Subscribe to Updates
Get the latest creative news from FooBar about art, design and business.
- ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
- ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
- ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
- ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
- ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
- ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
- ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
Author: admin
ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಅವರ ಜಯಂತ್ಯೋತ್ಸವದ ಆಚರಣೆ ಅವರ ಬದುಕಿನ ಪ್ರೇರಣೆ ಇಂದಿನ ಯುವ ಪೀಳಿಗೆಗೆ ಬಹಳ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಶುಕ್ರವಾರ ನಡೆಯಲಿರುವ ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮದ ರೂಪುರೇಷೆ ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರಿನ ಸಿದ್ದಗಂಗಾ ಮಠದ ವತಿಯಿಂದ ಪ್ರತಿವರ್ಷ ಶ್ರೀಮಠದ ಪರಮಪೂಜ್ಯರಾದ ಶ್ರೀ ಶ್ರಿ ಶಿವಕುಮಾರ ಮಹಾಸ್ವಾಮಿಗಳವರು ಜಯಂತ್ಯೋತ್ಸವ ಪ್ರತಿವರ್ಷ ಆಚರಣೆ ಮಾಡಲಾಗುತ್ತಿದೆ ಅದರಂತೆ ಈ ಬಾರಿಯೂ ಸಹ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದರು. ಶಿವಕುಮಾರ ಶ್ರೀಗಳ ಬದುಕಿನ ಪ್ರೇರಣೆ ಇಂದಿನ ಯುವಪೀಳಿಗೆಗೆ ಶ್ರೀಗಳ ವಿಚಾರಗಳನ್ನು ತಿಳಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಆಗಲಿದೆ ಇನ್ನು ನಾಳೆ ನಡೆಯುವ ಕಾರ್ಯಕ್ರಮ ಅರ್ಥಪೂರ್ಣ ಕಾರ್ಯಕ್ರಮವಾಗಿರಬೇಕು ಇನ್ನು ಶ್ರೀಗಳ ಪರಂಪರೆ ,ಶಿಕ್ಷಣ,ದಾಸೋಹ ಮಾಡಿಕೊಂಡು ಬಂದಿದ್ದಾರೆ ಇದು ರಾಜ್ಯ ಹಾಗೂ ದೇಶಕ್ಕೆ…
ಕೊರಟಗೆರೆ: ತಾಲ್ಲೂಕು ಹೊಳವನಹಳ್ಳಿ ಹೋಬಳಿಯ ವೀರಯ್ಯನ ಪಾಳ್ಯ ಗ್ರಾಮದ ರತ್ನಮ್ಮ ಬಿನ್ ಅಂಜಿನಪ್ಪ ಎಂಬ ವೃದ್ಧೆಯ ಮೇಲೆ ವೈಯಕ್ತಿಕ ದ್ವೇಷದಿಂದ ಅದೇ ಊರಿನ ರವಿಕುಮಾರ್ ಬಿನ್ ನರಸಿಂಹಯ್ಯ, ನಾರಾಯಣ, ಶ್ವೇತಾ, ಲಕ್ಷ್ಮಮ್ಮ ಮತ್ತು ಸ್ವಪ್ನ ಎಂಬ ಆರೋಪಿಗಳು ದೊಣ್ಣೆ,ಕಲ್ಲು ಮತ್ತು ಮಚ್ಚಿನಿಂದ ತಲೆಯ ಭಾಗಕ್ಕೆ ಹೊಡೆದಿರುವ ಘಟನೆ ನಡೆದಿದೆ. ಘಟನೆ ನಡೆದ ಮಾಹಿತಿ ತಿಳಿದ ಕೂಡಲೇ ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್ ಐ ನಾಗರಾಜು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಸ್ಥಳ ಪರಿಶೀಲಿಸಿ ವೃದ್ದೆಯ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 323, 324, 504, 307 ಕಾಲಂ ಅಡಿ ಎಫ್ ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ವೃದ್ದೆ ರತ್ನಮ್ಮ ಬಿನ್ ಅಂಜಿನಪ್ಪ ಸದ್ಯ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಒಬ್ಬಂಟಿ ವೃದ್ಧೆಯ ಮೇಲೆ ವಿನಾಕಾರಣ ಹಲ್ಲೆ ನಡೆಸಿ ವಿಕೃತಿ ಮೆರೆಯಲಾಗಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಆರೋಪಿಗಳ ಪತ್ತೆಗೆ ಕೊರಟಗೆರೆಯ ಪೊಲೀಸ್ ಅಧಿಕಾರಿಗಳು ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ದಲಿತರ ಪ್ರವೇಶವನ್ನು ಅಲ್ಲಿನ ಅರ್ಚಕರು ನಿರ್ಬಂಧ ಹಾಕಿದ್ದಾರೆ ಎಂದು ತಹಶೀಲ್ದಾರ್ ಅವರಿಗೆ ದಲಿತ ಸೇನೆಯ ಮುಖಂಡರು ಸೋಮವಾರ ಮನವಿ ಕೊಟ್ಟ ಹಿನ್ನಲೆಯಲ್ಲಿ ಸಾಗಸಂದ್ರ ಶ್ರೀ ಕೆಂಪಮ್ಮ ದೇವಾಲಯಕ್ಕೆ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಶ್ರೀನಿವಾಸ್ ಬುಧವಾರ ಭೇಟಿ ನೀಡಿ ಸಾಗಸಂದ್ರ ದೇವಾಲಯದಲ್ಲಿ ಅರ್ಚಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅರ್ಚಕ ದೊಡ್ಡಕೆಂಪಯ್ಯ ಸುಮಾರು ವರ್ಷಗಳಿಂದ ದೇವಾಲಯಕ್ಕೆ ಸಾಕಷ್ವು ಭಕ್ತಾಧಿಗಳು ಬರುತ್ತಾರೆ ನಾವು ಯಾರನ್ನು ಕೂಢ ಗಲಾಟಿ ಮಾಡಿ ಹೊರಗಡೆ ನಿಲ್ಲಿಸಿಲ್ಲ ಇದರ ಹಿಂದೆ ಕಾಣದ ಕೈಗಳು ಉದ್ದೇಶ ಪೂರ್ವಕವಾಗಿ ಗಲಾಟೆ ಮಾಡಿಸಬೇಕು ಅಂಥ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ನಮ್ಮಲ್ಲಿ ಸಾಕಷ್ವು ದಲಿತರು ದೇವಾಲಯಕ್ಕೆ ಬರುತ್ತಾರೆ ನಮ್ಮಲ್ಲಿ ಯಾವುದೇ ಜಾತಿ ಭೆಧವಿಲ್ಲದೆ ಎಲ್ಲರಿಗೂ ಸಮಾನವಾಗಿ ಪೂಜೆಗಳನ್ನು ಅರ್ಚಕರು ಮಾಡಿಕೊಟ್ಟಿದ್ದಾರೆ. ದಲಿತರನ್ನು ನಾವು ಅವಮಾನಿಸಿಲ್ಲ ಎಂದರು. ದೇವಾಲಯ ಕಾರ್ಯದರ್ಶಿ ಅ.ನ.ಲಿಂಗಪ್ಪ ಮಾತನಾಡಿ, ನಾನು ಸುಮಾರು ವರ್ಷಗಳಿಂದ…
ತುರುವೇಕೆರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಲ್ಲಿಯೂ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಗ್ರಾಮಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿಯಾಗಿದೆ ಎಂದು ಮುತ್ತುಗದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಆರ್.ಗಿರೀಶ್ ತಿಳಿಸಿದರು. ತಾಲೂಕಿನ ಮದ್ದನಹಳ್ಳಿ ಗೇಟ್ ಬಳಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಿರುವ ಮಾರ್ಗಸೂಚಿ ಸೂಚನಾ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮುತ್ತುಗದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಿಗೂ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹಲವು ಕಾರ್ಯಗಳನ್ನು ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಸಲಾಗಿದೆ. ಕೊಟ್ಟ ಮಾತಿನಂತೆ ಮುಂದೆಯೂ ಸಹ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆರವೇರಿಸಲಿದ್ದು, ಮುಂದೆಯೂ ಸಹಾಯ ಎಲ್ಲರ ಸಹಕಾರ ಹೀಗೆ ಇರಲಿ ಎಂದು ಮನವಿ ಮಾಡಿದರು. ಮುಖಂಡರಾದ ಬಿ.ಎಂ.ಎಸ್.ಉಮೇಶ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಸಂತಸವಾಗಿದೆ. ಮುಂದೆಯೂ ಸಹ ಪಕ್ಷಾತೀತವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಜರುಗಬೇಕು ಎಂದರು. ಈ…
ತುರುವೇಕೆರೆ: ಏ.1ರಂದು ನಡೆಯಲಿರುವ, ಶ್ರೀ ಸಿದ್ದಗಂಗಾ ಕ್ಷೇತ್ರದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ 115ನೇ ಜಯಂತೋತ್ಸವಕ್ಕೆ, ತುರುವೇಕೆರೆ ತಾಲೂಕಿನ ಬಿಜೆಪಿ ಪಕ್ಷದ ಸುಮಾರು 5,000 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಮಸಾಲ ಜಯರಾಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣ ಸಮೀಪದ ತಮ್ಮ ಸ್ವಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮವು ತುಮಕೂರಿನಲ್ಲಿ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಆಗಮಿಸಲಿದ್ದಾರೆ. ಇದರ ಹಿನ್ನೆಲೆಯಲ್ಲಿ ಕ್ಷೇತ್ರದಿಂದ 5,000 ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಿ.ಜೆ.ಪಿ ಪಕ್ಷದ ಕಾರ್ಯಕರ್ತರುಗಳು ತೆರಳಲು ಸೂಕ್ತ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕರ್ತರನ್ನು ಕರೆತರಲು ಗ್ರಾಮ ಪಂಚಾಯಿತಿ ಮಟ್ಟದ ಬಿಜೆಪಿ ಪಕ್ಷದ ಮುಖಂಡರುಗಳಿಗೆ ಹಾಗೂ ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು. ಅಲ್ಲದೆ ಅಂದು ಬೆಳಗ್ಗೆ 8 ಗಂಟೆಗೆ ಆಯಾ ಗ್ರಾಮ ಪಂಚಾಯಿತಿ ಪ್ರದೇಶಗಳಿಂದ ವಾಹನಗಳು ತುಮಕೂರಿನ ಶ್ರಮಕ್ಕೆ ತೆರಳಲಿವೆ. ಕ್ಷೇತ್ರದ ಸರ್ವರು ಸಹಾ ಕಾರ್ಯಕ್ರಮದ ಯಶಸ್ಸಿಗಾಗಿ…
ಸರಗೂರು: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪಟ್ಟಣ ಪಂಚಾಯಿತಿಯ 2022-2023 ನೇ ಸಾಲಿನ ಬಜೆಟ್ 1,145.26 ಲಕ್ಷಗಳು ಮಂಡನೆಯಲ್ಲಿ, ಉಳಿತಾಯ 7.77 ಲಕ್ಷಗಳು ಅಯವ್ಯಯ ಮಂಡನೆಯನ್ನು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾಡಿದ್ದರು. ಸರಗೂರು ಪಟ್ಟಣವನ್ನು ಅಭಿವೃದ್ಧಿ ಮಾಡಲು 2022 2023 ರ ಸಾಲಿನ ಉಳಿತಾಯ 7.77 ಲಕ್ಷವನ್ನು ಬಿಡುಗಡೆ ಮಾಡಿದ್ದಿವಿ. ಅನುದಾನವನ್ನು ಸರ್ಕಾರ ನೀಡಿದೆ ಪಟ್ಟಣವನ್ನು ಅಭಿವೃದ್ಧಿ ಪಡಿಸಲು ಇನ್ನೂ ಹೆಚ್ಚು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸರಗೂರುಅಭಿವೃದ್ಧಿಗೆ ಮಾತುಕತೆ ನಡೆಸಿದ್ದೇವೆ ಎಂದು ಅಧ್ಯಕ್ಷೆ ರಾಧಿಕಾ ಶ್ರೀನಾಥ್ ತಿಳಿಸಿದರು. ನಂತರ ಪ.ಪಂ. ಸದಸ್ಯ ಶ್ರೀ ನಿವಾಸ್ ಮಾತನಾಡಿ, ಸರಗೂರು ಪಟ್ಟಣವನ್ನು ಅಭಿವೃದ್ಧಿ ಹೊಂದಲು ಶಾಸಕರು ಅನೀಲ್ ಚಿಕ್ಕಮಾದು ಕೈಜೋಡಿಸಿದ್ದಾರೆ. ಎಲ್ಲಾ ಸಚಿವರು ಹಾಗೂ ಮಂತ್ರಿಗಳು ಭೇಟಿ ಮಾಡಿ ಪಟ್ಟಣವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸರಗೂರು ತುಂಬುಸೋಗೆ ಗ್ರಾಮದ ಸರಗೂರಿಗೆ ಬರುವ ಸೇತುವೆ ಬಳಿ ಹಾಗೂ ಎರಡು ಕಡೆ ಕಮನ್ ಗೇಟ್ ಯನ್ನು ಅಳವಡಿಸಿದ್ದೇವೆ ಎಂದು…
ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿಯ ಲಂಕೆ ಗ್ರಾಮದಲ್ಲಿ ಮಳೆಯ ಪರಿಣಾಮ ಮನೆಗಳಿಗೆ ಚರಂಡಿ ನೀರು ನುಗ್ಗಿರುವ ಘಟನೆ ನಡೆದಿದ್ದು, ಚರಂಡಿಯನ್ನು ಸ್ವಚ್ಛತೆಗೊಳಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಕೆ ಎರಡನೇ ಬ್ಲಾಕ್ ನ ಗ್ರಾಮ ಪಂಚಾಯತ್ ಚರಂಡಿ ಸ್ವಚ್ಛಗೊಳಿಸದೇ ಹಾಗೆಯೇ ಬಿಟ್ಟಿದ್ದು, ಚರಂಡಿಯಲ್ಲಿ ತುಂಬಿದ್ದ ಕಸಗಳಿಂದಾಗಿ ಸುಗಮವಾಗಿ ನೀರು ಹರಿಯದೇ, ಮನೆಗಳಿಗೆ ನುಗ್ಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿಯನ್ನು ಸ್ವಚ್ಛಗೊಳಿಸದೇ ಗ್ರಾಮ ಪಂಚಾಯತ್ ನಿರ್ಲಕ್ಷ್ಯವಹಿಸುತ್ತಿದೆ ಎಂದು ಗ್ರಾಮದ ಯುವ ಮುಖಂಡ ಶಿವರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೂ ಹಾಗೂ ಸದಸ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಕೊಳಚೆ ನೀರಿನಿಂದಾಗಿ ಇಲ್ಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ. ತಕ್ಷಣವೇ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವರದಿ: ಚಂದ್ರ ಹಾದನೂರು.…
ತುಮಕೂರು: ಜಿಲ್ಲೆ ಮತ್ತು ತುಮಕೂರು ನಗರದ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಚಿತ ಮಧುಮೇಹ ಮತ್ತು ಬಿ.ಪಿ. ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಮಹಿಳೆಯರಿಗೆ ಆಟೋಟ ಸ್ಪರ್ಧೆಯನ್ನು ಕೂಡ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್, ಜಿಲ್ಲಾಧ್ಯಕ್ಷೆ ತಾಹೆರಾ ಕುಲ್ಸುಮ್, ನಗರ ಅಧ್ಯಕ್ಷೆ ಸಿ.ಡಿ. ಜಯಶ್ರೀ ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಲೀಲಾದೇವಿ ಆರ್.ಪ್ರಸಾದ್ ಮಾತನಾಡಿ, ನಾವು ಮಹಿಳಾ ದಿನಾಚರಣೆ ಕೇವಲ ವರ್ಷದಲ್ಲಿ ಒಂದು ದಿವಸಕ್ಕೆ ಸೀಮಿತವಾಗಬಾರದು. ನಾವು ಏನಾದರೂ ಬದಲಾವಣೆ ತರಬೇಕು. ವರ್ಷಕ್ಕೆ ಒಂದು ದಿವಸ ಆಚರಣೆ ಮಾಡಿದರೆ, ಯಾವುದೇ ಬದಲಾವಣೆ ಆಗದು. ಹೆಣ್ಣುಮಕ್ಕಳಿಗೆ ಕೆಲಸಗಳಲ್ಲಿ ಕೂಲಿ ತಾರತಮ್ಯ ಮಾಡಲಾಗುತ್ತದೆ. ಇದು ನ್ಯಾಯಾನಾ? ಇದಕ್ಕೆ ನಾವು ಹೋರಾಟ ಮಾಡುವುದಿಲ್ಲ. ಆದ್ದರಿಂದ ಹೆಣ್ಣುಮಕ್ಕಳಿಗೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದರು. ನಂತರ ಮಾತನಾಡಿದ ತಾಹೆರಾ ಕುಲ್ಸುಮ್, ಹೆಣ್ಣುಮಕ್ಕಳಿಗೆ ಉತ್ತಮ ಆದ್ಯತೆ ಕೊಡಬೇಕು ಹಾಗೂ ಪುರುಷರ ಸಹಕಾರದಿಂದ ನಾವು ಮುಂದುವರಿಯಬೇಕು. ಮಹಿಳೆಯರು ಧೈರ್ಯದಿಂದ ಇರಬೇಕು.…
ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅನಿರ್ದಿಷ್ಟಾವದಿ ಆಹೋರಾತ್ರಿ ಧರಣಿ ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು 10ನೇ ದಿನಕ್ಕೆ ಕಾಲಿಟ್ಟಿದೆ. ಈ ದಿನ ಮಧುಗಿರಿ AC ರವರು ಸ್ಥಳಕ್ಕೆ ಆಗಮಿಸಿ ಒಂದು ತಿಂಗಳಲ್ಲಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಡಲಾಗುವುದು ಧರಣಿ ಕೈಬಿಡಿ ಎಂದು ಮನವಿ ಮಾಡಿದರು. ಈ ವೇಳೆ ಧರಣಿ ನಿರತರು, ಸ್ಥಳದಲ್ಲೇ ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಡಿ. ನಾವು ಧರಣಿ ಕೈಬಿಡುತ್ತೇವೆ ಎಂದು ತಿಳಿಸಲಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ಹೇಳಿದರು. ಧರಣಿಯ ಹಕ್ಕೊತ್ತಾಯಗಳು: *ತುರ್ತಾಗಿ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ಪಂಚಾಯತ್ CEO ರವರು ಗಳು, ಈಗಾಗಲೆ ಜಿಲ್ಲಾಧಿಕಾರಿಗಳಿಗೆ ಮೂರು ಬಾರಿ ನೀಡಿರುವ ಸಮಸ್ಯೆಗಳ ಪಟ್ಟಿಯನ್ನು ಪರಿಶೀಲಿಸಿ, ಬಗೆಹರಿಸಬೇಕು. *MLA ಗಳ ಅದ್ಯಕ್ಷತೆಯಲ್ಲಿನ ಬಗರ್ ಹುಕ್ಕು ಸಮಿತಿಯು ಏಪ್ರಿಲ್ 20 ಕ್ಕೆ ಮುಗಿಯುವುದರಿಂದ ಪ್ರಸ್ತುತ ಧರಣಿಯಲ್ಲಿರುವ ಫಲಾನುಭವಿಗಳ ಸುಮಾರು…
ದಾವಣಗೆರೆ: 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನಿಶ್ಚಿತ ಗೌರವಧನದಲ್ಲಿ ಹೆಚ್ಚಳ ಮಾಡಿರುವುದನ್ನು ಹೊರತುಪಡಿಸಿ , ಇತರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಕಡೆಗಣಿಸಿದ್ದು, ಇದರ ವಿರುದ್ಧ ಎ.ಐ.ಯು.ಟಿ.ಯು.ಸಿ. ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಹಾಗೂ ಜಿಲ್ಲಾ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿದೆ. ನಗರದ ಜಯದೇವ ವೃತ್ತದಲ್ಲಿ ಆಶಾಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರದ ಮಾಸಿಕ ನಿಶ್ಚಿತ ಗೌರವಧನವನ್ನು ಕನಿಷ್ಠ ರೂ. 2,000 ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದ್ದರೂ , ಕಡೆಗೆ 1000 ರೂ.ಗಳಾದರೂ ಹೆಚ್ಚಳ ಮಾಡಿರುವುದನ್ನು ಸಂಘದಿಂದ ಸ್ವಾಗತಿಸುತ್ತೇವೆ. ಆದರೆ ಸಂಘದ ರಾಜ್ಯ ಸಮಿತಿಯಿಂದ ಸರ್ಕಾರ ಮತ್ತು ಇಲಾಖೆಗೆ ಸಲ್ಲಿಸಿರುವ ಪ್ರಮುಖ ಬೇಡಿಕೆಗಳಿಗೆ ಪರಿಹಾರ ಕ್ರಮಗಳನ್ನು ಘೋಷಣೆ ಮಾಡದೆ ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರ ಹಾಕಿದರು.…