Subscribe to Updates
Get the latest creative news from FooBar about art, design and business.
- ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
- ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
- ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
- ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
- ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
- ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
Author: admin
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕು ದಂಡಿನ ಶಿವರ ಹೋಬಳಿ ಸಂಪಿಗೆ ಹೊಸಳ್ಳಿ ಗ್ರಾಮ ಪಂಚಾಯತಿಯ ಕುರುಬರಹಳ್ಳಿ ಬ್ಯಾಲ ಗ್ರಾಮದಲ್ಲಿ ತಡರಾತ್ರಿ ಸತತವಾಗಿ ಸುರಿಯುತ್ತಿರುವ ಮಳೆಗೆ ಬಡ ಮಹಿಳೆಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಸಂಪಿಗೆ ಹೊಸಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಬರಹಳ್ಳಿ ಬ್ಯಾಲದ ವಾಸಿಯಾದ ಗಂಗಮ್ಮ ಎಂಬ ಬಡ ಮಹಿಳೆಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದಿದೆ. ಕಳೆದ ಸುಮಾರು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ನನೆದು ಮನೆಯ ಮೇಲ್ಚಾವಣಿಯ ಹೆಂಚು ,ಶೀಟ್ ಎಲ್ಲವೂ ಒಮ್ಮೆಲೆ ಮುರಿದು ಕೆಳಗೆ ಬಿದ್ದಿದೆ. ಇದರಿಂದಾಗಿ ಮನೆಯಲ್ಲಿ ಟಿವಿ ಬೀರು ಮಂಚ ಹಾಗೂ ಬೆಲೆಬಾಳುವ ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಯಾಗಿದೆ. ಆಹಾರ ಪದಾರ್ಥಗಳು ಮಣ್ಣು ಪಾಲಾಗಿದ್ದರೆ, ಪಾತ್ರೆ ಇತರೆ ಸಾಮಗ್ರಿಗಳು ಮೇಲಿಂದ ಬಿದ್ದ ರಭಸಕ್ಕೆ ನುಜುಗುಜ್ಜಾಗಿವೆ. ಸ್ಥಳಕ್ಕೆ ಸಂಬಂಧಪಟ್ಟ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಮನೆ ಕಳೆದುಕೊಂಡ ನಿರ್ಗತಿಗಳಾದ ಬಡ ಮಹಿಳೆಗೆ ನೆರವು…
ಚಿತ್ರದುರ್ಗ: ವಾಹನ ನಿಲುಗಡೆಗೆ ಸರಿಯಾದ ವ್ಯವಸ್ಥೆ ಕಲ್ಪಿಸುವಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಹಿರಿಯೂರು ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೆಂಗಳೂರು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ದಿನನಿತ್ಯ ಸಾವಿರಕ್ಕೂ ಹೆಚ್ಚು ವಾಹನಗಳು ಹಿರಿಯೂರು ನಗರದ ಪ್ರವೇಶ ಮಾಡುತ್ತಿದ್ದು, ರಸ್ತೆಯಲ್ಲಿ ಅತಿಯಾದ ಲಾರಿ ನಿಲುಗಡೆ , ದೊಡ್ಡ ವಾಹನಗಳ ನಿಲುಗಡೆಯಿಂದ ಹಿರಿಯೂರು ನಗರದ ಒಳಬರುವ ವಾಹನಗಳಿಗೆ ಹಾಗೂ ಆ ಭಾಗದಲ್ಲಿ ಸಂಚರಿಸುವ ಹಿರಿಯೂರಿನ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣವೇ ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಜೀವಿನಿ ಜೀವರಕ್ಷಕ ಟ್ರಸ್ಟ್ ನ ರಾಜ್ಯ ಸಂಚಾಲಕರಾದ ಮಹಾಂತೇಶ್ ಆರ್, ತಾಲ್ಲೂಕು ಸಂಚಾಲಕರಾದ ಚೇತನ್ ಆಲೂರು, ತಾಲ್ಲೂಕು ಅಧ್ಯಕ್ಷರಾದ ಧನುಷ್, ತಾಲೂಕು ಉಪಾಧ್ಯಕ್ಷರಾದ ಗಿರೀಶ್,ಕಾರ್ಯದರ್ಶಿ ರಾಘವೇಂದ್ರ, ಸಂತೋಷ್, ಪ್ರಸನ್ನ , ನಾಗರ್ಜುನ್, ಹರೀಶ್, ಅವಿನಾಶ್, ದರ್ಶನ್, ಇನ್ನಿತರ…
ಸರಗೂರು: ತಾಲ್ಲೂಕಿನ ನುಗು ಜಲಾಶಯ ಭರ್ತಿಯಾದ ಹಿನ್ನೆಲೆ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ನಂಜನಗೂಡು ಶಾಸಕ ಹರ್ಷವರ್ಧನ್ ಜೊತೆಯಾಗಿ ಬಾಗೀನ ಅರ್ಪಿಸಿದರು. ತಾಲ್ಲೂಕಿನ ನುಗು ಜಲಾಶಯಕ್ಕೆ ಶುಕ್ರವಾರ ಇಬ್ಬರು ಶಾಸಕರು ಭೇಟಿ ನೀಡಿದ ಶಾಸಕರು ಗಣಪತಿ, ಲಕ್ಷ್ಮಿ ದೇವಿಯ ವಿಗ್ರಹವಿಟ್ಟು ಪೂರ್ಣಕುಂಭ ಕಳಶದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಜಲಾಶಯಕ್ಕೆ ಬಾಗೀನ ಅರ್ಪಿಸಿದರು. ಇದೇ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂದಿನಿಂದಲೇ ನುಗು ಮೇಲ್ದಂಡೆ ನಾಲೆಗೆ ನೀರು ಹರಿಸಲಾಗುವುದು. ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಲ್ಲಿನ ಹೂಳು, ಜಂಗಲ್ ಕಟ್ಟಿಂಗ್ ಮಾಡಿಸಿ ನಂತರ ಆಗಸ್ಟ್ 5ರಿಂದ ನೀರು ಹರಿಸಲಾಗುವುದು ಎಂದರು. ನುಗು ಅತಿಥಿ ಗೃಹ, ಜಲಾಶಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಬಿರ್ವಾಳ್ನಿಂದ ಮುಳ್ಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಹಲಸೂರಿನಿಂದ ಮುಳ್ಳೂರು ಸೇತುವೆವರೆಗೂ ರಸ್ತೆ ಹದಗೆಟ್ಟಿದ್ದು, ಅದನ್ನು ಶೀಘ್ರದಲ್ಲೇ ಸರಿಪಡಿಸಲು ಕ್ರಮವಹಿಸಲಾಗುವುದು. ಜೊತೆಗೆ ನುಗು ಜಲಾಶಯದ ನಿರ್ವಹಣೆಗಾಗಿ ಶಾಶ್ವತವಾಗಿ ನುಗು ಅತಿಥಿ ಗೃಹದಲ್ಲಿ ಎಂಜಿನಿಯರ್ ಉಪ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ. ಸರ್ಕಾರಿ ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈಸ್ ಮಿಲ್ ಮಾಲೀಕರು ವರ್ತಕರು ತುಮಕೂರು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರತಿಭಟನೆ ನಡೆಸಿದರು. ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಡಾ.ರಮೇಶ್ ಬಾಬು ಮಾಧ್ಯಮಗಳ ಜೊತೆಗೆ ಮಾತನಾಡಿ, ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದು ಸಾಮಾನ್ಯ ಜನರಿಗೆ ತೊಂದರೆಯಾಗಲಿದೆ ಎಂದರು. ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ಹಾಕಬಾರದು, ಇದನ್ನು ತಕ್ಷಣವೇ ರದ್ದುಗೊಳಿಸಬೇಕು. ಇದರ ವಿರುದ್ಧ ದೇಶವ್ಯಾಪಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಜಿ.ಎಸ್.ಟಿ. ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಭಾರತ್ ಮಾತಾಕೀ ಜೈ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಾದಾಮಿ : ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಮಾಜಿ ಸಿಎಂ, ವಿಪಕ್ಷ ನಾಯಕ ಹಾಗೂ ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ತೆರಳಿದ್ದು, ಸಂತ್ರಸ್ತರಿಗೆ ಈ ವೇಳೆ ಅವರು ನೀಡಿದ್ದ ಹಣವನ್ನು ಮಹಿಳೆಯೊಬ್ಬರು ಸಿದ್ದರಾಮಯ್ಯನವರ ಕಾರಿನೊಳಗೆ ಎಸೆದ ಘಟನೆ ನಡೆದಿದೆ. ತಾಲೂಕಿನ ಕೆರೂರಿನಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಹಿಳೊಬ್ಬರು ಸಿಟ್ಟಿಗೆದ್ದು ಹಣ ವಾಪಾಸ್ ಎಸೆದಿದ್ದಾರೆ. ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನರಿಗೆ ಗಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಮಹಿಳೆಯೊಬ್ಬರಿಗೆ 2 ಲಕ್ಷ ನೆರವು ನೀಡಿದ್ದರು. ಸಂದರ್ಭದಲ್ಲಿ ನನಗೆ ಹಣಬೇಡ ನನಗೆ ಶಾಂತಿ, ನಮಗೆ ನ್ಯಾಯ ಕೊಡಿ ಎಂದು ಸಿದ್ದರಾಮಯ್ಯ ಅವರು ನೀಡಿದ ಹಣವನ್ನು ಏಕಾಏಕಿ ಕಾರಿನ ಮೇಲೆ ಎಸೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆ ಮಹಿಳೆಯನ್ನು ಯಾರೋ ಎತ್ತಿ ಕಟ್ಟಿದ್ದಾರೆ ದುಡ್ಡು ಬಿಸಾಡಿದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯು ಸಾರ್ವಜನಿಕರಿಗೆ ಆಕರ್ಷಣೀಯವಾಗಿ, ಸ್ವಚ್ಛವಾಗಿ ಹಾಗೂ ಮಾದರಿಯಾಗಿ ಇರಬೇಕು ಎಂದು ಜಿಲ್ಲಾ ಕಾನೂನು ನ್ಯಾಯಾಧೀಶರು ಹಾಗೂ ಕೆರೆ ಮತ್ತು ಕಾಲುವೆಗಳ ಸಂರಕ್ಷಣಾ, ಪ್ರಾಧಿಕಾರ ಅಧ್ಯಕ್ಷರಾಗಿರುವ ಗಿರೀಶ್ ಅವರು ತಿಳಿಸಿದರು. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಯಾಗಿರುವ ಕುಮಾರನಾಯ್ಕ ಜೊತೆಗೂಡಿ ಆಸ್ಪತ್ರೆಯ ಹೆರಿಗೆವಿಭಾಗ, ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸಾ ವಿಭಾಗ, ಆಕ್ಸಿಜನ್ ಘಟಕ, ಒಳರೋಗಿಗಳ ವಿಭಾಗ, ಔಷಧಿ ಉಗ್ರಾಣ, ಆಸ್ಪತ್ರೆಯಲ್ಲಿರುವ ಶೌಚಾಲಯಗಳು ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳರೋಗಿಗಳಾಗಿ ದಾಖಲಾಗಿದ್ದ ರೋಗಿಗಳೊಂದಿಗೆ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ವಿಚಾರಿಸಿದರು. ಔಷಧಿ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಗಳ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿ, ಉಗ್ರಾಣದ ನಿರ್ವಹಣೆ ಬಗ್ಗೆ ಪರಿಶೀಲಿಸಿ ಉಗ್ರಾಣದಲ್ಲಿ ಸಾಕಷ್ಟು ಔಷಧಿಗಳ ಲಭ್ಯತೆ ಇರುವುದನ್ನು ಖಚಿತಪಡಿಸಿಕೊಂಡು ಪ್ರಶಂಸೆ ವ್ಯಕ್ತಪಡಿಸಿದರು. ಬಡರೋಗಿಗಳಿಗೆ ಹೊರಗಡೆಗೆ ಔಷಧಿಗಳನ್ನು ಬರೆದುಕೊಡದಂತೆ ಸೂಚಿಸಿದರು. ಸರ್ಕಾರಿ ಆಸ್ಪತ್ರೆಯನ್ನು ನಂಬಿ…
ತುಮಕೂರು: ನಗರದ ಭದ್ರಮ್ಮ ಸರ್ಕಲ್ ಬಳಿಯ ಎಚ್ ಡಿಎಫ್ ಸಿ ಬ್ಯಾಂಕ್ ಮುಂಭಾಗದಲ್ಲಿ ಕಳ್ಳನೋರ್ವ ನೋಡನೋಡುತ್ತಲೇ ವ್ಯಕ್ತಿಯೊಬ್ಬರ ಕೈಯಿಂದ ಹಣ ಕದ್ದು ಪರಾರಿಯಾದ ಘಟನೆ ನಡೆದಿದೆ. ಕಾಂತರಾಜು ಎಂಬವರು ಎಚ್ ಡಿಎಫ್ ಸಿ ಬ್ಯಾಂಕ್ ನಿಂದ ಎರಡು ಲಕ್ಷ ಹಣ ಡ್ರಾ ಮಾಡಿ ಬ್ಯಾಗ್ ಗೆ ಹಾಕಿಕೊಂಡಿದ್ದರು. ಬ್ಯಾಂಕ್ ಒಳಗೆ ಇದನ್ನು ಗಮನಿಸಿದ ಓರ್ವ ಮತ್ತೋರ್ವನಿಗೆ ಸಂದೇಶ ರವಾನಿಸಿದ್ದು, ಕಾಂತರಾಜು ಬ್ಯಾಂಕ್ ನಿಂದ ಹೊರ ಬರುವ ವೇಳೆ ಕಳ್ಳ ಹಣದ ಬ್ಯಾಗ್ ಕಿತ್ತು ಪರಾರಿಯಾಗಿದ್ದಾನೆ. ಕಳ್ಳರು ಪಲ್ಸರ್ ಹಾಗೂ ಯೂನಿಕಾನ್ ಬೈಕ್ ನಲ್ಲಿ ಬಂದಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಡಿಎಸ್ಪಿ ಶ್ರೀನಿವಾಸ್, ಎನ್ ಇ ಪಿಎಸ್ ಪೊಲೀಸರು ಭೇಟಿ ನೀಡಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ಡಿಸೆಂಬರ್ ವೇಳೆಗೆ ತುರುವೇಕೆರೆ ತಾಲೂಕಿನಲ್ಲಿ 57 ರ ನಮೂನೆ ಅರ್ಜಿ ದಾರರಿಗೆ ಸಾಗುವಳಿ ಚೀಟಿ ವಿತರಿಸುವ ವಿಶ್ವಾಸವಿದೆ ಎಂದು ಶಾಸಕ ಮಸಾಲ ಜಯರಾಮ್ ಹೇಳಿದರು. ತುರುವೇಕೆರೆ ಶಾಸಕ ಮಸಾಲ ಜಯರಾಮ್ ಸುದ್ದಿಗಾರರೊಂದಿಗೆ ಗುಬ್ಬಿ ಪಟ್ಟಣದಲ್ಲಿ ಮಾತನಾಡಿ, ನಮ್ಮ ತುರುವೇಕೆರೆ ತಾಲೂಕಿನಲ್ಲಿ 57 ನಮೂನೆ ಅರ್ಜಿ ಬಾಕಿ ಉಳಿದಿದ್ದು, ಅವುಗಳನ್ನು ಪರಾಮರ್ಶೆ ಮಾಡಿ ಬರುವ ಡಿಸೆಂಬರ್ ವೇಳೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ಮಂಜೂರಿ ಕೊಡಲಾಗುವುದು ಎಂದರು. ಇನ್ನೂ ತುರುವೇಕೆರೆ ತಾಲೂಕಿನಲ್ಲಿ ಯಾವುದೇ ಅವ್ಯವಹಾರಗಳು ನಡೆದಿರುವುದಿಲ್ಲ 2017ರ ಹಿಂದೆ ನಡೆದಿದ್ದು, ಅವುಗಳನ್ನು ವಿಭಾಗಾಧಿಕಾರಿಗಳಿಗೆ ಪರಿಶೀಲನೆ ಮಾಡಲು ಕೊಟ್ಟಿದ್ದೆವು. ಅವುಗಳಲ್ಲಿ 915 ಅರ್ಜಿಗಳನ್ನ ನಾನೇ ಕುದ್ದು ವಜಾ ಮಾಡಿಸಿರುತ್ತೇನೆ. ನನ್ನ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಭಾಗದಲ್ಲಿ ಯಾವುದೇ ಅವ್ಯವಹಾರಗಳು ನಡೆದಿರುವುದಿಲ್ಲ. ಏಕೆಂದರೆ, ನನ್ನ ಭಾಗದಲ್ಲಿ ಹಿಡಿತ ಸಾಧಿಸಿದ್ದೇನೆ ಎಂದರು. ವರದಿ: ಸುರೇಶ್ ಬಾಬು ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತುಮಕೂರು: ಹಾಲು ಅಳತೆಯಲ್ಲಿ ಮೋಸ ಮಾಡುತ್ತಿದ್ದದ್ದನ್ನು ಪತ್ತೆ ಮಾಡಿದ ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತುಮಕೂರು ಹಾಲು ಒಕ್ಕೂಟ ವ್ಯಾಪ್ತಿಯ ಕುಣಿಗಲ್ ತಾಲೂಕಿನ ಹೆಡ್ಡಿಗೆರೆ ಡೈರಿಯಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ರೈತರು ತಗಾದೆ ತೆಗೆದಿದ್ದಾರೆ. ಹಾಲು ಪರೀಕ್ಷೆಗೆ ಹೆಚ್ಚುವರಿ ಹಾಲು ಪಡೆದು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಮೋಸವನ್ನು ಪತ್ತೆ ಮಾಡಿ ಪ್ರಶ್ನಿಸಿದ ರೈತರ ಕೊರಳಪಟ್ಟಿ ಹಿಡಿದು ಕಾರ್ಯದರ್ಶಿ ಬೊರಮ್ಮ ಎಂಬಾಕೆ ಹಲ್ಲೆಗೆ ಯತ್ನಿಸಿದ್ದಾಳೆ ಎಂದು ದೂರಿದ್ದಾರೆ. ಹೆಡ್ಡಿಗೆರೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸಂಗ್ರಹಿಸುವ ಹಾಲಿನಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿದ್ದು, ಹಾಲು ಪರೀಕ್ಷೆಗೆ 30 ಮಿ.ಲೀ ಹಾಲು ಪಡೆಯುವ ಬದಲು 180 ಮಿ.ಲೀ ಹಾಲು ಪಡೆಯಲಾಗುತ್ತಿದೆ ಎಂದು ಕಾರ್ಯದರ್ಶಿ ಬೋರಮ್ಮ ವಿರುದ್ಧ ರೈತರು ಆರೋಪಿಸಿದ್ದಾರೆ. ಹೆಚ್ಚುವರಿ ಹಾಲು ಪಡೆಯುತ್ತಿದ್ದದ್ದನ್ನು ಪಶ್ನೆ ಮಾಡಿದಾಗ 50 ಮಿ.ಲೀ ಅಷ್ಟೇ ಎಂದು ವಾದಿಸಿ ಕಾರ್ಯದರ್ಶಿ ಬೋರಮ್ಮ ಗಲಾಟೆ…