Subscribe to Updates
Get the latest creative news from FooBar about art, design and business.
- ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್
- ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು ಭೇಟಿಯಾದ ಭಾರತಿ, ಅನಿರುದ್ಧ್
- ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್
- ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
- ಔರಾದ್ ಟಿಎಚ್ ಒ ವಿರುದ್ಧ ದೂರು: ಕ್ರಮಕ್ಕೆ ಸೂಚನೆ
- ಕರ್ನಾಟಕದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
- ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ
- “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ
Author: admin
ತಿಪಟೂರು: ದೇಹದ ಸದೃಢತೆ, ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಬೆಳಗ್ಗಿನ ಕೆಲ ಗಂಟೆಗಳಲ್ಲಿ ಬಿಡುವು ಮಾಡಿಕೊಂಡು ಕ್ರೀಡೆಯಲ್ಲಿ ತೊಡಗುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಎಂದು ನ್ಯಾಯಾಧೀಶ ಬಿ.ಶಿವಕುಮಾರ್ ಹೇಳಿದರು. ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಮಂಗಳವಾರ ವಕೀಲರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಿತ್ಯ ಒಂದಿಲ್ಲೊಂದು ಜಂಜಾಟದಲ್ಲಿ ತೊಡಗಿಕೊಂಡಿರುವ ಮನುಷ್ಯನಿಗೆ ಕೆಲಕಾಲ ದೇಹದ ಆರೋಗ್ಯಕ್ಕೂ ಆದ್ಯತೆ ನೀಡಬೇಕಿದೆ. ಕ್ರೀಡೆ ಎಂದರೆ ಸೋಲು- ಗೆಲುವು ಇದ್ದೇ ಇರುತ್ತದೆ. ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಅವರು ಇದೇ ವೇಳೆ ಸಲಹೆ ನೀಡಿದರು. ನ್ಯಾಯಾಧೀಶರಾದ ನೂರುನ್ನಿಸ್ಸಾ, ಎಸ್.ಚಂದನ್, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ದಯಾನಂದ್, ಉಪಾಧ್ಯಕ್ಷ ಸುರಬಿಧೇನು, ಕಾರ್ಯದರ್ಶಿ ಬಿ.ಎನ್.ಅಜಯ್ ಮೊದಲಾದವರು ಈ ಸಂದರ್ಭ ಇದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ವೀರಶೈವ, ಲಿಂಗಾಯತ ಸಮಾಜ ನೀಡುವ ಕೈಗಳೇ ಹೊರತು, ಬೇಡುವ ಸಮುದಾಯವಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದ ಅರಳೇಪೇಟೆಯಲ್ಲಿ ವೀರಶೈವ ಸಮಾಜದ ವತಿಯಿಂದ ಜೀರ್ಣೋದ್ಧಾರಗೊಂಡಿರುವ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ವೀರಶೈವ, ಲಿಂಗಾಯತ ಸಮಾಜ ನೀಡುವ ಕೈಗಳೇ ಹೊರತು, ಬೇಡುವ ಸಮುದಾಯವಲ್ಲ. ಸಮಾಜ ತಮ್ಮ ಶಕ್ತಿ ಮೀರಿ ದೇಣಿಗೆ ಸಂಗ್ರಹಿಸಿ ಐದು ಗರ್ಭಗುಡಿಗಳಿರುವ ದೇವಾಲಯ ಜೀರ್ಣೋದ್ಧಾರ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸೊಗಡು ಶಿವಣ್ಣ, ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಚಂದ್ರಮೌಳಿ, ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ ಮೊದಲಾದವರು ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಾಕಷ್ಟು ಅನುದಾನವಿದ್ದರೂ ಸಹಾಯ ಧನವನ್ನು ಸಕಾಲದಲ್ಲಿ ನೀಡಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು. ಸಕಾಲದಲ್ಲಿ ಸಹಾಯಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೋವಿಡ್ ನಂತರ ಪ್ರಾರಂಭವಾಗಿರುವ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಂಡಳಿಯು ಈವರೆಗೆ ಸಹಾಯ ಧನ ನೀಡಿಲ್ಲ. ಇದರಿಂದಾಗಿ ರಾಜ್ಯದಲ್ಲಿ 30 ಲಕ್ಷ ಸದಸ್ಯತ್ವ ಪಡೆದಿರುವ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ ಎಂದು ಆರೋಪಿಸಿದರು. ಮಂಡಳಿಯಿಂದ ನೀಡುವ ಎಲ್ಲ ಯೋಜನೆಗಳು, ಸಹಾಯ ಧನ ಸಕಾಲದಲ್ಲಿ ಫಲಾನುಭವಿಗಳಿಗೆ ಸಿಗುತ್ತಿಲ್ಲ. ಸಾವಿರಾರು ಕೋಟಿ ಅನುದಾನವಿದ್ದರೂ ಬಳಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದು, ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುವ ಸಹಾಯ ಧನದ ಸೌಲಭ್ಯದ ಮೇಲ್ವಿಚಾರಣೆಯನ್ನು ಕಾರ್ಮಿಕ ಇಲಾಖೆ ಬದಲಿಗೆ ಶಿಕ್ಷಣ ಇಲಾಖೆಗೆ ವಹಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಗೆ ವಹಿಸಬಾರದು. ಇದರಿಂದ…
ಮಧುಗಿರಿ: ಮೂರು ತಿಂಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಕ್ರಿಯೆ, ತಿಥಿ ಕಾರ್ಯ ಎಲ್ಲವೂ ಮುಗಿದ ಬಳಿಕ ವ್ಯಕ್ತಿ ದಿಢೀರ್ ಆಗಿ ಪ್ರತ್ಯಕ್ಷವಾಗಿ ಎಲ್ಲರಿಗೂ ಬಿಗ್ ಶಾಕ್ ನೀಡಿದ್ದಾರೆ. ತುಮಕೂರಿನ ಮಧುಗಿರಿ ತಾಲೂಕಿನ ಕೊಡಿಗೇನ ಹಳ್ಳಿಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿರುವ ಪ್ರೇಮಲತಾ ಅವರ ತಂದೆ ನಾಗರಾಜಪ್ಪ ಕಳೆದ 12 ವರ್ಷಗಳ ಹಿಂದೆ ಚಿಕ್ಕಮಾಲೂರನ್ನು ತೊರೆದು ಯಾರಿಗೂ ಹೇಳದೆ ಹೋಗಿದ್ದರು. ಬಳಿಕ 3 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ವಾಸವಿರುವ ನಾಗರಾಜಪ್ಪನ ಎರಡನೇ ಮಗಳಾದ ನೇತ್ರಾವತಿಯ ಮನೆಗೆ ಹೋಗಿದ್ದರು ಎನ್ನಲಾಗಿದೆ. ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ನರ್ಸ್ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ನೇತ್ರಾವತಿ ಅಂದಿನಿಂದಲೂ ತಂದೆ ನಾಗರಾಜಪ್ಪನನ್ನ ನೋಡಿಕೊಳ್ಳುತ್ತಿದ್ದರು. ಮಗಳು ಕೆಲಸ ಮಾಡುತ್ತಿದ್ದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲೇ ನಾಗರಾಜಪ್ಪ ಸಹ ಚಿಕ್ಕಪುಟ್ಟ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೂರು ತಿಂಗಳ ಹಿಂದೆ ಇದ್ದಕ್ಕಿದಂತೆ ನಾಗರಾಜಪ್ಪ ನಾಪತ್ತೆಯಾಗಿದ್ದು, ಸಾಕಷ್ಟು ಹುಡುಕಾಡಿದರೂ ಸಿಕ್ಕಿರಲಿಲ್ಲ. ಆದರೆ, ಕಾಣೆಯಾದ 8 ದಿನಗಳ ಬಳಿಕ…
ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಗೋಪಾಲಕೃಷ್ಣ ಹಾಗೂ ಎಸ್.ಆರ್.ವಿಶ್ವನಾಥ್ ಬೆಂಬಲಿಗ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್ ಇಬ್ಬರು ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸುತ್ತಿದ್ದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಗೋಪಾಲಕೃಷ್ಣ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ನವದೆಹಲಿ: ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ಇಂದಿನಿಂದ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ. ಇತ್ತು. ಕೋಲ್ಕತ್ತಾದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 101 ರೂ.ಗೆ ಏರಿಕೆಯಾಗಿದ್ದು, ಈ ಮೂಲಕ ಗ್ಯಾಸ್ ಬೆಲೆ 2,174.5 ರೂ.ಗೆ ತಲುಪಿದೆ. ಇಲ್ಲಿ ಈ ಹಿಂದೆ ಗ್ಯಾಸ್ ಬೆಲೆ 2073.5 ರೂ. ಇತ್ತು. ಮುಂಬೈನಲ್ಇ 1,950 ರೂ. ಇದ್ದ ಗ್ಯಾಸ್ ಬೆಲೆ ಇದೀಗ 2,051 ರೂ. ಗೆ ಏರಿಕೆಯಾಗಿದೆ. ಇಲ್ಲಿ 101 ರೂಪಾಯಿ ಏರಿಕೆ ಮಾಡಲಾಗಿದೆ. ಇನ್ನೂ ಚೆನ್ನೈನಲ್ಲಿ 19 ಕೆ.ಜಿ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,234.50 ರೂ.ಗೆ ಏರಿಕೆಯಾಗಿದೆ. ಈ ಹಿಂದೆ ಚೆನ್ನೈನಲ್ಲಿ ಗ್ಯಾಸ್ ಬೆಲೆ 2,133 ರೂ. ಆಗಿತ್ತು. …
ವಿಜಯಪುರ: ಮೂರು ದಶಕಗಳಿಂದ ವಾಸವಿದ್ದರೂ ವಾಸಕ್ಕೆ ಮನೆಯಿಲ್ಲದೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಅಲೆಮಾರಿಗಳು ಪರದಾಡುತ್ತಿದ್ದಾರೆ. ಇದನ್ನು ಕಂಡು ಸ್ಥಳೀಯ ಶಾಸಕ ಕರುಣಾಕರ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಅಲೆಮಾರಿಗಳು ಮೂರು ದಶಕಗಳಿಂದ ಇಲ್ಲಿ ವಾಸವಿದ್ದು, ನೆರವಿಗಾಗಿ ಈ ವರೆಗೆ ಮನವಿ ಸಲ್ಲಿಸಿದರೂ ಪ್ರಯೋಜನ ವಾಗಿಲ್ಲ. ಬುಡ್ಗ ಜಂಗಮ ಬುಡಕಟ್ಟಿನ ಅಲೆಮಾರಿಗಳು ವಾಸಕ್ಕೆ ಮನೆ ಕೊಡುವಂತೆ ವಿನಂತಿಸುತ್ತಾ ಬಂದಿದ್ದಾರೆ. ಈಗಾಗಲೇ ಕೆಲ ಕಡೆ ಸ್ಥಳ ನೋಡಲಾಗಿದೆ. ಅದಷ್ಟು ಬೇಗ ಎಲ್ಲ ಅಲೆಮಾರಿಗಳಿಗೆ ಮನೆ ನೀಡುವುದಾಗಿ ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಭರವಸೆ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ಕರ್ನಾಟಕ ಸಂಪಾದಕ ಮತ್ತು ವರದಿಗಾರರ ಸಂಘದ ತಾಲೂಕು ಘಟಕದ ವತಿಯಿಂದ, ಸಂಘದ ತಾಲೂಕು ಕಚೇರಿ ಮುಂಭಾಗದ ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ಹತ್ತಿರದ ನಂದಿನಿ ಡೈರಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಟಿ, ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಪ್ರಾಮುಖ್ಯತೆ ಕೊಡಬೇಕು. ಕನ್ನಡ ನಾಡು ನುಡಿ ಜಲದ ಬಗ್ಗೆ ಸಕ್ರಿಯವಾಗಿ ನಾವೆಲ್ಲರೂ ಕೆಲಸ ಮಾಡಿಕೊಂಡು ಹೋಗಬೇಕು ಎಂದು ಕರೆ ನೀಡಿದರು. ಇದೇ ವೇಳೆ ಸಿದ್ದಲಿಂಗಪ್ಪನವರು ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಎಲ್ಲ ಪದಾಧಿಕಾರಿಗಳ ಮತ್ತು ಕಾರ್ಮಿಕ ಸಂಘಟನೆಗಳ ಸಮ್ಮುಖದಲ್ಲಿ ಆಟೋ ಚಾಲಕರಿಗೆ ಸುರಕ್ಷಿತ ಕಿಟ್ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಗೌರವಾಧ್ಯಕ್ಷರಾದ ಡಾ.ಭಾಸ್ಕರ್, ಉಪಾಧ್ಯಕ್ಷರಾದ ಶಂಕ್ರಪ್ಪ ಬಳ್ಳೆ ಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಧರಣೇಶ್ ಕುಪ್ಪಾಳು ಸೇರಿದಂತೆ ಆಟೋ ಚಾಲಕರು ಮತ್ತು ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ…
ನೆಲಮಂಗಲ: ಪಟ್ಟಣದ ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣದೇವರ ಮಠದ ಆವರಣದಲ್ಲಿ ಕರ್ನಾಟಕ ರಣಧೀರರ ವೇದಿಕೆ ಸಂಘಟನೆ ವತಿಯಿಂದ ಎರಡನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ಶ್ರೀಭುವನೇಶ್ವರಿ ಹಬ್ಬ ಹಾಗೂ ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ ಸಮಾರಂಭವು ಜರುಗಿತು. ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡಿಗರ ಆರಾಧ್ಯ ದೇವಿ ಭುವನೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ರವರು ಲೋಕಾರ್ಪಣೆ ಮಾಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ವಿವಿಧ ರಂಗಗಳಲ್ಲಿ ವಿಶಿಷ್ಟವಾದ ಸೇವೆಯನ್ನು ಮಾಡಿದಂತಹ ಸಾಧಕರಿಗೆ, ಕನ್ನಡಪರ ಹೋರಾಟಗಾರರಿಗೆ, ಮತ್ತು ಪತ್ರಕರ್ತರಿಗೆ ಕರ್ನಾಟಕ ರಣಧೀರರ ವೇದಿಕೆ ಸಂಘಟನೆಯು ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನೆ ವತಿಯಿಂದ ಶ್ರೀ ಕ್ಷೇತ್ರ ಸಿದ್ದರಬೆಟ್ಟ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿರವರಿಗೆ ಮತ್ತು ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣದೇವರ ಮಠದ…
ತಿಪಟೂರು: ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದ ಬಿಜೆಪಿ ಎಲ್ಲರೊಂದಿಗೆ ಮೈತ್ರಿ ಮಾಡಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿದು ಬಿಜೆಪಿಯನ್ನು ತಿರಸ್ಕರಿಸಬೇಕು ಎಂದು ಮಾಜಿ ಶಾಸಕ ಪರಮೇಶ್ವರ್ ಹೇಳಿದರು. ನಗರ ಕಲ್ಪತರು ಸಭಾಂಗಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಜನವಿರೋಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದರೆ ಹೆಚ್ಚಿನ ಬಲ ಬರುತ್ತದೆ. ಜನ ವಿರೋಧಿ ಕಾನೂನನ್ನು ಜಾರಿಯಾಗದಂತೆ ತಡೆಯಲು ಕಾಂಗ್ರೆಸ್ ಗೆಲುವು ಅನಿವಾರ್ಯ ಎಂದು ಹೇಳಿದರು. ಮಾಜಿ ಶಾಸಕ ಕೆ.ಷಡಕ್ಷರಿ ಮಾತನಾಡಿ, ಜಿಲ್ಲೆ ಹಾಗೂ ತಾಲೂಕಿನಲ್ಲಿ ಜನಪ್ರತಿನಿಧಿಗಳ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಕಾಂಗ್ರೆಸ್ಸಿಗೆ ಮತವನ್ನು ನೀಡಬೇಕೆಂದು ಚುನಾಯಿತ ಪ್ರತಿನಿಧಿಗಳನ್ನು ಕೇಳಿಕೊಂಡರು. ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಜನವಿರೋಧಿ ಕಾಯ್ದೆಗಳನ್ನು ತಡೆಗಟ್ಟಲು ಕಾಂಗ್ರೆಸ್ಸಿಗೆ ಹೆಚ್ಚು ಸ್ಥಾನವನ್ನು ಗೆಲ್ಲುವುದು ಅನಿವಾರ್ಯವಾಗಿದೆ ಎಂದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿಧಾನಪರಿಷತ್ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಇದು ದೂರವಾಗಲು ಜನಪ್ರತಿನಿಧಿಗಳ…