Subscribe to Updates
Get the latest creative news from FooBar about art, design and business.
- ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
Author: admin
ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಇಂದೂ ಕೂಡ ದೇಶದ ಹಲವೆಡೆ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ. ಬಿಹಾರದಲ್ಲಿ ರೊಚ್ಚಿಗೆದ್ದ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದೆ. ಮತ್ತೊಂದೆಡೆ ತಮಿಳುನಾಡು-ಪಂಜಾಬ್ನಲ್ಲೂ ಪ್ರತಿಭಟನೆಯ ಕಾವು ಮತ್ತಷ್ಟು ತೀವ್ರಗೊಂಡಿದ್ದು, ಮುನ್ನೆಚ್ಚೆರಿಕೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಿನ್ನೆ ಬಿಹಾರದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದೂ ಕೂಡ ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರ ಬಂದ್ಗೆ ಕರೆ ನೀಡಲಾಗಿದೆ. ಬಿಹಾರದ ಸಂಘಟನೆಗಳು ಯೋಜನೆ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ೭೨ ಗಂಟೆಗಳ ಕಾಲಾವಕಾಶ ನೀಡಿದೆ. ಈ ಬಂದ್ ಗೆ ಆರ್ ಜೆಡಿ, ಮಹಾಘಟ ಬಂಧನ್ ಜತೆಗೆ ವಿವಿಧ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಬಂದ್ ನಡುವೆಯೂ ಜೆಹನಾಬಾದ್ನಲ್ಲಿ ಉದ್ರಿಕ್ತ ಗುಂಪು ಬಸ್, ಟ್ರಕ್ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದೆ. ಯುವಕರನ್ನು ಸೇನೆಗೆ ಅಲ್ಪಾವಧಿಗಾಗಿ ನೇಮಕ ಮಾಡಿಕೊಳ್ಳುವ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು. ಈ ಯೋಜನೆ…
ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕಾರದ ಪಾರಪತ್ಯವನ್ನು ಮುಂದುವರೆಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಟರು ಯೋಜನೆಯನ್ನು ರೂಪಿಸಿದ್ದು, ಇಂದು ಮಧ್ಯ ಕರ್ನಾಟಕದ ಜಿಲ್ಲೆ ಐತಿಹಾಸಿಕ ಕೋಟೆ ನಗರಿ ಚಿತ್ರದುರ್ಗದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶವನ್ನು ನಡೆಸುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ, ವಿಧಾನಸಭೆ ಚುನಾವಣೆಗೆ ಅಣಿಯಾಗಲು ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅಧಿಕಾರ ವಿಕೇಂದ್ರೀಕರಣದೊಂದಿಗೆ ಗ್ರಾಮಗಳ ಸಬಲೀಕರಣದ ಘೋಷ ವಾಕ್ಯದಲ್ಲಿ ಅಭಿವೃದ್ಧಿ ಸಮೀಕರಣ ಮೂಲಕ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಲು ಇಂದಿನ ಕೋಟೆ ನಗರಿಯಲ್ಲಿ ಸಮಾವೇಶ ಆಯೋಜಿಸಲಾಗಿದೆ. ಚಿತ್ರದುರ್ಗದ ಮುರುಘಾ ಮಠದಲ್ಲಿನ ಅನುಭವ ಮಂಟಪದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶವು ಸಂಜೆ ೪ ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಉದ್ಘಾಟನೆ ಮಾಡಲಿದ್ದಾರೆ.…
ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಮಾಫಿವೀರೆಂದು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿವಾದಾತ್ಮಕ ಅಗ್ನಿಪಥ್ ಯೋಜನೆ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಗ್ನಿಪಥ್ ಸಶಸ್ತ್ರ ಪಡೆಗಳ ನೇಮಕಾತಿ ಯೋಜನೆ ಕುರಿತಂತೆ ಕೇಂದ್ರದ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸತತ 8 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ, ಜೈ ಜವಾನ್ ಜೈ ಕಿಸಾನ್ ಎಂಬ ಮೌಲ್ಯಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡುತ್ತಿದೆ ಎಂದು ಟೀಕಿಸಿದರು. ಈ ಹಿಂದೆ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದೆ. ಅದೇ ರೀತಿ ದೇಶದ ಯುವಕರ ಬೇಡಿಕೆಗೆ ಒಪ್ಪಿಕೊಳ್ಳುವ ಮೂಲಕ ಮೋದಿ ಮಾಫಿ ವೀರ್ ಆಗಬೇಕು. ತಕ್ಷಣ ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆಸಿದ ನಂತರ ಕಳೆದ ವರ್ಷ ನವೆಂಬರ್ನಲ್ಲಿ ಈ ಕಾಯ್ದೆಗಳನ್ನು ರದ್ದುಪಡಿಸಿ ಮೋದಿ ಅವರು ಕ್ಷಮೆಯಾಚಿಸಿದ್ದರು. ಈಗ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ದೇಶದ…
ತುಮಕೂರು: ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ,ಜಿಲ್ಲಾಧಿಕಾರಿಗಳ ನಡೆ ,ಹಳ್ಳಿಯ ಕಡೆ ಹಾಗೂ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ,ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಂದಾಯ ಸಚಿವ ಆರ್.ಅಶೋಕ್ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಮಸಾಲ ಜಯರಾಮ್ , ನನ್ನ ತುರುವೇಕೆರೆ ಕ್ಷೇತ್ರಕ್ಕೆ 1,600 ಕೋಟಿಗೂ ಹೆಚ್ಚಿನ ಅನುದಾನವನ್ನು ವಿವಿಧ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ ಇನ್ನು ಹೆಚ್ಚಿನ ಅನುದಾನವನ್ನು ತರುತ್ತೇನೆ ಎಂದರಲ್ಲದೇ ಇತ್ತೀಚೆಗೆ ರಾಜ್ಯ ಸಭೆಗೆ ಆಯ್ಕೆಯಾದ ಚಿತ್ರ ನಟ ಜಗ್ಗೇಶ್ ಅವರನ್ನು ಅಭಿನಂದಿಸಿದರು. ಇದೇ ವೇಳೆ ಮಾತನಾಡಿದ ನೂತನ ರಾಜ್ಯ ಸಭಾ ಸದಸ್ಯ ಜಗ್ಗೇಶ್, ತುರುವೇಕೆರೆ ವಿಧಾನ ಸಭಾ ಸದಸ್ಯನಾಗಿ ನಂತರ ವಿಧಾನ ಪರಿಷತ್ತಿನ ಸದಸ್ಯನಾಗಿ , ಈಗ ರಾಜ್ಯಸಭಾ ಸದಸ್ಯನಾಗಿ ಮೂರು ಅಧಿಕಾರವನ್ನು ಪಡೆದವರಲ್ಲಿ ನಾನೇ ಮೊದಲ ಇತಿಹಾಸ. ಆದುದರಿಂದ ನಾನೆಂದು ಮಾಯಸಂದ್ರದ ಮಣ್ಣನ್ನು ಮರೆಯುವುದಿಲ್ಲ. ಅದಕ್ಕಾಗೆ ನಾನು ರಾಜ್ಯ ಸಭಾ ಸದಸ್ಯರಾದ ತಕ್ಷಣ ನನ್ನ…
ಮಧುಗಿರಿ: ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ ಪಡೆದು ಚಿಕಿತ್ಸೆ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು, ನರ್ಸ್ ವೊಬ್ಬರು ಈ ರೀತಿಯ ಡೀಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಹೆರಿಗೆ ಮಾಡುವ ನರ್ಸ್ ಗಳಿಗೆ ಒಂದೊಂದು ಸಾವಿರ ರೂಪಾಯಿ ನೀಡಬೇಕು, ವೈದ್ಯರಿಗೆ ಎಷ್ಟು ಎಂದು ಹೇಳಿದಾಗ ಬ್ರದರ್ಸ್( ಸ್ಟಾಪ್ ನರ್ಸ್) ಬಳಿ ಮಾತನಾಡಿದರೆ, ಡೀಲ್ ಆಗ್ತಾರೆ ಎಂದು ಆ ನರ್ಸ್ ಹೇಳಿರುವ ವಿಡಿಯೋ ದೊರೆತಿದೆ. ವ್ಯಕ್ತಿಯೊಬ್ಬರು ತಮ್ಮ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಪತ್ನಿಗೆ ಸಿಸೇರಿಯನ್ ಮಾಡಿಸಬೇಕು ಎಂದು ವೈದ್ಯರು ಹೇಳಿದ್ದಾರೆ. ಆ ವ್ಯಕ್ತಿ ಹೇಳುತ್ತಿರುವ ಪ್ರಕಾರ, ಕೆಲಸದವರಿಂದ ಹಿಡಿದು ವೈದ್ಯರವರೆಗೆ ಆಸ್ಪತ್ರೆಯಲ್ಲಿ ದುಡ್ಡು ಪಡೆದುಕೊಳ್ಳುತ್ತಾರಂತೆ, ಇದರ ಬಗ್ಗೆ ವೈದ್ಯರ ಬಳಿ ಹೇಳಿದರೆ, ಹೇಮಾವತಿ ಡಾಕ್ಟರ್ ಅವರು ನನ್ನ ಮೇಲೆ ಕೂಗಾಡಿದ್ರು ಎಂದು ವರದಿಗಾರರಿಗೆ ತಿಳಿಸಿದ್ದಾರೆ. ಜನ ಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಸರ್ಕಾರ ಆಸ್ಪತ್ರೆಗಳನ್ನು ನೀಡಿದರೆ, ಈ ಆಸ್ಪತ್ರೆಯೊಳಗೆ ಲಂಚಾವತಾರ ನಡೆಯುತ್ತಿರುವುದು ದುರಾದೃಷ್ಟಕರವಾಗಿದೆ. ಜೊತೆಗೆ ಇಲ್ಲಿಗೆ ಬರುವ ರೋಗಿಗಳ ಬಳಿಯಿಂದ ಹಣ ವಸೂಲಿ…
ನೀವು ಸಾಕಷ್ಟು ನಿದ್ದೆ ಮಾಡದಿದ್ದರೆ, ನೀವು ಹೊಟ್ಟೆಯ ಕೊಬ್ಬು (Belly Fat) ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಇದು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಯುನೈಟೆಡ್ ಸ್ಟೇಟ್ಸ್ನ ಮೇಯೊ ಕ್ಲಿನಿಕ್ನ ಸಂಶೋಧಕರು 12 ಆರೋಗ್ಯವಂತ ಜನರ ಮೇಲೆ ಕೆಲವು ವಾರಗಳ ಅಧ್ಯಯನವನ್ನು ನಡೆಸಿದ್ದಾರೆ. ಸಾಕಷ್ಟು ನಿದ್ದೆ ಮಾಡಿವ ಒಬ್ಬ ವ್ಯಕ್ತಿಯ ಶರೀರದಲ್ಲಿ ಪಾರ್ಶ್ವವಾಯು ಮತ್ತು ಟೈಪ್ 2 ಡಯಾಬಿಟಿಸ್ಗೆ ಕಾರಣವಾಗುವ ಕೊಬ್ಬನ್ನು ನಿರ್ಮೂಲನೆ ಮಾಡುವ ಸಾಧ್ಯತೆಯಿದೆ ಎಂದು ಅಧ್ಯಯನವು ಕಂಡುಹಿಡಿದಿದೆ. ಸಾಕಷ್ಟು ನಿದ್ದೆ ಮಾಡದಿದ್ದರೆ, ನೀವು ಹೊಟ್ಟೆಯ ಕೊಬ್ಬು (Belly Fat)ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಇದು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಯುನೈಟೆಡ್ ಸ್ಟೇಟ್ಸ್ನ ಮೇಯೊ ಕ್ಲಿನಿಕ್ನ ಸಂಶೋಧಕರು 12 ಆರೋಗ್ಯವಂತ ಜನರ ಮೇಲೆ ಒಂದು ವಾರದ ಬಿಬಿ ಅಧ್ಯಯನವನ್ನು ನಡೆಸಿದರು. ಸಾಕಷ್ಟು ನಿದ್ದೆ ಮಾಡುವ ಜನರು ಒಳಾಂಗಗಳ ಕೊಬ್ಬನ್ನು ತೊಡೆದುಹಾಕುವ ಸಾಧ್ಯತೆಯಿದೆ ಎಂದು ಅಧ್ಯಯನವು ಕಂಡುಹಿಡಿದಿದೆ, ಇದು ಆಲ್ಝೈಮರ್ಸ್, ಸ್ಟ್ರೋಕ್ ಮತ್ತು ಟೈಪ್…
ತಿಪಟೂರು: ದಲಿತ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನರಸಿಂಹ ಮೂರ್ತಿ ಅವರ ಹತ್ಯೆ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಗರದ ಅಂಬೇಡ್ಕರ್ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿ ವರೆಗೆ ಜಾಥಾ ನಡೆಸಿ, ಉಪ ತಸಿಲ್ದಾರ್ ಆದ ಕೆ.ಎಲ್. ಪರಮೇಶ್ವರ್ ಅವರ ಮುಖಾಂತರ ಗೃಹ ಸಚಿವರಿಗೆ ಹಾಗೂ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಕುಪ್ಪಾಳು ರಂಗಸ್ವಾಮಿ , ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತ ಯುವಕರ ಜೋಡಿ ಕೊಲೆ ನೋವು ಮಾಸುವ ಮುನ್ನವೇ, ಗುಬ್ಬಿ ತಾಲೂಕಿನ ದಲಿತ ಮುಖಂಡನ ಹತ್ಯೆ ಮಾಡಲಾಗಿದೆ. ಸರ್ಕಾರಕ್ಕೆ ದಲಿತರ ಮೇಲೆ ಕಾಳಜಿ ಇಲ್ಲ. ಅವರಿಗೆ ರಕ್ಷಣೆ ನೀಡುವ ಯಾವುದೇ ಕೆಲಸವನ್ನು ಕೂಡ ಮಾಡುತ್ತಿಲ್ಲ ಎಂದರು. ಸರ್ಕಾರ ದಲಿತರ ಮೇಲೆ ಸರ್ಕಾರಕ್ಕೆ ಕಾಳಜಿ ಇದ್ದರೆ, ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಅವರ ಮನೆ ಆಸ್ತಿಪಾಸ್ತಿಗಳನ್ನು ರ ಮುಟ್ಟು ಗೋಲು ಹಾಕಿಕೊಳ್ಳಲಿ ಇಲ್ಲವಾದರೆ, ಮುಂದಿನ ದಿನಗಳಲ್ಲಿ ದಲಿತರು ಉಗ್ರ ಹೋರಾಟ ಮಾಡುವ ಅನಿವಾರ್ಯ…
ತುಮಕೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಕಲಾ, ವಾಣಿಜ್ಯ, ವಿಜ್ಞಾನ ಸೇರಿ 3 ವಿಭಾಗದಲ್ಲೂ ರಾಜ್ಯಕ್ಕೆ ಒಟ್ಟಾರೆ ಶೇ.61.88 ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದೆ. ಈ ನಡುವೆ ಶಿಕ್ಷಣ ಸಚಿವರ ತವರು ಜಿಲ್ಲೆ ತುಮಕೂರು 28ನೇ ಸ್ಥಾನ ಪಡೆದುಕೊಂಡಿದೆ. ತುಮಕೂರು ಜಿಲ್ಲೆ ಶೇ.58.90 ಫಲಿತಾಂಶ ದಾಖಲಿಸಿದೆ. ತುಮಕೂರಿನ ವಿದ್ಯಾನಿಧಿ ಕಾಲೇಜಿನ ಸಹನಾ ಟಿ.ಆರ್. ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಪಿಯುಸಿ ಫಲಿತಾಂಶವನ್ನು https://pue.karnataka.gov.in/ ವೆಬ್ಸೈಟ್ ನಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದು. ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುವ ಮೊಬೈಲ್ ಸಂಖ್ಯೆಗೂ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ಬಾರಿಯ ಫಲಿತಾಂಶದಲ್ಲಿ ಶೇ.0.8 ಹೆಚ್ಚಾಗಿದೆ. ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು. ಈ ವೇಳೆ ಫಲಿತಾಂಶದ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಬಂದಿದೆ. ಮೂರು ವಿಭಾಗದಲ್ಲಿ ಒಟ್ಟಾರೆ ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದೆ. ಕೊನೇ ಸ್ಥಾನದಲ್ಲಿರುವ ಚಿತ್ರದುರ್ಗ ಜಿಲ್ಲೆಗೆ ಶೇ.49.31 ಫಲಿತಾಂಶ ಬಂದಿದೆ ಎಂದು ತಿಳಿಸಿದರು. ಇನ್ನು ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು http://www.karresults.nic.in/slpuind.asp ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಇನ್ನೂ ಅಭ್ಯರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ತೀವ್ರ ಬರಗಾಲದ ತುರ್ತು ಪರಿಸ್ಥಿತಿಯಿಂದ ಬಳಲುತ್ತಿರುವ ಟಾಪ್ 23 ದೇಶಗಳಲ್ಲಿ ಪಾಕಿಸ್ತಾನವೂ ಒಂದಾಗಿದೆ.ಅಷ್ಟೇ ಅಲ್ಲದೆ 2025 ರ ವೇಳೆಗೆ, ಬರಗಾಲವು ವಿಶ್ವದ ಜನಸಂಖ್ಯೆಯ ಸುಮಾರು ಮುಕ್ಕಾಲು ಭಾಗದಷ್ಟು ಜನರ ಮೇಲೆ ಪರಿಣಾಮ ಬೀರಲಿದೆ ಎಂದು ಹವಾಮಾನ ಬದಲಾವಣೆ ಸಚಿವಾಲಯ ಹೇಳಿದೆ. ಮಾನವ ಮತ್ತು ಪರಿಸರ ಅಂಶಗಳಿಂದ ಉಂಟಾಗುವ ಮರುಭೂಮಿಯು ಪಾಕಿಸ್ತಾನವನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ, ಇದು ಪರಿಸರ ಅವನತಿ, ಮಣ್ಣಿನ ಫಲವತ್ತತೆಯ ನಷ್ಟ, ಜೀವವೈವಿಧ್ಯತೆಯ ನಷ್ಟ ಮತ್ತು ಭೂ ಉತ್ಪಾದಕತೆಯ ಇಳಿಕೆಗೆ ಕಾರಣವಾಗುತ್ತದೆ, ದೇಶದ ದುರ್ಬಲವಾದ ಸ್ಥಳೀಯ ಸಮುದಾಯಗಳ ದುರ್ಬಲತೆಯನ್ನು ಉಲ್ಬಣಗೊಳಿಸುತ್ತದೆ ಎಂದು ಡಾನ್ ಹೇಳಿಕೆಯಲ್ಲಿ ತಿಳಿಸಿದೆ. ಬರಗಳು ಯಾವಾಗಲೂ ಪ್ರಕೃತಿ ಮತ್ತು ಮಾನವ ಅನುಭವದ ಭಾಗವಾಗಿದೆ, ಆದಾಗ್ಯೂ, ಬೃಹತ್ ಅರಣ್ಯನಾಶ ಮತ್ತು ಮಾನವಜನ್ಯ ಚಟುವಟಿಕೆಗಳು ಕುಸಿತವನ್ನು ವೇಗಗೊಳಿಸಿದೆ. ಪಾಕಿಸ್ತಾನದಲ್ಲಿ, ಜನರು ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಮತ್ತು ದೀರ್ಘಕಾಲದ ಶಾಖದಿಂದಾಗಿ ದೇಶದಾದ್ಯಂತ ನದಿಗಳು ಒಣಗುತ್ತಿವೆ ಎಂದು ಡಾನ್ ವರದಿ ಮಾಡಿದೆ. ತಲಾವಾರು ನೀರಿನ ಲಭ್ಯತೆಯು 1951 ರಲ್ಲಿ ವಾರ್ಷಿಕ 5,060 ಘನ…