Subscribe to Updates
Get the latest creative news from FooBar about art, design and business.
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
- ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
- ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
- ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
Author: admin
ಕ್ರಿಕೆಟ್ ಲೋಕದ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಆದರೆ ಅವರು ಈಗ ಸುದ್ದಿಯಾಗಿರುವುದು ಪುತ್ರಿ ಸಾರಾರ ವಿಷಯಕ್ಕಾಗಿ. ಸಚಿನ್ ರ ಪುತ್ರಿ ಸಾರಾ ತಾಯಿಯಂತೆಯೇ ವೈದ್ಯಕೀಯ ವಿದ್ಯಾಭ್ಯಾಸ ಮುಗಿಸಿದ್ದು, ಈಗ ನಟನಾ ಲೋಕದತ್ತ ಗಮನ ಹರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಜೀವನ ಚರಿತ್ರೆ ಆಧಾರಿತ ದಿ ಮಿಲೇನರ್ ಚಿತ್ರ ಬಿಡುಗಡೆಗೊಂಡ ಸಂದರ್ಭದಲ್ಲೇ ಸಾರಾಗೆ ಬಾಲಿವುಡ್ ನಿಂದ ಬುಲಾವ್ ಬಂದಿತ್ತಾದರೂ ಅವರ ತಾಯಿ ಅಂಜಲಿ ಪುತ್ರಿಯನ್ನು ನಟಿಯಾಗಿಸಲು ಒಪ್ಪಿರಲಿಲ್ಲ. ಆದರೆ ಈಗ ಅಂಜಲಿಯೇ ಸಾರಾಗೆ ನಟನೆಯ ತರಬೇತಿಯನ್ನು ಕೊಡಿಸಲು ಮುಂದಾಗಿದ್ದು , ಮಗಳನ್ನು ನಟನೆಯ ಲೋಕಕ್ಕೆ ಕರೆ ತರಲು ಸಜ್ಜಾಗಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಬ್ಯುಸಿ ಇರುವ ಸಾರಾ ತೆಂಡೂಲ್ಕರ್ಗೆ ಇನ್ ಸ್ಟಾಗ್ರಾಂನಲ್ಲಿ 1.9 ಮಿಲಿಯನ್ ಫಾಲೋವರ್ಸ್ ಇದ್ದು, ಇನ್ನು ಅವರು ಬಾಲಿವುಡ್ ಲೋಕಕ್ಕೆ ಬಂದರೆ ಅದರ ಸಂಖ್ಯೆಯೂ ಹೆಚ್ಚಾಗಲಿದೆ. ಸಚಿನ್ ಪುತ್ರ ಅರ್ಜುನ್ ತಂದೆಯಂತೆಯೇ ಕ್ರಿಕೆಟಿಗನಾಗಿ ಗುರುತಿಸಿಕೊಂಡಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋವಿಡ್ ಹೆಚ್ಚಳವಾಗುತ್ತಿದ್ದು, ನಮ್ಮಲ್ಲೂ 60 ರಿಂದ 80 ಪ್ರಕರಣಗಳು ದಾಖಲಾಗುತ್ತಿವೆ. ಕೊರೊನಾ ನಿಯಂತ್ರಣಕ್ಕಾಗಿ ಬೂಸ್ಟರ್ ಡೋಸ್ ಅತ್ಯಗತ್ಯವಾಗಿದ್ದು, ಜನರು ಅದನ್ನು ಕಡ್ಡಾಯವಾಗಿ ಪಡೆಯಲೇಬೇಕು ಎಂದು ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಜನ ಬೂಸ್ಟರ್ ಡೋಸ್ ಅಗತ್ಯವಿಲ್ಲ ಎಂದುಕೊಂಡಿದ್ದಾರೆ. ವ್ಯಾಕ್ಸಿನೇಷನ್ನಿಂದಾಗಿ ಮೂರನೆ ಅಲೆ ಪರಿಣಾಮ ಬೀರಿಲ್ಲ. ಹೀಗಾಗಿ ಈಗಲೂ ಬೂಸ್ಟರ್ ಡೋಸ್ ಅಗತ್ಯವಾಗಿ ಪಡೆಯಬೇಕು. ಸ್ವಪ್ರೇರಣೆಯಿಂದ ಎಲ್ಲರೂ ಡೋಸ್ ಪಡೆಯಬೇಕು ಎಂದು ಹೇಳಿದರು. ಜಿನೋವಿಕ್ ಸೀಕ್ವೆನ್ಸಿಂಗ್ ನಿರಂತರವಾಗಿ ನಡೆಯುತ್ತಿದೆ. ಟಾಸ್ಕ್ಫೆÇೀರ್ಸ್ ಅಡ್ವೈಸರಿ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಕೊರೊನಾ ನಿಯಂತ್ರಣ ಮಾರ್ಗಸೂಚಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ನಾಳೆ ಚರ್ಚೆ ನಡೆಸಲಿದ್ದಾರೆ. ಕೊರೊನಾ ಪ್ರಕರಣಗಳು ಎಲ್ಲಿ ಪತ್ತೆಯಾಗುತ್ತಿವೆ, ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿರುವ ಬಗ್ಗೆ, ಸೋಂಕಿತರ ಲಕ್ಷಣಗಳ ಬಗ್ಗೆ ನಾವು ಮಾನಿಟರ್ ಮಾಡುತ್ತೇವೆ. ಸದ್ಯ ಈವರೆಗೆ ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ಪರಿಸ್ಥಿತಿ ಸುಧಾರಣೆಯಲ್ಲಿದೆ.ಹೊರದೇಶದಿಂದ ಬರುವವರು ಲಕ್ಷಣ…
ದಾವಣಗೆರೆ : ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ ಜಿಲ್ಲಾ ರೋಗವಾಹಕ ಆಶಿತಾ ರೋಗಗಳ ನಿಯಂತ್ರಣ ಕಾರ್ಯಕ್ರಮ ನಡೆಯಿತು. ಮಲೇರಿಯಾ ರೋಗವು ಒಬ್ಬರಿಂದೊಬ್ಬರಿಗೆ ಹರಡುವ ಕಾಯಿಲೆ ಆದ್ದರಿಂದ ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎನ್ನುವ ಗುರಿ ಇಟ್ಟುಕೊಂಡು ದಾವಣಗೆರೆ ಜಿಲ್ಲೆಯಿಂದ ಕೊಟ್ರೇಶ್ ಹಾಗೂ ಅಂಜನೇಯ ಆಗಮಿಸಿ ಮಲೇರಿಯಾ ವಿರೋಧಿ ಮಾಸಾಚರಣೆ ತರಬೇತಿ ಜಗಳೂರು ತಾಲೂಕು ಆಶಾ ಕಾರ್ಯಕರ್ತೆಯರಿಗೆ ನೀಡಿದರು. ಈ ಕಾರ್ಯಕ್ರಮದಲ್ಲಿ ತಾಲ್ಲೂಕುಆರೋಗ್ಯ ಅಧಿಕಾರಿಗಳಾದ ನಾಗರಾಜ್ , ಪ್ರಾಸ್ತಾವಿಕ ನುಡಿಗಳನ್ನಾಡಿ , ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರು ಲಾರ್ವ ಸರ್ವೆ ಮಾಡಿ ಜನಗಳಿಗೆ ಆರೋಗ್ಯ ಶಿಕ್ಷಣ ನೀಡಿ, ಮಲೇರಿಯಾ, ಚಿಕನ್ ಗ್ಯೂನ್ಯ, ಡೆಂಗ್ಯೂ ಜ್ವರ ಈ ಎಲ್ಲಾ ಕಾಯಿಲೆ ಸೊಳ್ಳೆಯಿಂದ ಬರುತ್ತಿವೆ ಎನ್ನುವುದರ ಬಗ್ಗೆ ಜಾಗೃತಿ ಮೂಡಿಸಬೇಕು. ಇದೇ ತಿಂಗಳ 29ನೇ ತಾರೀಖಿನಂದು ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸರ್ ರವರು ಜಗಳೂರು…
ಬೆಂಗಳೂರು : ಮೂಲನಿವಾಸಿ ಅಂಬೇಡ್ಕರ್ ಸಂಘದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಬಿ. ಎಂ ಮುನಿಮಾರಪ್ಪ ಅವರು ಬುದ್ಧ ಪೂರ್ಣಿಮೆಯ ದಿನವನ್ನು ಸರ್ಕಾರವೇ ಆಚರಿಸಲಿ, ಸಾರ್ವಜನಿಕ ರಜೆ ಘೋಷಿಸಲಿ ಎಂದು ಮನವಿ ಮಾಡಿದರು. ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಅನೇಕ ಹಲವಾರು ದಾರ್ಶನಿಕರ, ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು, ಬುದ್ಧ ಪೂರ್ಣಿಮೆಯ ದಿನವನ್ನು ಸರ್ಕಾರವೇ ಆಚರಿಸಿ, ಸಾರ್ವಜನಿಕ ರಜೆ ಘೋಷಿಸಬೇಕು ಎಂದು ಒತ್ತಾಯಿಸಿದರು. ಭಾರತವನ್ನು “ಲ್ಯಾಂಡ್ ಆಫ್ ಬುದ್ಧ ” ಎಂದು ವಿದೇಶಗಳಲ್ಲಿ ಪ್ರಧಾನ ಮಂತ್ರಿಗಳೇ ಕರೆಯುತ್ತಾರೆ. ವಿಧಾನಸೌಧದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಶಾಸಕರು ಭಗವಾನ್ ಗೌತಮಬುದ್ಧರ ಬಗ್ಗೆ ಚರ್ಚೆ ಮಾಡಿರುತ್ತಾರೆ. ಹೀಗೆ ಭಾರತದ ಹೆಮ್ಮೆಯ ಸಂಕೇತವಾಗಿರುವ ಬುದ್ಧರನ್ನು ಆತನ ತತ್ವಗಳನ್ನು ಪ್ರಜೆಗಳಿಗೆ ಅರ್ಥ ಮಾಡಿಸಲು ಪ್ರತಿ ವರ್ಷ ಬುದ್ಧ ಪೂರ್ಣಿಮೆಯನ್ನು ಸರ್ಕಾರ ಅರ್ಥ ಪೂರ್ಣವಾಗಿ ಆಚರಿಸಿ, ಸಾರ್ವಜನಿಕ ರಜೆ ಘೋಷಿಸಬೇಕು ಎಂದು ಸರ್ಕಾರಕ್ಕೆ ಮೂಲನಿವಾಸಿ ಅಂಬೇಡ್ಕರ್ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಿಕೊಂಡರು.…
ಚಿಕ್ಕನಾಯಕನಹಳ್ಳಿ: ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶಪ್ಪ ವಿ . ಅವರು ಶ್ರೀರಾಮ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಹಾಗೂ ಭೂಮಿಯ ಸಂರಕ್ಷಣೆ ದಿನದ ಅಂಗವಾಗಿ ನೆಹರು ವೃತ್ತದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀರಾಮ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂ. ಲಿ ಚಿಕ್ಕನಾಯಕನ ಹಳ್ಳಿ ಶಾಖೆಯು ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶ್ರೀರಾಮ ಫೌಂಡೇಶನ್ ಮಕ್ಕಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಮಕ್ಕಳನ್ನು ಪ್ರೇರೇಪಿಸುತ್ತಿದೆ . ಇದು ಸಂತೋಷದ ವಿಷಯ ಇಷ್ಟಾದರೆ , ಸಾಲದು ಮಕ್ಕಳಲ್ಲಿ ಗುರುಹಿರಿಯರಿಗೆ ಕಾನೂನಿಗೆ ಗೌರವ ನೀಡುವ ಪರಿಪಾಠವನ್ನು ಪೋಷಕರು ಸಂಸ್ಕಾರದ ಮೂಲಕ ಮಕ್ಕಳಲ್ಲಿ ಬೆಳೆಸಬೇಕು. ಇದರಿಂದ ಆ ಮಕ್ಕಳಿಗೆ ನಾವು ಕೂಡ ಹೆಚ್ಚು ಗೌರವಕ್ಕೆ ಅರ್ಹ ರಾಗಬೇಕು ಎಂದು ನಡೆದುಕೊಳ್ಳುತ್ತಾರೆ ಎಂದರು. ವೃತ್ತ ನಿರೀಕ್ಷಣ ಅಧಿಕಾರಿ ಶ್ರೀಮತಿ ನಿರ್ಮಲ ವಿ. ಮಾತನಾಡಿ, ಭೂಮಿಯ ರಕ್ಷಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಈ ಎರಡು ಅಂಶಗಳು ಅತ್ಯಂತ ಮಹತ್ವಪೂರ್ಣ…
ಭಾರತವು ಮತ್ತೊಮ್ಮೆ ಕೋವಿಡ್ -19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದ್ದಂತೆ, ಔಷಧ ನಿಯಂತ್ರಕ ಮಹಾನಿರ್ದೇಶಕರು 6 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವಾಕ್ಸಿನ್ ಗೆ ಲಸಿಕೆಯನ್ನು ನಿರ್ಬಂಧಿತ ತುರ್ತು ಬಳಕೆಗೆ ಮಂಗಳವಾರ ಅಂಗೀಕಾರ ನೀಡಿದ್ದಾರೆ. 2021ರ ಡಿಸೆಂಬರ್ ನಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗಾಗಿ ಕೋವಾಕ್ಸಿನ್ ನೀಡಲು ಕೇಂದ್ರ ಸರ್ಕಾರದ ಸಮಿತಿ ಅನುಮೋದಿಸಿತು. ಈಗ 6ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಅನುಮತಿ ನೀಡಲಾಗಿದೆ. ಮೊದಲ ಎರಡು ತಿಂಗಳವರೆಗೆ ಪ್ರತಿ 15 ದಿನಗಳಿಗೊಮ್ಮೆ, ಐದು ತಿಂಗಳ ಬಳಿಕ ಮಾಸಿಕ ವಿಶ್ಲೇಷಣೆಗಳೊಂದಿಗೆ ಪ್ರತಿಕೂಲ ಘಟನೆಗಳು ಸೇರಿದಂತೆ ಸುರಕ್ಷತಾ ದತ್ತಾಂಶವನ್ನು ಸಲ್ಲಿಸಲು ಕಂಪನಿಗೆ ಸೂಚನೆ ನೀಡಲಾಗಿದೆ. ಔಷಧ ನಿಯಂತ್ರಕ ಮಹಾನಿರ್ದೇಶಕರ ವಿಷಯ ತಜ್ಞರ ಸಮಿತಿ ಏಪ್ರಿಲ್ 21ರಂದು 2-12 ವರ್ಷ ವಯಸ್ಸಿನ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ನೀಡಲು ಬಯಸಿದ್ದ ಭಾರತ್ ಬಯೋಟೆಕ್ ಸಂಸ್ಥೆಯಿಂದ ಹೆಚ್ಚುವರಿ ಮಾಹಿತಿ ಒದಗಿಸುವಂತೆ ಕೇಳಿತ್ತು. ಆ ಸಮಯದಲ್ಲಿ ಐದು ರಿಂದ 11…
ಮಧುಗಿರಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕು ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಪೆದ್ದನಹಳ್ಳಿ ಗ್ರಾಮದ ದಲಿತ ಮಾದಿಗ ಸಮುದಾಯಕ್ಕೆ ಸೇರಿದ ಗಿರೀಶ್, ಹಾಗೂ ಮಂಚಲದೊರೆ ಗ್ರಾಮದ ಅನಿಲ್ ಇಬ್ಬರು ಸ್ನೇಹಿತರಾಗಿದ್ದು, ಇಬ್ಬರ ಮೇಲೆ ಕಳ್ಳತನ ಆರೋಪ ವರಿಸಿ ತೋಟದ ಮನೆಯಲ್ಲಿ ಇಬ್ಬರನ್ನು ಕೂಡಿ ಹಾಕಿ ಬಟ್ಟೆ ಬಿಚ್ಚಿಸಿ ಇಡೀ ರಾತ್ರಿ ಮನಬಂದಂತೆ, ಅಮಾನುಷವಾಗಿ, ಚಿತ್ರಹಿಂಸೆ ನೀಡಿ,ಕೊಲೆ ಮಾಡಿರುವುದು ನಾಗರಿಗ ಸಮಾಜದಲ್ಲಿ ತಲೆ ತಗ್ಗಿಸುವಂತೆ ಆಗಿದೆ ಎಂದು ದಲಿತ ಪರ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಇಂದಿಗೂ ಜಾತಿ ಬೇಧ ಹಾಗೂ ಬಡತನ ಇನ್ನು ಹಳ್ಳಿಗಳಲ್ಲಿ ಜೀವಂತವಾಗಿದ್ದು, ದಲಿತರ ಮೇಲೆ ಸವರ್ಣಿಯರು ಇಂದಿಗೂ ದೌರ್ಜನ್ಯ ಎಸಗುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಬಡ ದಲಿತ ಮಾದಿಗ ಸಮುದಾಯದ ಬಡಕುಟುಂಬಕ್ಕೆ ಆಸರೆಯಾಗಿದ್ದ ಯುವಕರನ್ನು ಹಿಂಸಿಸಿ “ಕೊಲೆ ಮಾಡಿದ “ಪಾಪಿಗಳಿಗೆ ಕಾನೂನಿ ನಡಿ ಶಿಕ್ಷೆ ನೀಡಬೇಕು. ಕೊಲೆಯಾದ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ರೂ. ಅನುದಾನವನ್ನು ಸರ್ಕಾರದಲ್ಲಿ ನೀಡಬೇಕು ಮಾತು ಕೊಲೆಯಾದ ಕುಟುಂಬದವರ ಸದಸ್ಯರಿಗೆ ಸರ್ಕಾರಿ ಹುದ್ದೆ ನೀಡಬೇಕೆಂದು ದಲಿತ…
ಗುಬ್ಬಿ: ದೇಶದಲ್ಲಿ ಶೇ. 3ರಷ್ಟಿರುವ ಜನರು ಅಧಿಕಾರ ಹಿಡಿದು ಶೇ. 87ರಷ್ಟಿರುವ ಬಹುಸಂಖ್ಯಾತರ ಮೇಲೆ ಅಧಿಕಾರ ಚಲಾಯಿಸುತ್ತಿರುವುದು ವಿಪರ್ಯಾಸ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಸಂಘಟನಾ ಸಂಚಾಲಕಿ ಅಕ್ಷತಾ ವಿಷಾದಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆಯಲ್ಲಿ ಫಲಾಪೇಕ್ಷೆ ಇಲ್ಲದೆ ಪಾಲ್ಗೊಂಡಾಗ ಮಾತ್ರ ಹೋರಾಟಗಳು ಯಶಸ್ವಿಯಾಗಲು ಸಾಧ್ಯ. ತನ್ನ ಜ್ಞಾನದಿಂದಲೇ ಉನ್ನತ ಸ್ಥಾನ ಪಡೆದ ಅಂಬೇಡ್ಕರ್ ಅವರು ಮನುವಾದಿ ವ್ಯವಸ್ಥೆ ವಿರುದ್ಧ ಶೋಷಿತರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವರ ಹೋರಾಟದ ಪ್ರತಿಫಲ ಅನುಭವಿಸುತ್ತಿರುವ ಪರಿಶಿಷ್ಟರು ಅವರ ಚಿಂತನೆಗಳನ್ನು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿದರು. ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಶೋಷಿತರ ಧ್ವನಿಯಾಗಿ ಸಾಮಾಜಿಕ ನ್ಯಾಯ ಕಾಪಾಡುವ ನಿಟ್ಟಿನಲ್ಲಿ ಉತ್ತಮವಾದ ಸಂವಿಧಾನ ನೀಡಿದ್ದಾರೆ. ಇಂಥ ಮಹಾನ್ ವ್ಯಕ್ತಿಗಳನ್ನು ಕೆಲವೇ ಸಮುದಾಯಕ್ಕೆ ಸೀಮಿತಗೊಳಿಸುವುದು ತರವಲ್ಲ. ಅವರ ಆದರ್ಶ, ಚಿಂತನೆಗಳು ನಮಗೆ ಮಾರ್ಗದರ್ಶಕವಾಗಿವೆ ಎಂದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದರಾಜು, ಮುಖಂಡ ಕೊಟ್ಟ…
ಕುಣಿಗಲ್: ಪಟ್ಟಣದ ಎಪಿಎಂಸಿ ಕಚೇರಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ಸೋಮವಾರ ಪ್ರಾರಂಭವಾಗಬೇಕಾಗಿದ್ದ ನೋಂದಣಿ ಪ್ರಕ್ರಿಯೆಯು ತಾಂತ್ರಿಕ ಕಾರಣದಿಂದ ವಿಳಂಬವಾದ ಪರಿಣಾಮ ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರು, ರಾಷ್ಟ್ರೀಯ ಹೆದ್ದಾರಿ 48ಕ್ಕೆ ಕಲ್ಲುಗಳನ್ನು ಅಡ್ಡಲಾಗಿ ಇಟ್ಟು ಪ್ರತಿಭಟನೆ ನಡೆಸಿದರು. ಬೆಂಗಳೂರು- ಮಂಗಳೂರು ರಸ್ತೆಯಲ್ಲಿ ರೈತರು ಜಮಾವಣೆಗೊಂಡಿದ್ದರಿಂದ ಎರಡೂ ಕಡೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿತ್ತು. ರೈತರ ಆಕ್ರೋಶದ ಹಿನ್ನೆಲೆಯಲ್ಲಿ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಶಾಸಕ ಬಿ.ಬಿ. ರಾಮಸ್ವಾಮಿಗೌಡ ಪ್ರತ್ಯೇಕವಾಗಿ ಸಭೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ ತಾತ್ಕಾಲಿಕ ಪರಿಹಾರದ ವ್ಯವಸ್ಥೆ ಮಾಡಿದರು. ರೈತರು ಭಾನುವಾರ ರಾತ್ರಿಯಿಂದಲೇ ಕೇಂದ್ರಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದರು. ಮಧ್ಯಾಹ್ನವಾದರೂ ತಾಂತ್ರಿಕ ಕಾರಣಗಳಿಂದ ನೋಂದಣಿ ಕಾರ್ಯ ಪ್ರಾರಂಭವಾಗುವ ಲಕ್ಷಣ ಕಂಡುಬರಲಿಲ್ಲ. ಮತ್ತೊಂದೆಡೆ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದೆ ಬಿಸಿಲಿನಲ್ಲಿ ಬಳಲಿದ ರೈತರು, ಅಧಿಕಾರಶಾಹಿಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫೋಟೋ ವೈರಲ್ ಆಗಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜತೆಗಿರುವ ಫೋಟೋ ಕುರಿತು ಬಿಜೆಪಿ ನಾಯಕರು ಮಾತನಾಡುತ್ತಿದ್ದು, ತನಿಖಾಧಿಕಾರಿಗಳು ನನಗೆ ನೊಟೀಸ್ ನೀಡಿ ಕರೆದು, ತನಿಖೆ ಮಾಡಲಿ ಸವಾಲು ಹಾಕಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ನನ್ನನ್ನು ಬಹಳ ಮಂದಿ ಭೇಟಿ ಮಾಡುತ್ತಾರೆ. ಈ ಫೋಟೋ ಯಾವುದು ಎಂದು ನನಗೆ ಗೊತ್ತಿಲ್ಲ. ಈಗ ನಮ್ಮ ಸ್ನೇಹಿತರು ಈ ವಿಚಾರದ ಬಗ್ಗೆ ಹೇಳಿದ್ದಾರೆ ಎಂದು ಹೇಳಿದರು. ಪೊಲೀಸ್ ಅಧಿಕಾರಿಗಳು ಮೊದಲು ನನಗೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯಲಿ. ನಾನು ಮಂತ್ರಿಯಾಗಿ ಕೆಲಸ ಮಾಡಿದವನು. ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ನಿಯೋಗದೊಂದಿಗೆ ಬಂದಿದ್ದರು, ತಮ್ಮ ಸಮಸ್ಯೆ…