Subscribe to Updates
Get the latest creative news from FooBar about art, design and business.
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
- ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
- ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
- ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
Author: admin
ನವದೆಹಲಿಯಲ್ಲಿರುವ ಖಾಸಗಿ ಶಾಲೆಗಳು ತಮ್ಮ ಸ್ವಂತ ಅಂಗಡಿಗಳಿಂದ ಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ಖರೀದಿಸಲು ಪೋಷಕರನ್ನು ಒತ್ತಾಯಿಸುವಂತಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪ್ರತಿ ಶಾಲೆಯು ಪುಸ್ತಕಗಳು ಮತ್ತು ಬಟ್ಟೆಗಳನ್ನು ಖರೀದಿಸಬಹುದಾದ ಕನಿಷ್ಠ 5 ಹತ್ತಿರದ ಅಂಗಡಿಗಳ ಪಟ್ಟಿಯನ್ನು ನೀಡಬೇಕಾಗುತ್ತದೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.ಈ ಆದೇಶವನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇಂದು ಮುಂಜಾನೆ, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎಸ್ಸಿಇಆರ್ಟಿ) 35 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಮನೀಶ್ ಶಿಸೋಡಿಯಾ, ಬಲವಾದ ಸಂಶೋಧನೆ ಮತ್ತು ತರಬೇತಿಯಿಂದಾಗಿ ಕಳೆದ ಏಳು ವರ್ಷಗಳಲ್ಲಿ ನಗರದ ಶಿಕ್ಷಣ ಮಾದರಿ ಕ್ರಾಂತಿಕಾರಿ ಬದಲಾವಣೆಗಳನ್ನು ಕಂಡಿದೆ ಎಂದು ಹೇಳಿದರು. ಕಳೆದ ಏಳು ವರ್ಷಗಳಲ್ಲಿ ದೆಹಲಿಯ ಶಿಕ್ಷಣ ಮಾದರಿಯು ಕ್ರಾಂತಿಕಾರಿ ಬದಲಾವಣೆಗಳನ್ನು ಕಂಡಿದೆ.ನಾವು ಹೊಸ ಶಾಲೆಗಳನ್ನು ನಿರ್ಮಿಸಿದ್ದೇವೆ, ಉದ್ಯಮಶೀಲತೆ ಮತ್ತು ದೇಶಭಕ್ತಿಯಂತಹ ಹೊಸ ಪಠ್ಯಕ್ರಮಗಳನ್ನು ಪರಿಚಯಿಸಿದ್ದೇವೆ. ಶಿಕ್ಷಕರು ತರಬೇತಿ ಪಡೆಯಲು ವಿದೇಶಕ್ಕೆ ಕಳುಹಿಸಲಾಗಿದೆ, ಹಾಗಾಗಿ ನಮ್ಮ…
ತುಮಕೂರು: ಮಳೆಯ ವೇಳೆ ಮರದಡಿಯಲ್ಲಿ ನಿಂತಿದ್ದ ಮಹಿಳೆಯೊಬ್ಬರು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೂದನಹಳ್ಳಿಯಲ್ಲಿ ನಡೆದಿದೆ. 43 ವರ್ಷ ವಯಸ್ಸಿನ ಲಕ್ಷ್ಮಮ್ಮ ಅವರು ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಗುರುವಾರ ತುಮಕೂರಿನ ವಿವಿಧೆಡೆ ಮಳೆ ಸುರಿದಿದ್ದು, ಮಳೆಯಿಂದ ರಕ್ಷಣೆ ಪಡೆಯಲು ಮಹಿಳೆ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಶ್ಚಿಮ ಬಂಗಾಳ: ಕೋವಿಡ್ ಅಲೆ ಮುಗಿದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಪಶ್ಚಿಮ ಬಂಗಾಳದಲ್ಲಿ ಹೇಳಿಕೆ ನೀಡಿದ್ದಾರೆ. ಉತ್ತರ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಪೌರತ್ವ ಕಾನೂನು ಕೇಂದ್ರದ ಕಾರ್ಯಸೂಚಿಯಲ್ಲಿ ಮರಳಲಿದೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೊಸ ಪೌರತ್ವ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದರು. ನಾನು ಇಂದು ಉತ್ತರ ಬಂಗಾಳಕ್ಕೆ ಬಂದಿದ್ದೇನೆ. ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ, ಕೋವಿಡ್ ಅಲೆ ಕಡಿಮೆಯಾದ ತಕ್ಷಣ ನಾವು ಈ ನೆಲದ ಮೇಲೆ ಸಿಎಎ ಅನ್ನು ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹಮದ್ ರವರಿಗೆ ಅಖಿಲ ಕರ್ನಾಟಕ ಜಮಾತ್ ಎ ಮನ್ಸೂರ್ ನ ಜಿಲ್ಲಾ ಸಂಘಟನಾ ಹಾಗೂ ಅ ಸಂಘಟಿತ ಕಾರ್ಮಿಕರ ವಿಭಾಗದ ಬಶೀರ್ ಅಹ್ಮದ್ ಹಾಗೂ ಪದಾಧಿಕಾರಿಗಳು ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿ ಸನ್ಮಾನಿಸಿದರು. ಬಶೀರ್ ಅಹಮದ್ ಹಾಗೂ ಕಾರ್ಯದರ್ಶಿ ಸಾಹಿಲ್ ಪಾಷಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಬಳಿಕ ತುಮಕೂರು ನಗರದಲ್ಲಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳಿಗೆ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ರವರು ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ತುಂಬಾ ಹೆಮ್ಮೆಯ ವಿಚಾರವೆಂದು ತಿಳಿಸಿದರು ಮುಂದಿನ ದಿನಗಳಲ್ಲೂ ಸಹ ಕಾರ್ಮಿಕ ವಿಭಾಗದ ಪದಾಧಿಕಾರಿ ಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿ ತುಮಕೂರು ವಿಧಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ತಮ್ಮ ಪ್ರೋತ್ಸಾಹ ಸದಾ ಕಾಲ ಇರಬೇಕೆಂದು ಮನವಿ ಮಾಡಿಕೊಂಡರು. ವರದಿ: ಎ.ಎನ್ . ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತಿಪಟೂರು: ವೀರಶೈವ – ಲಿಂಗಾಯಿತ ಎಂಬ ಪ್ರತ್ಯೇಕ ಧರ್ಮ ಸ್ಥಾಪನೆಗೆ ಮುಂದಾಗದೇ ವೀರಶೈವ ಲಿಂಗಾಯಿತ ಧರ್ಮ ಸ್ಥಾಪನೆಗೆ ಎಲ್ಲಾರೂ ಒಂದಾಗಿ ಸರ್ಕಾರದಿಂದ ಮಾನ್ಯತೆ ಪಡೆಯಬೇಕಿದೆ ಎಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಚರಪಟ್ಟಾಧ್ಯಕ್ಷ ಮೃತ್ಯುಂಜಯದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು. ನಗರದ ಬಯಲುರಂಗ ಮಂದಿರದಲ್ಲಿ ಬುಧವಾರ ಲಿಂಗಾಯಿತ ವೀರಶೈವ ಸಮಾಜದ ವತಿಯಿಂದ ಆಯೋಜಿಸಿದ್ದ ಬಸವೇಶ್ವರ ಹಾಗೂ ರೇಣುಕಾಚಾರ್ಯರ ಜಯಂತೋತ್ಸವವದ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವೀರಶೈವ ಲಿಂಗಾಯಿತ ಧರ್ಮ ವಿಶ್ವದಲ್ಲಿಯೇ ಶ್ರೇಷ್ಠವಾದಂತಹ ಧರ್ಮವಾಗಿದ್ದು, ವೀರಶೈವ, ಲಿಂಗಾಯಿತ ಎಂಬ ಪ್ರತ್ಯೇಕ ಧರ್ಮಗಳ ರಚನೆಗೆ ಮುಂದಾಗುವ ಬದಲು ವೀರಶೈವ ಲಿಂಗಾಯಿತ ಧರ್ಮದ ಸ್ಥಾಪನೆಗೆ ದೇಶದಾದ್ಯಂತ ಒಂದಾಗಬೇಕಿದೆ. ಇಸ್ಲಾಂ, ಕೈಸ್ತ, ಬೌದ್ಧ ಧರ್ಮದಂತೆಯೇ ವೀರಶೈವ ಲಿಂಗಾಯಿತ ಧರ್ಮದಲ್ಲಿಯೂ ಆರ್ಥಿಕವಾಗಿ ಸದೃಢತೆ ಇಲ್ಲವರು ಅನೇಕರಿದ್ದಾರೆ. ಇತರೆ ಧರ್ಮಗಳಂತೆಯೇ ನಮ್ಮ ಧರ್ಮದ ಜನಾಂಗದವರಿಗೂ ಸಹ ಮೀಸಲಾತಿ ದೊರೆತರೆ ಎಲ್ಲಾ ಕ್ಷೇತ್ರದಲ್ಲಿಯೂ ಸಾಧನೆ ಮಾಡಲು ಅನುಕೂಲವಾಗುತ್ತದೆ. ಇದೀಗ ಯಾವುದೇ ಸೌಲಭ್ಯ ದೊರಕೆ ಜನಾಂಗದ ಯುವಜನತೆ ಶಿಕ್ಷಣ, ಉದ್ಯೋಗ ಇತರೆ ಕ್ಷೇತ್ರದಲ್ಲಿ ಹಿನ್ನೆಡೆಯನ್ನು ಅನುಭವಿಸಿದ್ದಾರೆ. ಸರ್ಕಾರದ…
ತುಮಕೂರು: ತುಮಕೂರು ನಗರದ ಮಹಿಳಾ ಪೊಲೀಸ್ ಠಾಣೆಯ ನೂತನ ಸಬ್ ಇನ್ಸ್ ಪೆಕ್ಟರ್ ಮಂಗಳಾಮ್ಮ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಭೇಟಿಯಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ವಿ.ಎಸ್.ಸೈಯದ್ ದಾದಾಪೀರ್, ಕಾರ್ಮಿಕ ವಿಭಾಗದ ತುಮಕೂರು ಜಿಲ್ಲಾಧ್ಯಕ್ಷ ಅಬ್ದುಲ್ ರಹೀಂ ಜಿ. ಹಾಗೂ ಕಾರ್ಮಿಕ ವಿಭಾಗದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು ವರದಿ: ಎ.ಎನ್. ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹಮದ್ ಅವರ ಹುಟ್ಟು ಹಬ್ಬದ ಪ್ರಯುಕ್ತ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಹುಟ್ಟು ಹಬ್ಬದ ಶುಭಾಶಯ ತಿಳಿಸಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳಾದ ವಿ.ಎಸ್. ಸೈಯದ್ ದಾದಾಪೀರ್ ಅವರು ಈ ವೇಳೆ ಮಾತನಾಡಿ, ಡಾ. ರಫೀಕ್ ಅಹಮದ್ ರವರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಶಾಸಕರಾದ ಡಾ.ರಫೀಕ್ ಅಹಮದ್ ರವರು ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ತುಂಬಾ ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲೂ ಸಹ ಕಾರ್ಮಿಕ ವಿಭಾಗದ ಪದಾಧಿಕಾರಿಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿ ತುಮಕೂರು ವಿಧಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ತಮ್ಮ ಪ್ರೋತ್ಸಾಹ ಸದಾ ಕಾಲ ಪ್ರೋತ್ಸಾಹ ನೀಡಲಿ ಎಂದು ಅವರು ಹಾರೈಸಿದರು. ಈ ವೇಳೆ, ಕಾಂಗ್ರೆಸ್ ಕಾರ್ಮಿಕ…
ಅಕ್ಷಯ ತೃತೀಯ ನಂತರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಸತತ ಐದನೇ ದಿನವೂ ಚಿನ್ನದ ದರದಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದ್ದು, ಪ್ರತಿ 10 ಗ್ರಾಂಗೆ 51, 280 ಆಗಿದೆ. ಇನ್ನು ಬೆಳ್ಳಿಯ ಬೆಲೆಯಲ್ಲಿ ಶೇ.0.26ರಷ್ಟು ಕುಸಿತ ಕಂಡಿದ್ದು, ಪ್ರತಿ ಕೆಜಿಗೆ 62,882 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ : IBJA ಯ ವೆಬ್ಸೈಟ್ ಪ್ರಕಾರ, 24-ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 230 ರೂ ಕುಸಿತ ಕಂಡಿದ್ದು, 10 ಗ್ರಾಂಗೆ 51, 280 ರೂ. ಆಗಿದೆ ಇದಲ್ಲದೇ 22ಕ್ಯಾರೆಟ್ ಚಿನ್ನದ ಬೆಲೆ 47,000 ರೂ. ಆಗಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೀಗಿದೆ : ನಗರ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ ಚೆನ್ನೈ …
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ರೆಪೊ ದರವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. RBI ರೆಪೋ ದರವನ್ನು 0.40% ಹೆಚ್ಚಿಸಿದೆ. ಇದರೊಂದಿಗೆ ರೆಪೋ ದರ ಶೇ.4ರಿಂದ ಶೇ.4.40ಕ್ಕೆ ಏರಿಕೆಯಾಗಿದೆ. ಈ ಹಿಂದೆ, RBI ಕೊನೆಯ ಬಾರಿಗೆ ರೆಪೊ ದರವನ್ನು 22 ಮೇ 2020 ರಂದು ಬದಲಾಯಿಸಿತು. ಸಾಲದ EMI ಹೆಚ್ಚಾಗುತ್ತದೆ ರೆಪೊ ದರದಲ್ಲಿ ಆರ್ಬಿಐ ಬದಲಾವಣೆ ಮಾಡಿರುವುದು ಬ್ಯಾಂಕ್ಗಳು ಸಾಲದ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ದಾರಿ ಮಾಡಿಕೊಟ್ಟಿದೆ. ರೆಪೋ ದರ ಹೆಚ್ಚಳದಿಂದ ಮುಂದಿನ ದಿನಗಳಲ್ಲಿ ನಿಮ್ಮ ಗೃಹ ಸಾಲ, ಕಾರು ಸಾಲದ ಇಎಂಐ ಹೆಚ್ಚಾಗಲಿದೆ. ಈ ಹಿಂದೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ವಿತ್ತೀಯ ಪರಿಶೀಲನಾ ಸಭೆಯಲ್ಲಿ (ಎಂಪಿಸಿ) ಆರ್ಬಿಐ ಸತತ 11 ನೇ ಬಾರಿಗೆ ರೆಪೊ ದರವನ್ನು ಬದಲಾಯಿಸಲಿಲ್ಲ. ಷೇರು ಮಾರುಕಟ್ಟೆಯಲ್ಲೂ ಮಾರಾಟದ ಹಂತ: ಆರ್ಬಿಐ ಗವರ್ನರ್ ತಮ್ಮ ಭಾಷಣದಲ್ಲಿ, ಜಾಗತಿಕ ಆರ್ಥಿಕತೆಯ ಪರಿಸ್ಥಿತಿ ಹದಗೆಡುತ್ತಿದೆ. ಆರ್ಥಿಕತೆಯ ಮೇಲೆ ಹಣದುಬ್ಬರದ ಒತ್ತಡ ಮುಂದುವರಿದಿದೆ. ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರ…
ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್ವುಡ್ ‘ಭೀಮ’ನಿಂದ ಅನಾವರಣಗೊಳಿಸಿದೆ ಚಿತ್ರತಂಡ. ಬೈರಾಗಿ ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು, ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಬ್ಯಾಂಡು ಬಜಾಯಿಸಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿದ್ದಾರೆ. ‘ನಕ್ಕರನಖ ನಕ್ಕರನಖ ನುಗ್ಗಿಬಂತೋ ನಾಡಹುಲಿ..’ ‘ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ…’ ಎಂಬ ಹಾಡನ್ನು ಅಕ್ಷಯ ತೃತೀಯ ವಿಶೇಷ ದಿನದಂದು ವಿಜಯ್ ಕುಮಾರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ’ ಅನ್ನೋದು ವಿಜಿ ಮಾತು. ‘ನೂರಾರು ಡಾನ್ಸರ್ಸ್, ಬೃಹತ್ ಸೆಟ್,…