Subscribe to Updates
Get the latest creative news from FooBar about art, design and business.
- ಒಳಮೀಸಲಾತಿ: ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
- ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
- ಮುಕ್ತ ವಿವಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
- ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
- ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
- ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
Author: admin
ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಶ್ರೀ ಸಿದ್ದಾರ್ಥ ಗ್ರಾಮಾಂತರ ಪ್ರೌಢಶಾಲೆ ದಂಡಿನದಿಬ್ಬ ಇಲ್ಲಿ 1999-2002 ನೇ ಸಾಲಿನ ಹಳೆವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಗಳಾದ KNS, HMK, CSR, MGR ,THS, SS ಇವರನ್ನು ಹಳೇ ವಿದ್ಯಾರ್ಥಿಗಳು ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ವೇದಮೂರ್ತಿಯವರು ವಹಿಸಿಕೊಂಡರು. ಪ್ರಾರ್ಥನೆಯನ್ನು ಕುಸುಮ ಮತ್ತು ಚೈತ್ರ ನೆರವೇರಿಸಿದರು. ಕೆ ಸಾವಿತ್ರಿ ಎಲ್ಲರನ್ನೂ ಸ್ವಾಗತಿಸಿದರು, ಕೆಂಚರಾಜು ಎಲ್ಲರನ್ನು ವಂದಿಸಿದರು. ಕಾರ್ಯಕ್ರಮವನ್ನು ಓಬಳೇಶ ಶಿಕ್ಷಕರು ನಿರ್ವಹಿಸಿದರು. ವರದಿ: ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಬೆಂಗಳೂರಿಗೆ ಹೋಗುವ ಮಾರ್ಗಮಧ್ಯೆ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ರವರ ಮನೆಗೆ ಭೇಟಿ ನೀಡಿದರು ಚಹಾ ಸೇವನೆ ಮಾಡಿ ನಂತರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಪತ್ರಕರ್ತರ ಪ್ರಶ್ನೆ. ನೀವು ರಾಜೀನಾಮೆಯನ್ನು ಯಾವಾಗ ನೀಡುತ್ತೀರಿ? ಉತ್ತರ: ನಾನು ಆಪಾದನೆಯಿಂದ ಮುಕ್ತನಾಗಬೇಕು ಎಂಬ ಒಂದೇ ಒಂದು ಉದ್ದೇಶದಿಂದ ಹಾಗೂ ನಮ್ಮ ಪಕ್ಷಕ್ಕೆ ಕಾರ್ಯಕರ್ತರಿಗೆ ಹಿರಿಯರಿಗೆ ಕಿರಿಕಿರಿ ಆಗಬಾರದೆಂದು ಮುಖ್ಯಮಂತ್ರಿಯವರ ಜೊತೆ ಮಾತನಾಡಿದ್ದೇನೆ ಈ ದಿನ (15.04.22)ರಂದು ಸಂಜೆ ಬೆಂಗಳೂರಿಗೆ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು. ಪ್ರಶ್ನೆ: ನಿಮ್ಮ ಅಭಿಮಾನಿ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ ಇದಕ್ಕೆ ನೀವು ಏನು ಹೇಳುತ್ತೀರಿ? ಉತ್ತರ: ಇಲ್ಲ ಅಭಿಮಾನಿಗಳಿಗೆ ನಾನು ಬುದ್ಧಿವಾದ ಹೇಳಿದ್ದೇನೆ. ಆ ರೀತಿ ಯಾರು ಮಾಡಿಕೊಳ್ಳುವುದಿಲ್ಲ ಆಪಾದನೆಯಿಂದ ಮುಕ್ತರಾಗಿರುವ ಮುಖ್ಯವಾಗಿದೆ ಎಂದರು. ಪ್ರಶ್ನೆ: ಪ್ರಿಯಾಂಕ ಖರ್ಗೆಯವರು ಈ ಸರ್ಕಾರದಲ್ಲಿ ಇನ್ನೂ ನಾಲ್ಕು ಜನರ ಮೇಲೆ 40% ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ?…
ಚಿತ್ರದುರ್ಗ: ಡಾ.ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ಎಂಬ ಹೆಮ್ಮೆಗೆ ಪಾತ್ರವಾಗಿದೆ. ಈ ಸಂವಿಧಾನದಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದೆ. ಜೊತೆಗೆ ದೇಶ ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್ ಹೇಳಿದರು. ಚಿತ್ರದುರ್ಗ ನಗರದಲ್ಲಿ ಜೆ.ಜೆ.ಹಟ್ಟಿ ಬಳಗದ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ರವರು ತಮ್ಮ ಇಡೀ ಜೀವನವನ್ನು ದೀನದಲಿತರ ರಕ್ಷಣೆಗಾಗಿ ಮುಡಿಪಾಗಿಟ್ಟರು. ಇವರ ಪರಿಶ್ರಮದ ಫಲವಾಗಿ ಇಂದು ದೇಶದ ಜನರಲ್ಲಿ ಸಾಮಾಜಿಕ ಸಮಾನತೆಯ ಅರಿವು ಮೂಡುವಂತಾಗಿದೆ. ಇಂದಿನ ವಿದ್ಯಾರ್ಥಿಗಳು, ನಾಗರಿಕರು ಸಂವಿಧಾನದ ನಿಯಮಗಳನ್ನು ಗೌರವಿಸುವ ಜೊತೆಗೆ ಅವುಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂಬುದಾಗಿ ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್ ಮುಖಂಡರಾದ ಗೋಪಾಲಕೃಷ್ಣ, ದುರ್ಗೇಶ್, ಮಹಾನಾಯಕ ಕನ್ನಡ ಪತ್ರಿಕೆಯ ಸಂಪಾದಕರಾದ ಶಿವಕುಮಾರ್, ಮಲ್ಲಿಕಾರ್ಜುನ್, ನೆಲ್ಸನ್ ಮಂಡೇಲಾ, ಅರವಿಂದ, ಸ್ವಾಮಿ, ಪ್ರಸಾದ, ಅನಿಲ…
ಕೊರಟಗೆರೆ: ಕೊರಟಗೆರೆ ಮತ್ತು ಮಧುಗಿರಿ ರಾಜ್ಯ ಹೆದ್ದಾರಿ ರಸ್ತೆಯ ಸಿದ್ದೇಶ್ವರ ಸಮುದಾಯ ಭವನದ ಹತ್ತಿರ ಬೈಪಸ್ ರಸ್ತೆ ನಿರ್ಮಾಣ ಮಾಡಿದ್ದು, ಬೈಪಾಸ್ ರಸ್ತೆಗೂ ಕೊರಟಗೆರೆ ಪಟ್ಟಣ ಸಂಪರ್ಕಿಸುವ ರಸ್ತೆಯು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಮಾಡಲಾಗಿದೆ. ಇದರಿಂದಾಗಿ ಇದೀಗ ಇಲ್ಲಿ ಪ್ರತಿನಿತ್ಯ ಸಣ್ಣ ಪುಟ್ಟ ಅಪಘಾತಗಳು ನಡೆಯುತ್ತಲೇ ಇವೆ. ಇಂದು ಈ ರಸ್ತೆಯ ಪಕ್ಕದಲ್ಲೇ ಹೋಗುತ್ತಿದ್ದ ದ್ವಿಚಕ್ರವಾಹನ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ ಗುದ್ದಿದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ಎಎಸ್ ಐ ಯೋಗೇಶ್ ಹಾಗೂ ಅವರ ತಂಡ ಸರ್ಕಾರಿ ಆಸ್ಪತ್ರೆಗೆ ತಮ್ಮ 112 ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ . ಕೊರಟಗೆರೆ ಪಟ್ಟಣದಿಂದ ಮಧುಗಿರಿಗೆ ಹಾದು ಹೋಗುವ ರಸ್ತೆಯಲ್ಲಿ ಹಾಂಪ್ ನಿರ್ಮಾಣವಾಗಿದ್ದು, ಮಧುಗಿರಿ ಕಡೆಗೆ ಹೋಗುವ ಲಘು ವಾಹನಗಳು ಹಾಗೂ ಭಾರಿ ವಾಹನ ಸೇರಿದಂತೆ ಪ್ರತಿನಿತ್ಯ ಸಂಚರಿಸುವ ಬೆಂಗಳೂರು-ಪಾವಗಡ ಮತ್ತು ತುಮಕೂರು-ಪಾವಗಡ…
ತಿಪಟೂರು: ಮನುಷ್ಯರಲ್ಲಿ ಇರುವ ಅಸಮಾನತೆ ಜಾತಿ ವ್ಯವಸ್ಥೆಯನ್ನು ಕೊನೆಗಾಣಿಸಬೇಕೆಂದು ಡಾ.ಬಿ.ಆರ್. ಅಂಬೇಡ್ಕರ್ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ತಿಪಟೂರು ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಏರ್ಪಡಿಸಿದ ಡಾ.ಬಿಆರ್ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾವ್ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಿ ಎಲ್ಲರೂ ಒಂದೇ ಎಂಬ ಸಮಾನತೆ ಮೂಡಿಸಬೇಕೆಂದು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ ಜಾತ್ಯತೀತ ವ್ಯಕ್ತಿ ಅಂಬೇಡ್ಕರ್ ಎಂದು ಸಚಿವರು ತಿಳಿಸಿದರು. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಇಡೀ ದೇಶದ ಪ್ರಜೆಗಳಿಗೆ ಹಕ್ಕುಗಳನ್ನು ತಿಳಿಸಿ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರಮಿಸಿದರು. ಇಂತಹವರ ವಿಚಾರಧಾರೆಗಳು ಪ್ರಸ್ತುತವಾಗಿದ್ದು, ಪ್ರತಿಯೊಬ್ಬರು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು. ಉಪನ್ಯಾಸ ನೀಡಿದ ರೇಣುಕಯ್ಯ, ಡಾ. ಅಂಬೇಡ್ಕರ್ ಅವರು, ನಮ್ಮ ದೇಶದ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ…
ಹಿರಿಯೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಬರೆಯದೇ ಇದ್ದಿದ್ದರೆ, ಇಂದು ಈ ದೇಶವನ್ನು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯಂದು ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ನಮ್ಮತುಮಕೂರು ಜೊತೆಗೆ ಅವರು ಮಾತನಾಡಿದರು. ನಾನು ಒಬ್ಬಳು ಮಹಿಳೆಯಾಗಿ ಶಾಸಕಿಯಾಗಿ ಆಡಳಿತ ನಡೆಸುತ್ತಿದ್ದರೆ, ಅದು ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪ್ರತಿಫಲ. ಇಂತಹ ವ್ಯಕ್ತಿಗಳು ನಮ್ಮ ಭಾರತ ದೇಶದಲ್ಲಿ ಇನ್ನೂ ಹುಟ್ಟಬೇಕು ಎಂದು ಅವರು ಇದೇ ಅಭಿಮಾನ ವ್ಯಕ್ತಪಡಿಸಿದರು. ಪ್ರವರ್ಗ -1ರ ಒಕ್ಕೂಟದ ರಾಜ್ಯಾದ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಪ್ರಪಂಚದಲ್ಲಿ ಮೊದಲು ಪಿಹೆಚ್ ಡಿ ಪದವಿಯನ್ನು ಪಡೆದ ಮೊದಲ ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದು, ಕೊಲಂಬಿಯಾ ಯುನಿವರ್ಸಿಟಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋವನ್ನು ಲೈಬ್ರೆರಿಯಲ್ಲಿ ಹಾಕಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ನಮ್ಮ ದೇಶದ ವಿಭಿನ್ನ ಸಂಸ್ಕೃತಿ, ಭಾಷಾ ವೈವಿಧ್ಯತೆಗಳೆಲ್ಲವನ್ನು ಸಮನಾಗಿಸಿ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ…
ಸರಗೂರು: ತಮ್ಮನ್ನು ಶೋಷಣೆ, ದೌರ್ಜನ್ಯ ಮಾಡಿದ ಸಮಾಜದ ವಿರುದ್ಧ ಅಂಬೇಡ್ಕರ್ ಎಂದಿಗೂ ಪ್ರತಿಕಾರದಿಂದ ಸಿಡಿದು ನಿಂತವರಲ್ಲ. ಪ್ರತಿಯೊಬ್ಬರೂ ಸಹೋದರತ್ವದಿಂದ ಬದುಕಬೇಕು ಎಂದು ಕನಸು ಕಂಡವರು ಎಂದು ಪಶು ಸಂಗೋಪನೆ ಇಲಾಖೆಯ ಸಹಯಕ ನಿರ್ದೇಶಕ ಡಾ.ವೈ.ಡಿ.ರಾಜಣ್ಣ ಹೇಳಿದರು. ಪಟ್ಟಣದ ತಾಲ್ಲೂಕು ಕಛೇರಿ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಪಟ್ಟಣ ಪಂಚಾಯಿತಿಯ ಸಹಯೋಗದೊಂದಿಗೆ ನಡೆದ ಡಾ.ಬಿ.ಆರ್.ಅಂಬೇಡ್ಕರ್ 131ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ರವರು ಶೋಷಿತ ಸಮುದಾಯಗಳ ಏಳಿಗೆಗಾಗಿ ನಿರಂತವಾಗಿ ಶ್ರಮಿಸಿ ಚಳುವಳಿಗಳನ್ನು ಮಾಡಿದವರು. ಜಾಗೃತಿ ಮತ್ತು ಜ್ಞಾನದ ದೀಪವಾಗಿ ಈ ದೇಶದ ಅಭಿವೃದ್ಧಿಗೆ ದಾರಿಯಾದವರು. ಅಂತಹ ಮಹನೀಯರು ಕೇವಲ ಒಂದು ವರ್ಗಕ್ಕೆ ಸೀಮಿತವಲ್ಲ ಅವರು ದೇಶದ ಆಸ್ತಿ ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕವೀರನಾಯಕ ಮಾತನಾಡಿ, ಅಂಬೇಡ್ಕರ್ ಅವರ ಆದರ್ಶಗಳು ಸಾಮಾನ್ಯ ಜನರಿಗೆ, ರೈತಪಿ ವರ್ಗದವರಿಗೆ ತಲುಪುದಾದರು ಹೇಗೆ? ಕಾರ್ಯಕ್ರಮದಲ್ಲಿ ಕೇವಲ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮಾತ್ರ ಸೀಮಿತವಲ್ಲ. ಇನ್ನೂ ಮುಂದೆಯಾದರು ಅಧಿಕಾರಿಗಳು ಎಲ್ಲರ…
ತುರುವೇಕೆರೆ: ತಾಲ್ಲೂಕು ಆಡಳಿತ ಮತ್ತು ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ಬಾಬು ಜಗಜೀವನ್ ರಾಮ್.ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುರುವೇಕೆರೆ ವಿಧಾನ ಸಭಾ ಸದಸ್ಯ ಮಸಾಲ ಜಯರಾಮ್, ಕಳೆದ ನಾಲ್ಕು ವರ್ಷಗಳಿಂದ ಚುನಾವಣಾ ನೀತಿ ಸಂಹಿತೆ, ಕೊರೊನಾದಂತಹ ಕಾರಣಗಳಿಂದ ಇಬ್ಬರು ನಾಯಕರುಗಳ ಜಯಂತಿ ಕಾರ್ಯಕ್ರಮಗಳನ್ನು ಮಾಡಲು ಆಗಿರಲಿಲ್ಲ, ಆದರೆ ಈ ಬಾರಿ ಆಚರಿಸಲು ಯಾವುದೇ ಅಡೆ ತಡೆಯಾಗಲಿಲ್ಲ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡದಿದ್ದರೆ, ನಿಮ್ಮ ಮಸಾಲ ಜಯರಾಮ್ ಶಾಸಕ ಆಗುತ್ತಿರಲಿಲ್ಲ ಎಂದ ಹೇಳಿದ ಅವರು, ಅಂಬೇಡ್ಕರ್ ಜಯಂತಿಯಲ್ಲಿ ಭಾಗಿಯಾದ ಅಪಾರ ಸಂಖ್ಯೆಯ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮಕ್ಕೂ ಮೊದಲು ಇಬ್ಬರು ಮಹಾನ್ ನಾಯಕರುಗಳ ಭಾವಚಿತ್ರಗಳಿಗೆ ,ಸಿಂಗಾರ ಮಾಡಿ, ನಾಸಿಕ್ ಡೋಲು, ತಮಟೆ , ಕಹಳೆ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಗೌರವಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ,…
ಕೊರಟಗೆರೆ: ನಾನು ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೆ, ಹಲವು ಬಾರಿ ಶಾಸಕನಾಗಿ ಮಂತ್ರಿಯಾಗಿ ಅತ್ಯುನ್ನತ ಡಾಕ್ಟರೇಟ್ ಪದವಿಯನ್ನೂ ಪಡೆದು ಹಲವು ದೇಶ ಸುತ್ತಿ ಬಂದಿರುವೆ. ಆದರೂ ಕೂಡ ನಾನು ದಲಿತ ಎಂಬ ಕಾರಣಕ್ಕೆ ದೇವಾಲಯಗಳಲ್ಲಿ ನನ್ನನ್ನು ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಅವರು ಬಹಿರಂಗವಾಗಿಯೇ ಬೇಸರ ಹೊರಹಾಕಿದರು. ಕೊರಟಗೆರೆ ಪಟ್ಟಣ ಪಂಚಾಯಿತಿ ಮುಂಭಾಗ ಗುರುವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ನೋವಿನಲ್ಲೇ ಬಿಚ್ಚಿಟ್ಟರು. ನಾನು ಫಾರಿನ್ ಗೂ ಹೋಗಿ ಬಂದೆ. ನಾನು ಶಾಸಕನಾಗಿದ್ದೀನಿ, ಸಚಿವನಾಗಿದ್ದೀನಿ, ಕರ್ನಾಟಕದಲ್ಲಿ ನಂ 2 ಆಗಿದ್ದೀನಿ. ಆದರೆ ನನಗೇ ದೇವಸ್ಥಾನಕ್ಕೆ ಸೇರಿಸಲ್ಲ. ನಾನು ದೇವಸ್ಥಾನಕ್ಕೆ ಹೋದ್ರೆ ಸ್ವಲ್ಪ ಸ್ವಲ್ಪ ಅಲ್ಲೇ ನಿಂತುಕೊಳ್ಳಿ ಮಂಗಳಾರತಿ ತರ್ತೀನಿ ಅಂತಾರೆ. ನನ್ನ ನೋಡಿ ಅವರೇ ಮಂಗಳಾರತಿ ತಟ್ಟೆ ತಂದುಬಿಡ್ತಾರೆ. ಯಾಕಂದ್ರೆ ನಾನು ಎಲ್ಲಿ ಒಳಗೆ ಬಂದು ಬಿಡ್ತೀನೋ ಅಂತ… ಇಂತಹ ಪರಿಸ್ಥಿತಿ ಈಗಲೂ ಸಮಾಜದಲ್ಲಿ ಅಂದ್ರೆ ನಾನು ಏನು ಹೇಳೋದು? ಎಂದು ಅಸಮಾಧಾನ…
ತುರುವೇಕೆರೆ: ಕಾಂಗ್ರೆಸ್ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೆಲ್ ಕಾಂತರಾಜು ಅವರ ಕಚೇರಿಯಲ್ಲಿ , ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಹಾಗೂ ಸಂವಿಧಾನ ಶಿಲ್ಪಿ, ಡಾ ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 300 ಜನ ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಬೆಮೆಲ್ ಕಾಂತರಾಜು, ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನು ಒಡೆಯಲು ಹೊರಟಿದ್ದಾರೆ. ಆದರೆ , ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂದು ಕರೆ ನೀಡಿದರು. ಎಂ.ಡಿ.ಮೂರ್ತಿ ಮಾತನಾಡಿ, ಭಾರತದ ಈಗಿನ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಸಂವಿಧಾನ ಬದಲಾವಣೆ ಮಾಡುತ್ತೇವೆ, ನಾವು ಬದಲಾವಣೆ ಮಾಡಲೇ ಬಂದಿದ್ದೇವೆ ಎಂದು ಬೇರೆಯವರ ಬಾಯಿಯಿಂದ ಮಾತನಾಡಿಸುತ್ತಿದ್ದಾರೆ. ಆದರೆ ಅದು ಇಲ್ಲಿ ನಡೆಯದು, ಸಂವಿಧಾನ ಬದಲಾವಣೆಗೆ ನಾವು ಬಿಡುವುದಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದು, ಪ್ರತಿರೋಧ ಮಾಡೋಣ ಎಂದರು. ಈ ಕಾರ್ಯಕ್ರಮದಲ್ಲಿ ತಾಲೋಕು ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನಕುಮಾರ್, ನಾಗೇಶ್, ತಾವರೆಕೆರೆ ದಾನಿಗೌಡರು, ಬುಗುಡನಹಳ್ಳಿ ಕೃಷ್ಣಮೂರ್ತಿ, ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಲಕ್ಶ್ಮೀ ದೇವಮ್ಮ, ಜೋಗಿಪಾಳ್ಯ…