇಗೆ ನಿರ್ಮಾಣ ಮಾಡಿದರು ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಯಾರದ್ದಾದರೂ ಪ್ರಾಣ ಹಾನಿಯಾದ ಬಳಿಕವೇ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುವುದೇ? ಅದಕ್ಕಿಂತ ಮೊದಲು ಸಮಸ್ಯೆಯನ್ನು ಗಮನಕ್ಕೆ ತಂದರೆ ಎಚ್ಚೆತ್ತುಕೊಳ್ಳುದಿಲ್ಲವೇ ಎಂದು ಗ್ರೂಪ್ ನಲ್ಲಿ ಪ್ರಶ್ನಿಸಲಾಗಿತ್ತು. ಯಾವ ವೇಳೆಯಲ್ಲಾದರು ಜೀವಕ್ಕೆ ಹಾನಿ ಉಂಟು ಮಾಡಬಹುದಾದ ಈ ಪರಿವರ್ತಕವನ್ನು ಬದಲಿಸುವಂತೆ ಗ್ರೂಪ್ ನಲ್ಲಿ ಲಂಚಮುಕ್ತ ಕ.ನಿ.ವೇ.ಯ ಹಂದ್ರಾಳ್ ನಾಗಭೂಷಣ್ ಮನವಿ ಮಾಡಿಕೊಂಡಿದ್ದರು.…
ಗದಗ: ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆಯಾಗಿದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿರುವ ಪ್ರಸಂಗ ಗದಗನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ವಸಿತಿ ನಿಲಯದ ವಿದ್ಯಾರ್ಥಿಗಳಿಗೆ ಶ್ಯಾವಿಗೆ ಪಾಯಸದ ಅಡುಗೆ ಮಾಡಿದ್ದಾರೆ. ಪಾಯಸ ಊಟ ಮಾಡುವಾಗ ಅದರಲ್ಲಿ ಹುಳುಗಳನ್ನು ಕಂಡು ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಊಟವಿಲ್ಲದೆ ರಾತ್ರಿ 12 ಗಂಟೆಯವರೆಗೆ ಪರದಾಡಿದ್ದಾರೆ. ರಾತ್ರಿ 12ಗಂಟೆವರೆಗೆ ಹಸಿವಿನಿಂದ ಬಳಲಿದ ವಿದ್ಯಾರ್ಥಿಗಳು ರಾತ್ರೋರಾತ್ರಿ ವಸತಿ ನಿಲಯದ ವಾರ್ಡನ್ ಬಿ ಎಸ್ ಗೂಡಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ನಂತರ ವಸತಿ ಶಾಲೆಯ ಸಿಬ್ಬಂದಿ ಬೇರೆ ಅಡುಗೆ ಮಾಡಿ, ಹಸಿದ ಮಕ್ಕಳಿಗೆ ಬಡಿಸಿದ್ದಾರೆ. ಅವ್ಯವಸ್ಥೆ ಸರಿ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಮನವಿ ಮಾಡಿಕೊಂಡಿದ್ದಾರೆ. ವರದಿ ಆಂಟೋನಿ ಬೇಗೂರು
ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ನೀಡವಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ತೊಂಡಗೆರೆ ಗ್ರಾಮದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಗುಡಿಸಲಲ್ಲಿ ವಾಸ ಮಾಡುತ್ತಿದ್ದ ನಿರ್ಗತಿಕ ಕುಟುಂಬಕ್ಕೆ ಯಾವುದೇ ನಿವೇಶನ ಮತ್ತು ಸೂರು ಇಲ್ಲದೆ ಸರ್ಕಾರದಿಂದ ಯಾವುದೇ ಸೌಲಭ್ಯ ವಿಲ್ಲದೆ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿತ್ತು. ಈ ಕುಟುಂಬದ ಪರವಾಗಿ ಕಳೆದ 2014 ರಿಂದ ಸತತ ಎಂಟು ವರ್ಷಗಳಿಂದ ‘ಗುಡಿಸಲು ಮುಕ್ತ’ ಅಭಿಯಾನದಡಿ ಸಾಹಿತಿ ಮತ್ತು ಹೋರಾಟಗಾರರಾದ “ರವಿ ತೊಂಡಗೆರೆ” ಅವರು ಹೋರಾಟ ಮಾಡುತ್ತಿದ್ದಾರೆ. ಈ ವಿಚಾರ ರಾಜ್ಯಮಟ್ಟದ ಸುದ್ದಿವಾಹಿನಿಗಳಲ್ಲಿಯೂ ಪ್ರಸಾರವಾಗಿ ರಾಜ್ಯ ಸರ್ಕಾರ ಗಮನ ಸೆಳೆದಿತ್ತು. ಇದಾದ ಬಳಿಕ ಸ್ಥಳಕ್ಕೆ ಜಿಲ್ಲಾಡಳಿತ ತಾಲ್ಲೂಕು ಆಡಳಿತ ಪಂಚಾಯ್ತಿ ಆಡಳಿತ ಅಧಿಕಾರಿಗಳೊಂದಿಗೆ ಆಗಮಿಸಿದ ತುಮಕೂರು ಗ್ರಾಮಾಂತರದ ಶಾಸಕ ಡಿ.ಸಿ.ಗೌರಿಶಂಕರ್ ಅವರು ಸ್ಥಳಕ್ಕೆ ಆಗಮಿಸಿ ನಿರ್ಗತಿಕರಿಗೆ ೨೪ ಗಂಟೆ ಒಳಗಾಗಿ ವಸತಿ ಮತ್ತು ನಿವೇಶನ ಮಂಜೂರು ಮೂಡುವಂತೆ ಆದೇಶ ಮಾಡಿದ್ದರು. ಹಾಗೂ ವಸತಿ ಸಚಿವರಾಗಿದ್ದ ಸೊಮ್ಮಣ್ಣನವರ ಆದೇಶವೂ ಕೂಡ ಆಗಿತ್ತು. ಇಷ್ಟಾಗಿಯೂ ಇಲ್ಲಿವರೆಗೂ ನಿರ್ಗತಿಕರಿಗೆ ನಿವೇಶನದ ಹಕ್ಕು…
ಪಾವಗಡ: ಕ್ರೀಡೆ ಎಂಬುದು ಮನುಷ್ಯನ ನಡುವೆ ಬಾಂಧವ್ಯ ಬೆಳೆಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಲಿ ಎಂದು ಸಮಾಜ ಸೇವಕ ನಾಗೇಂದ್ರ ಕುಮಾರ್ ತಿಳಿಸಿದರು. ತಾಲ್ಲೂಕಿನ ಸಿ.ಕೆ.ಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಕ್ರೀಡಾಂಗಣದಲ್ಲಿ ಲಯನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಎರಡು ವರ್ಷದಿಂದ ಕೋವಿಡ್ 19 ಕಾರಣದಿಂದ ಕ್ರೀಡೆಗೆ ತೆರೆಬಿದ್ದಿದ್ದು, ಈಗ ಚಾಲನೆಯಾಗಿದೆ ಹರಿಹರಪುರದ ಮೈದಾನದಲ್ಲಿ ಆಯೋಜಿಸಿದ್ದ ಲಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರರು ಮತ್ತು ಗ್ರಾಮಸ್ಥರು ಉತ್ತಮ ಸಹಕಾರ ನೀಡಿ, ರಾಜ್ಯಮಟ್ಟದಲ್ಲಿ ವಿಜೃಂಭಿಸಬೇಕು ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಲಕ್ಷ್ಮಮ್ಮ ಈರಣ್ಣ, ಗ್ರಾ.ಪಂ. ಸದಸ್ಯರಾದ ದೊಡ್ಡಣ್ಣ, ಗಿರೀಶ್, ವಸಂತ್ , ಗುತ್ತಿಗೆದಾರ ವೆಂಕಟೇಶ್, ಡಾಕ್ಟರ್ ರಮೇಶ್, ಕಲಾವಿದ ಹನುಮಂತ ರಾಯಪ್ಪ, ಬೆರಳಚ್ಚುಗಾರ ರಂಗನಾಥ್, ಓಂಕಾರ ಆರ್ಟ್ಸ್ ನಾಗರಾಜು, ತಿಪ್ಪೇಶ್, ರಾಮೇಗೌಡ, ನಲಿಗಾನಹಳ್ಳಿ ಮಂಜುನಾಥ್ ,ಸೋಲಾರ್ ಅಶ್ವತ್, ಗುತ್ತಿಗೆದಾರ ಹನುಮಂತರಾಯ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕ್ರೀಡಾ ಪ್ರೇಮಿಗಳೆಲ್ಲ…
ಪಾವಗಡ: ನಿಡಗಲ್ ಹೋಬಳಿ ದೇವರಾಯನ ಕೊಪ್ಪ ಗ್ರಾಮದ ಮುಸ್ಲಿಂ ಜನಾಂಗಕ್ಕೆ ಸೇರಿದ ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಅಸುನೀಗಿರುವ ಘಟನೆ ನಡೆದಿದೆ. ತಾಲೂಕಿನ ದೇವರಾಯನರಪ್ಪ ಗ್ರಾಮದ ಭಾಷಾ ಸಾಬ್ ಎಂಬುವರ ಮೂವರು ಮಕ್ಕಳು ಮೇಕೆ ಮೇಯಿಸಲು ಹೋಗಿದ್ದ ವೇಳೆ ತಮ್ಮ ಪಕ್ಕದ ಗ್ರಾಮವಾದ ಎಸ್.ಆರ್.ಪಾಳ್ಯ ಕೆರೆಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಶರೀಫ (4ನೇ ತರಗತಿ), ಚಾಂದಬಿ (8ನೇ ತರಗತಿ), ಭಾನವಿ (7ನೇ ತರಗತಿ) ಮೃತರು ಎಂದು ತಿಳಿದು ಬಂದಿದೆ. ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಅರಸೀಕೆರೆ ಪೊಲೀಸ್ ಠಾಣೆ ಸಿಬ್ಬಂದಿ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಅಸುನೀಗಿದ ವಿದ್ಯಾರ್ಥಿಗಳ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ವಾಲ್ಮೀಕಿ ಪೀಠಾಧ್ಯಕ್ಷ ಶ್ರೀ ಸಂಜೆ ಕುಮಾರ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ವರದಿ: ರಾಮಪ್ಪ ಸಿ.ಕೆ.ಪುರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಜ.26ರಂದು ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆವನ್ನು ಕಾರ್ಯಕ್ರಮದ ವೇದಿಕೆಯಿಂದ ತೆಗೆಸಿ ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ರಾಯಚೂರು ಜಿಲ್ಲಾನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು . ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಬಿ.ಹೆಚ್.ರಸ್ತೆ ಮೂಲಕ ಸಾಗಿದ ಪ್ರತಿಭಟನಾಕಾರರು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿಮುಂದೆ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರ ಹಾಗೂ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಿದರು. ತಹಸೀಲ್ದಾರ್ ಚಂದ್ರಶೇಖರಯ್ಯ ಮನವಿಪತ್ರ ಸ್ವೀಕರಿಸಿದರು ಪ್ರತಿಭಟನಾ ನಿರತರನ್ನ ಉದೇಶಿಸಿ ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಕುಪ್ಪಾಳು ರಂಗಸ್ವಾಮಿ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ…
ಬೆಂಗಳೂರು : ಕೊರೊನಾ ಸೋಂಕು ಮೂರನೇ ಅಲೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ 50 : 50 ರೂಲ್ಸ್ ಜಾರಿ ಮಾಡಿತ್ತು. ಈ ರೂಲ್ಸ್ ಸಡಿಲಿಕೆ ಮಾಡುವಂತೆ ಹೋಟೆಲ್ ಉದ್ಯಮ, ಮದ್ಯ ಮಾರಾಟ ಉದ್ಯಮ, ಸಿನಿಮಾ, ನಾಟಕ ರಂಗಗಳಿಂದ ಬೇಡಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್ ಸಭೆಯಲ್ಲಿ ತೆಗೆದುಕೊಳ್ಳಲಾಗದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. ಯಾವುದಕ್ಕೆ ನಿರ್ಬಂಧ ಇಲ್ಲ: ಜನವರಿ 31 ರಿಂದ ನೈಟ್ ಕರ್ಫ್ಯೂ ಇರಲ್ಲ ಹೋಟೆಲ್, ರೆಸ್ಟೋರೆಂಟ್ ಗಳಿಗೆ 100% ಸೀಟಿಂಗ್ ಬೆಂಗಳೂರಿನಲ್ಲಿ 1 ರಿಂದ 9 ಶಾಲೆಗಳು ಓಪನ್ ದೇವಾಲಗಳಲ್ಲಿ ಸೇವೆಗಳಿಗೆ ಅವಕಾಶ ಕಚೇರಿಗಳಲ್ಲಿ ಶೇ.100 ಸಿಬ್ಬಂದಿಗೆ ಅವಕಾಶ…