Subscribe to Updates
Get the latest creative news from FooBar about art, design and business.
- ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
- ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
- ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
- ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್ ಗೌಡ
- ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
- ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
Author: admin
ಉತ್ತರಪ್ರದೇಶದ ಶಾಮ್ಲಿಯಲ್ಲಿ ಕುತೂಹಲಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ವ್ಯಕ್ತಿಯೊಬ್ಬ ಎಮ್ಮೆ ಕರುವನ್ನು ಕಳ್ಳತನ ಮಾಡಿರುವ ಆರೋಪ ಮಾಡಿದ್ದಾನೆ. ಆದರೆ, ಯಾರ ಮೇಲೆ ಆರೋಪ ಮಾಡಲಾಗಿದೆಯೋ ಆ ವ್ಯಕ್ತಿ ಕೂಡಾ ಆರೋಪವನ್ನು ತಳ್ಳಿ ಹಾಕಿದ್ದಾನೆ. ಹೀಗಾಗಿ ಪೊಲೀಸರು ಸತ್ಯವನ್ನು ಕಂಡು ಹಿಡಿಯಲು ಮಾರ್ಗವೊಂದನ್ನು ಕಂಡು ಕೊಂಡಿದ್ದಾರೆ. ಎಮ್ಮೆಯ ಡಿಎನ್ಎ ಪರೀಕ್ಷೆ ನಡೆಸಿ ನಿಜವಾದ ಮಾಲೀಕನ ಪತ್ತೆ ಹಚ್ಚಲು ಪೊಲೀಸರು ತೀರ್ಮಾನಿಸಿದ್ದಾರೆ. 2020 ರಲ್ಲಿ ಕಳುವಾಗಿದ್ದ ಕರು : ಕೂಲಿ ಕೆಲಸ ಮಾಡುವ ಚಂದ್ರಪಾಲ್ ಕಶ್ಯಪ್ ಎಂಬ ವ್ಯಕ್ತಿ ಪೊಲೀಸರೆದುರು ಎಮ್ಮೆ ಕರು ಕಳ್ಳತನದ ದೂರನ್ನು ತೆಗೆದುಕೊಂಡು ಬಂದಿದ್ದಾರೆ. ಅವರ ಪ್ರಕಾರ 2020 ರ ಆಗಸ್ಟ್ 25 ರಂದು, 3 ವರ್ಷದ ಎಮ್ಮೆ ಕರುವನ್ನು ಕೊಟ್ಟಿಗೆಯಿಂದ ಕಳ್ಳತನ ಮಾಡಲಾಗಿದೆ. ನಂತರ ಆ ಕರುವಿಗಾಗಿ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಇದಾದ ಬಳಿಕ 2020 ರ ನವೆಂಬರ್ ನಲ್ಲಿ ಸಹರಾನ್ಪುರದಲ್ಲಿ ಎಮ್ಮೆ ಕರು ಪತ್ತೆಯಾಗಿದೆ. ಆದರೆ ಪತ್ತೆಯಾದ ಕರು ತಮ್ಮದು ಎನ್ನುವುದು ಸಹರಾನ್ಪುರದ ಸತ್ಬೀರ್…
ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಎಂದು ಹೇಳಲಾಗಿದೆ. ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ತಾಲಿಬ್ ಹುಸೇನ್ (38) ನನ್ನು ಬಂಧಿಸಿದ್ದಾರೆ. ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಈತ ಓಡಾಡುತ್ತಿದ್ದನಂತೆ. ಉಗ್ರ ತಾಲಿಬ್, ಬಿಎನ್ಎಲ್ ಏರ್ ಸರ್ವಿಸ್ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು. ಮೂಲತಃ ಜಮ್ಮು ಕಾಶ್ಮೀರದವನೇ ಆದ ತಾಲೀಬ್ ಹುಸೇನ್, ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ. ಜಮ್ಮು ಮತ್ತು ಕಾಶ್ಮೀರ್ ಪೊಲೀಸರು ಹಾಗೂ 17 ನೇ ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತ ಪೊಲೀಸರ ಹಿಟ್ ಲಿಸ್ಟ್ನಲ್ಲಿದ್ದ ಎಂದು ಮಾಹಿತಿ ದೊರೆತಿದೆ. ಈತ ಬೆಂಗಳೂರಿನಲ್ಲಿ ಬಿಎನ್ಎಲ್ ಏರ್ ಸರ್ವಿಸ್ ಲೋಡಿಂಗ್ ಅನ್ ಲೋಡಿಂಗ್ ಕೆಲಸ ಮಾಡಿಕೊಂಡಿದ್ದ. ನಗರದಲ್ಲಿ ಪತ್ನಿ ಮತ್ತು…
ಬೆಂಗಳೂರು : ನಗರದ ಟೌನ್ ಹಾಲ್ ನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂಜೆ ದಶಮ ಸಂಭ್ರಮ ಕಾರ್ಯಕ್ರಮದಲ್ಲಿ ತುರುವೇಕೆರೆ ತಾಲೂಕಿನ ಮುಗಳೂರು ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಕು. ಮೌಲ್ಯ ಎಂ.ಎನ್. ಹಾಗೂ ಬೆಂಗಳೂರು ನಗರದ ಕು.ರಮ್ಯ ರವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಾ.ಸಂತೋಷ್ ಭಾರತಿ ಶ್ರೀಪಾದಂಗಳವರು ಹಾಗೂ ಸಂಜೆ ಪ್ರಭ ದಿನಪತ್ರಿಕೆ ಸಂಪಾದಕರಾದ ವೆಂಕಟೇಶ್ ಪೈ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ವಿದ್ಯಾರ್ಥಿನಿ ಕು.ಮೌಲ್ಯ ಎಂ.ಎನ್.ಪ್ರಸ್ತುತ ಮಂಗಳೂರು ಮಹೇಶ್ ಇನ್ಸ್ಟಿಟ್ಯೂಷನ್ ತುಮಕೂರು ಅಶೋಕ ನಗರದ ಮಹೇಶ್ ಪಿ.ಯು. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ವೈದ್ಯೆಯಾಗುವ ಆಸೆ ಹೊತ್ತಿದ್ದಾರೆ. ಪ್ರತಿಭಾ ಪುರಸ್ಕಾರ ಆಯ್ಕೆಗೊಂಡ ವಿದ್ಯಾರ್ಥಿನಿಗೆ ಕಾಲೇಜು ಆಡಳಿತ ಮಂಡಳಿ ಮತ್ತು ಪೋಷಕರಿಂದ ಅಭಿನಂದಿಸಿದೆ. ಸಂಜೆ ಪ್ರಭ ದಿನಪತ್ರಿಕೆಯ 10ನೇ ವರ್ಷದ ದಶಮ ಸಂಭ್ರಮದ ಕಾರ್ಯಕ್ರಮದಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಸಮಾಜ ಸೇವಕರನ್ನು ಗುರುತಿಸಿ ಅವರಿಗೆ ಸಂಜೆ ಪ್ರಭಾ ಸಾಮಾಜಿಕ ಸೇವಾ ರತ್ನ ಪ್ರಶಸ್ತಿಯನ್ನು ಹಾಗೂ ಮಾಧ್ಯಮ ಕ್ಷೇತ್ರದಲ್ಲಿ…
ಪಾವಗಡ: ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದ್ದು, ತುಮಕೂರು ಜಿಲ್ಲೆಯ ಪಾವಗಡದ ಲಂಬಾಣಿ ಸಮುದಾಯದವರು ಆಚರಿಸುತ್ತಿರುವ ಹಬ್ಬವೊಂದು ಒಮ್ಮೆ ಎಲ್ಲರನ್ನೂ ಆಕರ್ಷಿಸುತ್ತದೆ. ಹೌದು, ದವಸ ಧಾನ್ಯ, ತೆಂಗಿನ ಕಾಯಿಯನ್ನು ತಲೆ ಮೇಲೆ ಹೊತ್ತು ಬರುವ ಕನ್ಯೆಯರಿಗೆ ಶುದ್ಧ ನೀರಿನಿಂದ ಕಾಲ್ತೊಳೆಯುವ ವಿಶೇಷ ಹಬ್ಬ ನಡೆಯುತ್ತಿದೆ. ಜಿಲ್ಲೆಯ ಪಾವಗಡ ತಾಲೂಕಿನ ಭೂಪೂರು ಸೇರಿದಂತೆ ಇತರೆ ಲಂಬಾಣಿ ತಾಂಡಗಳಲ್ಲಿ ಕನ್ಯೆಯರಿಗೆ ಕಾಲ್ತೊಳೆಯುವ ಹಬ್ಬ ನಡೆಯುತ್ತಿದೆ. ಪ್ರತಿ ಮನೆಯಿಂದ ಒಬ್ಬೊಬ್ಬ ಕನ್ಯೆಯರು ತಮ್ಮ ಮನೆಯಿಂದ ದವಸ ಧಾನ್ಯ ಹೊತ್ತು ಕುಲದೇವತೆಗಳಾದ ತೋಳಚ ಶಕ್ತಿ, ಭೀಮಾಸತಿ, ಭೀಮಾ ಭೂಕ್ಯಾ ದೇವತೆಗಳನ್ನು ಆರಾಧಿಸುವ ಮನೆಗಳಿಗೆ ತೆರಳಿ ನೈವೇದ್ಯ ಅರ್ಪಿಸುತ್ತಾರೆ. ಈ ವೇಳೆ ಮನೆಗೆ ಬರುವ ಕನ್ಯೆ ಯರಿಗೆ ಶುದ್ದ ನೀರಿನಿಂದ ಕಾಳು ತೊಳೆದು ಕಾಲಿಗೆ ಬಿದ್ದು ಬರಮಾಡಿಕೊಳ್ಳುತ್ತಾರೆ. ಮನೆಗೆ ಬರುವ ವೇಳೆ ಕನ್ಯೆಯರು ಬರುವ ಹಾದಿಗೆ ನೀರು…
ತಿಪಟೂರು: ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಚನ್ನಬಸವಯ್ಯ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ,ತಹಶೀಲ್ದಾರ್ ಚಂದ್ರಶೇಖರ್ ಘೋಷಣೆ ಮಾಡಿದರು. ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರಿ ಹಾಜರಿದ್ದರು. ಕೆಎಂಎಫ್ ನಿರ್ದೇಶಕ ಮಾದೀಹಳ್ಳಿ ಪ್ರಕಾಶ್, ಟಿಎಪಿಸಿಎಂ ಎಸ್ ಅಧ್ಯಕ್ಷ ಶಂಕರಮೂರ್ತಿ, ನಿಕಟಪೂರ್ವ ಅಧ್ಯಕ್ಷ ಚಿನ್ನಸ್ವಾಮಿ, ಮಾಜಿ ಅಧ್ಯಕ್ಷ ಮಾಧುಸ್ವಾಮಿ, ತಾ.ಪಂ. ಮಾಜಿ ಅಧ್ಯಕ್ಷ ವೆಂಕಟೇಶ್ ಮತ್ತು ಸದಸ್ಯ ತಿಮ್ಮರಾಜು ಸೇರಿದಂತೆ ಗ್ರಾ.ಪಂ. ಸದಸ್ಯರು, ಕಾಂಗ್ರೆಸ್ ಮುಖಂಡರುಗಳು ಹಾಗೂ ಸ್ನೇಹಿತರು ಹಾಜರಿದ್ದು ಅಭಿನಂದನೆ ಸಲ್ಲಿಸಿದರು. ವರದಿ: ಆನಂದ್ ತಿಪಟೂರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ನಲಿಗಾನಹಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ. ಕೋಣನ ಕುರಿಕೆ ಬಂಡಪ್ಪ (55) ಹಾಗೂ ಸಣ್ಣ ಸಿದ್ದಪ್ಪನವರ ಬಂಡಪ್ಪ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಆಟೋದಲ್ಲಿ ಬಿ ದೊಡ್ಡ ಹಟ್ಟಿ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ಏಳು ಜನ ಪ್ರಯಾಣಿಕರು ತೆರಳುತ್ತಿದ್ದರು, ನಲಿ ಗಾನ ಹಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಗಮ್ಮ ಎಂಬ ಮಹಿಳೆಗೆ ತೀವ್ರ ತರಹದ ಗಾಯಗಳಾಗಿದ್ದು, ಗಾಯಾಳುಗಳನ್ನು ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ತಿಳಿದು ಸ್ಥಳೀಯ ಶಾಸಕ ವೆಂಕಟರಮಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತುಮಕೂರು: ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಶಾಸ್ತ್ರಿನಗರ ಮೂಲದ ಸೋಹಮನ್ ನಾಥ್ ಬಾಲಂಕರ್(24) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದು, 6th ಸೆಮಿಸ್ಟರ್ ನಲ್ಲಿ ಈತ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣಗಳೇನು ಎನ್ನುವುದು ತಿಳಿದು ಬಂದಿಲ್ಲ. ವಿದ್ಯಾರ್ಥಿಯ ರೂಮಿನಲ್ಲಿ ಹಲವು ಔಷಧಿಗಳು, ಮಾತ್ರೆ ಲೇಬಲ್ ಗಳು ಪತ್ತೆಯಾಗಿವೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎನ್ ಇಪಿಎಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಚಿತ್ರದುರ್ಗ: ತಾಲೂಕಿನ ಗುಡ್ಡದ ರಂಗವ್ವನಹಳ್ಳಿಯ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ, ಕೊರೋನಾ ಲಸಿಕೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸುರಕ್ಷಾಧಿಕಾರಿ ವೀಣಾ, ವಿಶ್ವಾದ್ಯಂತ ಕೊರೋನ ಒಂದನೇ, ಎರಡನೇ, ಮೂರನೇ ಅಲೆ, ನಾಲ್ಕನೇ ಅಲೆ ಮಾರಕವಾಗಿ ನಿಧಾನಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಹೆಚ್ಚಿಸಲು ಲಸಿಕೆ ತುಂಬಾ ಅಗತ್ಯ ಎಂದರು. ಈ ಸಂದರ್ಭದಲ್ಲಿ ನಿರೀಕ್ಷಣ ಅಧಿಕಾರಿಯಾದ ಜ್ಯೋತಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದು , ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಒಳಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಎಂ.ತಿಪ್ಪೇಸ್ವಾಮಿ., ಕೆ. ಸುಫಿಯಾ , ಗಿರಿಜಮ್ಮ, ಜಿ.ವಿ. ನಿರ್ಮಲ, ಎ. ತಸ್ಮಿಯ ಬಿ, ಸೈಲಜ ಕೆ.ಟಿ., ನೇತ್ರಾವತಿ ವಿ, ಚೆನ್ನಕೇಶವ ವಿ.ಹೆಚ್. , ನೇತ್ರಮ್ಮ ಮತ್ತು ಶಾಲಾ ಮಕ್ಕಳು ಗ್ರಾಮಸ್ಥರು ಹಾಜರಿದ್ದರು. ವರದಿ: ಮುರುಳಿಧರನ್ ಆರ್. ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಆರೋಪಿ ದರ್ಶನ್ ಗೌಡ ಅವರನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಂಬಂಧಿ ಎಂದು ಆರೋಪಿ ದರ್ಶನ್ ಗೌಡ ಹೇಳಿಕೊಂಡಿದ್ದು ಆತನ ಬಂಧನದ ಮೂಲಕ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಈಗಾಗಲೇ ಹಲವರನ್ನು ಸಿಐಡಿ ತನಿಖೆಯ ಬಳಿಕ ಬಂಧಿಸಿದೆ. ಈಗ ಮತ್ತೆ ಬೇಟೆ ಮುಂದುವರೆಸಿದೆ. ಇಂದು ವಿಚಾರಣೆಯ ವೇಳೆ ಸಚಿವ ಅಶ್ವತ್ಥನಾರಾಯಣ ಹೆಸರು ಹೇಳಿ, ಆ ಬಳಿಕ ನಾಪತ್ತೆಯಾಗಿದ್ದ ಅಭ್ಯರ್ಥಿ ದರ್ಶನ್ ಗೌಡನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಕೆಲ ದಿನಗಳ ಹಿಂದೆ ವಿಚಾರಣೆ ವೇಳೆಯಲ್ಲಿ ದರ್ಶನ್ ಗೌಡ, ಸಚಿವರ ಹೆಸರು ಹೇಳಿದ್ದರು. ಇದೇ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಬಿಟ್ಟು ಕಳುಹಿಸಲಾಗಿದೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ರಾಜ್ಯಾಧ್ಯಂತ ವಿವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಅವರು ನಾಪತ್ತೆಯಾಗಿದ್ದರು. ರಾಮನಗರ ಜಿಲ್ಲೆಯ ಮಾಗಡಿ ಮೂಲಕ ದರ್ಶನ್ ಗೌಡ ಬಂಧನಕ್ಕೆ ಸಿಐಡಿ…
ಲಿಂಗಾಯತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗೆ ಆಗ್ರಹಿಸಿ ಇದೇ ತಿಂಗಳ 27 ರಂದು ಹಾವೇರಿಯ ಶಿಗ್ಗಾವ್ ನಲ್ಲಿರುವ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂಬ ಬೇಡಿಕೆ ಇತ್ತು. ಹಲವು ದಿನಗಳಿಂದ ಪ್ರತಿಭಟನೆ, ಹೋರಾಟಗಳು ನಡೆದರೂ ಸರ್ಕಾರ ಆ ಬಗ್ಗೆ ಸ್ಪಂದನೆ ತೋರುತ್ತಿಲ್ಲ. ಹಾಗಾಗಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಈ ತಿಂಗಳ 27 ರಂದು ಶಿಗ್ಗಾವ್ ನಲ್ಲಿರುವ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಮನೆಗೆ ಬೀಗ ಹಾಕಲಾಗುವುದು ಎಂದರು. ಸರ್ಕಾರಕ್ಕೆ ಲಿಂಗಾಯತ ಪಂಚಮಸಾಲಿ ಸಮುದಾಯದ ತಮ್ಮ ಬೇಡಿಕೆ ಈಡೇರಿಕೆಗೆ ಗಡುವು ನೀಡಿತ್ತು. ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಅವರು ಕೊಟ್ಟ ಮಾತು ತಪ್ಪಿದ್ದಾರೆ. ಹಾಗಾಗಿ ಜೂ.27ರಂದು ಕನಿಷ್ಠ 35–30 ಸಾವಿರ ಜನ ಶಿಗ್ಗಾವಿಯಲ್ಲಿ ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹೋರಾಟದಲ್ಲಿ…