Author: admin

ಮಾರ್ಚ್ 4ಕ್ಕೆ ಮತ್ತೆ ಅಧಿವೇಶನ(Karnataka Assembly Session) ಪ್ರಾರಂಭವಾಗಲಿದೆ. ಇದರ ಬಗ್ಗೆ ಪೂರ್ವ ತಯಾರಿಗಳನ್ನು ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ. ಸಮಯ-ಹಣ ವ್ಯರ್ಥ; ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆಯಿಲ್ಲ! ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕಾಗಿತ್ತು. ಪ್ರತಿಭಟನೆಯಿಂದಾಗಿ ಸದನವನ್ನು ಮೊಟಕುಗೊಳಿಸಬೇಕಾಯಿತು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ನೆರೆ ಹಾಗೂ ಬೆಳೆ ಪರಿಹಾರದ ವಿತರಣೆ ಬಗ್ಗೆ ಚರ್ಚೆ ಆಗಬೇಕಿತ್ತು. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗದೆ ರಾಜಕೀಯ ನಾಯಕರು ಸಮಯ ಮತ್ತು ಹಣ ವ್ಯರ್ಥ ಮಾಡಿದ್ದಾರೆ. ಕಲಾಪದಲ್ಲಿ ‘ಕೈ’ ನಾಯಕರ ಅಹೋರಾತ್ರಿ ಧರಣಿ ಈ ಭಾರಿಯ ಜಂಟಿ ಅಧಿವೇಶನ ಕೇವಲ ಕಾಂಗ್ರೆಸ್ ಶಾಸಕರ ಧರಣಿಯಿಂದ ಕೂಡಿತ್ತು. ಸಚಿವ ಈಶ್ವರಪ್ಪ(KS Eshwarappa)ನವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ಹಾಗೂ ಪರಿಷತ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದರು. ಈ ಮೂಲಕ ಸದನದ ಕಲಾಪ ನಡೆಯಲು ಬಿಡದೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದರು. ಕಾಂಗ್ರೆಸ್ ನಡೆಸಿದ…

Read More

ಮಾದಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡು ಗ್ರಾಹಕರಿಗೆ ಮಾರಾಟ ಮಾಡುತ್ತಾ, ಹಣ ಸಂಪಾದನೆ ಮಾಡುತ್ತಿದ್ದ ನೈಜಿರಿಯಾ ದೇಶದ ಪ್ರಜೆಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಾರೆನ್ಸ್ ಜೆನ್ವೋಕ್ ಬಂಧಿತ ನೈಜಿರಿಯಾ ಪ್ರಜೆ. ಈತನಿಂದ ಎಂಡಿಎಂಎ ಕ್ರಿಸ್ಟಲ್ 6 ಗ್ರಾಂ, ನೀಲಿ ಬಣ್ಣದ ಎಂಡಿಎಂಎ ಎಕ್ಸ್ಟಿಸಿ 87 ಮಾತ್ರೆಗಳು, ಗುಲಾಬಿ ಬಣ್ಣದ 9 ಎಕ್ಸ್ಟಿಸಿ ಮಾತ್ರೆಗಳು, ಹಳದಿ ಬಣ್ಣದ 4 ಎಕ್ಸ್ಟಿಸಿ ಪಿಲ್ಸ್ ಮತ್ತು ಜಿಪ್ ಲಾಕ್ ಪ್ಲಾಸ್ಟಿಕ್ ಕವರ್ಸ್ಗಳನ್ನು ವಶಕ್ಕೆ ಪಡೆದಿರುತ್ತಾರೆ. ತಲಘಟ್ಟಪುರ ಪೊಲೀಸರಿಗೆ 100 ಅಡಿ ರಸ್ತೆ, ತುರಹಳ್ಳಿ ಪಾರೆಸ್ಟ್ ರಸ್ತೆಯಿಂದ ಚಿಕ್ಕೇಗೌಡನ ಪಾಳ್ಯಕ್ಕೆ ಹೋಗುವ ರಸ್ತೆಯ ಭಾರತ್ ಪೆಟ್ರೋಲ್ ಬಂಕ್ ಸಮೀಪ ವಿದೇಶಿ ಪ್ರಜೆಯೊಬ್ಬ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಲಭಿಸಿದೆ.ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ದಾಳಿ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಈ ಮಾದಕ ವಸ್ತುಗಳನ್ನು ವಿದೇಶ ದಿಂದ ತರಿಸಿಕೊಂಡು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದುದು ವಿಚಾರಣೆ…

Read More

ಬೆಲೆ ಏರಿಕೆಯ ನಡುವೆಯೇ ಜನಸಾಮಾನ್ಯರ ಮೇಲೆ ಮತ್ತೊಮ್ಮೆ ಹೊರೆ ಬೀಳಲಿದೆ. ಪೆಟ್ರೋಲ್, ಡೀಸೆಲ್ ನಂತರ ಈಗ ಎಲ್‌ಪಿಜಿ ( LPG Price Hike) ಕೂಡ ಗ್ರಾಹಕರ ಜೇಬು ಸುಡಲಿದೆ. ಏಪ್ರಿಲ್‌ನಿಂದ ಅಡುಗೆ ಅನಿಲ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಪ್ರಪಂಚದಾದ್ಯಂತ ಗ್ಯಾಸ್ ನಲ್ಲಿ ದೊಡ್ಡ ಕೊರತೆ ಕಂಡುಬಂದಿದೆ (Global Gas Crunch). ಏಪ್ರಿಲ್‌ನಿಂದ ಅದರ ಪರಿಣಾಮ ಭಾರತದ ಮೇಲೂ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಇಲ್ಲಿಯೂ ಗ್ಯಾಸ್ ಬೆಲೆಗಳು ದ್ವಿಗುಣಗೊಳ್ಳಬಹುದು (Domestic Gas Prices) . ಜಾಗತಿಕ ಅನಿಲ ಕೊರತೆ : ಜಾಗತಿಕ ಮಟ್ಟದಲ್ಲಿಯೇ ಅನಿಲದ ಕೊರತೆಯಿಂದಾಗಿ ಸಿಎನ್‌ಜಿ (CNG), ಪಿಎನ್‌ಜಿ ಮತ್ತು ವಿದ್ಯುತ್ ಬೆಲೆಗಳು (electricity bill) ಹೆಚ್ಚಾಗುತ್ತವೆ. ಇದರ ಜೊತೆಗೆ ಕಾರ್ಖಾನೆಗಳಲ್ಲಿ ಯಂತ್ರಗಳನ್ನು ನಡೆಸುವುದು ದುಬಾರಿಯಾಗಬಹುದು. ಅಲ್ಲದೆ, ಉತ್ಪಾದನಾ ವೆಚ್ಚವೂ ಹೆಚ್ಚಾಗಬಹುದು. ಸರ್ಕಾರದ ರಸಗೊಬ್ಬರ ಸಬ್ಸಿಡಿ ಮಸೂದೆಯಲ್ಲೂ ಹೆಚ್ಚಳ ಕಂಡು ಬರಬಹುದು (Fertilizer Subsidy Bill). ಒಟ್ಟಿನಲ್ಲಿ ಇವೆಲ್ಲದರ ಪರಿಣಾಮ ಸಾಮಾನ್ಯ ಗ್ರಾಹಕರ ಮೇಲೆ ಮಾತ್ರ ಆಗಲಿದೆ.…

Read More

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ರ ಕೆಲವು ಅಂಶಗಳು ಏಕಪಕ್ಷೀಯ ಮತ್ತು ಅತಾರ್ಕಿಕವಾಗಿದ್ದು ದೇಶಾದ್ಯಂತ ಮಕ್ಕಳಿಗೆ ಏಕರೂಪದ ಪಠ್ಯಕ್ರಮ ಪರಿಚಯಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಮನವಿಯ ಕುರಿತು ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ಇಂದು ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರದ ಶಿಕ್ಷಣ, ಕಾನೂನು ಮತ್ತು ನ್ಯಾಯ ಹಾಗೂ ಗೃಹ ವ್ಯವಹಾರಗಳ ಸಚಿವಾಲಯಗಳಿಗೆ ನೋಟಿಸ್‍ ಗಳನ್ನು ನೀಡಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾ.30ಕ್ಕೆ ನಿಗದಿಪಡಿಸಿತು.ಆರ್‌ ಟಿಇ ಅಧಿನಿಯಮದ ಸೆಕ್ಷನ್1(4) ಮತ್ತು 1(5) ಹಾಗೂ ಮಾತೃಭಾಷೆಯಲ್ಲಿ ಏಕರೂಪದ ಪಠ್ಯಕ್ರಮದ ಅನುಪಸ್ಥಿತಿ ಅಜ್ಞಾನದ ಬೆಳವಣಿಗೆಗೆ ಕಾರಣವಾಗುತ್ತದೆ ಮತ್ತು ಮೂಲಭೂತ ಕರ್ತವ್ಯಗ¼ ಅನುಷ್ಠಾನವನ್ನು ವಿಳಂಬಗೊಳಿಸುತ್ತದ ಎಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರತಿಪಾದಿಸಲಾಗಿತ್ತು. ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವುದು ಕೇಂದ್ರದ ಮೂಲಭೂತ ಕರ್ತವ್ಯ. ಆದರೆ ಇದರಲ್ಲಿ ಸಂಪುರ್ಣ ವಿಫಲವಾಗಿರುವ ಕೇಂದ್ರ ಸರ್ಕಾರ ಅತ್ಯಂತ ಹಳೆಯದಾದ 2005ರ ಈ ಮುಂಚಿನ ರಾಷ್ಟ್ರೀಯ ಪಠ್ಯಕ್ರಮ ಕಾರ್ಯರ್ಕ…

Read More

ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಮೈಸೂರಿನ ಆರ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ಅವರು, ಕೊಲೆಗೆ ಕಾರಣರಾದವರನ್ನು ಎಡೆಮುರಿ ಕಟ್ಟಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬದವರಿಗೆ ಕನಿಷ್ಠ 25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕೊಲೆಯ ಹಿಂದೆ ಯಾವುದೇ ಶಕ್ತಿಗಳಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಘಟನೆ ಹಿಂದೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಸದ್ಯ ಶಿವಮೊಗ್ಗದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದು ಹೇಳಿದರು. ಟಿಪ್ಪು ಎಕ್ಸ್‍ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲು ಹೇಳಿರುವ ಸಂಸದ ಪ್ರತಾಪ್‍ಸಿಂಹ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಸಂಸದರು ಇಂತಹ ಅನಗತ್ಯ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಬೇಕು. ಟಿಪ್ಪು ಅವರು ಸ್ವಾತಂತ್ರ್ಯಕ್ಕಾಗಿ ಅಪರಿಮಿತ ಹೋರಾಟ ಮಾಡಿದ್ದಾರೆ. ನಾಗರಹೊಳೆ ಹೆಸರು ಬದಲಾಯಿಸಿ ಕಾರ್ಯಪ್ಪ ಹೆಸರಿಡುವಂತೆ ಹೇಳಿದ್ದಾರೆ. …

Read More

ಹಿರಿಯೂರು:  ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕರ್ಪೂರದಾರತಿ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾಶ್ರೀನಿವಾಸ್ ಅವರು ಭಾಗಿಯಾಗಿದ್ದರು. ಇನ್ನೂ ಕರ್ಪೂರದಾರತಿ ಪೂಜೆಯಲ್ಲಿ ಮೊದಲ ಕರ್ಪೂರದಾರತಿಯನ್ನು ನಗರ ಸಭಾ ಸದಸ್ಯರಾದ ಈ .ಮಂಜುನಾಥ್ 64,500 ರೂಪಾಯಿಗೆ ನಡೆಸಿದರು. ಎರಡನೆಯ ಕರ್ಪೂರದ ಆರತಿಯನ್ನು ಮಾಹಿ ಜ್ಯೂಯಲರ್ಸ್ ಮಾಲೀಕ  ಕೌಶಿಕ್ ನಾಯ್ಡು 35,500 ರೂಪಾಯಿಗಳಿಗೆ  ನಡೆಸಿದರು. ಮೂರನೇ  ಕರ್ಪೂರದಾರತಿಯನ್ನು  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೇತ್ರಾವತಿ ಅರುಣ್ ಕುಮಾರ್ ಬ್ಯಾಡರಹಳ್ಳಿ ಅವರು  31,500 ರೂಪಾಯಿಗಳಿಗೆ ನಡೆಸಿದರು. ಈ ಸಂದರ್ಭದಲ್ಲಿಹಿರಿಯೂರು ತಾಲ್ಲೂಕಿನ ಶಾಸಕಿ  ಪೂರ್ಣಿಮಾ ಅವರು ಸ್ವಾಮಿಗೆ ಕರ್ಪೂರದಾರತಿಯನ್ನು ಬೆಳಗಿದರು. ಬಳಿಕ  ಕೌಶಿಕ್ ನಾಯ್ಡು ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ವಿ, ನಗರಸಭೆ ಅಧ್ಯಕ್ಷರಾದ ಶಂಶುದ್ ಉನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಕೌಶಿಕ್ ನಾಯ್ಡು , ಜಿ.ಎಲ್.ಮೂರ್ತಿ, ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಆರ್.ನಾಗೇಂದ್ರ…

Read More

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ನಿವಾಸಕ್ಕೆ ಡಾ.ಸಂತೋಷ ಭಾರತಿ ಶ್ರೀಪಾದ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕ ಗಣ್ಯರು ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ರಾಜ್ಯ ಸರ್ಕಾರ ಇಂದು ಯುವಕರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಹಿಂದುತ್ವದ ಆಧಾರದ ಮೇಲೆ ಬಂದಿರುವ ಸರ್ಕಾರ ಹಿಂದೂ ಯುವಕರ ಮೇಲೆ ದಾಳಿ ನಡೆಯುತ್ತಿದ್ದರೂ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರದಿಂದ ರಕ್ಷಣೆಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಬಿಜೆಪಿ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ಸರ್ಕಾರದ ಗುಪ್ತಚರ ಇಲಾಖೆ ವಿಫಲವಾಗಿದೆ. ಘಟನೆ ಹಿಂದೆ ಇರುವವರನ್ನು ಬೇರು ಸಮೇತ ಕಿತ್ತುಹಾಕಬೇಕು. ಶಿವಮೊಗ್ಗದಲ್ಲಿ ಗಾಂಜಾ, ಡ್ರಗ್ಸ್ ನಿಲ್ಲಿಸಬೇಕೆಂದು ಹೇಳಿದರು. ಡಾ.ಸಂತೋಷ್ ಭಾರತಿ ಶ್ರೀಪಾದ ಸ್ವಾಮೀಜಿ ಮಾತನಾಡಿ, ಇದನ್ನು ಸ್ವಾಭಿಮಾನವಾಗಿ ತೆಗೆದುಕೊಳ್ಳದೆ ಯುದ್ಧವಾಗಿ ತೆಗೆದುಕೊಳ್ಳಬೇಕಾಗಿದೆ. ನಾವು ಒಬ್ಬ ಯೋಧನನ್ನು ಕಳೆದುಕೊಂಡಿದ್ದೇವೆ. ಕೊಲೆ ಮಾಡಿದವರಿಗೆ ಶಿಕ್ಷೆ ಕೊಡಲು ಆಗಲಿಲ್ಲವೆಂದರೆ ನಾವು ಕೊಡುತ್ತೇವೆ.…

Read More

ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘವು ಕೊರಟಗೆರೆ ತಾಲ್ಲೂಕಿನ ಮಾರಗೊಂಡನಹಳ್ಳಿ, ವಜ್ಜನಕುರಿಕೆ, ಪಾತಗಾನಹಳ್ಳಿ ಗ್ರಾಮಗಳಲ್ಲಿ ನೂತನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು. ಉದ್ಘಾಟನೆಯ ನಂತರ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ,   ಪ್ರಪಂಚದ ಸಮಾರು  700 ದೇಶಗಳಲ್ಲಿ ವಿದ್ಯಾರ್ಥಿಗಳು ರೈತರಿಗೆ ಸಂಬಂಧಿಸಿದ ಅಧ್ಯಯನಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುವುದರೊಂದಿಗೆ ಸಾಕಷ್ಟು  ಸಾಧನೆ ಮಾಡಿರುವಂತಹದ್ದು ನಮ್ಮ ಕಣ್ಣು ಮುಂದೆಯೇ ಸಾಕಷ್ಟು ಉದಾಹರಣೆಗಳಿವೆ.  ನೀವು ಸರಳವಾಗಿ ರೈತಸಂಘದ  ಬಗ್ಗೆ ಅರ್ಥ ಮಾಡಿಕೊಳ್ಳಬೇಕಾದರೆ ರೈತ ಸಂಘದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿದರೆ ಮಾತ್ರ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು. ರೈತ ಸಂಘದ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರಾಗಿ ಭಾಗವಹಿಸುವಾಗ ಹಸಿರು ಶಾಲು, ಹಸಿರು ಸೇನೆಯ ಆದರ್ಶ ತತ್ವಗಳನ್ನು ಅಳವಡಿಸಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಎಲ್ಲಾ ಹಕ್ಕುಗಳು ನೇರವಾಗಿ ಅವರಿಗೆ ತಲುಪುವಂತೆ ಮಾಡುವುದೇ ರೈತ ಸಂಘದ ಮುಖ್ಯ ಕರ್ತವ್ಯ ಎಂದು ಅವರು ಹೇಳಿದರು. ರೈತ ಸಂಘದಲ್ಲಿ ಕಾರ್ಯಕರ್ತನಾದ ಮೇಲೆ ಸಂಘದಲ್ಲಿ ಇದ್ದು ಸಂಘವನ್ನು ದುರ್ಬಳಕೆ ಮಾಡಿಕೊಳ್ಳದೆ ಸಂಘದ ತತ್ವ ಮತ್ತು…

Read More

ವಿಜಾಪುರಜಿಲ್ಲೆ: ಕೊಲ್ಹಾರ ಪಟ್ಟಣ ಹಾಗೂ ಕೊಲ್ಹಾರ ತಾಲ್ಲೂಕು ವ್ಯಾಪ್ತಿಯ ಮುಳುಗಡೆ ಸಂತ್ರಸ್ತರ ಪರವಾಗಿ ಅವಿರತವಾಗಿ ಹೋರಾಟ ಮಾಡಲಾಗುವುದು ಎಂದು ಕೃಷ್ಣಾ ತೀರ ಸಂತ್ರಸ್ತರ ಹೋರಾಟ ಸಮಿತಿಯ ಅಧ್ಯಕ್ಷ ಸಿದ್ದು ಬಾಲಗೊಂಡ ಹೇಳಿದರು. ಪಟ್ಟಣದಲ್ಲಿ ಕೃಷ್ಣಾ ತೀರ ಸಂತ್ರಸ್ತರ ಹೋರಾಟ ಸಮಿತಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬಾಗಲಕೋಟೆ ನಂತರ ಎರಡನೆಯ ಅತಿ ದೊಡ್ಡ ಪಟ್ಟಣವಾದ ಕೊಲ್ಹಾರ ಪಟ್ಟಣ ಸ್ಥಳಾಂತರವಾಗಿ ಅನೇಕ ವರ್ಷಗಳು ಕಳೆಯುತ್ತಾ ಬಂದರು ಕೂಡ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ಪುನರ್ವಸತಿ ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಸಿ ಪಟ್ಟಣವನ್ನು ಅಭಿವೃದ್ಧಿ ಪಡಿಸುವುದು ಬಿಟ್ಟು ತಮ್ಮ ಹುಳುಕು ಮುಚ್ಚಿಕೊಳ್ಳಲು ಸಂತ್ರಸ್ತರ ಮೇಲೆ ಪೊಲೀಸ್ ಪ್ರಕರಣ ದಾಖಲಿಸಿ ಸರಕಾರಕ್ಕಾಗಿ ಮನೆಮಠ ಕಳೆದುಕೊಂಡ ಸಂತ್ರಸ್ತರಿಗೆ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳ ತಪ್ಪಿತಸ್ಥರು: ಪುನರ್ವಸತಿ ಅಧಿಕಾರಿಗಳು ತಪ್ಪು ಮಾಡಿ ಸುಖಾಸುಮ್ಮನೆ 1117 ಜನ ಸಂತ್ರಸ್ತರ ಮೇಲೆ ಪ್ರಕರಣದ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ನಮಗೆ ಪುನರ್ವಸತಿ ಅಧಿಕಾರಿಗಳು ನೀಡಿದ ನಿವೇಶನಗಳು ಬೇಡ! ಅವರು…

Read More

ತುಮಕೂರು: ತುಮಕೂರು ಗ್ರಾಮಾಂತರ ಕೆಸರುಮಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಚನಹಳ್ಳಿ ಗ್ರಾಮದ ಶ್ರೀ ತಿರುಮಲ ರಂಗನಾಥಸ್ವಾಮಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರಾದ ಡಿ.ಸಿ. ಗೌರಿಶಂಕರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಈ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಶಾಸಕರಾದ ಡಿ.ಸಿ. ಗೌರಿಶಂಕರ್ ರವರು ವೈಯಕ್ತಿಕವಾಗಿ 3,50,000 (ಮೂರುವರೆ ಲಕ್ಷ) ರೂಗಳ  ಧನಸಹಾಯ ಮಾಡಿದ್ದು,  ದೇವಾಲಯದ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ವತಿಯಿಂದ 10,00,000 (ಹತ್ತು ಲಕ್ಷ) ರೂಗಳನ್ನು ಬಿಡುಗಡೆ ಮಾಡಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಶಾಸಕರಾದ ಕೇವಲ ನಾಲ್ಕು ವರ್ಷದ ಅವಧಿಯಲ್ಲಿ ಮಾಚನಹಳ್ಳಿ ಗ್ರಾಮಕ್ಕೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಹೊರತುಪಡಿಸಿ ಸುಮಾರು 20,00,000 (ಇಪ್ಪತ್ತು ಲಕ್ಷ) ವೆಚ್ಚದಲ್ಲಿ ಸಿಸಿ ರಸ್ತೆ 12,00,000 (ಹನ್ನೆರೆಡು ಲಕ್ಷ) ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣದಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಶಾಸಕರ ಕಾರ್ಯಕ್ಕೆ ಗ್ರಾಮಸ್ಥರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ವರದಿ: ಎ.ಎನ್.ಪೀರ್,   ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More