Subscribe to Updates
Get the latest creative news from FooBar about art, design and business.
- ಗ್ಯಾಂಗ್ ರೇಪ್ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್
- ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ: ಸಿಎಂನ್ನು ಭೇಟಿಯಾದ ಭಾರತಿ, ಅನಿರುದ್ಧ್
- ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಅಂತ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ: ಕುಣಿಗಲ್ ಶಾಸಕ ರಂಗನಾಥ್
- ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
- ಔರಾದ್ ಟಿಎಚ್ ಒ ವಿರುದ್ಧ ದೂರು: ಕ್ರಮಕ್ಕೆ ಸೂಚನೆ
- ಕರ್ನಾಟಕದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಅಪಘಾತಕ್ಕೆ ಬಲಿ
- ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್: ಓರ್ವ ಸಾವು, ಇಬ್ಬರು ಗಂಭೀರ
- “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ”: ಪತ್ರಕರ್ತೆಗೆ ಆರ್.ವಿ. ದೇಶಪಾಂಡೆ ಅವಮಾನ
Author: admin
ತಿಪಟೂರು: ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿದ್ದನ್ನು ವೀಕ್ಷಣೆಗೆ ತೆರಳಿದ ಗ್ರಾ.ಪಂ. ಸದಸ್ಯನ ಮೇಲೆ ಸ್ಥಳೀಯ ಗ್ರಾಮಸ್ಥರ ಕುಟುಂಬ ಸಮೇತವಾಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಗ್ರಾ.ಪಂ. ಸದಸ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ತಾಲ್ಲೂಕಿನ ರಂಗಾಪುರ ಗ್ರಾಮ ಪಂಚಾಯಿತಿಯ ಹೊಸಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ್. ಎಚ್.ಎಸ್. ಎಂಬುವರು ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿದ್ದ ಸ್ಥಳ ವೀಕ್ಷಣೆಗೆ ತೆರಳಿದ ಸಂದರ್ಭದಲ್ಲಿ ಅದೇ ಗ್ರಾಮದ ಗಂಗಾಧರ ಮತ್ತು ಮಕ್ಕಳು ಸೇರಿ ವಿನಾಕಾರಣ ಜಗಳ ತೆಗೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಸದ್ಯ ಸದ್ಯರನ್ನು ಸ್ಥಳೀಯ ಗ್ರಾಮಸ್ಥರು ಬಿಡಿಸಿ ನಗರದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಸಿರಾ: ದೇಶದಲ್ಲಿ ಕೊವಿಡ್ 19 ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಲೂಕಿನ ಜನರಿಗೆ ಸಿರಾ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು. ಮಾರುಕಟ್ಟೆ, ಬಸ್ನಿಲ್ದಾಣ, ಹೋಟೆಲ್, ಅಂಗಡಿ, ಸಿನಿಮಾ ಥಿಯೇಟರ್ ಹಾಗೂ ಇತರ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ದೈಹಿಕ ಅಂತರವನ್ನು ಕಾಪಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮಾಸ್ಕ್ ಧರಿಸದೇ ಇರುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೈಹಿಕ ಅಂತರವನ್ನು ಕಾಪಾಡದೇ ಇದ್ದ ಪಕ್ಷದಲ್ಲಿ ಸರ್ಕಾರದಿಂದ ನಿಗದಿಪಡಿಸಿರುವ ದಂಡವನ್ನು ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಇದೇ ವೇಳೆ ಕೋವಿಡ್-19 3ನೇ ಅಲೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತಕ್ಕೆ ಸಹಕರಿಸುವಂತೆ ಕೋರಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ತುಮಕೂರು ಗ್ರಾಮಾಂತರ ಊರ್ಡಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ನಾಯಕನ ಕೆರೆ ಈ ಬಾರಿ ನಿರಂತರವಾಗಿ ಸುರಿದ ಮಳೆಗೆ ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಗಂಗಾ ಪೂಜೆ ನೆರವೇರಿಸಿದರು. ಗಂಗಾಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿದ ಶಾಸಕರು, ಪೂಜೆಯಲ್ಲಿ ಭಾಗವಹಿಸಿದ್ದ ಸುಮಾರು 400ಕ್ಕೂ ಅಧಿಕ ಹೆಣ್ಣು ಮಕ್ಕಳಿಗೆ ಅರಿಶಿಣ, ಕುಂಕುಮ, ಬಳೆ ನೀಡಿದರು. ಇದೇ ವೇಳೆ ಸ್ಥಳೀಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಮದುವೆ ಕಾರ್ಯಗಳಿಗೆ ಮತ್ತು ಆರೋಗ್ಯ ಸಮಸ್ಯೆ ಇನ್ನಿತರ ಸಮಸ್ಯೆ ಉಳ್ಳವರಿಗೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಚಾಮರಾಜನಗರ: ಕೊವಿಡ್ ಭತ್ಯೆ ಮಂಜೂರು ಮಾಡುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಿರಿಯ ವೈದ್ಯರು ಎರಡನೇಯ ದಿನವಾದ ಇಂದು ಕೂಡ ಮುಷ್ಕರ ಮುಂದುವರಿಸಿದರು. ಕಿರಿಯ ವೈದ್ಯರ ಒಕ್ಕೂಟದ ಆಶ್ರಯದಲ್ಲಿ ವೈದ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಭುವನೇಶ್ವರಿ ವೃತ್ತದ ಬಳಿ ಸೇರಿದರು. ಬಳಿಕ ಅಲ್ಲಿಂದ ಜಿಲ್ಲಾಸ್ಪತ್ರೆಗೆ ತೆರಳಿ ಪ್ರತಿಭಟನೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಸಲ್ಲಿಸಿದರು. ಕೋವಿಡ್ ಸಂದರ್ಭದಲ್ಲಿ ಕಿರಿಯ ವೈದ್ಯರು ರೋಗಿಗಳ ಆರೈಕೆ ಮಾಡಿದ್ದಾರೆ. ಸರ್ಕಾರವು ಈ ವರ್ಷದ ಮೇ ತಿಂಗಳಲ್ಲಿ ಕೋವಿಡ್ ಭತ್ಯೆ ನೀಡುವುದಾಗಿ ಘೋಷಿಸಿತ್ತು. ಆದರೆ, ಇದುವರೆಗೆ ನೀಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊವಿಡ್ 19 ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ. ತುಮಕೂರು ಜಿಲ್ಲೆಯ ಸಿದ್ಧಗಂಗಾ ನರ್ಸಿಂಗ್ ಕಾಲೇಜು ಮತ್ತು ವರದರಾಜ ಕಾಲೇಜು ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್ ಬಂದಿದೆ ಎಂದು ಹೇಳಲಾಗಿದ್ದು, ಕೇರಳ ಮೂಲದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್ ರಿಪೋರ್ಟ್ ಬಂದಿದೆ ಎನ್ನಲಾಗಿದೆ. ಸದ್ಯ ಸೋಂಕು ದೃಢಪಟ್ಟ ವಿದ್ಯಾರ್ಥಿಗಳನ್ನು ಐಸೋಲೇಶನ್ ನಲ್ಲಿ ಇಡಲಾಗಿದೆ. ಸೋಂಕು ಕಂಡು ಬಂದ ಕಾಲೇಜುಗಳನ್ನು ಕಂಟೋನ್ಮೆಂಟ್ ವಲಯಗಳನ್ನಾಗಿ ಘೋಷಣೆ ಮಾಡಿ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸೋಂಕು ಕಂಡು ಬಂದ ಕಾಲೇಜು ಬಳಿಗೆ ಸಾರ್ವಜನಿಕ ಪ್ರವೇಶ ನಿಷೇಧಿಸಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಪಾಸಿಟಿವ್ ರಿಪೋರ್ಟ್ ಬಂದಿರುವ ವಿದ್ಯಾರ್ಥಿಗಳ ಆರೋಗ್ಯವನ್ನ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ, ತುಮಕೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com…
ತುಮಕೂರು: ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು ಎಂದು ಕಾಡುಗೊಲ್ಲ ಸಂಘಟನೆಗಳ ಒಕ್ಕೂಟದ ಮುಖಂಡರು ಒತ್ತಾಯಿಸಿದ್ದು, ಹಿರಿಯೂರು ಶಾಸಕಿ ಪೂರ್ಣಿಮಾ ಅವರ ರಾಜಕೀಯ ಒತ್ತಡಕ್ಕೆ ಮಣಿದು ಕಾಡುಗೊಲ್ಲ ಬುಡಕಟ್ಟು ಜನರ ಅಭಿವೃದ್ಧಿಗಾಗಿ ರಚಿಸಿರುವ ನಿಗಮದ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಮವಾರ ಸಮುದಾಯದ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ. ನಾಗಣ್ಣ, ಕಾಡುಗೊಲ್ಲರನ್ನು ಹಿಂದುಳಿದ ಪ್ರವರ್ಗ-1ರ ಜಾತಿ ಪಟ್ಟಿಗೆ ಸೇರಿಸಿ ಪ್ರತ್ಯೇಕ ಸ್ಥಾನಮಾನ ನೀಡಲಾಗಿದೆ. ಆದರೆ ಮೀಸಲಾತಿ ಸೌಲಭ್ಯ ಕಬಳಿಸಲು ಗೊಲ್ಲ ಸಮುದಾಯ ಮುಂದಾಗಿದ್ದು, ಸರ್ಕಾರದ ಹಂತದಲ್ಲಿ ಗೊಂದಲ ಮೂಡಿಸಲಾಗುತ್ತಿದೆ ಎಂದು ಆರೋಪಿಸಿದರು. ಸಿರಾ ಉಪಚುನಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಕಾಡುಗೊಲ್ಲರ ಅಭಿವೃದ್ಧಿಗಾಗಿ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದರು. ಬಳಿಕ 5 ಕೋಟಿ ಅನುದಾನ ಬಿಡುಗಡೆ ಮಾಡಿ, ವಿಶೇಷ ಅಧಿಕಾರಿ ನೇಮಕ…
ತುಮಕೂರು: ಕೋವಿಡ್ ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಪ್ರವೇಶ ನೀಡಬಾರದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಲಸಿಕೆ ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ ಸೋಮವಾರ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಮಾತನಾಡಿದ ಅವರು, ವಿದ್ಯಾರ್ಥಿಗಳು ಕನಿಷ್ಠ ಒಂದು ಡೋಸ್ ಪಡೆಯದಿದ್ದರೆ ಪ್ರವೇಶ ನೀಡುವಂತಿಲ್ಲ. ವಿದ್ಯಾರ್ಥಿಗಳು ಲಸಿಕೆ ಪಡೆಯದೆ ಕಾಲೇಜುಗಳಲ್ಲಿ ಕೋವಿಡ್ ಹೆಚ್ಚಳವಾದರೆ ಸಂಬಂಧಿಸಿದ ಪ್ರಾಚಾರ್ಯರು, ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ಎಂದು ಎಚ್ಚರಿಕೆ ನೀಡಿದರು. ವಿವಿಧೆಡೆ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಕಳೆದ ಒಂದು ತಿಂಗಳ ಹಿಂದೆ ಜಿಲ್ಲೆಗೆ ಬಂದಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಸೋಂಕು ಹರಡುವುದನ್ನು ತಡೆಯಲು ಪದವಿ, ಎಂಜಿನಿಯರಿಂಗ್, ನರ್ಸಿಂಗ್ ಕಾಲೇಜುಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಸೋಂಕು ಹೆಚ್ಚಳವಾದ ಕಡೆ ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ:…
ತುಮಕೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಹಾಗೂ ಸಿರಾ ಶಾಸಕರಾದ ಡಾ.ಸಿ.ಎಂ.ರಾಜೇಶ್ ಗೌಡ ಮತಯಾಚನೆ ಮಾಡಿದರು.v ಇಲ್ಲಿನ ಬುಕ್ಕಾಪಟ್ಟಣ ಹುಯಿಲುದೊರೆ ಪಂಚಾಯತ್ ಗಳಲ್ಲಿ ಮತಯಾಚನೆ ಮಾಡಿದ ಅವರು, ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಅವರನ್ನು ವಿಜಯಶಾಲಿಯನ್ನಾಗಿರುವಂತೆ ಮತದಾರರಲ್ಲಿ ಕೋರಿದರು. ಈ ಸಂದರ್ಭದಲ್ಲಿ ಬುಕ್ಕಾಪಟ್ಟಣ ಸತ್ಯನಾರಾಯಣ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮುಖಂಡರು ಹಾಜರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: 2021-22ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನಾಂಕವಾಗಿತ್ತು. ಆದರೆ ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಡಿಸೆಂಬರ್ 31ರವರೆಗೆ ಈ ದಿನಾಂಕವನ್ನು ವಿಸ್ತರಿಸಲಾಗಿದೆ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪುವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ `ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನ”, ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು ನವೆಂಬರ್ 30ಕ್ಕೆ ಕೊನೆಯ ದಿನಾಂಕವಾಗಿತ್ತು. ಆದರೆ ಈ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ…
ಗಾಂಧಿನಗರ: 40 ವರ್ಷದ ವಿವಾಹಿತ ಮಹಿಳೆಯೊಬ್ಬಳು 14 ವರ್ಷದ ಬಾಲಕನೊಂದಿಗೆ ಪರಾರಿಯಾಗಿರುವ ವಿಲಕ್ಷಣ ಘಟನೆ ಗುಜರಾತ್ ನ ದಾಹೋದ್ ಜಿಲ್ಲೆಯ ಸುಖಸರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನ್ನ ಮಗನ ವಯಸ್ಸಿನ ಅಪ್ರಾಪ್ತನೊಂದಿಗೆ ಓಡಿ ಹೋಗಿದ್ದ ಮಹಿಳೆ ಇದೀಗ ಕಾನೂನಿಕ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಮಹಿಳೆಗೆ ಪತಿ ಮತ್ತು ಆರು ಮಕ್ಕಳಿದ್ದರೂ, ಮಹಿಳೆ ಈ ಕೃತ್ಯ ಎಸಗಿದ್ದಾಳೆ. ಇಲ್ಲಿನ ಗಾಂಧಿನಗರದಲ್ಲಿ ಕೂಲಿ ಕೆಲಸ ಮಾಡುತ್ತಿರುವಾಗ 14 ವರ್ಷದ ಬಾಲಕನ ಪರಿಚಯವಾಗಿದೆ ಎನ್ನಲಾಗಿದೆ. ಆ ಬಳಿಕ ಇವರಿಬ್ಬರು ಪರಾರಿಯಾಗಿದ್ದಾಳೆ. ಬಾಲಕ ನಾಪತ್ತೆಯಾಗುತ್ತಿದ್ದಂತೆಯೇ ಬಾಲಕನ ಪೋಷಕರು ಮಹಿಳೆಯ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದೆ. ಸದ್ಯ ಪೊಲೀಸರು ಮಹಿಳೆಯ ವಿರುದ್ಧ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು ಮುಂದಾಗಿದ್ದು, ಬಾಲಕನ ವಯಸ್ಸನ್ನು ಸ್ಪಷ್ಟಪಡಿಸಿಕೊಳ್ಳಲು ಜನ್ಮ ಪ್ರಮಾಣ ಪತ್ರಕ್ಕಾಗಿ ಜಾಲಾಡುತ್ತಿದ್ದಾರೆ. ಬಾಲಕನ ಜನನ ದಿನಾಂಕದಲ್ಲಿ ಗೊಂದಲವಾಗಿರುವ ಕಾರಣ ತಕ್ಷಣದಲ್ಲಿ ಕ್ರಮಕೈಗೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಆಧಾರ್ ಕಾರ್ಡ್ ನಲ್ಲಿ ಬಾಲಕನ ಜನ್ಮ ವರ್ಷ 2007 ಎಂದಿದೆ. ಆದರೆ, ತನಿಖೆಯ ಸಮಯದಲ್ಲಿ ಆತನ…