Subscribe to Updates
Get the latest creative news from FooBar about art, design and business.
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
- ಜೂಜಾಟ: 12 ಮಂದಿ ಆರೋಪಿಗಳ ಬಂಧನ
Author: admin
ತುಮಕೂರು: ಜಿಲ್ಲೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿ.ಎಸ್.ಪುರ ಗ್ರಾಮದಲ್ಲಿ ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ಸಿ.ಎಸ್.ಪುರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ರವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಯುವಶಕ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಬಾಣಸಂದ್ರದ ಲಕ್ಷ್ಮೀದೇವಮ್ಮ ರವರ ಪ್ರಾರ್ಥನೆಯಿಂದ ಪ್ರಾರಂಭವಾಯಿತು. ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಯುವ ಮುಖಂಡರುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರಾಸ್ತಾವಿಕವಾಗಿ ಯುವ ಮುಖಂಡ ನಂಜಪ್ಪ ಮಾತನಾಡಿ, ಸ್ವಾತಂತ್ರ ನಂತರ ಹಸಿವು ಮುಕ್ತ ಭಾರತ, ಸಾಕ್ಷರ ಭಾರತ, ನಿರುದ್ಯೋಗ ಸಮಸ್ಯೆಯನ್ನು ಎದುರಿಸಿ ಶಿಕ್ಷಣ ವಂಚಿತರಿಗೆ ಶಿಕ್ಷಣ ದೊರಕಿಸಿ, ಈ ಎಲ್ಲಾ ಕಾರ್ಯಕ್ರಮಗಳು ಕೊಟ್ಟಂತ ಸರ್ಕಾರ ನಮ್ಮ ಕಾಂಗ್ರೆಸ್ ಸರ್ಕಾರ. ಆದ್ದರಿಂದ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದು ಉತ್ತಮ ಯೋಜನೆಗಳನ್ನು ಕೊಡುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು. ರಾಜ್ಯ ಯುವ ಕಾರ್ಯದರ್ಶಿ ಇಲ್ಲಾಯಿ ಸಿಕಂದರ್ ಮಾತನಾಡಿ, ಕೇಂದ್ರ ಸರ್ಕಾರ ಯುವಕರನ್ನ ಓಲೈಸಿ, ಇಲ್ಲಸಲ್ಲದ…
ಮಧುಗಿರಿ: ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಜಿಲ್ಲಾಮಟ್ಟದ ಶ್ರೀ ಕಣಿವೆ ಕಬ್ಬಡಿ ಸ್ಪೋರ್ಟ್ಸ್ ಆಯೋಜನೆ ಮಾಡಲಾಯಿತು. ಈ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ 10,000 ತುಮಕೂರಿನ ‘ಎ’ ತಂಡ ಗಳಿಸಿದ್ರೆ, ದ್ವಿತೀಯ ಬಹುಮಾನ 5,000 ದೊಡ್ಡೇರಿ ತಂಡಗಳಿಸಿತು, ತೃತೀಯ ಬಹುಮಾನ ತುಮಕೂರಿನ ಮತ್ತೊಂದು ‘ಬಿ’ ತಂಡ ಪಡೆಯಿತು, ಸಮಾಧಾನಕರ ನಾಲ್ಕನೇ ಬಹುಮಾನ ಸೋದೇನಳ್ಳಿ ಗಳಿಸಿತು. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಉದ್ಯಮಿ ಡಿ.ಟಿ.ವೆಂಕಟೇಶ್, ಡಿ.ಆರ್.ರಮೇಶ್, ಪ್ರಸನ್ನ ಕುಮಾರ್, ನಾಗಮಣಿ ರಂಗಸ್ವಾಮಿ, ವಕೀಲರ ಶಿವಣ್ಣ, ಡಿ.ವಿ.ಮಂಜುನಾಥ್, ದೊಡ್ಡೇರಿ ಕಣಿ ಮಯ್ಯ, ದೊಡ್ಡೇರಿ ಮಹಾಲಿಂಗಯ್ಯ, ಶಿವಣ್ಣ, ಕೆ.ಹರ್ಷವರ್ಧನ್, ಕಾಂತರಾಜ್, ಆರಾಧ್ಯ, ರಾಕೇಶ್, ಚೇತನ್, ಕಾಂತರಾಜ್, ಗೋವಿಂದ, ಪ್ರವೀಣ್ ಇನ್ನು ಮುಂತಾದವರು ಭಾಗವಹಿಸಿದ್ದರು. ವರದಿ: ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಗೆ ಸೇರಿದ ಸಂಪಿಗೆ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರದ ಸಿಬ್ಬಂದಿ ಕೆಲಸದ ಸಮಯದಲ್ಲಿ ಸುಳ್ಳು ಕಾರಣ ಹೇಳಿ ಸಹಕಾರ ಸಂಘದ ಕೇಂದ್ರಕ್ಕೆ ಬೀಗ ಹಾಕಿ ತೆರಳಿದ ಘಟನೆ ನಡೆದಿದ್ದು, ಇದರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಹಕಾರ ಸಂಘದ ಕೇಂದ್ರದಲ್ಲಿ ಸುಮಾರು ಐದು ಜನ ಸಿಬ್ಬಂದಿ ಇದ್ದು, ಕಚೇರಿಗೆ ಸುಮಾರು 1 ಗಂಟೆಗೆ ಹಾಕಲಾದ ಬೀಗ 3 ಗಂಟೆಯವರೆಗೆ ತೆರೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ. ಯಾರೊಬ್ಬರೂ ಕರ್ತವ್ಯದ ಸಮಯದಲ್ಲಿ ಇಲ್ಲದಿರುವುದನ್ನು ಕಂಡ ಸಾರ್ವಜನಿಕರು ಬೀಗ ಹಾಕಿರುವ ಘಟನೆ ಬಗ್ಗೆ ವಿಚಾರಿಸಿದಾಗ ಅಲ್ಲಿದ್ದ ಸಿಬ್ಬಂದಿ ಮತ್ತು ಕಾರ್ಯದರ್ಶಿಗಳು ತುರುವೇಕೆರೆ ಸಭೆಗೆ ಹೋಗಿದ್ದಾರೆ ಎಂದು ಸುಳ್ಳು ಉತ್ತರ ನೀಡಿದ್ದಾರೆನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕರ ದೂರಿನನ್ವಯ ತುಮಕೂರಿನಿಂದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಿಬ್ಬಂದಿಯನ್ನು ಫೋನ್ ಕರೆ ಮಾಡುವ ಮೂಲಕ ಕರೆಸಿ, ಈ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕೇಂದ್ರದ ಬೀಗವನ್ನು…
ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಅವರೂ ಕಾರಣ, ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಸಿಎಂ ಬಸವರಾಜ ಬೊಮ್ಮಾಯಿ ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿದ್ದಾರೆ. ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಜುಲೈ 1 ಶುಕ್ರವಾರದಿಂದ ರಾಜ್ಯಾದ್ಯಂತ ನಗರ ನೈರ್ಮಲ್ಯ, ಸ್ವಚ್ಛತೆ ಸ್ಥಗಿತಗೊಳಿಸಿ, ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟಾವಧಿ ಮೂರನೇ ದಿನಕ್ಕೆ ಕಾಲಿಟ್ಟಿಟ್ಟಿದ್ದು, ಹೊರಗುತ್ತಿಗೆದಾರರಾದ ಪೌರಕಾರ್ಮಿಕರು, ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳು ಇಂದೂ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಸಭೆ ಕಾರ್ಯಾಲಯದ ಮಾಜಿ ಉಪಾಧ್ಯಾಕ್ಷರಾಗಿದ್ದ ಜ್ಯೋತಿಲಕ್ಷ್ಮಿ ಗೋಪಿಯಾದವ್, ನಾನು ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿ ಕೆಲಸ ಮಾಡಿದ್ದು, ಈಗಲೂ ಸಹ ಕಾರ್ಮಿಕ ವಿಭಾಗದಲ್ಲಿ ಕಾರ್ಯಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಗುತ್ತಿಗೆ ಕಾರ್ಮಿಕರು ಜೀವನ ನಡೆಸುವುದು ತುಂಬಾ ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಗುತ್ತಿಗೆ ಆಧಾರದ ನೌಕರರನ್ನು ಖಾಯಂಗೊಳಿಸಿದರೆ, ಅವರ ಕುಟುಂಬ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದರು. ಸರ್ಕಾರ ಇಂದು ಪೌರಕಾರ್ಮಿಕರಿಗೆ ಸಂಕಷ್ಟ ಬತ್ಯೆ 2,000…
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘದ ವತಿಯಿಂದ ನಡೆದ ಎಂಟನೇ ಅಂತರರಾಷ್ಟ್ರೀಯ ವಸ್ತು ಪ್ರದರ್ಶನದ ಸಮಾರಂಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹಿರಿಯ ಛಾಯಾಗ್ರಹಕರಾದ ಹಿರಿಯೂರಿನ ಸೂರ್ಯೋದಯ ಸ್ಟುಡಿಯೋ ಮಾಲಿಕರು ಹಾಗೂ ಛಾಯಾಗ್ರಾಹಕರಾದ ಹೆಚ್.ಆರ್. ಅಬ್ದುಲ್ ಅಜೀಜ್ ಹಾಗೂ ಪಾರ್ಥಸಾರಥಿ, ಗೌಸ್ ಪೀರ್ ಮತ್ತು ರಾಮಕೃಷ್ಣಪ್ಪ ಅವರ ಸೇವಾ ಮನೋಭಾವವನ್ನು ಗುರುತಿಸಿ “ಪೋಟೋ ಗ್ರಾಫಿ ಎಕ್ಸಲೆನ್ಸಿ ಅವಾರ್ಡ್” ನೀಡಿ ಸನ್ಮಾನಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹೆಚ್. ಆರ್ .ಅಬ್ದುಲ್ ಅಜೀಜ್, ಇವತ್ತು ಛಾಯಾಗ್ರಹಣ ಕ್ಷೇತ್ರ ಎಲ್ಲಾ ವಿಧದ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಯಾಗಿದೆ. ಆದರೆ ಇಷ್ಟೊಂದು ಅಭಿವೃದ್ಧಿ ಒಮ್ಮೆಲೇ ಆಗಿಲ್ಲ ಬದಲಿಗೆ ಹಂತಹಂತವಾಗಿ ಅಭಿವೃದ್ಧಿಯಾಗಿರುವುದನ್ನು ನಾವು ಒಪ್ಪಲೇ ಬೇಕಾಗುತ್ತದೆ. ಛಾಯಾಗ್ರಹಣ ಕ್ಷೇತ್ರದ ಅಭಿವೃದ್ಧಿಯಾಗಲು ಹಲವರು ತಮ್ಮದೇ ಆದ ತಂತ್ರಜ್ಞಾನವನ್ನು ಬಳಸಿ ಹೊಸ ಪ್ರಯೋಗಗಳನ್ನು ಕೂಡ ಮಾಡಿದ್ದಾರೆ. ಅಂತಹವರ ಸಾಲಿಗೆ ಫ್ರಾನ್ಸ್ ದೇಶದ ಎಲ್.ಜೆ.ಎಂ.ಡಾಗೈರ್ ಸೇರುತ್ತಾರೆ ಎಂದರು. ಎಲ್.ಜೆ.ಎಂ.ಡಾಗೈರ್ ಅವರನ್ನು ಛಾಯಾಗ್ರಹಣದ ಪಿತಾಮಹ ಎಂದು ಕೂಡ ಕರೆಯಲಾಗುತ್ತದೆ. ವಿಶ್ವ ಛಾಯಾಗ್ರಾಹಕರ ದಿನದಂದು ಪ್ರತಿಯೊಬ್ಬರು…
ಕೊರಟಗೆರೆ: ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರೀಷ್ಠರಾದ ಹೆಚ್.ಡಿ.ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಹೇಳಿದರು. ಕೊರಟಗೆರೆ ಪಟ್ಟಣದ ಬೈಲಾಂಜಿನೇಯ ಸ್ವಾಮಿ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ತಂದೆಯ ವಯಸ್ಸಿನಷ್ಟಿರುವ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣನವರು ಹೇಳಿಕೆ ನೀಡಿರುವುದು ಖಂಡನೀಯವಾದುದ್ದು, ಇಡೀ ರಾಜ್ಯ, ರಾಷ್ಟ್ರ ದೇವೇಗೌರನ್ನು ಅಭಿಮಾನ ದಿಂದ ಪ್ರೀತಿಸುತ್ತಾರೆ ಎಂದರು. ಇಳಿವಯಸ್ಸಿನಲ್ಲೂ ದೇಶದ ರೈತರ ಬಗ್ಗೆ ಚಿಂತಿಸುವ ರಾಜಕಾರಣಿಯಾಗಿರುವ ಅವರು ನೀರಾವರಿ ವಿಚಾರದಲ್ಲಿ ಅವರು ನಡೆಸಿದ ಐತಿಹಾಸಿಕ ಹೋರಾಟಗಳು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದು ತಿಳಿಸಿದರು. ರಾಗಿಗೆ ಬೆಂಬಲ ಬೆಲೆ ನೀಡುವಂತೆ ಸಂಸತ್ತಿನಲ್ಲಿ ದೇವೇಗೌಡರು ಧ್ವನಿ ಎತ್ತಿದ ಕೂಡಲೇ ಮೋದಿ ಸರ್ಕಾರ ರಾಗಿ ಬೆಳೆಗೆ ಬೆಂಬಲ ಬೆಲೆ ಪ್ರಕಟಿಸಿತು. ಇದು ದೇಶದ ರಾಜಕಾರಣದಲ್ಲಿ ದೇವೇಗೌಡರಿಗಿರುವ ಗೌರವ ಎಂದು ತಿಳಿಸಿದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.…
ಗುಬ್ಬಿ: ತೋಟದ ಮನೆಯಲ್ಲಿ ಕಟ್ಟಿ ಹಾಕಿದ್ದ ಟಗರುವೊಂದನ್ನು ಚಿರತೆ ಕೊಂದು ತಿಂದು ಹಾಕಿರುವ ಘಟನೆ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಚಿಕ್ಕ ಚೆಂಗಾವಿ ಗ್ರಾಮದಲ್ಲಿ ನಡೆದಿದೆ. ಚೆಂಗಾವಿ ಗ್ರಾಮದ ರೈತ ಮುಖಂಡ ಪ್ರಕಾಶ್ ಎಂಬುವರ ತೋಟದ ಮನೆಯಲ್ಲಿ ಕಟ್ಟಿ ಹಾಕಿದ್ದ ಟಗರನ್ನು ಶನಿವಾರ ತಡ ರಾತ್ರಿ ಚಿರತೆ ದಾಳಿ ನಡೆಸಿ ಕೊಂದು ಹಾಕಿದ್ದು, ಕುತ್ತಿಗೆಯಿಂದ ಮೇಲ್ಭಾಗ ಹಗ್ಗದಲ್ಲೇ ಉಳಿದಿದ್ದರೆ, ದೇಹದ ಭಾಗವನ್ನು ಚಿರತೆ ಹೊತ್ತೊಯ್ದು ತಿಂದು ಹಾಕಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರು, ಈ ಭಾಗದಲ್ಲಿ ಸಾಕಷ್ಟು ಬಾರಿ ಚಿರತೆಗಳು ದಾಳಿ ನಡೆಸಿದ್ದರೂ ಅರಣ್ಯ ಇಲಾಖೆ ಕ್ರಮವಹಿಸುತ್ತಿಲ್ಲ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಚಿರತೆಗಳನ್ನು ಹಿಡಿಯಲು ಬೋನುಗಳನ್ನಿಡಬೇಕು. ಈ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಚಿರತೆಗಳು ನಿರಂತರವಾಗಿ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಚಿರತೆಗಳನ್ನು ಸೆರೆ ಹಿಡಿಯದೇ ನಿರ್ಲಕ್ಷಿಸುತ್ತಿದೆ. ಅಧಿಕಾರಿಗಳು, ಇನ್ನೂ ಈ ಬಗ್ಗೆ ಕ್ರಮಕೈಗೊಳ್ಳದಿದ್ದರೆ, ಅರಣ್ಯ ಇಲಾಖೆ ಎದುರು ಉಗ್ರ ಹೋರಾಟ ಮಾಡಬೇಕಾಗುತ್ತದೆ…
ಮೈಸೂರು: ನನ್ನ ಪತಿ ನರೇಶ್ ನನಗೆ ಮೋಸ ಮಾಡಿದ್ದಾರೆ. ಈ ವಿಚಾರದಲ್ಲಿ ನಾನು ಪವಿತ್ರ ಲೋಕೇಶ್ ಅವರನ್ನು ದೂರುವುದಿಲ್ಲ. ತೆಲುಗಿನ ಖ್ಯಾತ ನಟ ನರೇಶ್ ಪತ್ನಿ ರಮ್ಯ ರಘುಪತಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಶ್ ನನ್ನನ್ನು ಮದುವೆಯಾಗಿದ್ದೇ ರಾಜಕೀಯ ಉದ್ದೇಶಕ್ಕಾಗಿ. ಮದುವೆಯಾಗಿ ಎರಡು ವರ್ಷ ಮಾತ್ರ ನರೇಶ್ ಅನ್ಯೋನ್ಯವಾಗಿದ್ದರು. ಆ ಬಳಿಕ ನನಗೆ ತೊಂದರೆ ಕೊಡುತ್ತಲೇ ಬಂದಿದ್ದಾರೆ. ಆದರೂ ನಾನು ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೇನೆ. ನನ್ನ ಮಗನಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇನೆ. ಆದರೀಗ ನನಗೆ ಡಿವೋರ್ಸ್ ನೋಟಿಸ್ ಕಳುಹಿಸಿದ್ದಾರೆ. ನಾನು ಯಾವುದೇ ಕಾರಣಕ್ಕೂ ಡಿವೋರ್ಸ್ ಕೊಡುವುದಿಲ್ಲ. ನಾನು ಒಳ್ಳೆಯ ಮನೆತನಕ್ಕೆ ಸೇರಿದವಳು. ನನ್ನ ಉಸಿರಿರುವವರೆಗೂ ನ್ಯಾಯಕ್ಕಾಗಿ ಹೋರಾಟ ನಡಸುತ್ತೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊಪ್ಪಳ: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನ ರಾಸಲೀಲೆ ಪ್ರಕರಣ ಬಯಲಾಗುತ್ತಿದ್ದಂತೆಯೇ ಆತನನ್ನು ಸಸ್ಪೆಂಡ್ ಮಾಡಲಾಗಿದ್ದು, ಆತನ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಶಿಕ್ಷಕ ಮಹಮ್ಮದ್ ಅಜರುದ್ದೀನ್ ನನ್ನು ಅಮಾನತು ಮಾಡಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿಕ್ಷಕ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಇದೀಗ ಸಂತ್ರಸ್ತ ಮಹಿಳೆಯೊಬ್ಬರು ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ. ಪುತ್ರಿಗೆ ಟ್ಯೂಷನ್ ಹೇಳಿ ಕೊಡುವ ಜೊತೆಗೆ ಸರ್ಕಾರಿ ಸೌಲಭ್ಯ ಕಲ್ಪಿಸುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಲೈಂಗಿಕ ಕ್ರಿಯೆಗೆ ಪದೇ ಪದೇ ಒತ್ತಾಯಿಸಿದ್ದಾನೆ. ಇಲ್ಲದಿದ್ದರೆ ವಿಡಿಯೋಗಳನ್ನು ಬಹಿರಂಗಪಡಿಸಿ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz