Subscribe to Updates
Get the latest creative news from FooBar about art, design and business.
- ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್
- ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು ಭೇಟಿಯಾದ ಭಾರತಿ, ಅನಿರುದ್ಧ್
- ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್
- ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
- ಔರಾದ್ ಟಿಎಚ್ ಒ ವಿರುದ್ಧ ದೂರು: ಕ್ರಮಕ್ಕೆ ಸೂಚನೆ
- ಕರ್ನಾಟಕದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
- ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ
- “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ
Author: admin
ಬುಧವಾರ ಮಧ್ಯಾಹ್ನ ಹೆಲಿಕಾಪ್ಟರ್ ಅಪಘಾತದ ಸುದ್ದಿ ಕೇಳಿ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಕೆಲವು ಗಂಟೆಗಳ ನಂತರ ದಟ್ಟ ಮಂಜು, ಹೊಗೆ ತೆರವುಗೊಂಡಿತು. ಸತ್ಯ ಹೊರಬಂದ ನಂತರ ದೇಶದ ಜನರ ಕಣ್ಣಾಲಿಗಳು ತೇವವಾದವು. ಭಾರತೀಯ ಸೇನೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ತಮಿಳುನಾಡಿನ ಕಣ್ಣೂರಿನ ಅರಣ್ಯದಲ್ಲಿ ಪತನಗೊಂಡಿತು. ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಿಪಿನ್ ಲಕ್ಷ್ಮಣ್ ಸಿಂಗ್ ರಾವತ್. ಜನರಲ್ ಬಿಪಿನ್ ರಾವತ್ ಎಂದು ನಮಗೆಲ್ಲ ಪರಿಚಯ.. ಜನರಲ್ ರಾವತ್ ಅವರು ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಚೌಹಾನ್ ರಜಪೂತ್ ಕುಟುಂಬದಲ್ಲಿ 16 ಮಾರ್ಚ್ 1958 ರಂದು ಜನಿಸಿದರು. ಜನರಲ್ ರಾವತ್ ಅವರ ತಾಯಿ ಪರ್ಮಾರ್ ರಾಜವಂಶದವರು. ಬಿಪಿನ್ ರಾವತ್ ಪೂರ್ವಜರು ಮಾಯಾಪುರ/ಹರಿದ್ದಾರ್ ನಿಂದ ಬಂದು ಗರ್ವಾಲ್ ನ ಪರ್ಸಾಯಿ ಗ್ರಾಮದಲ್ಲಿ ನೆಲೆಸಿದ್ದರು. ಅವರನ್ನು ಪರಸರ ರಾವತ್ ಎಂದು ಕರೆಯಲಾಗುತ್ತಿತ್ತು.…
ಭಾರತೀಯ ಸೇನೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ತಮಿಳುನಾಡಿನ ಕಣ್ಣೂರಿನ ಅರಣ್ಯದಲ್ಲಿ ಪತನಗೊಂಡಿತು. ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಸಂಜಯ್ ಗಾಂಧಿ ಇಂದಿರಾ ಗಾಂಧಿಯವರ ಕಿರಿಯ ಮಗ. ಅವರ ತಾಯಿಯಂತೆಯೇ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ನಿಜವಾದ ಅರ್ಥದಲ್ಲಿ, ಅವರನ್ನು ಇಂದಿರಾ ಗಾಂಧಿಯವರ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಜೂನ್ 1980 ರಲ್ಲಿ ಸಂಜಯ್ ಗಾಂಧಿ ವಿಮಾನ ಅಪಘಾತದಲ್ಲಿ ನಿಧನರಾದರು. ಸೆಪ್ಟೆಂಬರ್ 2001 ರಲ್ಲಿ, ಮೈನ್ ಪುರಿ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನಗೊಂಡಿತು. ಈ ಅಪಘಾತದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಂದೆ ಮಾಧವರಾವ್ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದರು. ತಂದೆಯ ಮರಣದ ನಂತರವೇ ಜ್ಯೋತಿರಾದಿತ್ಯ ರಾಜಕೀಯ ಪ್ರವೇಶಿಸಿದರು. ವೈ.ಎಸ್. ರಾಜಶೇಖರ ರೆಡ್ಡಿ ಎರಡು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ, ಅವರ ಹೆಲಿಕಾಪ್ಟರ್ ರಾಜ್ಯದ ರುದ್ರಕೊಂಡ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು. ಅದರಲ್ಲಿ ಅವರು ನಿಧನರಾದರು.…
ಮೈಸೂರು: ದೇವೇಗೌಡರ ಕುಟುಂಬದವರ ಜೊತೆಗೆ ನನ್ನದು ಸೈದ್ಧಾಂತಿಕ ವಿರೋಧವಷ್ಟೆ, ಆರ್ಎಸ್ಎಸ್ ಅನ್ನು ಟೀಕಿಸುವ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಸರ್ಕಾರ ರಚಿಸಿದ್ದನ್ನು ಹಾಗೂ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಳ್ಳುವುದನ್ನು ವಿರೋಧಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯು ಮುಸ್ಲಿಮರು ಮತ್ತು ಕ್ರೈಸ್ತರನ್ನು ಗುರಿಯಾಗಿಟ್ಟುಕೊಂಡ ಹುನ್ನಾರ. ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಆಕ್ರೋಶವಿರುವುದರಿಂದ ಹಿಂದುತ್ವದ ಪ್ರತಿಪಾದನೆ ಮೂಲಕ ಮತಗಳಿಸುವ ಪ್ರಯತ್ನಕ್ಕೆ ನಡೆದಿದೆ ಎಂದು ಅವರು ಆರೋಪಿಸಿದರು. ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇ ನಮ್ಮ ಸರ್ಕಾರ. ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಡಿ.ಕೆ.ಶಿವಕುಮಾರ್ ಜತೆ ನಾನೂ ಪಾದಯಾತ್ರೆಗೆ ಹೋಗುತ್ತೇನೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಹೇಳುತ್ತಾರಷ್ಟೇ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಗಿಡಗಂಟೆಗಳ ಮಧ್ಯೆ ಮುಚ್ಚಿ ಹೋದ ಸ್ಥಿತಿಯಲ್ಲಿದ್ದ ಬಗ್ಗೆ ‘ನಮ್ಮ ತುಮಕೂರು.ಕಾಂ’ ವರದಿ ಪ್ರಕಟಿಸಿತ್ತು. ವರದಿ ಪ್ರಕಟಿಸಿ ಕೇವಲ ಎರಡೇ ದಿನದಲ್ಲಿ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧಿಕಾರಿಗಳು ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ ನೀಡಿದ್ದಾರೆ. “ಗಿಡಗಂಟಿಗಳ ಮಧ್ಯೆ ‘ಕಾಣದಂತೆ ಮಾಯವಾದ ಅಂಬೇಡ್ಕರ್ ಭವನ’” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಇಲ್ಲಿನ ಅಂಬೇಡ್ಕರ್ ಭವನದ ದುಸ್ಥಿತಿಯನ್ನು ತೆರೆದಿಟ್ಟಿದ್ದು, ಈ ವರದಿ ಪ್ರಕಟಗೊಂಡ ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ಜೆಸಿಬಿ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಿ, ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಎನ್.ಮೂರ್ತಿ ಸ್ಥಾಪಿತ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಗ್ಗಾವೆ ಪುಟ್ಟಸ್ವಾಮಿ, ನ್ಯಾಯದ ಪರವಾಗಿ ಹೋರಾಟ ಮಾಡಿ, ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ ನಮ್ಮ ತುಮಕೂರು.ಕಾಂ ಮಾಧ್ಯಮಕ್ಕೆ ನಮ್ಮ ಸಮುದಾಯ ಹಾಗೂ ಸಂಘಟನೆ ಎಂದೆಂದಿಗೂ ಆಭಾರಿಯಾಗಿದ್ದೇವೆ ಎಂದು ಧನ್ಯವಾದಗಳನ್ನು ತಿಳಿಸಿದರು. ವರದಿ: ಮಂಜು…
ತುರುವೇಕೆರೆ: ಪ್ರಯಾಣಿಕರ ಪ್ರಾಣ ತೆಗೆಯುತ್ತಿದ್ದ ಗಿಡಗಂಟಿಗಳ ತೆರವು: ಪಂಚಾಯತ್ ನ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಬಳಿ ಹಾದು ಹೋಗುವ ಚಾಮರಾಜನಗರ , ಜೀವರ್ಗಿ ರಾಷ್ಟ್ರೀಯ ಹೆದ್ದಾರಿ 150 A ರಲ್ಲಿ ಮಾಯಸಂದ್ರ, ಟಿ.ಬಿ.ಕ್ರಾಸ್ ನ ಮಧ್ಯದಲ್ಲಿ ಚೆಕ್ ಪೋಸ್ಟ್ ನಿಂದ ಟಿ.ಬಿ.ಕ್ರಾಸ್ ಕಾಲುವೆಯವರೆವಿಗೂ ಆಳೆತ್ತರದ ಗಿಡಗಂಟಿ ಬೆಳೆದು ನಿಂತಿದ್ದು, ಸಾರ್ವಜನಿಕರ ಹಿತಾ ದೃಷ್ಟಿಯಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಮತ್ತು ಸದಸ್ಯರು ಸ್ವಂತ ಖರ್ಚಿಯಿಂದ ದುರಸ್ತಿಗೊಳಿಸಿದ್ದಾರೆ. ಗಿಡಗಂಟಿಗಳು ಬೆಳೆದು ನಿಂತ ಪರಿಣಾಮ ಎದುರಿನಿಂದ ಬರುತ್ತಿರುವ ವಾಹನಗಳು ಕಾಣದೇ ಇಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದವು. ಈ ಸಂಬಂಧ ಈ ಭಾಗದ ಶಾಸಕರು, ಜನಪ್ರತಿನಿಧಿಗಳಿಗೆ ಸಾರ್ವಜನಿಕರು ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಸಂಬಂಧ ಸ್ಥಳೀಯ ಸೊರವನಹಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಜಾಬೀರ್ ಹುಸೇನ್ ಮತ್ತು ಉಪಾಧ್ಯಕ್ಷೆ ಶಶಿಕಲಾ ಹನುಮೇಗೌಡ ಮತ್ತು ಸದಸ್ಯರೆಲ್ಲ ಒಟ್ಟುಗೂಡಿ ಸಮಾಲೋಚನೆ ನಡೆದಿ ಕೊನೆಗೆ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ಅಡ್ಡಲಾಗಿರುವ ಗಿಡಗಳನ್ನು ಹಿಟಾಚಿ ಸಹಾಯದಿಂದ …
ತುಮಕೂರು: ಕೆ.ಎಸ್.ಆರ್.ಟಿ.ಸಿ. ವಿಭಾಗದ ತುರುವೇಕೆರೆ ಘಟಕದ ಬಸ್ ನಿಲ್ದಾಣದಲ್ಲಿ ಸಂವಿಧಾನ ಶಿಲ್ಪಿ.ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿಬ್ಬಾಣ ದಿನ ನಮನ ಕಾರ್ಯಕ್ರಮ ನಡೆಸಲಾಯಿತು. ಬಸ್ ನಿಲ್ದಾಣದ ಮುಂಬಾಗಿಲಿನಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ಕಾಯಕ್ರಮದಲ್ಲಿ ಘಟಕದ ವ್ಯವಸ್ಥಾಪಕರಾದ ತಮ್ಮಯ್ಯ ಸಂಚಾರ ನಿರೀಕ್ಷಕರಾದ ಶ್ವೇತ, ಘಟಕದ ಎಸ್ಸಿ, ಎಸ್ಟಿ ಅಧ್ಯಕ್ಷರಾದ ಗಂಗಾಧರ್ ಬಿ.ವಿಭಾಗಮಟ್ಟದ ಪ್ರಧಾನಕಾರ್ಯದರ್ಶಿ ಡಿ.ಸಿ.ವನರಂಗಪ್ಪ,ಹಿರಿಯ ಉಪಾಧ್ಯಕ್ಷರಾದ ಜಗಣ್ಣ, ಜಂಟಿ ಕಾರ್ಯದರ್ಶಿಯಾದ ಚಂದ್ರಶೇಖರ್ ಹಾಗೂ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವಾಯುಸೇನೆ ಅಧಿಕೃತವಾಗಿ ತಿಳಿಸಿವೆ. ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಉಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಎಲ್ಲಾ 14 ಮಂದಿ ಮೃತಪಟ್ಟಿದ್ದಾರೆ ಎಂದು ಸದ್ಯದ ವರದಿಗಳ ಪ್ರಕಾರ ತಿಳಿದು ಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ನವದೆಹಲಿ: LPG ಸಿಲಿಂಡರ್ಗಳು ಭಾರವಾಗಿರುವುದರಿಂದ ಮತ್ತು ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುವುದರಿಂದ, ಸರ್ಕಾರವು ಶೀಘ್ರದಲ್ಲೇ ಅವುಗಳ ತೂಕವನ್ನು ಕಡಿಮೆ ಮಾಡಬಹುದು. ಅದರಲ್ಲೂ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಮೇಲೆತ್ತಲು ಮತ್ತು ಸಾಗಿಸಲು ತೊಂದರೆಯಾಗುತ್ತಿದೆ. ಸಿಲಿಂಡರ್ ತೂಕ ಕಡಿಮೆಯಾದರೆ ಜನಸಾಮಾನ್ಯರು ಕೊಂಡೊಯ್ಯುವುದು ಸುಲಭ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಸಿಂಗ್ ಕಲಾಪದಲ್ಲಿ ತಿಳಿಸಿದರು. ಜನರ ಅನುಕೂಲಕ್ಕಾಗಿ ಗ್ಯಾಸ್ ಸಿಲಿಂಡರ್ ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಕೆಲವೊಮ್ಮೆ ಸಮಸ್ಯೆಯಾಗುತ್ತದೆ. ಆದಕ್ಕಾಗಿ ಶೀಘ್ರದಲ್ಲೇ ಸರ್ಕಾರ ಎಲ್ ಪಿಜಿ ಸಿಲಿಂಡರ್ಗಳ ಬೆಲೆಯನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದರು. 14.2 ಕೆಜಿ ಗೃಹಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್ಗಳ ತೂಕವು ಅದರ ಸಾಗಣೆಯಲ್ಲಿ ಸಮಸ್ಯೆಗೆ ಕಾರಣವಾಗುತ್ತದೆ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ತನ್ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್…
ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶೀಘ್ರದಲ್ಲೇ ಪ್ರಮುಖ ಘೋಷಣೆ ಮಾಡುವ ನಿರೀಕ್ಷೆಯಿದೆ. ಅಂತಾರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಜೊತೆಗೆ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೂ ವಿದಾಯ ಹೇಳಲು ಭಜ್ಜಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಭಜ್ಜಿ ಕ್ರಿಕೆಟ್ ನಿಂದ ನಿವೃತ್ತಿಯಾದ ನಂತರ ಐಪಿಎಲ್ ನಲ್ಲಿ ಪ್ರಮುಖ ತಂಡದ ಬೌಲಿಂಗ್ ಕೋಚ್ ಅಥವಾ ಮೆಂಟರ್ ಆಗಿ ಕಾರ್ಯ ನಿರ್ವಹಿಸುವ ಸಾಧ್ಯತೆಗಳಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ ಬಳಿಕ ಹರ್ಭಜನ್ ಸಿಂಗ್ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರಂತೆ. ಮೂಲಗಳ ಪ್ರಕಾರ , ಭಜ್ಜಿ ಈ ಐಪಿಎಲ್ ನಿಂದಲೇ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ. ಹರ್ಭಜನ್ ಸಿಂಗ್ ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗಳು ಭಾರಿ ಆಫರ್ ನೀಡಿವೆಯಂತೆ. ಮೆಗಾ ಹರಾಜು ಪ್ರಕ್ರಿಯೆ ಮುಗಿದ ಬಳಿಕ ಭಜ್ಜಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಭಾರತದಲ್ಲಿ ಆಯೋಜಿಸಿದ್ದ 2021…
ಕಲಬುರಗಿ: ಮರಳಿನಲ್ಲಿ ಎರಡು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ನಗರದ ಫಿರ್ದೋಸ್ ನಗರ ಬಡಾವಣೆಯ ಸುಣ್ಣದ ಬಟ್ಟಿಯ ಬಳಿಯ ನಿರ್ಮಾಣ ಹಂತದ ಕಟ್ಟಡದ ಬಳಿ ನಡೆದಿದೆ. 2 ವರ್ಷದ ಮಹ್ಮದ್ ಮುಝಾಮೀಲ್ ಮೃತ ದುರ್ದೈವಿ ಬಾಲಕ ಎಂದು ಗುರುತಿಸಲಾಗಿದೆ. ಮಹ್ಮದ್ ಮುಝಾಮೀಲ್ ನಿನ್ನೆ ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮರಳಿನ ಗುಡ್ಡೆಯಿಂದ ಕಾರ್ಮಿಕರು ಮರಳು ತೆಗೆಯುವ ವೇಳೆ ಬಾಲಕನ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹ ಇಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಆಂಟೋನಿ, ಬೇಗೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700