Subscribe to Updates
Get the latest creative news from FooBar about art, design and business.
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
- ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
- ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
- ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
Author: admin
ಪಾವಗಡ: ತಾಲೂಕು ನಿಡಗಲ್ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಮಂಗಳವಾಡ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿ ಹಾಗೂ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಂ ಜನ್ಮದಿನಾಚರಣೆಯನ್ನು ನಾಡಕಛೇರಿ ಮುಂಭಾಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕಳಸ ಹೊತ್ತ ಮಹಿಳೆಯರು, ಕುಣಿತ , ತಮಟೆ, ವಾದ್ಯಗಳು ವಿಶೇಷವಾಗಿ ಗಮನ ಸೆಳೆದವು. ಶಾಸಕ ವೆಂಕಟರವಣಪ್ಪ ಹಾಗೂ ಗಣ್ಯರು ಅಂಬೇಡ್ಕರ್ ಹಾಗೂ ಬುದ್ಧರ ಚಿತ್ರಕ್ಕೆ ಬಣ್ಣ ನೀಡಿ ಮೂಡಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕ ವೆಂಕಟರಮಣಪ್ಪ , ಮಂಗಳವಾಡ ಗ್ರಾಮದ ಅಂಬೇಡ್ಕರ್ ಯುವಕ ಸಂಘದ ಯುವಕರು ಬಹಳ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ನಡೆಸಿದರು. ನನಗೆ ಬಹಳ ಸಂತೋಷವಾಗಿದೆ. ಅಂಬೇಡ್ಕರ್ ಸಂವಿಧಾನ ಕೊಡದಿದ್ದರೆ ನಾವು ಜಾಗದಲ್ಲಿ ಬಂದು ಭಾಷಣ ಮಾಡುತ್ತಿರಲಿಲ್ಲ. ಅಂಬೇಡ್ಕರ್ ಸಂವಿಧಾನ ಕೊಟ್ಟಿರುವುದು ನಮಗೆ ಧೈರ್ಯವಾಗಿ ನಿಂತುಕೊಂಡು ಮಾತನಾಡಬಹುದು ಎಂದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಬಸವಲಿಂಗಪ್ಪ ಮಾತನಾಡಿ, ಅಂಬೇಡ್ಕರ್ ಬಗ್ಗೆ…
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ 400 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಪಿಂಜಾರ ನದಾಫ್ ಜನಾಂಗದ ಅಧ್ಯಕ್ಷರಾದ ಅಬ್ದುಲ್ ಬಶೀರ್, ಸರ್ಕಾರದಿಂದ ಸುಮಾರು 25 ಜನಾಂಗದವರಿಗೆ 400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವುದು ತುಂಬಾ ಸಂತೋಷವಾಗಿದೆ. ಆದರೆ ಈವರೆಗೆ ನಮ್ಮ ನದಾಫ್ ಪಿಂಜಾರ ಜನಾಂಗ ನಮ್ಮ ಜಿಲ್ಲೆಯಲ್ಲಿ ನೋಂದಣಿಯಾಗಿಲ್ಲ ಹಾಗೂ ನಮ್ಮ ನದಾಫ್ ಪಿಂಜಾರ ಜನಾಂಗಕ್ಕೆ ಸರ್ಟಿಫಿಕೇಟ್ ಕೊಡಿ ಎಂದರೆ ಮೂಲ ದಾಖಲಾತಿಗಳನ್ನು ಕೇಳುತ್ತಾರೆ ಎಂದರು. ನಾವು ಪಿಂಜಾರ ನದಾಫ್ ಜಾತಿಯಾಗಿ ಸರ್ಕಾರದ ಅನುಕೂಲ ಪಡೆಯಲು ಆಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಗಮನಕ್ಕೆ ಹಲವು ಬಾರಿ ತಂದರೂ ಸಹ ನಮಗೆ ಯಾವುದೇ ಪ್ರಯೋಜನ ಆಗಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದರು. ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ತಿಪಟೂರು: ದಲಿತರು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಯಲ್ಲಿ ಬದುಕಿದಾಗ ಸಮುದಾಯಕ್ಕಾಗಿ ಹೋರಾಡಿದ ಮಹನೀಯರ ಶ್ರಮಕ್ಕೆ ಸಾರ್ಥಕ ಫಲದೊರೆತಂತೆ ಎಂದು ಪ್ರಾಥಮಿಕ ಹಾಗೂ ಪ್ರೌಡಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟಿಸಿದ ಅವರು, ಪ್ರಸ್ತುತ ದಲಿತರಲ್ಲಿ ಸ್ವಾಭಿಮಾನದ ಬದುಕಿಗೆ ಶಿಕ್ಷಣ ಶಕ್ತಿ ನೀಡುತ್ತದೆ. ತಾವೂ ಶ್ರಮಪಟ್ಟು ಬದುಕುವ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದ ಅವರು ಸರ್ಕಾರ ಶೋಷಿತರು ಹಾಗೂ ತುಳಿತಕ್ಕೋಳಗಾದವರಿಗೆ ನೆರವಾಗುವ ಅಂತೋದಯದ ಆಶಯದೊಂದಿಗೆ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಎಲ್ಲರೂ ಚೌಟ್ರಿಗಳಲ್ಲಿ ಮದುವೆ ಮುಂಜ್ಜಿ ಶುಭಕಾರ್ಯಗಳನ್ನ ಮಾಡಲು ಶಕ್ತಿ ಇರುವುದಿಲ್ಲ ಸಮಾಜದಲ್ಲಿ ಸಣ್ಣ ಪುಟ್ಟ ಸಮುದಾಯಗಳನ್ನ ಗುರ್ತಿಸಿ ಸಮುದಾಯ ಭವನಗಳ ನಿರ್ಮಾಣ ಮಾಡಿಕೊಡುವ ಮೂಲಕ ಸಮುದಾಯದ ಚಟುವಟಿಕೆಗಳಿಗೆ ನೆರವಾಗುತ್ತಿದೆ ಎಂದರು. ತಾಲೂಕಿನ ಬಹುತೇಕ ಪರಿಶಿಷ್ಠ ಜಾತಿ ಹಾಗೂ ವರ್ಗಗಳ ಸಮುದಾಯಗಳಿಗೆ ಸಮುದಾಯ ಭವನಕ್ಕೆ ಅನುದಾನ ನೀಡಲಾಗಿದೆ. ಕೆಲವು ಗ್ರಾಮಗಳಲ್ಲಿ ಭವನಗಳು ನಿರ್ಮಾಣವಾಗಿ ಸಾರ್ವಜನಿಕ ಉಪಯೋಗಕ್ಕೆ ದೊರೆತಿವೆ. ಇನ್ನೂ…
ಗುಬ್ಬಿ: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ದ ಅಳಿಲಘಟ್ಟ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿಯ ಬ್ರಹ್ಮ ರಥೋತ್ಸವ ಶನಿವಾರ ಸಾವಿರಾರು ಭಕ್ತರ ನಡುವೆ ವೈಭವದಿಂದ ಜರುಗಿತು. ಬೆಳಿಗ್ಗೆ ದೇವಾಲಯದಲ್ಲಿ ಸ್ವಾಮಿಯವರಿಗೆ ಅಭಿಷೇಕ, ಸುಪ್ರಭಾತಸೇವೆ, ಪಂಚಾಮೃತ ಸೇವೆ, ವಿಶೇಷ ಅಲಂಕಾರ ಮಾಡಲಾಯಿತು. ಸಾಗಸಂದ್ರ ಶ್ರೀ ಕೆಂಪಮ್ಮ ದೇವಿಯ ಆಗಮನದೊಂದಿಗೆ ಬ್ರಹ್ಮ ರಥೋತ್ಸವಕ್ಕೆ ಲಕ್ಷ್ಮೀವೆಂಕಟರಮಣಸ್ವಾಮಿ ಹಾಗೂ ಶ್ರೀ ಕೆಂಪಮ್ಮ ದೇವಿಯ ಉತ್ಸವದೊಂದಿಗೆ ರಥೋತ್ಸವಕ್ಕೆ ಆಗಮಿಸಿದವು. ರಥೋತ್ಸವದಲ್ಲಿ ಹೋಮ ಪುಜಾ ಕಾರ್ಯಕ್ರಮಗಳು ಜರುಗಿದವು ನಂತರ ಮಧ್ಯಾಹ್ನ 1ಗಂಟೆಗೆ ಸ್ವಾಮಿಯ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು. ಕೋವಿಡ್ ನಿಂದ ಎರಡು ವರ್ಷ ಸ್ವಾಮಿಯ ಜಾತ್ರೆ ಸರಳವಾಗಿ ನಡೆಯುತ್ತು.ಈ ಭಾರಿ ಅದ್ದೂರಿಯಾಗಿ ಭಕ್ತರು ಸೇರಿ ಜಾತ್ರೆ ಮಾಡಿದರು. ಜಿಲ್ಲೆಯ ವಿವಿಧಡೆಗಳಿಂದ ಅಗಮಿಸಿದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದರು.ಸುಡು ಬಿಸಿಲು ಲೆಕ್ಕಿಸದೇ ಜಯಘೋಷ ಕೂಗುತ್ತ ರಥವನ್ನು ಎಳೆದರು. ಭಕ್ತಾಧಿಗಳಿಗೆ ಅಲ್ಲಲ್ಲಿ ಪಾನಕ , ಮಜ್ಜಿಗೆ ಫಲಹಾರ ಸೇವೆ ಮಾಡಲಾಯಿತ್ತು.ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದು ಸ್ವಾಮಿಯ ಕೃಪೆಗೆ ಪಾತ್ರರಾದರು. ಭಕ್ತಾಧಿಗಳಿಗೆ ಮಹಾ ದಾಸೋಹ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದ ಕೆಳಭಾಗದಲ್ಲಿರುವ ಕಣಿವೆ ಮಾರಮ್ಮ ದೇವಿಯ ರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಭಕ್ತಿ-ಸಂಭ್ರಮಗಳ ನಡುವೆ ವಿಜೃಂಭಣೆಯಿಂದ ನೆರವೇರಿತು. ಒಂದೆಡೆ ಬದುಕಿಗೆ ಕೃಷಿ ನಂಬಿರುವ ರೈತರು ಎತ್ತಿನಗಾಡಿಗಳಲ್ಲಿ ಕುಟುಂಬ ಸಮೇತ ಬಂದು ಒಳ್ಳೆಯ ಮಳೆ-ಬೆಳೆಗೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದೆಡೆ ನವ ವಿವಾಹಿತೆಯರು ತವರಿನಿಂದ ಹಸಿರು ಬಳೆ-ಮಡಿಲಕ್ಕಿ ಉಡುಗೊರೆ ಸ್ವೀಕರಿಸಿದರು. ಈ ನಡುವೆ ಎಳೆಯ ಮಕ್ಕಳು ಬೆಂಡು-ಬತ್ತಾಸು ಚಪ್ಪರಿಸುತ್ತ ಸಡಗರದಿಂದ ಓಡಾಡಿದರು. ಜಲಾಶಯದಲ್ಲಿ ನೀರಿನಮಟ್ಟ ಕುಸಿದಿರುವ ಕಾರಣ ಜಾತ್ರೆಗೆ ಬಂದ ಭಕ್ತರಲ್ಲಿ ಸ್ವಲ್ಪಮಟ್ಟಿನ ಬೇಸರ ಕಂಡುಬಂತು. ಇವು ಶುಕ್ರವಾರ ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಕೆಳಭಾಗದಲ್ಲಿರುವ ಕಣಿವೆ ಮಾರಮ್ಮ ದೇವಿಯ ರಥೋತ್ಸವದಲ್ಲಿ ಕಂಡು ಬಂದ ದೃಶ್ಯಗಳು. ನೂರಾರು ವರ್ಷದ ಇತಿಹಾಸ ಹೊಂದಿರುವ ಕಣಿವೆ ಮಾರಮ್ಮ ದೇವಿ ವಾಣಿ ವಿಲಾಸ ಜಲಾಶಯದ ರಕ್ಷಕಿ ಎಂಬ ನಂಬಿಕೆ ಇದೆ. ಎರಡು ಗುಡ್ಡಗಳ ನಡುವಿನ ಪ್ರದೇಶದಲ್ಲಿ ವಾಣಿ ವಿಲಾಸ ಅಣೆಕಟ್ಟೆ ನಿರ್ಮಿಸಲಾಗಿದೆ. ಎರಡು ಗುಡ್ಡಗಳ ಕಣಿವೆಯಂತಹ ಪ್ರದೇಶದಲ್ಲಿ ಈ ದೇಗುಲ ಇರುವ ಕಾರಣ…
ರಾತ್ರಿ ವೇಳೆ ಜಿಂಕೆಗಳನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಐವರು ಆಸಾಮಿಗಳನ್ನು ಬಂಧಿಸಿರುವ ಘಟನೆ ಹನೂರು ಸಮೀಪ ಉದ್ದನೂರು ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ತಾಲ್ಲೂಕಿನ ರಾಮಾಪುರ ಗ್ರಾಮದ ಲಕ್ಷ್ಮಣ (55), ಕಾಂಚಳ್ಳಿ ಗ್ರಾಮದ ಮುತ್ತಪ್ಪ (40), ಮುತ್ತುರಾಜ (35), ಅಜ್ಜೀಪುರದ ಗೋವಿಂದರಾಜು (27), ನಾಗಣ್ಣ ನಗರದ ಪೆರಿಯಣ್ಣ (23) ಬಂಧಿರಾಗಿದ್ದು, ಪರಾರಿಯಾಗಿರುವ ಮತ್ತೊಬ್ಬ ಕಾಂಚಳ್ಳಿ ಗ್ರಾಮದ ಸತೀಶ್ಗಾಗಿ ಬಲೆ ಬೀಸಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿ ವಲಯದ ಹನೂರು ಗಸ್ತಿನ ಹುಬ್ಬೇ ಹುಣಸೆ ಡ್ಯಾಮ್ ಬಳಿಯ ಬೆಳ್ಳತ್ತೂರು ಗುಡ್ಡದ ಕಾಡಿನಲ್ಲಿ ನಾಡ ಬಂದೂಕಿನ ಸಹಾಯದಿಂದ ಮೂರು ಜಿಂಕೆಗಳನ್ನು ಬೇಟೆಯಾಡಿ ಮಾಂಸವನ್ನು ತುಂಡರಿಸಿ ಪಾಲು ಹಂಚಿಕೊಳ್ಳವ ವೇಳೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿಎಫ್ಒ ಏಡುಕೊಂಡಲು ಮಾರ್ಗದರ್ಶನದಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಮತ್ತೊಬ್ಬ ಆರೋಪಿ ಕಾಂಚಳಿ ಸತೀಶ್ ಕಣ್ತಪ್ಪಿಸಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತರಿಂದ ಜಿಂಕೆ ಮಾಂಸ ಚರ್ಮ, 2…
ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 50ರೂ. ಏರಿಕೆಯಾಗಿದೆ. ಈಗಾಗಲೇ ದೇಶದಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಶ್ರೀಸಾಮಾನ್ಯರಿಗೆ ಸಿಲಿಂಡರ್ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸಿಲಿಂಡರ್ ಬೆಲೆ ಏರಿಕೆ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ. ಕಳೆದ ಮಾ.22ರಂದು ಅಡುಗೆ ಅನಿಲದ ಬೆಲೆಯನ್ನು 50ರೂ.ಗೆ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 50ರೂ.ಗೆ ಹೆಚ್ಚಳ ಮಾಡಲಾಗಿದೆ. ಒಂದೂವರೆ ತಿಂಗಳಲ್ಲಿ ಅಡುಗೆ ಅನಿಲ ದರ ನೂರು ರೂ. ಹೆಚ್ಚಳ ಮಾಡಿದಂತಾಗಿದೆ. ಪೆಟ್ರೋಲ್, ಡೀಸೆಲ್ ದರ ಖಾದ್ಯ ತೈಲ, ದಿನ ನಿತ್ಯದ ವಸ್ತುಗಳ ಬೆಲೆ, ಹಣ್ಣು, ತರಕಾರಿ ಬೆಲೆಗಳು ಕೂಡ ಗಗನಮುಖಿಯಾಗುತ್ತಿದ್ದು, ಜನ ಸಾಮಾನ್ಯರು ಬೆಲೆ ಏರಿಕೆಯಿಂದ ಪರಿತಪಿಸುತ್ತಿದ್ದಾರೆ. ಕಳೆದ ವಾರ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 104 ರೂ.ಗಳಿಗೆ ಏರಿಕೆ ಮಾಡಲಾಗಿತ್ತು. ಈಗ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 50ರೂ.ಗೆ ಏರಿಕೆ ಮಾಡಲಾಗಿದ್ದು, ಪ್ರತಿ ಸಿಲಿಂಡರ್ 990.5ರೂ.ಗೆ ಲಭ್ಯವಾಗಲಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕ್ಯೂಬಾದ ರಾಜಧಾನಿ ಹವಾನಾದ ಹೃದಯಭಾಗ ಸರಟೋಗಾದ ಐಷಾರಾಮಿ ಹೋಟೆಲ್ನಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟ ದುರಂತದಲ್ಲಿ ಗರ್ಭಿಣಿ ಮಹಿಳೆ ಮತ್ತು ಮಗು ಸೇರಿದಂತೆ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ನವೀಕರಣಗೊಳ್ಳುತ್ತಿದ್ದ ಹವಾನಾದ 96 ಕೊಠಡಿಗಳ ಹೋಟೆಲ್ ಯಾವುದೇ ಪ್ರವಾಸಿಗರು ಇರಲಿಲ್ಲ ಎಂದು ಹವಾನಾ ಗವರ್ನರ್ ರೆನಾಲ್ಡೊ ಗಾರ್ಸಿಯಾ ಜಪಾಟಾ ತಿಳಿಸಿದರು.ಹೋಟೆಲ್ನ ಕೆಲ ಗೋಡೆ ಕುಸಿದಿದ್ದು ಅದರಡಿ ಸಿಲುಕಿ ಕೆಲವರು ಸಾವನ್ನಪ್ಪಿದ್ದಾರೆ. ಭಾರಿ ಶಬ್ಧ ಉಂಟಾದ ಕಾರಣ ಜನರು ಆತಂಕಗೊಂಡರು ಕೆಲವೇ ಕ್ಷಣದಲ್ಲಿ ಇದು ಬಾಂಬ್ ಅಥವಾ ಉಗ್ರದಾಳಿಯಲ್ಲ. ಇದು ದುರಂತ ಅಪಘಾತ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಧ್ಯಕ್ಷ ಮಿಗುಯೆಲ್ ಡಿಯಾಜï-ಕನೆಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಹೋಟೆಲ್ಗೆ ನೈಸರ್ಗಿಕ ಅನಿಲವನ್ನು ಪೂರೈಸುತ್ತಿದ್ದ ಟ್ರಕ್ನಿಂದ ಸ್ಫೋಟ ಸಂಭವಿಸಿದೆ ಎಂದು ಕ್ಯೂಬಾದ ಸ್ಟೇಟ್ ಟಿವಿ ವರದಿ ಮಾಡಿದೆ, ಆದರೆ ಅನಿಲವು ಹೇಗೆ ಹೊತ್ತಿಕೊಂಡಿತು ಎಂಬುದರ ಕುರಿತು ವಿವರಗಳನ್ನು ನೀಡಿಲ್ಲ. ಸ್ಫೋಟ ವು ಹೋಟಲ್ನ ಸುತ್ತ ಬಿಂಕಿ ದಟ್ಟ ಹೊಗೆ ಆವರಿಸಿತು…
ಅಪ್ಲಿಕೇಶನ್ ಇಲ್ಲದೆ ಕರೆ ರೆಕಾರ್ಡಿಂಗ್ ಮಾಡುವುದು ಹೇಗೆ: ತನ್ನ ಬಳಕೆದಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಗೂಗಲ್ ತನ್ನ ನೀತಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಿದೆ. ಈ ಬದಲಾವಣೆಗಳು ಮೇ 11 ರಿಂದ ಜಾರಿಗೆ ಬರಲಿವೆ. ಥರ್ಡ್ ಪಾರ್ಟಿ ಅಪ್ಲಿಕೇಶನ್ ಗಳಿಂದ ಕರೆ ರೆಕಾರ್ಡಿಂಗ್ ಅನ್ನು ನಿಲ್ಲಿಸುವುದು ಇದರಲ್ಲಿ ಪ್ರಮುಖವಾಗಿದೆ. ಅಂದರೆ, ಈಗ ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಶನ್ನಿಂದ ಕರೆಗಳನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ ಅಥವಾ ಯಾವುದೇ ಅಪ್ಲಿಕೇಶನ್ ತನ್ನದೇ ಆದ ಕರೆಯನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ. ಈ ವೈಶಿಷ್ಟ್ಯವು ಆಪಲ್ ನಂತೆಯೇ ಇರುತ್ತದೆ. ಆಪಲ್ ತನ್ನ ಫೋನ್ನಲ್ಲಿ ಕರೆ ರೆಕಾರ್ಡಿಂಗ್ ಸೌಲಭ್ಯವನ್ನು ಒದಗಿಸುವುದಿಲ್ಲ. ಈಗ ಯಾರಿಗೆ ಕಾಲ್ ರೆಕಾರ್ಡಿಂಗ್ ಅವಶ್ಯವೋ ಅಂತಹವರು ಈಗ ಕಾಲ್ ರೆಕಾರ್ಡಿಂಗ್ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಸಹಜವಾಗಿಯೇ ಮೂಡಲಿದೆ. ನಿಮಗೂ ಈ ಪ್ರಶ್ನೆ ಕಾಡುತ್ತಿದ್ದರೆ ಈ ಲೇಖನದಲ್ಲಿ ನಾವು ಉತ್ತರವನ್ನು ನೀಡುತ್ತೇವೆ. ಕರೆ ರೆಕಾರ್ಡ್ ಮಾಡಲು ನಿಮ್ಮ ಆಯ್ಕೆಗಳು ಯಾವುವು ಎಂದು ತಿಳಿಯೋಣ. ಇದು…
ಬೆಂಗಳೂರು: ಯತ್ನಾಳ್ ಅವರ ಹೇಳಿಕೆಗೆ ನಾನು ಏನೂ ರಿಯಾಕ್ಟ್ ಮಾಡೋದಕ್ಕೆ ಆಗಲ್ಲ, ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಅವರು ಸಿಕ್ಕಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಸಿಎಂ ಹುದ್ದೆ ಬೇಕಾದರೆ 2,500 ಕೋಟಿ ರೂಪಾಯಿ ನೀಡಿ ಎಂದು ದೆಹಲಿಯಿಂದ ಬಂದವರು ಬೇಡಿಕೆ ಇಟ್ಟಿದ್ದರು ಎನ್ನುವ ಯತ್ನಾಳ್ ಹೇಳಿಕೆ ಸಂಬಂಧ ಪತ್ರಕರ್ತರ ಪ್ರಶ್ನೆಗಳಿಗೆ ತುಮಕೂರಿನಲ್ಲಿ ಉತ್ತರಿಸಿದ ಗೃಹ ಸಚಿವರು, ರಾಜಕಾರಣದಲ್ಲಿ ಇಂತಹ ಹೇಳಿಕೆಗಳೆಲ್ಲವೂ ಸಹಜ. ಇಂತಹದ್ದೆಲ್ಲ ರಾಜಕಾರಣದಲ್ಲಿರುತ್ತದೆ ಎಂದು ಅವರು ಹೇಳಿರಬಹುದು. ನಿರ್ದಿಷ್ಟವಾಗಿ ಇದೇ ಪಕ್ಷ ಎಂದು ಅವರು ಹೇಳಿಲ್ಲ ಎಂದರು. ಒಂದು ವೇಳೆ ಪಕ್ಷದ ವಿರುದ್ಧವೇ ಅವರು ಹೇಳಿಕೆ ನೀಡಿದ್ದಾದರೆ, ಪಕ್ಷಕ್ಕೆ ಮುಜುಗರ ಉಂಟಾಗುವ ವಿಚಾರವಾಗುತ್ತದೆ. ಪಕ್ಷದ, ಸಂಘಟನೆಯ ನೇತಾರರು ಅವರನ್ನು ಕರೆದು ಮಾತನಾಡಿಸುತ್ತಾರೆ ಎಂದು ಇದೇ ವೇಳೆ ಅರಗ ಜ್ಞಾನೇಂದ್ರ ಹೇಳಿದರು. ಇನ್ನೂ ಪಿಎಸ್ ಐ ಅಕ್ರಮಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ಸಚಿವರು, ಯಾವುದೋ ಒಂದು ಕೇಂದ್ರದಲ್ಲಿ ಅಕ್ರಮ ನಡೆದಿದ್ದರೆ, ಆ…