Subscribe to Updates
Get the latest creative news from FooBar about art, design and business.
- ಒಳಮೀಸಲಾತಿ: ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
- ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
- ಮುಕ್ತ ವಿವಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
- ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
- ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
- ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
- ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
Author: admin
ಸಂತೋಷ್ ಪಾಟೀಲ್ ಅವರು ‘ನನ್ನ ಸಾವಿಗೆ ಈಶ್ವರಪ್ಪನವರೇ ನೇರ ಹೊಣೆ’ ಎಂದು ಡೆತ್ ನೋಟ್ ಸಂದೇಶ ರವಾನಿಸಿದ್ದಾರೆಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಈಶ್ವರಪ್ಪನವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಿ ನ್ಯಾಯಾಂಗ ತನಿಖೆಗೆ ವಹಿಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಉಪಮುಖ್ಯಮಂತ್ರಿ, ಶಾಸಕರಾದ ಡಾ.ಜಿ.ಪರಮೇಶ್ವರ್ ಸರ್ಕಾರವನ್ನು ಒತ್ತಾಯಿಸಿದರು. ಈ ಹಿಂದೆ ದೇಶದ ಪ್ರಧಾನಿಗಳು ಕಾಂಗ್ರೆಸ್ ಸರ್ಕಾರವನ್ನು 10% ಸರ್ಕಾರ ಎಂದು ಕರೆದಿದ್ದರು. ಆದರೆ ಈಗ ನೋಂದಾಯಿತ ಗುತ್ತಿಗೆದಾರರ ಸಂಘವೇ ರಾಜ್ಯ ಸರ್ಕಾರದ ಸಚಿವರು ಹಾಗೂ ಪ್ರತಿನಿಧಿಗಳು 40% ಕಮಿಷನ್ ಕೇಳುತ್ತಿರುವ ಬಗ್ಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದರೂ, ಸಹ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ನಮಗೆ ಪ್ರಧಾನ ಮಂತ್ರಿಗಳೇ ಈ 40% ಕಮಿಷನ್ ಗೆ ಬೆಂಬಲವಾಗಿ ನಿಂತಿದ್ದಾರೆಯೇ ಎಂಬ ಅನುಮಾನ ಮೂಡುವಂತೆ ಮಾಡುತ್ತಿದೆ ಎಂದರು. ಕೆಲವು ವಿಷಯಗಳಲ್ಲಿ ಟ್ವಿಟ್ಟರ್ ನಲ್ಲಿ ಬರುವ ಸಂದೇಶಗಳಿಗೆ ತತ್ ಕ್ಷಣ ಪ್ರತಿಕ್ರಿಯೆ ನೀಡುವ ಪ್ರಧಾನಿಗಳು ಗುತ್ತಿಗೆದಾರರು ಲಿಖಿತ ರೂಪದಲ್ಲಿ…
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರವರನ್ನು ಕೂಡಲೇ ಬಂಧಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ನಾಯಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ‘ನನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣವೆಂದು ಡೆತ್ನೋಟ್ನಲ್ಲಿ ಸಂತೋಷ್ ಪಾಟೀಲ್ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಈಶ್ವರಪ್ಪನವರನ್ನು ಬಂಧಿಸಬೇಕು. ಇಲ್ಲದಿದ್ದರೆ ಅವರು ಸಾಕ್ಷಿ ನಾಶ ಮಾಡುವ ಸಾಧ್ಯತೆಯಿದೆ. ಸಚಿವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿದಾಗ ಮಾತ್ರ ಪ್ರಕರಣದ ಆಳ-ಅಗಲ ತಿಳಿಯಲಿದೆ’ ಎಂದು ಹೇಳಿದರು.‘ಗುತ್ತಿಗೆದಾರರಾಗಿದ್ದ ಸಂತೋಷ್ರವರು ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಳೆದ ವರ್ಷವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ನೀಡಿದ್ದರು. ಆಗಲೇ ಈಶ್ವರಪ್ಪರವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ನಾವಿಂದು ಸಂತೋಷ್ರವರನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಆ ಸಂಬಂಧ ಯಾವುದೇ ತನಿಖೆ…
ಕಾಳಿ ಸ್ವಾಮಿ ತುಂಬಿದ ಕೊಡ ಅಲ್ಲ ಅರ್ಧ ತುಂಬಿದ ಕೊಡ ಹಾಗಾಗಿ ಸರಿಯಾಗಿ ನಿಲ್ಲಲು ಸಾಧ್ಯವಾಗಿಲ್ಲ ಎಂದು ಶಾಸಕ ಎಸ್.ಆರ್.ಶ್ರೀ ನಿವಾಸ್ ಕಾಳಿ ಸ್ವಾಮಿ ವಿರುದ್ಧ ಗುಡುಗಿದರು. ತಾಲೂಕಿನ ನಿಟ್ಟೂರು ಗ್ರಾಮದ ಜೈನಿಗರ ಬಡಾವಣೆಯಲ್ಲಿ ಸುಮಾರು 24 ಲಕ್ಷ ರೂಗಳ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕಾಳಿ ಸ್ವಾಮಿಯ ಬಗ್ಗೆ ನಾನು ಯಾವುದೇ ಮಾತನಾಡಿಲ್ಲ. ಯಾರು ಸಮಾಜದಲ್ಲಿ ಅಶಾಂತಿ ಮೂಡಿಸುವ ಸ್ವಾಮಿಗಳ ಬಗ್ಗೆ ಮಾತನಾಡಿದ್ದೇನೆ. ಹೊರತು ಈ ಕಾಳಿ ಸ್ವಾಮಿ ಯಾವ ಕಾರಣಕ್ಕೋಸ್ಕರ ಹೇಳಿಕೆ ನೀಡಿದ್ದಾರೋ ಗೊತ್ತಾಗುತ್ತಿಲ್ಲ. ಮಠಾಧೀಶರು ಹಾಗೂ ಸ್ವಾಮಿಗಳ ಮಾತುಗಳಲ್ಲಿ ಹಿಡಿತವಿರಬೇಕು. ಯಾವುದೇ ಸ್ವಾಮಿಗಳನ್ನು ನೋಡಿದರೆ ಕಾಲು ಮುಟ್ಟಿ ನಮಸ್ಕರಿಸುವ ಅಂತಹ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವಂತಹ ಸ್ವಾಮಿಗಳು ಲಕ್ಷಾಂತರ ಭಕ್ತರ ಸೇವೆಯಲ್ಲಿ ಹಾಗೂ ಸಮಾಜವನ್ನು ತಿದ್ದುವಂತಹ ಸ್ವಾಮಿಗಳು ಇದ್ದಾರೆ ಎಂದರು. ಸಮಾಜದಲ್ಲಿ ಒಡಕು ಮೂಡಿಸುವಂತಹ ಯಾವುದೇ ವ್ಯಕ್ತಿಯಾಗಲಿ ಆತನನ್ನು ಶಿಕ್ಷಿಸುವುದು ಅತ್ಯವಶ್ಯಕ. ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಗಳ ಬಳಿ…
ಕನ್ನಡ ಚಿತ್ರರಂಗದ ಖ್ಯಾತ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿನ್ನೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪವಿತ್ರ ರಂಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು, ಆತಿಥ್ಯ ಸ್ವೀಕರಿಸಿ ಶುಭ ಹಾರೈಸಿದರು. ನಿರಂತರ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿ, ಆತಿಥ್ಯ ಸ್ವೀಕರಿಸಿದ್ದಕ್ಕಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇತರ ಅತಿಥಿಗಳಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟ ವಿನೋದ್ ಪ್ರಭಾಕರ್, ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್, ಮುಖಂಡರಾದ ಇಮ್ತಿಯಾಜ್ ಫಾರುಖ್ ಖಾನ್, ಜಿ.ಎ ಬಾವಾ, ಅಲ್ತಾಫ್ ಖಾನ್, ಶೋಯೆಬ್ ಖಾನ್ ಉಪಸ್ಥಿತರಿದ್ದರು. ವರದಿ ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತೀವ್ರ ಭೂ ವಿವಾದಕ್ಕೆ ಗುರಿಯಾಗಿದ್ದ ಡಾ.ಕೆ.ಶಿವರಾಮಕಾರಂತ ಬಡಾವಣೆ ಸಂಬಂಧ ಬರೋಬ್ಬರಿ ೧೪೭೫ ಕಟ್ಟಡಗಳಿಗೆ ಸಕ್ರಮಗೊಳಿಸುವುದಾಗಿ ಬಿಡಿಎ ಸಮಿತಿ ಪ್ರಕಟಿಸಿದ್ದು, ಶೀಘ್ರದಲ್ಲೇ ಸಕ್ರಮ ಪ್ರಮಾಣ ಪತ್ರ ಹಂಚಿಕೆ ಮಾಡಲಿದೆ.ನಗರದಲ್ಲಿಂದು ಬಿಡಿಎ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನವಾಗಿ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ ಬಡಾವಣೆ ಕುರಿತು ಸರ್ಕಾರ ನೇಮಿಸಿರುವ ಸಮಿತಿ ಅಧ್ಯಕ್ಷರೂ ಆದ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸುಪ್ರೀಂ ಕೋರ್ಟಿನ ತೀರ್ಪಿನ ಅನ್ವಯ ಡಾ.ಶಿವರಾಂ ಕಾರಂತ ಬಡಾವಣೆಗಳೆಂದು ಅಧಿಸೂಚನೆ ಹೊರಡಿಸಲಾಗಿದ್ದ ೧೭ ಗ್ರಾಮಗಳ ೧೪೭೫ ಕಟ್ಟಡಗಳಿಗೆ ಅನುಮೋದನೆ ನೀಡಿದೆ. ಅದರಂತೆ ಈ ಎಲ್ಲಾ ಕಟ್ಟಡ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರಗಳನ್ನು ನೀಡಲು ಸಮಿತಿ ಉದ್ದೇಶಿಸಿದೆ ಎಂದು ಅವರು ತಿಳಿಸಿದರು.ಇನ್ನೂ, ಡಾ. ಕೆ. ಶಿವರಾಮಕಾರಂತ ಬಡಾವಣೆಗೆ ಗೊತ್ತುಪಡಿಸಿದ ಜಾಗದಲ್ಲಿ ಕಟ್ಟಡ ನಿರ್ಮಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅರ್ಜಿಗಳ ಆಹ್ವಾನಿಸುವ ಪ್ರಕ್ರಿಯೆ ನಡೆಸಲಾಗಿತ್ತು.ಅದರಂತೆ ೭,೧೬೧ ಅರ್ಜಿಗಳು ಬಂದಿವೆ. ಈ ಪೈಕಿ ೪೨೯ ಅರ್ಜಿಗಳಿಗೆ ದಾಖಲೆ ಇಲ್ಲ. ಹೀಗಾಗಿ, ಗಣನೆಗೆ ತೆಗೆದುಕೊಂಡಿಲ್ಲ ಎಂದು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ಎರಡು ಹುಂಡಿಗಳನ್ನು ಒಡೆದು ಕಳ್ಳತನ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಎರಡು ಹುಂಡಿಗಳಲ್ಲಿನ ಹಣ, ಬೆಳ್ಳಿ , ಬಂಗಾರ, ಹಾಗೂ ಬೆಳ್ಳಿ ಪ್ರಭಾವಳಿ , ಮುಖ್ ಬದ್ನ , ನಾಗಾಭರಣಗಳನ್ನು ಕಳವು ಮಾಡಲಾಗಿದೆ. ಎಂದಿನಂತೆ ಇಂದು ದೇವಾಲಯದ ಅರ್ಚಕರು ಮಂಗಳವಾರ ರಾತ್ರಿ ದಿನನಿತ್ಯದಂತೆ ಪೂಜೆ ಮುಗಿಸಿಕೊಂಡು ದೇವಾಲಯದ ಬೀಗ ಹಾಕಿ ಹೋಗಿದ್ದರು. ಇಂದು ಬೆಳಗ್ಗೆ ದೇವಾಲಯದ ಅರ್ಚಕ ವಿಶ್ವನಾಥ್ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಕಳವು ನಡೆದಿರುವುದು ಬೆಳಕಿಗೆ ಬಂದಿದ್ದು, ಅವರು ತಕ್ಷಣವೇ ಸ್ಥಳೀಯ ಆಡಳಿತ ಮಂಡಳಿ ಅಧಿಕಾರಿಗಳಿಗೆ ಹಾಗೂ ಹಿರಿಯೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯೂರು ತಾಲ್ಲೂಕಿನ ಕಂದಾಯ ಇಲಾಖೆಯ ಎ ಡಿ ಎಮ್ ಸಿ ಶಿರಸ್ತರಾದ ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿಯಾದ ಮಾಯವರ್ಮ , ಬಬ್ಬೂರು ಶಿವಣ್ಣ, ದ್ವಿದಸ ಸಹಾಯಕರಾದ ಚನ್ನಬಸವರಾಜು ಹಾಗೂ ಹಿರಿಯೂರು…
ವರ್ಗಾವಣೆ ಬೇಕಿದ್ದಲ್ಲಿ ಒಂದು ರಾತ್ರಿಯ ಮಟ್ಟಿಗೆ ನಿನ್ನ ಹೆಂಡತಿಯನ್ನು ನನ್ನ ಬಳಿ ಕಳುಹಿಸು’ ಎಂದು ಹೇಳಿದ್ದ ವಿದ್ಯುತ್ ಇಲಾಖೆಯ ಮೇಲಧಿಕಾರಿಯ ಮಾತಿನಿಂದ ನೊಂದು ಉದ್ಯೋಗಿಯೋರ್ವ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಖೀಂಪುರ್ನಲ್ಲಿ ನಡೆದಿದೆ. ಲೈನ್ಮನ್ ಗೋಕುಲ ಪ್ರಸಾದ್ (೪೫) ಲಖಿಂಪುರದ ಜ್ಯೂನಿಯರ್ ಇಂಜಿನಿಯರ್ ಕಚೇರಿಯ ಹೊರಗೆ ತನ್ನ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜ್ಯೂನಿಯರ್ ಇಂಜಿನಿಯರ್ ನಾಗೇಂದ್ರ ಕುಮಾರ ಮತ್ತು ಓರ್ವ ಗುಮಾಸ್ತೆಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಸಾದ್ ಮೈಗೆ ಬೆಂಕಿ ಹಚ್ಚಿಕೊಂಡ ಬಳಿಕ ಚಿತ್ರೀಕರಿಸಲಾಗಿದ್ದ ವೀಡಿಯೊದಲ್ಲಿ ತೀವ್ರ ನೋವಿನಲ್ಲಿಯೂ ತನ್ನ ಕೃತ್ಯಕ್ಕೆ ಕಾರಣವನ್ನು ತಿಳಿಸಿದ್ದಾರೆ. ಕುಮಾರ ಮತ್ತು ಆತನ ಸಹಾಯಕ ತನಗೆ ಕಿರುಕುಳ ನೀಡುತ್ತಿದ್ದರು, ತಾನು ಪೊಲೀಸರ ಮೊರೆ ಹೋಗಿದ್ದರೂ ಅವರು ನೆರವಾಗಿರಲಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತ್ಯೇಕ ವೀಡಿಯೋ ಮಾಡಿ ಪ್ರತಿಕ್ರಿಯೆ ನೀಡಿರುವ ಪ್ರಸಾದ್ನ ಪತ್ರಿ, ಆರೋಪಿಗಳು ಮೂರು…
ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದಿನಿಂದ ಪಕ್ಷದ ನಾಯಕರುಗಳು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ಸಿಂಗ್, ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲು ನೇತೃತ್ವದ ಮೂರು ತಂಡಗಳಲ್ಲಿ ಬಿಜೆಪಿಯ ಪ್ರಮುಖ ಮುಖಂಡರುಗಳು, ಶಾಸಕರು, ಸಂಸದರು ಪಕ್ಷ ಬಲವರ್ಧನೆಗೆ ಇಂದಿನಿಂದ ಏ. 28ರವರೆಗೆ ರಾಜ್ಯಾದ್ಯಂತ ಪ್ರವಾಸ ನಡೆಸಿ ಸಭೆ ಸಮಾವೇಶಗಳಲ್ಲಿ ಭಾಗಿಯಾಗುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವ ಹ್ರಹ್ಲಾದ್ ಜೋಷಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ಬಿಜೆಪಿ ರಾಜ್ಯ ಉಪಾಧ್ಯಕ್ಷರುಗಳಾದ ಬಿ.ವೈ ವಿಜಯೇಂದ್ರ,, ಲಕ್ಷಣ ಸವದಿ, ನಿರ್ಮಲ್ಕುಮಾರ್ ಸುರಾನಾ, ನಯನಾ ಗಣೇಶ್ ಇವರುಗಳಿದ್ದು, ರಾಜ್ಯ ಕಾರ್ಯದರ್ಶಿ ವಿನಯ್ ಬಿದಿರೆ ಈ ತಂಡದ ಸಂಯೋಜಕರಾಗಿದ್ದು, ಈ ತಂಡ ಇಂದು ಮತ್ತು ನಾಳೆ ಮಂಗಳೂರು ವಿಭಾಗದಲ್ಲಿ ಸರಣಿ ಸಭೆ ನಡೆಸಲಿದ್ದು, 19, 20 ರಂದು ಶಿವಮೊಗ್ಗ ವಿಭಾಗದಲ್ಲಿ,…
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರ ತಲೆದಂಡ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಸಂತೋಷ್ ಪಾಟೀಲ್ ಪ್ರಕರಣವು ಕಾಂಗ್ರೆಸ್ಗೆ ಪ್ರಭಲ ಅಸ್ತ್ರ ಸಿಕ್ಕಂತಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲಿಯೇ ಪ್ರತಿಪಕ್ಷ ಕಾಂಗ್ರೆಸ್ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಕೂಡಲೇ ಈಶ್ವರಪ್ಪ ರಾಜೀನಾಮೆಯನ್ನು ಪಡೆಯಬೇಕು ಮತ್ತು ಅವರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಈಶ್ವರಪ್ಪನವರ ರಾಜೀನಾಮೆಗೆ ಪ್ರತಿಪಕ್ಷಗಳಿಂದ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿಯವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಸದ್ಯ ಬೆಳಗಾವಿ ಪ್ರವಾಸದಲ್ಲಿರುವ ಯಡಿಯೂರಪ್ಪನವರ ಜೊತೆಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಈಶ್ವರಪ್ಪನವರಿಂದ ರಾಜೀನಾಮೆ ಪಡೆಯುವ ಬಗ್ಗೆ ಚರ್ಚಿಸಿದ್ದಾರೆಂದು ತಿಳಿದುಬಂದಿದೆ. ಉಭಯ ನಾಯಕರ ಫೋನ್ ಸಂಭಾಷಣೆ ಕುರಿತು ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಿಎಂ ಬೊಮ್ಮಾಯಿಯವರ ಮಾತಿಗೆ ಬಿಎಸ್ವೈ ಸಮ್ಮತಿ ನೀಡಿದ್ರಾ? ಸಚಿವ ಸ್ಥಾನಕ್ಕೆ ಇಂದು ರಾತ್ರಿಯೇ ಕೆ.ಎಸ್.…
ಹೃದಯಘಾತ ಒಳಗಾಗಿದ್ದ ನೀರುವಿತರಕರೊಬ್ಬರು ಚಿಕಿತ್ಸೆ ಪಡೆದು ಮರಳಿ ಕೆಲಸಕ್ಕೆ ಆಗಮಿಸುವ ವೇಳೆ ಕೆಲಸ ನೀಡಲು ನಿರಾಕರಿಸಿದ ಘಟನೆ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಪಂಚಾಯತ್ ನ ಕ್ರಮವನ್ನು ಖಂಡಿಸಿ ಸಂತ್ರಸ್ತ ಹಾಗೂ ಕುಟುಂಬದ ಸದಸ್ಯರು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಧರಣಿ ನಡೆಸಿದ್ದು, ತಕ್ಷಣವೇ ಕೆಲಸಕ್ಕೆ ಮರುನೇಮಕ ಮಾಡುವಂತೆ ಒತ್ತಾಯಿಸಿದರು. ಹೃದಯಘಾತ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಕಛೇರಿಗೆ ಕೆಲಸಕ್ಕೆ ಹಾಜರಾಗಲು ಹೋದರೆ, ಗ್ರಾಮ ಪಂಚಾಯಿತಿ ಆಡಳಿತ ನೀರುವಿತರಕ ಹುದ್ದೆಯಿಂದ ನಿನ್ನನ್ನು ವಜಾಕರಿಸಲಾಗಿದೆ ಎಂದು ಹೇಳಿದೆ. ಇದರಿಂದಾಗಿ ನನ್ನ ಕುಟುಂಬವೇ ಇಂದು ಬೀದಿಗೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ನೊಂದ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ನೌಕರ ಕೃಷ್ಣಚಾರಿ ಅಳಲು ತೋಡಿಕೊಂಡಿದ್ದಾರೆ. ನಾನು 2014 ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗೆ ನೀರು ವಿತರಕನಾಗಿ ಕೆಲಸಕ್ಕೆ ಸೇರಿದ್ದು, ಪ್ರಾಮಾಣಿಕವಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದೆ. ಇತ್ತೀಚೆಗೆ ನಾನು ಹೃದಯಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿ ಸುಮಾರು 8 ಇಂಚಿನಷ್ಟು ಬೈಪಾಸ್ ಸರ್ಜರಿ ಮಾಡಿದ್ದಾರೆ. ಈ…