Subscribe to Updates
Get the latest creative news from FooBar about art, design and business.
- ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
- ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
- ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
- ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
- ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
- ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
- ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
Author: admin
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,51,209 ಲಕ್ಷ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,06,22,709 ಕ್ಕೆ ತಲುಪಿದೆ. ನಿನ್ನೆಗಿಂತ ಶೇ 12 ಪ್ರತಿಶತದಷ್ಟು ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 627 ಜನ ಸಾವನ್ನಪಿದ್ದಾರೆ. ಸೋಂಕಿತರ ಪ್ರಮಾಣವು 15.88ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದೆ. ದೇಶದಲ್ಲಿ ಪ್ರಸ್ತುತ 21, 05,611 ಲಕ್ಷ ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳು ಶೇ 5.18 ರಷ್ಟಿದೆ. ಕಳೆದ 24 ಗಂಟೆಯಲ್ಲಿ 3,47,443 ಜನ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣವು ಶೇ 93.6 ರಷ್ಟಿದೆ. ಸಾಪ್ತಾಹಿಕ ಧನಾತ್ಮಕ ದರವು 17.47 ಪ್ರತಿಷದಷ್ಟಿದೆ. ದೇಶದಲ್ಲಿ 164.44 ಕೊರೊನಾ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಮಧುಗಿರಿ: ಅಂಬೇಡ್ಕರ್ ಭವನದಲ್ಲಿ ಮಾದಿಗ ದಂಡೋರ ಸಂಘಟನೆ ವತಿಯಿಂದ ಸಂವಿಧಾನ ಜಾರಿ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಮಾದಿಗ ದಂಡೋರ ಸಂಘಟನೆಯ ರಾಜ್ಯ ವಕ್ತಾರರಾದ ರಾಘವೇಂದ್ರ ಸ್ವಾಮಿ ಉದ್ಗಾಟಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾದ್ಯಕ್ಷರಾದ ಡಿ.ಸಿ. ರಾಜಣ್ಣವಹಿಸಿದ್ದರು. ಸಿದ್ದಾಪುರ ರಂಗಶ್ಯಾಮಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮ ದಲ್ಲಿ ದಂಡೋರದ ದೊಡ್ಡೇರಿ ಮಹಾಲಿಂಗಯ್ಯ, ಜೀವಿಕ ಮಂಜುನಾಥ್, ದಿಲೀಪ್ ಯುಕ್ತ ಪೌಂಡೇಶನ್, ಜೀವಿಕ, ಚಿಕ್ಕಮ್ಮ ದೊಡ್ಡೇರಿ ,ಕಣಿಮಯ್ಯ , ತಿಪ್ಪೇಸ್ವಾಮಿ ಬೇಡತೂರು, ಸಣ್ಣರಾಮಣ್ಣ, ಮಾದಿಗ ದಂಡೋರ ಹೋಬಳಿ ಅಧ್ಯಕ್ಷರುಗಳಾದ ದೇವರಾಜು, ಕಿರಣ್, ರಾಮಾಂಜಿನಪ್ಪ, ಪಾಂಡುರಂಗಯ್ಯ, ಕಸಾಪುರ ರಮೇಶ್, ನೀರಕಲ್ಲು ನಾಗೇಶ್ ಬಾಬು, ಅಂಜನ್, ಐಡಿಹಳ್ಳಿ ರವಿ, ಯುವರಾಜು ಇನ್ನೂ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ನವೀಕರಣ ಕಾರ್ಯಕ್ಕೆ ಮುಂದಾದ ಆಸರೆ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತುಂಬಾ ಹಳೆಯದಾದ ಶಾಲಾ ಕಟ್ಟಡ ಸುಣ್ಣ ಬಣ್ಣ ಇಲ್ಲದೆ ಹಾಗೂ ಒಡೆದು ಹೋಗಿದ್ದ ಗಾಜುಗಳಿಂದ ಕಳೆಗುಂದಿತ್ತು. ಇದನ್ನು ಕಂಡ ಆಸರೆ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ದುಡಿಮೆಯ ಸ್ವಂತ ಹಣವನ್ನು ಕೈಲಾದಷ್ಟು ವ್ಯಯಿಸಿ ಸುಣ್ಣ ಬಣ್ಣ ಬಳಿಸಿ ಹಾಗೂ ಗಾಜುಗಳನ್ನು ಪುನರ್ ಸ್ಥಾಪಿಸಿ ಶಾಲೆಯನ್ನು ಕಂಗೊಳಿಸುವಂತೆ ಮಾಡಿದ್ದಾರೆ. ಈ ಕಾರ್ಯ ನಾಗರೀಕರ ಶ್ಲಾಘನೆಗೆ ಕಾರಣವಾಗಿದೆ. ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿಕೊಂಡು ಶಾಲೆಯ ಅಭಿವೃದ್ಧಿಗೆ ಮನಸ್ಸು ಮಾಡಿರುವುದು ಸಂತಸದ ವಿಚಾರ. ಪ್ರತಿಯೊಬ್ಬರು ತಾನು ಓದಿದ ಶಾಲೆಗೆ ಅಳಿಲು ಸೇವೆ ಮಾಡಬೇಕೆಂಬ ಮನಸ್ಸು ಮಾಡಿದರೆ ಎಲ್ಲ ಶಾಲೆಗಳು ಸುಸಜ್ಜಿತಗೊಂಡು ಮುಂದಿನ ಯುವ ಪೀಳಿಗೆಗೆ ವಿದ್ಯಾಭ್ಯಾಸ ಮಾಡಲು ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು. ಆಸರೆ…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ (ರಿ)ವತಿಯಿಂದ ಕೇಂದ್ರ ಸರಕಾರದ ಸಾಮಾನ್ಯ ಸೇವಾ ಕೇಂದ್ರ(ಸಿ.ಎಸ್.ಸಿ) ಸೆಂಟರ್ ರನ್ನು ಸಿದ್ಧರಬೆಟ್ಟದ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಸುಮಾರು 40 ವರ್ಷಗಳ ಹಿಂದೆ ಧರ್ಮಸ್ಥಳದ ಧರ್ಮಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆರವರು ರೈತಸಂಕುಲಕ್ಕೆ ಮಹಿಳೆವರ್ಗಕ್ಕೆ ಮತ್ತು ಅಂಗವಿಕಲರ ಏಳಿಗೆಗಾಗಿ ಹಾಗೂ ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಚನೆಯನ್ನು ಸ್ಥಾಪಿಸಿ ನೂರಾರು ಜನೋಪಾಕಾರಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ಈಗ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡುವುದರ ಜೊತೆಗೆ ಸುಮಾರು 700 ಸೇವೆಗಳನ್ನು ಈ ಸಿ ಎಸ್ ಸಿ ಕೇಂದ್ರದಲ್ಲಿ ಸದುಪಯೋಗವನ್ನು ಪಡೆದುಕೊಳ್ಳಲು ನೂತನವಾಗಿ ರಾಜ್ಯಾದ್ಯಂತ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸುತ್ತಿದ್ದಾರೆ ಎಂದು ತಿಳಿಸಿದರು.…
ಸರಗೂರು: ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ, ದೇಶದಿಂದ ಗಡೀಪಾರು ಮಾಡುವಂತೆ ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ ತಾಲ್ಲೂಕು ಕಚೇರಿಯಲ್ಲಿ ಮುಂಭಾಗದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಮಲ್ಲಿಕಾರ್ಜುನ ಗೌಡ ಅವರಿಗೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಲಕ್ಷಣ್ ಲಂಕೆ, ನಮ್ಮ ದೇಶಕ್ಕೆ ಸಂವಿಧಾನವನ್ನು ರಚಿಸಿ, ಜನವರಿ 26, 1950 ರಂದು ನಾವು ನಮಗಾಗಿ ಅರ್ಪಣೆ ಮಾಡಿಕೊಂಡು ದಿನದ ಅಂಗವಾಗಿ ನೆನಪಿಗಾಗಿ ಮತ್ತು ಗೌರವಕ್ಕಾಗಿ ಪ್ರತಿ ವರ್ಷ ಜನವರಿ 26 ರಂದು ಸಂವಿಧಾನ ದಿನಾಚರಣೆ ಅಚರಿಸಿಕೊಂಡು ಬರುತ್ತಿದ್ದೇವೆ. ಇಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿ ಇಡೀ ದೇಶ ಸಂವಿಧಾನ ದಿನಾಚರಣೆವನ್ನು ಆಚರಿಸಿದೆ ಆದರೆ ನ್ಯಾಯಾಧೀಶರು ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಿಣ ಮಹೇಶ್ ಮಾತನಾಡಿ ರಾಯಚೂರು ಜಿಲ್ಲಾ ನ್ಯಾಯದೀಶರಾಧ ಮಲ್ಲಿಕಾರ್ಜುನ ಗೌಡ ಅವರು, ಸಂವಿಧಾನಾತ್ಸೋವ ಆಚರಣೆ…
ರಾಯಣ್ಣನ ಭಾವಚಿತ್ರ ಹಾಕಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು. ನಗರದ ಮೆಜೆಸ್ಟಿಕ್ನಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾಯಣ್ಣನ ಶೌರ್ಯ, ದೇಶಭಕ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಅವರ ಭಾವಚಿತ್ರವನ್ನು ಅಳವಡಿಸಲಾಗುವುದು . ಇಂದೇ ಇದಕ್ಕೆ ಅದೇಶ ಹೊರಡಿಸುವುದಾಗಿ ಹೇಳಿದರು. ಇಷ್ಟು ವರ್ಷಗಳಿಂದ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ತರ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ರಾಯಣ್ಣ ಅವರ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ವೀರರಾಣಿ ಕಿತ್ತೂರು ಚನ್ಮಮ್ಮ ಹಾಗೂ ರಾಯಣ್ಣನವರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದರು. ಈ ಎರಡು ಪ್ರತಿಮೆಗಳನ್ನು ಮಾಡುವವರ ಜೊತೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಲಾಗಿದೆ. ಸುವರ್ಣ ಸೌಧದ ಮುಂಭಾಗ ಕಿತ್ತೂರು ರಾಣಿ ಚನ್ನಮ್ಮ, ಬಲಗೈ ಭಂಟ ರಾಯಣ್ಣನ ಪ್ರತಿಮೆಯನ್ನು ಅನಾವರಣ ಮಾಡಿದರೆ ಹೆಚ್ಚು ಅರ್ಥ…
ತಿಪಟೂರು: ಜಿಲ್ಲೆಯಲ್ಲಿ ಜಾತ್ಯತೀತವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ನಿಷ್ಠಾವಂತ, ಸಮರ್ಥ ನಾಯಕ ಸಚಿವ ಜೆ.ಸಿ.ಮಾಧುಸ್ವಾಮಿರನ್ನು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ತೆಗೆದು ಹಾಕಿದ್ದು ಜಿಲ್ಲೆಯ ಜನತೆಗೆ ನೋವು ತಂದಿದೆ ಎಂದು ಜೆ.ಸಿ.ಮಾಧುಸ್ವಾಮಿ ಅಭಿಮಾನಿ ಲಕ್ಮಗೊಂಡನಹಳ್ಳಿ ರವೀಂದ್ರ ಕುಮಾರ್ ಬೇಸರ ಹೊರಹಾಕಿದ್ದಾರೆ. ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಪ್ರವಾಸಿ ಮಂದಿರದಲ್ಲಿ ಬುಧವಾರ ಜೆ.ಸಿ.ಮಾಧುಸ್ವಾಮಿ ಅಭಿಮಾನಿಗಳು ಸುದ್ದಿಗೋಷ್ಠಿ ನಡೆಸಿದರು. ಸಚಿವ ಜೆ.ಸಿ.ಮಾಧುಸ್ವಾಮಿ ತುಮಕೂರು ಜಿಲ್ಲೆಯ ಆಳ, ಅಗಲ, ವಿಚಾರವನ್ನು ತಿಳಿದುಕೊಂಡಿದ್ದು ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ರಾಜ್ಯಸರ್ಕಾರದ ಮುಖ್ಯಮಂತ್ರಿಗಳು ದಿಢೀರ್ ತುಮಕೂರು ಜಿಲ್ಲಾ ಉಸ್ತುವಾರಿಯಿಂದ ತೆಗೆದು ಜಿಲ್ಲೆಯಿಂದ ಹೊರಗಿನವರಿಗೆ ನೀಡಿರುವುದು ನಿಜಕ್ಕೂ ನೋವು ತಂದಿದೆ. ಜಿಲ್ಲಾ ಉಸ್ತುವಾರಿ ಸ್ಥಾನದಿಂದ ತೆಗೆಯಲು ಸೂಕ್ತ ಕಾರಣ ನೀಡದೇ ತೆಗೆದು ಹಾಕಿರುವುದು ಅಭಿವೃದ್ಧಿಗೆ ಕುಂಠಿತಕ್ಕೆ ಕಾರಣವಾಗುತ್ತದೆ. ಜಿಲ್ಲೆಯ ವಿರೋಧ ಪಕ್ಷದಿಂದ ಹಿಡಿದು ಅನೇಕ ಮುಖಂಡರು, ನಾಯಕರುಗಳು ಬದಲಾವಣೆಯನ್ನು ವಿರೋಧಿಸಿದ್ದಾರೆ. ಸಣ್ಣ ನೀರಾವರಿ ಖಾತೆಯನ್ನು ತೆಗೆದುಕೊಂಡು ರಾಜ್ಯದ ರೈತರಿಗೆ, ಜಿಲ್ಲೆಯ, ತಾಲ್ಲೂಕಿನ ರೈತರಿಗೆ ಅಗತ್ಯವಿರುವ ಸೌಕರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಅಲ್ಲದೇ…
ಪುಣೆ : ಕುಡಿತದ ಚಟಕ್ಕೆ ಬಿದ್ದಿದ್ದ ಗಂಡನ ಕಿರುಕುಳದಿಂದ ಬೇಸತ್ತಿದ್ದ ಪತ್ನಿ ತನ್ನ ಸೋದರಮಾವನ ಸಹಾಯದಿಂದ ಆತನನ್ನ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.. ಪತಿಯ ಕುಡಿತದಿಂದ ಬೇಸತ್ತು ಪತ್ನಿ ಸೋದರಮಾವನ ಸಹಾಯದಿಂದ ಕೊಲೆ ಮಾಡಿದ ಘಟನೆಯೊಂದು ಪುಣೆಯಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಮೃತನನ್ನ 37 ವರ್ಷದ ಕಪ್ತಾನ್ ಸಿಂಗ್ ನಾಯಕ್ ಎಂದು ಗುರುತಿಸಲಾಗಿದೆ. 32 ವರ್ಷದ ಅಂಜಲಿ ಚವ್ಹಾಣ್ ನಾಯಕ್ ಮತ್ತು 36 ವರ್ಷದ ಗಜೇಂದ್ರ ಚಿತ್ತಾರಸಿಂಗ್ ನಾಯಕ್ ಆರೋಪಿಗಳು.. ಸದ್ಯ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಪ್ತಾನ್ಸಿಂಗ್ ಮತ್ತು ಅವರ ಪತ್ನಿ ಅಂಜಲಿ ಚವ್ಹಾಣ್ ನಾಯಕ್ ಮುಂಡ್ವಾದ ಕೇಶವನಗರ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಕಪ್ತಾನ್ಸಿಂಗ್ ದಿನಗೂಲಿ ಕೆಲಸ ಮಾಡುತ್ತಿದ್ದ.. ಆದ್ರೀತ ಕುಡಿತದ ಚಟಕ್ಕೆ ಬಿದ್ದು , ಪ್ರತಿನಿತ್ಯ ಪತ್ನಿ ಅಂಜಲಿಗೆ ಕಿರುಕುಳ ನೀಡುವುದು ಹಲ್ಲೆ ಮಾಡುವುದನ್ನ ಖಾಯಂ ಮಾಡಿಕೊಂಡಿದ್ದ.. ಪತಿಯ ಕಿರುಕುಳದಿಂದ ಬೇಸತ್ತ ಅಂಜಲಿ ತನ್ನ ಸಹೋದರಿಯ ಪತಿಯಿಂದ ಸಹಾಯ ಕೇಳಿದ್ದಾಳೆ. ನಂತರ ಇಬ್ಬರು ಸೇರಿ…
ಛತ್ತೀಸ್ ಗಢ : ಬಾಲಕೊಬ್ಬ ಯುವಕನ ಜೊತೆಗೆ ಅಸಹಜ ಲೈಂಗಿಕ ಕ್ರಿಯೆಗೆ ವಿರೋಧಿಸಿದಕ್ಕೆ ಆತನನ್ನ 20 ವರ್ಷದ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಛತ್ತೀಸ್ ಗಢದ ಬೆಮೆತಾರಾದಲ್ಲಿ ನಡೆದಿದೆ. ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಮೊದಲಿಗೆ ಲೈಂಗಿಕ ಕ್ರಿಯೆಗೆ ಪ್ರಯತ್ನಿಸಿ ಒಪ್ಪದೇ ಹೋದಾಗ ಆತನನ್ನ ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಬೆಮೆತಾರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಹಲವು ಸೇವೆಗಳನ್ನು ಒಂದೇ ಸೂರಿನಡಿ ನಗರ ಪ್ರದೇಶಗಳಲ್ಲಿ ಒದಗಿಸಲಾಗುತ್ತಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲೂ ಒದಗಿಸುವ ಉದ್ದೇಶದಿಂದ ಗ್ರಾಮ ಒನ್ ಜಾರಿಗೆ ತರಲಾಗಿದೆ. ಇದರಿಂದ ತಾಲ್ಲೂಕು ಕಚೇರಿಗಳಿಗೆ ಜನರು ಅಲೆದಾಡುವುದು ತಪ್ಪಲಿದೆ. ಸಮಯ ಉಳಿತಾಯವಾಗಲಿದೆ. ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ರಾಜ್ಯದ 326 ಗ್ರಾ.ಪಂ.ಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಇದಕ್ಕೂ ಮುನ್ನ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದು ಲೋಪದೋಷಗಳನ್ನು ಸರಿಪಡಿಸಲಾಗಿದೆ ಎಂದರು. ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ, ಸುಲಭವಾಗಿ ಜನರಿಗೆ ತಲುಪಿಸಿ ವಿಶ್ವಾಸ ಮೂಡಿಸಬೇಕು. ಮಹಾತ್ಮ ಗಾಂಧೀಜಿ ಯವರು ಹೇಳಿದಂತೆ ಗ್ರಾಮ ಸ್ವರಾಜ್ಯದಿಂದ, ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದಂತೆ…