Subscribe to Updates
Get the latest creative news from FooBar about art, design and business.
- ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
- ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
- ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
- ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
- ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
- ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
Author: admin
ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕನ ಪತ್ತೆಗೆ ಭಾನುವಾರ ಎನ್.ಡಿ.ಆರ್.ಎಫ್ ತಂಡ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ಸಂಜೆ ನಗರದ ಗುಬ್ಬಿ ಗೇಟ್ ರಿಂಗ್ ರಸ್ತೆಯಲ್ಲಿ ಮಳೆ ನೀರಿನ ಫೋಟೋ ತೆಗೆಯುತ್ತಿದ್ದ ಆಟೋ ಚಾಲಕ ಅಮ್ಜದ್ ರಾಜಕಾಲುವೆಗೆ ಬಿದ್ದು ಕೊಚ್ಚಿ ಹೋಗಿದ್ದನು. ಬಳಿಕ ಆತನ ಪತ್ತೆಗೆ ಸ್ಥಳೀಯ ಅಗ್ನಿಶಾಮಕ ದಳ ಹಾಗೂ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿದ್ದರಾದರೂ ಆತನ ಸುಳಿವು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆಗೆ ಎನ್.ಡಿ.ಆರ್.ಎಫ್ ತಂಡದ ಮೊರೆ ಹೋಗಲಾಗಿದೆ. 6 ಗಂಟೆಗೆ ಆರಂಭ; ಭಾನುವಾರ ಬೆಳಗ್ಗೆ 6 ಗಂಟೆಗೆ ಅಮ್ಜದ್ ಪತ್ತೆ ಕಾರ್ಯಾಚರಣೆಯನ್ನು ಎನ್.ಡಿ.ಆರ್.ಎಫ್ ತಂಡ ಆರಂಭಿಸಿದೆ. ಬೆಂಗಳೂರಿನಿಂದ ಬಂದಿರುವ ತಂಡದಿಂದ ರಿಂಗ್ ರಸ್ತೆಯ ರಾಜಕಾಲುವೆಯಲ್ಲಿ ಹುಡುಕಾಟ ನಡೆದಿದೆ. ಆದರೆ ಈವರೆಗೆ ಅಮ್ಜದ್ ಪತ್ತೆಯಾಗಿಲ್ಲ. ಸ್ಥಳದಲ್ಲೇ ಮೊಕ್ಕಾಂ; ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಕಾರ್ಯಾಚರಣೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಅಮ್ಜದ್ ಪತ್ನಿ ಹಾಗೂ ಕುಟುಂಬ ಸದಸ್ಯರು ಕೂಡ ಕಾರ್ಯಾಚರಣೆ ಸ್ಥಳದಲ್ಲಿ ಹಾಜರಿದ್ದಾರೆ. ವರದಿ…
ತುಮಕೂರು: ಶಿಕ್ಷಕಿಯರ ಮನಸ್ತಾಪದಿಂದ ಬೇಸತ್ತ ಗ್ರಾಮಸ್ಥರು ಶಾಲೆಗೆ ಬೀಗ ಜಡಿದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಪ್ರತಿದಿನವೂ ಶಾಲೆಗೆ ತಡವಾಗಿ ಬರುವ ಗಂಗಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ಅವರಿಗೆ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ಮಕ್ಕಳಿಗೆ ಪಾಠ ಮಾಡದೇ ಸದಾ ಪರಸ್ಪರ ಜಗಳವಾಡುತ್ತಿರುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವೈಯಕ್ತಿಕ ವಿಚಾರಗಳು ಸೇರಿದಂತೆ ಶಾಲೆಗೆ ತಡವಾಗಿ ಬರುವ ವಿಚಾರಕ್ಕೆ ಜಗಳವಾಡುತ್ತಾರೆ ಎನ್ನಲಾಗಿದೆ. ಸಹಶಿಕ್ಷಕಿಯರ ಜಗಳ ನೋಡಲಾರದೇ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಶಾಲೆಗೆ ತುಮಕೂರು ಬಿಇಒ ಹನುಮನಾಯಕ್ ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಶುಕ್ರವಾರ ರಾತ್ರಿ ಕಬ್ಬೇಪುರ ಹಾಡಿಯ ಆಶ್ರಾಮ ಶಾಲೆಯಲ್ಲಿ ವ್ಯಾಸ್ತವ್ಯ ಹೂಡಿದರು. ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಿ ನಂತರ ಶಾಸಕರ ಜೊತೆಗೂಡಿ ಮೊಳೆಯೂರು ಗ್ರಾಮದ ಶಾಲೆಯಲ್ಲಿ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಮತ್ತು ಶಾಸಕರು ಅನೀಲ್ ಚಿಕ್ಕಮಾದು ಗಣ್ಯರು ಜೊತೆಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಗ್ರಾಪಂ ಅಧ್ಯಕ್ಷ ರು ರೂಪಾಬಾಯಿ ಉಪಾಧ್ಯಕ್ಷ ದೇವದಾಸ್ ಬೆಟ್ಟಸ್ವಾಮಿ ಸದಸ್ಯರು ಸಾಥ್ ನೀಡಿದರು. ಆ ಗ್ರಾಮದಲ್ಲಿ ಮಳೆಯಿಂದ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ರಸ್ತೆಗಳು ಅಳಗುಂಡಿ ಇರುವುದನ್ನು ಗಮನಿಸಿ ಪಂಚಾಯಿತಿ ಅಧಿಕಾರಿಗಳಿಗೆ ನರೇಗಾಯಡಿ ಕಾಮಗಾರಿ ಮಾಡಲು ಸೂಚನೆ ನೀಡಿದರು. ಸರಗೂರು ತಾಲ್ಲೂಕಿನ ಬಿ ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಳೆಯೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಹಲವು ಅರ್ಜಿಗಳನ್ನು ಸ್ವೀಕರಿಸಿದರು. ಮತ್ತು ಸಮಸ್ಯೆಗಳಿಗೆ…
ನವದೆಹಲಿ: ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದೀಗ ಈ ವರ್ಷ ಗ್ರಾಹಕರನ್ನು ಇಂತಹ ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 2.5 ಲಕ್ಷ ಟನ್ ಈರುಳ್ಳಿ ಸಂಗ್ರಹಿಸಲಾಗಿದ್ದು, ಈರುಳ್ಳಿಯ ಸಮರ್ಪಕ ಪೂರೈಕೆ ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 2022 -23ನೇ ಆರ್ಥಿಕ ವರ್ಷದಲ್ಲಿ 2.5 ಲಕ್ಷ ಪ್ರಮಾಣದ ಈರುಳ್ಳಿ ಸಂಗ್ರಹಿಸಿದೆ. ಇದುವರೆಗೆ ಸರ್ಕಾರ ಸಂಗ್ರಹಿಸಿದ ದಾಖಲೆಯ ಗರಿಷ್ಠ ಪ್ರಮಾಣ ಇದಾಗಿದೆ. ಆಗಸ್ಟ್ ನಿಂದ ಡಿಸೆಂಬರ್ ವರೆಗೆ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗಿ ದರ ಏರಿಕೆಯಾಗುತ್ತದೆ. ಈ ಬಾರಿ ಸರ್ಕಾರ ಬೆಲೆ ಏರಿಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಾಸನ: ತೆಪ್ಪ ಮಗುಚಿ ಇಬ್ಬರು ಜಲಸಮಾಧಿಯಾಗಿರುವ ಘಟನೆ ಹಾಸನ ತಾಲೂಕು, ದುದ್ದ ಹೋಬಳಿ ತಿಮ್ಲಾಪುರದಲ್ಲಿ ಶನಿವಾರ ಸಂಭವಿಸಿದೆ. ಮೀನು ಹಿಡಿಯಲು ಹೋದ ವೇಳೆ ತೆಪ್ಪ ಮಗುಚಿ ಬಿದ್ದಿದ್ದು, ಭಾರಿ ಮಳೆ ನಡುವೆ ಕೆರೆಯಲ್ಲಿ ಮೀನು ಹಿಡಿಯಲು ಮೂವರು ಹೋಗಿದ್ದರು ಎನ್ನಲಾಗಿದೆ. ಕಿಶೋರ್ ಎಂಬವರು ಕೆರೆಯಲ್ಲಿ ಮೀನು ಸಾಕಿದ್ದು, ಸ್ನೇಹಿತರೊಂದಿಗೆ ಕೆರೆಗೆ ತೆಪ್ಪದಲ್ಲಿ ತೆರಳಿದ್ದರು. ಭಾರೀ ಮಳೆಯ ನಡುವೆಯೂ ಮೀನು ಹಿಡಿಯಲು ತೆರಳಿದ ವೇಳೆ ಈ ದುರಂತ ಸಂಭವಿಸಿದೆ. ಕಿಶೋರ್ ಅವರ ಮೃತದೇಹ ಪತ್ತೆಯಾಗಿದ್ದು, ರಾಜಣ್ಣ ಎಂಬವರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಜುಲೈ ದೇಶದಲ್ಲಿ ಇಂಧನದ ಅಬಾಧತೆಯನ್ನು ತಪ್ಪಿಸುವ ಸಲುವಾಗಿ ಕಾರುಗಳ ತಯಾರಿಕೆಯಲ್ಲಿ ಪರ್ಯಾಯ ಸಂಶೋಧನೆ ನಡೆದಿದ್ದು ಈ ಹಿನ್ನೆಲೆಯಲ್ಲಿ ಟಾಟಾ ಕಂಪನಿ ವತಿಯಿಂದ ಪರಿಸರ ಸ್ನೇಹಿಯಾಗಿರುವ ಟಾಟಾ ಟಿಗೋರ್ ಇವಿ ಮತ್ತು ಟಾಟಾ ನೆಕ್ಸಾನ್ ಇವಿ ಎಂಬ ನೂತನ ಕಾರನ್ನು ತುಮಕೂರು ನಗರದ ಬಿ.ಹೆಚ್.ರಸ್ತೆ, ಬಂಡಿಮನೆ ಕಲ್ಯಾಣ ಮಂಟಪ ಪಕ್ಕದಲ್ಲಿರುವ ಶ್ರೀ ಆಟೋ ಕಾರ್ ಷೋರೂಮ್ ನಲ್ಲಿ ಇಂದು ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ ಅವರು ಮಾತನಾಡಿ, ನಮ್ಮ ದೇಶದಲ್ಲೇ ತಯಾರಾಗುತ್ತಿರುವ ಈ ಕಾರುಗಳು ವಿಶ್ವಕ್ಕೆ ಮಾದರಿಯಾಗಲಿವೆ ಎಂದು ಹೇಳಿದರಲ್ಲದೇ, ಮುಂದಿನ ದಿನಗಳಲ್ಲಿ ಈ ಕಾರುಗಳನ್ನೇ ಎಲ್ಲಾ ಜನರು ಬಳಕೆ ಮಾಡಲು ಮುಂದಾಗುತ್ತಾರೆಂದು ತಿಳಿಸಿದರು, ಅಲ್ಲದೇ ನಮ್ಮ ತುಮಕೂರಿನಲ್ಲಿ ಈ ಕಾರುಗಳನ್ನು ಲೋಕಾರ್ಪಣೆಗೊಳ್ಳುತ್ತಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆಂದು ತಿಳಿಸಿದರು. ಇನ್ನು ಈ ಕಾರುಗಳು ಸಂಪೂರ್ಣ ವಿದ್ಯುತ್ ಚಾಲಿತ ಕಾರುಗಳಾಗಿದ್ದು, ಸದ್ಯಕ್ಕೆ ತುಮಕೂರಿನ ಶ್ರೀಆಟೋ (ಟಾಟಾ ಷೋರೂಂ)ನಲ್ಲಿ ಮತ್ತು ಹಿರೇಹಳ್ಳಿ ಸಮೀಪದಲ್ಲಿ ಚಾರ್ಜಿಂಗ್ ಯೂನಿಟ್ಗಳಿದ್ದು, ಸದ್ಯದಲ್ಲಿಯೇ ತುಮಕೂರಿನ…
ತುಮಕೂರು: ರೈಲ್ವೇ ಅಂಡರ್ ಪಾಸ್ ನಲ್ಲಿ ತುಂಬಿದ್ದ ನೀರಿನ ಫೋಟೋ ತೆಗೆಯುತ್ತಿದ್ದ ವೇಳೆ ಆಟೋ ಚಾಲಕರೊಬ್ಬರು ಕಾಲು ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿ ಕೊಂಡು ಹೋದ ಘಟನೆ ಶನಿವಾರ ನಗರದ ಹೆಗಡೆ ಕಾಲೊನಿ ರೈಲ್ವೆ ಅಂಡರ್ ಪಾಸ್ ಸಮೀಪ ನಡೆದಿದೆ. ಶಾಂತಿನಗರದ ಚಾಲಕ ಅಮ್ಜದ್ ಖಾನ್ (44) ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾದವರಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ದಾನ ಪ್ಯಾಲೇಸ್ ಕಡೆಯಿಂದ ಗುಬ್ಬಿಗೇಟ್ ಕಡೆಗೆ ತೆರಳುತ್ತಿದ್ದ ಆಟೊವನ್ನು ಚಾಲಕ ಅಮ್ಜದ್ ರೈಲ್ವೆ ಅಂಡರ್ ಪಾಸ್ ಸಮೀಪ ನಿಲ್ಲಿಸಿದ್ದಾರೆ. ಅದೇ ವೇಳೆ ಸುರಿದ ಜೋರು ಮಳೆಗೆ ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡಿದೆ. ನೀರು ನಿಂತಿರುವ ಫೋಟೊ ತೆಗೆಯುವ ಸಮಯದಲ್ಲಿ ಮೊಬೈಲ್ ಜಾರಿ ಬಿದ್ದಿದ್ದು, ಅದನ್ನು ತೆಗೆದುಕೊಳ್ಳಲು ನೀರಿಗೆ ಇಳಿದಿದ್ದಾರೆ. ಮೊಬೈಲ್ ಹುಡುಕಾಡುತ್ತಲೇ ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಗುಬ್ಬಿ: ಗುಬ್ಬಿ ಶಾಸಕ ಎಸ್.ಆರ್.ಶ್ರೀ ನಿವಾಸ್ ಬಿಜೆಪಿ ಪಕ್ಷಕ್ಕೆ ಬಂದರೆ ನಾನು ಸ್ವಾಗತಿಸಲು ಸಿದ್ದರಿದ್ದೇವೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಮ್ ವಿಶ್ವಾಸ ವ್ಯಕ್ತಪಡಿಸಿದರು. ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಮಳೆಕಲ್ಲಹಳ್ಳಿ, ಪೆದ್ದನಹಳ್ಳಿ, ಕೆ ಮತ್ತಿಘಟ್ಟ . ಕಲ್ಲೂರು ಕ್ರಾಸ್ ಮತ್ತು ಸಿ.ಎಸ್.ಪುರ ಹೋಬಳಿಯ ಯರನಹಟ್ಟಿ, ಮತ್ತು ಜನ್ನೇನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಕೆ ಆರ್ ಐ ಡಿ ಎಲ್ ವತಿಯಿಂದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು, ಇಂದು ಹಿಂದುಳಿದ ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ 2.75 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ನೇರವೆರಿಸಿದ್ದು, ಸಾಕಷ್ಟು ಗ್ರಾಮಗಳಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿವೆ. 240 ಹಳ್ಳಿಗಳ ಅಭಿವೃದ್ಧಿ ಗೆ 36 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಪುನಃ ಮತ್ತಷ್ಟು ಗ್ರಾಮಗಳ ಅಭಿವೃದ್ಧಿ 15 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಕಾಮಗಾರಿ ಬಾಕಿಉಳಿದಿದ್ದೇಯೋ ಅಂತ…
ತಿಪಟೂರು: ಮಾಜಿ ಜಿಲ್ಲಾ ಪರಿಷತ್ ಸದಸ್ಯ ಎಚ್. ಗಂಗಾಧರ್ ಹಾಲ್ಕುರಿಕೆ ವಯೋ ಸಹಜದಿಂದ ಮರಣ ಹೊಂದಿದ್ದಾರೆ. 1984 ರಲ್ಲಿ ನಡೆದ ಹಾಲ್ಕುರಿಕೆ ಕ್ಷೇತ್ರದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹೆಚ್ ಪಿ ಗಂಗಾಧರಪ್ಪ ವಿರುದ್ಧ ಇವರು ಸ್ಪರ್ಧೆ ಮಾಡಿ ಜಿಲ್ಲಾ ಪರಿಷತ್ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದರು. ಒಮ್ಮೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದು, ಮುಜರಾಯಿ ಇಲಾಖೆಯ ಪಾರ್ತೆಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ 30 ವರ್ಷಗಳ ಕಾಲ ಕನ್ವಿಯಾರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತವಾಗಿ ಹೆಚ್ ಸಿಎಂಜಿ ಕಾಲೇಜಿನ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮತ್ತು ಸಾಧು ವೀರಶೈವ ಸಮಾಜ ಮುಖಂಡರಾಗಿದ್ದಾರೆ. ಇವರು ಇಬ್ಬರು ಗಂಡು ಮಕ್ಕಳು ಓರ್ವ ಪುತ್ರಿಯನ್ನು ಅಗಲಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ಗಳಲ್ಲಿ ವಿಡಿಯೋ ತೆಗೆಯುವುದನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗಿದ್ದರೂ, ಅನೇಕ ಚರ್ಚೆಗಳಿಗೆ ಕಾರಣವಾಗಿದ್ದು, ಸರ್ಕಾರ ಅಧಿಕಾರಿ ಸ್ನೇಹಿಯೋ, ಜನ ಸ್ನೇಹಿಯೋ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ದರ್ಪ, ದಬ್ಬಾಳಿಕೆ, ಲಂಚಾವತಾಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದು, ಇದರಿಂದಾಗಿ ಹಲವಾರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ. ಹಲವರ ಅಮಾನತು ಕೂಡ ಆಗಿವೆ. ಇದೇ ಕಾರಣಕ್ಕೆ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಲ್ಲಿ ಚಿತ್ರೀಕರಿಸುವಂತಿಲ್ಲ ಎನ್ನುವ ನಿಯಮವನ್ನು ಹೇರಿದೆ. ಈ ಆದೇಶವನ್ನು ಹೊರಡಿಸಿದ್ದು ಯಾಕೆ ಎನ್ನುವುದರ ಹಿಂದಿನ ಕಾರಣ ಬಯಲಾಗಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಆದೇಶವನ್ನು ಹೊರಡಿಸಿ ತಡ ರಾತ್ರಿ ವಾಪಸ್ ಪಡೆದುಕೊಂಡಿದೆ. ಈ ಆದೇಶವನ್ನು ಹೊರಡಿಸಿದ್ದರ ಹಿಂದಿನ ಉದ್ದೇಶ ಏನು? ಒಂದು ಜವಾಬ್ದಾರಿಯುತ ಸರ್ಕಾರ, ಒಂದು ಆದೇಶವನ್ನು ಹೊರಡಿಸುವ ಮೊದಲು ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸದೇ ಏಕಾಏಕಿ ಆದೇಶ ಹೊರಡಿಸುವುದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.…