Author: admin

ಮಧುಗಿರಿ: ತಾಲ್ಲೂಕು ಆಡಳಿತ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಗರ್ ಹುಕುಂ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಹಶೀಲ್ದಾರ್ ಸುರೇಶ್ ಆಚಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ಬಗರ್ ಹುಕುಂ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸುವ ವ್ಯವಸ್ಥೆ ಮಾಡಲಾಗಿದ್ದು, ತಾಲ್ಲೂಕಿನ ಎಲ್ಲಾ ನಾಡ ಕಛೇರಿಗಳಲ್ಲಿ ನಮೂನೆ 57 ರ ಪೋರ್ಟಲ್  ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ತಾಲ್ಲೂಕಿನ ನಾಡ ಕಛೇರಿಗಳಲ್ಲಿ ಸಾರ್ವಜನಿಕರು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ. ವರದಿ: ಆಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ಆನೆಕೆರೆ ಗ್ರಾಮದಲ್ಲಿ , ಕರುನಾಡ ವಿಜಯ ಸೇನೆ ಮತ್ತು ಆನೆಕೆರೆ ಗ್ರಾಮ ಪಂಚಾಯ್ತಿ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಮಕೃಷ್ಣ ಟಿ.ಎಸ್., ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ವಿಜಯ ಸೇನೆ ಸಂಘಟನೆಯ ಸಹಯೋಗದೊಂದಿಗೆ ಈ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗಿದೆ ಎಂದು ಮನವಿ ಮಾಡಿಕೊಂಡರು. ಬಳಿಕ ಮಾತನಾಡಿದ ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಅಧ್ಯಕ್ಷ ಎಚ್. ಎಸ್. ಸುರೇಶ್ ಬ್ರಹ್ಮ ಸಂಘಟನೆಯ ವತಿಯಿಂದ ಇನ್ನುಳಿದ ಪಂಚಾಯತಿ ನೆರವಿನೊಂದಿಗೆ ನಮ್ಮ ಸಂಘಟನೆ ಇಂತಹ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ತಾಲೂಕಿನ ಜನತೆಗೆ ಆರೋಗ್ಯ ತಮ್ಮ ಗ್ರಾಮ…

Read More

ತುರುವೇಕೆರೆ:  ತಾಲೂಕಿನ ದಬ್ಬೆಘಟ್ಟ ಹೋಬಳಿಗೆ ಸೇರಿದ ನಡುವನಹಳ್ಳಿ ಗ್ರಾಮದ  ಗ್ರಾಮದೇವತೆ ತುಳಸಮ್ಮ ಲಕ್ಷ್ಮೀದೇವಿ ದೇವಾಲಯದ ಮುಂಭಾಗದಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿಯ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ವೇಳೆ ಬಾಲಕ-ಬಾಲಕಿ ಹಾಗೂ  ಅವರ ಪೋಷಕರು ಸ್ಥಳದಿಂದ ಪರಾರಿಯಾದ ಘಟನೆ ನಡೆದಿದೆ. ಗ್ರಾಮದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಮಾಧ್ಯಮಗಳು ಈ ಬಗ್ಗೆ ತುರುವೇಕೆರೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅರುಣ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದು,  ಅವರು ಪೊಲೀಸರೊಂದಿಗೆ ನಡುವನಹಳ್ಳಿ ಗ್ರಾಮದ ದೇವಾಲಯದ ಭೇಟಿ ನೀಡುತ್ತಿದ್ದಂತೆಯೇ ಬಾಲಕ ಬಾಲಕಿ ಸಹಿತ ಪೋಷಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದೇ ವೇಳೆ ವಿವಾಹ ಕಾರ್ಯ ಮಾಡಲು ಬಂದಿದ್ದ ಅರ್ಚಕ, ಅಡುಗೆ ಭಟ್ಟನನ್ನು ಗಮನಿಸಿದ ಅಧಿಕಾರಿಗಳು  ಬಾಲ್ಯ ವಿವಾಹದ ಕಾನೂನಿನ ಬಗ್ಗೆ ತಿಳಿಸಿದ್ದು,  ಈ ರೀತಿಯ ಘಟನೆಗಳು ಕಂಡು ಬಂದರೆ ನಮಗೆ ತಿಳಿಸಬೇಕು ಎಂದು ಮನವಿ ಮಾಡಿದರು. ಬಾಲಕ, ಬಾಲಕಿ ಹಾಗೂ ಪೋಷಕರು ಕುಣಿಗಲ್ ಮಾರ್ಗವಾಗಿ ಪರಾರಿಯಾಗಿದ್ದಾರೆನ್ನಲಾಗಿದೆ.…

Read More

ದೇಶದ ಮತ್ತೊಂದು ಅತಿ ದೊಡ್ಡ ಬ್ಯಾಂಕ್ ಹಗರಣ ಬಯಲಾಗಿದೆ. ಸುಮಾರು 34 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಈ ಹಗರಣದಲ್ಲಿ ದೀವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಕಂಪನಿ ಮತ್ತು ಅದರ ಸಹವರ್ತಿ ಕಂಪನಿಗಳ ವಿವಿಧ ಕ್ರಿಮಿನಲ್ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುವ ಮೂಲಕ ಸಿಬಿಐ ದೇಶಾದ್ಯಂತ 10 ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ ದಾಳಿಯ ವೇಳೆ ಹಲವು ಆಕ್ಷೇಪಾರ್ಹ ಮತ್ತು ಮಹತ್ವಪೂರ್ಣ ದಾಖಲೆಗಳ ಜೊತೆಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನೂ ವಶಪಡಿಸಿಕೊಳ್ಳಲಾಗಿದೆ. ತಡ ರಾತ್ರಿಯವರೆಗೆ ಈ ದಾಳಿ ಮುಂದುವರೆದಿದೆ. ಇದಕ್ಕೂ ಮೊದಲು 22 ಸಾವಿರ ಕೋಟಿ ರೂ.ಗಳ ಬ್ಯಾಂಕ್ ಹಗರಣವೊಂದು ಬೆಳಕಿಗೆ ಬಂದಿದ್ದು, ಅದು ಇದುವರೆಗಿನ ಅತಿ ದೊಡ್ಡ ಬ್ಯಾಂಕ್ ಹಗರಣವಾಗಿತ್ತು. ಸಿಬಿಐ ವಕ್ತಾರ ಆರ್‌ ಸಿ ಜೋಶಿ ಪ್ರಕಾರ, ಈ ಕುರಿತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಪ್ರಧಾನ ವ್ಯವಸ್ಥಾಪಕ ವಿಪಿನ್ ಕುಮಾರ್ ಶುಕ್ಲಾ ಅವರು ಸಿಬಿಐಗೆ ಲಿಖಿತ ದೂರು ನೀಡಿದ್ದಾರೆ. ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್…

Read More

ಫೇಸ್ ಬುಕ್ ನಲ್ಲಿ ಚೆಂದ ಚೆಂದದ ಹುಡುಗಿಯರು ಸಿಕ್ರು ಅಂತ ಸ್ನೇಹ ಬೆಳೆಸೋಕೆ ಮುಂಚೆ ಕೊಂಚ ಜೋಕೆ. ಫೇಸ್​ಬುಕ್​ ಅಲ್ಲಿ ಫ್ರೆಂಡ್​, ಲವ್​ ಅಂತ ನಂಬಿಕೊಂಡ್ರೆ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ.ಇಲ್ಲೊಬ್ಬ ವ್ಯಕ್ತಿಯ ಕಥೆ ಅದೇ ಆಗಿದೆ. ಫೇಸ್​ಬುಕ್ನಿಂದಾದ ಮಹಿಳೆ ಜತೆಗಿನ ಪರಿಚಯಕ್ಕೆ 35 ಲಕ್ಷ ಬೆಲೆ ತೆತ್ತಿದ್ದಾರೆ.ಬೆಂಗಳೂರಿನ ನಿವಾಸಿಯಾಗಿರುವ 48 ವರ್ಷದ ವಿನ್ಸೆಂಟ್ ಎಂಬುವರು ಬಜಾಜ್​ ಫೈನಾನ್ಸ್​ ಯೂನಿಟ್​ನಲ್ಲಿ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದಾರೆ.ಫೇಸ್​ಬುಕ್​ನಲ್ಲಿ ಪರಿಚಯವಾದ ನ್ಯಾನ್ಸಿ ವಿಲಿಯಂ ಎಂಬ ವಿದೇಶಿ ಮಹಿಳೆ ಇವರಿಂದ 35 ಲಕ್ಷ ಪಡೆದು ವಂಚನೆ ಮಾಡಿದ್ದಾಳೆ. ನ್ಯಾನ್ಸಿ ವಿಲಿಯಂ ಫೇಸ್​ಬುಕ್​ನಲ್ಲಿ ಮೊದಲಿಗೆ ವಿನ್ಸೆಂಟ್​ಗೆ ಫ್ರೆಂಡ್​ ರಿಕ್ವೆಸ್​ ಕಳಿಸಿದ್ದಾಳೆ.ನಂತ್ರ ತಾನು ಇಂಗ್ಲೆಂಡಿನವಳು ಎಂದು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿದ್ದಾಳೆ.ಈ ಸ್ನೇಹ ಫೋನ್​ ನಂಬರ್​ ಎಕ್ಸ್​ಚೇಂಜ್​ ಮಾಡಿಕೊಳ್ಳುವಲ್ಲಿವರೆಗೂ ಹೋಗಿದೆ. ನಂತ್ರ ಇಬ್ಬರ ನಡುವೆ ವಾಟ್ಸ್​ಆ್ಯಪ್​ನಲ್ಲಿ ಚಾಟಿಂಗ್​, ಕಾಲಿಂಗ್​ ಎಲ್ಲ ನಡೆಯುತ್ತೆ. ಹೀಗೆ ಬೆಳೆದ ಸ್ನೇಹ ಮತ್ತಷ್ಟು ಗಾಢವಾಗಿ ಒಟ್ಟಿಗೆ ಸೇರಿ ಬ್ಯುಸಿನೆಸ್​ ಆರಂಭಿಸೋಣ ಅಂತ ಡಿಸ್ಕಸ್ ಆಗಿ…

Read More

ಪಾವಗಡ: ವಿದ್ಯಾರ್ಥಿಗಳು ಕಷ್ಟ ಪಟ್ಟು ಓದುವುದಕ್ಕಿಂತ ಇಷ್ಟ ಪಟ್ಟು ಓದುವುದರಿಂದ ಹೆಚ್ಚು ಹೆಚ್ಚು ಅಂಕ ಗಳಿಸಲು ಸಹಕಾರಿಯಾಗುತ್ತದೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಕಾರ್ಯದರ್ಶಿಗಳಾದ ಡಾ.ಜಿ. ವೆಂಕಟರಾಮಯ್ಯ ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಲ್ಪ್ ಸೊಸೈಟಿ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟಾ ನರಸಿಂಹ ಮೂರ್ತಿ ಮಾತನಾಡಿ,  ಮಾನಂ ಶಶಿಕಿರಣ್ ಅಧ್ಯಕ್ಷತೆಯ ಹೆಲ್ಪ್ ಸೊಸೈಟಿ ಸಂಸ್ಥೆ ಸದಾ ಸಮಾಜ ಮುಖಿ ಸೇವೆಯ ಜೊತೆಗೆ,  ಶಿಕ್ಷಣಕ್ಕೆ ಹೆಚ್ಚು ಪ್ರಾತಿನಿದ್ಯ ನೀಡುತ್ತಿದೆ.  ಇಂದು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಪಿ ಯು ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ತಾಲ್ಲೂಕಿಗೆ ಹಾಗೂ ಸಂಸ್ಥೆಗೆ ಕೀರ್ತಿ ದಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಸನ್ಮಾನಿಸುತ್ತಿರುವುದು ಅಭಿನಂದನರ್ಹ ಎಂದರು. ಈ ಸಂದರ್ಭದಲ್ಲಿ ರೋಟರಿ…

Read More

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು.ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ.ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು. ಇದೇ ವೇಳೆ ಮಾತನಾಡಿದ ವಿಶ್ವನಾಥ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಮೇರೆಗೆ ಬಿಡಿಎ ವತಿಯಿಂದ ನಮ್ಮೆಲ್ಲರ ಮಾರ್ಗದರ್ಶಿಯಾಗಿರುವ ಸಾಲು ಮರದ ತಿಮ್ಮಕ್ಕ…

Read More

ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಫಾರ್ಮ್ ಕಳೆದುಕೊಳ್ಳಲು ಮಾಜಿ ಕೋಚ್ ರವಿಶಾಸ್ತ್ರಿ ಕಾರಣ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಮತ್ತು ಬ್ಯಾಟರ್ ರಶೀದ್ ಲತಿದ್ ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಲತೀಫ್ ಅವರು ಟೀಮ್ ಇಂಡಿಯಾ ಕೋಚ್ ಆಗಲು ಶಾಸ್ತ್ರಿ ಅವರಿಗೆ ಮಾನ್ಯತೆ ಇದೆಯೇ ಅಥವಾ ಇಲ್ಲವೇ ಎಂಬುದು ನನಗೆ ತಿಳಿದಿಲ್ಲ. ಅವರನ್ನೇ ನಾಯಕರನ್ನಾಗಿ ನೇಮಿಸುವ ನಿರ್ಧಾರಕ್ಕೆ ಈಗ ಹಿನ್ನಡೆಯಾಗಿದೆ ಎಂದರು. ಅನಿಲ್ ಕುಂಬ್ಳೆಯಂತಹ ಆಟಗಾರನನ್ನು ಬದಿಗೆ ಸರಿಸಿ ರವಿಶಾಸ್ತ್ರಿ ಅವರನ್ನು ಕೋಚ್ ಸ್ಥಾನಕ್ಕೆ ಸೇರಿಸಿಕೊಳ್ಳುವುದು ತಪ್ಪು, ರವಿಶಾಸ್ತ್ರಿ ಅವರಿಂದಲೇ ಇದು ಸಂಭವಿಸಿದೆ, 2019 ರಲ್ಲಿ ಕುಂಬ್ಳೆಯಂತಹ ಆಟಗಾರನನ್ನು ಬದಿಗಿಟ್ಟು ರವಿಶಾಸ್ತ್ರಿ ಬಂದಿದ್ದಾರೆ, ಆದರೆ ಅವರಿಗೆ ಮಾನ್ಯತೆ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ”ಎಂದು ರಸೀದ್ ಲತಿಫ್ ಅಭಿಪ್ರಾಯಪಟ್ಟಿದ್ದಾರೆ. ‘ಅವರು ಕಾಮೆಂಟರಿ ಮಾಡುತ್ತಿದ್ದರು, ಆದ್ದರಿಂದ ಅವರು ಕೋಚಿಂಗ್‌ನಲ್ಲಿ ಒಳಗೊಳ್ಳುವ ಅವಶ್ಯಕತೆ ಇರಲಿಲ್ಲ, ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಾಸ್ತ್ರಿ ಅವರನ್ನು ಒಳಗೊಳ್ಳುವಲ್ಲಿ ಇತರರ ಪಾತ್ರವು ಇರಬಹುದು ಎನ್ನುವುದರ ಖಾತ್ರಿ…

Read More

ದಕ್ಷಿಣ ಭಾರತದ ಕೇರಳದಿಂದ ಪ್ರವೇಶಿಸಿರುವ ಮಾನ್ಸೂನ್ ಈಗ ದೇಶದ ಹಲವು ರಾಜ್ಯಗಳನ್ನು ತಲುಪಿದೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆ ಆಗುತ್ತಿದೆ. ಆದರೆ ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನರು ಮುಂಗಾರು ಮಳೆಗಾಗಿ ಇನ್ನೂ ಕುತೂಹಲದಿಂದ ಕಾಯುತ್ತಿದ್ದಾರೆ. ಈ ಮಧ್ಯೆ, ಭಾರತೀಯ ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳವರೆಗೆ ದೇಶದ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳವರೆಗೆ ಈ ಭಾಗಗಳಲ್ಲಿ ಧಾರಾಕಾರ ಮಳೆ: ನೈಋತ್ಯ ಮಾನ್ಸೂನ್ ಭಾರತದ ಬಹುಭಾಗವನ್ನು ಆವರಿಸುತ್ತದೆ. ಹೀಗಾಗಿ ಮುಂದಿನ ಮೂರು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದೆಹಲಿ-ಎನ್‌ಸಿಆರ್‌ನ ಹವಾಮಾನದಲ್ಲೂ ಗಮನಾರ್ಹ ಬದಲಾವಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 23 ಮತ್ತು 24 ರಂದು ಪಶ್ಚಿಮ ಬಂಗಾಳದಲ್ಲಿ, ಜೂನ್ 23 ರಿಂದ 26 ರಂದು ವಿದರ್ಭ, ಜೂನ್ 24ರಂದು ಬಿಹಾರದಲ್ಲಿ ಮತ್ತು ಜೂನ್ 25 ರಂದು ಜಾರ್ಖಂಡ್ ರಾಜ್ಯಗಳಲ್ಲಿ…

Read More

ಲಕ್ನೋ: 70ರ ವಯಸ್ಸಿನಲ್ಲಿ ಮದುವೆಯಾಗಲು ಹೊರಟ ‌ ವೈದ್ಯನಿಗೆ ಮಹಿಳೆಯೊಬ್ಬರು ಬರೋಬ್ಬರಿ1 ಕೋಟಿ 80 ಲಕ್ಷ ರೂ. ವಂಚಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಖ್ಯಾತ ಹೃದಯ ತಜ್ಞ ವೈದ್ಯರೊಬ್ಬರು ಪತ್ನಿಯ‌ ನಿಧನದ ಹಿನ್ನೆಲೆ ಒಂಟಿತನ‌ ನಿವಾರಿಸಲು ಎರಡನೇ ಮದುವೆಯಾಗಲು ಮುಂದಾಗಿದ್ದಾರೆ. ಇವರು ಅಂದುಕೊಂಡಂತೆಯೇ 40 ವರ್ಷ ವಯಸ್ಸಿನ ಕ್ರಿಶ ಎಂಬ  ಮಹಿಳೆ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿತ್ತು . ಮದುವೆ ಕಥೆ ಹೇಳಿಯೇ ವೈದ್ಯನಿಂದ ಕ್ರಿಶ ಹಣ ವಸೂಲಿ ಮಾಡಲು ಆರಂಭಿದಿದ್ದು, ಬರೋಬ್ಬರಿ 1 ಕೋಟಿ 80 ಲಕ್ಷ ರೂಪಾಯಿ ಸುಲಿಗೆ ಮಾಡಿ ಪರಾರಿಯಾಗಿದ್ದಾಳೆ. ಮಹಿಳೆ ಸಂಪರ್ಕಕ್ಕೆ ಸಿಗದೇ ಇರುವಾಗ ತಾನು ಮೋಸ ಹೋಗಿರುವುದು ವೈದ್ಯನ ಅರಿವಿಗೆ ಬಂದಿದೆ. ಬಳಿಕ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿವಾಹ ಜಾಹೀರಾತು ಮೂಲಕ ತನಗೆ ಮಹಿಳೆಯ ಪರಿಚಯವಾಗಿತ್ತು ಎಂದು ವೈದ್ಯ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More