Author: admin

ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ  ಸಾಮಾನ್ಯ ಸೇವಾ ಕೇಂದ್ರವನ್ನು ತುರುವೇಕೆರೆ ಗ್ರಾಮಾಂತರ ಯೋಜನಾಧಿಕಾರಿ ಅನಿತಾ ಶೆಟ್ಟಿ, ಮೇಲ್ವಿಚಾರಕರಾದ ಅಕ್ಷತಾ ರವರ ನೇತೃತ್ವದಲ್ಲಿ, ಹೋಬಳಿಯ ಪ್ರಮುಖ ಮುಖಂಡರ ಜೊತೆಗೆ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕಉದ್ಘಾಟಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಅನಿತಾ ಶೆಟ್ಟಿ, ಡಾ.ವೀರೇಂದ್ರ ಹೆಗಡೆಯವರ ಆಶಯದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗಾಗಲೇ ಹಲವಾರು ಸೇವೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ನೀಡುತಿದ್ದು, ತಾಲೂಕಿನಲ್ಲಿ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಮಾಡಿ ಹಲವಾರು ಗುಂಪುಗಳನ್ನು ಮಾಡಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಕೊಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದೆ. ಈಗ ಅದರ ಸಾಲಿಗೆ ಸಾಮಾನ್ಯ ಸೇವಾ ಕೇಂದ್ರವನ್ನು ನೀಡುವುದರ ಮೂಲಕ ಸರ್ಕಾರದ ಹಲವಾರು ಯೋಜನೆಗಳ ಸೇವೆಗಳನ್ನು ಸ್ಥಳೀಯ ಮಟ್ಟದಲ್ಲಿ ನೀಡಿ ಗ್ರಾಮೀಣ ಭಾಗದ ಜನರು ಕಛೇರಿ ಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಸಂಸ್ಥೆಯು ಸಮಾಜಸೇವೆ ಕಾರ್ಯಕ್ಕೆ…

Read More

ತಿಪಟೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವುಳ್ಳ ಫೋಟೋವನ್ನು ತೆಗೆದು ಅವಮಾನಿಸಿದ, ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವಜಾ ಮಾಡುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು. 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ರವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ  ಫೋಟೋವನ್ನು ತೆಗೆದು ಅವಮಾನಿಸಿದ ನ್ಯಾಯಾಧೀಶರ ನಡೆಯನ್ನು ಖಂಡಿಸಿ, ನ್ಯಾಯಾಧೀಶ ಸ್ಥಾನದಿಂದ ಅವರನ್ನು ವಜಾ ಮಾಡಿ, ರಾಷ್ಟ್ರದ್ರೋಹ  ಪ್ರಕರಣದಡಿಯಲ್ಲಿ ಕೇಸು ದಾಖಲಿಸಿ, ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಿಪಟೂರು ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್. ಪರಮೇಶ್ವರಯ್ಯ ರವರ  ಮುಖಾಂತರ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು..    ಎಪಿಎಂಸಿ ಸದಸ್ಯ ಬಜಗೂರು ಮಂಜುನಾಥ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ. ಬಸವರಾಜ್ ಮತ್ತು ಕರವೇ ನಗರ ಅಧ್ಯಕ್ಷ ವೈ.ವಿ.ವೆಂಕಟೇಶ್ ಮಾತನಾಡಿದರು.  ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ಕಾರ್ಯದರ್ಶಿ ಹಿಂಡಿಸ್ಕೆರೆ ರವಿಕುಮಾರ್, ನಗರ…

Read More

ತಿಪಟೂರು: ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಕರಡಾಳು ಸಂತೆ ಮೈದಾನದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಿಪಟೂರು ವಕೀಲರ ಗೆಳೆಯರ ಬಳಗದ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂಗಳು ಮತ್ತು ಸಾಕ್ಸ್,ಟೈ- ಬೆಲ್ಟ್ ಹಾಗೂ  ಗುರುತಿನ ಪತ್ರಗಳನ್ನು ವಿತರಿಸಿದರು. ಬಳಿಕ ಮಾತನಾಡಿದ  ಹಿರಿಯ ಶ್ರೇಣಿ ನ್ಯಾಯಾಧೀಶರಾದ ನೂರುನ್ನೀಸ, ಪ್ರತಿ ಶಾಲೆಯಲ್ಲೂ ಟಿ.ಕೆ. ಪಟ್ಟಾಭಿರಾಮು ಮತ್ತು ಛಾಯರವರಂತಹ ಶಿಕ್ಷಕರು ಇದ್ದರೆ, ಗುಣಾತ್ಮಕ ಶಿಕ್ಷಣ ಹಾಗೂ ಎಲ್ಲ ಮಕ್ಕಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯ ಎಂದು ಪ್ರಶಂಶಿಸಿ, ಅಭಿನಂದಿಸಿದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ ಎಂದು ಇದೇ ವೇಳೆ ಕರೆ ನೀಡಿದರು. ಸಿವಿಲ್ ನ್ಯಾಯಾಧೀಶರಾದ ಚಂದನ ಜೆ. ಮಾತನಾಡಿ, ಹೆಣ್ಣು ಮಕ್ಕಳನ್ನು ಯಾವುದೇ ಕಾರಣಕ್ಕೂ ಮಧ್ಯದಲ್ಲಿ ಶಾಲೆ ಬಿಡಿಸದೆ. ಉತ್ತಮ ಶಿಕ್ಷಣ ನೀಡಿದರೆ, ಪ್ರತಿ ಗ್ರಾಮವು ನಂದನವನ ವಾಗುತ್ತದೆ ಎಂದು ತಿಳಿಸಿದರು.  ವಕೀಲರ ಸಂಘದ ಅಧ್ಯಕ್ಷ ಕೆ. ಆರ್. ದಯಾನಂದ್, ಕಾರ್ಯದರ್ಶಿ…

Read More

ತುಮಕೂರು: ಚಿಕ್ಕನಾಯಕನಹಳ್ಳಿಯ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು ಅತ್ಯಂತ ಹಿಂದುಳಿದ ವರ್ಗಗಳಾದ ಅಲೆಮಾರಿ ಜನಾಂಗ ಸುಡುಗಾಡು ಸಿದ್ದರು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ನಮಗೆ ಕೊಡುವಂತೆ ಮತ್ತು  ಪರಿಹಾರಗಳನ್ನು ಒದಗಿಸುವಂತೆ ತಹಸೀಲ್ದಾರ್ ಕಚೇರಿಗೆ ತೆರಳಿ  ಕೇಳಲು ಹೋದಾಗ ನಿಂದಿಸಿ ಕಚೇರಿಯಿಂದ ಹೊರದಬ್ಬಿರುವ ಘಟನೆ ಇದೀಗ ತೀವ್ರತೆ ಪಡೆದುಕೊಂಡಿದೆ. ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು, ನ್ಯಾಯ ಕೇಳಲು ಬಂದಿದ್ದ ಅಮಾಯಕ, ಅನಕ್ಷರಸ್ಥ ಹಿಂದುಳಿದ ವರ್ಗದ ಜನರನ್ನು ಪೋಲಿಸ್ ಕರೆಸಿ ಕಚೇರಿಯಿಂದ ಹೊರ ನೂಕಲು ಪ್ರಯತ್ನಿಸಿ, ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಲ್ಲದೇ ರೌಡಿಶೀಟರ್ ಹಾಕುವುದಾಗಿ, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಗಳನ್ನು  ಬ್ಲಾಕ್ ಮಾಡಿ ಹೇಳಿ ಗಡಿಪಾರು ಮಾಡುವ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ. ತಹಸೀಲ್ದಾರ್ ವರ್ತನೆಯಿಂದ ನೊಂದ  ವ್ಯಕ್ತಿಗಳು ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ  ಅವರನ್ನು ಸಂಪರ್ಕಿಸಿದ್ದು, ಅವರ ನೇತೃತ್ವದಲ್ಲಿ ತೇಜಸ್ವಿ ಬಿ. ಅವರ ಮೇಲೆ ಅಟ್ರಾಸಿಟಿ ಕೇಸು ದಾಖಲಿಸಲು ಪೊಲೀಸ್ ಠಾಣೆ, ಡಿವೈಎಸ್ಪಿ ಕಚೇರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ, ತುಮಕೂರು ಪೊಲೀಸ್ ವರಿಷ್ಠಾಧಿಕಾರಿ…

Read More

ಹೆಚ್.ಡಿ.ಕೋಟೆ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರವನ್ನು ತೆರವು ಮಾಡುವ ಮೂಲಕ ಉದ್ಧಟತನದ ವರ್ತನೆ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದೇಶದ್ರೋಹದ ದೂರು ದಾಖಲಿಸುವಂತೆ ಒತ್ತಾಯಿಸಿ, ಪ್ರತಿಭಟನೆ ನಡೆಸಲಾಯಿತು. ತಾಲ್ಲೂಕಿನ ಅಂಬೇಡ್ಕರ್ ಭವನದಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆ ನಡೆಸಿ, ಮಲ್ಲಿಕಾರ್ಜುನ ಗೌಡ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಚಾ.ಶಿವಕುಮಾರ್, ರಾಯಚೂರು ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್ ಭಾವ ಚಿತ್ರ ಇದ್ದರೆ, ನಾನು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಉದ್ಧಟತನ ತೋರಿದ್ದಾರೆ. ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಸಣ್ಣಕುಮಾರ್ ಮಾತನಾಡಿ,  ಜಾತಿಯ ಬೇಧ ಭಾವದ ಮನಸ್ಸಿನಲ್ಲಿ ಕೆಲಸ ಮಾಡುವವರು ನ್ಯಾಯಾಧೀಶರ ಹುದ್ದೆಗೆ ಅರ್ಹರಲ್ಲ, ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು, ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದೊಡ್ಡಸಿದ್ದು ಹಾದನೂರು,  ಸೋಮಣ್ಣ(ಚನ್ನ), ಕೂಡಿಗಿ ಗೊವಿಂದರಾಜು, ಕುಮಾರ್, ರಾಜಪ್ಪ, ಶಿವಯ್ಯ ಕೃಷ್ಣ…

Read More

Covaxin ಮತ್ತು Covishield ಈಗ ಸಾಮಾನ್ಯ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಅವರು ಗುರುವಾರ ಈ ಎರಡು ಕೋವಿಡ್ ಲಸಿಕೆಗಳಿಗೆ ಷರತ್ತುಬದ್ಧ ಮಾರುಕಟ್ಟೆ ಅನುಮೋದನೆ ನೀಡಿದ್ದಾರೆ. Covaxin, Covishield to be available in hospitals, clinics; apex body gives nod ಕೆಲವು ಷರತ್ತುಗಳಿಗೆ ಒಳಪಟ್ಟು ವಯಸ್ಕ ಜನಸಂಖ್ಯೆಗೆ ಈ ಕೋವಿಡ್-19 ಲಸಿಕೆಗಳಿಗೆ ನಿಯಮಿತ ಮಾರುಕಟ್ಟೆ ಅನುಮೋದನೆಯನ್ನು ನೀಡುವಂತೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ವಿಷಯ ತಜ್ಞರ ಸಮಿತಿಯು ಈ ಹಿಂದೆ ಶಿಫಾರಸು ಮಾಡಿತ್ತು. ಮಾರುಕಟ್ಟೆಯ ಅನುಮೋದನೆ ನಂತರ ಲಸಿಕೆಗಳು ಮೆಡಿಕಲ್ ಶಾಪ್‌ಗಳಲ್ಲಿ ಲಭ್ಯವಿರುವುದಿಲ್ಲ. ಕೇವಲ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಂದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಖರೀದಿಸಬೇಕಾಗುತ್ತದೆ. ಪ್ರತಿ ಆರು ತಿಂಗಳಿಗೊಮ್ಮೆ DCGI ಗೆ ಲಸಿಕೆ ಡೇಟಾವನ್ನು ಸಲ್ಲಿಸಬೇಕು. CoWIN ಅಪ್ಲಿಕೇಶನ್‌ನಲ್ಲಿಯೂ ಡೇಟಾವನ್ನು ನವೀಕರಿಸಬೇಕಾಗುತ್ತದೆ.ಲಸಿಕೆಗಳ ಬೆಲೆಯನ್ನು ಪ್ರತಿ ಡೋಸ್‌ಗೆ 275 ರೂ ಗೆ ಮಿತಿಗೊಳಿಸಲು ಕೇಂದ್ರವು ಯೋಜಿಸುತ್ತಿದೆ ಎಂದು ಈ ಹಿಂದೆ ವರದಿಯಾಗಿತ್ತು. ವರದಿ: ಆಂಟೋನಿ ಬೇಗೂರು…

Read More

ಚಾಮರಾಜನಗರ : ಸೆಲ್ಫಿ ಶೋಕಿಗೆ ವಿದ್ಯಾರ್ಥಿವೊಬ್ಬ ನೀರುಪಾಲಾಗಿರುವ ಘಟನೆ ಹೊಗೆನಕಲ್ ಜಲಪಾತದಲ್ಲಿ ನಡೆದಿದೆ. 19 ವರ್ಷದ ಉಮಾಶಂಕರ್ ಮೃತ ವಿದ್ಯಾರ್ಥಿಯಾಗಿದ್ದು, ಮೈಸೂರು ಮೂಲದ ನಿವಾಸಿ ಎಂದು ತಿಳಿದುಬಂದಿದೆ. ನರ್ಸಿಂಗ್ ಓದುತ್ತಿದ್ದ ಉಮಾಶಂಕರ್ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್​ ಫಾಲ್ಸ್​ಗೆ ತೆರಳಿದ್ದರು.ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ‌. ಇದಾದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ‌. ವರದಿ: ಆಂಟೋನಿ ಬೇಗೂರು

Read More

ತಮಿಳುನಾಡಿನ ತಿರುಪ್ಪೂರ್‌ ನಲ್ಲಿ ಇಬ್ಬರು ರೈತರು ಸೇರಿದಂತೆ ಏಳು ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆಯನ್ನು ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ನಾಲ್ಕು ದಿನಗಳ ಹಿಂದೆ ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ ಹೊಲದ ಬಳಿಯಿದ್ದ ವರದರಾಜನ್ ಮತ್ತು ಮಾರನ್ ಎಂಬ ಇಬ್ಬರು ರೈತರ ಮೇಲೆ ದಾಳಿ ಮಾಡಿತ್ತು. ರೈತರನ್ನು ರಕ್ಷಿಸಲು ಯತ್ನಿಸಿದ ಇತರ ಮೂವರಿಗೆ ಗಾಯಗಳಾಗಿವೆ.ಗ್ರಾಮಸ್ಥರ ಪ್ರಕಾರ, 60 ವರ್ಷದ ವರದರಾಜನ್ ಜನವರಿ 24 ರಂದು ಮುಂಜಾನೆ ತನ್ನ ಜಮೀನಿಗೆ ಹೋದಾಗ ಚಿರತೆ ಅವನ ಮೇಲೆ ಧಾಳಿ ನಡೆಸಿ ಭುಜವನ್ನು ಕಚ್ಚಿತ್ತು. ಎಲ್ಲರೂ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿರತೆಯನ್ನ ಸೆರೆ ಹಿಡಿದು ಬೋನಿಗೆ ಹಾಕುವ ಪ್ರಯತ್ನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗೂ ಗಾಯಗಳಾಗಿವೆ. ಚಿರತೆ ಚಲನವಲನದ ಮೇಲೆ ನಿಗಾ ಇಡಲು ಅಧಿಕಾರಿಗಳು 10 ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗಿತ್ತು, ಕತ್ತಲಲ್ಲಿ ಒಂಟಿಯಾಗಿ ಓಡಾಡದಂತೆ ಜನರಿಗೆ ಮನವಿ ಮಾಡಿದ್ದರು.ಅಮ್ಮಾಪಾಳ್ಯಂ ಬಳಿ ಪ್ರಾಣಿಯನ್ನು ಪತ್ತೆಹಚ್ಚಲಾಗಿದೆ. ಚಿರತೆಯನ್ನು ಅಣ್ಣಮಲೈ ಅರಣ್ಯಕ್ಕೆ ಬಿಡಲು ಅರಣ್ಯಾಧಿಕಾರಿಗಳು…

Read More

ಗುಬ್ಬಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುಬ್ಬಿ ತಾಲ್ಲೂಕು ಕಲ್ಲೂರು ಗ್ರಾಮದಲ್ಲಿ ಇಂದು SCS ಸಾಮಾನ್ಯ ಸೇವಾ ಕೇಂದ್ರವನ್ನು ಸಮಾಜ ಸೇವಕರಾದ ಜೈ ಮಾರುತಿ ಮೆಡಿಕಲ್ ಮಾಲೀಕ ಕೆ.ಟಿ.ಸೋಮಶೇಖರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗಾಗಲೇ ಹಲವಾರು ಸೇವೆಗಳನ್ನು ಗ್ರಾಮೀಣ ಭಾಗಕ್ಕೆ ನೀಡುತ್ತಿರುವುದು ಪ್ರಶಂಸನಿಯವಾಗಿದೆ. ಹೀಗೆ ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಮಾಡಿ, ಹಲವಾರು ಗುಂಪುಗಳನ್ನು ಮಾಡಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಕೊಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದೆ. ಇದೀಗಸಾಮಾನ್ಯ ಸೇವಾ ಕೇಂದ್ರವನ್ನು ನೀಡುವುದರ ಮೂಲಕ ಸರ್ಕಾರದ ಹಲವಾರು ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿದ್ದಾರೆ. ಸ್ಥಳೀಯ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕ ಗ್ರಾಮಸ್ಥರು ಈ ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇದೇ ವೇಳೆ ಅವರು ಸಲಹೆ ನೀಡಿದರು ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ರೇಣುಕಾ, ಸೇವಾ ಪ್ರತಿನಿಧಿ ನೇತ್ರಾವತಿ, ಸೇವಾಕೇಂದ್ರದ ನಿರ್ವಾಕರಾದ  ರಂಜಿತ…

Read More

ಸರಗೂರು: ಬಿಜೆಪಿ ಸರ್ಕಾರ ಅನುದಾನ ನೀಡುವ ವಿಚಾರದಲ್ಲಿ ಸಾಕಷ್ಟು ತಾರತಮ್ಯ ಮಾಡಿದ್ದು, ನಮ್ಮ ಹಿಂದುಳಿದ ತಾಲ್ಲೂಕಿಗೆ ಅನುದಾನವನ್ನು ನೀಡದೆ,  ನಂಜುಂಡಪ್ಪರವರ ವರದಿಯನ್ನು ಗಾಳಿಗೆ ತೂರಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಬೇಸರ ವ್ಯಕ್ತಪಡಿಸಿದರು. ಸರಗೂರು ತಾಲ್ಲೂಕಿನ ವ್ಯಾಪ್ತಿಯ ಪಟ್ಟಣದ 11ನೇ ಮತ್ತು 5ನೇ ವಾರ್ಡಿನ ಶಾಲಾ ಕಟ್ಟಡ ನಿರ್ಮಾಣ, ಹಳಿಯೂರು, ಲಿಂಗೇನಹಳ್ಳಿ, ವಲ್ಲಹಳ್ಳಿ ರಸ್ತೆ, ಕಾಡಬೇಗೂರು ಲಂಬಾಣಿ ತಾಂಡ ಸಂಪರ್ಕ ರಸ್ತೆ, ಕೆಂಚನಹಳ್ಳಿ ರಸ್ತೆ ಅಭಿವೃದ್ಧಿ, ಕೆಂಪನಹಾಡಿ ಮತ್ತು ಗಂಡತ್ತೂರು ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ ಸುಮಾರು 5ಕೋಟಿ 87ಲಕ್ಷದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಪಂಚಾಯಿತ್ ರಾಜ್ಯ ಇಲಾಖೆಯ ಅನುಧಾನದ ಸುಮಾರು 40 ಲಕ್ಷದ ಅಭಿವೃದ್ಧಿ ಕಾಮಗಾರಿಗಳು ಮತ್ತು ಶಾಸಕರ ಅನುದಾನದ 5 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಿಂದುಳಿದ ತಾಲ್ಲೂಕಾದ ನಮ್ಮ ಕ್ಷೇತ್ರಕ್ಕೆ ಅನುದಾನದ ಹಂಚಿಕೆಯ ವಿಚಾರವಾಗಿ ಸಾಕಷ್ಟು ತಾರತಮ್ಯ ಮಾಡುತ್ತಿದೆ.  ನಮ್ಮ ಕ್ಷೇತ್ರದಲ್ಲಿ ಸುಮಾರು…

Read More