Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ಸಿರಾ: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಏಳು ಜನ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಮೂರನೇ ವಾರ್ಡಿನ ಮಂದಾರ ಉಗ್ರೇಶ್, ನಾಲ್ಕನೇ ವಾರ್ಡಿನ ತ್ರಿವೇಣಿ, ಐದನೇ ವಾರ್ಡಿನ ಅಂಜಿನಪ್ಪ, ಒಂಬತ್ತನೇ ವಾರ್ಡಿನ ರವಿಶಂಕರ್, ಹದಿಮೂರನೇ ವಾರ್ಡಿನ ಮಹಮದ್ ಸಫೀರ್, ಇಪ್ಪತ್ತೈದನೇ ವಾರ್ಡಿನ ರಾಮಣ್ಣ 29ನೇ ವಾರ್ಡಿನ ವಿಜಯಲಕ್ಷ್ಮೀ ಜಯಭೇರಿ ಬಾರಿಸಿದ್ದಾರೆ ವರದಿ : ಸಿದ್ದರಾಜು ಟಿ.ಎಚ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿರಾ: ನಗರಸಭೆಯ ಚುನಾವಣೆಯಲ್ಲಿ ಟಿ.ಬಿ.ಜಯಚಂದ್ರ ಅವರ ನೇತೃತ್ವದ ಕಾಂಗ್ರೆಸ್ ಪಕ್ಷದ 11 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ . 31 ನೇ ವಾರ್ಡಿನ ಪೂಜಾ, 26 ನೇ ವಾರ್ಡಿನ ಲಕ್ಷ್ಮಿಕಾಂತ್, 7ನೇ ವಾರ್ಡಿನ ಶಿವಶಂಕರ್, 16ನೇ ವಾರ್ಡಿನ ಸೈಯದ್ ಮರ್ಜಿಯ ಪೀರ್ ದೋಸ್, 17 ನೇ ವಾರ್ಡಿನ ಕಿಶನ್ ಮಹಮದ್, 18 ನೇ ವಾರ್ಡಿನ ಬುರ್ಹಾನ್ ಮಹಮದ್, 19ನೇ ವಾರ್ಡಿನ ರುಖ್ಖ್ ಯಾ ಪರ್ವೀನ್, 20ನೇ ವಾರ್ಡಿನ ರೆಹನಾ ಕಾನಂ, 11ನೇ ವಾರ್ಡಿನ ಮಹಮ್ಮದ್ ಜಾಫರ್, ಎರಡನೇ ವಾರ್ಡಿನ ತೇಜು ಭಾನುಪ್ರಕಾಶ್ ಜಯಭೇರಿ ಬಾರಿಸಿದ್ದಾರೆ ವರದಿ: ಸಿದ್ದರಾಜು ಟಿ.ಎಚ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿರಾ : ನಗರಸಭೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮಹಿಳಾ ಮೀಸಲು ಅಭ್ಯರ್ಥಿಯಾದ ಗಿರಿಜಾ ಎಸ್ ವಿಜಯಕುಮಾರ್ ಜಯಭೇರಿ ಬಾರಿಸಿದರು. ಬಳಿಕ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದರು. ನಳ್ಳಿ, ನೀರು, ರಸ್ತೆ, ವಿದ್ಯುತ್ ಸಂಪರ್ಕ ಮೊದಲಾದ ವ್ಯವಸ್ಥೆಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಗಿರಿಜಾ ಎಸ್ ವಿಜಯಕುಮಾರ್ ಭರವಸೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಂಜಾಬ್ನ ಲುಧಿಯಾನ ನಗರದ ಚಂಡೀಗಢ ರಸ್ತೆಯಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 24 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. ಇದುವರೆಗೆ ಸುಮಾರು 100 ಅಗ್ನಿಶಾಮಕ ವಾಹನಗಳನ್ನ ಬಳಸಿದರೂ ಬೆಂಕಿ ಹತೋಟಿಗೆ ತರಲು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ಬೆಂಕಿ ನಂದಿಸುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲವಾದರೂ, ಈ ದೊಡ್ಡ ಕಾರ್ಖಾನೆಯಲ್ಲಿ ಬೆಂಕಿಯಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸರು ಹಾಗೂ ಪೌರಾಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಸಮೀಪದ ಕಟ್ಟಡಗಳನ್ನು ತೆರವು ಮಾಡಲಾಗಿದೆ.A massive fire broke out at Garments Factory on Chandigarh Road in Ludhiana, Punjab, with 24 firefighters on site. ಕಟ್ಟಡದ ನಾಲ್ಕನೇ ಮಹಡಿಯಲ್ಲಿರುವ ಕಾರ್ಖಾನೆಯಿಂದ ಸಂಜೆ 4 ಗಂಟೆಗೆ ಹೊಗೆ ಬರಲಾರಂಭಿಸಿದೆ ಎಂದು ಹೇಳಲಾಗುತ್ತಿದೆ. ಇದಾದ ನಂತರ ಕಟ್ಟಡದಿಂದ ಹೊರಗೆ ಬರಲು ಆರಂಭಿಸಿದ ನೌಕರರು, ನಂತರ ಬೆಂಕಿ ಹೊತ್ತಿಕೊಳ್ಳಲಾರಂಭಿಸಿದರು. 7 ಅಂತಸ್ತಿನ ಈ ಕಾರ್ಖಾನೆಯಲ್ಲಿ ರೆಡಿಮೇಡ್ ಬಟ್ಟೆ ಮತ್ತಿತರ ವಸ್ತುಗಳು…
ಕರ್ನಾಟಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಡಿಸೆಂಬರ್ 31 ರಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯಿಂದ ನಿವೃತ್ತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸ್ವಂ ಭಾಸ್ಕರ್ ರಾವ್ ಅವರೆ ಧೃಡಪಡಸಿದ್ದು ಸರ್ಕಾರ ಸ್ವಂ ನಿವೃತ್ತಿಗೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ. ಪೊಲೀಸ್ ಹುದ್ಧೆಯನ್ನ ತ್ಯಜಿಸಿ ರಾಜಕೀಯಕ್ಕೆ ಬರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿ . ನಾನು ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನನ್ನ ಕುಟುಂಬದ ಜೊತೆ ಪ್ರಯಾಣಿಸಲು ಅವರ ಜೊತೆ ಸಮಯ ಕಳೆಯಲು ಇಷ್ಟಪಡುತ್ತೇನೆ. ಎಂದು ಅವರು ಹೇಳಿದ್ದಾರೆ. 1990 ರ ಬ್ಯಾಚ್ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ರಾವ್ ಅವರು ಈ ವರ್ಷದ ಸೆಪ್ಟೆಂಬರ್ನಲ್ಲಿ ಸೇವೆಯಿಂದ ಸ್ವಯಂ ನಿವೃತ್ತಿಗೆ (ವಿಆರ್ಎಸ್) ಅರ್ಜಿ ಸಲ್ಲಿಸಿದ್ದರು. ಕೂಡಲೇ ಒಪ್ಪಿಗೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. ಅವರ ಕಡತ ಮುಖ್ಯಮಂತ್ರಿ ಬಳಿ ಬಾಕಿ ಉಳಿದಿದ್ದು, ಇತ್ತೀಚೆಗಷ್ಟೇ ಸಿ ಎಂ…
ಮಂಡ್ಯ : ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಪ್ರತಿಭಟನೆ 15ನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲಾ ಅತಿಥಿ ಉಪನ್ಯಾಸಕರ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕಾಂಗ್ರೆಸ್ ಮುಖಂಡ ಮಧು ಜಿ. ಮಾದೇಗೌಡ ಬೆಂಬಲ ಸೂಚಿಸಿದ್ದಾರೆ. ರಾಜ್ಯಾದ್ಯಂತ ಉಪನ್ಯಾಸಕರು ಪ್ರತಿಭಟನೆ ನಡೆಸ್ತಿದ್ದಾರೆ. ಅವರ ಬೇಡಿಕೆಗಳನ್ನು ಪೂರೈಸಲು ಮುಂದಾಗಬೇಕು. ಸರ್ಕಾರ ಇನ್ನು ಕೂಡ ಕಣ್ಮುಚ್ಚಿಕುಳಿತಿದೆ.ಇದರಿಂದ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು. ಅತಿಥಿ ಉಪನ್ಯಾಸಕರ ಜೊತೆ ನಾವು ಇರ್ತೇವೆ, ಸರ್ಕಾರ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡ ಮಧು ಒತ್ತಾಯಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ವಿಧಾನ ಸಭಾ ಕ್ಷೇತ್ರದ ಹೊನ್ನವಳ್ಳಿ ಕ್ಷೇತ್ರದ ಗ್ರಾಮ ಪಂಚಾಯಿತಿ ಸಾರ್ವರ್ತಿಕ ಚುನಾವಣೆಯಲ್ಲಿ 14 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಕಾಂಗ್ರೆಸ್-11 ಬಿಜೆಪಿ-01 ಪಕ್ಷೇತರ-02 ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ವಿದ್ಯಾರ್ಥಿಗಳು ದೇಶದ ನಿಜವಾದ ಭವಿಷ್ಯ, ಅಬ್ದುಲ್ ಕಲಾಂ ಸೇರಿದಂತೆ ಮಹನೀಯರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ಸು ಗಳಿಸಿ ತುಮಕೂರು ಶ್ರೀ ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು. ಪಟ್ಟಣದ ಎಂ ಜಿ ಎಂ ಶಾಲೆಯಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಹಾಲಪ್ಪ ಪ್ರತಿಷ್ಠಾನ ವತಿಯಿಂದ ಸರ್ಕಾರಿ ಶಾಲೆಗಳ ಉನ್ನತಿಕರಣ ಹಾಗೂ ಶಾಲಾ ಪೀಠೋಪಕರಣಗಳು ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆ ಜೀವನದ ಅತ್ಯಂತ ಶ್ರೇಷ್ಠ ಘಟ್ಟ. ಜೀವನದಲ್ಲಿ ಅರ್ಥಹೀನವಾಗಿ ಕಳೆದ ಸಮಯ ಅತ್ಯಮೂಲ್ಯ ಕಾಲಘಟ್ಟದ ನಷ್ಟ. ಸಮಯ ಎಲ್ಲಕ್ಕಿಂತ ಶ್ರೇಷ್ಠ. ದೇವರು ಎಲ್ಲರಿಗೂ ಕೊಟ್ಟ ಶ್ರೇಷ್ಠ ಸಂಪನ್ಮೂಲ ಸಮಯ. ಇಂದು ಒಂದು ಉತ್ತಮ ಶಾಲೆ ತೆರೆದರೆ ನಾಳೆ ನೂರು ಜೈಲುಗಳನ್ನು ಮುಚ್ಚಬಹುದು. ಶಿಕ್ಷಕರು ಮಕ್ಕಳಿಗೆ ನೈತಿಕತೆಯ ಚೌಕಟ್ಟಿನಲ್ಲಿ ಸುಂದರವಾದ ಪರಿಸರವನ್ನು ಪರಿಚಯಿಸಬೇಕಿದೆ ಎಂದರು. ರಾಷ್ಟ್ರ ಕವಿ ಕುವೆಂಪು ರಾಮಕೃಷ್ಣ ಆಶ್ರಮದ ಶಿಶು ಮತ್ತು ಹಳೇಯ ವಿದ್ಯಾರ್ಥಿ. ಅವರಿಗೆ ಜ್ಞಾನ ಪೀಠ ಪ್ರಶಸ್ತಿ…
ವಿವೇಕಾನಂದ ಹೆಚ್.ಕೆ. ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ…… ( ಡಿಸೆಂಬರ್ 29 ) ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಎಂಬ ಭಾಷೆಯನ್ನು – ಸಂಸ್ಕೃತಿಯನ್ನು – ಕನ್ನಡ ಮಣ್ಣಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಮುಗಿಲೆತ್ತರಕ್ಕೆ ಏರಿಸಿ ಅದರ ಗಡಿಯನ್ನು ವಿಸ್ತರಿಸಿ ಭಾಷೆಯ ಮಹತ್ವ ಸಾರಿದವರು. ಅಕ್ಷರಗಳಲ್ಲಿ ಕೇವಲ ಭಾವನೆಗಳನ್ನು ಮಾತ್ರ ತುಂಬದೆ ಒಂದು ನಾಡಿನ ಮನುಷ್ಯ ಪ್ರಜ್ಞೆಯನ್ನು ಚಿಂತನೆಯಾಗಿಸಿ ವಿಶ್ವ ಮಾನವತೆಗೆ ದಾರಿ ತೋರಿದ ಅದ್ಬುತ ಚಿಂತಕ. ಅವರ ನೆನಪಿನ ನೆಪದಲ್ಲಿ ಒಂದಷ್ಟು ಅಕ್ಷರಗಳ ಆತ್ಮಾವಲೋಕನ…… ಬರವಣಿಗೆ….. ಅಕ್ಷರಗಳ ಸಂಶೋಧನೆಯೊಂದಿಗೆ ಉಗಮವಾದ ಅದ್ಭುತ ಸೃಷ್ಟಿ ಈ ಬರವಣಿಗೆ. ಅಕ್ಷರಗಳಿಗಿಂತ ಮೊದಲು ಸಹ ಬರವಣಿಗೆ ಅಸ್ತಿತ್ವದಲ್ಲಿತ್ತು. ಆದರೆ ಚಿತ್ರ, ಸಂಜ್ಞೆ ಮುಂತಾದ ವಿಚಿತ್ರ ವೈಶಿಷ್ಟ್ಯ ರೂಪದಲ್ಲಿ ಅದು ಬಳಕೆಯಲ್ಲಿತ್ತು. ಬರವಣಿಗೆ ಅದೊಂದು ಬರೆಯುವ ಕ್ರಿಯೆ ಅಥವಾ ಅಭಿಪ್ರಾಯ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಡೆದ 2021-22 ನೇ ಗ್ರಾಮ ಪಂಚಾಯತಿ ಸದಸ್ಯರ ಚುನಾವಣೆಯಲ್ಲಿ ಐಮಂಗಲ ಹೋಬಳಿಯ ಹರ್ತಿಕೋಟೆ ಗ್ರಾಮ ಪಂಚಾಯತಿಯ ಬ್ಲಾಕ್ ನಂ 01ರಲ್ಲಿ , ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಚಂದ್ರಶೇಖರಯ್ಯ 445 ಮತಗಳನ್ನು ಪಡೆದಿದ್ದು , ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ ಅವರು 546 ಮತಗಳನ್ನು ಪಡೆದು , ಚಂದ್ರಶೇಖರಯ್ಯವರಿಗಿಂತಲೂ 101 ರ ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಬಳಿಕ ಮಾತನಾಡಿದ ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ ಅವರು, ಈ ನನ್ನ ಗ್ರಾಮದ ಗ್ರಾಮಸ್ಥರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಎಂದಿಗೂ ಸಹ ಚಿರ ಋಣಿ . ನನ್ನ ಗ್ರಾಮದ ಗ್ರಾಮಸ್ಥರಿಗೆ ನನ್ನ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು . ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ.ಮಹಂತೇಶ್, ಪ್ರೇಮದಾಸ್, ಕೆಂಪಣ್ಣ , ಸೋಮು, ಬಾಲಶಂಕರ್, ಕಣುಮಯ್ಯ , ಪರಮಶಿವ , ಮಾಲತೇಶ್, ಮಹಸ್ವಾಮಿ, ಚಿಕ್ಕಣ್ಣ, ಸೂರಗೊಂಡನಹಳ್ಳಿ ಮಂಜುನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು,…