Subscribe to Updates
Get the latest creative news from FooBar about art, design and business.
- ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
- ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
- ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
- ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
- ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
- ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
- ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
Author: admin
ದೇಶದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉಪಕರಣಗಳನ್ನು ಉಪಯೋಗಿಸುತ್ತಾರೆ. ಇದರ ನಡುವೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಸುಮಾರು 8 ಗಂಟೆ ವಿದ್ಯುತ್ ಪೂರೈಕೆ ಕಡಿತ ಆಗುವ ಭೀತಿ ಎದುರಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನು ಪರಿಹರಿಸಲು ಸರಕಾರಗಳು ಹರಸಾಹಸ ಪಡುವಂತಾಗಿದೆ.ಉತ್ತರ ಪ್ರದೇಶ, ಪಂಜಾಬ್, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಲ್ಲಿದ್ದಲು ಕೊರತೆ ಕಂಡುಬಂದಿದೆ.ಕಲ್ಲಿದ್ದಲು ಕೊರತೆ ಹೆಚ್ಚಾದರೆ ರಾಜ್ಯಗಳಲ್ಲಿ 8 ಗಂಟೆಗಳ ವಿದ್ಯುತ್ ಕಡಿತ ಮಾಡುವುದು ಅನಿವಾರ್ಯವಾಗಿದೆ. ಅಖಿಲ ಭಾರತ ವಿದ್ಯುತ್ ಇಂಜಿನಿಯರ್ ಗಳ ಸಂಘಟನೆ ಅಧ್ಯಕ್ಷ ಶೈಲೇಂದ್ರ ದುಬೆ ಈ ವಿಷಯವನ್ನು ಒಪ್ಪಿಕೊಂಡಿದ್ದು, ದೇಶದಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಅರಿಶಿನಗುಂಡಿ ಗ್ರಾಮದ ಕಣಿವೆ ಮಾರಮ್ಮ ಜಾತ್ರೆಯ ಮಹೋತ್ಸವದ ಸಲುವಾಗಿ ಇಂದು ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಅರಿಶಿನಗುಂಡಿ ಗ್ರಾಮದಲ್ಲಿನ ಹೆಸರಾಂತ ಕಣಿವೆ ಮಾರಮ್ಮನ ದ್ವಾರಬಾಗಿಲನ್ನು ಹಿರಿಯೂರು ತಾಲ್ಲೂಕಿನ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಸಿ. ಪಾಪಣ್ಣ ನವರು ಅರಿಶಿನಗುಂಡಿ ಕಣಿವೆ ಮಾರಮ್ಮನ ದ್ವಾರಬಾಗಿಲು ಉದ್ಘಾಟನೆಗೆ ಚಾಲನೆ ನೀಡುವ ಮೂಲಕ ಕಣಿವೆ ಮಾರಮ್ಮನ ಕೃಪೆಗೆ ಪಾತ್ರರಾದರು. ಇದೇ ಸಂದರ್ಭದಲ್ಲಿ ಅರಿಶಿನ ಗುಂಡಿ ಕಣಿವೆ ಮಾರಮ್ಮನ ಅರ್ಚಕರು ಆಡಳಿತ ಅಧಿಕಾರಿಗಳು ಬಿ ಸಿ ಪಾಪಣ್ಣ ನವರನ್ನು ಸನ್ಮಾನಿಸಿ ಗೌರವಿಸಿದರು . ಈ ಸಂಧರ್ಭದಲ್ಲಿ ಕಣೆವೆ ಮಾರಮ್ಮ ದೇವಸ್ಥಾನದ ಅರ್ಚಕರು , ಆಡಳಿತ ಅಧಿಕಾರಿಗಳು, ಗ್ರಾಮದ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕೊರಟಗೆರೆ: ತಾಲ್ಲೂಕಿನಲ್ಲಿ ನಿನ್ನೆ ಸುರಿದ ಭಾರೀ ಮಳೆ ಹಾಗೂ ಗುಡುಗು ಸಿಡಿಲಿನಿಂದ ಸಿರಾ ತಾಲ್ಲೂಕಿನ ಕಸಬಾ ಹೋಬಳಿ ಮೇಲುಕೋಟೆ ಗ್ರಾಮ ಪಂಚಾಯಿತಿಯ ಗೊಲ್ಲರಹಟ್ಟಿ ಗ್ರಾಮದ ಕುರಿಗಾಯಿ ಗಂಗಮ್ಮ ಈರಣ್ಣ ಅವರಿಗೆ ಸೇರಿದ 11 ಕುರಿ 1ಮೇಕೆ ಹಾಗೂ 1ಟಗರು ಸಿಡಿಲಿಗೆ ಬಲಿಯಾಗಿವೆ. ವಿಷಯ ತಿಳಿದ ಕೊರಟಗೆರೆಯ ತಹಶೀಲ್ದಾರ್ ನಹಿದಾ ಜಮ್ ಜಮ್ ಹಾಗೂ ಪಶು ವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತಕ್ಷಣ ಸ್ಥಳೀಯ ಶಾಸಕರ ಗಮನಕ್ಕೆ ತಂದು ಅವರ ಅನುಪಸ್ಥಿತಿಯಲ್ಲಿ ಕುರಿಗಾಹಿಗಳಿಗೆ 39ಸಾವಿರದ ಚೆಕ್ಕನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಜನಸ್ನೇಹಿ ಅಧಿಕಾರಿಗಳು ಇರುವವರೆಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದ್ದು, ಜನಸ್ನೇಹಿ ತಹಶೀಲ್ದಾರ್ ನಹಿದಾ ಜಮ್ ಜಮ್ ಅವರ ಕರ್ತವ್ಯ ನಿಷ್ಠೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ಬೆಂಗಳೂರು, ರಾಜ್ಯದಲ್ಲಿ ಅಜಾನ್ ವಿರುದ್ಧ ತಿರುಗಿ ಬಿದ್ದಿರುವ ಹಿಂದೂಪರ ಸಂಘಟನೆಗಳು ಮೇ 9ರಂದು ದೇವಾಲಯಗಳು ಹಾಗೂ ಮಠಗಳಲ್ಲಿ ಮೈಕ್ ಹಾಕಿ ಭಜನೆ, ಶ್ಲೋಕ ಹೇಳುವಂತೆ ಕರೆ ನೀಡಿವೆ. ಮೇ 9ರಂದು ಬೆಳಗ್ಗೆ 5 ಗಂಟೆಗೆ ಮೈಕ್ ಮೂಲಕ ಭಜನೆ, ಹನುಮಾನ್ ಚಾಲೀಸಾ ಪಠಿಸುವಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಪ್ರಾರ್ಥನಾ ಮಂದಿರಗಳಲ್ಲಿ ಹಾಕಿರುವ ಮೈಕ್ ತೆಗೆಸುವಂತೆ ಸುಪ್ರೀಂಕೋರ್ಟ್ ಆದೇಶವಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಹೀಗಾಗಿ ನಮ್ಮ ಈ ಹೋರಾಟ ಕೈಬಿಡಬೇಕಾದರೆ ಆಡಳಿತ ನಡೆಸುತ್ತಿರುವವರು ಪ್ರಾರ್ಥನಾ ಮಂದಿರಗಳಲ್ಲಿ ಹಾಕಿರುವ ಮೈಕ್ಗಳನ್ನು ತೆಗೆಸಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ದೇವಾಲಯಗಳಲ್ಲಿ ಮೈಕ್ನಲ್ಲಿ ಭಜನೆ ಮಾಡುವ ಕಾರ್ಯಕ್ರಮ ನಡೆಸಲಾಗುವುದು.ನಮ್ಮ ನಿರ್ಧಾರವನ್ನು ತಡೆಯಲು ಸರ್ಕಾರ ಪ್ರಯತ್ನಿಸಿದರೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆಯನ್ನು ಪ್ರಮೋದ್ ಮುತಾಲಿಕ್ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ನವದೆಹಲಿ: ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದ್ದು ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಕಿತ್ತುಹಾಕಬೇಕು ಎಂದು ಅಮಿತ್ ಶಾ ಹೇಳಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆಯ 13ನೇ ಸಂಸ್ಥಾಪನಾ ದಿನವನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಧಿಯ ವಿರುದ್ಧ ದಾಖಲಾದ ಪ್ರಕರಣಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡಿದೆ ಎಂದರು. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣು ನೀತಿಯನ್ನು ಅಳವಡಿಸಿಕೊಂಡಿದೆ. ಭಾರತದಿಂದ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯಲು ಕೆಲಸ ಮಾಡುತ್ತಿದೆ. ಎನ್ ಐಎ ದಾಖಲಿಸಿರುವ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ನಿಧಿ ಪ್ರಕರಣಗಳ ಕಾರಣ, ಅಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಒದಗಿಸುವುದು ಈಗ ತುಂಬಾ ಕಷ್ಟಕರವಾಗಿದೆ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಕ್ಕಾಗಿ ಮತ್ತು ಅಲ್ಲಿ ಭಯೋತ್ಪಾದನೆಗೆ ಸಂಬಂಧಪಟ್ಟ ವಸ್ತುಗಳು ಮತ್ತು ಹಣಗಳನ್ನು ಒದಗಿಸುವ ಕೊಂಡಿಗಳನ್ನು ನಿಗ್ರಹಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಗೃಹ ಸಚಿವರು ಅಭಿನಂದನೆ…
ಕೋಲಾರ: ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್ ಉಚಿತ ಎಂದು ಹೇಳಲಾಗಿತ್ತು. ಜನರು ಸಿಕ್ಕದ್ದೇ ಜಾನ್ಸ್ ಎಂಬಂತೆ ಉಚಿತ ಪೆಟ್ರೋಲ್ ಗೆ ಮುಗಿ ಬಿದ್ದಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು. ಹೀಗಾಗಿ ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಉಚಿತ ಪೆಟ್ರೋಲ್ ವ್ಯವಸ್ಥೆಯನ್ನು ಮಾಡಿದ್ದರು. ಬೈಕ್ ರಾಲಿಗೆ ಬಂದವರಿಗೆ ಜೆಡಿಎಸ್ ಟಿ ಶರ್ಟ್, ಉಚಿತ ಪೆಟ್ರೋಲ್ ಹಾಗೂ ಮಹಿಳೆಯರಿಗೆ ಟೋಕನ್ ನೀಡಲಾಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ಅಕ್ಕಿಮೂಟೆ ನೀಡುವ ಭರವಸೆ ನೀಡಲಾಗಿತ್ತು ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಕುಶಾಲನಗರ: ತಾಲ್ಲೂಕು ಮಟ್ಟದ ಹೆಬ್ಬಾಲೆ ಕೊಪ್ಪಲು ಗ್ರಾಮದಲ್ಲಿ ಮಹಾನಾಯಕ ಬಹುಜನರ ಸೂರ್ಯ ವಿಶ್ವರತ್ನ ಭೀಮರಾವ್ ಅಂಬೇಡ್ಕರ್ ಅವರ 131ನೇ ಹುಟ್ಟುಹಬ್ಬವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಜುನಾಥ್ ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲರೂ ಎಲ್ಲ ರಂಗದಲ್ಲೂ ಗುರುತಿಸಿಕೊಂಡು ಮುಖ್ಯವಾಹಿನಿಗೆ ಬರಲು ಸಾಧ್ಯವಾದದ್ದು ಅಂಬೇಡ್ಕರ್ ಅವರಿಂದ. ಅಂಬೇಡ್ಕರ್ ಅವರು ಬರೆದ ಸಂವಿಧಾನದ ಮೂಲಕ ನಾನು ಕೂಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಲು ಸಾಧ್ಯವಾಯಿತು. ಇವತ್ತು ಸಮಾಜದಲ್ಲಿ ಅಂಬೇಡ್ಕರ್ ಅವರ ಆಶೀರ್ವಾದದಿಂದ ಹೆಣ್ಣುಮಕ್ಕಳು ಕೂಡ ಎಲ್ಲ ಕ್ಷೇತ್ರದಲ್ಲೂ ಗುರುತಿಸಿಕೊಳ್ಳಲು ಅವಕಾಶವಾಗಿದೆ ಎಂದು ಹೇಳಿದರು ಶ್ರೀನಿವಾಸ್ ಜಿಲ್ಲಾ ಪಂಚಾಯಿತಿ ಸದಸ್ಯರು ಹೆಬ್ಬಾಲೆ ಮಾತನಾಡಿ, ಎಲ್ಲ ಜಾತಿ ಜನಾಂಗ ಒಂದಾಗಿ ಪ್ರೀತಿ ಸ್ನೇಹ ಸಹಬಾಳ್ವೆ ಬೆಳೆಸಿಕೊಂಡು ಬಾಬಾಸಾಹೇಬ ಅಂಬೇಡ್ಕರ್ ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು ತುಳಿತಕ್ಕೆ ಒಳಗಾದ ಜನರಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೂರಾರು ಯೋಜನೆಗಳನ್ನು ತಂದಿದ್ದಾರೆ ಅದನ್ನು ಬಳಸಿಕೊಂಡು ತಾವೆಲ್ಲರೂ ಬೆಳೆಯಬೇಕೆಂದು ಹೇಳಿದರು. ಕೆ.ಬಿ.ರಾಜು ರಾಜ್ಯ…
ಬೆಂಗಳೂರು : ಧರ್ಮ ಸಂಘರ್ಷ ಸೃಷ್ಟಿ ಮಾಡುತ್ತಿರುವ ಘಟನೆಗಳನ್ನು ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಲಹೆ ನೀಡಿದ್ದಾರೆ ಸಿಎಂ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಸಮಾಜದ ಗುರುಗಳನ್ನು ಕರೆದು ವಿಧಾನಸೌಧದಲ್ಲಿ ಸಭೆ ಮಾಡಲಿ, ಯಾವ ಧರ್ಮವರು ಯಾವ್ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದನ್ನು ಸ್ವಷ್ಟವಾದ ಸಂದೇಶ ರವಾನೆ ಮಾಡಲಿ ಎಂದು ಅವರು ಸಲಹೆ ನೀಡಿದ್ದಾರೆ. ಈ ನಾಡಿನ ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡಲಿ. ಅಜಾನ್ ವಿವಾದ ಇತ್ಯರ್ಥಕ್ಕೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್, ಮತ್ತೊಮ್ಮೆ ಅರ್ಥಹೀನವಾಗಿ ಮಾತನಾಡಿದ್ದಾರೆ. ದೇಶದ ಚಿಲ್ಲರೆ ಹಣದುಬ್ಬರ ದರ 17 ತಿಂಗಳ ಗರಿಷ್ಟ ಮಟ್ಟ ತಲುಪಿದೆ. ಸಗಟು ಹಣದುಬ್ಬರ ದರ 4 ತಿಂಗಳ ಗರಿಷ್ಠ ಮಟ್ಟ ತಲುಪಿದೆ.ಇಷ್ಟಾದರೂ ಹಣದುಬ್ಬರ ಅತಿಯಾಗಿ ಏರಿಕೆಯಾಗಿಲ್ಲ ಎಂದರೆ ಏನರ್ಥ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ತರಾಟೆಗೆತ್ತಿಕೊಂಡಿದ್ದಾರೆ. ಏರುತ್ತಿರುವ ಸಗಟು ಹಣದುಬ್ಬರ ಭವಿಷ್ಯದಲ್ಲಿ ಚಿಲ್ಲರೆ ಹಣದುಬ್ಬರದ ಮೇಲೂ ನೇರ ಪರಿಣಾಮ ಬೀರಲಿದೆ.ಈಗಾಗಲೇ ಬೆಲೆಯೇರಿಕೆಯಿಂದ ಜನಸಾಮಾನ್ಯ ತತ್ತರಿಸಿದ್ದಾನೆ. ಹಣದುಬ್ಬರ ಹೀಗೆ ಏರುತ್ತಿದ್ದರೆ ಜನರ ಬದುಕು ಏನಾಗಬೇಕು? ಎಂದು ಅವರು ಪ್ರಶ್ನಿಸಿದ್ದಾರೆ. ಹಣದುಬ್ಬರದ ಬಗ್ಗೆ ಆರ್ಥಿಕ ತಜ್ಞರ ಆತಂಕ ಭಾರತದ ಮಟ್ಟಿಗೆ ಎಚ್ಚರಿಕೆಯ ಕರೆಗಂಟೆ.ಅರ್ಥ ಸಚಿವರು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ: ತಾಲ್ಲೂಕು ನೀಡಗಲು ಹೋಬಳಿಯ ವಾಪ್ತಿಯಲಿ ಬರುವ ಚನ್ನಕೇಶವಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚನ್ನಕೇಶವಸ್ವಾಮಿ. ಮತ್ತು ಶ್ರೀ ಆಂಜನೇಯ ಸ್ವಾಮಿಯ ದೊಡ್ಡ ತೇರು ಉತ್ಸವ ಬಹಳ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆಯಿತು. ಈ ಜಾತ್ರೆಯ ವಿಶೇಷವೇನೆಂದರೆ. ಪ್ರತಿವರ್ಷವೂ ಈ ಜಾತ್ರೆಯ ಕೊನೆಯ ದಿನವಾಗಿ. ಹುಟ್ಟಲು ಪರಿಷೆಯನ್ನು ಕಳೆದ ಏಳು ದಿನಗಳಿಂದ ನಡೆಯುತ್ತಿದ್ದಂತಹ ಜಾತ್ರೆ ಇಂದು ತೆರೆ ಬಿದ್ದಿದೆ. ಈ ಸಂದರ್ಭದಲ್ಲಿ ವೆಂಕಟಭೀಮ ರಾವ್ ವಂಶಸ್ಥರು ಆದಂತಹ ಸಿ.ಎನ್ ಆನಂದರಾವ್. ಗೋಪಾಲ್ ರಾವ್ ನಾಗರಾಜ ಸ್ವಾಮಿ .ಅಜಯ್ ನಾಗೇಶ್. ಬಿಂದು ಮಾಧವ ರಾವ್. ಶೇಷಗಿರಿರಾವ್. ಯರ್ರಪ್ಪ ಕೆಇಬಿ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಮ್ಮ ಈರಣ್ಣ. ಹನುಮಂತರಾಯಪ್ಪ ಗೌಡರು. ನೀರಗಂಟೆ ಶಿವಪ್ಪ. ಪಾಂಡುರಂಗಪ್ಪ ತಳವಾರ್ ಮತ್ತು ಊರಿನ ಕೈವಾಡಸ್ಥರು. ಅಕ್ಕಪಕ್ಕದ ಗ್ರಾಮಸ್ಥರು ಭಕ್ತಾದಿಗಳು ಪಾಲ್ಗೊಂಡಿದ್ದರು ವರದಿ :ರಾಮಪ್ಪ ಸಿ. ಕೆ. ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…