Subscribe to Updates
Get the latest creative news from FooBar about art, design and business.
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
- ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
- ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
- ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
- ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
- ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
Author: admin
ಹಾವೇರಿ: ಬಸ್ಸೊಂದು ಉರುಳಿ ಬಿದ್ದ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಚಿಕ್ಕೊಣತಿ ಗ್ರಾಮದ ಬಳಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ರಾಣೇ ಬೆನ್ನೂರಿಂದ ಹಾನಗಲ್ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಮಗುಚಿ ಬಿದ್ದಿದ್ದು, ಪರಿಣಾಮವಾಗಿ 15 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,483 ಹೊಸ ಕರೋನ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳು 15,636 ಕ್ಕೆ ಇಳಿದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ,ಸೋಂಕಿನಿಂದ ಅಸ್ಸಾಂ ಮತ್ತು ಕೇರಳದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏರಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಬಿಡುಗಡೆಯಾಗಿರುವ ಡೇಟಾದಲ್ಲಿ ದೇಶದಲ್ಲಿ ಮತ್ತೆ ಕೊರೊನಾ ಬಾದಿಸುವ ಎಚ್ಚರಿಕೆ ನೀಡಲಾಗಿದೆ.ದಕ್ಷಿಣದ ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 47 ಜನರು ಸಾವನ್ನಪ್ಪಿದ್ದಾರೆ.ಸೊಂಕಿನಿಂದ ಸಾವಿನ ಪ್ರಮಾಣ ಶೇಕಡಾ 1.22 ರಷ್ಟಿದ್ದು ಅಲರ್ಟ್ ಘೊಷಿಸಲಾಗಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದಡಿ 187.95 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. 4ನೇ ಅಲೆ ಕಾರಣ ಎಲ್ಲರಿಗೂ ಬೂಸ್ಟರ್ ಲಸಿಕೆ ನೀಡುವಂತೆ ಆರೋಗ್ಯ ಪರಿಣಿತರು ಸೂಚಿಸಿದ್ದಾರೆ. ವರದಿ ಆಂಟೋನಿ ಬೇಗೂರು
ನೈಸ್ ಯೋಜನೆಗೆ ನೀಡಲಾಗಿದ್ದ 543 ಎಕರೆ ಭೂಮಿ ವಾಪಸ್ನೈಸ್ ಯೋಜನೆಗೆ ನೀಡಲಾಗಿದ್ದ 543 ಎಕರೆ ಭೂಮಿ ವಾಪಸ್ನಿಗದಿತ ಅವಯಲ್ಲಿ ಬಿಎಂಐಸಿ ಯೋಜನೆಯನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ನೈಸ್ ಯೋಜನೆಗೆ ನೀಡಲಾಗಿದ್ದ 543 ಎಕರೆ ಹೆಚ್ಚುವರಿ ಭೂಮಿಯನ್ನು ಹಿಂಪಡೆಯುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಉಪಸಮಿತಿ ತೆಗೆದುಕೊಂಡಿದೆ.ಕಂದಾಯ ಸಚಿವ ಆರ್.ಅಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಎನ್.ರವಿಕುಮಾರ್ ನೇತೃತ್ವದ ಉಪಸಮಿತಿಯು ಸಭೆ ನಡೆಸಿ ಯೋಜನೆಗೆ ನೀಡಿದ್ದ 543 ಎಕರೆ ಹೆಚ್ಚುವರಿ ಭೂಮಿಯನ್ನು ಪುನಃ ಸರ್ಕಾರ ವಶಕ್ಕೆ ಪಡೆಯುವ ನಿರ್ಧಾರವನ್ನು ತೆಗೆದುಕೊಂಡಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದಿಂದ ಹೆಚ್ಚುವರಿಯಾಗಿ ಭೂಮಿ ಪಡೆದು ನಿಗದಿತ ಅವಯೊಳಗೆ ಯೋಜನೆಯನ್ನು ಪೂರ್ಣಗೊಳಿಸಿಲ್ಲ. ಹೀಗಾಗಿ ನಾವು ಭೂಮಿಯನ್ನು ವಾಪಸ್ ಪಡೆಯುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು. ನೈಸ್ ಕಂಪನಿಯು ಬಿಎಂಐಸಿ ಯೋಜನೆಯನ್ನು ನಿಗದಿತ ಅವಯೊಳಗೆ ಪೂರ್ಣಗೊಳಿಸಿಲ್ಲ. ಕಾಂಕ್ರೀಟ್ ರಸ್ತೆ, ಮೇಲ್ಸೇತುವೆ ಮಾಡಬೇಕಿತ್ತು. ಅದಾವುದನ್ನೂ ಸರಿಯಾಗಿ ಮಾಡದೆ ಬಹಳಷ್ಟು ನಿಯಮಗಳನ್ನು…
ರಾಜ್ಯಾದ್ಯಂತ ವಿವಾದ ಎಬ್ಬಿಸಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ಸಂಬಂಧ, ಬ್ಲೂಟೂತ್ ಬಳಸಿ ಪರೀಕ್ಷೆ ಬರೆದು ಪಿಎಸ್ಐ ಆಗಿ ಆಯ್ಕೆಯಾಗಿರುವವರ ಜನ್ಮ ಜಾಲಾಡಲು ಸಿಐಡಿ ಪೊಲೀಸರು ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಒಂದು ವೇಳೆ ಯಾರಾದರೂ ಈ ಹಿಂದೆ ಬ್ಲೂಟೂತ್ ಬಳಿಸಿ ಪರೀಕ್ಷೆ ಬರೆದು ಪಿಎಸ್ಐ ಹುದ್ದೆ ಗಿಟ್ಟಿಸಿದ್ದರೆ, ಕಾನೂನಿನ ಕುಣಿಕೆ ಬೀಳುವುದು ಖಚಿತ ಎನ್ನಲಾಗುತ್ತಿದೆ. ಯಾರಿಗೂ ಕಾಣದಂತೆ ಕಿವಿಯೊಳಗೆ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದು ಅಕ್ರಮ ಎಸಗುತ್ತಿರುವುದು ಮೊದಲಿನಿಂದಲೂ ಕೇಳಿ ಬರುತ್ತಿದೆ. ಈ ರೀತಿ ಪರೀಕ್ಷೆ ಬರೆದು ಪಿಎಸ್ಐ ಹುದ್ದೆ ಗಿಟ್ಟಿಸಿರುವ ಅಭ್ಯರ್ಥಿಗಳನ್ನು ಪತ್ತೆ ಮಾಡಲು ಸಿಐಡಿ ಪೊಲೀಸರು ಈಗ ಸ್ಮಾರ್ಟ್ ಐಡಿಯಾ ಬಳಸುತ್ತಿದ್ದು, ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳ ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಪರೀಕ್ಷೆ ನಡೆದ ಸಮಯದಲ್ಲಿ ಅಭ್ಯರ್ಥಿಗಳ ಮೊಬೈಲ್ಗೆ ಯಾವುದಾದರೂ ಕರೆ ಹೋಗಿದೆಯಾ? ಕರೆ ಯಾವ ನಂಬರ್ನಿಂದ ಹೋಗಿದೆ? ಎಷ್ಟು ನಿಮಿಷ ಮಾತನಾಡಿದ್ದಾರೆ? ಎಂಬುದರ ತಾಂತ್ರಿಕ ವಿವರಗಳನ್ನು ಸಿಐಡಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಪರೀಕ್ಷೆ ಸಮಯದಲ್ಲಿ ಯಾವೆಲ್ಲಾ…
ರಾಜ್ಯದ ಸುಮಾರು ಅರ್ಧದಷ್ಟು ಬರಪೀಡಿತ 33 ಕೌಂಟಿಗಳಲ್ಲಿ 20 ಕಾಡ್ಗಿಚ್ಚುಗಳು ಹತ್ತಿ ಉರಿಯುತ್ತಿರುವುದರಿಂದ ನ್ಯೂ ಮೆಕ್ಸಿಕೋ ಗವರ್ನರ್ ಮಿಚೆಲ್ ಲುಜನ್ ಗ್ರಿಶಮ್ ತುರ್ತು ಘೋಷಣೆಗಳಿಗೆ ಸಹಿ ಹಾಕಿದ್ದಾರೆ. ಉತ್ತರ ನ್ಯೂ ಮೆಕ್ಸಿಕೋದಲ್ಲಿ ಏಪ್ರಿಲ್ 6 ರಂದು ಪ್ರಾರಂಭವಾದ ಒಂದು ಕಾಳ್ಗಿಚ್ಚು ಶನಿವಾರದಂದು ಹೊಸ ಬೆಂಕಿಯೊಂದಿಗೆ ವಿಲೀನಗೊಂಡು ರಾಜ್ಯದಲ್ಲಿ ಅತಿದೊಡ್ಡ ಜ್ವಾಲೆಯನ್ನು ಸೃಷ್ಟಿಸಿದೆ. ಇದರಿಂದಾಗಿ ಮೋರಾ ಮತ್ತು ಸ್ಯಾನ್ ಮಿಗುಯೆಲ್ ಕೌಂಟಿಗಳಲ್ಲಿ ವ್ಯಾಪಕವಾದ ಸ್ಥಳಾಂತರ ನಡೆದಿದೆ. ಭಾನುವಾರ 84 ಚದರ ಮೈಲಿ (217 ಚದರ ಕಿಲೋಮೀಟರ್) ಬೆಂಕಿ ಉರಿಯುತ್ತಿತ್ತು. ಉತ್ತರ ನ್ಯೂ ಮೆಕ್ಸಿಕೋದಲ್ಲಿ ಏಪ್ರಿಲ್ 17 ರಂದು ಪ್ರಾರಂಭವಾದ ಕಾಡ್ಗಿಚ್ಚು ಅನಿಯಂತ್ರಿತ ಗಾಳಿಯಿಂದ ಪೆÇಂಡೆರೋಸಾ ಪೈನ್, ಓಕ್ ಬ್ರಷ್, ಓಕೇಟ್ನ ಉತ್ತರ ಮತ್ತು ಮೊರಾ ಕೌಂಟಿಯ ಹುಲ್ಲಿನ ಪ್ರದೇಶ 81 ಚದರ ಮೈಲುಗಳಷ್ಟು ಬೆಂಕಿಗೆ ಸುಟ್ಟು ಹೋಗಿದೆ. ಕಾಡ್ಗಿಚ್ಚಿನ ಕಾರಣದಿಂದ ಬಲವಂತವಾಗಿ ಸ್ಥಳಾಂತರಿಸಲಾಗಿದ್ದ ಅರಿಝೋನಾದಲ್ಲಿ, ಫ್ಲಾಗ್ಸ್ಟಾಫ್ ಪ್ರದೇಶದ ಕೆಲವು ಜನರನ್ನು ಭಾನುವಾರ ಬೆಳಿಗ್ಗೆ ಮನೆಗೆ ಮರಳಲು ಅನುಮತಿಸಲಾಗಿದೆ. ನೆಬ್ರಸ್ಕಾದ ಕೆಲವು ಭಾಗಗಳಲ್ಲಿ ಗಾಳಿಯಿಂದ…
ಇಸ್ರೇಲ್ನತ್ತ ಲೆಬನಾನ್ ರಾಕೆಟ್ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಇಸ್ರೇಲ್ ಸೋಮವಾರ ಮುಂಜಾನೆ ಗುಂಡಿನ ದಾಳಿ ನಡೆಸಿದೆ. ಉತ್ತರ ಇಸ್ರೇಲ್ನ ತೆರೆದ ಪ್ರದೇಶದಲ್ಲಿ ರಾಕೆಟ್ ಬಿದ್ದಿದೆ. ಇದರಿಂದ ಯಾವುದೇ ಹಾನಿ ಅಥವಾ ಗಾಯಗಳಾಗಿಲ್ಲ ಎಂದು ಸೇನೆ ಸ್ಪಷ್ಟ ಪಡಿಸಿದೆ. ರಾಕೆಟ್ ಉಡಾವಣೆಯಾದ ಸ್ವಲ್ಪ ಸಮಯದ ಬಳಿಕ ಇಸ್ರೇಲ್ ದಕ್ಷಿಣ ಲೆಬನಾನ್ನಲ್ಲಿ ಮೂಲಸೌಕರ್ಯಗಳ ಮೇಲೆ ಗುರಿಯಿಟ್ಟು ದಾಳಿ ನಡೆಸಿದೆ. ಉತ್ತರ ಇಸ್ರೇಲ್ನಲ್ಲಿ ವಾಡಿಕೆಯ ಚಟುವಟಿಕೆಗಳು ಮುಂದುವರೆದಿವೆ. ರಾಕೆಟ್ ದಾಳಿಯ ಜವಾಬ್ದಾರಿಗಳನ್ನು ತಕ್ಷಣವೇ ಯಾರು ಒಪ್ಪಿಕೊಂಡಿಲ್ಲ. ಇಸ್ರೇಲ್ ಮತ್ತು ಲೆಬನಾನ್ನ ಉಗ್ರಗಾಮಿ ಹಿಜ್ಬೊಲ್ಲಾ ಗುಂಪು ಕಡು ಶತ್ರುಗಳಾಗಿದ್ದು, 2006ರಿಂದಲೂ ಯುದ್ಧ ನಡೆಸುತ್ತಿವೆ. ಅಂದಿನಿಂದ ಗಡಿ ಪ್ರದೇಶವು ಉದ್ವಿಗ್ನವಾಗಿದೆ. ಆದರೆ ಬಹುತೇಕ ಶಾಂತವಾಗಿದೆ. ಸಣ್ಣ ಪ್ಯಾಲೇಸ್ಟಿನಿಯನ್ ಗುಂಪುಗಳು ಲೆಬನಾನ್ನಲ್ಲಿ ಸಕ್ರಿಯವಾಗಿವೆ. ಇತ್ತೀಚಿನ ವರ್ಷಗಳಲ್ಲಿ ಹಲವಾರು ರಾಕೆಟ್ ದಾಳಿಗಳನ್ನು ನಡೆಸಿರುವುದಾಗಿಯೂ ವರದಿಯಾಗಿದೆ. ಕಳೆದ ವರ್ಷ ಇಸ್ರೇಲ್ ಮತ್ತು ಗಾಜಾ ಉಗ್ರಗಾಮಿಗಳ ನಡುವಿನ 11 ದಿನಗಳ ಯುದ್ಧದ ನಂತರ ಈ ಪ್ರದೇಶವನ್ನು ಕೆಣಕಲು ಮತ್ತೆ ದುಸ್ಸಾಹಸ…
ಗುತ್ತಿಗೆದಾರರ ಬಿಲ್ ಪಾವತಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅನುಸರಿಸುತ್ತಿರುವ ಪದ್ಧತಿ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತು ಪದಾಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಒಂದು ಕೋಟಿ ರೂ. ಹಾಗೂ ಅದಕ್ಕಿಂತಲೂ ಕಡಿಮೆ ಮೊತ್ತದ ಸಣ್ಣ ಗುತ್ತಿಗೆದಾರರಿಗೆ ಹಿರಿತನದ ಮತ್ತು ಪ್ರೋರೇಟಾ ಸಮಾನಾಂತರ ಅನುಪಾತ ಆಧಾರದ ಮೇಲೆ ಬಿಲ್ ಪಾವತಿಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗುತ್ತಿಗೆದಾರರ ಸಮಸ್ಯೆ ಕುರಿತಂತೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಇನ್ನು ಮುಂದೆ ಸ್ಥಳೀಯ ಗುತ್ತಿಗೆದಾರರಿಗೆ ಆದ್ಯತೆ ನೀಡುವಂತೆ ಕೋರಿದ್ದಾರೆ. ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆಗಳಲ್ಲಿ ಆದ್ಯತೆ ಮೇರೆಗೆ ಬಿಲ್ ಪಾವತಿ ಆಗುತ್ತಿದ್ದು, ಸಣ್ಣ ಗುತ್ತಿಗೆದಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿದೆ. ಇದರಿಂದ ಸಣ್ಣ ಗುತ್ತಿಗೆದಾರರ ಬಾಕಿ ಮೊತ್ತದಲ್ಲಿ ಭಾರಿ ಪ್ರಮಾಣದ ಕಡಿತವಾಗಿದೆ. ತಾಲ್ಲೂಕು ಮಟ್ಟದ ಗುತ್ತಿಗೆಯನ್ನು ಜಿಲ್ಲಾ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿನ ಗುತ್ತಿಗೆಗಳನ್ನು ರಾಜ್ಯಮಟ್ಟದಲ್ಲಿ ನಿರ್ಧರಿಸುವ ಪದ್ಧತಿಯ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಒಟ್ಟಾರೆ ಗುತ್ತಿಗೆದಾರರ ಬಾಕಿ…
ಪಾವಗಡ: ಪಟ್ಟಣದ ಅಗಸರ ಕುಂಟೆಗೆ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಸೋಮವಾರ ಶಾಸಕ ವೆಂಕಟರವಣಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಜಾಹ್ನವಿ, ಮುಖ್ಯಾಧಿಕಾರಿ ಅರ್ಚನಾ, ಸದಸ್ಯ ಸುದೇಶ್ ಬಾಬು, ರಾಜೇಶ್, ರವಿ, ವೇಲು, ವೆಂಕಟರವಣಪ್ಪ, ಗೀತಾ, ಸುಧಾಲಕ್ಷ್ಮಿ, ಮುಖಂಡ ಹನುಮಂತರಾಯಪ್ಪ, ಪ್ರಮೋದ್ ಕುಮಾರ್, ಎಂ.ಎಸ್. ವಿಶ್ವನಾಥ್, ಅವಿನಾಶ್, ಪರಮೇಶ್ವರ್, ಮೈಲಪ್ಪಎಂಬವರು ಉಪಸ್ಥಿತರಿದ್ದರು. ಅಗಸರ ಕುಂಟೆ ಅಭಿವೃದ್ಧಿಪಡಿಸುವ ಸಲುವಾಗಿ ಹಂತ ಹಂತವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ. ಕಾಮಗಾರಿ ಮುಕ್ತಾಯವಾದ ಮೇಲೆ ವಾರಾಂತ್ಯದ ದಿನಗಳಲ್ಲಿ ಜನತೆಯ ಮನರಂಜನೆ ದೃಷ್ಟಿಯಿಂದ ಬೋಟಿಂಗ್ ವ್ಯವಸ್ಥೆ ಮಾಡಿಸಲಾಗುವುದು. ಕಣಿವೆ ಬಳಿ ಆರಂಭವಾಗಿರುವ ಸಾಲುಮರದ ತಿಮ್ಮಕ್ಕ ಉದ್ಯಾನದಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ. ಇಲಾಖೆಗೆ ಆದಾಯವೂ ಬರುತ್ತಿದೆ. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೆಂಕಟರವಣಪ್ಪ ಕುಂಟೆಗೆ ನಾಗಲಮಡಿಕೆಯಿಂದ ನೀರು ಹರಿಸಿರುವುದರಿಂದ ಪಟ್ಟಣದ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಿದೆ. ಈ ವರ್ಷ ಕೊಳವೆಬಾವಿಗಳಲ್ಲಿ ನೀರಿರುವುದರಿಂದ ಬೇಸಿಗೆಯಲ್ಲಿಯೂ ನೀರಿನ ಅಭಾವವಿಲ್ಲ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಚಿತ್ರದುರ್ಗ: ಆರೋಗ್ಯವಂತ ಕುಟುಂಬದಿಂದ ಮಾತ್ರ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ. ಯಾವ ಕುಟುಂಬದಲ್ಲಿ ಎಲ್ಲರ ಆರೋಗ್ಯ ಚೆನ್ನಾಗಿರುತ್ತಾದೇಯೋ, ಆ ಕುಟುಂಬ ಉತ್ತಮ ಅಭಿವೃದ್ದಿ ಕಾಣಲು ಸಾಧ್ಯ ಎಂದು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಚಿತದುರ್ಗ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಸಾರ್ವಜನಿಕ ಆಸ್ಪತ್ರೆ ಹಿರಿಯೂರು ಹಾಗು ಈಸ್ಟ್ ಪಾಯಿಂಟ್ ಆಸ್ಪತ್ರೆ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಕೊರೊನಾ ಮತ್ತು ಓಮಿಕ್ರೋನ್ ಎಂಬ ಸಾಂಕ್ರಾಮಿಕ ಕಾಯಿಲೆ ಹರಡುತ್ತಿದ್ದಂತಹ ಸಂಕಷ್ಟ ಪರಿಸ್ಥಿಯಲ್ಲಿ ಹಣಕ್ಕಿಂತ ಆರೋಗ್ಯ ಎಷ್ಷು ಮುಖ್ಯ ಎಂಬುದು ನಮಗೆ ಗೊತ್ತಾಯಿತು . ಹಾಗಾಗಿ ಎಲ್ಲಾ ಆರೋಗ್ಯ ಸೌಲಭ್ಯಗಳು ಪ್ರತಿ ಗ್ರಾಮದ ನಾಗರಿಕರಿಗೆ…
ಹೆಚ್.ಡಿ.ಕೋಟೆ: ತಾಲ್ಲೂಕು ಆದಿಕರ್ನಾಟಕ ಮಹಾಸಭಾವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 131 ನೇ ವರ್ಷದ ಜಯಂತಿಯನ್ನು ಅಂಬೇಡ್ಕರ್ ಹಬ್ಬ ಎಂದು ಅಚರಣೆ ಮಾಡಲಾಯಿತು. ಬೆಳ್ಳಿ ರಥೋತ್ಸವದ ಅಂಬೇಡ್ಕರ್ ಪುತ್ಥಳಿ ಭಾವಚಿತ್ರ ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮತ್ತು ಗಣ್ಯರು ಸೇರಿ ಮೆರವಣಿಗೆಗೆ ಚಾಲನೆ ನೀಡಿದರು. ತಾಲ್ಲೂಕಿನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನೆಡಸಿಕೊಂಡು ಅಂಬೇಡ್ಕರ್ ಭವನದವರಿಗೆ ಸೇರಿತ್ತು. ನಂತರ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಗೌತಮ ಬುದ್ದ ಅವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ. ದೀಪ ಬೆಳಗಿಸುವ ಮೂಲಕ ಶಾಸಕ ಅನೀಲ್ ಚಿಕ್ಕಮಾದು ಮತ್ತು ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆದಿಕರ್ನಾಟಕ ಮಹಾಸಭಾದ ನೂತನ ಅಧ್ಯಕ್ಷರಾದ ಹೆಚ್ .ಸಿ. ನರಸಿಂಹಮೂರ್ತಿ ಅವರ ಅದ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕಿನ ಎಲ್ಲಾ ಸಂಘಟನೆಗಳು, ಪಕ್ಷಾತೀತವಾಗಿ, ಎಲ್ಲಾ ರಾಜಕೀಯ ಹಿರಿಯ ಹಾಗೂ ಕಿರಿಯ ಮುಖಂಡರು ಮತ್ತು ತಾಲ್ಲೂಕಿನ ಎಲ್ಲಾ ಗ್ರಾಮಗಳ ಪದಾಧಿಕಾರಿಗಳ ಸಮಕ್ಷಮದಲ್ಲಿ ಹಲವು ವರ್ಷಗಳ ನಂತರ ಈ ರೀತಿಯ ಕಾರ್ಯಕ್ರಮ…