Subscribe to Updates
Get the latest creative news from FooBar about art, design and business.
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
- ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
- ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
- ತುಮಕೂರು ಹಾಲು ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
- ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
Author: admin
ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೋಲಿಸರು ಹುಡುಕಾಟ ನಡೆಸುತ್ತಿದ್ದ ವೇಳೆ ಆರೋಪಿಯು ತಮಿಳುನಾಡಿನ ತಿರುವಣ್ಣಾಮಲೈ ನಲ್ಲಿ ಸ್ವಾಮೀಜಿಯಂತೆ ವೇಷ ಧರಿಸಿ ತಲೆ ಮರೆಸಿಕೊಂಡಿದ್ದನು. ಏಪ್ರಿಲ್ 28 ರಂದು ದಾಳಿ ನಡೆಸಿ ಪರಾರಿಯಾಗಿದ್ದ. ಆಸಿಡ್ ದಾಳಿ ನಡೆದು 16 ದಿನ ಕಳೆದರೂ ಆರೋಪಿ ನಾಗೇಶ್ ಸುಳಿವು ಸಿಗದೆ ಪೊಲೀಸರಿಗೆ ತಲೆನೋವಾಗಿತ್ತು. ಪ್ರೀತಿ ನಿರಾಕರಿಸಿದ ಹೆಗ್ಗನಹಳ್ಳಿ ಕ್ರಾಸ್ ನಿವಾಸಿ 25 ವರ್ಷದ ಯುವತಿ ಮೇಲೆ ಹಾಡಹಗಲೇ ಆಸಿಡ್ ದಾಳಿ ನಡೆಸಲಾಗಿತ್ತು. ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್ ಆಸಿಡ್ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಯುವತಿಯು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಆಟೋ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಾಘತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ ನಡೆದಿದೆ. ಮೃತ ಬಾಲಕಿ ಯನ್ನು 12 ವರ್ಷದ ಪ್ರತಿಭಾ ಎಂದು ಗುರುತಿಸಲಾಗಿದೆ. ಕೊರಟಗೆರೆಯಿಂದ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್, ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು ಅಪಾಘತದ ತ್ರೀವತೆಗೆ ಬಾಲಕಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಧಳಕ್ಕೆ ಆಗಮಿಸಿದ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಬ್ಬಿ: ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು. ತಾಲೂಕು ಆಡಳಿತದ ವತಿಯಿಂದ ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ದ.ಸಂ.ಸ. ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ತಾಲ್ಲೂಕಿನ ಯಾವುದೇ ದಲಿತ ಗ್ರಾಮದಲ್ಲಿ ದಲಿತರಿಗೆ ಸ್ಮಶಾನವಿಲ್ಲ ಇರುವ ಕಡೆ ಪ್ರಭಾವಿಗಳು ಜಾಗವನ್ನು ಒತ್ತುವರಿ ಹಾಗೂ ಖಾತೆ ಮಾಡಿಸಿಕೊಂಡಿದ್ದಾರೆ. ದಲಿತರು ಸತ್ತರೆ ಶವ ಸಂಸ್ಕಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ದಲಿತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ ಕೇವಲ ಸಭೆಯಲ್ಲಿ ಮಾತ್ರ ದಲಿತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುವ ಅಧಿಕಾರಿಗಳು ಇದುವರೆವಿಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡ ನಿಟ್ಟೂರು ನಾಗರಾಜ್ ಮಾತನಾಡಿ, ತಾಲ್ಲೂಕಿನಲ್ಲಿ ದಲಿತರ ಜಮೀನು ಒತ್ತುವರಿಯಾಗಿದೆ. ಕೆಲವು ಗ್ರಾಮದಲ್ಲಿ ದಲಿತರಿಗೆ ಮೀಸಲಿರುವ ಜಮೀನು ಮಂಜೂರಾತಿ ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ. ಜಮೀನುಗಳು ಪ್ರಭಾವಿಗಳ ಪಾಲಾಗುತ್ತಿದೆ ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿ ದಲಿತರ ಜಮೀನು…
ಪಾವಗಡ: ತಾಲ್ಲೂಕಿನಲ್ಲಿ ದೀ ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಅಂತರ್ಜಲ ಚೇತನ ಯೋಜನೆಯಿಂದ ಪಾವಗಡ ತಾಲ್ಲೂಕಿನ ಇ.ಓ ಶಿವರಾಜಯ್ಯ. ಎ. ಡಿ ರಂಗನಾಥ್ ಹಾಗೂ ಕರ್ನಾಟಕ ರಾಜ್ಯ ಸಂಯೋಜಕರಾದ ಕೃಷ್ಣ ನಾಯಕ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಕೃಷ್ಣಾನಾಯಕ್ , ನಮ್ಮ ತಾಲ್ಲೂಕಿನಲ್ಲಿ 70 ವರ್ಷಗಳಿಂದ ಸುಮಾರು 50 ಬಾರಿ ಬರಗಾಲ ಬಂದಿದ್ದರಿಂದ ದೀ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ನಮ್ಮ ಪಾವಗಡ ತಾಲೂಕನ್ನು ಪ್ರಥಮ ಭಾರಿಗೆ ಆಯ್ಕೆ ಮಾಡಿಕೊಂಡಿದೆ. ಅಂತರ್ಜಲ ಚೇತನ ಯೋಜನೆಯಿಂದ ಹಳ್ಳಗಳಲ್ಲಿ ಬೋರ್ಡರ್ ಚೆಕ್ ಮತ್ತು ರಿಚಾರ್ಜ್ ವೆಲ್ ಕಾಮಗಾರಿಗಳನ್ನು 2021ನೇ ಸಾಲಿನಲ್ಲಿ ತಾಲ್ಲೂಕಿನ ಎಲ್ಲ ಗ್ರಾಮಪಂಚಾಯಿತಿಯಲ್ಲಿ ಸುಮಾರು 20ರಿಂದ 35 ಕಾಮಗಾರಿಗಳನ್ನು ಪೂರ್ಣಗೊಳಿಸಿದಾರೆ ಎಂದರು. ಈ ಕಾಮಗಾರಿಗಳಿಂದ ರೈತರ ಕೊಳೆವೆ ಬಾವಿಗಳು 80% (ಪರ್ಸೆಂಟ್ ) ಸೀಪೆಜ್ ಅಥವಾ ರಿಚಾರ್ಜ್ ಆಗಿವೆ ಮತ್ತು ಅಂತರ್ಜಲ ಮಟ್ಟ ಹೆಚ್ಚಾಗಿದೆ ಇದರಿಂದ ರೈತರರಿಗೆ ಅನುಕೂಲವಾಗಿದೆ. ಅದೇ ರೀತಿ ಈ ವರ್ಷದಲ್ಲಿ ಒಂದು ಗ್ರಾಮ ಪಂಚಾಯಿತಿಗೆ ಸುಮಾರು…
ಬೆಂಗಳೂರು: ನಾಡಪ್ರಭು ಕೆಂಪೇಗೌಡ, ಕುವೆಂಪುರವರ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮಿಯ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಮಸಿ ಬಳಿದಿದೆ. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು, ರಾಷ್ಟ್ರ ಕವಿ ಕುವೆಂಪು ರಚಿಸಿದ ನಾಡಗೀತೆಯನ್ನು ಅವಮಾನಿಸಿದ ಬಗ್ಗೆ ಸ್ವಾಮೀಜಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ನಾನು ಆ ರೀತಿ ಹೇಳಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಋಷಿ ಕುಮಾರಸ್ವಾಮಿ ಸಮರ್ಥನೆ ನೀಡಲು ಮುಂದಾಗಿದ್ದಾರೆ. ಇದಾದ ಬಳಿಕ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸ್ವಾಮೀಜಿ ಮುಖಕ್ಕೆ ಮಸಿ ಬಳಿದಿದ್ದಾರೆ. ನಾಡಗೀತೆಯನ್ನ ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದಾರೆಂದು ಕಾಳಿ ಸ್ವಾಮೀಜಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಸ್ವಾಮೀಜಿ ಮೇಲೆ ಮಸಿ ಬಳಿಯುವ ಮೂಲಕ ಹೇಳಿಕೆಯನ್ನು ಖಂಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಕರ್ನಾಟಕದ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಬಹುತೇಕ ಮೌಲ್ಯಮಾಪನ ಮುಗಿದಿದ್ದು, ಮೇ 19 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಮೇ 19ರಂದು ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಬಾರಿ 8,73,846 ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಕೆಲವರನ್ನು ಹೊರತುಪಡಿಸಿ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರ ಫಲಿತಾಂಶ ಪ್ರಕಟವಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ 22 ಮಂದಿ ಆರೋಪಿಗಳಿಗೆ ಪಾಕಿಸ್ತಾನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ತಲಾ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ ಜುಲೈ ತಿಂಗಳ 2021ರಲ್ಲಿ ಮದ್ರಸಾದಲ್ಲಿ 8 ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ. ಈ ಹಿನ್ನೆಲೆಯಲ್ಲಿ ಮುಸ್ಲಿಮರು ನಮ್ಮ ದೇವರನ್ನು ಅಪವಿತ್ರಗೊಳಿಸಿದ್ದಾನೆ ಎಂದು ಆರೋಪಿಸಿ ಗಣೇಶ ಮಂದಿರವನ್ನು ಧ್ವಂಸಗೊಳಿಸಿದ್ದರು. ಭದ್ರತೆಗಾಗಿ ನಿಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 84 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನು ವಿಚಾರಣೆ ನಡೆಸಿ 22 ಮಂದಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ನಾಸೀರ್ ಹುಸೇನ್ ತೀರ್ಪು ಪ್ರಕಟಿಸಿದ್ದಾರೆ. ಉಳಿದ 62 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಗಣೇಶ ಮಂದಿರದ ಮೇಲಿನ ದಾಳಿಯನ್ನು ಪಾಕಿಸ್ತಾನ ಖಂಡಿಸಿ ನಿರ್ಣಯ ಅಂಗೀಕರಿಸಿತ್ತು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪರಿಶೀಲಿಸಿದರು. ಬೊಮ್ಮನಹಳ್ಳಿಯ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಗಾಳಿಗೆ ಟೆನ್ಸಲ್ ರೂಫ್ ಬಿದ್ದ ಪ್ರಕರಣ ಸಂಬಂಧ ಪಾಲಿಕೆಯಿಂದ ಯಾವುದೇ ಹಣ ವ್ಯಯಿಸದೆ ಗುತ್ತಿಗೆದಾರರಿಂದಲೇ ದುರಸ್ತಿ ಕಾರ್ಯವನ್ನು ಕೈಗೊಂಡು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ನಗರದಲ್ಲಿಂದು ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ವೇಗವಾಗಿ ಗಾಳಿ ಬಂದ ಪರಿಣಾಮ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಪ್ರೇಕ್ಷರ ಗ್ಯಾಲರಿಗೆ ಅಳವಡಿಸಿದ್ದ ಟೆನ್ಸಲ್ ರೂಫ್ ಬಿದ್ದಿದೆ. ಇದರ ಜೊತೆಗೆ ಇನ್ನೂ ಬಾಕಿಯಿರುವ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು. ಇದೇ ವೇಳೆ ಹೆಚ್.ಎಸ್.ಆರ್ ಲೇಔಟ್ ವಾರ್ಡ್ ಬಿಡಿಎ ಕಾಂಪ್ಲೆಕ್ಸ್ ಬ್ಲಾಕ್ ಬಳಿ ಪೌರಕಾರ್ಮಿಕರ ಮಸ್ಟರಿಂಗ್ ಪಾಯಿಂಟ್ಗೆ ಭೇಟಿ ನೀಡಿ ಪರಿಶೀಲಿಸಿದ ಅವರು,…
ನೀಟ್ ಸ್ನಾತಕೋತರ ಪರೀಕ್ಷೆಯ ದಿನಾಂಕ ಗಳನ್ನು ಮುಂದೂಡಬೇಕೆಂದು ಭಾರತೀಯ ವೈದ್ಯಕೀಯ ಒಕ್ಕೂಟ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಅವರಿಗೆ ಮನವಿ ಮಾಡಿದೆ. ಈ ತಿಂಗಳ 21ರಂದು ಸ್ನಾತಕೋತರ – 2021ರ ಅಖಿಲ ಭಾರತ ಖೋಟಾ ಕೌನ್ಸಲಿಂಗ್ ತಡವಾ ಗುತ್ತಿರುವ ಕಾರಣ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಮಾಡಿದೆ. ಪಿಜಿ- 2022ರ ಪರೀಕ್ಷೆಯ ದಿನಾಂಕ ಮತ್ತು 2021ರ ಕೌನ್ಸಲಿಂಗ್ ದಿನಾಂಕ ಮತ್ತು 2021ರ ಕೌನ್ಸಲಿಂಗ್ ಮುಗಿಸಬೇಕಿರುವ ದಿನಾಂಕದ ನಡುವೆ ಅಂತರ ಕಡಿಮೆ ಇದೆ. ಆದ್ದರಿಂದ ಇಂತಹ ಕಠಿಣ ಪರೀಕ್ಷೆಗೆ ಸಿದ್ಧತೆ ಅಗತ್ಯವಿದ್ದು, ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸಮಯಾವಕಾಶ ಸಿಗುವುದಿಲ್ಲ ಎಂದು ಒಕ್ಕೂಟ ಹೇಳಿದೆ. ಕೋವಿಡ್ ಕಾರಣದಿಂದಾಗಿ 2021ರ ನೀಟ್ ಪಿಜಿ 5 ತಿಂಗಳು ತಡವಾಗಿ ಆರಂಭವಾಗಿತ್ತು. ಅ.25, 2021ರಂದು ನಡೆಯಬೇಕಿದ್ದ ಕೌನ್ಸಲಿಂಗ್ ಜನವರಿ ತಿಂಗಳಿನಲ್ಲಿ ಆರಂಭವಾಗಿದೆ. ಸೀಟುಗಳ ಮೀಸಲಾತಿ ಘೋಷಣೆ ಬಾಕಿ ಇದ್ದು, ಇದಕ್ಕೆ ಮುಖ್ಯ ಕಾರಣ ಮಾ. 31., 2022ರಲ್ಲಿ ಸುಪ್ರೀಂಕೋರ್ಟ್ ತೀರ್ಪಿನಿಂದ ಕೌನ್ಸಲಿಂಗ್ ಮತ್ತಷ್ಟು ವಿಳಂಬವಾಯಿತು. ಕೊರೊನಾ ಸಂದರ್ಭದಲ್ಲಿ ಕೋವಿಡ್…
ನೊಯಿಡಾ(ಉತ್ತರಪ್ರದೇಶ), ಮೇ.೧೨- ಗ್ರೇಟರ್ ನೊಯಿಡಾ ದಲ್ಲಿರುವ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಇಂದು ಬೆಳಿಗ್ಗೆಮಹೀಂದ್ರ ಬೊಲೆರೊ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಒಬ್ಬರು ಮಹಾರಾಷ್ಟ್ರದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ. ‘ಏಳು ಜನರಿದ್ದ ಮಹೀಂದ್ರ ಬೊಲೆರೊ ಆಗ್ರಾದಿಂದನೋಯಿಡಾ ದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್ ವೊಂದಕ್ಕೆ ಜೆವರಾ ಟೋಲ್ ಬಳಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸ ಲಾಗಿದೆ ಎಂದೂ ಹೇಳಿದ್ದಾರೆ. ಯಮುನಾಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಪ್ರಾಣಹಾನಿಯಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಎಂದುಪ್ರಾರ್ಥಿಸಿ ರುವ ಅವರು, ಮೃತರಕುಟುಂಬದ ವರಿಗಾಗಿ ಸಂತಾಪ ಸೂಚಿಸಿದ್ದಾರೆ’ ಎಂದು ಉತ್ತರ ಪ್ರದೇಶ ಮುಖ್ಯ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…