Author: admin

ತುಮಕೂರು : ಬರೋಬರಿ 2 ಕೋಟಿ ಮೌಲ್ಯದ ಹೈಟೆಕ್ ಸರ್ಕಾರಿ ಶಾಲೆ ನಿರ್ಮಿಸಿ ತಾಯಿಯ ಶಾಲೆಯ ಋಣ ತೀರಿಸಿರುವ ಘಟನೆ ತುಮಕೂರಿನ ಹೊರವಲಯದ ಕೋರಾ ಎಂಬ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆ ಎಂದರೆ  ನಿರ್ಲಕ್ಯ ತೋರಿಸುವ ಜನರಿಗೆ ಈ ಶಾಲೆ ಮಾದರಿ ಶಾಲೆಯಾಗಿದೆ. ಇದು ಸರ್ಕಾರ ನಿರ್ಮಾಣ ಮಾಡಿದ ಶಾಲೆಯಲ್ಲ, ಬದಲಿಗೆ ತನ್ನ ತಾಯಿಗಾಗಿ ಉದ್ಯಮಿಯೊಬ್ಬರು ನಿರ್ಮಿಸಿದ ಕೊಡುಗೆ. ಈ ಶಾಲೆ ನಿರ್ಮಿಸಿದ ಉದ್ಯಮಿಯ ಹೆಸರು ಹರ್ಷ, ಮತ್ತು ಮಮತ ದಂಪತಿ.ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯಮ ನಡೆಸುತ್ತಿರುವಾಗ ಒಮ್ಮೆ ಕೋರಾ ಮಾರ್ಗವಾಗಿ ಶಿರಾಗೆ ತೆರಳುತ್ತಿದ್ದಾಗ ತಾಯಿಯ ಊರು ಎಂಬ ಅಭಿಮಾನದಿಂದ ಕಾರು ನಿಲ್ಲಿಸಿ ಇಳಿದಿದ್ದೇ ಈ ಮಹತ್ಕಾರ್ಯಕ್ಕೆ ಕಾರಣವಾಯಿತು. ಊರ ಮೊಮ್ಮಗ ಹರ್ಷ ಈ ಊರಿಗೆ ಕಾಲಿಟ್ಟಾಗ ಹಳೇ ಶಾಲೆಯ ಭಾಗಶಃ ಕಟ್ಟಡವನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಕೆಡವಲಾಗಿತ್ತು. ಇದನ್ನು ಗಮನಿಸಿದ ಹರ್ಷ ಅವರು ತಮ್ಮ ತಾಯಿಯ ನೆನಪಿಗಾಗಿ ಶಾಲೆಗೆ ಹೊಸ ಕಟ್ಟಡ ಕಟ್ಟಿಸಿ ಕೊಡಲು ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳನ್ನು…

Read More

ಚಿತ್ರದುರ್ಗ: ಬಿಜೆಪಿಯು ವಾಮಮಾರ್ಗದಿಂದ ಸರ್ಕಾರ ರಚಿಸಿದ್ದು, ಇದೀಗ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯೂರು ತಾಲ್ಲೂಕಿನ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಸಿ.ಪಾಪಣ್ಣ ಅವರ ಮನೆಗೆ ಭೇಟಿ ನೀಡಿದ್ದ ಸಂದರ್ಭ ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ಬಿಜೆಪಿಯು ಎಂ ಎಲ್ ಎಗಳನ್ನು ಖರೀದಿಸುವ ಮೂಲಕ ವಾಮಮಾರ್ಗದಲ್ಲಿ ಸರ್ಕಾರ ರಚಿಸಿತು. 2008ರಲ್ಲಿಯೂ ವಾಮ ಮಾರ್ಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆ ಸಂದರ್ಭದಲ್ಲಿ 3 ಮುಖ್ಯಮಂತ್ರಿಗಳು ಆಡಳಿತ ನಡೆಸುವಂತಾಗಿತ್ತು ಎಂದರು. ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯವರು ಮಾಡಿರುವ ಸಾಧನೆ ಎಂದರೆ, ಅಕ್ರಮ ಗಣಿಗಾರಿಕೆ ಮಾಡಿ ಜೈಲಿಗೆ ಹೋಗಿರುವುದು ಎಂದರು. ಚುನಾವಣೆಗೆ ಹಣ ಹಾಕಿ ಅಧಿಕಾರ ಗಿಟ್ಟಿಸಿಕೊಳ್ಳುವುದು ಬಳಿಕ ವ್ಯಾಪಾರ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು 40 % ಕಮಿಷನ್ ಕೇಳುವ ಮೂಲಕ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕಾರಣರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಶ್ವರಪ್ಪನ ವಿರುದ್ಧ ಎಫ್ ಐಆರ್…

Read More

ತುಮಕೂರು:  ಪದವಿ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ವಿಳಂಬ ನಡೆಸಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಅತಂತ್ರವಾಗಿದೆ ಎಂದು  ಎಐಡಿಎಸ್ ಒ ನ ಅಧ್ಯಕ್ಷರಾದ ಅಶ್ವಿನಿ ಟಿ ಹೇಳಿದರು. ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಪದವಿ ಪಥಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಇದುವರೆಗೂ ಪರೀಕ್ಷಾ ಶುಲ್ಕ ಕೂಡ ಪಾವತಿಸಲು ಯಾವುದೇ ಸೂಚನೆ ಹೊರಡಿಸಿಲ್ಲ. ಆದರೆ ತರಗತಿಗಳು ಮುಗಿದು ಪರೀಕ್ಷಾ ಸಿದ್ಧತೆಗೆಂದು ಕಳೆದ ಒಂದು ತಿಂಗಳಿಂದ ರಜಾ ನೀಡಲಾಗಿದೆ. ಇನ್ನೊಂದು ಕಡೆ ದ್ವಿತೀಯ ಮತ್ತು ತೃತಿಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೇ ತಿಂಗಳ 23 ರಂದು ಮುಗಿಯುತ್ತದೆ. ಕೊರೋನಾ ಸಾಂಕಾಮಿಕದ ಮೊದಲನೇಯ ಮತ್ತು ಎರಡನೇಯ ಅಲೆಯಿಂದಾಗಿ ಕಳೆದ ಶೈಕ್ಷಣಿಕ ವರ್ಷವು ಗೊಂದಲದಲ್ಲೇ ಕಳೆದು ಹೋಗಿದೆ. ವರ್ಷವು ಕೂಡ ಶೈಕ್ಷಣಿಕ ಚಟುವಟಿಕೆಗಳು ಸಮರ್ಪಕವಾಗಿ ನಡೆಯದಿರುವುದರಿಂದ ವಿದ್ಯಾರ್ಥಿಗಳು ಆತಂತ್ರ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಒಂದು ಕಡೆ ರಾಜ್ಯ ಸರ್ಕಾರ ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಯಾವುದೇ ಪೂರ್ವಭಾವಿ ಸಿದ್ಧತೆಯಿಲ್ಲದೆ ಹಠಾತ್ತನೆ 4 ವರ್ಷದ ಪದವಿ ಜಾರಿಗೊಳಿಸಿರುವುದು…

Read More

ತುರುವೇಕೆರೆ: ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮದೇವತೆ  ಶ್ರೀ ಕಾಲಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿರುವ ಘಟನೆ ನಡೆದಿದೆ. ಜಾತ್ರೆಯ ವೇಳೆ ಸುಶೀಲಮ್ಮ ಎಂಬವರ ಗಮನವನ್ನು ಕಳ್ಳರ ತಂಡ ಬೇರೆಡೆಗೆ ಸೆಳೆದಿದ್ದು, ಈ ವೇಳೆ ಮಹಿಳೆಯರ ಗುಂಪಿನಲ್ಲಿದ್ದ ಕಳ್ಳರ ತಂಡದ ಮಹಿಳೆ ಸರ ಎಗರಿಸಿದ್ದು, ಈ ವೇಳೆ ಮಹಿಳೆಯನ್ನು  ಇತರ ಮಹಿಳೆಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳರ ತಂಡದಲ್ಲಿ 4ರಿಂದ 5 ಜನರಿದ್ದರು ಎನ್ನಲಾಗಿದೆ. ಸರ ಎಳೆದ ಮಹಿಳೆಯನ್ನು ಹಿಡಿದುಕೊಂಡ ವೇಳೆ ಜೊತೆಗಿದ್ದವರು ಚಿನ್ನದ ಸರದೊಂದಿಗೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನೂ ಮೂರು ವರ್ಷಗಳ ಹಿಂದೆ ತಾನು 31 ಗ್ರಾಂ ಚಿನ್ನದ ಸರ ಮಾಡಿಸಿಕೊಂಡಿದ್ದೆ. ಅದರ ಬೆಲೆ  1 ಲಕ್ಷದ 20 ಸಾವಿರ ಆಗಿರುತ್ತದೆ ಎಂದು ದೂರಿನಲ್ಲಿ ಸುಶೀಲ ತಿಳಿಸಿದ್ದಾರೆ. ವರದಿ: ಸುರೇಶ್ ಬಾಬು ಎಂ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತಿಪಟೂರು: ತಾಲೂಕು ಹೊನವಳ್ಳಿ ಹೋಬಳಿ ಪಟ್ರೆ ಹಳ್ಳಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯ ಪ್ರಾರಂಭ ಸಮಾರಂಭ ನಡೆಯಿತು. ಸಾನಿಧ್ಯ ವಹಿಸಿದ್ದ ಸಿರಿಗೆರೆ ತರಳಬಾಳು ಬೃಹನ್ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,  ಮನುಷ್ಯ ನಾಗಿ ಹುಟ್ಟಿದಮೇಲೆ ಒಳ್ಳೆಯ ಮನಸ್ಸಿನಿಂದ ಒಳ್ಳೆ ಒಳ್ಳೆ ಕೆಲಸ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ತಿಳಿಸಿದರು. ಮನುಷ್ಯ ಮೊದಲು ದೂಷಿಸುವ ಗುಣವನ್ನು ಮೊದಲು ಬಿಡಬೇಕು. ನಾನು ಸರಿಯಾಗಿ ಇದ್ದೇನೆ ಎಂಬ ಪ್ರಶ್ನೆ ಹಾಕಿಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಸಮಾಜದಲ್ಲಿ ಕೆಟ್ಟವರು,  ಒಳ್ಳೆಯವರು ಇದ್ದೇ ಇರುತ್ತಾರೆ ಮನುಷ್ಯನ ಸ್ವಭಾವ ಒಬ್ಬರಿಗೆ ನೋವು ಉಂಟು ಮಾಡುವ ಕೆಲಸ ಮಾಡದೆ ಒಳ್ಳೆಯದಾಗಿ ಕೆಲಸ ಮಾಡಿದಾಗ ಶಾಂತಿ ನೆಮ್ಮದಿಯನ್ನು ಕಾಣಬಹುದು ಎಂದರು.  ಕೆರಗೋಡಿ ರಂಗಾಪುರ ಸುಕ್ಷೇತ್ರದ ಗುರುಪರಂಪರೆ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ,  ದೇವಾಲಯ ನಿರ್ಮಾಣದಿಂದ ಮನುಷ್ಯನಿಗೆ ಜೀವನದಲ್ಲಿ ಶಾಂತಿ ನೆಮ್ಮದಿ ಲಭಿಸಲಿದೆ.  ಧಾರ್ಮಿಕ ನಂಬಿಕೆಯಿಂದ ಆತ್ಮ ಜಾಗೃತಗೊಳ್ಳುತ್ತದೆ.  ಒಡೆದು ಹೋಗಿರುವ ಮನಸ್ಸುಗಳನ್ನು ಒಗ್ಗೂಡಿಸಲಿದೆ ಎಂದರು. ಸಚಿವ ಬಿ.ಸಿ.ನಾಗೇಶ್ ಮಾತನಾಡಿ,  ನಮ್ಮ ದೇಶದ…

Read More

ಗುಬ್ಬಿ: ಇಬ್ಬರು ಯುವಕರನ್ನು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡ ರಾತ್ರಿ ಕೃತ್ಯ ನಡೆಸಲಾಗಿದ್ದು, ಪೆದ್ದನಹಳ್ಳಿ ದಲಿತ ಕಾಲೋನಿ ನಿವಾಸಿ ಗಿರೀಶ್  ಹಾಗೂ ಮತ್ತೋರ್ವ ಯುವಕ ಬರ್ಬರವಾಗಿ ಹತ್ಯೆಯಾದವರು ಎಂದು ತಿಳಿದು ಬಂದಿದೆ. ಪೆದ್ದನ ಹಳ್ಳಿಯ ನಿರ್ಜನ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಒಬ್ಬನ ಮೃತದೇಹ ನೀರಿನಲ್ಲಿದ್ದು, ಮತ್ತೋರ್ವನ ಮೃತದೇಹ ನೀರಿನಿಂದ ಮೇಲೆ ಪತ್ತೆಯಾಗಿದೆ. ಹತ್ಯೆ ಮಾಡಿದವರು ಹಾಗೂ ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯಿಂದ ಇನ್ನಷ್ಟು ಮಾಹಿತಿಗಳು ತಿಳಿದು ಬರಬೇಕಿದೆ. ವರದಿ: ಡಿ.ಮಂಜುನಾಥ್ , ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಪಾವಗಡ:  ಮೂಲ ಸೌಕರ್ಯ ಕೇಳಿದ ಯುವಕನಿಗೆ  ತಾಲೂಕು ಕಚೇರಿ ಆವರಣದಲ್ಲಿಯೇ ಕಪಾಳ ಮೋಕ್ಷ ಮಾಡಿ, ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್  ಶಾಸಕ ವೆಂಕಟರಮಣಪ್ಪ ವಿರುದ್ಧ ಪಾವಗಡ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು. ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದ ಯುವಕನಿಗೆ ಸ್ಪಂದಿಸುವ ಬದಲು ಶಾಸಕರು ದರ್ಪದಿಂದ ವರ್ತಿಸಿದ್ದು, ಯುವಕನಿಗೆ ಕಪಾಳ ಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕರ ವಿರುದ್ಧ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು ಎಂದು  ತಾಲ್ಲೂಕು ದಂಡಾಧಿಕಾರಿಗೆ  ಮನವಿ ಸಲ್ಲಿಸಲಾಯಿತು. ಈ ವೇಳೆ ಮಂಡಲ ಅಧ್ಯಕ್ಷರು ರವಿಶಂಕರ್ ನಾಯ್ಕ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ, ಕಾರ್ಯದರ್ಶಿ ಹನುಮಂತರಾಯಪ್ಪ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಒಬಯ್ಯ, ಕೃಷ್ಣಾ ನಾಯ್ಕ್, ಎಸ್.ಟಿ.ಮೋರ್ಚಾ ಅಧ್ಯಕ್ಷರು ಶಿವಕುಮಾರ್,  ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷಿಣಿ ಸರೋಜಮ್ಮ, ಓ.ಬಿ.ಸಿ. ಮೋರ್ಚಾ ಪ್ರದಾನ ಕಾರ್ಯದರ್ಶಿ ವೆಂಕಟೇಶ್, ಎಸ್.ಸಿ .ಮೋರ್ಚಾ ಉಪಾಧ್ಯಕ್ಷರು ರಾಮಾಂಜಿನಪ್ಪ, ರೈತಮೋರ್ಚಾ ಕಾರ್ಯದರ್ಶಿ ಭೀಮಪ್ಪ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರು ಪವನ್ ಕುಮಾರ್, ಸುಧೀರ್, ಮಂಡಲ ಉಪಾಧ್ಯಕ್ಷರು…

Read More

ತುಮಕೂರು: ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಗರದಲ್ಲಿ ನೀರು ಸರಬರಾಜು ಮಾಡುವ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿಯಲ್ಲಿ ಕಾಯಂಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ನೌಕರರು ಇಂದು ವಾಪಸ್ ಪಡೆದರು.  ಪಾಲಿಕೆ ಸದಸ್ಯರು ಇಂದು ತುರ್ತು ಸಭೆ ಕರೆದು ನೇರ ನೇಮಕಾತಿ ಅಡಿಯಲ್ಲಿ ನೌಕರರನ್ನು ಕಾಯಂಗೊಳಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ನೌಕರರು ತಮ್ಮ ಅನಿರ್ದಿಷ್ಟಾವಧಿ ಧರಣಿ ಮುಷ್ಕರವನ್ನು ವಾಪಸ್ ಪಡೆದರು . ಈ ವೇಳೆ ಮಹಾನಗರ ಪಾಲಿಕೆಯ ಮೇಯರ್ ಕೃಷ್ಣಪ್ಪ ಪಾಲಿಕೆ ಆಯುಕ್ತ ರೇಣುಕಾ ಸೇರಿದಂತೆ ಪಾಲಿಕೆ ಸದಸ್ಯರು ಮಾತನಾಡಿದರು. ವರದಿ: ಎ.ಎನ್. ಪೀರ್ ,  ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ತುಮಕೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಪರೀಕ್ಷಾ ಮಂಡಳಿಯ ಗೈಡ್ ಲೈನ್ ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪಿಯು ಇಲಾಖೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸರ್ವ ಸಿದ್ಧತೆ ನಡೆಸಿದ್ದು, ಜಿಲ್ಲೆಯಲ್ಲಿ ಈ ಭಾರಿ ಒಟ್ಟು 28,090 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ಕಲಾವಿಭಾಗದಲ್ಲಿ 8,185, ‌ ವಾಣಿಜ್ಯ ವಿಭಾಗದಲ್ಲಿ 11,177 ಹಾಗೂ ವಿಜ್ಞಾನ ವಿಭಾಗದಲ್ಲಿ 8,725 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಸಕಲ  ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಯು ನರಸಿಂಹಮೂರ್ತಿ  ಮಾಹಿತಿ ನೀಡಿದರು. ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಹೆಚ್ ಡಿ ಕೋಟೆ /ಸರಗೂರು: ತಾಲ್ಲೂಕಿನ 75 ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರ ಆದೇಶದ ಮೇರೆಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ಉಚಿತವಾಗಿ ಡಿಜಿಟಲ್ ಐಡಿ ಕ್ರಿಯೇಷನ್, ಎ.ಬಿ.- ಎ.ಆರ್.ಕೆ.ಕಾರ್ಡ್ ವಿತರಣೆಯನ್ನು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ  ಹಮ್ಮಿಕೊಂಡಿದ್ದು ವಿವಿಧ ಬಗೆಯ ಶಿಬಿರವನ್ನು ನಡೆಸಿದರು. ಶಾಸಕರು ಅನಿಲ್ ಚಿಕ್ಕಮಾದುಭಾಗವಹಿಸಿ.ಆರೋಗ್ಯ ವಸ್ತು ಪ್ರದರ್ಶನವನ್ನು ಟೇಪ್ ಕತ್ತರಿಸುವ ಮೂಲಕ ಹಾಗೂ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು ಬಳಿಕ ಮಾತನಾಡಿದ ಅವರು, ಈ ಸುಂದರವಾದ ಅರ್ಥಪೂರ್ಣವಾದ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಮಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು 50 ಕ್ಕೂ ಹೆಚ್ಚು ವೈದ್ಯರುಗಳು ಹಾಜರಿದ್ದು. ಸಂತಾನೋತ್ಪತ್ತಿ,ಮಕ್ಕಳ ಅರೋಗ್ಯ,ಹದಿಹರೆಯದವರ ಸಮಗ್ರ ಆರೋಗ್ಯ,ಗರ್ಭ ನಿರೋಧಕಸೇವೆ,ಸಾಂಕ್ರಾಮಿಕ ರೋಗಗಳ ಚಿಕಿತ್ಸೆ  ಹೀಗೆ ಇನ್ನೂ ಹಲವು ಸಮಸ್ಯೆಗಳನ್ನು ತಪಾಸಣೆ ನಡೆಸಿ ಔಷಧಿಗಳನ್ನು ನೀಡುವ ದೃಷ್ಟಿಯಿಂದ ಈ ಆರೋಗ್ಯಮೇಳ ಕಾರ್ಯವನ್ನು ಆಯೋಜನೆ ‌ಮಾಡಿದ್ದು, ಇದನ್ನು ನಮ್ಮ ತಾಲೂಕಿನ ಜನತೆಯು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ತಾಲ್ಲೂಕಿನ…

Read More